AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 14 April: ಈ ರಾಶಿಯವರು ತಮ್ಮವರ ಬಗ್ಗೆ ಸರಿಯಾದ ಗಮನ‌ ಕೊಡರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ, ಸೋಮವಾರ ಒತ್ತಾಯದಿಂದ ಕೆಲಸ, ಅನಪೇಕ್ಷಿತರ ಜೊತೆ ಮಾತು, ಮಿತ್ರರ ಜೊತೆ ಯಾತ್ರೆ ಇವೆಲ್ಲ ಈ ದಿನ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 14 April: ಈ ರಾಶಿಯವರು ತಮ್ಮವರ ಬಗ್ಗೆ ಸರಿಯಾದ ಗಮನ‌ ಕೊಡರು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 14, 2025 | 1:05 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ – 06 – 20 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:54 – 09:27, ಯಮಘಂಡ ಕಾಲ 10:59 – 12:33, ಗುಳಿಕ ಕಾಲ 14:06 – 15:39

ಮೇಷ ರಾಶಿ: ಯಾರದೋ ನೋವಿಗೆ ಸ್ಪಂದಿಸುವ ನೀವು ಮನೆಯವರ ಬಗ್ಗೆ ಭಾವನೆ ಇಲ್ಲ ಎಂಬುದನ್ನು ಆಪ್ತರಿಂದ ಹೇಳಿಸಿಕೊಳ್ಳುವಿರಿ. ಯಾರ ಮಾತುಗಳೂ ನಿಮಗೆ ಪಥ್ಯವಾದೀತು. ದ್ವಂದ್ವ ನಿಲುವನ್ನು ನೀವು ಸರಿ ಮಾಡಿಕೊಳ್ಳುವ ಅವಶ್ಯಕತೆ ಇರುವುದು. ಸದುಪಯೋಗ ಮಾಡಿಕೊಳ್ಳುವತ್ತ ಗಮನವಿರಲಿ. ತಾಯಿಯ ಕಡೆಯಿಂದ ನಿಮಗೆ ಸಹಾಯವು ಸಿಗಬಹುದು. ಇಂದು ನಿಮ್ಮ ಜೀವನಕ್ಕೆ ಅವಶ್ಯಕವಾದ ವಸ್ತುವನ್ನು ಪಡೆಯಲು ಅಸತ್ಯವನ್ನು ಹೇಳುವಿರಿ. ಅಲ್ಪಾವಧಿಯ ಹೂಡಕೆಯಿಂದ ಅಲ್ಪ ಲಾಭ. ಇಂದು ನಿಮ್ಮ ತಂತ್ರಗಾರಿಕೆಯು ಫಲಿಸಬಹುದು. ಉದ್ಯಮವನ್ನು ಮಿತಿಮೀರಿದ ನಿರೀಕ್ಷೆಯಲ್ಲಿ ಮುಂದುವರಿಯುವುದು ಬೇಡ. ಸ್ಥಿರಾಸ್ತಿಗೆ ಹಣವನ್ನು ಹಾಕುವಿರಿ. ವಿಶ್ವಾಸದಲ್ಲಿ‌ ಕೊರತೆ ಇರದು. ವ್ಯಾಪಾರದ ಕೆಲವು ನಿರ್ಧಾರಗಳಿಗೆ ಅಪರಿಚಿತರಿಂದ ಸಲಹೆಯು ಸಿಗುವುದು. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ಕೆಲಸವನ್ನು ಇಂದು ಮನಸ್ಸಿನಿಂದ ಮಾಡಿ.

