ದಿನ ಭವಿಷ್ಯ: ಇಂದು ಈ ರಾಶಿಯವರ ಆಸ್ತಿಗೆ ಅನ್ಯರು ಕೈ ಹಾಕುವ ಸಾಧ್ಯತೆ ಇದೆ
Horoscope Today 27 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಏಕಾದಶೀ ತಿಥಿಯ ಬುಧವಾರದಂದು ಆಪ್ತರಿಗೆ ಉಪದೇಶ, ವಿದೇಶೀ ವ್ಯಾಪರ, ಅನ್ಯರ ಕಾರ್ಯದಲ್ಲಿ ಪ್ರವೇಶ, ಮಾತಿನಲ್ಲಿ ಆವೇಶ, ಅಪಘಾತದಿಂದ ವಿಷಾದ ಎಲ್ಲವೂ ಈ ದಿನ ಇರಲಿದೆ.

ಮೇಷ ರಾಶಿ :
ನಿಮಗೂ ಕೆಲವರಿಗೂ ಬೆಳಕಾದೀತು. ಹಣದ ಹೊಸ ಮಾರ್ಗಗಳು ಕಣ್ಮುಂದೆ ಬರುತ್ತವೆ, ಆದರೆ ನಿರ್ಧಾರಗಳ ಕಡೆ ಯತ್ನಪೂರ್ವಕವಾಗಿ ಸಾಗಬೇಕು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹ ಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು.
ವೃಷಭ ರಾಶಿ :
ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು. ಒಮ್ಮೆಲೆ ಹತ್ತಾರು ವಿಚಾರಗಳಲ್ಲಿ ಆಸಕ್ತಿಯನ್ನು ಹೊಂದುವಿರಿ. ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ತುಂಬಾ ಭಾವುಕವಾಗಿ ಇರುವ ಕಾರಣದಿಂದ ನಿಮಗೆ ಕೆಲ ಸಂದರ್ಭಗಳಲ್ಲಿ ಕೋಪ ವಶವಾಗುವ ಸಾಧ್ಯತೆ ಇದೆ. ಹಣದ ವಿಚಾರದಲ್ಲಿ ನಿಮ್ಮ ನಿರ್ಧಾರಗಳು ನಿಖರವಾಗಿರಬೇಕಾಗಿದೆ. ಕುಟುಂಬದವರ ಜೊತೆ ಸಮಯವನ್ನು ಕಳೆಯುವಿರಿ. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ.
ಮಿಥುನ ರಾಶಿ :
ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಇಂದು ವಾಹನದ ಸಮಯವು ವ್ಯತ್ಯಾಸವಾದ್ದರಿಂದ ನಡೆಯಬೇಕಾಗ ಸ್ಥಿತಿ ಬರಬಹುದು. ಹಣಕಾಸು ವ್ಯವಹಾರದಲ್ಲಿ ಸುಧಾರಣೆಯಾಗಲಿದೆ. ಹೆತ್ತವರ ಜೊತೆ ಬಾಂಧವ್ಯ ಗಟ್ಟಿ ಮಾಡಿಕೊಳ್ಳಿ. ಪ್ರೀತಿಯ ಪ್ರಭಾತವು ನಿಮ್ಮ ಜೀವನವನ್ನು ಬೆಳಗಿಸುತ್ತದೆ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ.
ಕರ್ಕಾಟಕ ರಾಶಿ :
ಮಾತನ್ನು ಆಡುವಾಗ ಪದಗಳ ಮೇಲೆ ಗಮನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಹಣದ ವ್ಯವಹಾರಗಳಲ್ಲಿ ನೆಮ್ಮದಿ ಅನುಭವಿಸಲಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಮಾತುಕತೆ ಸಂತೋಷ ನೀಡಲಿದೆ. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು.
ಸಿಂಹ ರಾಶಿ :
ಸಿಕ್ಕ ಉದ್ಯೋಗವು ಮುಂದೆ ಅನೇಕ ಲಾಭವನ್ನು ಮಾಡಿ ಕೊಡಲಿದೆ. ಶಿಷ್ಟ ನಡವಳಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತದೆ. ಕಟುವಚನದಿಂದ ಅವಾಂತರ ಸೃಷ್ಟಿಯಾದೀತು. ಹಣದ ವ್ಯಯದಲ್ಲಿ ಮಿತಿಮೀರಬೇಡಿ, ಸಣ್ಣ ಉಡುಗೊರೆಗೂ ಸಂಯಮ ಬೇಕಾಗುತ್ತದೆ. ಕುಟುಂಬ ಸದಸ್ಯರ ಭಾವನೆಗಳಿಗೆ ಗೌರವ ನೀಡಿ, ಬೇಜವಾಬ್ದಾರಿಯ ಮಾತುಗಳಿಂದ ದೂರವಿರಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ.
ಕನ್ಯಾ ರಾಶಿ :
ಇಂದು ಹಲವಾರು ದಿನಗಳಿಂದ ವಾಹನ ಖರೀದಿಯ ಆಸೆಯನ್ನು ಪೂರ್ಣಮಾಡಿಕೊಳ್ಳುವಿರಿ. ವಿನಾಕಾರಣ ವಾಗ್ವಾದಗಳು ನಡೆಯಬಹುದು. ನ್ಯಾಯಾಲಯದಲ್ಲಿ ನಿಮಗೆ ಜಯವು ಸಿಗಲಿದೆ. ಕೋಪವನ್ನು ನಿಯಂತ್ರಿಸುವುದು ಅತ್ಯಗತ್ಯ, ಇಲ್ಲದಿದ್ದರೆ ಸಂಬಂಧಗಳು ಹಾಳಾಗಬಹುದು. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಹೊರದೇಶದಲ್ಲಿ ಇರುವವರಿಗೆ ಕಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು.
