AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಈ ರಾಶಿಯವರಿಂದ ಇಂದು ಅಧಿಕಾರವನ್ನು ಕಸಿದುಕೊಳ್ಳುವ ಸಂಭವ

Horoscope Today 08 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಸಪ್ತಮೀ ತಿಥಿಯ ಶುಕ್ರವಾರದಂದು ವಿವಾದದಲ್ಲಿ ಸ್ಪಷ್ಟ ನಿಲುವು, ಹಿತಶತ್ರುಗಳ ಒಲವು, ಸ್ಪರ್ಧೆಯಲ್ಲಿ ಗೆಲವು, ಆದಾಯದ ಸುಳಿವು, ಕಾರ್ಯದಲ್ಲಿ ಸೆಳವು, ಅಮೂಲ್ಯ ವಸ್ತುಗಳ‌ ಕಳವು ಇವೆಲ್ಲ ಈ ದಿನದ ಭವಿಷ್ಯ.

ದಿನ ಭವಿಷ್ಯ: ಈ ರಾಶಿಯವರಿಂದ ಇಂದು ಅಧಿಕಾರವನ್ನು ಕಸಿದುಕೊಳ್ಳುವ ಸಂಭವ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 08, 2026 | 12:20 AM

Share

ಮೇಷ ರಾಶಿ:

ವೃತ್ತಿ ಜೀವನದಲ್ಲಿ ಹೊಸ ರೀತಿಯ ಒತ್ತಡ ಎದುರಿಸಬೇಕಾಗಬಹುದು. ಆರ್ಥಿಕ ನಿರ್ವಹಣೆಯಲ್ಲಿ ಸಮರ್ಪಕ ವ್ಯವಸ್ಥೆ ಅಗತ್ಯ. ಹೊಸ ಸಂಬಂಧಗಳನ್ನೊಳಗೊಂಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಯಾವುದೇ ದಾಖಲೆಗಳಿಲ್ಲದೇ ವ್ಯವಹಾರ ಬೇಡ. ಅನಂತರ ಅದೇ ತಿರುಗು ಬಾಣವಾಗಿ ಚುಚ್ಚುವುದು. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ.

ವೃಷಭ ರಾಶಿ:

ಸಂಪತ್ತು ಬರುವುದು ಮಾತ್ರ ಕಾಣಿಸುತ್ತದೆ. ನೋಡು ನೋಡುತ್ತಿದ್ದಂತೆ ಎಲ್ಲವೂ ಖಾಲಿಯಾಗುವುದು. ಆರ್ಥಿಕ ಸ್ಥಿರತೆ ಹೆಚ್ಚಿಸಲು ಹೊಸ ಮಾರ್ಗಗಳ ಅನ್ವೇಷಣೆ ಅಗತ್ಯ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಬಹುದು. ದೈಹಿಕ ಶ್ರಮಕ್ಕೆ ಮಾನಸಿಕ ಸಮಾಧಾನ ನೀಡುವ ಕೆಲಸದಲ್ಲಿ ತೊಡಗಿರಿ. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವ್ಯವಹಾರದಲ್ಲಿ ವಂಚನೆಯಾಗುವುದು ಗೊತ್ತಾಗಿ ಸರಿ ಮಾಡಿಕೊಳ್ಳುವಿರಿ.

ಮಿಥುನ ರಾಶಿ:

ವೃತ್ತಿ ಕ್ಷೇತ್ರದಲ್ಲಿ ಸಾಧನೆಗೆ ಅವಕಾಶಗಳು ಬರುವುದು. ಕೊಟ್ಟಿದ್ದನ್ನು ಹಿಂದಿರುಗಿಸಲು ಕಾಯುವಿರಿ. ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ಆತ್ಮವಿಶ್ವಾಸದಿಂದ ಕಾರ್ಯ ನಡೆಸಿ. ಸಂಬಂಧಗಳಲ್ಲಿ ಸ್ವಚ್ಚತೆ ಬೇಡಿಕೆಯಾಗಿದೆ. ಶಾಂತ ಮನಃಸ್ಥಿತಿಯಿಂದ ಸಮಸ್ಯೆ ಪರಿಹರಿಸಿ. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುತ್ತೇನೆಂದರೂ ಆಗದು. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡಿ.

