AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರ ಸಹವಾಸ ದುಷ್ಪರಿಣಾಮವನ್ನು ಉಂಟುಮಾಡುವುದು..

Horoscope Today 29 May: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ತ್ರಯೋದಶೀ ತಿಥಿಯ ಶುಕ್ರವಾರದಂದು ವಿಚಿತ್ರ ಆಲೋಚನೆ, ಉತ್ತರಕ್ಕೆ ಪ್ರತ್ಯುತ್ತರ, ಮರ್ಯಾದಗೆ ಭಯ, ಅಧಿಕಾರದಲ್ಲಿ ತೃಪ್ತಿ, ನಾಯಕರಾಗಲು ಸಂಚು ಇವೆಲ್ಲ ಇಂದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರ ಸಹವಾಸ ದುಷ್ಪರಿಣಾಮವನ್ನು ಉಂಟುಮಾಡುವುದು..
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: May 29, 2026 | 12:55 AM

Share

ಮೇಷ ರಾಶಿ:

ನಿಮ್ಮ ಮಾತು ಸತ್ಯವಾಗಿದ್ದು ಕುಟುಂಬದವರು ಅಚ್ಚರಿಪಡುವರು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಯಾರ ಮಾತನ್ನೂ ಆಲಿಸುವ ವ್ಯವಧಾನ ಇಂದು ಇರದು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ಚಿಸುವಿರಿ.

ವೃಷಭ ರಾಶಿ :

ನಿಮ್ಮ ಮಾತಿಗೆ ಬೆಲೆಯು ಕಡಿಮೆಯಾದೀತು. ಮಾರ್ಗಾಯಾಸದಿಂದ ವಿಶ್ರಾಂತಿ ಪಡೆಯುವಿರಿ. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಸಾಮಾಜಿಕ ಬದ್ಧತೆಯನ್ನು ಪೂರೈಸುವಿರಿ. ನಿಮ್ಮ ಕೆಲವು ಅಭ್ಯಾಸವನ್ನು ನೀವು ಬಿಡಬೇಕಾಗಿಬರಬಹುದು. ಹೊಸತನ ಅನ್ವೇಷಣೆಯಲ್ಲಿ ನೀವು ಇರುವಿರಿ. ದೈವವನ್ನು ದೂರುತ್ತ ಕೂರುವುದು ಬೇಡ.‌ ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣವಾದ ನಂಬಿಕೆ ಇರದು.

ಮಿಥುನ ರಾಶಿ :

ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಗುಣಗಳು ನಿಮ್ಮನ್ನು ಕಟ್ಟಿಹಾಕಬಹುದು. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಸಮಸ್ಯೆಗೆ ಬೇಕಾದ ಪರಿಹಾರವನ್ನು ತಿಳಿದೂ ಅದನ್ನು ಮಾಡಲಾರಿರಿ. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ.

ಕರ್ಕಾಟಕ ರಾಶಿ :

ಆಕಸ್ಮಿಕವಾಗಿ ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ನಿಮ್ಮ ಅಸ್ತಿತ್ವ ಮರೆಯಾಗದಂತೆ ನೋಡಿಕೊಳ್ಳಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ಕೆಲವನ್ನು ಬಿಟ್ಟುಕೊಡುವುದು ಅನಿವಾರ್ಯವಗಬಹುದು.

ಸಿಂಹ ರಾಶಿ:

ನಿಮ್ಮ ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಲು ಇಷ್ಟಪಡುವುದಿಲ್ಲ. ಅನೇಕ ಒತ್ತಡಗಳು ನಿಮ್ಮ ಬಲವನ್ನು ಕುಗ್ಗಿಸುವುದು. ಮನೆಯ ವ್ಯವಹಾರದಲ್ಲಿ ಭಾಗವಹಿಸಲು ಇಷ್ಟವಾಗದು. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ.

