AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 12 April: ಈ ರಾಶಿಯವರು ತನ್ನಂತೆ ಪರರನ್ನು ಬಗೆಯುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ, ಶನಿವಾರ ಅನಾರೋಗ್ಯದಿಂದ ಮನಸ್ಸು ಹಾಳು, ಪುಣ್ಯಕ್ಷೇತ್ರ ದರ್ಶನ, ಹೂಡಿಕೆಯ ಬಗ್ಗೆ ಅಪನಂಬಿಕೆ ಈ ದಿನದ್ದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 12 April: ಈ ರಾಶಿಯವರು ತನ್ನಂತೆ ಪರರನ್ನು ಬಗೆಯುವರು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 12, 2025 | 1:05 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ : ಶನಿವಾರ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ: ಧ್ರುವ, ಕರಣ : ಕೌಲವ, ಸೂರ್ಯೋದಯ – 06 : 21 am, ಸೂರ್ಯಾಸ್ತ – 06 : 44 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:28 – 11:01, ಯಮಘಂಡ ಕಾಲ 14:06 – 15:39, ಗುಳಿಕ ಕಾಲ 06:22 – 07:55

ಮೇಷ ರಾಶಿ: ಅನೇಕ ವರ್ಷಗಳ ನಿಮ್ಮ ಕಾರ್ಯಕ್ಕೆ ಜಯ. ನಿಮ್ಮಲ್ಲಿ ಕುಟುಂಬದಲ್ಲಿ ಸಂತೋಷದ ವಾತಾವರಣ. ಸ್ವಾರ್ಥಿಗಳ ಸಹವಾಸವು ನಿಮಗೆ ಬೇಡವೆನಿಸಬಹುದು. ನಿಮ್ಮನ್ನು ಯಾರಾದರೂ ಬಳಸಿಕೊಂಡು ಕೈಬಿಡಬಹುದು. ನಂಬಿಕೆಯನ್ನು ಪಡೆದ ಅನಂತರವೇ ಕಾರ್ಯದಲ್ಲಿ ಮುನ್ನಡೆಯಿರಿ. ಸಮಸ್ಯೆಗಳಿಗೆ ಸೊಪ್ಪು ಹಾಕಿದಷ್ಟೂ ದೊಡ್ಡದಾಗುತ್ತದೆ. ನಿಮ್ಮದಲ್ಲದ ಕೆಲಸವನ್ನು ನೀವೇ ಮಾಡಬೇಕಾಗಬಹುದು. ಮಕ್ಕಳ ಚಲನವಲನದ ಕಡೆಗೆ ಗಮನವಿರಲಿ. ಕುಟುಂಬದ ಜವಾಬ್ದಾರಿಯನ್ನು ಅನಿವಾರ್ಯ ಕಾರಣಕ್ಕೆ ಪಡೆಯಬೇಕಾದೀತು. ಮನೆಯನ್ನು ಸ್ಥಳಾಂತರ ಮಾಡುವಿರಿ. ಗುರಿಯನ್ನು ಸಾಧಿಸಿದ ಸಂಭ್ರಮವು ನಿಮಗೆ ಇರುವುದು. ಆಪ್ತರಿಗೆ ನಿಮ್ಮ ಮೇಲಿರುವ ಭಾವನೆಯು ಬದಲಾಗಬಹುದು. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಹಿನ್ನಡೆಯಾಗಬಹುದು. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ವಸ್ತು ಲಾಭದಿಂದ ಖುಷಿ ಪಡುವಿರಿ. ನಿಮ್ಮ ಉಪಕರಣಗಳು ದುರಸ್ತಿಗೆ ಬರಬಹುದು. ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ.

