AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಎಲ್ಲದಕ್ಕೂ ಅತಿಯಾಗಿ ಬಳಸಿಕೊಳ್ಳುವರು

Horoscope Today 15 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಚತುರ್ದಶೀ ತಿಥಿಯ ಶುಕ್ರವಾರದಂದು ಉಪಕಾರಕ್ಕೆ ಪ್ರತ್ಯುಪಕಾರ, ಮನಃಸ್ಥೈರ್ಯ, ಅನಿರೀಕ್ಷಿತ ಅದೃಷ್ಟ, ಅನನುಭವದಿಂದ ಕಾರ್ಯ, ಪ್ರಕೃತಿಯ ಜೊತೆ ಸಮಯ, ದುಡುಕು ಇವೆಲ್ಲ ಈ‌ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಎಲ್ಲದಕ್ಕೂ ಅತಿಯಾಗಿ ಬಳಸಿಕೊಳ್ಳುವರು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 15, 2026 | 12:26 AM

Share

ಮೇಷ ರಾಶಿ:

ಇಷ್ಟವಿಲ್ಲದ ವಿಚಾರಗಳೇ ನಿಮ್ಮ ಸುತ್ತ ಮಾತನಾಡಿ ಮಾನಸಿಕ ಹಿಂಸೆ ಕೊಡುವರು. ಇಂದು ಸ್ವಲ್ಪ ಮಟ್ಟಿಗೆ ಆರ್ಥಿಕ ಬೆಳವಣಿಗೆ ಕಾಣಿಸಿ ಸಮಾಧಾನವಾಗುವುದು. ಹಣಕಾಸು ಯೋಜನೆಗಳಲ್ಲಿ ಸ್ಪಷ್ಟತೆ ಇರಲಿ. ನಿದ್ದೆಯ ಕೊರತೆ ದೈನಂದಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವರ‌ ಮಾತಿನಿಂದ ನಿಮ್ಮ ವ್ಯಕ್ತಿತ್ವವು ಬದಲಾಗುವುದು. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು.

ವೃಷಭ ರಾಶಿ:

ಆಹಾರ ವ್ಯತ್ಯಾಸದಿಂದ ಉದರ ಬಾಧೆ ಹೆಚ್ಚಾಗುವುದು. ಹಿರಿಯರ‌ ಸೇವೆಯ ಬಗ್ಗೆ ಹೆಮ್ಮೆ ಇರಲಿದೆ. ಸರ್ಕಾರದ ಉದ್ಯೋಗದಲ್ಲಿ ಹೊಸ ಜವಾಬ್ದಾರಿಯನ್ನು ಪಡೆಯಬೇಕಾಗುವುದು. ಉದ್ಯೋಗದಲ್ಲಿ ಸಣ್ಣ ಯತ್ನದಿಂದಲೇ ದೊಡ್ಡ ಫಲ ಸಿಗಬಹುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡೀತು. ಯಾರನ್ನೂ ಅಪಮಾನ ಮಾಡುವುದು ಬೇಡ. ಅಪ್ರಯೋಜಕ ಮಾತುಗಳಿಗೆ ಕಿವಿಯಾಗುವಿರಿ.

ಮಿಥುನ ರಾಶಿ:

ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯ ಕಾರಣ ಕಾರ್ಯವು ಸೂಚಿಸದೇ ಬಹಳ ಜಡರಾಗುವಿರಿ‌. ಹಣ ನಷ್ಟದಿಂದ ಚಿಂತೆ ಆಗಬಹುದಾದರೂ ಶೀಘ್ರವೇ ಪರಿಹಾರ ಕಂಡುಬರಲಿದೆ. ನಿಮಗೆ ಸರಿಕಂಡ ಕಾರ್ಯವನ್ನು ಯಾವುದೇ ಹಿಂಜರಿಕೆ ಇಲ್ಲದೇ ಮಾಡುವಿರಿ. ಸ್ನೇಹಿತರಿಂದ ಸಣ್ಣ ಹಾಸ್ಯದ ಸಂದರ್ಭಗಳು ಒತ್ತಡ ತಗ್ಗಿಸಬಲ್ಲವು. ದಿನದ ಅಂತ್ಯದಲ್ಲಿ ಆನಂದದ ಕ್ಷಣಗಳು ನಿಮ್ಮನ್ನು ಹತ್ತಿರದಿಂದ ತಲುಪುತ್ತವೆ. ವ್ಯಕ್ತಿತ್ವದ ಬಗ್ಗೆ ಇತರರು ಹೆಮ್ಮೆಪಡುವರು. ಉದ್ಯಮವನ್ನು ಅನ್ಯ ಮಾರ್ಗದಲ್ಲಿ ಮುಂದುವರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ.

ಕರ್ಕಾಟಕ ರಾಶಿ:

ಮಕ್ಕಳಿಗಾಗಿ ವಿಶೇಷ ಅಡುಗೆಯನ್ನು ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಕಲ್ಪನೆಯ ಶಕ್ತಿ ಹೆಚ್ಚಾಗುತ್ತದೆ, ಆದರೆ ಅದು ದುರ್ಬಳಕೆಗೆ ಕಾರಣವಾಗಬಾರದು. ಕೆಲಸದಲ್ಲಿ ಗಮನ ಹರಿಸುವ ಅಗತ್ಯವಿದೆ. ವಾಹನ‌ ದುರಸ್ತಿ ಅನಿರೀಕ್ಷಿತವಾಗಬಹುದು. ಖರ್ಚು ನಿಯಂತ್ರಣ ಮಾಡದಿದ್ದರೆ ಹಣಕಾಸಿನಲ್ಲಿ ಅಸ್ವಸ್ಥತೆ ಉಂಟಾಗಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ಓಡಾಟವನ್ನು ಮಾಡಬೇಕಾಗುವುದು. ಅಸೂಯೆಯ ಕಾರಣ ದ್ವೇಷಭಾವವು ಸಹೋದ್ಯೋಗಿಯ ಬಗ್ಗೆ ನಿಮ್ಮಲ್ಲಿ ಮೂಡಬಹುದು.

ಸಿಂಹ ರಾಶಿ:

ನಿಮ್ಮನ್ನು ಉಪಯೋಗಿಸಿಕೊಳ್ಳುವವರ ಜೊತೆ ವಾಗ್ವಾದ. ಕಠಿಣ ಪರಿಶ್ರಮ ಇಂದು ಫಲ ನೀಡಲಿದೆ. ಉದ್ಯೋಗದಲ್ಲಿ ಉನ್ನತಿ ಅಥವಾ ಬದಲಾವಣೆಯ ಸೂಚನೆ ಇದೆ. ಹಣಕಾಸಿನಲ್ಲಿ ಲಾಭದ ಸಂದರ್ಭ ಎದುರಾಗಬಹುದು. ಕುಟುಂಬದಲ್ಲಿ ಸಣ್ಣ ಸಂಗತಿಗಳು ಸಂತೋಷ ನೀಡಬಹುದು. ಮನೋರಂಜನೆಗೆ ನಿಮಗೆ ಸಮಯವು ಸಿಗುವುದು. ಇನ್ನೊಬ್ಬರ ಕೆಲಸದ ಹೊರೆಯೂ ನಿಮಗೆ ಬರಲಿದೆ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು.