ಕನ್ಯಾ ರಾಶಿ :

ಹಿರಿಯರ ಪಾಲನ್ನೂ ನೀವೇ ಪಡೆಯುವ ಆಸೆ ಇದೆ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಡುವುದು ಒಳ್ಳೆಯದಲ್ಲ. ಅನೇಕ ಗೊಂದಲಗಳು ನಿಮ್ಮ ಜೀವನದಲ್ಲಿ ಬರುವುದು. ಯಾರನ್ನೂ ಅಪ್ರಯೋಜಕರಂತೆ ನೋಡುವುದು ಬೇಡ. ಆಪ್ತರು ನಿಮಗೆ ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು.

ತುಲಾ ರಾಶಿ :

ಇಂದಿನ ಆಯಾಸದಿಂದ ಯಾವ ಉತ್ಸಾಹವೂ ನಿಮ್ಮಲ್ಲಿ ಇರದು. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ವಾಹನವು ನಾಷ್ಟವಾಗುವ ಸಾಧ್ಯತೆಯಿದೆ. ಹೊಸ ಹವ್ಯಾಸದ ಕಡೆಗೆ ಗಮನವಿರಲಿ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ಇಂದು ನೀವು ಕೆಲವು ಅನಗತ್ಯ ಖರ್ಚುಗಳನ್ನು ಸಹ ಅನುಭವಿಸಬಹುದು. ದುಂದುವೆಚ್ಚ ಮಾಡುವ ಸಾಧ್ಯತೆಯೂ ಇದೆ. ಆಪ್ತರು ನಿಮಗೆ ಪ್ರೀತಿಯಿಂದ ಆತಿಥ್ಯವನ್ನು ಕೊಡಿಸುವರು.

ವೃಶ್ಚಿಕ ರಾಶಿ:

ಅನುಭವಿಗಳ ಜೊತೆಗಿನ ಒಡನಾಟದದಿಂದ ಉದ್ಯಮವು ಹೆಚ್ಚಾಗುವುದು. ಉತ್ತಮ‌ ವಿಚಾರಗಳ ಕಡೆ ಗಮನವಿರಲಿ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ವ್ಯವಹಾರದಿಂದ ಬಾಂಧವ್ಯ ನಿರ್ಣಯ ಮಾಡುವುದು ಬೇಡ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ನಿಮ್ಮ ಸಂಗಾತಿಯ ಜೊತೆ ನಿಮ್ಮ ಸಂಬಂಧವು ಹಿಂದಿಗಿಂತ ಚೆನ್ನಾಗುವುದು. ನೀವು ಇಂದು ದೊಡ್ಡ ಖರೀದಿಯನ್ನು ಮಾಡಲು ತೀರ್ಮಾನಿಸಿದ್ದೀರಿ.

ಧನು ರಾಶಿ:

ದೇಹದಂಡನೆಯಿಂದ ದಿನದ ಕೊನೆಯಲ್ಲಿ ಅನಾರೋಗ್ಯದಂತೆ ಅನ್ನಿಸುವುದು. ನಿಂತಲ್ಲೇ ಇರುವ ಬುದ್ಧಿ ಹಾಗೂ ಮನಸ್ಸಿನಿಂದ ಕೆಟ್ಟ ಆಲೋಚನೆಗಳು ಬರಲಿವೆ. ಹಿತಶತ್ರುಗಳ ಜಾಲದಲ್ಲಿಯೇ ಇದ್ದರೂ ಅರಿವಿಗೆ ಬಾರದು. ಸ್ವಾತಂತ್ರ್ಯವನ್ನು ಪಡೆಯಲು ಹವಣಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ನಿಮ್ಮ ಕಷ್ಟಕ್ಕೆ ಬಂದವರು ನಿಮ್ಮ ಆಪ್ತರಾಗಲಿದ್ದಾರೆ. ನೀವು ನಿಮ್ಮ ಹೆತ್ತವರ ಬಗ್ಗೆ ವಿಶೇಷ ಕಾಳಜಿ ವಹಿಸುವಿರಿ. ನಿಮ್ಮ ಅಪೂರ್ಣ ಕೆಲಸವು ಇಂದು ಪೂರ್ಣಗೊಳ್ಳುತ್ತದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಉತ್ತಮ ದಿನವಾಗಿದೆ.

