AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 13 April: ಈ ರಾಶಿಯವರು ಸಂಗಾತಿಯ ಇಂಗಿತವನ್ನು ಅರಿತುಕೊಳ್ಳುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ಪ್ರತಿಪತ್ ತಿಥಿ, ಭಾನುವಾರ ವಿದೇಶ ಗಮನ, ಯೋಜನೆಯ ನಿರೀಕ್ಷೆ, ಅಧಿಕಾರಕ್ಕೆ ಪ್ರಯತ್ನ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 13 April: ಈ ರಾಶಿಯವರು ಸಂಗಾತಿಯ ಇಂಗಿತವನ್ನು ಅರಿತುಕೊಳ್ಳುವರು
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 13, 2025 | 1:41 AM

ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ : ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ : ಹಸ್ತಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ – 06:21 am, ಸೂರ್ಯಾಸ್ತ – 06:45 pm, ಇಂದಿನ ಶುಭಾಶುಭಕಾಲ: ರಾಹು ಕಾಲ 17:12 – 18:45, ಯಮಘಂಡ ಕಾಲ 12:33 – 14:06, ಗುಳಿಕ ಕಾಲ 15:39 – 17:12

ಮೇಷ ರಾಶಿ: ನಿಮ್ಮ ಯೋಜನೆ ನಿರೀಕ್ಷಿಸದ ರೀತಿಯಲ್ಲಿ ಅಂತ್ಯವಾಗಲಿದೆ. ಇಂದಿನ‌ ನಿಮ್ಮ ಅವಸರವಸರದ ಕಾರ್ಯಗಳಿಂದ ಯಾವುದೂ ಪೂರ್ಣವಾಗದು. ನಿಮ್ಮ ಮೈಂಡ್ ಹಲವು ಕಡೆಗಳಲ್ಲಿ ಓಡುತ್ತಿರುವುದದಕ್ಕೆ ಹೀಗಾಗುವುದು. ವಿದೇಶದ ಮೋಹ ಕಡಿಮೆಯಾಗುವುದು. ಯಾವುದಾದರೂ ದುರ್ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಮಾಡದೇ ಉಳಿದ ಕೆಲಸ ಕಾರ್ಯಗಳತ್ತ ಗಮನಹರಿಸಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ನಿಮ್ಮ ಅಧಿಕಾರದ ಆಸೆಗೆ ನೀರೆರೆಯಬಹುದು. ಮನೆಯರಿಂದ ಹೊಸ ಸ್ಥಳಕ್ಕೆ ಹೋಗಲು ಒಪ್ಪಿಗೆ ಸಿಗದೇಹೋಗಬಹುದು. ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ದೌರ್ಬಲ್ಯವನ್ನು ಹೇಳಿಕೊಂಡು ಪರಿಹಾರ ಕಂಡುಕೊಳ್ಳುವುದು ಉತ್ತಮ.ಯಾರನ್ನೂ ಸರಿಯಾಗಿ ಊಹಿಸಲಾರಿರಿ. ವಿಳಂಬವಾಗಿ ಬರುತ್ತದೆ ಎಂದುಕೊಂಡ ಹಣವು ಬೇಗ ನಿಮಗೆ ಬೇಗ ಸಿಗಬಹುದು. ನಿಮ್ಮ ನಿರ್ಧಾರವು ತೂಗುಕತ್ತಿಯಾಗಬಹುದು.

ವೃಷಭ ರಾಶಿ: ನಿಮ್ಮ ಯಾವ ಯೋಜನೆಗಳೂ ಹೊಂದಾಣಿಕೆಗೆ ಪೂರಕವಾಗದು. ಹೊಸತನ್ನು ಹುಡುಕಲು ಆರಂಭಿಸುವಿರಿ. ವೈಯಕ್ತಿಕ ವಿಚಾರಕ್ಕೆ ಅನ್ಯರು ಪ್ರವೇಶ ಮಾಡುವುದು ಸರಿಕಾಣದು. ಇಂದು ನಿಮಗೆ ಹಣಕಾಸಿನ ಹರಿವು ಹೆಚ್ಚಾಗುವುದರ ಜೊತೆಗೆ ಆತಂಕವೂ ಇರುವುದು. ಅತಿಯಾದ ಖರ್ಚುಗಳಿಂದ ಚಿಂತೆಯಿದ್ದು, ಬಹುಕಾಲದಿಂದ ಸಿಕ್ಕಿಹಾಕಿಕೊಂಡಿದ್ದ ಹಣ ಇಂದು ಮರಳಿ ಸಿಕ್ಕಿ ಸಮಾಧಾನವಾಗುವುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಮೋಸ ಹೋಗುವ ಸಾಧ್ಯತೆ ಇರುತ್ತದೆ. ಜಾಗರೂಕರಾಗಿರಿ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಯಾರದೋ ಮಾತನ್ನು ನಿಮಗೆಂದು ಭಾವಿಸಿ ಸಿಟ್ಟಾಗುವಿರಿ. ನಕಾರಾತ್ಮಕ ವಿಚಾರಗಳ ನಡೆಯೂ ನೀವು ಬಲವಾಗಿದ್ದರೆ ಅದು ವಿದ್ಯೆಯ ಕಾರಣದಿಂದ. ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಮಹಿಳೆಯರು ಅನುಕೂಲಕರ ಸನ್ನಿವೇಶವು ಇರುವುದನ್ನು ಬಳಸಿಕೊಳ್ಳುವರು.

