ದಿನ ಭವಿಷ್ಯ: ಈ ರಾಶಿಯವರನ್ನು ಇಂದು ಅಧಿಕಾರದ ಸ್ಥಾನದಲ್ಲಿ ನೋಡಬಹುದು..

Horoscope Today 11 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಸೋಮವಾರದಂದು ಕಾರ್ಯಗಳ ಮರೆವು ಅಧಿಕ, ವಿದೇಶದಿಂದ ಆಗಮನ, ಆಯ್ಕೆಯಲ್ಲಿ ಗೊಂದಲ, ಕಲಹದಿಂದ ಆಪತ್ತು, ಪ್ರೇಮದ ತ್ಯಾಗ ಈ ಎಲ್ಲವೂ ಇಂದು ಇರಲಿದೆ.

ದಿನ ಭವಿಷ್ಯ: ಈ ರಾಶಿಯವರನ್ನು ಇಂದು ಅಧಿಕಾರದ ಸ್ಥಾನದಲ್ಲಿ ನೋಡಬಹುದು..
ದಿನ ಭವಿಷ್ಯ
Edited By:

Updated on: May 11, 2026 | 12:22 AM

ಮೇಷ ರಾಶಿ:

ಆದಾಯ ಮತ್ತು ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತವೆ. ಆಯುಧದ ನಷ್ಟವಾಗಲಿದೆ. ಅನೇಕ ಕೆಲಸಗಳು ಏಕಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಾಳಾದ ಕೆಲಸಗಳಲ್ಲಿ ಸುಧಾರಣೆ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ.

ವೃಷಭ ರಾಶಿ:

ಉದ್ಯೋಗದಲ್ಲಿ ನಿಮ್ಮ ಹಣವೂ ಖರ್ಚಾಗಬಹುದು. ನಿಮ್ಮ ಸುತ್ತಮುತ್ತಲಿನ ಜನರ ಬಗ್ಗೆ ಜಾಗರೂಕರಾಗಿರಿ ಮತ್ತು ಹಣಕಾಸಿನ ವಹಿವಾಟುಗಳಲ್ಲಿ ಕೂಡ ಜಾಗರೂಕರಾಗಿರಿ. ನಿಮಗೆ ಸುವರ್ಣಾವಕಾಶಗಳು ಸಿಗುತ್ತವೆ. ಆದರೆ ದುರಾಸೆಯಿಂದಾಗಿ ನೀವು ಅವಕಾಶವನ್ನು ಕಳೆದುಕೊಳ್ಳಬಹುದು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸುವಿರಿ.

ಮಿಥುನ ರಾಶಿ:

ಅಧ್ಯಯನದಲ್ಲಿ ನೀವು ಮಾಡುವ ಪ್ರಯತ್ನಗಳು ಲಾಭದಾಯಕವೆಂದು ಸಾಬೀತುಪಡಿಸುತ್ತದೆ ಮತ್ತು ನಿಮ್ಮ ಗುರಿಗಳನ್ನು ಸಾಧಿಸಲು ನಿಮ್ಮನ್ನು ಹತ್ತಿರಕ್ಕೆ ತರುತ್ತದೆ. ಅಪೇಕ್ಷಿತ ಕಾರ್ಯದ ಸಾಧನೆಯು ಪವಾಡದಂತೆ ಸಾಧ್ಯ. ನೀವು ನಿಮ್ಮ ಗುರಿಯನ್ನು ಸಾಧಿಸುವಿರಿ ಮತ್ತು ವಿವಾದಗಳನ್ನು ಗೆಲ್ಲುವಿರಿ. ಕಛೇರಿಯಲ್ಲಿ ನಿಮಗೆ ಆರಾಮಾಗಿ ಇರುವ ಯೋಚನೆ ಇರುವುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ಯಾರಾದರೂ ನಿಮ್ಮ ಮಾತನ್ನು ನಂಬುವರು.

ಕರ್ಕಾಟಕ ರಾಶಿ:

ದಿನವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ ಆರೋಗ್ಯದ ಬಗ್ಗೆ ತೃಪ್ತಿಕರವಾಗಿರುತ್ತದೆ. ನಿಮ್ಮ ಪರವಾಗಿ ಮಾತನಾಡಲು ಯಾರಾದರೂ ಬೇಕಾಗುತ್ತಾರೆ. ಕಷ್ಟಪಟ್ಟು ದುಡಿದು ಫಲವನ್ನು ಆನಂದಿಸುವ ಸಮಯ. ಮಕ್ಕಳ ಯಶಸ್ಸಿಗೆ ಹೆಮ್ಮೆಪಡುವಿರಿ. ಕೃತಜ್ಞತೆಯು ಅನಿವಾರ್ಯವಾಗಿ ಬೇಕಾಗುವುದು. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಲಿದೆ.

