ದಿನ ಭವಿಷ್ಯ: ಇಂದು ಈ ರಾಶಿಯವರ ಚರಾಸ್ತಿಯ ಸಂಪತ್ತಿಗೆ ತೊಂದರೆ ಒದಗಲಿದೆ
Daily Horoscope Mach 21: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಶನಿವಾರದಂದು ಉದ್ಯೋಗದಲ್ಲಿ ಹಿತಶತ್ರುಗಳ ಬಾಧೆ, ಆರೋಗ್ಯದಲ್ಲಿ ಹಿನ್ನಡೆ, ಹಳೆಯ ಹೂಡಿಕೆಯಿಂದ ಅಲ್ಪ ಲಾಭ, ಕುಟುಂಬದಿಂದ ಸಹಕಾರ, ಕಲ್ಪನೆಗೆ ಸರಿಯಾದ ರೂಪ ಇವೆಲ್ಲ ಈ ದಿನದ ವಿಶೇಷ.

ಮೇಷ ರಾಶಿ:
ಯಾರನ್ನೂ ನಿಮ್ಮ ದೃಷ್ಟಿಯಿಂದ ಅಳೆಯಲು ಆಗದು. ಅದಕ್ಕಾಗಿ ಸಮಯವನ್ನೂ ವ್ಯರ್ಥ ಮಾಡುವುದು ಬೇಡ. ಸಮಯದ ಹೊಂದಾಣಿಕೆ ಅವಶ್ಯಕ. ಪ್ರೇಯಸಿಯ ನೆನಪನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು. ಕಾರಣವಿಲ್ಲದೇ ಕೋಪವು ಬರುವುದು. ಅತಿಯಾದ ಮೋಹದಿಂದ ಹೊರಬರುವಿರಿ. ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿಮಗೆ ಸಮಾರಂಭಗಳಿಗೆ ಆಹ್ವಾನವು ಬರಬಹುದು.
ವೃಷಭ ರಾಶಿ:
ಇಂದಿನ ಕಾರ್ಯಗಳಲ್ಲಿ ವಿಳಂಬವಾದರೂ ಪೂರ್ಣಗೊಳಿಸುವಿರಿ. ಪ್ರಮುಖ ವಿಚಾರಗಳಲ್ಲಿ ಸಹೋದರರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಭೂಮಿಯ ವ್ಯವಹಾರದಲ್ಲಿ ಅಧಿಕ ಒತ್ತಡ. ಸಂಗಾತಿಯ ಸ್ವಭಾವವನ್ನು ಸುಲಭದಿಂದ ತಿಳಿಯಲು ಸಾಧ್ಯವಾಗದು. ಅತಿಯಾದ ಬಂಧನವೂ ನಿಮಗೆ ಕಿರಿಕಿರಿ ಎನಿಸಬಹುದು. ನೀವು ಬಯಸಿದ ವಸ್ತುವು ಯಾವುದೋ ರೂಪದಲ್ಲಿ ನಿಮ್ಮನ್ನು ಬಂದು ಸೇರಬಹುದು.
ಮಿಥುನ ರಾಶಿ:
ನಿಮ್ಮ ಮಾತುಗಳಿಂದ ಹಿತಶತ್ರುಗಳ ನಿರ್ಮಾಣವಾಗಲಿದೆ. ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಿರಿ. ದೂರದ ಪ್ರಯಾಣದ ಸೂಚನೆಗಳು. ಇಂದು ಹಿರಿಯರಿಂದ ಯಾವುದೇ ವಿಶೇಷ ಬೆಂಬಲವನ್ನು ಪಡೆಯುವುದಿಲ್ಲ. ವಿವಾಹದಲ್ಲಿ ನಿರಾಸಕ್ತಿಯನ್ನು ತೋರಿಸುವಿರಿ. ಹಿರಿಯರ ಕೋಪಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಇಂದು ಸ್ವತಂತ್ರವಾಗಿರುವುದು ನಿಮಗೆ ಇಷ್ಟದ ಸಂಗತಿಯಾಗಲಿದೆ.