ಕರ್ಕಾಟಕ ರಾಶಿ:

ಅತಿಯಾದ ಪ್ರವಾಸಕ್ಕೆ ಮನಸ್ಸು ಮಾಡುವಿರಿ. ಮನಸ್ಸಿಗೆ ಹಿತವಾದ ಸಂಗತಿಗಳು ನಡೆಯಲಿದೆ. ತರ್ಕಬದ್ಧವಾದ ವಾದಕ್ಕೆ ಪ್ರಶಂಸೆ. ಅನುಭವದಿಂದ ಹೊಸ ಅವಕಾಶಗಳು ಲಭ್ಯ. ಸಂಬಂಧಗಳಲ್ಲಿ ಸಮತೋಲನ ಕಾಯ್ದುಕೊಳ್ಳಿ. ಹಣಕಾಸಿನ ವಿಷಯದಲ್ಲಿ ಹೆಚ್ಚು ವೆಚ್ಚ ತಪ್ಪಿಸಿ. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ.

ಸಿಂಹ ರಾಶಿ:

ಮೇಲಧಿಕಾರಿಗಳಿಗೆ ಇಷ್ಟವಾಗುವಂತೆ ಕಾರ್ಯ ಮಾಡಿ ಅವರಿಂದ ಪ್ರಶಂಸೆ ಪಡೆಯುವಿರಿ. ಆತ್ಮವಿಶ್ವಾಸ ಕಡಿಮೆಯಾಗುವ ಸಂದರ್ಭ ಎದುರಿಸಬಹುದು. ಹಣಕಾಸಿನ ವಿಚಾರದಲ್ಲಿ ಸಮಾಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಿ. ಪ್ರೀತಿಯ ಸಂಬಂಧಗಳಲ್ಲಿ ಚರ್ಚೆಯಿಂದ ಸಮಸ್ಯೆ ನಿವಾರಣೆ. ಸಂಗಾತಿಯಿಂದ ಪೂರ್ಣ ತೃಪ್ತಿ ಸಿಗದು. ಪ್ರಸಿದ್ಧ ಸಂಸ್ಥೆಯ ಉನ್ನತ ಅಧಿಕಾರದ ಪ್ರಾಪ್ತಿಯ ಅವಕಾಶವು ಬರಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು.

ಕನ್ಯಾ ರಾಶಿ:

ಉದ್ವೇಗಕ್ಕೆ ಒಳಗಾಗಲು ಅನೇಕ ಸಂದರ್ಭಗಳು ಬರಬಹುದು. ವೃತ್ತಿಯಲ್ಲಿ ಜಾಗರೂಕತೆಯಿಂದ ನಿರ್ಧಾರ ತೆಗೆದುಕೊಳ್ಳಿ. ಹಣಕಾಸಿನ ವಿಚಾರದಲ್ಲಿ ದುಡುಕಿನಿಂದ ಮುನ್ನಡೆ ಬೇಡ. ಮನೆಗೆ ಬಂದ ಅತಿಥಿಗಳಿಂದ ಭವಿಷ್ಯಕ್ಕೆ ಸಹಾಯ ಸಿಗುವುದು. ಪ್ರೀತಿಪಾತ್ರರೊಂದಿಗೆ ಮನಸ್ತಾಪ ಪರಿಹರಿಸಿ. ಸಂಗಾತಿಯ ಮೇಲಿನ ಪ್ರೀತಿಯು ಕಡಿಮೆಯಾದಂತೆ ತೋರುವುದು. ಕೆಲವರಿಗೆ ಸೌಕರ್ಯಗಳು ಕಡಿಮೆಯಾದಂತೆ ಅನ್ನಿಸುವುದು.