ವೃಷಭ ರಾಶಿ: ವಹಿಸಿಕೊಂಡ ವ್ಯವಹಾರದಲ್ಲಿ ಅಪಸವ್ಯದ ಕಾರ್ಯದ ಬೇಡ. ಸಮಸ್ಯೆಗೆ ಪರಿಹಾರವೆಂದು ಇನ್ನಷ್ಟು ಸಮಸ್ಯೆಯನ್ನು ಮಾಡಬಹುದು. ಆದರೆ ನಿಮ್ಮ ನಿರ್ಧಾರವು ಅಚಲವಾಗಿರಲಿ. ರಾಜಕಾರಣಿಗಳ ಭೇಟಿಯಾಗಿ ಜೀವನದಲ್ಲಿ ಹೊಸ ಮಾರ್ಗವನ್ನು ತುಳಿಯುವ ಅವಕಾಶ ನಿಮಗೆ ಸಿಗಲಿದೆ. ದೂರ ಪ್ರಯಾಣದಿಂದ ಪ್ರಯಾಸ. ಅನಾರೋಗ್ಯಕ್ಕೆ ಕಾರಣ. ಮನಸ್ಸು ಶುದ್ಧವಾಗಿದ್ದು ಪುರುಷಪ್ರಯತ್ನವೇ ಶ್ರೇಷ್ಠ ಎಂದು ನಂಬುವವರು ಇಂದು ನೀವಾಗುವಿರಿ. ಸ್ಥಿರಾಸ್ತಿಗೆ ಸಂಬಂಧಿಸಿದ ಕೌಟುಂಬಿಕ ವಿವಾದವನ್ನು ಮುಕ್ತಾಯ ಮಾಡಿಕೊಳ್ಳುವುದು ಉತ್ತಮ. ನೀವು ಹಳೆಯ ಸ್ನೇಹವು ಪುನಃ ನವೀಕರಣವಾಗುಉದು. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ. ಮಿತ್ರರ ನಡುವೆ ವೈಮನಸ್ಯ ಬರಬಹುದು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಫಲರಾಗುವಿರಿ. ಯಾರನ್ನಾದರೂ ವೃಥಾ ಸಂಶಯಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ತೊಡಗುವಿಕೆ, ಮನಸ್ಸಿಗೆ ಅಲ್ಪ ಶಾಂತತೆ. ತಾಯಿಯ ಕಡೆಯಿಂದ ಲಾಭದ ಭರವಸೆ ಇರುತ್ತದೆ. ವಿವಾಹದ ಸಂಬಂಧವನ್ನು ನೀವು ತಳ್ಳಿಹಾಕುವಿರಿ.

ಮಿಥುನ ರಾಶಿ: ಕೈಯಲ್ಲಿ ದುಡ್ಡು ನಿಲ್ಲದು ಎಂಬ ಆತಂಕ ಬೇಡ. ತೆಗೆಯಲು ಕಷ್ಟವಾಗುವ ರೀತಿಯಲ್ಲಿ ಭದ್ರವಾಗಿ ಇರಿಸಿ. ಇನ್ನೊಬ್ಬರ ಗೋಜಿಗೆ ಹೋಗದೇ, ನಿಮ್ಮ ಗೋಜಿಗೆ ಬಂದವರನ್ನು ಸುಮ್ಮನೆ‌ ಬಿಡುವ ಛಾತಿ ನಿಮ್ಮದಾಗಿರದು. ಎಲ್ಲರ ಜೊತೆ ಪ್ರೀತಿಯಿಂದ ಇರುವ, ವರ್ತಿಸುವ ಗುಣ ನಿಮ್ಮದು. ಅತಿಥಿಗಳಿಗೆ ಊಟೋಪಾಚರದಲ್ಲಿ ಗಮನ ಕೊಡುವಿರಿ. ಸಹಾಯವನ್ನು ಪಡೆದುಕೊಂಡವರ ಭೇಟಿಯಾಗಲಿದೆ. ಅವರಿಂದ ಗೌರವವಾದರು ಸಿಗಲಿವೆ. ಸಾಕಷ್ಟು ಸಂಪತ್ತು ಇದ್ದರೂ, ಕುಟುಂಬದಲ್ಲಿ ಸ್ವಲ್ಪ ಅಶಾಂತಿ ಇರುತ್ತದೆ. ಸ್ವಂತಕ್ಕೆ ಪ್ರಯೋಜನವಿಲ್ಲದ ಯಾವ ಕಾರ್ಯವನ್ನೂ ನೀವು ಮಾಡಲಾರಿರಿ. ಕೋಪಗೊಂಡು ಇಡೀ ದಿನವನ್ನು ಹಾಳುಮಾಡಿಕೊಳ್ಳುವಿರಿ. ನಿಮಗೆ ಬರಬೇಕಾದ ಹಣವು ನಿಮ್ಮ ಕೈಗೆ ಸಿಗದು. ವಾಹನ ದುರಸ್ತಿಯಿಂದ ಧನನಷ್ಟ ಮತ್ತು ವಾಹನ ಮೇಲಿನ ನಂಬಿಕೆ ಹೋಗುವುದು. ಯಾರೆದುರೂ ನಿಮ್ಮ ಪರಾಕ್ರಮವನ್ನು ಪ್ರದರ್ಶಿಸುವುದು ಬೇಡ. ಸ್ನೇಹಿತರ ಸಹಕಾರವು ನಿಮಗೆ ಸಾಕು ಎನಿಸಬಹುದು.

