AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಈ ರಾಶಿಯವರು ಇಂದು ಹಳೆಯ ಮಾತನ್ನು ಉಳಿಸಿಕೊಳ್ಳಲಾರರು

Daily Horoscope, 02 May 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಪೂರ್ಣಿಮಾ ತಿಥಿಯ ಶನಿವಾರದಂದು ಭರವಸೆ, ಆಸರೆ ಅರೆಕಾಲಿಕ ವೃತ್ತಿ, ಬಾಂಧವ್ಯದಲ್ಲಿ ಬಿಕ್ಕಟ್ಟು, ಅಸತ್ಯದಿಂದ ಕಾರ್ಯ ಹಾಳು, ನಿಮ್ಮವರಿಂದ ವಂಚನೆ ಇದೆಲ್ಲ ಈ ದಿನದ ವಿಶೇಷ.

ದಿನ ಭವಿಷ್ಯ: ಈ ರಾಶಿಯವರು ಇಂದು ಹಳೆಯ ಮಾತನ್ನು ಉಳಿಸಿಕೊಳ್ಳಲಾರರು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 02, 2026 | 12:55 AM

Share

ಮೇಷ ರಾಶಿ :

ಇಂದು ಭವಿಷ್ಯದ ಬಗ್ಗೆ ಖಿನ್ನತೆ ಎದುರಾದರೆ, ಅನುಭವಿಗಳ ಸಲಹೆ ಪಡೆಯಿರಿ. ವ್ಯಾಪಾರ ಅಥವಾ ಉದ್ಯೋಗದಲ್ಲಿ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮವರೆದು ಕಠೋರ ಮಾತುಗಳನ್ನು ಆಡುವರಿ. ಸುತ್ತಾಡುವ ಮನಸ್ಸಿರಲಿದೆ. ಕೆಲವು ಹವ್ಯಾಸಗಳು ಚಟವಾಗಿಯೂ ಪರಿವರ್ತನೆ ಆಗಬಹುದು. ಬಿಡುಗಡೆ ಸಿಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ನಿಮ್ಮವರ ಮೇಲೆ ತಪ್ಪು ತಿಳಿವಳಿಕೆಯನ್ನು ಹೊಂದಿ ಅವರ ತೇಜೋವಧೆ.

ವೃಷಭ ರಾಶಿ :

ಇಂದಿನ ಕಷ್ಟಗಳು ನಿಮ್ಮನ್ನು ಗಟ್ಟಿ ಗಾಳಿಸುತ್ತವೆ. ಮಾಡಿದ ತಪ್ಪುಗಳನ್ನು ಒಪ್ಪಿಕೊಂಡು ಕ್ಷಮೆ ಕೇಳಿದರೆ ಶಾಂತಿ ದೊರೆಯುತ್ತದೆ. ನಿಮ್ಮ ಕ್ರಿಯೆಗಳು ಕೆಲವರ ಮನಸ್ಸಿಗೆ ನೋವು ತರುವ ಸಾಧ್ಯತೆ ಇದೆ. ಎಂತಹ ನೋವಲ್ಲೂ ಉಪಕಾರವನ್ನು ಮರೆಯಲಾರಿರಿ. ಹೊಸತನವನ್ನು ಇಷ್ಟಪಟ್ಟು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವ ಪ್ರಯತ್ನ. ಕೆಲವರ ಮಾತು ಉತ್ಸಾಹವನ್ನು ಹಾಳು ಮಾಡುವುದು. ನೀವು ಮಾಡುವ ಕೆಲಸವು ಅಶಿಸ್ತಿನಿಂದ ಇರಬಹುದು.

ಮಿಥುನ ರಾಶಿ :

ನಿಮ್ಮ ದೃಢನಿಶ್ಚಯ ಮತ್ತು ಬುದ್ಧಿವಂತಿಕೆಯಿಂದ ಭವಿಷ್ಯಕ್ಕಾಗಿ ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಮುಖ್ಯ ಯೋಜನೆಯಲ್ಲಿ ಮಹಿಳೆಯರಿಗೆ ಅವರ ಪರಿಶ್ರಮಕ್ಕಾಗಿ ಮಾನ್ಯತೆ ನೀಡುವಿರಿ. ವೃತ್ತಿಪರ ಜೀವನದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ.

