Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 03 April : ಈ ರಾಶಿಯವರು ಮುಕ್ತವಾಗಿ ಮಾತನಾಡಲು ನಾಚುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ, ಗುರುವಾರ ಕಳವಳ, ಜಿಗುಪ್ಸೆ, ವೈಷಮ್ಯ, ವಿವಾದ, ಸಂಧಾನಗಳು ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 03 April : ಈ ರಾಶಿಯವರು ಮುಕ್ತವಾಗಿ ಮಾತನಾಡಲು ನಾಚುವರು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 03, 2025 | 1:05 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಷಷ್ಠೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 06:28 am, ಸೂರ್ಯಾಸ್ತ – 06:43 pm, ಇಂದಿನ ಶುಭಾಶುಭಕಾಲ: ರಾಹು ಕಾಲ 14:08 – 15:40, ಯಮಘಂಡ ಕಾಲ 06:28 – 08:00, ಗುಳಿಕ ಕಾಲ 09:32 – 11:04

ಮೇಷ ರಾಶಿ: ನಿಮ್ಮ ಮಾತಿಗೆ ವೇದಿಕೆ ಸಿಗಲಿದೆ. ಇಂದು ದೈಹಿಕ ಶಕ್ತಿ ಕಡಿಮೆಯಾಗಬಹುದು. ಪರರ ಅಸಹಾಯಕತೆಯನ್ನು ಅರ್ಥಮಾಡಿಕೊಳ್ಳುವಿರಿ. ನಿದ್ರಾಹೀನತೆಯಿಂದ ಸ್ವಲ್ಪ ಆಲಸ್ಯವೂ ಬರಲಿದೆ. ನಿಮ್ಮ ಮನಸ್ಸನ್ನು ಒಂದು ಕಡೆ ಕೇಂದ್ರೀಕರಿಸಲು ಆಗದು. ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಪ್ರಯತ್ನಪೂರ್ವಕವಾಗಿ ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಸಂಗಾತಿಯ ಜೊತೆ ಆರ್ಥಿಕತೆಯ ಬಗ್ಗೆ ವಾಗ್ವಾದ ಮಾಡುವಿರಿ. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಸಾಲದು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ.

ವೃಷಭ ರಾಶಿ: ಇಂದು ಕುಟುಂಬವು ಕ್ಷೋಭೆಯಿಂದ ಸಮಾಧಾನಗೊಳ್ಳಲಿದೆ. ನಿಮಗೆ ಹೊಸ ಅವಕಾಶಗಳು ಉದ್ಭವಿಸಲಿದ್ದು, ನೀವು ಅವುಗಳನ್ನು ವೇಗವಾಗಿ ವಶಪಡಿಸಿಕೊಳ್ಳಿ. ಆ ವೇಗವನ್ನು ಮುಂದುವರಿಸಲು ಫಲದ ಅಪೇಕ್ಷೆಯೂ ಇರಲಿದೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಅಪನಂಬಿಕೆಗಳು ದೂರಾಗಬೇಕಿದೆ.‌ ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು. ಅನಪೇಕ್ಷಿತ ಸಹಕಾರದಿಂದ ಆರ್ಥಿಕ ಚಿಂತೆ.‌ ಮನಸ್ಸಿನಲ್ಲಿ‌ ಯಾವುದಾದರೂ ಭೀತಿಯು ಕಾಡಬಹುದು. ಖರ್ಚು ಮಾಡುವುದಕ್ಕಿಂತ ಹೆಚ್ಚಿನದನ್ನು ಉಳಿಸಿ, ಸುರಕ್ಷತೆ ಬಗ್ಗೆ ಲಕ್ಷ್ಯವಿರಲಿ. ಸ್ವಲ್ಪ ನಿದ್ದೆ ಮಾಡಿ ಮತ್ತು ವಿಶ್ರಾಂತಿ ಪಡೆಯಿರಿ. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಸ್ವತಃ ಉದ್ಯೋಗವನ್ನು ಮಾಡುವ ಆಲೋಚನೆಯು ಬರಬಹುದು. ಅಪರಿಚಿತರ ಜೊತೆ ಸಲುಗೆಯಿಂದ ಇರುವಿರಿ. ಅಧಿಕ ಬೆಲೆ ಉತ್ತಮ‌ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ.