ಕರ್ಕಾಟಕ ರಾಶಿ: ದೊಡ್ಡ ಕಾಮಗಾರಿಗಳನ್ನು ಮಾಡಿಸುವ ಜವಾಬ್ದಾರಿ ನಿಮ್ಮ ಮೇಲೆ ಬರುವುದು. ಇಂದು ಪ್ರಯಾಣದ ಆಯಾಸವು ಆಲಸ್ಯಕ್ಕೆ ಕಾರಣವಾಗುವುದು. ಮಾತನ್ನು ಆಡುವಾಗ ಎಚ್ಚರವಿರಲಿ. ಬೇರೆಯವರ ನಾಶವನ್ನು ಮಾಡಲು ಹೋಗಿ ನಿಮ್ಮದೇ ಯಶಸ್ಸು ನಾಶವಾಗಬಹುದು. ಎಲ್ಲವನ್ನೂ ನೀವು ಲಾಭದಾಯಕವನ್ನಾಗಿ ಮಾಡಿಕೊಳ್ಳುವಿರಿ. ಏನನ್ನಾದರೂ ಜನಬಲದ ಮೂಲಕ ಸಾಧಿಸುವುದು ಸುಲಭ. ಇಂದು ನಿಮ್ಮವರ ಬಗ್ಗೆಯೇ ಯೋಚಿಸಲು ಸಮಯ ಸಿಗದು. ದಿನದ ಆರಂಭವು ಬಹಳ ಉತ್ಸಾಹದಿಂದ ಇರಲಿದ್ದು ಎಲ್ಲ ಜೊತೆ ಸೌಹಾರ್ದವಾಗಿ ಇರುವಿರಿ. ನಿಮಗೆ ಸಿಕ್ಕ ಜವಾಬ್ದಾರಿಯಲ್ಲಿ ಪೂರ್ಣ ತೃಪ್ತಿ ಇರದು. ಯಾರ ಜೊತೆಯಾದರೂ ಬೆರೆಯಬೇಕು ಅನ್ನಿಸುವುದು. ನಿಮ್ಮ ಓದಿನ ದಾಖಲೆಗಳು ಕಾಣೆಯಾಗಬಹುದು. ಸಮಾಧಾನದ ಮನಃಸ್ಥಿತಿಯು ಉಂಟಾಗುವುದು. ಸಮಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಆರ್ಥಿಕ ವಿಷಯಗಳಲ್ಲಿ ಪ್ರಯೋಜನವಿದೆ ಮತ್ತು ನಿಮ್ಮ ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ಉತ್ಸಾಹವು ಹೆಚ್ಚಾಗುತ್ತದೆ

ಸಿಂಹ ರಾಶಿ: ಆಲಸ್ಯವೂ ನಿಮಗೆ ವರವಾಗಿ ಬರುವ ಸಾಧ್ಯತೆ ಇದೆ. ಇಂದು ನಿಮ್ಮ ಭೂಮಿಯ ವ್ಯವಹಾರದಲ್ಲಿ ಕುದುರಬಹುದು. ಹೊಸ ಉತ್ಸಾಹದ ದಿನವಾಗಿ ಇರಲಿದೆ. ಮಕ್ಕಳು ಎಲ್ಲಿಗೆ ಹೋಗುತ್ತಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಗಮನವಿರಲಿ. ಅನಿರೀಕ್ಷಿತ ಹಣದ ವ್ಯಯದಿಂದ ಚಂಚಲರಾಗುವಿರಿ. ಮೊದಲ ವೇತನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಉತ್ಸಾಹಕ್ಕೆ ಬರುವ ಅಡ್ಡಿಗಳನ್ನು ನೀವು ಸಹಿಸಲಾರಿರಿ. ನಿಮ್ಮ ಮೇಲಿನ ಪ್ರಕರಣಗಳು ಒಂದೊಂದಾಗಿ ಬಗೆಹರಿಯುವುದು. ಈ ಕಾರಣಕ್ಕೆ ನಿಮಗೆ ಕೆಲಸದ ಪ್ರದೇಶದಲ್ಲಿ ಅಸ್ಥಿರತೆ ಇರುತ್ತದೆ. ಸಮಯದೊಂದಿಗೆ ಚಲಿಸುವ ಮೂಲಕ ನೀವು ಪ್ರಗತಿ ಹೊಂದುತ್ತೀರಿ. ಮಿತ್ರರ ಜೊತೆ ಪ್ರವಾಸ ಹೋಗಬಹುದು. ಹಿರಿಯರಿಂದ ನಿರೀಕ್ಷಿತ ಲಾಭವು ಸಿಗಲಿದ್ದು ಸಂತೋಷವಾಗುವುದು. ಕಾರ್ಯ ವಿಳಂಬಕ್ಕೆ ಚಿಂತಿಸಿದೇ ಅದಕ್ಕೆ ಯೋಗ್ಯವಾದ ನ್ಯಾಯವನ್ನು ಒದಗಿಸಿ. ಮನೆಯ ನಿರ್ಮಾಣದ ಯೋಜನೆಯನ್ನು ರೂಪಿಸುವಿರಿ. ಆಕಸ್ಮಿಕ ಸುದ್ದಿಯಿಂದ ದುಃಖಿಸಬೇಕಾದೀತು. ದಾಂಪತ್ಯ ಸುಖವು ಹೆಚ್ಚಾಗುವುದು. ಸಂಕೀರ್ಣ ಕಾರ್ಯಗಳನ್ನು ಸರಳ ಮಾಡಿಕೊಂಡು ಕಾರ್ಯಗತಗೊಳಿಸಲಾಗುವುದು.

ಕನ್ಯಾ ರಾಶಿ: ನಿಮ್ಮ ನೋವಿಗೆ ನೀವೇ ಖೆಡ್ಡ ತೋಡಿಕೊಳ್ಳುವುದು ಬೇಡ. ಸಂಸಾರದ ತಲೆಬಿಸಿಗಳು ಶಾಶ್ವತವಲ್ಲ ಎಂಬುದು ಗೊತ್ತಾಗಲಿದೆ. ಇಂದು ನಿಮ್ಮ ಅಚಾತುರ್ಯದಿಂದ ವ್ಯಾಪಾರದಲ್ಲಿ ನಷ್ಟವಾಗುವ ಸಾಧ್ಯತೆ ಇದೆ. ಅವಮಾನದವನ್ನು ನೀವು ಅನುಭವಿಸುವ ಪ್ರಸಂಗವು ಎದುರಾಗಲಿದೆ. ಸಂಗಾತಿಯ ಮುನಿಸಿಗೆ ನೀವು ಆಹಾರವಾಗುವಿರಿ. ಹೆಚ್ಚು ಲಾಭ ಪಡೆಯಲು ಹೋಗಿ ಯಾರಿಗಾದರೂ ಸಿಕ್ಕಿಹಾಕಿಕೊಳ್ಳುವಿರಿ. ಉದ್ಯೋಗದಲ್ಲಿ ಅಕಸ್ಮಾತ್ ಬದಲಾವಣೆಗಳು ಆಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ಅನುಮಾನದ ಬುದ್ಧಿಯಿಂದಲೇ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಈ ಸಂದರ್ಭದಲ್ಲಿ ಮರುಮಾತನಾಡದೇ ಇರುವುದು ಒಳ್ಳೆಯದು. ಕೆಲವು‌ ನಿಮಿಷಗಳಲ್ಲಿ ಇದು ಸರಿಯಾಗಲಿದೆ. ವಿವೇಚನಾ ರಾಹಿತ್ಯವೇ ನಿಮಗ ವಿದ್ಯಾರ್ಥಿಗಳು ಓದಿನಲ್ಲಿ‌ ಮನಸ್ಸನ್ನು ಇಡಬಹುದು. ಪಿರ್ತಾರ್ಜಿತ ಆಸ್ತಿಯನ್ನು ಗೊಂದಲಗಳು ಇರಬಹುದು. ವೃತ್ತಿ ಮತ್ತು ಆರ್ಥಿಕ ವಿಷಯಗಳಲ್ಲಿ ಇಂದು ಶುಭಕರವಾಗಿದ್ದು ಅಹಿತಕರ ವಾತಾವರಣಕ್ಕೆ ಆಸ್ಪದವನ್ನು ಕೊಡಲಾರಿರಿ.

