AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತದಲ್ಲಿ ಸಿಲುಕುವ ಸಾಧ್ಯತೆ

Horoscope Today 20 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಬುಧವಾರದಂದು ಆಪ್ತರಿಂದಲೇ ಮೋಸ, ಬೇಸರ, ಇನ್ನೊಬ್ಬರ ಸಹಾನುಭೂತಿಯ ಅಪೇಕ್ಷೆ, ಹೊಸ ಕಾರ್ಯದಲ್ಲಿ ಕುತೂಹಲ, ಅನಗತ್ಯ ಮೋಜು, ದುಃಸಾಹಸ ಇವೆಲ್ಲ ಈ ದಿನದ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಘಾತದಲ್ಲಿ ಸಿಲುಕುವ ಸಾಧ್ಯತೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 20, 2026 | 12:22 AM

Share

ಮೇಷ ರಾಶಿ:

ಬಂಧುಗಳ ಸಹಾಯದಿಂದ ಈ ಯೋಜನೆಗಳನ್ನು ಪ್ರಾರಂಭಿಸುವಿರಿ. ವಿವಾಹಕ್ಕೆ ಸಂಬಂಧಿಸದಂತೆ ಖರೀದಿಗಳು ಆಗಲಿವೆ. ಪ್ರೇಮ ಸಂಬಂಧ ಕಟ್ಟುವ ಉತ್ತಮ ಸಮಯ. ಪ್ರೀತಿಯ ಶಕ್ತಿ ನಿಮ್ಮನ್ನು ಭಾವುಕಗೊಳಿಸುತ್ತದೆ. ಕಾರ್ಯಕ್ಷೇತ್ರದಲ್ಲಿ ವಿರೋಧಿಗಳಿಂದ ಸಹಕಾರ ಸಿಗಲಿದೆ. ಸ್ನೇಹಿತರ ಕೆಲವು ವರ್ತನೆಗಳು ನಿಮಗೆ ಇಷ್ಟವಾಗದೇ ಇರಬಹುದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ಇಂದಿನ ಕೆಲವು ಸಮಯವನ್ನು ಮನೆಯವರಿಗೆ ಮೀಸಲಿಡಿ.

ವೃಷಭ ರಾಶಿ:

ಖರೀದಿಯಲ್ಲಿ ಹಣದ ಜಾಗರೂಕತೆ ವಹಿಸುವುದು ಅಗತ್ಯ. ಕುಟುಂಬದೊಂದಿಗೆ ಸಮಯ ಕಳೆದರೆ ಆತ್ಮತೃಪ್ತಿ ಲಭಿಸುತ್ತದೆ. ನಿಮ್ಮ ಸ್ನೇಹಿತರು ನಿಮಗೆ ಸಮಯಕೊಡಲಾರರು. ಕೆಲಸದ ನಿಟ್ಟಿನಲ್ಲಿ ಹೊಸ ಯೋಜನೆಗಳು ಆರಂಭವಾಗುತ್ತವೆ. ಪ್ರಪಂಚಜ್ಞಾನದ ಅಗತ್ಯತೆ ಹೆಚ್ಚಿವಿರುವಂತೆ ತೋರುತ್ತದೆ. ಮುನ್ನುಗ್ಗಲು ನಿಮಗೆ ಸ್ಥೈರ್ಯ ಸಾಲದು. ವಾಹನ ಚಾಲನೆಯಲ್ಲಿ ಉತ್ಸಾಹ ಹೆಚ್ಚಿರುವುದು. ಕಳೆದುಕೊಂಡಿದ್ದನ್ನು ಪಡೆಯುವ ಛಲವು ಬರಬಹುದು.