ವೃಷಭ ರಾಶಿ: ಸಕ್ಕರೆ ಇದ್ದಲ್ಲಿ ಇರುವೆಗಳು ಬಂದು ಮುತ್ತುತ್ತವೆ. ಒಳ್ಳೆಯ ಗುಣದ ಕಡೆಗೆ ಒಳ್ಳೆಯವರು ಕೆಟ್ಟವರು ಇಬ್ಬರೂ ಬರಬಹುದು. ಪುಣ್ಯಸ್ಥಳಗಳಿಂದ ನಿಮಗೆ ನೆಮ್ಮದಿ ಸಿಗಲಿದೆ. ಇತ್ತೀಚೆಗೆ ನಡೆದ ಘಟನೆಗಳು ನಿಮ್ಮನ್ನು ಕಾಡಲಿದೆ. ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ವ್ಯಾಪರದ ವಿಚಾರದಲ್ಲಿ ಸಹಭಾಗಿಯ ಜೊತೆ ಮಾತನಾಡಿ ಮುಂದಡಿಯಿಡಿ. ನಿಮಗೆ ಸಿಕ್ಕ ಗೌರವವನ್ನು ಬೇರೆಯವರಿಗೆ ಬಿಟ್ಟುಕೊಡುವಿರಿ. ಅಪರಿಚಿತ ಕ್ಷೇತ್ರಕ್ಕೆ ಮುಂದಡಿಯಿಡುವಾಗ ಜಾಗರೂಕತೆ ಇರಲಿ. ನಿಮ್ಮ ವಸ್ತುವಿಗಾದ ತೊಂದರೆಗೆ ಪರಿಹಾರವನ್ನು ಕೇಳುವಿರಿ. ದೊಡ್ಡ ಯೋಜನೆಯು ಚೆನ್ನಾಗಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಆಗದು. ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಅವಕಾಶ ಸಿಗಬಹುದು. ವಿದೇಶದಲ್ಲಿ ವಾಸಿಸುವವರಿಂದ ಶುಭವಾರ್ತೆ ಸಿಗುವುದು. ನಿಯಮ‌ಪಾಲನೆಯಲ್ಲಿ ನೀವು ನಿಸ್ಸೀಮರು. ಅನಾದರದಿಂದ ನಿಮಗೆ ಬೇಸರವಾದೀತು. ಎಲ್ಲ ಸಮಸ್ಯೆಯೂ ನಿಮ್ಮದೇ ಎಂಬಂತೆ ಇರುವಿರಿ.

ಮಿಥುನ ರಾಶಿ: ಪರಿಣಿತರು ನಿಮ್ಮನ್ನು ಅಳೆಯುವರು. ಇಂದು ನಿಮಗೆ ಶ್ರಮಕ್ಕೆ ಯೋಗ್ಯವಾದ ಫಲವು ಸಿಗದೇ ಬೇಸರಬರಬಹುದು. ಕೃಷಿಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಬಯಸುತ್ತೀರಿ. ನಿಮ್ಮ ಸ್ವಂತ ವಾಹನದಲ್ಲಿ ಇಂದು ಎಲ್ಲಿಗೂ ಪ್ರಯಾಣ ಮಾಡಬೇಡಿ. ಹಿರಿಯರ, ತಜ್ಞರ ಮಾತುಗಳು ನಿಮಗೆ ನಿಮ್ಮ ಬಹುದಿನದಿಂದ ಬೆಳವಣಿಗೆ ಕಾಣದ ಯೋಜನೆಯೊಂದು ಆರಂಭವಾಗುತ್ತದೆ. ಉದ್ಯೋಗದ ವಿಚಾರದಲ್ಲಿ ಪ್ರಭಾವಿಗಳಿಂ ಒತ್ತಡ ಬರಲಿದೆ. ವೃತ್ತಿಯಲ್ಲಿ ನಿಮ್ಮನ್ನು ಸೋಲಿಸಬಹುದು. ಮಕ್ಕಳ ಜೊತೆ ಖುಷಿಯಿಂದ ಕಳೆಯಿರಿ. ಚಿಂತನಾತ್ಮಕ ಕೆಲಸದಲ್ಲಿ ನೀವು ಆಸಕ್ತಿ ಹೊಂದಿರುತ್ತೀರಿ. ಹೊಸ ವ್ಯವಹಾರದ ಪ್ರಸ್ತಾಪವು ನಿಮಗೆ ಒಪ್ಪಿಗೆ ಆದೀತು. ನೀವು ಪಾಲುದಾರಿಕೆಯಲ್ಲಿಯೇ ಇರಲು ಇಷ್ಟಪಡುವಿರಿ. ಪುಣ್ಯಕ್ಷೇತ್ರದ ದರ್ಶನವನ್ನು ಮಾಡಿ. ಮಿತವಾದ ಮಾತು ನಿಮಗೆ ಆಗದು. ಹೊಸತನಕ್ಕೆ ತೆರೆದುಕೊಳ್ಳುವ ಅಗತ್ಯತೆಯು ಇದೆ. ಭೂವ್ಯವಹಾರದ ಪ್ರಸ್ತಾಪವು ಕುಟುಂಬದಲ್ಲಿ ನಡೆಯಬಹುದು. ಆರೋಪಮುಕ್ತದಿಂದ ಮನಸ್ಸು ಹಗುರ. ಸ್ಥಿರಾಸ್ತಿಯ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳುವಿರಿ.