ತುಲಾ ರಾಶಿ: ನಿಮ್ಮ ಸಾಧನೆಗೆ ಸಮಾಜದಿಂದ ಗೌರವ ಸಿಗಲಿದೆ. ಸೌಂದರ್ಯದ ಬಗ್ಗೆ ಅಧಿಕ ಅಭ್ಯಾಸ ಮಾನವಿರುವುದು. ಯಾರ ಭಾವನೆಗಳನ್ನು ಕ್ಷುಲ್ಲಕವಾಗಿ ಕಾಣುವುದು ಬೇಡ. ಸಂಪಾದನೆಗೆ ಉತ್ತಮಮಾರ್ಗವು ನಿಮಗೆ ಗೊತ್ತಾಗಲಿದೆ. ಕ್ರೀಡೆಗಳನ್ನು ಮನೋರಂಜನೆಗೆ ಆಡಿ, ದ್ವೇಷ ಅಸೂಯೆಗಳಿಗೆ ಅವಕಾಶ ಬೇಡ. ನಿಮ್ಮ ಕಾರ್ಯವನ್ನು ಕೆಲವರು ಆಡಿಕೊಳ್ಳಬಹುದು. ಸಂಗಾತಿಯ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ಇನ್ನೊಬ್ಬರ ವ್ಯಕ್ತಿತ್ವವನ್ನು ಅನುಕರಣೆ ಮಾಡುವಿರಿ. ನೌಕರರ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಮಂದಿರಗಳಿಗೆ ಭೇಟಿ ನೀಡಿ ಸ್ವಲ್ಪ ಸಮಯವನ್ನು ಅಲ್ಲಿ ಕಳೆದು ಬರುವುದು ಒಳಿತು. ಅಲ್ಲಿನ ಸಕಾರಾತ್ಮಕ ವಾತಾವರಣವು ನಿಮ್ಮ ಮನೋಬಲವನ್ನು ಹೆಚ್ಚಿಸುವುದು. ಕಛೇರಿಯ ಸ್ಥಳಾಂತರದಿಂದ ನಿಮ್ಮ ಓಡಾಟ ಕಷ್ಟ. ಇಂದು ಶುಭವನ್ನು ನೀವು ನಿರೀಕ್ಷಿಸಿದರೂ ನಿಮಗೆ ಹತಾಶೆಯು ಬರಬಹುದು. ಇಂದು ನೀವು ನಿಮ್ಮ ಕುಟುಂಬದ ಜೊತೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವಿರಿ. ಅನಪೇಕ್ಷಿತ ಚರ್ಚೆಯು ನಿಮ್ಮ ನೆಮ್ಮದಿಯನ್ನು ಹಾಳುಮಾಡೀತು.

ವೃಶ್ಚಿಕ ರಾಶಿ: ಸಾಹಿತ್ಯ ಲೋಕ ನಿಮ್ಮನ್ನು ಕರೆಯಬಹುದು. ಆಸಕ್ತಿ ಇದ್ದರೂ ತೊಡಗಿಕೊಳ್ಳುವ ಮುಜುಗರ. ಇಂದು ಯಾವುದಾದರೂ ಹೊಸ ವಿಚಾರಗಳು ನಿಮ್ಮ ಗಮನ ಸೆಳೆಯಬಹುದು. ಆನಾರೋಗ್ಯದಿಂದ ವ್ಯತ್ಯಾಸವಾದ ನಿಮ್ಮ ದೇಹ, ಮನಸ್ಸುಗಳು ಸ್ವಸ್ಥವಾಗುವ ಕಡೆಗೆ ಹೋಗುತ್ತಿವೆ. ಅಪ್ರಿಯಾವಾದ ಆಪಾದನೆಗಳು ಬರಬಹುದು. ಹಠದ ಸ್ವಭಾವವು ನಿಮ್ಮನ್ನು ಒಂಟಿಗನನ್ನಾಗಿ ಮಾಡುತ್ತದೆ‌. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ಪ್ರಯಾಣದ ಸಮಯದಲ್ಲಿ ನಿಮ್ಮ ವಸ್ತುಗಳು ಕಳೆದುಹೋಗಬಹುದು. ಆಭರಣ ಕೊಳ್ಳಲು ಉತ್ಸಾಹವಿದ್ದು ಹೂಡಕೆಯ ದೂರದೃಷ್ಟಿ ಉದ್ದೇಶವಾಗಿದೆ. ಉದ್ಯೋಗಿಗಳಿಗೆ ಉನ್ನತ ಪದವಿಗೆ ಆಹ್ವಾನ ಬರಬಹುದು. ಸಜ್ಜನರ ಸಂಯೋಗದಿಂದ ಮನಸ್ಸಿಗೆ ಸಂತೋಷವಾಗುತ್ತದೆ. ವ್ಯಾಪಾರ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಅನೇಕ ಅನುಭವಗಳನ್ನು ನೀವು ಪಡೆಯುತ್ತೀರಿ. ಪ್ರತಿಭೆಯ ಖ್ಯಾತಿಯನ್ನು ನೀವು ಪಡೆಯಬಹುದು.

ಧನು ರಾಶಿ: ಅನಧಿಕೃತ ವ್ಯವಹಾರದಿಂದ ತೊಂದರೆ. ಆರ್ಥಿಕ ನಷ್ಟವಾಗುವ ಸಾಧ್ಯತೆ ಇದೆ. ಆಗದವರನ್ನು ದ್ವೇಷಿಸುವ ಸ್ವಭಾವವು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ. ಇದು ನಿಮ್ಮನ್ನು ಉದ್ವೇಗಕ್ಕೆ ತಳ್ಳಬಹುದು. ಗೊತ್ತಿಲ್ಲದೇ ನಿಮ್ಮ ಸಮಯವು ವ್ಯರ್ಥವಾಗಬಹುದು. ವಿದೇಶದ ವ್ಯಕ್ತಿಗಳಿಂದ ತೊಂದರೆ. ಸಂಗಾತಿಯ ಜೊತೆಗೆ ಸಣ್ಣ ಕಲಹವು ಆಗಬಹುದು. ನಿಮ್ಮ ಭಾವನೆಗಳಿಗೆ ಬೆಲೆಯು ಇಲ್ಲದೇ ಹೋಗಬಹುದು. ಕೃಷಿಯಲ್ಲಿ ನೆಮ್ಮದಿಯನ್ನು ಕಾಣುವಿರಿ. ನೀವು ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಬರಬಹುದು. ಹೂಡಕೆಯ ಬಗ್ಗೆ ಕಲ್ಪನೇ ಇಲ್ಲದೇ ಅತಿಯಾಸೆಯಿಂದ ಧನನಷ್ಟ. ಕೆಲವು ಅಹಿತಕರ ಘಟನೆಯಿಂದ ಮನಸ್ಸು ಅತೃಪ್ತವಾಗಿರುತ್ತದೆ. ಸುಖ-ದುಃಖಗಳನ್ನು ಸಮಾನವಾಗಿ ಪರಿಗಣಿಸಿ, ಎಲ್ಲವನ್ನೂ ವಿಧಿಗೆ ಬಿಟ್ಟುಬಿಡಿ. ಉಚಿತ ಸಲಹೆಯನ್ನು ಯಾರಿಗೂ ನೀಡುವುದು ಬೇಡ. ನೀವೇ ಸಣ್ಣವರಾಗುವುದು. ನಿಮ್ಮ ಪಾಲಿನ ಕರ್ತವ್ಯಗಳನ್ನು ಮುಂದುವರಿಸಿ. ಪ್ರೇಮವು ವಿಪರೀತ ಹೊದಲದಲ್ಲಿ ಸಿಕ್ಕಿಕೊಂಡಿದ್ದು ಇದು ಅದೇ ಚಿಂತೆಯು ನಿಮ್ಮನ್ನು ಕಾಡುವುದು.