ಮಿಥುನ ರಾಶಿ: ಒಪ್ಪಂದ ಅವಧಿ ಮುಕ್ತಾಯವಾಗಲಿದ್ದು ಕಾನೂನು ಕ್ರಮವನ್ನು ಜಾರಿಗೊಳಿಸುವಿರಿ. ನಂಬಿಕೆ ದ್ರೋಹದಿಂದ ನಿಮಗೆ ಬೇಸರವಾಗಲಿದೆ. ಸಹೋದರ ಜೊತೆ ನಿಮಗೆ ಯೋಗ್ಯ ಸಲಹೆಯು ಸಿಗಬಹುದು. ಇಂದು ಇತರರಿಂದ ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಉಂಟಾಗಬಹುದು. ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಉತ್ತಮವಾದ ಯೋಜನೆಗಳನ್ನು ರೂಪಿಸಿ. ಶೈಕ್ಷಣಿಕ ಕಾರ್ಯದಲ್ಲಿ ನೀವು ಅಡೆತಡೆಗಳನ್ನು ಎದುರಿಸಬಹುದು. ಭರವಸೆ ಮತ್ತು ಹತಾಶೆಯ ಭಾವನೆ ಇರುತ್ತದೆ. ಕೌಟುಂಬಿಕ ಜೀವನದಲ್ಲಿ ಸಂತೋಷ. ದೈವಭಕ್ತಿಯ ಕಡೆ ಮನಸ್ಸು ಸಾವಧನಾವಾಗಿ ಹೋಗುವುದು. ಅಭಿವೃದ್ಧಿಗೆ ಅವಕಾಶವಿದ್ದರೂ ನಿಮಗೆ ಹಿನ್ನಡೆಯಂತೆ ಎಲ್ಲವೂ ಭಾಸವಾಗುವುದು. ಶ್ರಮಕ್ಕೆ ತಕ್ಕ ಫಲವು ಲಭಿಸಿಲ್ಲ ಎಂದು ನಿಮ್ಮ ಮನಸ್ಸಿಗೆ ಗಾಢವಾಗಿ ತಿಳಿಯುವುದು. ಅತಿಯಾಗಿ ಯಾವುದನ್ನು ಮಾಡಲು ಹೋಗುವುದು ಬೇಡ. ಹೊಸ ಕಲಿಕೆಗೆ ಉತ್ಸಾಹ ಇರಲಿದ್ದು ಶ್ರದ್ಧೆಯಿಂದ ಅದನ್ನು ಅಭ್ಯಾಸ ಮಾಡುವಿರಿ. ನಿಮ್ಮ ತಮಾಷೆಯು ಇಷ್ಟವಾಗದೇ ಇರಬಹುದು.

ಕರ್ಕಾಟಕ ರಾಶಿ: ಮಕ್ಕಳು ತಮ್ಮ ಹಕ್ಕನ್ನು ಕೇಳಬಹುದು. ಅದರ ಬೇಸರವನ್ನು ಮತ್ತೆಲ್ಲಿಯಾದರೂ ಹೊರಹಾಕುವಿರಿ. ನಿಮ್ಮ ಆದಾಯದ ಮೂಲವನ್ನು ಸರಿಯಾಗಿ ಪರೀಕ್ಷಿಸಿಕೊಳ್ಳಿ. ನಿಮ್ಮ ವೇತನವನ್ನು ಪ್ರಯತ್ನಪೂರ್ವಕವಾಗಿ ಯಾರಾದರೂ ಕೇಳಬಹುದು. ನಿಮ್ಮನ್ನು ನೀವು ಪರಿಚಯ ಮಾಡಿಕೊಳ್ಳುವಿರಿ. ಸಿಕ್ಕ ಸಮಯವನ್ನು ಧಾರ್ಮಿಕ ಆಚರಣೆಗೆ ಮೀಸಲಿಡುವಿರಿ. ಕಛೇರಿಯ ಕಾರ್ಯಗಳನ್ನು ಮುಂದುವರಿಸಲು ನಿಮಗೆ ಆಗದು. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ. ನಿಮ್ಮ ನಿರುದ್ಯೋಗವು ಚಿಂತೆಯಾಗಿ ನಿಮ್ಮ ಬಗ್ಗೆಯೇ ನಿಮಗೆ ನಕಾರಾತ್ಮಕ ಭಾವ ಮೂಡುವುದು. ಯಾವುದೋ ಗಾಢವಾದ ಆಲೋಚನೆಯಲ್ಲಿ ಮುಳುಗಿರುವಿರಿ. ಸರ್ಕಾರದ ಸೌಲಭ್ಯ ಪಡೆಯಲು ಚಿಂತನೆ. ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಸರಳವಾದ ಕೆಲಸವನ್ನು ಮನಶ್ಚಾಂಚಲ್ಯದಿಂದ ಸಂಕೀರ್ಣ ಮಾಡಿಕೊಳ್ಳುವಿರಿ.