ಕನ್ಯಾ ರಾಶಿ:

ಉದ್ಯೋಗದಲ್ಲಿ ಒತ್ತಡ ನಿವಾರಣೆಯನ್ನು ನೀವೇ ಸ್ವತಃ ಮಾಡಿಕೊಳ್ಳಬೇಕಾಗುವುದು. ಮಾತುಗಳು ಇನ್ನೊಬ್ಬರ ಮೇಲೆ ಪರಿಣಾಮ ಬೀರಬಹುದು, ಆದ್ದರಿಂದ ಎಚ್ಚರಿಕೆಯಿಂದ ಮಾತನಾಡಿ. ಒಪ್ಪಂದಗಳಿಂದ‌ ಜಾರಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಪಡೆಯುವ ಸಂಭವ. ಹಣಕಾಸಿನಲ್ಲಿ ಜ್ಞಾನದಿಂದ ನಿರ್ವಹಣೆ ಅಗತ್ಯವಿದೆ. ಸಂಗಾತಿಯ ಆರೋಗ್ಯವನ್ನು ನೋಡಿಕೊಳ್ಳುವ ಭರದಲ್ಲಿ ಕೆಲವು ಕಾರ್ಯಗಳನ್ನು ಮರೆಯಬಹುದು. ಪಾಲುದಾರಿಕೆಯಲ್ಲಿ ಆದ ಮನಸ್ತಾಪವನ್ನು ಮುಂದುವರಿಸದೇ ಸುಮ್ಮನಿರಿ.

ತುಲಾ ರಾಶಿ:

ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ. ಹಣಕಾಸು ಪ್ರಗತಿಗೆ ಯೋಗ್ಯ ಸಮಯ. ಸರ್ವತೋಮುಖ ವಿಕಾಸಕ್ಕೆ ಸಮಯ ಸಾಕಾಗದು. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಬಹುದು. ಆರೋಗ್ಯದಲ್ಲಿ ಒತ್ತಡದ ಕಾರಣ ತಲೆನೋವು ಉಂಟಾಗಲಿದೆ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ.

ವೃಶ್ಚಿಕ ರಾಶಿ:

ಉದ್ಯೋಗದಲ್ಲಿ ನೀವು ಬಹಳ ಪ್ರಾಮಾಣಿಕವಾಗಿ ಇರುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಬೆಳವಣಿಯಾಗುವುದು ಖುಷಿ ಕೊಡುವುದು. ಒತ್ತಡ ಹೆಚ್ಚಾದರೂ ಅದು ನಿಮ್ಮ ಉತ್ಸಾಹದ ಮೇಲೆ ಪರಿಣಾಮ ಬೀರದು. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ಆಸ್ತಿಯಲ್ಲಿ ಪಾಲುದಾರಿಕೆಯು ನಿಮಗೆ ಸಮಾಧಾನ ಕೊಡದು.

ಧನು ರಾಶಿ:

ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉದ್ಯೋಗ ಲಾಭವಾಗಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರತಿಭೆ ಗುರುತಿಸಲ್ಪಡುತ್ತದೆ. ಸಹೋದ್ಯೋಗಿಗಳಿಂದ ಬೆಂಬಲ ಸಿಗುತ್ತದೆ. ಇಂದು ಕೈ ಹಾಕಿದ ಹೊಸ ಕೆಲಸ ಶುಭದಾಯಕವಾಗಬಹುದು. ರಾಜಕೀಯದಲ್ಲಿ ಕೈಜೋಡಿಸುವ ಬಗ್ಗೆ ಕುತೂಹಲವಿರುವುದು. ಸಾಮಾಜಿಕ ಕಾರ್ಯವು ನಿಮ್ಮನ್ನು ಸೆಳೆಯುವುದು. ಏಕಾಗ್ರತೆಯಿಂದ ನಿಮ್ಮ ಮತ್ತೆಲ್ಲ ಕಾರ್ಯಗಳೂ ನಿಧಾನವಾಗಬಹುದು.