ತುಲಾ ರಾಶಿ:

ದಾಯಾದಿಗಳ ಕಡೆಯವರಿಂದ ಮಾನಸಿಕ ಕಿರಿಕಿರಿ ಹೆಚ್ಚಾಗಲಿದೆ. ಇಂದು ನಿಮ್ಮ ‌ಮುಂದಿನ ಕಾರ್ಯಕ್ಕೆ ಅನುಕೂಲಕರವಾಗಿರಲಿದೆ. ಸರ್ಜನಾತ್ಮಕ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ವೃತ್ತಿ ಜೀವನದಲ್ಲಿ ಅಡಚಣೆಗಳು ಪರಿಹಾರವಾಗುತ್ತವೆ. ಸಂಬಂಧಗಳಲ್ಲಿ ಸಹಕಾರ ಮತ್ತು ಮನವಿ ಮುಖ್ಯ. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ನಿಮ್ಮ ವರ್ತನೆಗಳು ಯಾರ ಮೇಲಾದರೂ ಪ್ರಭಾವ ಬೀರಬಹುದು.

ವೃಶ್ಚಿಕ ರಾಶಿ:

ನಿಃಸ್ವಾರ್ಥವಾಗಿ ಇಚಮಷ್ಟಪಡುವವರನ್ನು ಸಂಶಯಿಸಬೇಡಿ.‌ ನಿಮ್ಮ ಜೊತೆಗಿರುವವರು ಯಾರು ಯಾವ ರೀತಿಯವರು ಎಂಬುದು ಗೊತ್ತಾಗುತ್ತದೆ. ಸಹನೆ ಮೀರದಂತೆ ನೀವೇ ನೋಡಿಕೊಳ್ಳಬೇಕು. ವ್ಯಾಪಾರದಲ್ಲಿ ಲಾಭದಾಯಕ ಹೊಣೆಗಾರಿಕೆ ಬರುತ್ತದೆ. ಸ್ನೇಹಿತರಿಂದ ಉತ್ತಮ ಸಹಕಾರ ಲಭ್ಯ. ಇಂದು ನಿಮ್ಮ ಪ್ರೀತಿಪಾತ್ರರ ಭೇಟಿಯಾಗಲಿದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಶುಭಸುದ್ದಿಯು ಸಿಗಬಹುದು.

ಧನು ರಾಶಿ:

ವಿದೇಶಿ ವಸ್ತುಗಳ ವ್ಯವಹಾರ ಮಾಡುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು. ವಿವೇಕದಿಂದ ಸಂಕಷ್ಟಗಳನ್ನು ಪರಿಹರಿಸುವಿರಿ. ಆರ್ಥಿಕ ವ್ಯವಹಾರವನ್ನು ಅರ್ಥಮಾಡಿಕೊಂಡು ನಡೆಸಲಾಗದು. ಉದ್ಯೋಗದಲ್ಲಿ ಅಲ್ಪ ಸಮಸ್ಯೆ ಎದುರಾಗಬಹುದು, ಧೈರ್ಯದಿಂದ ಮುನ್ನಡೆಯಿರಿ. ಹಣಕಾಸಿನ ನಿರ್ವಹಣೆಯಲ್ಲಿ ಎಚ್ಚರಿಕೆಯಿಂದಿರಬೇಕು. ಯಾರದ್ದಾದರೂ ಮನವೊಲಿಸುವ ಕೆಲಸವು ನಿಮಗೆ ಬರಬಹುದು. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ಸಾಲವನ್ನು ಸ್ವಲ್ಪವೂ ಉಳಿಯದಂತೆ ಮುಗಿಸಿ.