ಕರ್ಕಾಟಕ ರಾಶಿ: ಅಪರಿಚಿತರು ನಿಮ್ಮಮೇಲೆ ಒಂದು ದೃಷ್ಟಿ ಇಡುವರು. ಸಾಲಬಾಧೆಯು ನಿಮಗೆ ಕಿರಿಕಿರಿ ಕೊಡಬಹುದು. ಯಾರ ಮಾತಿನ ಮೇಲೂ ಪೂರ್ವಾಗ್ರಹಸಿಂದ ಪೀಡಿತರಾದವರ ಮನಃಸ್ಥಿತಿಯನ್ನು ಇರಿಸಿಕೊಳ್ಳಬೇಡಿ‌. ಹಣಕಾಸಿನ ವಿಚಾರದಲ್ಲಿ ವಂಚನೆ ಸಾಧ್ಯವಾಗಬಹುದು. ಕರೆ ಸಂದೇಶಗಳಿಗೆ ಪ್ರತ್ಯುತ್ತರ ಬೇಡ. ಅಧ್ಯಾತ್ಮದಲ್ಲಿ ಒಲವು ಮೂಡಬಹುದು. ಬಂಧುಗಳ ಜೊತೆ ನಿಮ್ಮ ಹೊಂದಾಣಿಕೆ ಕಷತಡವಾಗಬಹುದು. ಅದನ್ನೇ ಗಟ್ಟಿಗೊಳಿಸಿಕೊಂಡು ಮುನ್ನಡೆಯಿರಿ. ಅನೇಕ ಉತ್ತಮಮಾರ್ಗಗಳು ತೆರೆದುಕೊಳ್ಳಬಹುದು. ಅಪಾಯವು ನಿಮ್ಮ ಕಡೆಗೆ ತಿರುಗೀತು. ಕ್ರಿಯಾ ಶೀಲತೆಯನ್ನು ನೀವು ಬಿಟ್ಟಿರುವುದು ನಿಮ್ಮ ಮನಸ್ಸಿಗೆ ಬರಲಿದೆ. ಭೂಮಿಯ ವ್ಯವಹಾರಕ್ಕೆ ಸಂಬಂಧಿಸಿದಂತೆ ದಂಡ ಬರಹುದು.‌ ನೂತನ ವಸ್ತುಗಳಿಂದ ನಿಮಗೆ ಇಂದು ಸಂತೋಷವು ಸಿಗುವುದು. ನಿಮ್ಮ ಅತಿಯಾದ ಆತ್ಮವಿಶ್ವಾಸವೂ ನಿಮಗೇ ತೊಂದರೆಯನ್ನು ಉಂಟುಮಾಡೀತು. ಎಲ್ಲರಿಂದ ಹೇಳಿಸಿಕೊಳ್ಳುಬಿರಿ. ಅಚಾತುರ್ಯದಿಂದ ಆದ ತಪ್ಪನ್ನು ನೀವು ಸರಿ ಮಾಡಲು ಪ್ರಯತ್ನಿಸುವಿರಿ. ನಿಮ್ಮಲ್ಲಿ ಸಮೃದ್ಧಿಯು ಇರಲಿದೆ. ಸಮಾರಂಭಗಳಲ್ಲಿ ಬಂಧುಗಳು ನಿಮ್ಮನ್ನು ಭೇಟಿಯಾಗುವರು.

ಸಿಂಹ ರಾಶಿ: ನೀರಿನ ವಿಚಾರದಲ್ಲಿ ಎಚ್ವರಿಕೆ ಇರಲಿ. ನೀವು ಹಾಸಿಗೆ ಇದ್ದಷ್ಟು ಕಾಲು ಚಾಚುವುದು. ದೊಡ್ಡ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಕೈಗೆಟಕುದ ಯಾವುದಕ್ಕೂ ನಿಮ್ಮ ಪ್ರಯತ್ನವನ್ನು ಮಾಡುವುದು ಬೇಡ. ವಿವಾಹ ನಡೆದು ಇಂದು ವಾರ್ಷಿಕೋತ್ಸವ ಮಾಡಿಕೊಳ್ಳುತ್ತ ಹಳೆಯದನ್ನು ನೆನೆಸಿಕೊಳ್ಳುವಿರಿ. ಇಂದು ಮೋಸಮಾಡುವ ಮನಸ್ಸುಳ್ಳವರಾಗಿರುತ್ತೀರಿ. ನಿಮ್ಮ ವಿರೋಧಿಗಳಗೆ ಮಾತಿನಿಂದ ಉತ್ತರಿಸಿ ಉಪಯೋಗವಿಲ್ಲ. ಮನೆಯಿಂದ ನಿಮಗೆ ಶುಭಸಂದೇಶದ ಆಗಮನವಾಗಲಿದೆ. ಉದ್ಯಮಕ್ಕೆ ವಿದೇಶದ ಸಹಕಾರ ಸಿಕ್ಕಿದ್ದು, ಇನ್ನಷ್ಟು ಉತ್ಸಾಹ ಬರವುದು. ಸಹೋದ್ಯೋಗಿಗಳ ಬೆಂಬಲವು ಉದ್ಯೋಗದಲ್ಲಿ ಸಿಗಲಿದೆ. ತಮಾಷೆಯಾಗಿ ಕಂಡರೂ ಮುಂದೆ ತಿರುಗುಬಾಣವಾಗಿ ಬರಲಿದೆ. ಇಂದು ನೀವು ವಹಿಸಿಕೊಂಡ ಜವಾಬ್ದಾರಿಯನ್ನು ಇನ್ನೊಬ್ಬರಿಗೆ ನೀಡುವಿರಿ. ಹೊಸ ಪರಿಚಯದವರ ಜೊತೆ ವೃತ್ತಿಯನ್ನು ಮಾಡಬೇಕಾದೀತು. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಅಧಿಕವಾಗುವುದು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು.

ಕನ್ಯಾ ರಾಶಿ: ನಿಮ್ಮನ್ನು ಮೊದಲು ಸರಿಮಾಡಿಕೊಳ್ಳಲು ಪ್ರಯತ್ನಿಸಿ. ಅನಂತರ ಇನ್ನೊಬ್ಬರನ್ನು ಸರಿ ಮಾಡುವುದು. ಇಂದು ನಿಮ್ಮ ಬೆಂಬಲಕ್ಕೆ ಯಾರೂ ಬಾರದೇ ನಿಮ್ಮ ಮಂಡನೆಯು ವ್ಯರ್ಥವಾದೀತು. ಉತ್ತಮ‌ ವಸ್ತುಗಳಿಗೆ ಒಳ್ಳೆಯ ಮಾರುಕಟ್ಟೆ ಲಭ್ಯವಾಗಲಿದೆ. ಅದನ್ನು ಮಾಡುವ ಬಗ್ಗೆ ಉದ್ಯಮದಲ್ಲಿ ಚಿಂತನೆ. ಸರಿಯಾದ ಮಾಹಿತಿ ಪಡೆದು ಹೂಡಿಕೆ ಮಾಡಿ. ಯಾರ ಒತ್ತಾಯಕ್ಕೂ ಮಣಿಯಬೇಡಿ. ಪ್ರಭಾವಿಗಳ ವ್ಯಕ್ತಿತ್ವವು ನಿಮಗೆ ಅನುಸರೀಣಯವಾಗಬಹುದು. ಮಕ್ಕಳ ಪ್ರೀತಿಯನ್ನು ಪಡೆದುಕೊಳ್ಳುವಿರಿ. ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು. ಸಂಗಾತಿಯ ಪ್ರೀತಿಯನ್ನು ನೀವು ಅರಗಿಸಿಕೊಳ್ಳಲಾರಿರಿ. ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ‌. ಕುಟುಂಬದವರ ಜೊತೆ ಸಂತೋಷದಿಂದ ದಿನವನ್ನು ಕಳೆಯುವಿರಿ. ನಿಮ್ಮ ಪ್ರಮಾಣಿಕತೆಯೇ ನಿಮಗೆ ಮುಳ್ಳಾಗಬಹುದು. ನಿಷ್ಠೆಯಿಂದ ಕೆಲಸವನ್ನು ಮಾಡುವ ನಿಮಗೆ ಕಛೇರಿಯಲ್ಲಿ ಶುಭಸುದ್ದಿ ಇರಲಿದೆ. ಸ್ಥಾನವನ್ನು ನೀವು ಬಿಟ್ಟುಕೊಡುವುದು ಬೇಡ. ನಿಮ್ಮ ಗಮನವು ಇಂದು ದಾನ ಕಾರ್ಯಗಳ ಕಡೆ ಇರುವುದು. ಕೌಟುಂಬಿಕ ವಿಷಯಗಳಲ್ಲಿ, ನೀವು ಬಾಹ್ಯ ವ್ಯಕ್ತಿಯನ್ನು ಸಂಪರ್ಕಿಸುವುದು ಬೇಡ.

ತುಲಾ ರಾಶಿ: ಮಧ್ಯವರ್ತಿಗಳಿಗೆ ಆರ್ಥಿಕ ತೊಂದರೆ. ನ್ಯಾಯಕ್ಕಾಗಿ ತಂತ್ರಗಾರಿಕೆ ಮಾಡುವರು. ಬಹಳ ದಿನಗಳ ಅನಂತರ ನಿಮ್ಮ ಹಳೆಯ ಶತ್ರುವಿನ ಭೇಟಿಯಾಗಬಹುದು. ನೀವು ಏನೂ ಗೊತ್ತಿಲ್ಲದವರಂತೆ ವರ್ತಿಸುವಿರಿ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಮನಸ್ಸಿದ್ದರೂ ದೇಹವು ಅದಕ್ಕೆ ಸಹಕರಿಸದೇ ಇರಬಹುದು. ನ್ಯಾಯಾಲಯದಿಂದ ಸಿಕ್ಕ ತೀರ್ಪು ನಿಮಗೆ ಸಂತೋಷಕೊಡುವುದು. ಭವಿಷ್ಯದ ಆರ್ಥಿಕತೆಯ ಚಿಂತನೆಯನ್ನು ನಡಸುವಿರಿ. ಸಂಗಾತಿಯ ಜೊತೆ ಶೀತಲಸಮರವು ನಡೆಯಬಹುದು. ನೀವು ಅಧ್ಯಾತ್ಮದಲ್ಲಿ ಹೆಚ್ಚು ಆಸಕ್ತಿಯನ್ನು ತೋರಿಸುವಿರಿ. ತಂದೆ ಮಕ್ಕಳ ಜೊತೆ ಆರ್ಥಿಕತೆಯ ವಿಷಯಕ್ಕೆ ಕಲಹ. ಹಿರಿಯರ ಮಾರ್ಗದರ್ಶನದಲ್ಲಿ ನೀವು ಮುಂದುವರಿಯಿರಿ. ಅನಿರೀಕ್ಷತ ಸಂಕಟಕ್ಕೆ ಹಣದ ಕೊರತೆ ಕಾಣಿಸುವುದು. ಅದನ್ನು ಹೊಂದಿಸುವುದು ಕಷ್ಟವಾದೀತು. ವಾಗ್ವಾದವಾಗುವುದೆಂಬ ಭಯವೂ ನಿಮ್ಮನ್ನು ಕಾಡುವುದು. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು. ಆಪ್ತರೊಂದಿಗೆ ನೀವು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ.

ವೃಶ್ಚಿಕ ರಾಶಿ: ನಿಮಗೆ ಯಾವುದಾದರೂ ಒಂದು ರೀತಿಯಲ್ಲಿ ಬಂಧನವಾಗಬಹುದು. ಮಾತಿನಿಂದಲೂ ಕಟ್ಟಿಹಾಕುಬರು. ಸಹನಯೇ ನಿಮ್ಮ ಎಲ್ಲ ಕಾರ್ಯಗಳನ್ನು ಸಕ್ಷಮವಾಗಿ ಕರೆದೊಯ್ಯುವುದಾಗಿದೆ. ಸ್ನೇಹಿತರು ನಿಮಗೆ ಉತ್ತಮ ಕೆಲಸ ಹಾಗು ಸಂಬಳದ ಸ್ಥಳವನ್ನು ತಿಳಿಸಬಹುದು. ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನವು ವ್ಯರ್ಥವೇ ಸರಿ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸವನ್ನು ಮಾಡಿ. ವಿದೇಶ ಪ್ರವಾಸ ದಾಖಲೆಗಳ ಕೊರೆತೆಯಿಂದ ಸ್ಥಗತಿವಾಗಲಿದೆ. ಯಾರಿಗೂ ಭರವಸೆಯನ್ನು ನೀಡಲು ಹೋಗಬೇಡಿ. ಸಂಗತಿಯ ಜೊತೆ ಈ ದಿನವನ್ನು ಆನಂದದಿಂದ ಕಳೆಯಿರಿ. ನಿಮ್ಮ ಹಳೆಯ ಪ್ರತಿಜ್ಞೆಯನ್ನು ಇಂದು ಪೂರ್ಣ ಮಾಡಿದ ಸಂತೋಷವು ಇರುವುದು. ನಿಮ್ಮವರೇ ನಿಮ್ಮ ಗೆಲುವನ್ನು ಕಸಿದುಕೊಳ್ಳಬಹುದು. ವಿವಾಹದ ಸುಖದಲ್ಲಿ ನೀವಿರುವಿರಿ. ಆರ್ಥಿಕ ವಿಚಾರಕ್ಕೆ ಯಾರಾದರೂ ಮಧ್ಯ ಪ್ರವೇಶಿಸುವುದರಿಂದ ಸಿಟ್ಟಾಗುವಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ಹಳೆಯ ಯೋಜನೆಗಳಿಗೆ ಮರುಜೀವ ಕೊಡುವಿರಿ. ಸಾಮಾಜಿಕ ಸೇವೆಗೆ ಪ್ರಶಂಸೆ.

ಧನು ರಾಶಿ: ಅತಿಯಾದ ಯೋಚನೆಯಿಂದ ಹೊಸ ಸಮಸ್ಯೆಗಳೇ ಹುಟ್ಟುವುದು. ಕಣ್ಮುಚ್ಚಿ ಕುಳಿತರೆ ಕಾಣಬೇಕಾದುದೂ ಕಾಣದು. ಇತರರು ನಿಮ್ಮ ಬಗ್ಗೆ ಸಕಾರಾತ್ಮವಾಗಿ ಹೇಳಿದರೂ ನಂಬುವ ಮಾನಸಿಕತೆ ನಿಮ್ಮಲ್ಲಿ ಇರುವುದಿಲ್ಲ. ಕುಟುಂಬದ ಕಾಳಜಿಯೇ ನಿಮ್ಮೆದುರು ಮತ್ತೆ ಮತ್ತೆ ಬರಬಹುದು. ಸಜ್ಜನರ ಸಹವಾಸವನ್ನು ದುರಪಯೋಗ ಮಾಡಿಕೊಳ್ಳುವಿರಿ. ಅನ್ಯಚಿಂತೆಯಿಂದ ಕೆಲಸಗಳು ಹಾಗೆಯೇ ಉಳಿದಿರಬಹುದು. ಇಂದು ನೀವು ಕೆಲವು ವಿಷಯಗಳನ್ನು ರಹಸ್ಯವಾಗಿ ಇಡಬೇಕಾಗುತ್ತದೆ. ಸುಮ್ಮನೇ ಯಾರದೋ ಸಲಹೆಯನ್ನು ಅನುಸರಿಸುವುದರಿಂದ ಅರ್ಥವಿಲ್ಲ. ನಾಯಕತ್ವ ಕೌಶಲ್ಯಗಳು ಇತರರಿಗೆ ಗೊತ್ತಾಗುವುದು. ಸಾರ್ವಜನಿಕ ಮನ್ನಣೆಯನ್ನು ಗಳಿಸವಿರಿ. ಉದ್ಯಮದ ವಿಸ್ತರಣೆಗೆ ನಿಮ್ಮ ಕ್ರಮವು ಯಶಸ್ವಿಯಾಗುವುದು. ಭರವಸೆಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಪ್ರಯತ್ನಿಸಿ. ದಾಂಪತ್ಯ ಜೀವನದಲ್ಲಿ ಮಾಧುರ್ಯವಿರುತ್ತದೆ ಮತ್ತು ಕುಟುಂಬ ಸಂಬಂಧಗಳಿಗೆ ಪ್ರಾಮುಖ್ಯವನ್ನು ನೀಡುತ್ತದೆ. ಭೂಮಿಯ ಲಾಭಕ್ಕಾಗಿ ಓಡಾಟವನ್ನು ಮಾಡಬೇಕಾದೀತು. ಒಂದು ರೀತಿಯಲ್ಲಿ ನಿಮಗೆ ಆತಂಕದ ದಿನವೂ ಇದಾಗಬಹುದು.

ಮಕರ ರಾಶಿ: ಬುದ್ಧಿವಂತರಂತೆ ಯೋಚಿಸಿ ದಡ್ಡರಾಗುವಿರಿ. ನಿಮ್ಮ ಯೋಜನೆಯನ್ನು ಪುನಃ ಗುರಿಯ ಕಡೆಗೆ ತಂದು ನಿಲ್ಲಿಸಿ.‌ ನಿಮ್ಮ ಹೂಡಿಕೆ ವಿಚಾರವನ್ನು ರಹಸ್ಯವಾಗಿ ಇಡುವಿರಿ. ಇದನ್ನು ಯಾರಿಗೂ ತಿಳಿಸಲು ಇಷ್ಟಪಡುವುದಿಲ್ಲ. ನಿಮ್ಮನ್ನು ಇಷ್ಟಪಟ್ಟವರಿಗೆ ಇಂದು ನಿಮ್ಮಿಂದ‌ ಅಸಮಾಧಾನವಾಗುವ ಸಾಧ್ಯತೆ ಇದೆ. ಯಾವುದಾರೂ ಸ್ಪರ್ಧೆಯಲ್ಲಿ ಭಾಗವಹಿಸುವುದಿದ್ದರೆ ಇಂದು ಜಯ ನಿಮ್ಮದೇ. ಎಲ್ಲದಕ್ಕೂ ಹೊಂದಾಣಿಕೆ ಮಾಡಿಕೊಂಡು ಬೇಸರವಾಗಿದ್ದರೂ ಅದನ್ನು ಮಾಡಿಕೊಳ್ಳದೇ ವಿಧಿಯಿಲ್ಲ. ನಿಮ್ಮ ಅಗತ್ಯ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳಬಹುದು. ನೀವು ಧರ್ಮ ಕಾರ್ಯಗಳಲ್ಲಿ ಮುನ್ನಡೆಯುವುದು ಉತ್ತಮ. ಮಕ್ಕಳಿಗೆ ನೀವು ಆದರ್ಶರಾಗುವಿರಿ. ಹಿರಿಯ ಸದಸ್ಯರಿಗೆ ನಿಮ್ಮ ಸಹಕಾರವು ಇರಲಿದೆ. ನೆರಮನೆಯವರ ಜೊತೆ ಭೂಮಿಯ ವಿಚಾರಕ್ಕೆ ವಾಗ್ವಾದವು ಆಗಬಹುದು. ಗೃಹನಿರ್ಮಾಣದ ದಾಖಲೆ ಪಡೆಯಲು ನೀವು ಓಡಾಟ ಮಾಡಬೇಕಾಗುವುದು. ಕೃಷಿಯಲ್ಲಿ ಲಾಭ ಗಳಿಸಬೇಕೆಂದು ನಾನಾ ಪ್ರಯತ್ನವನ್ನು ಮಾಡುವಿರಿ. ಇಂದಿನ ಆದಾಯಕ್ಕೆ ತಕ್ಕಂತೆ ಖರ್ಚೂ ಇರಲಿದೆ.

ಕುಂಭ ರಾಶಿ: ನಿಮ್ಮನ್ನು ನಂಬಿದವರಿಗೆ ನಂಬಿಕೆ ಬರುವಂತೆ ಕೆಲಸವನ್ನು ಮಾಡಿ. ಹಣದ ತೊಂದರೆ ಎದ್ದು ಕಾಣಿಸುತ್ತದೆ. ಇದರಿಂದ ಚಿಂತೆಯೂ ಆಗಬಹುದು. ಮನೆಯವರ ಸಹಾಯವು ಅನಿವಾರ್ಯವಾದರೆ ಸಿಗಲಿದೆ. ಉತ್ತಮವಾದ ಅಭ್ಯಾಸವನ್ನು ಆರಂಭಿಸಲು ಸಕಲ. ಉತ್ಸಾಹಕ್ಕೆ ಭಂಗವಾಗುವ ಯಾವ ವಿಚಾರಗಳೂ ಇಂದ ಆಗದು.‌ ನಿಶ್ಚಿಂತೆಯಿಂದ ಇರಬಹುದು. ಗೆಳಯರ ಜೊತೆ ಕಳೆದ ದಿನಗಳನ್ನು ನೆನಪಿಸಿಕೊಂಡು ಖುಷಿಪಡುವಿರಿ. ಅವಸರದಲ್ಲಿ ಯಾವುದೇ ಕಾರ್ಯವನ್ನು ಮಾಡುವುದು ಬೇಡ. ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ನಿಮ್ಮ ಆದಾಯವನ್ನು ಹೆಚ್ಚಿಸುವ ಪ್ರಯತ್ನಗಳು ಪೂರ್ಣವಾಗಿ ಸಫಲವಾಗದು. ನೀವು ಸ್ನೇಹಿತರು ಮತ್ತು ಸಹೋದ್ಯೋಗಿಗಳಿಂದ ಹಣಕಾಸಿನ ಬೆಂಬಲವನ್ನು ಪಡೆಯುತ್ತೀರಿ. ಕಾರ್ಯಕ್ಷೇತ್ರದಲ್ಲಿ, ನೀವು ಬಯಸಿದ ಕೆಲಸವನ್ನು ಮಾಡುವಿರಿ. ನೀವು ಶುಭ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುತ್ತೀರಿ. ಕಾರ್ಯನಿರ್ವಹಣೆಗೆ ಪ್ರಶಂಸೆಯು ಸಿಗಲಿದೆ. ಗ್ರಾಹಕರಿಂದ ಮೋಸ ಹೋಗಬೇಕಾದೀತು.

ಮೀನ ರಾಶಿ: ಇಂದು ನಿರೀಕ್ಷಿತ ವಾರ್ತೆಯಿಂದ ನಿಮಗೆ ಸಂತೋಷವಿದೆ. ವಿನಾಕಾರಣ ಖರ್ಚನ್ನು ಹೆಚ್ಚು ಮಾಡಿಕೊಳ್ಳುವಿರಿ. ಕೆಲಸಗಳನ್ನು ಮುಂದೂಡುವ ಮನಃಸ್ಥಿತಿಯನ್ನು ಹೊಂದಿದ್ದೀರಿ. ಮಾತುಗಳನ್ನು ಆಡುವಾಗ ಗಮನವಿರಲಿ. ಸ್ನೇಹಿತರ ಬೆಂಬಲವು ನಿಮಗೆ ಅಗತ್ಯವಾಗಿ ಸಿಗಲಿದೆ. ಕೆಲವು ಅಪರಿಚಿತರ ಜೊತೆ ನೀವು ಎಚ್ಚರಿಕೆಯಿಂದ ಇರುವುದು ಮುಖ್ಯವಾಗಲಿ. ಬಹುಕಾಲದಿಂದ ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸುವ ದಿನವಾಗಿದೆ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದಿಂದ ಪ್ರಯೋಜನವುದೆ. ಸಂಗಾತಿಯ ಮಾತುಗಳಿಂದ ಮನೋಬಲವು ಹೆಚ್ಚಾಗುವುದು. ನಿರ್ಮಾಣ ಕಾರ್ಯದ ಅಗತ್ಯವನ್ನು ಪೂರೈಸುವಿರಿ. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ. ಮಕ್ಕಳು ನಿಮ್ಮ ಜೊತೆ ವಾಗ್ವಾದ ಬರಬಹುದು. ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು.

ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ
ಕದನ ವಿರಾಮ ಉಲ್ಲಂಘಿಸಿದ ಪಾಕ್​ಗೆ ವಾಟಾಳ್ ನಾಗರಾಜ್​ ಖಡಕ್ ಕ್ಲಾಸ್
ಕದನ ವಿರಾಮ ಉಲ್ಲಂಘಿಸಿದ ಪಾಕ್​ಗೆ ವಾಟಾಳ್ ನಾಗರಾಜ್​ ಖಡಕ್ ಕ್ಲಾಸ್