ಸಿಂಹ ರಾಶಿ:

ತಪ್ಪು ಸಲಹೆಯು ನಿಮ್ಮ ಗುರಿಯಿಂದ ನಿಮ್ಮನ್ನು ಬೇರೆಡೆಗೆ ಸೆಳೆಯಬಹುದು. ಮನೆಯ ಹಿರಿಯರ ಸಲಹೆ ಮತ್ತು ಮಾರ್ಗದರ್ಶನವನ್ನು ನಿರ್ಲಕ್ಷಿಸಬೇಡಿ. ಆದಾಯ ಬರುವ ಯಾವ ಸಣ್ಣ ಕೆಲಸವನ್ನೂ ಬಿಡಲಾರಿರಿ. ಮಕ್ಕಳೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ಕೆಲವು ವಿಶೇಷ ಜನರನ್ನು ಭೇಟಿಯಾಗುತ್ತೀರಿ. ಮಾತಿನ‌ ಮೇಲೆ ಹಿಡಿತ ತಪ್ಪಬಹುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ.

ಕನ್ಯಾ ರಾಶಿ:

ಇಂದಿನ ಕೆಲವು ಸಂದರ್ಭಗಳಿಂದಾಗಿ ನಿಮ್ಮ ಕೆಲಸದ ಪ್ರಯತ್ನಗಳು ವಿಳಂಬವಾಗುವ ಸಾಧ್ಯತೆಯಿದೆ. ಅನಂತರ ತೊಂದರೆ ತಪ್ಪಿಸಲು, ಯಾವುದೇ ಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೊದಲು ಯೋಚಿಸಿ. ನಿಮಗೆ ಪ್ರತಿಫಲ ಅಥವಾ ಬಡ್ತಿ ಸಿಗಬಹುದು. ವ್ಯಾವಹಾರಿಕ ಸಂಬಂಧವು ಅಂತ್ಯವಾಗಲಿದೆ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ನಿಮ್ಮನ್ನು ಬೇರೆ ಕಾರ್ಯಗಳಿಗೆ ಕರೆದುಕೊಂಡು ಹೋಗುವಿರಿ.

ತುಲಾ ರಾಶಿ:

ನಿಮಗೆ ಉತ್ತೇಜನ ನೀಡುವವರ ಕೊರತೆ ಇರುವುದು. ಸಮರ್ಪಣೆಯನ್ನು ಕಾಪಾಡಿಕೊಳ್ಳುವುದರಿಂದ ಕೆಲಸವು ಸಮಯಕ್ಕೆ ಪೂರ್ಣಗೊಳ್ಳುತ್ತದೆ. ಇದು ಹಣದ ವಿಷಯದಲ್ಲಿ ಪ್ರಗತಿಯ ಸಮಯ, ನಿಮ್ಮ ಪ್ರಯತ್ನಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ನಿಮ್ಮ ವೇತನದ ಬಗ್ಗೆ ಹೇಳಬೇಕಾಗಿಬರಬಹುದು. ಬಂದ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಉತ್ತಮ.

ವೃಶ್ಚಿಕ ರಾಶಿ:

ನೀವು ಪ್ರೇಮ ಸಂಬಂಧದಲ್ಲಿ ಬೇಸರವನ್ನು ಅನುಭವಿಸಬಹುದು, ಕೆಲಸವನ್ನು ಪೂರ್ಣಗೊಳಿಸುವ ಸಮಯ ಬಂದಿದೆ. ಆಸ್ತಿ ವಿವಾದ ದಿಡೀರನೆ ಏಳುವುದು. ಕುಟುಂಬದ ಅಗತ್ಯಗಳನ್ನು ಪೂರೈಸುವಲ್ಲಿ ನೀವು ಸಂತೋಷವನ್ನು ಕಾಣುವಿರಿ. ವೈಯಕ್ತಿಕ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಿ, ತಪ್ಪಿಸಿಕೊಳ್ಳಬೇಡಿ. ವೈರಿಗಳನ್ನು ನೀವೇ ಸ್ವತಃ ಸೃಷ್ಟಿಸಿಕೊಳ್ಳುವಿರಿ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು.

ಧನು ರಾಶಿ:

ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಆರ್ಥಿಕ ವ್ಯವಹಾರ ಮಾಡಲು ನಿಖರತೆಯನ್ನು ಇಟ್ಟುಕೊಳ್ಳಿ. ಅತಿಯಾದ ಉತ್ಸಾಹವು ನಷ್ಟಗಳಿಗೆ ಕಾರಣವಾಗಬಹುದು. ಎಚ್ಚರಿಕೆಯಿಂದ ಮುಂದುವರಿಯಿರಿ. ಆತ್ಮವಿಶ್ವಾಸ ಮತ್ತು ಉತ್ಸಾಹವು ವೃತ್ತಿಪರ ಅವಕಾಶಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಪರಿಚಿತ ಜನರನ್ನು ಭೇಟಿಯಾಗುವ ಸಂತೋಷವನ್ನು ಹಂಚಿಕೊಳ್ಳುವಿರಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ.

ಮಕರ ರಾಶಿ:

ನಿಮ್ಮ ಸಂಗಾತಿಗೆ ಈ ವಾರ ಸ್ಥಳಾವಕಾಶ ಬೇಕಾಗುತ್ತದೆ, ಅವರ ಅಭಿಪ್ರಾಯವನ್ನು ಗೌರವಿಸಿ. ನಿಮ್ಮ ಪ್ರಮುಖ ಕೆಲಸವನ್ನು ಯೋಜಿಸಿ. ಅನಂತರ ಪರಿಸ್ಥಿತಿ ತುಂಬಾ ಚೆನ್ನಾಗಿರುತ್ತದೆ ಮತ್ತು ಈ ಒಳ್ಳೆಯ ಸಮಯದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ. ಪಾಲುದಾರಿಕೆಯಲ್ಲಿ ನಿಮ್ಮ ಪಾಲುದಾರಿಕೆಯೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ.

ಕುಂಭ ರಾಶಿ:

ಮನೆಯ ನವೀಕರಣದ ಬಗ್ಗೆ ಯಾರನ್ನಾದರೂ ಸರಿಯಾದವರನ್ನು ಸಂಪರ್ಕಿಸಿ ಮುಂದುವರಿಯುವಿರಿ. ಮನೆಯ ದುರಸ್ತಿಗೆ ಹಣ ಕಡಿಮೆಯಾಗಲಿದೆ. ನಿಮ್ಮವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿಯನ್ನು ತೋರಿಸಲಿದ್ದಾರೆ. ಕೆಲಸಗಳಲ್ಲಿನ ಅಡೆತಡೆಗಳು ಕೊನೆಗೊಳ್ಳುತ್ತವೆ. ಭೂ ಸಂಬಂಧಿತ ಕೆಲಸ ಮಾಡುವ ಜನರಿಗೆ ಲಾಭವಾಗುತ್ತದೆ. ಓಡಾಟದ ಕೆಲಸಕ್ಕೆ ನಿಮ್ಮನ್ನು ಬಳಸಿಕೊಳ್ಳಬಹುದು. ಉತ್ಸಾಹವೂ ಇರಲಿದೆ. ಯಾರನ್ನೋ ನಿಂದಿಸುವುದು ಅಭ್ಯಾಸ ಮಾಡಿಕೊಳ್ಳುವುದು ಬೇಡ.‌

ಮೀನ ರಾಶಿ:

ಕೆಲಸದಲ್ಲಿ ಪೂರ್ವಭಾವಿಯಾಗಿ ತಿಳಿದುಕೊಳ್ಳಲು ಹೋದರೆ, ಕೆಲಸಗಳನ್ನು ಅನಾಯಸವಾಗಿ ನಡೆಸಬಹುದು. ಸ್ವಂತ ಸಾಮರ್ಥ್ಯ ಪರಿಣಾಮಕಾರಿಯಾಗುವುದು. ಇತರರಿಂದ ಪಡೆಯುವ ಸಹಾಯವೂ ಫಲಪ್ರದವಾಗುತ್ತದೆ. ಅಡೆತಡೆಗಳು ನಿವಾರಣೆಯಾಗಿ, ಗೌರವ ಸಿಗುತ್ತದೆ. ದೂರದೂರಿಗೆ ಪ್ರವಾಸಕ್ಕೆ ಹೋಗುವ ಮನಸ್ಸು ಮಾಡಲಿದ್ದೀರಿ. ನಿಮ್ಮನ್ನು ನೀವು ದುರ್ಬಲ ಮಾಡಿಕೊಳ್ಳುವುದು ಬೇಡ. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಐಂದ್ರ, ಕರಣ : ವಣಿಜ, ಸೂರ್ಯೋದಯ – 05 – 59 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:35 – 09:10, ಯಮಗಂಡ ಕಾಲ 10:46 – 12:21, ಗುಳಿಕ ಕಾಲ 13:56 – 15:31

-ಲೋಹಿತ ಹೆಬ್ಬಾರ್ – 8762924271 (what’s app only)

Follow Us