ಕರ್ಕಾಟಕ ರಾಶಿ:
ನಿಗದಿತ ಸಮಯದಲ್ಲಿ ಕೆಲಸಗಳು ಪೂರ್ಣಗೊಳ್ಳಲಾರದು. ಬಂಧು ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ನೀವು ದೀರ್ಘಕಾಲದವರೆಗೆ ಕೆಲಸದಲ್ಲಿ ಹೆಚ್ಚಿನ ಯಶಸ್ಸನ್ನು ಗಳಿಸಲಿಲ್ಲ, ಆದರೆ ಇಂದು ನೀವು ನಿಮ್ಮ ಅತ್ಯುತ್ತಮವಾದದನ್ನು ನೀಡುವ ಮೂಲಕ ಎಲ್ಲರನ್ನು ಆಶ್ಚರ್ಯಗೊಳಿಸುತ್ತೀರಿ. ಕುಟುಂಬದ ಕೆಲವು ವಿಚಾರವು ನಿಮಗೆ ಹಿಡಿಸದೇಹೋದೀತು. ಸಂಬಂಧವನ್ನು ಆತ್ಮೀಯಗೊಳಿಸಿಕೊಳ್ಳಲು ಪ್ರಯತ್ನಪಡುವಿರಿ.
ಸಿಂಹ ರಾಶಿ:
ಕುಟುಂಬದ ಸದಸ್ಯರ ಜೊತೆ ಧಾರ್ಮಿಕ ಸೇವಯಲ್ಲಿ ಭಾಗವಹಿಸುವಿರಿ. ನಿಮ್ಮ ಮಾತಿನಿಂದ ಹಿತಶತ್ರುಗಳ ಉತ್ಪಾದನೆ ಆಗಲಿದೆ. ಇಂದು ಸಂಪತ್ತಿನ ಹೆಚ್ಚಳವಾಗಲಿದೆ. ನಿಮಗೆ ಗೊತ್ತಿಲ್ಲದೇ ಚರಾಸ್ತಿಯು ಇಲ್ಲವಾಗಬಹುದು. ಇಷ್ಟವಿಲ್ಲದಿದ್ದರೂ ಕೆಲಸವನ್ನು ಮಾಡಬೇಕಾದೀತು. ಉದ್ವಿಗ್ನತೆಗೆ ದಾರಿ ಮಾಡಿಕೊಡದೇ ಸಮಚಿತ್ತದಲ್ಲಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಇರುವಿಕೆಯನ್ನು ತೋರಿಸುವ ಪ್ರಯತ್ನ ಮಾಡುವಿರಿ.
ಕನ್ಯಾ ರಾಶಿ:
ದೂರದ ಕನಸನ್ನು ನನಸಾಗಿಸಲು ಪ್ರಯತ್ನ ಆರಂಭ. ಮಕ್ಕಳಲ್ಲಿ ಪಕ್ಷಪಾತದಿಂದ ಕಲಹವಾಗುವುದು. ನೌಕರರ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾಗಿರಲಿ. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ. ಒಂದೇ ರೀತಿಯಲ್ಲಿ ಜೀವನ ಸಾಗುವುದು ನಿಮಗೆ ಇಷ್ಟವಾಗದು. ಯಾವುದಕ್ಕೆ ಎಷ್ಟು ಸಮಯವನ್ನು ಕೊಡಬೇಕು ಎನ್ನುವುದನ್ನು ಪರೀಕ್ಷೆಯ ವಿದ್ಯಾರ್ಥಿಗಳು ನಿರ್ಧರಿಸಿ.
ತುಲಾ ರಾಶಿ:
ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಉನ್ನತ ಸ್ಥಾನಗಳನ್ನು ಪಡೆಯುತ್ತೀರಿ. ನೀವು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಹಣವನ್ನೂ ಖರ್ಚು ಮಾಡಬೇಕಾದೀತು. ನೀರಿನಿಂದ ಭೀತಿ ಉಂಟಾಗುವುದು. ವಾಹನದ ಮೇಲಿನ ಪ್ರೀತಿ ವ್ಯಾಮೋಹವಾದೀತು. ನಿಮ್ಮ ಮಾತುಗಳಲ್ಲಿ ನಂಬಿಕೆ ಇಲ್ಲವಾದೀತು.
ವೃಶ್ಚಿಕ ರಾಶಿ:
ಶ್ರಮಕ್ಕೆ ಸರಿಯಾದ ಮನ್ನಣೆ ಸಿಗುವುದಿಲ್ಲ. ಹಣಕಾಸಿನ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ನೀವು ಇಂದು ಹಣಕ್ಕೆ ಸಂಬಂಧಿಸಿದ ಕಾಳಜಿಗಳನ್ನು ತೊಡೆದುಹಾಕಲು ಸಾಧ್ಯವಾಗುತ್ತದೆ. ನಿಮಗೆ ಸಪ್ಪೆ ಎನಿಸಿದ ವಿಷಯವನ್ನು ಮುಂದುವರಿಸುವುದಿಲ್ಲ. ಉದ್ಯೋಗದ ಒತ್ತಡದಿಂದ ನಿಮಗೆ ಅನಾರೋಗ್ಯದಿಂದ ಬಳಲುವಿರಿ. ಆದಾಯವನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾದೀತು.