ಮಿಥುನ ರಾಶಿ: ಪ್ರಗತಿಯ ಪರಿಶೀಲನೆ ಮಾಡಿಕೊಳ್ಳುವಿರಿ. ನಿಮ್ಮ ವಿಶೇಷ ವ್ಯಕ್ತಿ ಇಂದು ನಿಮ್ಮ ಜೀವನಕ್ಕೆ ಉತ್ಸಾಹವನ್ನು ತರುತ್ತಾರೆ. ಮುನ್ನೋಟವಿಲ್ಲದೇ ಯಾವುದನ್ನೂ ಮಾಡುವುದು ಬೇಡ. ಒಬ್ಬಂಟಿಯಾಗಿದ್ದರೆ, ನಿಮ್ಮ ಕಣ್ಣುಗಳನ್ನು ತೆರೆದು ಸುತ್ತಲ ಜಗತ್ತನ್ನು ನೋಡಿ. ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು. ನಿಮ್ಮ ಪ್ರೀತಿಗೆ ಅಡ್ಡಿ ಆತಂಕಗಳು ಬರಬಹುದು. ಇಂದಿನ ಕಾರ್ಯವನ್ನು ಸರಿಯಾಗಿ ಯೋಜಿಸಿಕೊಂಡು.‌ ನೀವು ಮಾಡಿದ ಕಠಿಣ ಪರಿಶ್ರಮ ಅಂತಿಮವಾಗಿ ಫಲ ನೀಡುತ್ತದೆ. ನಿಮ್ಮ ಹಣದ ಮೇಲೆ ನಿಗಾ ಇರಿಸಿ, ಯಾವುದೇ ಅಪಾಯಗಳನ್ನು ತೆಗೆದುಕೊಳ್ಳದಂತೆ ದೂರವಿರಿ. ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾದೀತು. ಯಶಸ್ಸಿನ ಗುಟ್ಟನ್ನು ಬಯಲುಮಾಡುಬಿರಿ. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ತಮ್ಮ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಿಯಾರು.

ಕರ್ಕಾಟಕ ರಾಶಿ: ನಿಮ್ಮ ಪ್ರೀತಿಯ ಮಾತಿಗೆ ಯಾರೂ ದನಿ ಸೇರಿಸುವುದಿಲ್ಲ. ಒತ್ತಡದ ಮಟ್ಟವನ್ನು ಕಡಿಮೆ ಮಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಸಂಗಾತಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದ ಪಡೆಯಲು ನೀವು ಕಾದು ಸಮಯವನ್ನು ಹಾಳು ಮಾಡುವಿರಿ. ಅವಕಾಶಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಏಕೆಂದರೆ ನಿಮ್ಮ ಕನಸುಗಳನ್ನು ನನಸಾಗಿಸಲು ಒಂದು ಮಾರ್ಗವನ್ನು ಹೊಂದಿರುತ್ತೀರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಿರಬಹುದು. ಕೃಷಿಯು ಕಡೆಗೆ ಗಮನ ಹೆಚ್ಚಾಗಿ ನೀಡುವಿರಿ. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ‌ ತಿಳಿದುಕೊಳ್ಳದೇ ಹೋಗಬಹುದು. ನಿಮಗೆ ಕೆಲವು ವಿಚಾರದಲ್ಲಿ ಕಾನೂನಿನ ತೊಂದರೆ ಕಾಡಬಹುದು.

ಸಿಂಹ ರಾಶಿ: ವೃತ್ತಿಯಲ್ಲಿ ಉನ್ನತ ಸ್ಥಾನಕ್ಕೆ ಪ್ರಯತ್ನ ನಡೆಯುವುದು. ನಿಮ್ಮ ಸಂಬಂಧಗಳಲ್ಲಿ ನೀವು ಇಂದು ಸವಾಲಿನ ದಿನವನ್ನು ಎದುರಿಸಬೇಕಾಗಬಹುದು. ತಪ್ಪುಗ್ರಹಿಕೆಗಳು ಮತ್ತು ಭಿನ್ನಾಭಿಪ್ರಾಯಗಳ ಸಂದರ್ಭದಲ್ಲಿ, ತಪ್ಪುಗಳನ್ನು ಒಪ್ಪಿಕೊಳ್ಳಿ. ನಿಮಗೆ ಸಿಗುವ ಜನರ ಪ್ರೀತಿಗೆ ಪ್ರತಿಯಾಗಿ ಸಮಯವನ್ನಾದರೂ ಕೊಡಿ. ಮುಕ್ತವಾಗಿ ಸಂವಾದ ಮಾಡಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಿ. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿಯ ಸಿಗದು. ಕೆಲವು ಹೆಜ್ಜೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ಪ್ರಯೋಜನವಾಗಲಿದೆ. ಅತಿಯಾದ ಚಿಂತೆಯಿಂದ ನೋವುಗಳು ದೇಹದಲ್ಲಿ ಕಾಣಿಸುವುದು. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಾರ್ಯದಲ್ಲಿ ಸಕ್ರಿಯರಾಗಿ. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ‌ ಮೇಲೆ ಆಗದು.

ಕನ್ಯಾ ರಾಶಿ: ಅನಿರೀಕ್ಷಿತ ಬದಲಾವಣೆಯಿಂದ ಎಲ್ಲರ ಮೇಲೆ ಸಿಟ್ಟಾಗುವಿರಿ. ನಿಮ್ಮ ವೃತ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಲಾಭದ ಲಕ್ಷಣವಿರುವುದು. ನಿಮ್ಮನ್ನು ನೀವು ಧನಾತ್ಮಕವಾಗಿ ಪ್ರಸ್ತುತಪಡಿಸುವತ್ತ ಗಮನಹರಿಸಿ. ಋಣಶೇಣವನ್ನು ಉಳಿಸಿಕೊಳ್ಳದೇ ತೀರಿಸಿಕೊಂಡು ಮುಂದಿನ ಯೋಜನೆಗೆ ಸಿದ್ಧತೆ ನಡೆಸುವಿರಿ. ಅಂತಸ್ಸಾಕ್ಷಿಯನ್ನು ಬಿಟ್ಟು ನೀವು ದೂರಾಗಬಹುದು. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ. ನಿಮಗೆ ಇನ್ನೊಬ್ಬರ ಬಗ್ಗೆಯೇ ಅಧಿಕ ಆಲೋಚನೆ ಇರುವುದು. ಅಪರಾಧಿ ಪ್ರಜ್ಞೆ ನಿಮ್ಮನ್ನು ಕಾಡುವುದು. ಹೆಚ್ಚಿದ ಭಾವನಾತ್ಮಕ ಅರಿವಿನ ಮೂಲಕ ನೀವು ನಿಮ್ಮವರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವಿರಿ. ನೀವು ಹೊಂದಿರುವ ಅಪಾರ ಶಕ್ತಿ ಮತ್ತು ಧೈರ್ಯವು ಎಂತಹ ಸಂದರ್ಭದಲ್ಲಿಯೂ ಹಿಡಿದು ನಿಲ್ಲಿಸುವುದು. ಕಾಲಾತ್ಮಕ ಕೆಲಸದಲ್ಲಿ ಆಸಕ್ತಿ ಹೆಚ್ಚಾಗುವುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು. ಕೆಲವು ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ.

ತುಲಾ ರಾಶಿ: ಸಾಮಾಜಿಕ ಕಾರ್ಯಕ್ಕೆ ಪ್ರಭಾವಿಗಳಿಂದ ಆಹ್ವಾನ ಬರಲಿದೆ. ಇಂದು ವಿದ್ಯಾರ್ಥಿಗಳು ಪ್ರೀತಿಯಲ್ಲಿ ನಿರತರಾಗಿರುತ್ತಾರೆ. ಇದು ಅವರ ಬಹಳಷ್ಟು ಸಮಯವನ್ನು ವ್ಯರ್ಥ ಮಾಡಬಹುದು. ಸಂಗಾತಿಯ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ಇಂದು ದೀರ್ಘಕಾಲದ ನಿಮ್ಮ ಸಂಬಂಧಕ್ಕೆ ವಿರಾಮ‌ವು ಸಿಗಬಹುದು. ಪಡೆದುಕೊಳ್ಳಬೇಕಾದ ಸ್ಥಿರಾಸ್ತಿ ನಿಮಗೆ ಬರುವುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ನೀವು ಬಗೆಹರಿಸಿಕೊಳ್ಳುವಿರಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡೀತು. ನಿಮ್ಮ ಪ್ರೀತಿಯನ್ನು ಇತರರಿಗೆ ವ್ಯಕ್ತಪಡಿಸಲು ಸುಲಭವಾದ ಮಾರ್ಗ ಸಿಗಲಿದೆ. ಹೂಡಿಕೆಯನ್ನು ಅಲ್ಪಪ್ರಮಾಣದಲ್ಲಿ ಇರಿಸಿಕೊಂಡರೆ ಒಳ್ಳೆಯದು. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ. ಭೂಮಿಯ ವ್ಯವಹಾರವು ಸಾಕೆನಿಸಬಹುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು.

ವೃಶ್ಚಿಕ ರಾಶಿ: ಕನಸನ್ನು ಸಾಕಾರ ಮಾಡಿಕೊಳ್ಳಲು ಪುಟ್ಟ ಹೆಜ್ಜೆ ಇಡುವಿರಿ. ಇಂದು ಬಗೆಹರಿಯದ ಸಮಸ್ಯೆಗಳ ಬಗ್ಗೆ ನಿಮ್ಮ ಕುಟುಂಬದ ಜೊತೆಗೆ ಮಾತನಾಡಲು ನೀವು ಬಯಸಬಹುದು. ನೀವು ಚೆನ್ನಾಗಿ ಯೋಚಿಸಿದ ಯಾವುದಾದರೂ ವಿಧಾನವನ್ನು ಬಳಸುತ್ತೀರೆಂದು ಖಚಿತಪಡಿಸಿಕೊಳ್ಳಿ. ಕೆಲಸದಲ್ಲಿ ಹೊಸತನ ಬಹಳ ಮುಖ್ಯವಾಗುತ್ತದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮ್ಮ ಸಂಬಂಧಿಕರೊಂದಿಗೆ ಸಮಯ ಕಳೆಯಬಹುದು. ವಿದ್ಯಾರ್ಥಿಗಳ ಅಭ್ಯಾಸ ಉನ್ನತ ಅಧ್ಯಯನಕ್ಕೆ ಸಹಕಾರಿ. ಕುಟುಂಬಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ಸುದ್ದಿಗಳನ್ನು ಪಡೆಯುತ್ತೀರಿ. ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬೇಡ.‌ ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು.

ಧನು ರಾಶಿ: ನಿಮ್ಮ ಪ್ರಯತ್ನ ಪೂರ್ಣವಾಗಿದ್ದರೂ ಕಾರ್ಯ ಮಾತ್ರ ಅಪೂರ್ಣವಾಗಲಿದೆ. ಇಂದು ನೀವು ದೈಹಿಕ ಪ್ರಯೋಜನಗಳಿಗಾಗಿ, ಮಾನಸಿಕ ಶಕ್ತಿಗಾಗಿ, ಧ್ಯಾನ ಮತ್ತು ಯೋಗವನ್ನು ಪ್ರಾರಂಭಿಸಬೇಕಾಗಬಹುದು. ವ್ಯಾಪಾರದಲ್ಲಿ ಚಾತುರ್ಯದಿಂದ ಲಾಭ. ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷ ಇರುವುದು. ನಿಮ್ಮವರ ಮೇಲಿರುವ ಅನುಮಾನ ನಿವಾರಣೆ ಮಾಡಿಕೊಳ್ಳುವಿರಿ.‌ ಸಂಗಾತಿಯ ಪ್ರೀತಿಯನ್ನು ಪಡೆಯುವಿರಿ. ನೀವು ಪ್ರವಾಸಕ್ಕೆ ಹೋಗುವ ದಿನ ಇದು. ನಿಮ್ಮ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ನೀವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಚಂಚಲ ಮನಃಸ್ಥಿತಿಯು ನಿಮ್ಮ ಕಛೇರಿಯ ಕಾರ್ಯವನ್ನು ಮಾಡಲು ಬಿಡದು. ಸಹನೆ ನಿಮ್ಮ ಜೊತೆ ದಿನಪೂರ್ತಿ ಇರಲಿ. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ಸಂಗಾತಿಯ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾದೀತು.

ಮಕರ ರಾಶಿ: ಇಂದಿನ ಕೆಲಸಕ್ಕೆ ನಿಮಗೆ ದಂಡಬೀಳುವ ಸಾಧ್ಯತೆ ಇದೆ. ಇಂದು ಮೋಜು ಮಾಡಲು ಹೊರಡುವವರಿಗೆ ಮುನ್ನೆಚ್ಚರಿಕೆ ಇರಲಿ. ಜಾಡ್ಯದಿಂದ ನೀವು ಇಂದಿನ ಕಾರ್ಯವನ್ನು ಮುಂದೂಡುವಿರಿ. ಯಾರಿಂದಲಾದರೂ ಹಣವನ್ನು ಎರವಲು ಪಡೆದ ಜನರಿಗೆ ಯಾವುದೇ ಪರಿಸ್ಥಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಬೇಕಾಗಬಹುದು. ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ಇಂದು ನಿಮ್ಮ ಪ್ರೀತಿಪಾತ್ರರು ನಿಮ್ಮ ಮಾತನ್ನು ಕೇಳಲು ಬಯಸುವುದಿಲ್ಲ. ಉದ್ಯೋಗಸ್ಥ ಸ್ಥಳಿಯರು ಇಂದು ಕೆಲಸದ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬಹುದು. ನಿಮ್ಮ ಕುಲವೃತ್ತಿಯನ್ನು ಮುನ್ನಡೆಸುವುದು ಸೂಕ್ತ. ದೂರವಾಣಿ ಕರೆಗಳಿಂದ ನಿಮಗೆ ತೊಂದರೆ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.‌

