ದಿನ ಭವಿಷ್ಯ: ಇಂದು ಈ ರಾಶಿಯವರು ನಿಷ್ಠೆಯನ್ನು ಉಳಿಸಿಕೊಳ್ಳಲಾರರು

Horoscope Today 21 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಶುಕ್ರವಾರದಂದು ಸಹವಾಸ ದೋಷ, ಸ್ವಾರ್ಥದ ಕಾರ್ಯ, ಭವಿಷ್ಯದ ಚಿಂತೆ, ಆರ್ಥಿಕ ಅಸ್ಥಿರತೆ, ಉದ್ಯೋಗದಲ್ಲಿ ಉನ್ನತಿ, ಉನ್ನತ ವಿದ್ಯಾಭ್ಯಾಸಕ್ಕೆ ತಡೆ ಇವೆಲ್ಲ ಇಂದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ನಿಷ್ಠೆಯನ್ನು ಉಳಿಸಿಕೊಳ್ಳಲಾರರು
ದಿನ ಭವಿಷ್ಯ
Edited By:

Updated on: May 22, 2026 | 12:55 AM

ಮೇಷ ರಾಶಿ :

ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ಒತ್ತಡದ ಕಾರಣ ವಿರಾಮವನ್ನೂ ಪಡೆಯಬಹುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ.

ವೃಷಭ ರಾಶಿ :

ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ ಆಲೋಚನೆ ಮಾಡುವಿರಿ. ವ್ಯವಹಾರಕ್ಕೆ ಬೇಕಾದ ಪ್ರಮುಖ ದಾಖಲೆಗಳು ಕಣ್ಮರೆಯಾಗಬಹುದು. ಪರಿಸ್ಥಿತಿ ಶೀಘ್ರದಲ್ಲೇ ನಿಮ್ಮ ಪರವಾಗಿ ಬದಲಾಗುತ್ತದೆ. ಧೈರ್ಯ ಮತ್ತು ಮನಸ್ಸಿಗೆ ಶಾಂತಿ ದೊರಕಲಿದೆ. ಇಲ್ಲವಾದರೆ ಪರಿಸ್ಥಿತಿಯು ಮತ್ತೇನೋ ಆಗುವುದು. ಕಚೇರಿಯಲ್ಲಿನ ಸೂಕ್ಷ್ಮ ವ್ಯವಹಾರವನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುವುದು.

ಮಿಥುನ ರಾಶಿ :

ನಿಮಗೆ ಅತೃಪ್ತಿಯ ಭಾವವು ಕಾಡಲಿದೆ. ಪಕ್ಕದರ ಪರಿಚಯವು ಸ್ನೇಹವಾಲಿದೆ. ನಿಮ್ಮ ಅಪಕ್ವತೆಯನ್ನು ತೋರಿಸುವುದು ಬೇಡ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಅಥವಾ ಸ್ಥಾನಮಾನ ಅಲ್ಲಗಳೆಯುವಿರಿ. ನಿಮ್ಮ ಬಗ್ಗೆ ಯಾರಾದರೂ ಹಗುರವಾಗಿ ಮಾತನಾಡುವರು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ಕಛೇರಿಯಲ್ಲಿ ಸಂತೋಷದ ವಾತಾವರಣ ಇದ್ದು ನಿಮಗೆ ಕೆಲಸವನ್ನು ಮಾಡಲು ಅನುಕೂಲವಾಗುವುದು.

ಕರ್ಕಾಟಕ ರಾಶಿ :

ನಿಮಗೆ ಪ್ರಿಯವಾದದ್ದನ್ನು ಯಾರಿಂದಲಾದರೂ ಪಡೆದುಕೊಳ್ಳುವಿರಿ. ಬಹಳ ಕಾಲದಿಂದ ಮಾಡುತ್ತಿರುವ ಕೆಲಸಕ್ಕೆ ಉತ್ತಮ ಫಲಿತಾಂಶ ದೊರೆಯಲಿದೆ. ಉದ್ವೇಗದಲ್ಲಿ ಇರುವಾಗ ಸುಮ್ಮನೆ‌ ಒಂದು ಕಡೆ ಕುಳಿತು ಶಾಂತರಾಗಿ. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಗಳು ಕೂಡಲೇ ಫಲ ನೀಡಬಹುದು. ಪ್ರಭಾವಿ ವ್ಯಕ್ತಿಗಳ ಜೊತೆ ಗೌರವದಿಂದ ವರ್ತಿಸಿ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು.