ಮಕರ ರಾಶಿ :

ಭೂಮಿಯ ಕ್ರಯ ಮತ್ತು ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಇಂದಿನ ಶಕ್ತಿಗೆ ಅನುಗುಣವಾಗಿ ಉದ್ಯೋಗವನ್ನು ಮಾಡುವುದು ಉತ್ತಮ. ಸತ್ಸಂಗದಲ್ಲಿ ದಿನ ಕಳೆಯುವಿರಿ. ಉದ್ಯೋಗದ ಹುಡುಕಾಟದಲ್ಲಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಉಂಟಾಗುವುದು. ಅಮೂಲ್ಯ ವಸ್ತುವಿನ ಬಗ್ಗೆ ನಿಷ್ಕಾಳಜಿ ಸರಿಯಲ್ಲ. ವ್ಯಾಪಾರಸ್ಥರು ಅಧಿಕ ಲಾಭವನ್ನು ಗಳಿಸುವರು.

ಕುಂಭ ರಾಶಿ :

ನಿಮ್ಮ ಗುರಿಯನ್ನು ಆಪ್ತರೇ ತಪ್ಪಿಸಬಹುದು. ಉಡುಗೆ ತೊಡುಗೆಯ ವ್ಯವಹಾರಕ್ಕಾಗಿ ಮ‌ನೆಯಲ್ಲಿ ಕಲಹ. ನಿಮ್ಮನ್ನು ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ನಿಮ್ಮಲ್ಲಿ ಕಲಾವೃಕ್ಷವಿದ್ದು ಅದಕ್ಕೆ ಸರಿಯಾಗಿ ನೀರೆರಿಯಿರಿ. ಇದೇ ನಿಮ್ಮನ್ನು ಎತ್ತರಕ್ಕೆ ಒಯ್ಯಲಿದೆ. ಹಳೆಯ ಖಾಯಿಲೆಯು ಮತ್ತೆ ಮರುಕಳಿಸಬಹುದು. ಪ್ರವಾಸ ವಿಚಾರದಲ್ಲಿ ಬಹಳ ಗೊಂದಲವಿರುವುದು. ಕೆಲಸದ ವಿಷಯದಲ್ಲಿ ನೀವು ಯಾರ ಮಾತನ್ನೂ ನೀವು ಕೇಳುವುದಿಲ್ಲ.

ಮೀನ ರಾಶಿ :

ತಪ್ಪುಗಳು ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಶ್ಚಿಂತೆಯಿಂದ ಮುನ್ನಡೆಯಿರಿ. ಪರಿಚಿತರ ಜೊತೆ ಅಕಾರಣ ತಿರುಗಾಟವನ್ನು ಮನೆಯವರು ನಿಲ್ಲಿಸುವರು.‌ ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ಉತ್ತಮ ಸ್ನೇಹಿತರ ಸಮೂಹವೂ ಸಹ ಹೆಚ್ಚಾಗಲಿದೆ. ಕುಟುಂಬ ಸದಸ್ಯರಿಂದ ಗೌರವವನ್ನೂ ಪಡೆಯುವಿರಿ. ನಿಮಗೆ ಗೊತ್ತಾಗದಂತೆ ಖರ್ಚು ಅಧಿಕವಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ವಿಶಾಖಾ, ಯೋಗ : ವ್ಯತಿಪಾತ್, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:45 – 12:22, ಯಮಗಂಡ ಕಾಲ 15:35 – 17:11, ಗುಳಿಕ ಕಾಲ 07:33 – 09:09

-ಲೋಹಿತ ಹೆಬ್ಬಾರ್-8762924271 (what’s app only)

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More