AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಈ ರಾಶಿಯವರಿಗೆ ಇಂದು ಎಲ್ಲ ಕೆಲಸದಲ್ಲೂ ಲಾಭವಾಗಲಿದೆ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ​​​​ 05ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಈ ರಾಶಿಯವರಿಗೆ ಇಂದು ಎಲ್ಲ ಕೆಲಸದಲ್ಲೂ ಲಾಭವಾಗಲಿದೆ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Feb 05, 2024 | 12:20 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಧ್ರುವ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:20 ರಿಂದ 12:47 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:13 ರಿಂದ 03:39ರ ವರೆಗೆ.

ಧನು ರಾಶಿ: ಇಂದು ನಿಮ್ಮ ಜವಾಬ್ದಾರಿಗಳ ಬಗ್ಗೆ ಕೂಲಂಕಷದ ಅಧ್ಯಯನವನ್ನು ಮೇಲಧಿಕಾರಿಗಳು ಮಾಡಿಯಾರು. ಇಂದು ನೀವು ಯಾವುದೇ ಪ್ರತ್ಯುಪಕಾರದ ನಿರೀಕ್ಷೆ ಇಲ್ಲದೇ ಸೇವೆಯನ್ನು ಮಾಡುವಿರಿ. ನಿಮ್ಮ ಯಶಸ್ಸಿಗೆ ತೊಂದರೆಯಾಗುವ ಕೆಲಸವನ್ನು ಯಾರಾದರೂ ಮಾಡಿಯಾರು. ನಂಬಿಕೆಯನ್ನು ಉಳಿಸಿಕೊಳ್ಳುವತ್ತ ನಿಮ್ಮ ಯೋಚನೆ ಇರಲಿದೆ. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಮನಸ್ಸಿಗೆ ಅಧಿಕ ವಿಶ್ರಾಂತಿಯ ಅಗತ್ಯವಿರುವುದು. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ. ಅತಿಯಾದ ಆತ್ಮವಿಶ್ವಾಸದಿಂದ ಏನನ್ನಾದರೂ ಕಳೆದುಕೊಳ್ಳುವಿರಿ.

ಮಕರ ರಾಶಿ: ಇಂದು ನಿಮ್ಮ ದೇಹಕ್ಕೆ ಪೀಡೆಯು ಅಧಿಕವಾದಂತೆ ತೋರುವುದು. ಏನನ್ನೂ ಮಾಡಲಾಗದ ಸ್ಥಿತಿಯಲ್ಲಿ ನೀವು ಇರುವಿರಿ. ನಿಮ್ಮವರಿಂದ ನಿಮಗೆ ನೆಮ್ಮದಿ ಸಿಗದೇಹೋಗಬಹುದು. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ಆದಾಯದಲ್ಲಿಯೂ ನಿಮಗೇ ಪೂರ್ಣತೃಪ್ತಿ ಇರದು. ಸಂಗಾತಿಯ ಸೂಕ್ಷ್ಮ ಭಾವಕ್ಕೆ ಪೆಟ್ಟು ಬೀಳಬಹುದು. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಬಾಕಿ ಇರುವ ಕೆಲಸದ ಕಡೆ ನಿಮ್ಮ ಗಮನ ಅವಶ್ಯಕ. ಗುರಿಯನ್ನು ಆದಷ್ಟು ಬೇಗ ಮುಟ್ಟಿ. ನಿಮ್ಮ ತಪ್ಪನ್ನು ಯಾರ ಮೇಲೋ ಹಾಕುವಿರಿ. ನೀವು ಉತ್ತಮ ಆರ್ಥಿಕ ಯೋಜನೆಯನ್ನು ಮಾಡಬಹುದು. ನಿರುದ್ಯೋಗವು ನಿಮ್ಮನ್ನು ಕಾಡಬಹುದು.

ಕುಂಭ ರಾಶಿ: ನಿಮ್ಮ ಸ್ವಂತಿಕೆಯನ್ನು ಬಿಟ್ಟುಕೊಡಲು ಹೋಗುವುದು ಬೇಡ. ಏನೇ ಆದರೂ ನಿಮ್ಮ ಸ್ಥಾನದಲ್ಲಿ ನೀವಿರಿ.‌ ಉದ್ಯೋಗದಲ್ಲಿ ಕೆಲವು ಸವಾಲುಗಳು ಬರಬಹುದು. ಇಂದಿನ ಹಣದ ಅಗತ್ಯತೆಯನ್ನು ಸ್ನೇಹಿತರ ಮೂಲಕ ಪಡೆದುಕೊಳ್ಳುವಿರಿ. ಸ್ವಂತ ವ್ಯಾಪಾರದಲ್ಲಿ ಅಧಿಕ ಆದಾಯವಿದ್ದರೂ ಹಿನ್ನಡೆಯಂತೆ ತೋರುವುದು. ಆಹಾರದಲ್ಲಿ ಕ್ರಮವನ್ನು ಇಟ್ಟುಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ಇಂದು ಶೈಕ್ಷಣಿಕ ರಂಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ. ಅಸಾಧ್ಯವನ್ನು ನೀವು ಸಾಧಿಸುವ ಪ್ರಯತ್ನ ಮಾಡುವಿರಿ. ಸ್ತ್ರೀಸಂಬಂಧವಾಗಿ ಜಾಗರೂಕತೆಯಿಂದ ಇರಿ.

ಮೀನ ರಾಶಿ: ಇಂದು ನಿಮ್ಮ ಮಾತಿಗೆ ಅಪರಿಚಿತರೂ ಮೂಕವಿಸ್ಮತರಾದಾರು. ಮಕ್ಕಳ ವ್ಯವಹಾರಕ್ಕೆ ಬೇಕಾದ ಹಣಕಾಸು ನೆರವನ್ನು ನಿಜವು ನೀಡುವಿರಿ. ಹಳೆಯ ವಾಹನಗಳ ಮಾರಾಟದ ಚಿಂತನೆ ಮಾಡುವಿರಿ. ಹೂಡಿಕೆಯಲ್ಲಿ ಆದ ಲಾಭವನ್ನು ನೀವು ಪಡೆಯುವಿರಿ. ಕೈ ತಪ್ಪಿ ಹೋಗಿದೆ ಎಂದುಕೊಂಡಿದ್ದ ಯೋಜನೆಗಳು ಸಿಗಬಹುದು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು. ಎಲ್ಲೋ ಕೊಟ್ಟಿರುವ ಹಣವನ್ನು ನೀವು ಮರಳಿ ಪಡೆಯಬಹುದು. ಈ ದಿನವು ನಿಮಗೆ ಆಲಸ್ಯದಂತೆ ತೋರುವುದು.

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