Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಅತಿಯಾದ ಆಸೆ ಇಲ್ಲದಿದ್ದರೂ ಅಲ್ಪಕ್ಕೆ ತೃಪ್ತಿ ಇರದು

25 ಮಾರ್ಚ್​​​ 2025: ಮಂಗಳವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಕೇವಲ ಪುರುಷ ಪ್ರಯತ್ನದಿಂದ ಯಾವುದೂ ಸಾಧ್ಯವಾಗದು. ದೈವಬಲವೂ ಸೇರಬೇಕು ಎಂಬ ಮಾನಸಿಕತೆ ಇದ್ದರೆ ಇಂದಿನ ಯೋಜನೆಯಿಂದ ಕಾರ್ಯಸಿದ್ಧಿ. ಮಾರ್ಚ್​​​ 25ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಅತಿಯಾದ ಆಸೆ ಇಲ್ಲದಿದ್ದರೂ ಅಲ್ಪಕ್ಕೆ ತೃಪ್ತಿ ಇರದು
ಅತಿಯಾದ ಆಸೆ ಇಲ್ಲದಿದ್ದರೂ ಅಲ್ಪಕ್ಕೆ ತೃಪ್ತಿ ಇರದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 25, 2025 | 12:10 AM

ಬೆಂಗಳೂರು, ಮಾರ್ಚ್​ 25, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶಿವ, ಕರಣ : ಬವ, ಸೂರ್ಯೋದಯ – 06 – 34 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:41 – 17:12, ಯಮಘಂಡ ಕಾಲ 09:37 – 11:08, ಗುಳಿಕ ಕಾಲ 12:39 – 14:10.

ಮೇಷ ರಾಶಿ: ಅತಿಯಾದ ಆಸೆ ಇಲ್ಲದೇ ಇದ್ದರೂ ಅಲ್ಪಕ್ಕೆ ತೃಪ್ತಿ ಇರದು. ನಿಮ್ಮ ಸಂಗಾತಿಯ ಜೊತೆ ಸಣ್ಣ ವಿಷಯಗಳಿಗೆ ಆಗುವ ವಿವಾದವನ್ನು ತಪ್ಪಿಸಿ. ವಿದ್ಯಾರ್ಥಿಗಳು ಕಲಿಕೆಗೆ ಹೊಸ ಸಾಧ್ಯತೆಗಳು ಹುಡುಕಿಕೊಳ್ಳುವುದು ಅಗತ್ಯ. ಸಂಬಂಧಿಕರ ಜೊತೆ ವ್ಯವಹರಿಸುವುದನ್ನು ತಪ್ಪಿಸಿ, ಇಲ್ಲವಾದರೆ ಸಂಬಂಧವು ಹದಗೆಡಬಹುದು. ನಿಮ್ಮ ಎಂದೋ ಆರಂಭಿಸಬೇಕೆಂದುಕೊಂಡ ಯೋಜನೆಗಳನ್ನು ಇಂದು ಪ್ರಾರಂಭಿಸಬಹುದು. ವಾಹನಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಪುಣ್ಯ ಪ್ರದೇಶಗಳಿಗೆ ಪ್ರಯಾಣಿಸಿ ದಾನ-ಧರ್ಮದಲ್ಲಿ ಭಾಗಿಯಾಗಿಯಾಗುವಿರಿ. ಅತಿಥಿಯ ಆಗಮನವು ನಿಮಗೆ ಸಂತೋಷವನ್ನು ತರುತ್ತದೆ. ಯಾವುದೇ ಅವಸರಕ್ಕೆ ಒಳಗಾಗದೇ ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿವೆ. ನಿಮ್ಮ ಆಸಕ್ತಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳಿರಬಹುದು. ನಿಮ್ಮ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಸೂಯೆ ಪಡಬಹುದು. ಆದರೆ ನಿಮ್ಮ ಉತ್ತಮ ನಡವಳಿಕೆಯನ್ನು ನೋಡಿ, ಜನರು ನಿಮ್ಮನ್ನು ಒಲಿಸಿಕೊಳ್ಳಲು ಬಯಸುತ್ತಾರೆ. ಇಂದು ಅಸಂಗತ ವಿಚಾರದಲ್ಲಿ ಆಸಕ್ತಿ ಕಡಿಮೆ.

ವೃಷಭ ರಾಶಿ: ಸ್ನೇಹಿತರ ವಂಚನೆಯಿಂದ ನಿಮಗೆ ಬೇಸರವಾಗುವುದು. ಒಡಹುಟ್ಟಿದವರೊಂದಿಗಿನ ಸಂಬಂಧವು ಸುಧಾರಿಸುತ್ತದೆ. ವೃತ್ತಿಯಲ್ಲಿ ಮೇಲಧಿಕಾರಿಗಳಿಂದ ಭಯ. ಪ್ರೀತಿಯಲ್ಲಿ ಮಾತಿನ ಕಠೋರತೆಯಿಂದ ಸಂಬಂಧಗಳಲ್ಲಿ ಬಿರುಕು ಬರಬಹುದು.ತಾಯಿಯ ಕಡೆಯಿಂದ ಸಂಬಂಧಗಳು ಸುಧಾರಿಸುತ್ತವೆ. ವ್ಯಾಪಾರ, ವ್ಯವಹಾರದಲ್ಲಿ ಡೋಲಾಯಮಾನವಾದ ಸ್ಥಿತಿ ಇರುವುದು. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ. ಅತಿಥಿ ಸತ್ಕಾರದಿಂದ ಒತ್ತಡ ದೂರ. ಆರೋಗ್ಯದ ವಿಷಯದಲ್ಲಿ ಇಂದು ಸ್ವಲ್ಪ ತೊಂದರೆಯಾಗಬಹುದು. ಆರ್ಥಿಕವಾಗಿ ಖರ್ಚು ವೆಚ್ಚಗಳಲ್ಲಿ ಬಲವಾದ ಹಿಡಿತವಿರಲಿದೆ. ಯಾರನ್ನೂ ಓಲೈಸುವ ಬಗ್ಗೆ ಆಸಕ್ತಿ ಇರದು. ವಿದ್ಯಾರ್ಥಿಗಳಿಗೆ ಕರ್ತವ್ಯವನ್ನು ನೆನಪಿಸುವಂತಾಗುತ್ತದೆ. ನಿಮ್ಮ ಸ್ಥಗಿತಗೊಂಡ ಕಾರ್ಯಗಳನ್ನು ಪೂರ್ಣಗೊಳ್ಳಬಹುದು. ಕೃಷಿಯ ಬಗ್ಗೆ ಅಧಿಕ ಆಸಕ್ತಿ. ಇಂದು ನೀವು ಸಂತೋಷವಾಗಿರುವುದರಿಂದ ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತೀರಿ.

ಮಿಥುನ ರಾಶಿ: ಶಾರೀರಿಕ ದುರ್ಬಲತೆಯನ್ನು ದೂರಮಾಡಿಕೊಳ್ಳುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಜೀವನೋಪಾಯ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ಅವಶ್ಯಕ. ನೌಕರರಿಂದ ಗೌರವವು ನಿಮಗೆ ಸಿಗುತ್ತದೆ. ಜೀರ್ಣಕ್ರಿಯೆ ಮತ್ತು ಕಣ್ಣಿನ ಅಸ್ವಸ್ಥತೆಗಳ ಸಮಸ್ಯೆಗಳಾಗಬಹುದು. ನೀವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ. ಈ ಸಮಯದಲ್ಲಿ, ಹೊರಗೆ ಏನನ್ನಾದರೂ ತಿನ್ನುವುದನ್ನು ತಪ್ಪಿಸಿ. ಮದುವೆಯಾಗಲು ಪ್ರಯತ್ನಿಸುವವವರಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಯಾವುದಾದರೂ ಕಾರ್ಯವನ್ನು ಮಾಡುವ ಮುನ್ನ ಒಮ್ಮೆ ಯೋಚಿಸಿ ನಂತರ ನಿರ್ಧಾರವನ್ನು ತೆಗೆದುಕೊಳ್ಳಿ. ಹೆತ್ತವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಅತಿಯಾದ ಆಸೆಯು ತಾನಾಗಿಯೇ ನಿಯಂತ್ರಣಕ್ಕೆ ಬರಲಿದೆ. ಯಾವುದೇ ಜಗಳ ಮತ್ತು ವಿವಾದಗಳಿಗೆ ಸಿಲುಕಬೇಡಿ. ಉದ್ಯೋಗಿಗಳಿಗೆ ಉದ್ಯಮದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೌಲ್ಯಯುತವಾದ ಏನನ್ನಾದರೂ ಪಡೆಯುವ ಬಯಕೆಯನ್ನು ಇಂದು ಪೂರೈಸಬಹುದು.

ಕರ್ಕಾಟಕ ರಾಶಿ: ಸಣ್ಣ ಅನಾರೋಗ್ಯವನ್ನೂ ನಿರ್ಲಕ್ಷ್ಯದಿಂದ ದೊಡ್ಡ ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ಯಶಸ್ಸಿಗಾಗಿ ಹೆಚ್ಚು ಶ್ರಮಿಸಬೇಕಾಗಬಹುದು. ನಿಮ್ಮ ಕೆಲಸವನ್ನು ನೋಡಿದ ವಿರೋಧಿಗಳು ನಿಮ್ಮನ್ನು ಹೊಗಳುತ್ತಾರೆ. ವ್ಯವಹಾರವನ್ನು ಹೆಚ್ಚಿಸಲು ಕುಟುಂಬದ ಜೊತೆ ಸಮಾಲೋಚನೆ ಮಾಡಬೇಕಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶಗಳು ಸಿಗುತ್ತವೆ. ವೃತ್ತಿರಂಗದಲ್ಲಿ ಪ್ರತಿಷ್ಠಿತರ ಸಹಯೋಗದಿಂದ ಕಾರ್ಯಸಿದ್ಧಿ. ಹಣಕಾಸಿನ ವಿಚಾರದಲ್ಲಿ ಮುಖ್ಯವಾಗಿ ಖರ್ಚು ವೆಚ್ಚಗಳ ಬಗ್ಗೆ ಯೋಚಿಸುವಂತಾಗಲಿದೆ. ಕೆಲವರ ಮಾತು ನಿಮ್ಮನ್ನು ಇಬ್ಬಂದಿಯನ್ನಾಗಿ ಮಾಡಬಹುದು. ರಾಜಕೀಯವಾಗಿ ಮುನ್ನಡೆಯ ದಿನಗಳಿವು. ನಿಮ್ಮ ವ್ಯಾಪಾರ ಯೋಜನೆಗಳು ಇದೀಗ ಉತ್ತೇಜನವನ್ನು ಪಡೆಯುತ್ತವೆ ಮತ್ತು ನೀವು ಹೆಚ್ಚಿನ ಪ್ರಮಾಣದ ಲಾಭವನ್ನು ಸಹ ಪಡೆಯುತ್ತೀರಿ. ಗೊತ್ತಿದೂ ಮಾಡುವ ಮೂರ್ಖತನಕ್ಕೆ ಅನುಭವಿಸುವುದೊಂದೇ ದಾರಿ. ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಸ್ಥಾನವನ್ನು ದುರ್ಬಲಗೊಳಿಸಬಹುದು.

ಸಿಂಹ ರಾಶಿ: ಕೇವಲ ಪುರುಷ ಪ್ರಯತ್ನದಿಂದ ಯಾವುದೂ ಸಾಧ್ಯವಾಗದು. ದೈವಬಲವೂ ಸೇರಬೇಕು ಎಂಬ ಮಾನಸಿಕತೆ ಇದ್ದರೆ ಇಂದಿನ ಯೋಜನೆಯಿಂದ ಕಾರ್ಯಸಿದ್ಧಿ. ಸಂಗಾತಿಯ ಬೆಂಬಲವನ್ನು ದುರುಪಯೋಗ ಮಾಡಿಕೊಳ್ಳುವುದು ಬೇಡ. ಪ್ರೇಮ ಅನುಭವಗಳು ಕಹಿಯಾದ ಕಾರಣ ಪ್ರೇಮದ ಕೊಡು ಕೊಳ್ಳುವಿಕೆಯಿಂದ ದೂರ. ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಲಾಭ ಪಡೆಯುತ್ತೀರಿ. ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ವಾಸಿಸುವ ಸ್ಥಳದಲ್ಲಿ ನೆಮ್ಮದಿ ದೂರಾದ ಅನುಭವವಾಗಬಹುದು. ನಿಮ್ಮ ಧಾರ್ಮಿಕ ಚಟುವಟಿಕೆಗಳನ್ನು ನೀವು ಗಮನದಲ್ಲಿರಿಸಿಕೊಳ್ಳುತ್ತೀರಿ. ನಿಮ್ಮ ವಿರೋಧಿಗಳಿಗೆ ನೀವು ತಲೆನೋವಾಗಿ ಉಳಿಯುತ್ತೀರಿ. ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ನಿಮಗೆ ಸ್ವಲ್ಪ ಕಾಳಜಿ ಇರಬಹುದು. ಪ್ರೀತಿಯ ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ನಿರಾಸೆಗೆ ಕಾರಣವಾಗಬಹುದು. ಕೊಡು ಕೊಳ್ಳುವ ವ್ಯವಹಾರಗಳಲ್ಲಿ ಲಾಭ ಕಂಡು ಬಂದರೂ, ಜಾಗರೂಕತೆ ವಹಿಸುವುದು ಅಗತ್ಯ. ಬಲಗಣ್ಣಿನ ತೊಂದರೆ ಕಾಣಿಸುವುದು.

ಕನ್ಯಾ ರಾಶಿ: ಇಂದು ನಿಮ್ಮ ಸುತ್ತ ಆಹ್ಲಾದಕರ ವಾತಾವರಣ ಇರುವಂತೆ ಬಯಸುವಿರಿ. ಮಂಗಳ ಕಾರ್ಯದಿಂದಾಗಿ, ಕುಟುಂಬ ಸದಸ್ಯರ ಸಂತೋಷ ಹೆಚ್ಚಾಗುತ್ತದೆ. ತಲೆಗೆ ಗಾಯಮಾಡಿಕೊಳ್ಳುವ ಸಂದರ್ಭವಿರುವುದು. ಹಲವು ದಿನಗಳಿಂದ ನಡೆಯುತ್ತಿರುವ ವಹಿವಾಟು ಪ್ರಮುಖ ಸಮಸ್ಯೆಯನ್ನು ಪರಿಹರಿಸಬಹುದು. ಕೈಯಲ್ಲಿ ಸಾಕಷ್ಟು ಹಣವನ್ನು ಹೊಂದಿರುವ ನೀವು ನೆಮ್ಮದಿಯಿಂದ ಇರುವಿರಿ. ಕೆಲವು ಕೆಲಸದ ಭರದಲ್ಲಿ ಇಂದು ಸಮಯವು ನಿಮ್ಮದಾಗಿರದು. ವಾತಾವರಣವು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಗಾತಿಯ ಸಾಕಷ್ಟು ಬೆಂಬಲ ಮತ್ತು ಒಡನಾಟವನ್ನು ಪಡೆಯುತ್ತೀರಿ. ದಾಂಪತ್ಯದಲ್ಲಿ ಪರರ ದೂಷಣೆ ಹೆಚ್ಚಾಗಿದ್ದು, ಆತ್ಮಾವಲೋಕನದ ಅವಶ್ಯಕತೆ ಇರುವುದು. ಮನೆಯಲ್ಲಿ ಸಹಕಾರ ಮತ್ತು ಸಂತೋಷದ ವಾತಾವರಣವೂ ಇರುತ್ತದೆ. ಜೀವನ ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ. ಶುಭ ಕಾರ್ಯದ ಚಿಂತನೆ ಅನಿರೀಕ್ಷಿತವಾಗಿ ನಡೆಯಲಿದೆ. ಉದ್ಯಮ, ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ.

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