ಧನು ರಾಶಿ:
ವೃತ್ತಿಪರ ವ್ಯವಹಾರದಲ್ಲಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಇಂದು ಯಾವುದೇ ಪ್ರಮುಖ ವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಸಂಗಾತಿಯ ಕಡೆಯನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಮೇಲಧಿಕಾರಿಹಳ ಜೊತೆ ಯೋಜನೆಯ ಕುರಿತು ಚರ್ಚೆ ನಡೆಸುವಿರಿ. ಉದ್ಯೋಗದ ಕಿರಿಕಿರಿಯನ್ನು ನೀವು ಸಹಿಸಲಾರಿರಿ. ಯಂತ್ರಗಳ ಮಾರಾಟ ಮಾಡುವವರಿಗೆ ಉತ್ತಮ ಲಾಭವಿರಲಿದೆ.
ಮಕರ ರಾಶಿ:
ಆತುರದ ಆಲೋಚನೆಗಳಿಂದ ತೊಂದರೆ ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಇತರರೊಂದಿಗೆ ವಿವಾದಗಳಿಂದ ದೂರವುದು ಉತ್ತಮ. ವ್ಯರ್ಥವಾಗಲಿರುವ ಖರ್ಚುಗಳೇ ಹೆಚ್ಚಾಗುತ್ತವೆ. ನಿಮ್ಮ ವೃತ್ತಿಜೀವನವು ಹೊಸ ತಿರುವು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಪಾರದರ್ಶಕತೆಯನ್ನು ತೋರಿಸಬೇಕಾಗುವುದು. ಸಹೋದರಿಯರಿಗೆ ಉಡುಗೊರೆ ನೀಡಿ ಸಂತೋಷಪಡಿಸುವಿರಿ.
ಕುಂಭ ರಾಶಿ:
ಮಕ್ಕಳು ಶಿಕ್ಷಣ ಮತ್ತು ಉದ್ಯೋಗ ವಿಷಯಗಳಲ್ಲಿ ಅಪೇಕ್ಷಿತ ಫಲವನ್ನು ,ಪಡೆಯುತ್ತಾರೆ. ಎಲ್ಲಾ ಕಡೆಯಿಂದ ಆದಾಯ ಬರುತ್ತದೆ. ವೃತ್ತಿಪರ ಉದ್ಯೋಗಗಳು ತೃಪ್ತಿಕರವಾಗಿ ಸಾಗುತ್ತವೆ. ಸಣ್ಣ ವಿಷಯವೂ ನಿಮ್ಮನ್ನು ನೋಯಿಸಬಹುದು. ನೀವು ತುಂಬಾ ಅಸಮಾಧಾನಗೊಂಡಿದ್ದರೂ ಕೆಲವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಕುಟುಂಬದ ಜವಾಬ್ದಾರಿಯು ನಿಮಗೆ ಸಿಗಬಹುದು. ಚಂಚಲವಾದ ಮನಸ್ಸನ್ನು ನಿಶ್ಚಲಗೊಳಿಸಲು ಪ್ರಯತ್ನಿಸುವಿರಿ.
ಮೀನ ರಾಶಿ:
ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ನಿರುದ್ಯೋಗಿಗಳಿಗೆ ಸಿಗಬೇಕಾದ ಅವಕಾಶಗಳು ಸಿಗದೇ ಹತಾಶೆ ಹೆಚ್ಚಾಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪ್ರೀತಿಪಾತ್ರರ ಜೊತೆ ಸಂಬಂಧ ಉತ್ತಮವಾಗಿರುತ್ತದೆ. ಗೊಂದಲದ ತೀರ್ಮಾನವು ಬೇಡ. ಎಲ್ಲವೂ ಅಂದುಕೊಂಡಂತೆ ಆಗದು ಎಂಬುದು ನಿಮ್ಮ ವಿಚಾರದಲ್ಲಿ ಸತ್ಯವಾಗುವುದು. ನಿಮ್ಮ ಕಾರ್ಯದ ಆರಂಭವೇ ಸರಿಯಾಗಿ ಇರುವುದರಿಂದ ಗುರಿಯೂ ತಪ್ಪಬಹುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ತೃತೀಯಾ ನಿತ್ಯನಕ್ಷತ್ರ : ರೇವತೀ, ಯೋಗ : ಐಂದ್ರ, ಕರಣ : ಕೌಲವ, ಸೂರ್ಯೋದಯ – 06 – 29 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:30 – 11:01, ಯಮಗಂಡ ಕಾಲ 14:02 – 15:33, ಗುಳಿಕ ಕಾಲ 06:29 – 07:59
-ಲೋಹಿತ ಹೆಬ್ಬಾರ್-8762924271 (what’s app only)