ಮಕರ ರಾಶಿ:

ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ನಿಮಗೆ ಅನಾನುಕೂಲ ಉಂಟಾಗುವುದು. ಇಂದು ಸೃಜನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡುವ ದಿನ. ವಿದ್ಯಾರ್ಥಿಗಳಿಗೆ ಉತ್ತಮ ಅಭ್ಯಾಸದಿಂದ ಲಾಭ. ಹಣಕಾಸಿನಲ್ಲಿ ಖರ್ಚು ಹೆಚ್ಚಾಗಬಹುದು. ಇಂದು ನಿಮ್ಮ ನಿರ್ಧಾರಗಳು ಉತ್ತಮ ಫಲ ನೀಡಲಿವೆ. ಮೇಲಧಿಕಾರಿಗಳ ಜೊತೆಗಿನ ಸಲುಗೆಯು ದುರುಪಯೋಗ ಆಗಬಹುದು. ವ್ಯವಹಾರದಲ್ಲಿ ಚುರುಕು ಸಾಲದು. ನಿಮ್ಮ ಸರಳತೆಯು ಜೊತೆಗಾರರಿಗೆ ಇಷ್ಟವಾಗುವುದು.

ಕುಂಭ ರಾಶಿ:

ನೆರೆ ಹೊರೆಯವರು ನಿಮಗೆ ಸಹಕಾರ ನೀಡದೇ ಕಷ್ಟವಾಗುವುದು. ಸಂಗಾತಿಯ ಜೊತೆ ಭಾವನೆಗಳನ್ನು ವ್ಯಕ್ತಪಡಿಸಲು ಉತ್ತಮ ದಿನ. ಕೆಲಸದಲ್ಲಿ ನೀವು ನಿರೀಕ್ಷಿಸುವ ಪ್ರಗತಿ ಕಾಣಬಹುದು. ಹಣಕಾಸಿನಲ್ಲಿ ಬುದ್ಧಿವಂತಿಕೆ ಅಗತ್ಯವಿದೆ. ನಿಮಗೆ ಕಾರ್ಯಗಳು ನಿಮಗೆ ತೃಪ್ತಿಯನ್ನು ಕೊಡುವಂತಿರಲಿ. ಆತುರದಲ್ಲಿ ಯಾವ ನಿರ್ಧಾರಕ್ಕೂ ಬರದೇ, ತಾಳ್ಮೆಯಿಂದ ಎಲ್ಲವೂ ತಿಳಿಯಾದಮೇಲೆ ನಿರ್ಧರಿಸಿ. ಎಲ್ಲವೂ ಸರಿಯಾಗುವುದು.

ಮೀನ ರಾಶಿ:

ಕೆಟ್ಟ ವಾಹನದ ಚಾಲನೆಯಿಂದ ಅಪಘಾತ ಸಂಭವಿಸಬಹುದು. ನ್ಯಾಯಾಲಯದ ಬಗ್ಗೆ ನಿಮಗೆ ಬಹಳ ಚಿಂತೆ‌ ಕಾಡುವುದು. ನಿಮ್ಮ ಹಣಕಾಸಿನ ಸ್ಥಿತಿಯನ್ನು ಹೇಳಿಕೊಳ್ಳಲು ಇಷ್ಟವಾಗದು. ಹೊಸ ಯೋಚನೆಗಳು ಬೆಳಕಿಗೆ ಬರುತ್ತವೆ. ಉದ್ಯೋಗದಲ್ಲಿ ಹೊಸ ಯೋಜನೆ ಆರಂಭವಾಗುವ ಯೋಗವಿದೆ. ಹಣಕಾಸಿನಲ್ಲಿ ನೂತನ ಆದಾಯದ ಮಾರ್ಗಗಳು ರೂಪುಗೊಳ್ಳಬಹುದು. ಇಂದಿನ ವ್ಯವಹಾರದಲ್ಲಿ ನಿಮಗೆ ತೊಡಕಿರುವುದು. ಮನೆಯ ಎಷ್ಟೋ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:21, ಯಮಗಂಡ ಕಾಲ 15:32 – 17:08, ಗುಳಿಕ ಕಾಲ 07:34 – 09:10

-ಲೋಹಿತ ಹೆಬ್ಬಾರ್ – 8762924271 (what’s app only)

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