ಸಿಂಹ ರಾಶಿ: ನಿಮ್ಮ ಯೋಜನೆ ದಿಕ್ಕು ತಪ್ಪುವುದು, ಹತಾಶಭಾವದಿಂದ ಸಿಟ್ಟೂ ಬರಲಿದೆ. ಸಣ್ಣ ಮೊತ್ತವಾದರೂ ಅದನ್ನು ಉಳಿಸುವ ಬಗ್ಗೆ ಯೋಚಿಸುವಿರಿ‌. ಹಿತಶತ್ರುಗಳಿಂದ ಬೇಕಾದ ಮಾಹಿತಿಯು ಸಿಗಲಿದೆ. ಸಂಗಾತಿಯ ಬಗ್ಗೆ ಪ್ರೀತಿಯನ್ನು ಅನುಭವಿಸುವಿರಿ. ನಿಮಗೆ ಇಂದು ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ಚಿಂತೆಯಿಂದ ಆರೋಗ್ಯಕ್ಕೆ ತೊಂದರೆ. ಆಪ್ತರಿಂದ ನಿಮಗೆ ಏನಾದರೂ ಅಚ್ಚರಿಯ ಕೊಡುಗೆ ಸಿಗಲಿದೆ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಅದು ನಿಮಗೆ ಮುಳ್ಳಾಗಬಹುದು. ಎಲ್ಲದಕ್ಕೂ ಅತಿಯಾದ ತೊಂದರೆ ಇರುವಂತೆ ಅನ್ನಿಸಬಹುದು. ನಿಮ್ಮನ್ನು ಇನ್ನಷ್ಟು ಎತ್ತರಕ್ಕೆ ಏರಿಸಿಕೊಳ್ಳಲು ಪ್ರಯತ್ನ ನಡೆಯಲಿದೆ. ನಿಮ್ಮ ಅಂತರಂಗವನ್ನು ವ್ಯಕ್ತಪಡಿಸಲು ನಿಮಗೆ ಸೂಕ್ತ ಸಮಯವು ಲಭ್ಯವಾಗದೇ ಇರಬಹುದು. ಅಪರಿಚಿತರ ಬಗ್ಗೆ ಜಾಗರೂಕತೆ ಇರಲಿ. ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು.

ಕನ್ಯಾ ರಾಶಿ: ಹೊಸ ಕಾಮಗಾರಿಯ ಚಾಲನೆಗೆ ಬೇಕಾದ ಸಿದ್ಧತೆ ನಡೆಸುವಿರಿ. ನೀವು ಮಾಡದ ಕಾರ್ಯಗಳಿಗೆ ನಿಮ್ಮ ಹಣೆಪಟ್ಟಿ ಬೀಳಬಹುದು. ಅದನ್ನು ಎದುರಿಸುವ ಚಾಕಚಕ್ಯತೆ ನಿಮ್ಮದಾಗಲಿದೆ. ನೀವೇ ಇಂದು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ನಿಮ್ಮ ದುಃಸ್ಥಿಯನ್ನು ಬಳಸಿಕೊಳ್ಳುವರು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಪರರನ್ನೂ ನಿಮ್ಮಂತೆ ಕಾಣುವಿರಿ. ದೈಹಿಕ ಶ್ರಮದಿಂದ ಹೆಚ್ಚು ಆದಾಯ ಪಡೆಯುವಿರಿ. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಅಧಿಕಾರ ಹಸಿವನ್ನು ನೀಗಿಸಿಕೊಳ್ಳಲು ಅಶಕ್ತರನ್ನು ಕಳಸಿಕೊಳ್ಳುವಿರಿ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ.