ಮಿಥುನ ರಾಶಿ:

ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಕ್ರಿಯವಾಗಿ ಭಾಗಿ. ಯೋಜನೆಗಳ ಬಗ್ಗೆ ಹಿರಿಯರೊಂದಿಗೆ ಚರ್ಚಿಸಿ. ಸುಳ್ಳನ್ನು ಸತ್ಯದಂತೆ ಹೇಳುವಿರಿ. ಏಕಪಕ್ಷದ ಪ್ರೇಮದಿಂದ ಎಚ್ಚರಿಕೆ ಅಗತ್ಯ. ಹೊಸ ಯೋಜನೆ ಆರಂಭಕ್ಕೆ ಉತ್ತಮ ದಿನ. ಕೆಲಸದಲ್ಲಿ ಹೆಚ್ಚು ಸಡಿಲತೆ ಇಟ್ಟುಕೊಳ್ಳಿ. ಕುಟುಂಬದೊಂದಿಗೆ ಹೊರಗಿನ ಪ್ರವಾಸ ಯೋಜನೆ ರೂಪಿಸುವಿರಿ. ಕಾನೂನಾತ್ಮಕ ವಿಚಾರಕ್ಕೆ ಮಾತ್ರ ನಿಮ್ಮ ಬೆಂಬಲವು ಇರಲಿ. ಸಂಗಾತಿಯ ಜೊತೆ ಒಡನಾಟವು ಹೆಚ್ಚಿರಲಿದೆ. ತಂದೆಯ ಶ್ರಮವನ್ನು ಕಂಡು ಮಕ್ಕಳಿಗೆ ನೋವಾಗಬಹುದು.

ಕರ್ಕಾಟಕ ರಾಶಿ:

ಸಾಮಾಜಿಕ ವ್ಯವಸ್ಥೆಗೆ ಹೊಂದಿಕೊಳ್ಳಬೇಕು. ನಿಮ್ಮನ್ನು ಆರೋಗ್ಯವಂತರನ್ನಾಗಿ ಸಂಗಾತಿ ಮಾಡುವಳು. ಇಂದು ನೀವು ದೈವಕ್ಕಿಂತ ಪುರುಷಪ್ರಯತ್ನವೇ ಹೆಚ್ಚು ಪ್ರಭಾವೀ ಎಂದು ಅನ್ನಿಸಬಹುದು. ಹಣದ ಅವಶ್ಯಕತೆ ನಿಮಗೆ ಹಣದ ಮೌಲ್ಯ ತಿಳಿಸುತ್ತದೆ. ಮನಸ್ಸು ಹಾಗೂ ಮಾತುಗಳಲ್ಲಿ ಸ್ಥಿರತೆ ಇರಲಿ. ಸಂಗಾತಿಯ ಕಡೆಯಿಂದ ನಿಮಗೆ ಅಚ್ಚರಿ ಇರುವುದು. ಏನನ್ನಾದರೂ ಸಾಧಿಸಬೇಕು ಎಂಬ ಹಂಬಲವು ಹುಟ್ಟಿಕೊಂಡೀತು. ಕೋಪಕ್ಕೆ ಮಿತಿ‌ ಇರಲಿ. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸಿ, ಬೆಳೆಸುವಿರಿ.

ಸಿಂಹ ರಾಶಿ:

ಏನೇ ಆದರೂ ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕವಾಗಿ ಇರಲಿ. ಸಂತೋಷವನ್ನು ಹಂಚಿಕೊಳ್ಳುವಿರಿ. ಹಣದ ವ್ಯವಹಾರ ಒಳ್ಳೆಯ ದಿನ. ಸಂಗಾತಿಯೊಂದಿಗೆ ಗೌಪ್ಯ ವಿಷಯ ಹಂಚಿಕೆ ವೇಳೆ ಎಚ್ಚರಿಕೆ ಇರಲಿ. ಪ್ರೇಮವು ಸತ್ಯವೆಂದು ತಿಳಿದುಕೊಳ್ಳಿ. ಮಕ್ಕಳಿಂದ ನೀವು ದೂರಾಗುವ ಸಾಧ್ಯತೆ ಇದೆ. ಭೂ ವ್ಯವಹಾರದಲ್ಲಿ ಮನಸ್ತಾಪ ಬರಬಹುದು. ಯಾವುದೇ ನಿಬಂಧನೆಗಳನ್ನು ಇಟ್ಟುಕೊಳ್ಳದೇ ಒಪ್ಪಿಕೊಳ್ಳಿ. ನಿಮ್ಮ ಸಮಯ ಬಂದಾಗ ಅದನ್ನು ಚರ್ಚಿಸಲು ಅವಕಾಶ ಬರುವುದು. ಇಂದು ವ್ಯಾಪಾರ ವಿಷಯಗಳಲ್ಲಿ ನೀವು ಅನುಭವಿಗಳ ಸಲಹೆಯನ್ನು ತೆಗೆದುಕೊಳ್ಳುವಿರಿ.

ಕನ್ಯಾ ರಾಶಿ:

ನಿಮ್ಮ ಹಾಸ್ಯದ ಸ್ವಭಾವವು ಮನೆಯಲ್ಲಿ ಸಂತೋಷದ ವಾತಾವರಣವನ್ನು ಇರಿಸುತ್ತದೆ. ಹಣದ ಲಾಭಕ್ಕಾಗಿ ಹಿರಿಯರ ಆಶೀರ್ವಾದದಿಂದ ಶುಭ ಫಲ. ಪೋಷಕರ ಆರೋಗ್ಯದತ್ತ ಗಮನ ಅಗತ್ಯ. ಪ್ರೀತಿಯಲ್ಲಿ ಸಹನಶೀಲತೆ ಅಗತ್ಯ. ಬಾಕಿಯ ವಿಷಯಗಳ ತೀರ್ಮಾನಕ್ಕೆ ಒಳ್ಳೆಯ ಸಮಯ. ಸಮಯವನ್ನು ಸದುಪಯೋಗಪಡಿಸಿಕೊಳ್ಳುವುದು ಮುಖ್ಯ. ಲೆಕ್ಕಶೋಧಕರು ಇಂದು ಒತ್ತಡದಲ್ಲಿ ಇರುವರು. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಇಷ್ಟಪಡಲಾರಿರಿ.

ತುಲಾ ರಾಶಿ:

ಹೂಡಿಕೆಯಲ್ಲಿ ಆದ ಲಾಭವನ್ನು ಅಸೂಯೆ ಪಡುವವರ ಜೊತೆ ಗೊತ್ತಿಲ್ಲದೇ ಹಂಚಿಕೊಳ್ಳುವಿರಿ. ಸ್ನೇಹಿತರ ಮೂಲಕ ಹೊಸ ಸಂಪರ್ಕಗಳು ದೊರೆಯಲಿವೆ. ಪ್ರೇಮ ಸಂಬಂಧದ ಗೊಂದಲಗಳು ತೀರಬಹುದು. ಹೊಸ ಉದ್ಯಮದ ಪ್ರಾರಂಭಕ್ಕೆ ಇದು ಉತ್ತಮ ದಿನ. ಒಮ್ಮೆ ನಂಬಿಕೆಯನ್ನು ಇಟ್ಟುಕೊಂಡ ಅನಂತರ ಅನುಮಾನ ಬೇಡ. ನೀವು ಇಂದು ಆಸ್ತಿಯನ್ನು ಖರೀದಿಸಲು ಪ್ರಯತ್ನಿಸುತ್ತಿದ್ದು ನೀವು ಅದನ್ನು ಸುಲಭವಾಗಿ ಸಾಧಿಸುವಿರಿ. ಕೆಟ್ಟ ಸ್ವಪ್ನದ ಚಿಂತೆಯಲ್ಲಿಯೇ ಇರುವಿರಿ.