ಕರ್ಕಾಟಕ ರಾಶಿ :

ಹಣದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಇಂದು ಸೂಕ್ತ ದಿನವಲ್ಲ. ಕೆಲಸದಲ್ಲಿನ ಅನಿರೀಕ್ಷಿತ ತೊಂದರೆಗಳನ್ನು ಧೈರ್ಯ ಮತ್ತು ಸ್ಥಿರತೆಯಿಂದ ಎದುರಿಸಿ. ಸಂಗಾತಿಯ ಭಯದಿಂದ ಎಲ್ಲವನ್ನೂ ಸರಿಯಾಗಿ ಮಾಡುವಿರಿ. ಇದು ನಿಮಗೆ ಭವಿಷ್ಯದ ಸುಧಾರಣೆಗೆ ಸಹಕಾರಿ. ಲಭ್ಯವಿರುವ ಅವಕಾಶಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದರಿಂದ ಭವಿಷ್ಯದ ಭದ್ರತೆಯನ್ನು ಹೆಚ್ಚಿಸಬಹುದು. ಆಲಸ್ಯದಿಂದ ಹೊರಬರಬೇಕಾದ ಸ್ಥಿತಿಯು ಇದೆ.

ಸಿಂಹ ರಾಶಿ :

ಸ್ಥಿರಾಸ್ತಿಯ ಖರೀದಿಗೆ ಓಡಾಟ ಮಾಡುವಿರಿ. ಇಂದು ನಿಮ್ಮ ಉಜ್ವಲ ಪ್ರೀತಿಯು ನಿಮ್ಮ ಸುತ್ತಲಿರುವವರನ್ನು ಪ್ರೇರೇಪಿಸುತ್ತದೆ. ಆದರೆ ನಿಷ್ಕ್ರಿಯತೆ ಮತ್ತು ಆಯಾಸದಿಂದ ನೀವು ಸ್ವಲ್ಪ ಅಸಹಜವಾಗಿ ಅನುಭವಿಸಬಹುದು. ದಿನದ ಅಂತ್ಯದ ವೇಳೆಗೆ ಸಂತೋಷಕರ ಸುದ್ದಿ ನಿಮಗೆ ಮನಶ್ಶಾಂತಿಯನ್ನು ತರಬಹುದು. ಏಕಾಂತವನ್ನು ಇಷ್ಟಪಡುವವರಿದ್ದೀರಿ. ನಿಮ್ಮ ಆಲೋಚನೆಗೆ ತಕ್ಕಂತೆ ಎಲ್ಲವೂ ನಡೆಯುತ್ತಿದೆ.

ಕನ್ಯಾ ರಾಶಿ :

ನಿಮ್ಮ ವಿಶ್ಲೇಷಣಾ ಶಕ್ತಿ ಮತ್ತು ನೈತಿಕತೆಯು ಇಂದು ನಿಮ್ಮ ಸುತ್ತಮುತ್ತಲಿನವರಿಂದ ಮೆಚ್ಚುಗೆ ಪಡೆಯಲಿದೆ. ಧಾರ್ಮಿಕ ವಿಷಯದಲ್ಲಿ ಅಶ್ರದ್ಧೆ ತೋರಿಸುವಿರಿ. ಜನರು ನಿಮ್ಮ ಸಲಹೆಗಳನ್ನು ಕೇಳಲು ಬರಬಹುದು, ನಿಮ್ಮ ಒಳನೋಟಗಳು ಪ್ರಭಾವಶಾಲಿಯಾಗಿರುತ್ತವೆ. ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ನೀವು ಯೋಜಿಸಿದ್ದರೂ, ಅದನ್ನು ಮುಂದೂಡಬೇಕಾಗಬಹುದು. ಭೂಮಿಯ ವ್ಯವಹಾರವನ್ನು ಸದ್ಯಕ್ಕೆ ನಿಲ್ಲಿಸುವುದು ಅಥವಾ ಕೆಲವು ದಿನಗಳ ಅನಂತರ ನಡೆಸುವುದು ಯೋಗ್ಯವಿದೆ.

