ಈ ರಾಶಿಯವರು ವ್ಯಾಪಾರವನ್ನ ವಿಸ್ತರಿಸಲು ಕುಟುಂಬದ ಸಹಾಯ ತೆಗೆದುಕೊಳ್ಳಬಹುದು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಸೋಮವಾರ ವ್ಯಾವಹಾರಿಕ ಶುದ್ಧಿ, ಒಳ್ಳೆಯದನ್ನು ಮಾಡುವ ಬುದ್ಧಿ, ಕಲೆಯ ಸಿದ್ಧಿ ಇವೆಲ್ಲ ಈ ದಿನದಂದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಸುಕರ್ಮ, ಕರಣ: ಭದ್ರ, ಸೂರ್ಯೋದಯ – 06:25 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:58 – 09:30, ಯಮಘಂಡ ಕಾಲ 11:02 – 12:35, ಗುಳಿಕ ಕಾಲ 14:07 – 15:40
ಮೇಷ ರಾಶಿ: ನೀವು ಈಗಲೇ ಮನೆಯ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಆಸಕ್ತಿ ತೋರಿಸಲಾರಿರಿ. ಆರಾಮಾಗಿ ಇರುವ ಯೋಚನೆ ಇದೆ. ಎಲ್ಲದಕ್ಕೂ ಕುಟುಂಬದ ಸಹಕಾರವನ್ನು ಪಡೆಯುವಿರಿ. ಸಂಗಾತಿಯ ಸಂಪತ್ತಿನಿಂದ ಖುಷಿಪಡುವಿರಿ. ಕುಟುಂಬದೊಂದಿಗೆ ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಯೋಜಿಸಬಹುದು. ಖರ್ಚುಗಳು ಅಧಿಕವಾಗಿರುತ್ತವೆ. ನಿಮ್ಮ ಮೇಲಿನ ಪ್ರೀತಿಯಿಂದ ಯಾರಾದರೂ ಅಗತ್ಯ ಸಹಕಾರವನ್ನು ಕೊಡುವರು. ವ್ಯಾಪಾರವನ್ನು ವಿಸ್ತರಿಸಲು ಕುಟುಂಬದ ಸದಸ್ಯರ ಸಹಾಯ ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ವೃತ್ತಿಗೆ ಸಂಬಂಧಿಸಿದ ಬೇರೆ ಬೇರೆ ಮಜಲುಗಳನ್ನು ಅರಿಯುವಿರಿ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಮುಖ್ಯ ಕೆಲಸವನ್ನು ನೀವು ಮರೆಯುವಿರಿ. ಅಪರಿಚಿತರಿಂದ ನಿಮಗೆ ಕೆಲಸ ಸಿಗಬಹುದು. ಇಂದು ನೀವು ಮಾನಸಿಕವಾಗಿ ತುಂಬಾ ಆಯಾಸವನ್ನು ಅನುಭವಿಸಬಹುದು. ಪ್ರೇಮ ಜೀವನದಲ್ಲಿ ಏರಿಳಿತಗಳಿರಬಹುದು.
ವೃಷಭ ರಾಶಿ: ಮಾನಸಿಕವಾಗಿ ಉತ್ಸಾಹವು ಭಂಗಗೊಳ್ಳುವ ಸಾಧ್ಯತೆಯಿದೆ. ಪಿತ್ರಾರ್ಜಿತ ಸಂಪತ್ತಿನಿಂದ ಸುಖವು ಇರುವುದು. ಸಹೋದರ ಜೊತೆ ಕಲಹವು ಆಗಬಹುದು. ಬಂಧುಗಳಿಂದ ಸಹಾಯ ದೊರೆಯಬಹುದು. ಮನಸ್ಸಿನಲ್ಲಿ ನೀವು ತಾಜಾತನವನ್ನು ಅನುಭವಿಸುವಿರಿ. ನೀವು ಕೆಲಸದಲ್ಲಿ ಸಹೋದ್ಯೋಗಿಗಳಿಂದ ಸಹಾಯ ಪಡೆಯುವುದನ್ನು ಮುಂದುವರಿಸುತ್ತೀರಿ. ನಿಮಗೆ ಬೆಂಬಲ ಸಿಗುತ್ತದೆ. ವೈರಾಗ್ಯಭಾವವನ್ನು ಉಂಟಾಗಲಿದೆ. ನೀವು ಕೆಲವು ನಿರಾಶಾದಾಯಕ ಮಾಹಿತಿಯನ್ನು ಇಂದು ಪಡೆಯುವಿರಿ. ನಿಮ್ಮ ದೀರ್ಘಾವಧಿಯ ಕಾನೂನು ಪ್ರಕರಣವು ನಿಮ್ಮ ಪರವಾಗಿ ಬಂದಿದ್ದು ಖುಷಿಕೊಡುವುದು. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ. ವೃತ್ತಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳ ನಿರೀಕ್ಷೆಯಲ್ಲಿ ಇರುವಿರಿ. ಶತ್ರುಗಳು ಪ್ರಬಲರಾಗದಂತೆ ನೋಡಿಕೊಳ್ಳಿ. ಕೆಲವು ಸಂಕೀರ್ಣವಾದ ವಿಷಯಗಳನ್ನು ಪರಿಹರಿಸಬಹುದು.
ಮಿಥುನ ರಾಶಿ: ಇಂದು ನಿಮ್ಮ ಪ್ರಭಾವವು ಜನರಿಗೆ ತಾನಾಗಿಯೇ ಗೊತ್ತಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಸಿಗದೆಂದು ಮತ್ತೇನನ್ನೋ ಮಾಡಲು ಹೋಗುವುದು ಬೇಡ. ನಿಮ್ಮ ಪ್ರತಿಭೆಯನ್ನು ಗುರುತಿಸುವುದೂ ಕಷ್ಟವೇ. ಅನಾರೋಗ್ಯದಿಂದ ಬಳಲುವಿರಿ. ನೀವು ಶೈಕ್ಷಣಿಕ ಕೆಲಸಕ್ಕಾಗಿ ಬೇರೆ ಸ್ಥಳಕ್ಕೆ ಹೋಗಬಹುದು. ನಿಮಗೆ ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ನಿಮಗೆ ಆರ್ಥಿಕ ಲಾಭಗಳು ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಪುತ್ರನಿಂದ ಧನಸಹಾಯ ಸಿಗಲಿದೆ. ನಿಮ್ಮ ಒಳ್ಳೆಯ ತನಕ್ಕೆ ಗೆಲವು. ನಿಮ್ಮ ನಾಯಕತ್ವದ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಿರಿ. ನಿಮ್ಮ ಆಪ್ತರ ಜೊತೆ ಕೆಲವು ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಸ್ನೇಹಿತರ ಜೊತೆ ಸಂಬಂಧದಲ್ಲಿ ನಡೆಯುತ್ತಿರುವ ಭಿನ್ನಾಭಿಪ್ರಾಯವು ಪರಿಹರಿಸಲ್ಪಡುತ್ತದೆ. ಭೂಮಿಯ ವ್ಯವಹಾರದಲ್ಲಿ ಬೇಸರ ಬರಬಹುದು. ನಿಮ್ಮ ಬಗ್ಗೆ ಇರುವ ಭಾವನೆ ಬದಲಾಗುವುದು. ನೀವು ಆಡಂಬರದಿಂದ ದೂರವಿರಿ. ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಬಂಧುಗಳ ಜೊತೆ ಚರ್ಚಿಸುವಿರಿ.
ಕರ್ಕಾಟಕ ರಾಶಿ: ಮಾತಿನಿಂದ ನಿಮಗೆ ಆಗಬೇಕಾದ ಕೆಲಸವು ಆಗುವುದು. ಕುಟುಂಬದಲ್ಲಿ ಸ್ವಸ್ಥವಾತಾವರಣ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಯಾವುದೇ ಸಮಸ್ಯೆ ಇದ್ದಕ್ಕಿದ್ದಂತೆ ಉದ್ಭವಿಸಬಹುದು. ನಿಮ್ಮ ಖರ್ಚಿನ ಪ್ರಮಾಣ ಹೆಚ್ಚಾಗುತ್ತದೆ. ಮಾತನಾಡುವಾಗ ನೀವು ಜಾಗರೂಕರಾಗಿರಬೇಕು. ಆದರೆ ಇಂದು ಲಾಭದ ಅವಕಾಶಗಳು ಇರುತ್ತವೆ, ಆದರೆ ಸುತ್ತಲೂ ಓಡಾಟ ಕೂಡ ಇರುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡೀತು. ಪೂರ್ವಜರ ಪುಣ್ಯ ನಿಮ್ಮನ್ನು ಆಪತ್ತಿಂದ ಕಾಪಾಡಲಿದೆ. ಶಿಕ್ಷಕವೃತ್ತಿಯಲ್ಲಿ ಮಾನಸಿಕ ನೆಮ್ಮದಿ ಇಲ್ಲ. ಧನಾಗಮನವಾಗುವ ಸಾಧ್ಯತೆ ಇದೆ. ಅನಾರೋಗ್ಯದ ಕಾರಣಕ್ಕೆ ಹಣವನ್ನು ವ್ಯಯಿಸುವಿರಿ. ಇಂದು ನೀವು ಯಾರಿಂದಲೋ ಪಡೆದ ಹಣವನ್ನು ಮರಳಿಸುವುದು ಸೂಕ್ತ. ನಿಮ್ಮ ಇಂದಿನ ದಿನಚರಿಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು.
ಸಿಂಹ ರಾಶಿ: ಇಂದು ನೀವು ಪಿತ್ರಾರ್ಜಿತ ಆಸ್ತಿಯ ಬಗ್ಗೆ ಆಸಕ್ತಿ ಹೊಂದುವಿರಿ. ನಿಮ್ಮ ಪ್ರಭಾವ ಇಂದು ಯಾವ ಕಾರ್ಯಕ್ಕೂ ಸಹಾಯಮಾಡದು. ಬೌದ್ಧಿಕ ಕೆಲಸಗಳು ಆದಾಯದ ಮೂಲಗಳನ್ನು ಸೃಷ್ಟಿಸುತ್ತವೆ. ವ್ಯವಹಾರ ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ಸಹೋದರ ಸಹೋದರಿಯರಿಂದ ನೀವು ಆರ್ಥಿಕ ಸಹಾಯವನ್ನು ಪಡೆಯಬಹುದು. ಅವರೆದುರು ನಿಮ್ಮ ಪ್ರತಿಭೆಯ ಅನಾವರಣವಿಂದು. ಹಳೆಯ ನೋವುಗಳು ಇಂದು ಹೆಚ್ವಾಗಬಹುದು. ಸಂಗಾತಿಯ ಜೊತೆ ಮನಿಸು ಕಾಣಿಸಿಕೊಳ್ಳುವುದು. ಧಾರ್ಮಿಕ ಕಾರ್ಯಗಳನ್ನು ಮಾಡಲು ಮನಸ್ಸು ಇಚ್ಛಿಸುವುದು. ಸಹೋದರನಿಂದ ಸಹಾಯ ಸಿಗಲಿದೆ. ವ್ಯಯಿಸುವ ಸಂಪತ್ತಿಗೆ ಕಡಿವಾಣ ಹಾಕಿಕೊಳ್ಳಿ. ನೀವು ಹಿರಿಯರ ಮಾತನ್ನು ಕೇಳಬೇಕು ಮತ್ತು ಅನುಸರಿಸುವದೂ ಮುಖ್ಯ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು. ನೀವು ಇಂದು ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಇಂದು ಹಠಾತ್ ಘಟನೆಯ ಬಗ್ಗೆ ಯಾವುದೇ ತಕ್ಷಣದ ನಿರ್ಧಾರ ತೆಗೆದುಕೊಳ್ಳುವುದನ್ನು ಬೇಡ.
ಕನ್ಯಾ ರಾಶಿ: ಎಷ್ಟೇ ಎಚ್ಷರವಿದ್ದರೂ ಪ್ರೀತಿಯಲ್ಲಿ ಬೀಳುವ ಸಾಧ್ಯತೆ ಇದೆ. ಇಂದು ಹುಟ್ಟಿದ್ದು ನೈಜವಾದ ಪ್ರೇಮವೇ ಆಗಿರಬೇಕಿಂದಿಲ್ಲ. ಕಾಲಿನ ನೋವಿನಿಂದ ಓಡಾಡ ಕಷ್ಟ. ಪ್ರವಾಸ ಹೋಗುವ ಬಗ್ಗೆ ಯೋಚಿಸಬಹುದು. ನಿಮ್ಮ ಮಕ್ಕಳು ಮತ್ತು ಹೆಂಡತಿಯಿಂದಲೂ ನೀವು ಸಂತೋಷವನ್ನು ಪಡೆಯುತ್ತೀರಿ. ನಿಮ್ಮ ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಮಾತನಾಡದೇ ಸುಮ್ಮನಿರುವುದು ಒಳ್ಳೆಯದು. ಅದು ಇಂದು ಪೂರ್ಣಗೊಳ್ಳುವುದಕ್ಕೆ ಒತ್ತಡವು ಅನಿವಾರ್ಯವಾದೀತು. ಸಂಪನ್ಮೂಲಗಳನ್ನು ಕಾಳಜಿಯಿಂದ ರಕ್ಷಿಸಿಕೊಳ್ಳಿ. ಆದಾಯದ ಸ್ವಲ್ಪ ಭಾಗವನ್ನು ಉಳಿಸಲು ಬೇಕಾದ ಚಿಂತನೆ ಇರಲಿದೆ. ಯಾವುದಾರೂ ಅಪ್ರಬುದ್ಧ ವಿವಾದಕ್ಕೆ ಸಿಲುಕಿಕೊಂಡು ಮನಸ್ತಾಪವಾಗುವುದು. ನಿಮ್ಮ ಮಕ್ಕಳ ಜೀವನವನ್ನು ಸುಧಾರಿಸಲು ನೀವು ಪ್ರಯತ್ನಿಸುತ್ತೀರಿ. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ. ನಿಮ್ಮ ಆಸೆಯೂ ಈಡೇರುತ್ತದೆ. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ನೀವು ಅಗತ್ಯ ಸಹಾಯವನ್ನು ಪಡೆಯುತ್ತೀರಿ.