ವೃಶ್ಚಿಕ ರಾಶಿ:

ನಿಮ್ಮವರಿಂದ ಹೆಚ್ಚಿನದನ್ನು ನಿರೀಕ್ಷಿಸದಿರುವುದು ಒಳ್ಳೆಯದು. ಯಾವುದನ್ನೂ ಅಳುಕಿನಿಂದ ಮಾಡಲಾರಿರಿ. ಪ್ರೀತಿಯ ಮಹತ್ವವನ್ನು ನೀವು ಹೊಸದಾಗಿ ಅರಿಯುವಿರಿ. ಉತ್ತಮ ಯೋಜನೆಗಳ ಮೂಲಕ ಯಶಸ್ಸು ಗಳಿಸಬಹುದು. ವ್ಯವಹಾರ ಅಭಿವೃದ್ಧಿಗಾಗಿ ಹೊಸ ಯೋಜನೆಯನ್ನು ಪ್ರಯೋಗಕ್ಕೆ ತರುವಿರಿ. ನಿಮಗೆ ಇಷ್ಟವಾದವರ ಬಗ್ಗೆ ನಿಮಗೆ ಅನುಕಂಪ ಬರಬಹುದು. ಆರ್ಥಿಕ ವಿಚಾರವನ್ನು ಬಹಿರಂಗಪಡಿಸುವುದು ಬೇಡ. ದಾಂಪತ್ಯದಲ್ಲಿ ನಡೆಯುತ್ತಿದ್ದ ವಿವಾದವು ಪೂರ್ಣಗೊಂಡು ಹೊಂದಿಕೊಳ್ಳುವಿರಿ.

ಧನು ರಾಶಿ:

ಆರ್ಥಿಕತೆಯ ದುರ್ಬಲದಿಂದಾಗಿ ದುರ್ಮಾರ್ಗವನ್ನು ಅನುಸರಿಸುವ ಯೋಚನೆ ಬರಲಿದೆ. ಹಾಗಾಗಿ ನಿಮ್ಮ ಆಲೋಚನೆಗಳು ಅನ್ಯ ಮಾರ್ಗದ ಕಡೆ ಹರಿಬಿಡದೇ ಸಕಾರಾತ್ಮಕವಾಗಿ ಇರಲಿ. ಹಣ ಮರಳಿ ಸಿಗುವ ಸಾಧ್ಯತೆ ಇದೆ. ಕಾರ್ಯಕ್ಷೇತ್ರದ ಕೆಲಸಗಳು ಮುಂದಿನ ದಿನಗಳಲ್ಲಿ ಫಲ ನೀಡಲಿವೆ. ಬಹುಕಾಲದ ನಿರೀಕ್ಷೆಯ ವಿಷಯದಲ್ಲಿ ಸಣ್ಣ ಕಂಡುಬರಬಹುದು. ನಿಮ್ಮ ಮನೆಯ ಕಾರ್ಯವು ಹಲವು ದಿನಗಳಿಂದ ನಿಂತಿದ್ದು ಮತ್ತೆ ಆರಂಭಿಸುವಿರಿ. ವೈಯಕ್ತಿಕ ಕಾರ್ಯದಲ್ಲಿ ಗಮನವು ಕಡಿಮೆ ಇರುವುದು.

ಮಕರ ರಾಶಿ :

ನಿಮ್ಮ ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಪ್ರಯತ್ನಿಸುತ್ತೀರಿ. ನಿಮ್ಮ ಕೋಪವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಕ್ಕಳಿಂದ ಹಣಕಾಸು ಲಾಭ ಸಾಧ್ಯ. ಮನೆಯಲ್ಲಿ ಖರ್ಚು ಅಥವಾ ಇತರೆ ವಿಚಾರದಿಂದ ಗಲಾಟೆ ಉಂಟಾಗಬಹುದು. ಇಂದು ನಿಮ್ಮ ಬಳಿ ಹಣವು ಬಂದು ಸೇರಿದರೂ ಮರುಪಾವತಿಗೆ ಮನಸ್ಸಾಗದು. ಬಂಧುಗಳಿಂದಾದ ನೋವನ್ನು ನೀವು ಹೇಳಿಕೊಳ್ಳಲಾರಿರಿ. ಅನವಶ್ಯಕ ಸಂಪರ್ಕವನ್ನು ಕಡಿದುಕೊಳ್ಳಲು ಇಚ್ಛಿಸುವಿರಿ.