ತುಲಾ ರಾಶಿ :

ನಿಮ್ಮ ಸೃಜನಶೀಲತೆ ಮತ್ತು ಕಷ್ಟಪಟ್ಟು ಮಾಡಿದ ಕೆಲಸವು ಗುರುತಿಸಲ್ಪಡುತ್ತದೆ, ಆದರೆ ಕನಸಿನ ಯೋಜನೆಗಳ ಫಲಿತಾಂಶಕ್ಕೆ ಸಮಯ ಬೇಕಾಗಿದೆ. ಸುಪ್ತ ಪ್ರತಿಭೆಯ ಅನಾವರಣವಾಗಲಿದೆ. ಇಂದು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸುವಿರಿ, ಆದರೆ ನಿರಾಸೆಗೊಳ್ಳದೇ ಮುಂದೆ ಸಾಗುವುದು ಮುಖ್ಯ ಹೊಸ ಯೋಜನೆಗಳಿಗೆ ಹೆಚ್ಚು ಖರ್ಚು ಮಾಡಬೇಕಾದರೂ, ಬಜೆಟ್ ನ ಜಾಗರೂಕತೆ ವಹಿಸಿ. ದೀರ್ಘಕಾಲದ ಯಶಸ್ಸಿಗೆ ಗಮನಹರಿಸಿ. ವೈದ್ಯರನ್ನು ಭೇಟಿಯಾಗಿ ಶಾರೀರಿಕ ಸಮಸ್ಯೆಗಳನ್ನು ಅವರಲ್ಲಿ ಹೇಳಿ.

ವೃಶ್ಚಿಕ ರಾಶಿ :

ಅಜ್ಞಾತವಾಸದಿಂದ ಹೊರಬರಲಿದ್ದಾರೆ. ಮಕ್ಕಳು ನಿಮಗೆ ಅಪಮಾನ ಮಾಡುವ ಸಾಧ್ಯತೆ ಇದೆ. ನಿಮ್ಮ ವಿಶ್ಲೇಷಣಾ ಮತ್ತು ಅನುಷ್ಠಾನ ಸಾಮರ್ಥ್ಯ ಇಂದು ನಿಮಗೆ ಮಹತ್ತರವಾದ ಸಹಾಯ ಮಾಡಲಿದೆ. ಹಳೆಯ ವಸ್ತುಗಳನ್ನು ಮಾರಾಟ ಮಾಡಲಿದ್ದೀರಿ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಆಯತಪ್ಪಿ ಬಿದ್ದು ದೊಡ್ಡ ಗಾಯಮಾಡಿಕೊಳ್ಳಲಿದ್ದೀರಿ. ಅನಿರೀಕ್ಷಿತ ಧನವ್ಯಯವು ಆಗಬಹುದು. ವಿದ್ಯಾರ್ಥಿಗಳು ನಿಮ್ಮ ಮುಂದಿನ ವಿಷಯಗಳ ಕುರಿತು ಚರ್ಚೆಗಳನ್ನು ಮಾಡಿ ಮುಂದುವರಿಯಿರಿ.

ಧನು ರಾಶಿ :

ಉದ್ಯೋಗದ ಸ್ಥಳದಲ್ಲಿ ಕೆಲಸವು ವೇಗವಾಗಿ ನಡೆಯಲಿದೆ. ಮನೆಯ ರಿಪೇರಿ ಮಾಡಿಸಲಿದ್ದೀರಿ. ಹಣವನ್ನು ಕೊಟ್ಟು ಕೆಲಸವನ್ನು ಮಾಡಿಸಿಕೊಳ್ಳಬೇಕಾಗುವುದು. ನಿಮ್ಮ ಸಾಮರ್ಥ್ಯವನ್ನು ಇನ್ನೊಬ್ಬರು ಗುರಿತಿಸಲಿದ್ದಾರೆ. ಒಳ್ಳೆಯ ಕೆಲಸವನ್ನು ಮಾಡುವ ಚಿಂತನೆಯನ್ನು ಮಾಡುವಿರಿ. ಎಲ್ಲವೂ ಕ್ಷಣದಲ್ಲಿ ಆಗಬೇಕು ಎನ್ನುವ ಉದ್ವೇಗವವನ್ನು ಬಿಟ್ಟು ಬಿಡಿ. ನಿಮಗೆ ಬೆಲೆ ಕೊಡದೇ ಇರುವುದು ನಿಮಗೆ ಬೇಸರವಾಗುವುದು. ಖುಷಿಪಡುವ ಸಂಗತಿಗಳಿದ್ದರೂ ದುಃಖಿಗಳಾಗುವ ಸಾದ್ಯತೆ ಇದೆ.