ತುಲಾ ರಾಶಿ :
ನೀವು ಇಂದು ಉದ್ಯೋಗದ ಸ್ಥಳದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ಹೊಸ ಹೂಡಿಕೆ ಯೋಜನೆಗಳ ಕುರಿತು ಅಧ್ಯಯನ ಮಾಡಿ ನಂತರ ನಿರ್ಧಾರ ಕೈಗೊಳ್ಳಿ. ಕುಟುಂಬದೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು.
ವೃಶ್ಚಿಕ ರಾಶಿ :
ನಿಮಗಿಷ್ಟವಾದವರ ಜೊತೆ ನಿಮ್ಮ ವಿಹಾರ ಇರುವುದು. ಇಂದು ಬಾಯಿ ಚಪಲಕ್ಕೆ ಅಹಿತಕರಚಮವಾದ ಆಹಾರವನ್ನು ಸೇವಿಸುವಿರಿ. ಹಣದ ಕುರಿತು ಸಕಾಲಿಕ ನಿರ್ಧಾರ ಅಗತ್ಯ. ಒಗ್ಗಟ್ಟನ್ನು ಪ್ರದರ್ಶಿಸಲು ಹೋಗಿ ಎಡವಟ್ಟು ಮಾಡಿಕೊಳ್ಳುವಿರಿ. ಕುಟುಂಬದ ಒಗ್ಗಟ್ಟಿಗೆ ಬಲ ನೀಡುವ ಯತ್ನ ಮಾಡಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು.
ಧನು ರಾಶಿ :
ಇಂದು ವಿದ್ಯಾರ್ಥಿಗಳಿಗೆ ತಂದೆಯಿಂದ ಅಗತ್ಯವಿರುವ ಧನವು ಲಭ್ಯವಾಗಬಹುದು. ಅಧರ್ಮ ಮಾರ್ಗದಲ್ಲಿ ಹೋಗಲು ಯಾರದರೂ ಪ್ರೇರಣೆ ಕೊಡಬಹುದು. ಖರ್ಚು ಹೆಚ್ಚಾಗಬಹುದು. ಮಿತ್ರನ ಸಲಹೆಯಿಂದ ಹಣಕಾಸಿನ ಲಾಭ ಸಂಭವಿಸುತ್ತದೆ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ಉನ್ನತ ವಿದ್ಯಾಭ್ಯಾಸಕ್ಕೆ ನಿಮ್ಮವರು ಸಲಹೆ ಕೊಡಬಹುದು. ನಿಮ್ಮ ಹಣವನ್ನು ಪರಿಚಿತರು ಕೇಳಬಹುದು. ಅಧಿಕಾರವು ಅಹಂಕಾರವಾಗಿ ಬದಲಾಗುವುದು ಬೇಡ.
ಮಕರ ರಾಶಿ :
ಅನ್ಯರ ಮಾತಿನಿಂದ ಒತ್ತಡದಲ್ಲಿ ಸಿಲುಕಿಕೊಳ್ಳಬೇಡಿ. ನಡವಳಿಕೆಯಿಂದ ತೊಂದರೆ ಆಗಬಹುದು, ತಾಳ್ಮೆಯಿಂದ ಮುಂದುವರಿಯಿರಿ. ಹಣಕಾಸಿನ ವಿಚಾರದಲ್ಲಿ ಲಾಭದಾಯಕ ದಿನ. ಸಂಗಾತಿಯ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಿ. ನಿಮ್ಮ ಪ್ರತಿಭೆ ಗುರುತಿಸಲ್ಪಡುವ ದಿನವಾಗಬಹುದು. ಹೊಸ ವ್ಯವಹಾರಕ್ಕೆ ಹಿಂದೇಟು ಮನಸ್ಸು ಹಾಕುವುದು. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು.
ಕುಂಭ ರಾಶಿ :
ಎಂದೋ ಹೂಡಿದ ಹಣವು ಇಂದು ಉಪಯೋಗಕ್ಕೆ ಬರಲಿದೆ. ಹಣಕಾಸು ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗುತ್ತವೆ. ಧರ್ಮಾರ್ಥ ಕಾರ್ಯಗಳಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಪಡೆದ ಹಣವನ್ನು ಹಿಂದಿರುಗಿ ಪ್ರೀತಿಯ ವಿಷಯದಲ್ಲಿ ಹೊಸ ತಿರುವು ಸಾಧ್ಯ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು.
ಮೀನ ರಾಶಿ :
ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿ. ನಿಮ್ಮನ್ನು ಬಿಟ್ಟುಕೊಡಲು ಆಗದು. ಸೋಲನ್ನು ಒಪ್ಪಿಕೊಳ್ಳಲು ನಿಮಗೆ ಇಂದು ಆಗದು. ಹಣಕಾಸು ಸಂಬಂಧಿತ ನ್ಯಾಯಾಲಯದ ವಿಚಾರದಲ್ಲಿ ನೀವು ಲಾಭ ಗಳಿಸಬಹುದು. ಮಕ್ಕಳ ಸಾಧನೆ ನಿಮ್ಮಲ್ಲಿ ಹೆಮ್ಮೆ ಹುಟ್ಟಿಸುತ್ತದೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವಜ್ರ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:34 – 17:10, ಯಮಗಂಡ ಕಾಲ 09:09 – 10:45, ಗುಳಿಕ ಕಾಲ 12:22 – 13:58
-ಲೋಹಿತ ಹೆಬ್ಬಾರ್-8762924271 (what’s app only)