ಮಕರ ರಾಶಿ:

ಸಂಗಾತಿಗೆ ನೀವು ಸ್ನೇಹದಿಂದ ವರ್ತಿಸುವುದು ಇಷ್ಟವಗುವುದು. ಇಲ್ಲವಾದರೆ ಭಿನ್ನಾಭಿಪ್ರಾಯಗಳು ಸವಕಾಶ ಸಿಗುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮ ಫಲ ನೀಡಲಿದೆ. ಅನಾರೋಗ್ಯದಿಂದ ಮಾಡುವ ಕಾರ್ಯ ಅರ್ಧಕ್ಕೆ ಸ್ಥಗಿತ. ಸಹೋದ್ಯೋಗಿಗಳ ಸಹಕಾರ ದೊರೆಯಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಸಂಯಮ ಇರಲಿ. ಹಣದ ಹರಿವು‌ ಕಡಿಮೆ ಇರುವುದರಿಂದ ಖರ್ಚನ್ನು ಸರಿಯಾಗಿ ನಿಭಾಯಿಸುವುದು ಒಳ್ಳೆಯದು. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ.

ಕುಂಭ ರಾಶಿ:

ವ್ಯವಹಾರಗಳ ಬಗ್ಗೆ ಪಾಲುದಾರರ ಜೊತೆ ತಕ್ಷಣದಲ್ಲಿ ಮಾತನಾಡಬೇಕಾದ ಹಾಗೂ ತೀರ್ಮಾನ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಸಹೋದ್ಯೋಗಿಗಳ ಬೆಂಬಲ ನಿಮ್ಮ ಮನೋಬಲ ಹೆಚ್ಚಿಸುತ್ತದೆ. ಆರ್ಥಿಕ ವಿಷಯಗಳಲ್ಲಿ ವ್ಯರ್ಥ ವೆಚ್ಚ ತಪ್ಪಿಸಿ. ಆರೋಗ್ಯದತ್ತ ಗಮನ ಹರಿಸುವುದು ಸೂಕ್ತ. ಸಂಬಂಧಗಳಲ್ಲಿ ಸಮಾಲೋಚನೆ ಮಾಡಿ ನಿರ್ಧಾರ ಕೈಗೊಳ್ಳಿ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು.

ಮೀನ ರಾಶಿ:

ವೃತ್ತಿರಂಗದಲ್ಲಿ ನಿಮ್ಮ ಸ್ಥಾನವು ಹೆಚ್ಚಾಗುವುದಿಲ್ಲ. ಆತ್ಮವಿಶ್ವಾಸ ಮತ್ತು ದೃಢ ನಿರ್ಧಾರಗಳಿಂದ ಯಶಸ್ಸು. ಹೊಸ ಕಾರ್ಯಗಳ ಯೋಜನೆ ಸಕಾರಾತ್ಮಕ ಫಲ ನೀಡುವುದು. ಕುಟುಂಬದಲ್ಲಿ ಸಂಧಾನ ಮತ್ತು ಸಮರ್ಪಣೆ ಮುಖ್ಯ. ಹಣಕಾಸಿನ ವಿಷಯದಲ್ಲಿ ಜಾಗರೂಕತೆ ಅಗತ್ಯ. ಪ್ರೀತಿಯ ಸಂಬಂಧಗಳಲ್ಲಿ ನಿಷ್ಠೆ ಮತ್ತು ನಿಷ್ಠುರತೆಯ ಮಧ್ಯೆ ಸಮತೋಲನ ಕಾಯ್ದುಕೊಳ್ಳಿ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿಗಾಗಿ ಪ್ರಯತ್ನಿಸುವಿರಿ. ಬೆರೆಯುವುದು ಕಷ್ಟವಾದೀತು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಶುಭ, ಕರಣ : ಭದ್ರ, ಸೂರ್ಯೋದಯ – 06 – 00 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:46 – 12:21, ಯಮಗಂಡ ಕಾಲ 15:31 – 17:06, ಗುಳಿಕ ಕಾಲ 07:36 – 09:11

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!