ಕುಂಭ ರಾಶಿ :

ನಿಮ್ಮ ಕಾರ್ಯಗಳು ಎಷ್ಟೇ ಶ್ರಮಿಸಿದರೂ ಅಪರಿಪೂರ್ಣವಾತ್ತದೆ ಎಂಬ ಭರವಸೆಯಿದ್ದರೆ ಅದನ್ನು ಬಿಟ್ಟುಬಿಡಿ‌. ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುತ್ತದೆ. ಸಾಲವಿದ್ದರೆ ಅದನ್ನು ತಿರುಗಿಸಿ ಮುಕ್ತಗೊಳ್ಳುವ ಅವಕಾಶವಿದೆ. ಮನೆಯವರೊಂದಿಗೆ ಕೆಲಸಗಳಲ್ಲಿ ನಿರತರಾಗುವ ದಿನ. ಪ್ರೇಮ ಜೀವನದಲ್ಲಿ ಹೊಸ ತಿರುವು ಮೂಡಲಿದೆ. ಕೆಲಸದ ಒತ್ತಡದಿಂದ ದೂರವಿದ್ದು ಸಂಬಂಧಗಳಿಗೆ ಹೆಚ್ಚು ಸಮಯ ನೀಡಲಾಗುವುದು. ದುಷ್ಕೃತ್ಯಕ್ಕೆ ಪ್ರೇರಣೆ ಸಿಗಬಹುದು. ಅಶುಭ ಸೂಚನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯದಲ್ಲಿ ಪ್ರವೃತ್ತರಾಗಿ.

ಮೀನ ರಾಶಿ :

ಮನೆಯಲ್ಲಿ ಶಿಸ್ತಿನ ವಾತಾವರಣವು ಸಂತೋಷವನ್ನು ತರುವುದು. ದೀರ್ಘಕಾಲದ ಖಾಯಿಲೆಯು ಇಂದು ಸ್ವಲ್ಪ ಕಡಿಮೆಯಾಗಲಿದೆ. ಇಂದು ನಿಮ್ಮ ಮನಸ್ಸು ಶಾಂತವಾಗಿದ್ದು ಶ್ರೇಷ್ಠ ಚಿಂತನೆಗೆ ಇದು ಸೂಕ್ತ ಸಮಯವಾಗಿದೆ. ಹಣಕಾಸಿನ ವಿಷಯದಲ್ಲಿ ನಿರೀಕ್ಷಿಸದ ಲಾಭ ಸಾಧ್ಯವಿದೆ. ಬಹಳ ಹುಡುಕಾಟದ ಅನಂತರದ ಉತ್ತಮ‌ ವಿವಾಹ ಸಂಬಂಧವು ಬರುವುದು. ಕರ್ತವ್ಯದ ವಿಚಾರದಲ್ಲಿ ನಿಮ್ಮ ಆಲಸ್ಯವೋ ಬೇಜವಾಬ್ದಾರಿಯೋ ಒಳ್ಳೆಯದಲ್ಲ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಆರ್ದ್ರಾ / ಪುನರ್ವಸು, ಯೋಗ : ಧೃತಿ, ಕರಣ : ಬವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:21 – 13:57, ಯಮಗಂಡ ಕಾಲ 07:33 – 09:09, ಗುಳಿಕ ಕಾಲ 10:45 – 12:21

-ಲೋಹಿತ ಹೆಬ್ಬಾರ್-8762924271 (what’s app only)

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