ಮಕರ ರಾಶಿ :

ನಿಮ್ಮ ಕಾರ್ಯಕ್ಕೆ ಸಂಬಂಧಿಸಿದ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ. ಇದು ಯಶಸ್ಸಿಗೆ ದಾರಿಮಾಡುತ್ತದೆ. ನಿರಂತರ ಕೆಲಸದಿಂದ ಬಳಲಿದರೂ, ವಿಶ್ರಾಂತಿ ತೆಗೆದುಕೊಂಡು ಸಿದ್ಧರಾಗುವಿರಿ. ಆಧುನಿಕ ಉಪಕರಣಗಳ ಬಳಕೆಯನ್ನು ಹೆಚ್ಚು ಮಾಡುವಿರಿ. ಉದ್ಯೋಗದಲ್ಲಿ ತಡೆಯೊಡ್ಡುವ ಸಮಸ್ಯೆಗಳು ಬಂದರೂ ಚಿಂತೆ ಇರದು. ವಾಹನವನ್ನು ನಿಧಾನವಾಗಿ ಚಲಾಯಿಸಿ. ಬೇರೆಯವರ ತಪ್ಪಿನಿಂದ ನಿಮಗೆ ತೊಂದರೆಗಳು ಆಗಬಹುದು.

ಕುಂಭ ರಾಶಿ :

ಹಳೆಯ ಕಾರ್ಯವು ನಿಮ್ಮ ಉದ್ಯೋಗದಲ್ಲಿ ತಪ್ಪುಗಳಾದಂತೆ ಸಹಾಯ ಮಾಡುತ್ತದೆ. ನಿರೀಕ್ಷಿಸದ ಆರ್ಥಿಕ ಸಹಾಯವು ದೀರ್ಘಕಾಲದ ಯೋಜನೆಗೆ ಅವಕಾಶ ತೆರಯುವುದು. ಅಚ್ಚರಿಯ ಕೆಲವು ಸಂಗತಿಗಳು ನಿಮಗೆ ಕಾದಿರಬಹುದು. ಅಪರಿಚಿತರ ಭೇಟಿಯಿಂದ ಸ್ವಲ್ಪ ಹಿಂದುಳಿಯಿರಿ. ಕ್ರೀಡಾಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು.

ಮೀನ ರಾಶಿ :

ನಿಮ್ಮ ಹತ್ತಾರು ಕನಸುಗಳಲ್ಲಿ ಒಂದನ್ನು ಸಾಕಾರ ಮಾಡಿಕೊಳ್ಳಿ. ನಿಮ್ಮ ಪ್ರೀತಿಯನ್ನು ಮುಕ್ತವಾಗಿ ವ್ಯಕ್ತಪಡಿಸುವುದರಿಂದ ಪ್ರೀತಿಯಲ್ಲಿ ಯಶಸ್ಸು. ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿಮ್ಮ ಸಾಮರ್ಥ್ಯವು ಲಾಭದಾಯಕ. ಕುಟುಂಬ ಸಮಸ್ಯೆಗಳು ನಿಮ್ಮ ಗಮನವನ್ನು ಸೆಳೆಯಬಹುದು. ಇರುವವರನ್ನು ಬಿಟ್ಟು ಇನ್ನೊಬ್ಬರ ನಂಬಿ ಮೋಸಹೋಗಬೇಡಿ. ದಾಯಾದಿ ಕಲಹವು ನ್ಯಾಯಾಲಯದ ವರಗೂ ಹೋಗಬಹುದು. ಪುಣ್ಯಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ.

ಇಂದಿನ ಪಂಚಾಂಗ: 

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವ್ಯತಿಪಾತ್, ಕರಣ : ಕೈಲವ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:12 – 10:47, ಯಮಗಂಡ ಕಾಲ 13:56 – 15:31, ಗುಳಿಕ ಕಾಲ 06:03 – 07:38

-ಲೋಹಿತ ಹೆಬ್ಬಾರ್ 

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು