Horoscope: ರಾಶಿಯವರಿಗೆ ಸಾಲ ಮಾಡವ ಸ್ಥಿತಿ ಬರಬಹುದು ಎಚ್ಚರ!
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ ಬುಧವಾರ ಆರ್ಥಿಕ ಹಿಂಜರಿಕೆ, ಉತ್ತಮ ಯೋಜನೆ, ಅಪಖ್ಯಾತಿ, ಸಣ್ಣ ಸೇವೆ, ಮಾತಿನ ಉಳಿವಿಗೆ ಹಠ ಇವೆಲ್ಲ ಇಂದಿನ ವಿಶೇಷ. ಗಣೇಶ ಚತುರ್ಥಿ ದಿನದಂದು ಯಾವೆಲ್ಲಾ ರಾಶಿಗಳ ಭವಿಷ್ಯ ಹೇಗಿರಲಿದೆ ಎಂದು ತಿಳಿಯಿರಿ.

ಬೆಂಗಳೂರು, ಆಗಸ್ಟ್ 27, ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರ ಮಾಸ : ಭಾದ್ರಪದ, ಸೌರ ಮಾಸ : ಸಿಂಹ, ಮಹಾನಕ್ಷತ್ರ : ಮಘಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಚತುರ್ಥೀ ನಿತ್ಯನಕ್ಷತ್ರ : ಚಿತ್ರಾ, ಯೋಗ : ಶಿವ, ಕರಣ : ವಣಿಜ, ಸೂರ್ಯೋದಯ – 06 – 21 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:34 – 14:07, ಗುಳಿಕ ಕಾಲ 11:01 – 12:34 ಯಮಗಂಡ ಕಾಲ 07:55 – 09:28
ಮೇಷ ರಾಶಿ: ಏನೂ ತೊಂದರೆ ಇಲ್ಲದೇ ಇರುವುದೂ ಕೆಲವೊಮ್ಮ ಆತಂಕಕ್ಕೆ ದಾರಿ ಮಾಡುವುದು. ಮಹಾ ಅನಾಹುತವನ್ನೂ ನೀವು ಮನಸ್ಸಿನಲ್ಲಿ ಭಾವಿಸುವಿರಿ. ಇಂದು ನೀವು ಎಲ್ಲ ಕಾರ್ಯವನ್ನೂ ಅಚ್ಚುಕಟ್ಟಾಗಿ ಮಾಡಲು ಬಯಸುವಿರಿ. ವಾದ ಮಾಡಿ ಗೆಲ್ಲುವುದಕ್ಕಿಂತ ವಾಸ್ತವವನ್ನು ಅರಿತು ಸುಮ್ಮನಾಗುವುದು ಉತ್ತಮ. ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ. ನಿಮ್ಮ ದಿನಚರಿಯನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವುದು ಉತ್ತಮ. ಎಂದಿನಂತೆ ನಿಮ್ಮ ನಿರೀಕ್ಷೆಯು ಸತ್ಯವಾಗದೇ ಇರಬಹುದು. ಹಗುರಾದ ಮನಸ್ಸಿನಿಂದ ಉತ್ಸಾಹವು ಅಧಿಕವಾಗುವುದು. ಹಳೆಯ ನೋವಿನಿಂದ ಪುನಃ ದುಃಖಿಸುವಿರಿ. ಇಂದು ನೀವು ನಿಯಮಗಳನ್ನು ಪಾಲಿಸಲು ಕಷ್ಟಪಡಬೇಕಾದಿಕತು. ಆರ್ಥಿಕ ಹಿಂಜರಿಕೆಯು ನಿಮಗೆ ಅರಗಿಸಿಕೊಳ್ಳದ ತುತ್ತಾಗಬಹುದು. ನಿಮ್ಮಿಂದಾಗದ ಕಾರ್ಯವನ್ನು ಯಾರಿಂದಲಾದರೂ ಮಾಡಿಸುವಿರಿ. ವ್ಯಕ್ತಿಗಳ ಮೇಲೆನಂಬಿಕೆಯನ್ನು ನೀವು ಕಳೆದುಕೊಳ್ಳುವಿರಿ. ಕೆಲಸಗಳು ಮಂದಗತಿಯಲ್ಲಿ ಸಾಗಲಿದೆ.
ವೃಷಭ ರಾಶಿ: ಬಂಧುಗಳಲ್ಲಿ ತರತಮ ಭಾವವನ್ನು ತೋರಿಸುವಿರಿ. ಇಂದು ನೀವು ಯಾರ ಮಾತನ್ನು ಒಪ್ಪಿದರೂ ನಿಮ್ಮ ಆಲೋಚನೆಯನ್ನು ಬದಲಾಯಿಸುವುದಿಲ್ಲ. ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು. ಆಕಸ್ಮಿಕ ಪ್ರಯಾಣವು ಬಂದಿದ್ದು, ಇದರಿಂದ ನಿಮಗೆ ಉದ್ಯೋಗದಲ್ಲಿ ತೊಂದರೆಯಾಗಬಹುದು. ಎಲ್ಲಿಗಾದರೂ ಪ್ರಯಾಣ ಮಾಡುವ ಉತ್ಸಾಹವಿರುವುದು. ಹಸಿದ ಹೊಟ್ಟೆಯನ್ನು ತಣಿಸಬಹುದು. ಅಸೂಯೆಯ ಹೊಟ್ಟೆಯನ್ನಲ್ಲ. ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರಿಸರವನ್ನು ಬದಲಿಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರವಿಲ್ಲದೇ ಇಂದು ನಿಮ್ಮ ಕೆಲಸವು ಆಗಲಿದೆ. ದೂರುಗಳು ನಿಮ್ಮನ್ನು ಜಾಗರೂಕಮಾಡಬಹುದು. ಸ್ನೇಹಿತರ ಜೊತೆ ಮನೋರಂಜನೆಯಲ್ಲಿ ಕಾಲವನ್ನು ಕಳೆಯುವಿರಿ. ನಿಮ್ಮ ಮಾನಸಿಕತೆಯನ್ನು ತಿಳಿಯಲು ಕಷ್ಟಪಡುವರು. ನಿಮ್ಮದಲ್ಲದ್ದನ್ನು ಇಷ್ಟಪಡುವುದು ಬೇಡ. ಪರರ ಭಾವನೆಗೆ ಅನಾದರ ತೋರುವುದು ಬೇಡ. ತೆರೆಯಲ್ಲಿರುವುದನ್ನು ಕಾಣಲು ಕಾಲದ ಪರದೆ ಸರಿಯಬೇಕು.
ಮಿಥುನ ರಾಶಿ: ನೈತಿಕತೆ ಇದ್ದರೆ ಆತ್ಮ ವಿಶ್ವಾಸ ತಾನಾಗಿ ಪ್ರಕಟವಾಗಲಿದೆ. ಇಂದು ತಂದೆಯು ಯಾವುದೋ ಕಾರ್ಯಕ್ಕೆ ನಿಮ್ಮಿಂದ ಧನವನ್ನು ನಿರೀಕ್ಷಿಸಬಹುದು. ಲೆಕ್ಕ ಶೋಧಕರಿಗೆ ಒತ್ತಡ ಹೆಚ್ಚು. ನಿಮ್ಮ ಪ್ರಯಾಣದಲ್ಲಿ ಕೆಲವು ತೊಂದರೆಗಳು ಆಗಬಹುದು. ನಿಮ್ಮವರ ಅನಾರೋಗ್ಯವನ್ನು ಸರಿಮಾಡಿಕೊಳ್ಳಲು ಓಡಾಟ ಮಾಡಬೇಕಾದೀತು. ಮಿತಿಯರಿತು ನೀವು ವ್ಯವಹರಿಸುವುದು ಮುಖ್ಯ. ಸಾಲ ಮಾಡವ ಸ್ಥಿತಿಯೂ ಬರಬಹುದು. ಶಿಸ್ತಿನ ಕೆಲಸಕ್ಕೆ ನಿಮ್ಮನ್ನು ಪ್ರಶಂಸಿಸಬಹುದು. ಜಾರಿ ಬೀಳುವಾಗ ನಿಮ್ಮನ್ನು ಕೈ ಹಿಡಿದು ತಡೆಯುವರು. ಅಧಿಕವೇತನವು ಸಿಗುವ ಕೆಲಸವನ್ನು ಅನ್ವೇಷಿಸುವಿರಿ. ಹಣದ ಹಿಂದೆ ಬಿದ್ದು, ನೀವು ಮಾಡಬಾರದ ಕೆಲಸಕ್ಕೆ ಕೈ ಹಾಕಬೇಕಾದೀತು. ಎಂದೋ ಆಡಿದ ಮಾತಿಗೆ ಇಂದು ಅನುಭವಿಸುವ ಸ್ಥಿತಿ ಬರಬಹುದು. ನಿಮ್ಮವರು ನಿಮ್ಮನ್ನು ನಿರ್ಲಕ್ಷಿಸಬಹುದು. ಯಾವುದೋ ಯೋಚನೆಯಲ್ಲಿ ನೀವು ಮಗ್ನರಾಗಿ ಚಿಂತೆಪಡುವ ಸಾಧ್ಯತೆ ಇದೆ. ಕೊಟ್ಟ ಹಣವನ್ನು ಹೊಂಪಡೆಯುವುದು ಕಷ್ಟ. ನಿಮ್ಮ ನೋವಿಗೆ ಯಾರಾದರೂ ಸ್ಪಂದಸುವರು.
ಕರ್ಕಾಟಕ ರಾಶಿ: ಧಾರ್ಮಿಕ ಮುಖಂಡರಿಗೆ ಆದಾಯದ ಮೂಲ ಹೆಚ್ಚಾಗುವುದು. ಇಂದು ನೀವು ಉದ್ಯೋಗದ ಕಾರಣಕ್ಕೆ ಬೇರೆ ಕಡೆಗೆ ಹೋಗುವಿರಿ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಸಂಪೂರ್ಣ ವಿಶ್ವಾಸ ಬರಬಹುದು. ನಿಮ್ಮ ನಡವಳಿಕೆಯಿಂದ ಮೇಲಧಿಕಾರಿಗಳಿಗೆ ಅಸಮಾಧಾನವಾಗಲಿದೆ. ತಪ್ಪಿಗೆ ಪಶ್ಚಾತ್ತಾಪವು ಸಣ್ಣ ಪ್ರಾಯಶ್ಚಿತ್ತವಾಗುವುದು. ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ. ನಿಮಗೆ ಕಷ್ಟವಾದ ವಿಚಾರಗಳನ್ನು ನೀವು ತಪ್ಪಿಸಿಕೊಳ್ಳಲು ಪ್ರಯತ್ನಿಸುವಿರಿ. ನಿಮ್ಮನ್ನು ನೀವು ಅಲ್ಪರೆಂದು ಭಾವಿಸುವಿರಿ. ಮನಸ್ಸು ಭಾರವಾಗಿದ್ದು ಎಲ್ಲದರಿಂದ ದೂರವಿರಲು ಇಚ್ಛಿಸುವಿರಿ. ಎಲ್ಲದಕ್ಕೂ ಭಯವಾಗಲಿದೆ. ನಿಮ್ಮ ಮಾತುಗಳಿಗೆ ಅಪಾರ್ಥವು ಬಂದು ಅಪವಾದವೂ ಕೇಳಿ ಬರಬಲಿದೆ. ಅನಿರೀಕ್ಷಿತ ವಾರ್ತೆಯನ್ನು ನೀವು ಕೇಳುವಿರಿ. ನಿಮ್ಮ ಆತಂಕವನ್ನು ಇನ್ನೊಬ್ಬರ ಬಳಿ ಹೇಳಿಕೊಳ್ಳುವಿರಿ. ಕಾರ್ಯದ ಒತ್ತಡದಿಂದ ಮನಸ್ಸು ಭಾರವಾಗಲಿದೆ. ಸ್ಥಾನವನ್ನು ಬಯಸಿ ನೀವು ಇಂದು ಕೆಲಸವನ್ನು ಮಾಡುವಿರಿ. ಸಮಾರಂಭಗಳು ಇಂದು ನಿಮಗೆ ಸಪ್ಪೆ ಅನ್ನಿಸಬಹುದು.
ಸಿಂಹ ರಾಶಿ: ನಿಮ್ಮ ಕಾರ್ಯಕ್ರಮಕ್ಕೆ ಅನ್ಯರ ಸಹಯೋಗವನ್ನು ಅಪೇಕ್ಷಿಸುವಿರಿ. ಇಂದು ಉದ್ಯೋಗದಲ್ಲಿ ನಿಮಗೆ ಬದಲಾವಣೆ ಬೇಕು ಎಂದು ಎನಿಸುವುದು. ದೊಡ್ಡ ಸ್ಥಾನದಲ್ಲಿದ್ದು ಸಣ್ಣ ಮನಸ್ಸು ಮಾಡುವುದು ಬೇಡ. ಅಪರಿಚಿತ ದೂರವಾಣಿಯ ಕರೆಯಿಂದ ನಿಮಗೆ ಲಾಭವಾಗುವುದು. ವಿಜ್ಞಾನದ ವಿದ್ಯಾರ್ಥಿಗಳಿಗೆ ಸ್ವಲ್ಪ ಹಿನ್ನಡೆ ಎನಿಸಬಹುದು. ಸಂಗಾತಿಯನ್ನು ಮಾತನಾಡಿಸಲು ಹೋಗಿ ಅವರ ಜೊತೆ ಕಲಹವಾಡಿ ಬರುವಿರಿ. ನೀವು ಇಷ್ಟ ಬಂದಕಡೆ ತೆರಳುವಿರಿ. ಉದ್ಯಮದ ಆರಂಭದಲ್ಲಿ ಕೆಲವು ನಷ್ಟಗಳು ಸಹಜ. ಅಲ್ಲಿಂದ ಪಾಠವೇ ಸಿಗುವುದು, ಹಣವಲ್ಲ. ದೇವಾಲಯದಲ್ಲಿ ಸ್ವಲ್ಪ ಕಾಲ ಕಳೆದು ಬರುವ ಮನಸ್ಸಾಗಲಿದೆ. ವಿದ್ಯಾರ್ಥಿಗಳು ಒಮ್ಮನಸ್ಸಿನಿಂದ ಓದಲು ಕುಳಿತುಕೊಳ್ಳುವುದು ಅವಶ್ಯಕ. ಹಳೆಯ ಸ್ನೇಹಿತರು ಅಕಸ್ಮಾತ್ ಸಿಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಯಾವುದನ್ನೂ ಪೂರ್ಣವಾಗಿ ಒಪ್ಪಲಾರಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಲೆಕ್ಕಪತ್ರದ ವ್ಯವಹಾರದಲ್ಲಿ ಉದ್ವೇಗ ಬೇಡ.
ಕನ್ಯಾ ರಾಶಿ: ಕಡಿಮೆ ಸಮಯದಲ್ಲಿ ಹೆಚ್ಚು ಕೆಲಸದ ಐಡಿಯಾಗಳನ್ನು ಪಡೆದು ಉದ್ಯಮದಲ್ಲಿ ತರಲು ನೋಡುವಿರಿ. ನೌಕರರಿಗೂ ಅದನ್ನು ಹೇಳುವಿರಿ. ಇಂದು ನೀವು ದಾಂಪತ್ಯದಲ್ಲಿ ಕಲಹ ಸಹಜವೆಂದು ಸುಮ್ಮನಿರಬೇಡಿ. ಗ್ರಾಹಕರ ಬೇಡಿಕೆಯನ್ನು ಈಡೇರಿಸುವಿರಿ. ನಿಮ್ಮ ಪ್ರಯತ್ನಕ್ಕೆ ಪ್ರತಿಫಲವು ಸಿಗಬೇಕೆಂದು ನೀವು ಅಂದುಕೊಳ್ಳುವುದು ಸರಿಯಾಗದು. ನಿಮ್ಮವರಲ್ಲದವರ ಮೇಲೆ ದ್ವೇಷವನ್ನು ಬೆಳೆಸಿಕೊಳ್ಳುವುದು ಬೇಡ. ಯಾರಿಂದಲಾದರೂ ನಿಮಗೆ ಜಟಿಲ ಸಮಸ್ಯೆಗೆ ಪರಿಹಾರ ಲಭ್ಯವಾಗುವುದು. ನಿಮ್ಮ ಇಂದಿನ ಮಾತಿನಿಂದ ಕುಟುಂಬದಲ್ಲಿ ಉಂಟಾಗುವ ಕಲಹವನ್ನು ತಪ್ಪಿಸಬಹುದು. ಆಪ್ತರನ್ನು ಕಳೆದುಕೊಂಡ ಸುದ್ದಿಯು ನಿಮಗೆ ದುಃಖವನ್ನು ತರಬಹುದು. ಗೌರವವನ್ನು ಪಡೆಯುವುದಕ್ಕಿಂತ ಉಳಿಸಿಕೊಳ್ಳುವುದು ಕಷ್ಟ. ನಿಮ್ಮ ಏರು ದನಿ ಹಲವು ಮಾನಸಿಕ ಒಡಕುಗಳನ್ನು ಮುಚ್ಚಿಹಾಕುವುದು. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ.