ಮಕರ ರಾಶಿ: ಎಂತಹ ತೊಂದರೆಗಳು ಬಂದರೂ ಮಾಡಬೇಕಾದುದನ್ನು ನಿಲ್ಲಿಸಲಾರಿರಿ. ಇಂದು ನಿಮಗೆ ನೀವು ದುರ್ಬಲರಂತೆ ಕಾಣಿಸಬಹುದು. ಅದಕ್ಕಾಗಿ ದೇಹವನ್ನು ದೃಢವಾಗಿಸಿಕೊಳ್ಳುವ ಕುರಿತು ಪ್ರಯತ್ನಿಸುವಿರಿ. ಸಾಲವನ್ನು ಮಾಡಿ ವಾಹನವನ್ನೋ, ಭೂಮಿಯನ್ನೋ, ಮನೆಯನ್ನೋ ಖರೀದಿಸಲು ಹೋಗಬೇಡಿ. ನಿಮ್ಮವರಿಗೆ ನಿಮ್ಮನ್ನು ನೋಡಿ ಮಾತನಾಡಬೇಕು ಎನ್ನಿಸಬಹುದು. ಅದಕ್ಕೆ ಇಲ್ಲವೆನ್ನಬೇಡಿ. ಸುರಕ್ಷತೆಯ ಗಮನಾಗಮನ ಇಂದು ಬಹಳ ಮುಖ್ಯ. ನಿಮಗೆ ಇಂದು ಗೌರವವನ್ನು ಪಡೆಯುವ ದಿನವಾಗಿರುತ್ತದೆ. ಎಲ್ಲವೂ ನಿಮಗೆ ಅನಿರೀಕ್ಷಿತವಾಗಿ ಘಟಿಸುವುದು. ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಯಾವುದೇ ತಪ್ಪು ನಿರ್ಧಾರ ತೆಗೆದುಕೊಂಡು ಕಷ್ಟಪಡುವಿರಿ. ಸಾಲ ಮಾಡುವ ವಿಚಾರವು ನಿಮಗೆ ಕಹಿಯಾಗಬಹುದು. ಯಾರ ಸಹಕಾರವೂ ನಿಮ್ಮನ್ನು ಏನೂ ಮಾಡಲಾಗದು. ಜೊತೆಗಾರರನ್ನು ಆತ್ಮೀಯವಾಗಿ ಕಾಣುವಿರಿ. ಕುಟುಂಬಕ್ಕೆ ನಿಮ್ಮಿಂದ ಆಗಬೇಕಾದ ಕಾರ್ಯಗಳ ಬಗ್ಗೆ ತಿಳಿದುಕೊಳ್ಳುವಿರಿ. ನಿಮ್ಮ ವಿದೇಶ ಪ್ರವಾಸವು ಕಾರಣಾಂತರಗಳಿಂದ ರದ್ದಾಗುವುದು. ನಿರೀಕ್ಷಿತ ಬಂಧುಗಳ ಆಗಮನದಿಂದ ಸಂತೋಷವಾಗುವುದು.

ಕುಂಭ ರಾಶಿ: ಕಾನೂನಾತ್ಮಕ ಹೋರಾಟದ ದಿಕ್ಕು ಬದಲು. ನ್ಯಾಯಸಮ್ಮತವಾದದನ್ನು ಮಾಡಲು ಹಲವರಿಂದ ಒತ್ತಡ. ಇಂದು ಕೆಲವು ವಿಚಾರಗಳು ಶತ್ರುಗಳು ರಾಜಿಯಾಗಲು ಬರಬಹುದು. ಹಿರಿಯರ ಮಧ್ಯಸ್ಥಿಕೆಯಲ್ಲಿ ಕಾರ್ಯವು ಮುನ್ನಡೆದರೆ ಸೊಗಸು. ನ್ಯಾಯಾಲಯದಲ್ಲಿ ವಾದ-ವಿವಾದಗಳನ್ನು ಮಾಡಲಿದ್ದೀರಿ. ದೂರಪ್ರಯಾಣವನ್ನು ಮಾಡಿ ಆಯಾಸಗೊಳ್ಳಬೇಡಿ. ಸ್ಥಿರಾಸ್ತಿಯ ಮಾಹಿತಿಯನ್ನು ಕೊಡಬೇಕಾಗುವುದು. ಎಲ್ಲರೂ ನಿಮ್ಮ ನಗುಮೊಗವನ್ನು ಕಂಡು ಖುಷಿಪಡಲಿದ್ದಾರೆ. ಇಂದಿನ‌ ನಿಮ್ಮ ಅತಿಯಾದ ಉತ್ಸಾಹ ಮತ್ತು ಆತುರವು ಕೆಲಸವನ್ನು ಹಾಳುಮಾಡಬಹುದು. ಅನಗತ್ಯ ಅನುಮಾನಗಳನ್ನು ತಪ್ಪಿಸಿ. ತಪ್ಪು ಮಾರ್ಗಗಳಿಂದ ಹಣ ಸಂಪಾದನೆಯು ಬೇಡ. ಸಂತೃಪ್ತಿಯಿಂದ ನೀವು ನಿಮ್ಮ ಹಳೆಯ ಎಲ್ಲವನ್ನೂ ಮರೆಯುವಿರಿ. ಹಣದ ಅನಿವಾರ್ಯತೆಯು ಬರಲಿದ್ದು, ಹೇಗೋ ಹೊಂದಿಕೆಯಾಗಲಿದೆ. ಸಂಗಾತಿಯ ಬಗ್ಗೆ ಪೂರ್ವಾಗ್ರಹವು ಇರುವ ಕಾರಣ ಯಾವ ಇಷ್ಟವಾಗದು.

ಮೀನ ರಾಶಿ: ನಿಮ್ಮ ವಾಸ್ತವಿಕತೆ ಬಹಿರಂಗವಾಗಿ ಅಪಮಾನವಾಗಬಹುದು. ಇಂದು ದಿನದ ಆರಂಭದಿಂದ ಅಂತ್ಯದವರೆಗೂ ಉತ್ಸಾಹದಿಂದಲೇ ಇರುವಿರಿ. ಗೊತ್ತಿಲ್ಲ ವಿಚಾರಗಳನ್ನು ಅನುಭವಿಗಳಿಂದ, ಹಿರಿಯರಿಂದ ತಿಳಿದುಕೊಳ್ಳುವಿರಿ. ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ. ಶ್ರಮದ ಫಲವನ್ನು ಉಣ್ಣುವ ಕಾಲ ಬಂದಿರುತ್ತದೆ. ಇಂದು ನೀವು ಅಪರಿಚಿತರಿಂದ ಬೆಂಬಲ ಪಡೆಯಬಹುದು. ಲಾಭದ ಹಾದಿಯು ಅಡ್ಡಿಯಿಂದ ಚಿಂತೆ ಕಾಡಬಹುದು. ನಿಮಗೆ ಸೋಲನ್ನು ಒಪ್ಪಿಕೊಳ್ಳಲು ಸಾಧ್ಯವಾಗದು. ಕಠಿಣ ಪರಿಶ್ರಮ ಅಗತ್ಯವಾಗಿ ಬೇಕಾಗುವುದು. ಕೆಲವು ಒಳ್ಳೆಯ ಸುದ್ದಿಗಳು ನಿಮ್ಮ ಉತ್ಸಾಹವನ್ನು ಹೆಚ್ಚಿಸುತ್ತವೆ. ನಿಮ್ಮ ಹೊಸ ಪ್ರಯತ್ನಕ್ಕೆ ಕುಟುಂಬದ ಬೆಂಬಲವು ಸಿಗುವುದು. ಅಲ್ಪಾವಧಿಯಲ್ಲಿ ಹೆಚ್ಚು ಪಡೆಯಬೇಕು ಎನ್ನುವ ಅತಿಯಾದ ಆಸೆ ಬೇಡ. ಸಂಗಾತಿಯ ಜೊತೆ ಕಲಹವಾಡಿ ಯಾವ ಕಾರ್ಯವನ್ನೂ ಮಾಡಲು ಹೋಗುವುದು ಬೇಡ.

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