ಸಿಂಹ ರಾಶಿ :

ಸಂಶೋಧನೆ ಮಾಡುತ್ತಿರುವವರಿಗೆ ಪೂರಕ ಮಾಹಿತಿ. ಅನವಶ್ಯಕ ವೆಚ್ಚದಿಂದ ದೂರವಿರಿ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಸಂಭವಿಸಬಹುದು, ಸಂಯಮ ಅಗತ್ಯ. ಅಧ್ಯಾತ್ಮದ ಬಗ್ಗೆ ಪರಿಚಿತರ ಬಳಿ ಸಂವಾದ ಮಾಡುವಿರಿ. ನೆಮ್ಮದಿಗಾಗಿ ಚಡಪಡಿಸುವಿರಿ. ಸಂಗಾತಿಗೆ ಬೇಕಾದ ವಸ್ತುವನ್ನು ಕೊಡಿಸುವಿರಿ. ಯಾರಿಂದಲಾದರೂ ಮೋಸ ಹೋಗುವ ಸಾಧ್ಯತೆ ಇದೆ.

ಕನ್ಯಾ ರಾಶಿ:

ನಿಮ್ಮ ಉದ್ಯೋಗ ಅಭಿವೃದ್ಧಿಗೆ ಉತ್ತಮ ಆಲೋಚನೆಗಳು ತಾನಾಗಿಯೇ ಬರಲಿವೆ. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡಯುವಿರಿ. ಮನೆಯವರೊಂದಿಗೆ ಪ್ರವಾಸ ಹಾಗೂ ಬೇಕಾದ ವಸ್ತುಗಳ ಖರೀದಿಮಾಡುವಿರಿ. ಕಳಂಕರಹಿತ ವ್ಯವಹಾರವನ್ನು ಮಾಡುವಿರಿ. ಶಾಂತಿಯಿಂದ ಮುನ್ನಡೆಯಿರಿ. ನಿಮ್ಮ ಸಂಬಂಧವು ಮತ್ತಷ್ಟು ಆಪ್ತವಾಗಲು ಯೋಚಿಸುವಿರಿ. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದೇ ಕಲಹವಾಗುವುದು.

ತುಲಾ ರಾಶಿ:

ಹೊಸ ಮನೆಯ ನಿರ್ಮಾಣದ ಬಗ್ಗೆ ಯೋಜನೆಯನ್ನು ಸಿದ್ಧಗೊಳಿಸಿಕೊಳ್ಳುವಿರಿ. ಶ್ರಮಕ್ಕೆ ಒಳ್ಳೆಯ ಫಲಿತಾಂಶ ಸಿಗುತ್ತದೆ. ಕಳೆದುಹೋದ ವಸ್ತುವಿನ ಮೌಲ್ಯವು ನಿಮಗೆ ಇಂದು ಗೊತ್ತಾಗದೇ ಹೋಗುವುದು. ಕಾರ್ಯಭಾರದಿಂದ ಕೆಲವೊಂದು ನಿರಾಶೆಗಳಾಗಬಹುದು, ಆದರೆ ದಿನದ ಕೊನೆಗೆ ಸಮಾಧಾನ ಸಿಗಲಿದೆ. ಆಸ್ತಿ ಸಂಬಂಧಿತ ವಿಚಾರದಲ್ಲಿ ಯಶಸ್ಸು ದೊರಕುವುದು. ಕೆಲವರನ್ನು ಹತ್ತಿರಕ್ಕಿಂತ‌ ದೂರದಲ್ಲಿದ್ದಾಗಲೇ ಚೆನ್ನಾಗಿ ತಿಳಿಯಬಹುದು.

ವೃಶ್ಚಿಕ ರಾಶಿ :

ಇಂದು ನಕಾರಾತ್ಮಕತೆಯ ವಿರುದ್ಧ ತೀವ್ರವಾದ ಹೋರಾಟ ಮಾಡುವಿರಿ. ನಿಮ್ಮ ಯೋಜನೆಯನ್ನು ಹೇಳಬಾರದ ಸ್ಥಿತಿಯಲ್ಲಿ ಹೇಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವ್ಯವಹಾರಗಳಲ್ಲಿ ಮುನ್ನಡೆ ಸಾಧಿಸುವಿರಿ. ಆರೋಗ್ಯದ ಸಮಸ್ಯೆಗಳು ಸುಲಭವಾಗಿ ಪರಿಹಾರವಾಗಬಹುದು. ಕೆಲಸವನ್ನು ಬದಲಾಯಿಸಲು ನೀವು ಯೋಚಿಸುತ್ತಿದ್ದರೆ ಒಳ್ಳೆಯ ಸ್ಥಾನ ಲಭ್ಯವಾಗಲಿದೆ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವನ್ನು ಸತತ ಪ್ರಯತ್ನದಿಂದ ಪೂರ್ಣಮಾಡುವಿರಿ.