ಕುಂಭ ರಾಶಿ: ಪ್ರೀತಿಯಲ್ಲಿ ನಂಬಿಕೆ ಕಳೆದುಕೊಳ್ಳುವಿರಿ. ಇಷ್ಟವಾದವರು ಬಿಟ್ಟುಹೋಗಬಹುದು. ಇಂದು ನಿಮ್ಮವರಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುವಿರಿ. ನೀವು ಯಾರೊಂದಿಗೆ ಅರ್ಥಪೂರ್ಣ ಸಂಬಂಧವನ್ನು ಹೊಂದಲು ಬಯಸುತ್ತೀರಿ ಎಂಬ ವಿಚಾರದಲದಲಿ ಸ್ಪಷ್ಟತೆ ಇರಲಿ. ಆಹಾರ ಸೇವನೆಯ ಅನಂತರ ಅನಾರೋಗ್ಯ ಕಾಡಬಹುದು. ಇಂದು ಹೊಸ ಸಂಪರ್ಕಗಳನ್ನು ಬೆಳೆಸಿಕೊಳ್ಳಲು ಉತ್ತಮ ಸಮಯ. ವೃತ್ತಿಜೀವನದ ಕೌಶಲ್ಯಗಳನ್ನು ಹೆಚ್ಚಿಸಲು ಸಮಯವನ್ನು ಬಳಸಿಕೊಳ್ಳುವಿರಿ. ಹೂಡಿಕೆ ಮಾಡಲು ಹೊಸ ಮಾರ್ಗಗಳನ್ನು ತೆರೆಯಬಹುದು. ಹಾಸ್ಯಯುಕ್ತವಾದ ಮಾತಿನಿಂದ ಗೌರವವನ್ನು ಕಳೆದುಕೊಳ್ಳುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸೀತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ‌ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಜೊತೆಗಾರರು ಮಾಡುವರು.

ಮೀನ ರಾಶಿ: ಕಛೇರಿಯಲ್ಲಿ ಕೆಲಸದಲ್ಲಿ ತನ್ಮಯತೆ ಕಡಿಮೆಯಾಗಿ, ಬೇರೆಯದನ್ನು ಮಾಡುವಿರಿ. ಇಂದು ವೃತ್ತಿಪರರಾಗಿರಿ ನಿಮ್ಮ ವಹಿವಾಟು ಉತ್ತಮವಾಗಿದೆ ನೋಡಿಕೊಳ್ಳಿ. ನೀವು ಅಪಾಯಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ನಿಮ್ಮ ಬಗ್ಗೆ ಸಲ್ಲದ ಮಾತುಗಳು ನಿಮಗೆ ಗೊತ್ತಾಗದಂತೆ ನಡೆಯಲಿವೆ. ಆರ್ಥಿಕತೆಯ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಬೇಕಾಗಬಹುದು. ಇಂದು ಬದಲಾವಣೆಯ ದಿನವಾಗಿದ್ದರೂ, ಆಶ್ಚರ್ಯವು ಕಾಣಿಸಿಕೊಳ್ಳಬಹುದು. ನಿಮ್ಮನ್ನು ಯಾರಾದರೂ ಆರ್ಥಿಕ ತೊಂದರೆಗೆ ಸಿಲುಕಿಸಬಹುದು. ಒಡೆದ ಬಾಂಧವ್ಯ ಮತ್ತೆ ಕೂಡಲಿದೆ. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ನಿಮ್ಮ ಸಹಾಯಕ್ಕೆ ಯಾರೂ ಬರದಿರುವುದು ಬೇಸರವಾಗುವುದು. ಸ್ಥಿರಾಸ್ತಿಯನ್ನು ಉಳಿಸಿಕೊಳ್ಳಲು ಶತಪ್ರಯತ್ನ ಮಾಡಬೇಕಾದೀತು. ಮನೆಯಲ್ಲಿ ಬಹಳ ಕಾರ್ಯಗಳಿದ್ದು ಅದರಲ್ಲಿ ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇಡಿ.

ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?