ಧನು ರಾಶಿ :

ಉದ್ಯೋಗದಲ್ಲಿ ಧೈರ್ಯದಿಂದ ಮುನ್ನಡೆಯಲು ಅನುಭವಿಗಳ ಸಲಹೆಯು ಅವಶ್ಯಕ. ನಿಮಗೆ ಆಗದಿರುವುದನ್ನು ಬೇರೆಯವರಿಂದ ಮಾಡಿಸುವಿರಿ. ನಿಮ್ಮ ಕಾರ್ಯಕ್ಕೆ ಹಿರಿಯರಿಂದ ಮೆಚ್ಚುಗೆ ಸಿಗಬಹುದು. ವ್ಯಾಪಾರದ ತೊಂದರೆಗಳು ನಿಧಾನವಾಗಿ ಪರಿಹಾರ ಕಾಣುತ್ತವೆ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಸಿಕ್ಕ ಆದರದಿಂದ ಉತ್ಸಾಹವು ಬರಲಿದೆ. ನಿಮ್ಮ ಸಾವಧಾನತೆಯು ಕಿರಿಕಿರಿಯನ್ನು ಇತರರಿಗೆ ಕೊಟ್ಟೀತು.

ಮಕರ ರಾಶಿ :

ಇಂದು ನಿಮ್ಮ ದೇಹವು ಹೆಚ್ಚು ವಿಶ್ರಾಂತಿಯನ್ನು ಕೇಳಬಹುದು. ಪ್ರವಾಸವನ್ನು ಮಾಡಿ ಆನಂದಿಸುವಿರಿ. ಸಕಾರಾತ್ಮಕ ಬದಲಾವಣೆಗಳು ಸಂಭವಿಸಬಹುದು. ನಿಮ್ಮನ್ನು ಅರಸಿಕೊಂಡ ಬರುವ ಗೌರವವೇ ನಿಜವಾದ ಸಮ್ಮಾನ. ಯಾರದೋ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಮ್ಮ ಕಾರ್ಯವನ್ನು ಮಾಡಬೇಕಾಗುವುದು. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ಯಾರದೋ ಅನುಭವವು ನಿಮ್ಮದಾಗದು.

ಕುಂಭ ರಾಶಿ :

ನಿಮ್ಮ ಮನಃಸ್ಥಿತಿಯಲ್ಲಿ ಬದಲಾವಣೆ ಇರಲಿದೆ. ಯಾವುದೇ ಪರಿವರ್ತನೆಗೆ ಸಮಯವೂ ಅವಶ್ಯಕ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಬರುವುದು. ಆಸ್ತಿ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದಿರಿ. ಮನಸ್ಸಿನಲ್ಲಿ ಕೆಲವು ಗೊಂದಲಗಳು ಬರುವ ಸಾಧ್ಯತೆ ಇದೆ. ಕುಟುಂಬ ಸದಸ್ಯರಿಂದ ಬೆಂಬಲ ಸಿಗಲಿದೆ. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ‌ ಜವಾಬ್ದಾರಿಗಳು ಅಧಿಕವಾಗಲಿದ್ದು, ಚಿಂತೆಯು ಕಾಡಬಹುದು.

ಮೀನ ರಾಶಿ :

ಸಣ್ಣ ವಿಷಯಗಳನ್ನು ದೊಡ್ಡದಾಗಿ ಮಾಡಿಕೊಳ್ಳಲು ಹೋಗದೇ ಅಲ್ಲಿಯೇ ಮುಕ್ತಾಯಗೊಳಿಸಿ. ಎದುರು ಮಾತನಾಡದೇ ಸುಮ್ಮನಿರಲಾಗದು. ಭವಿಷ್ಯದ ತುಂಬಾ ಆಲೋಚನೆಗಳನ್ನು ಮಾಡುವ ಅವಶ್ಯತೆ ಇಲ್ಲ. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹದ ಸಂಭ್ರಮ ಮನೆಯಲ್ಲಿ ಇರುವುದು. ಗೌರವವನ್ನು ನಿರೀಕ್ಷಿಸದಿದ್ದರೂ ನಿಮಗೆ ಇಂದು ಲಭ್ಯವಾಗಲಿದೆ. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಗಂಡ, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:21, ಯಮಗಂಡ ಕಾಲ 15:33 – 17:09, ಗುಳಿಕ ಕಾಲ 07:33 – 09:09

-ಲೋಹಿತ ಹೆಬ್ಬಾರ್-8762924271 (what’s app only)

Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
Follow Us