ತುಲಾ ರಾಶಿ: ಅಪಮಾನ‌ ಮಾಡಲು ನಿಮ್ಮನ್ನೇ ಗುರಿಯಾಗಿಸಿಕೊಳ್ಳಬಹುದು. ಇಂದು ಧಾರ್ಮಿಕ ಕಾರ್ಯಗಳಿಗೆ ಸಮಯವನ್ನೂ ಬೇಕಾದ ವ್ಯವಸ್ಥೆಯನ್ನೂ ಮಾಡುವಿರಿ. ಪರೋಪಕಾರದಲ್ಲಿ ಆಸಕ್ತಿ ಹೆಚ್ಚಿದ್ದು ಇನ್ನೊಬ್ಬರನ್ನೂ ಇದಕ್ಕೆ ಪ್ರೇರಿಸುವಿರಿ. ಇಂದು ಏನಾದರೂ ಅಪ್ರಯೋಜನ ಎಂದನಿಸಿದ್ದನ್ನು ಮಾಡುವ ಮೊದಲು ಅದರ ಪರಿಣಾಮದ ಬಗ್ಗೆಯೂ ಆಲೋಚಿಸಿ. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಎಲೆಕ್ಟ್ರಾನಿಕ್ ವಿಚಾರದಲ್ಲಿ ನೀವು ಚಾಣಾಕ್ಷರು. ಹಿರಿಯರ ಸಲಹೆಯನ್ನು ಪಡೆಯುವುದು ನಿಮಗೆ ಅಪಮಾನದಂತೆ ಕಂಡೀತು. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ಮಹಿಳೆಯರು ವೃತ್ತಿಯನ್ನು ಛಲದಿಂದ ಸ್ವೀಕರಿಸುವರು. ನೀವು ನಿರಾಸೆ ಅನುಭವಿಸುತ್ತೀರಿ. ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ವಿಚಾರಗಳನ್ನು ಅಧ್ಯಯನ ಮಾಡುವಿರಿ. ಉಗುರಿನಿಂದ ಆಗುವ ಕಾರ್ಯಕ್ಕೆ ಕೊಡಲಿ ಏಟು ತರುವುದು ಉಚಿತವಲ್ಲ. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ಅಶಕ್ತರ ಸೇವೆಯಲ್ಲಿ ತೊಡಗಿಕೊಳ್ಳುವಿರಿ.

ವೃಶ್ಚಿಕ ರಾಶಿ: ತಾತ್ಕಾಲಿಕ ಹುದ್ದೆಯು ನಿಮಗೆ ಪ್ರಾಪ್ತವಾಗಲಿದೆ. ಸ್ವತಂತ್ರವಾಗಿರಲು ಇಚ್ಛಿಸುವಿರಿ. ನಿಮಗೆ ಲಾಭವಾಗುವ ಕೆಲವು ಕಾರ್ಯಗಳು ನಿಮಗೆ ಸಿಗಬಹುದು. ವಾಹನ ಸಂಚಾರದಲ್ಲಿ ವೇಗ. ತೊಂದರೆಯ ಮುನ್ಸೂಚನೆ ಇರುವುದು. ಸಂಗಾತಿಯನ್ನು ಹೊರಗೆ ಕರೆದುಕೊಂಡುಹೋಗುವ ಸಂದರ್ಭ ಬರುವುದು. ನಿಮ್ಮ ವೃತ್ತಿಯನ್ನು ಯಾರಾದರೂ ಅವಮಾನಿಸುವ ಸಾಧ್ಯತೆ ಇದೆ. ನಿಮ್ಮ ದುರಭ್ಯಾಸವು ಮಿತಿಮೀರಬಹುದು. ಕಛೇರಿಯಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ನಿಮ್ಮ ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ಹಿಂದೆ ಕೊಟ್ಟ ಸಾಲವು ಮರಳಿ ಬರುವ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಬಗ್ಗೆ ಊಹಾಪೋಹಗಳು ಹುಟ್ಟಿಕೊಳ್ಳುವ ಸಾಧ್ಯತೆ ಇದೆ. ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ.

ಧನು ರಾಶಿ: ಆರ್ಥಿಕ ವ್ಯವಹಾರಕ್ಕೆ ಪ್ರಶಂಸೆ ಸಿಗುವುದು. ಶಿಸ್ತನ್ನು ಕಾಪಾಡಿಕೊಳ್ಳುವುದೂ ಮುಖ್ಯ. ನಿಮ್ಮ ಕಾರ್ಯವನ್ನು ಕೆಲವು ಸಹೋದ್ಯೋಗಿಗಳೇ ಟೀಕಿಸಬಹುದು. ಇಂದು ಹೆಚ್ಚು ಸಮಯವು ಸಿಗುವ ಕಾರಣ ಇನ್ನೊಬ್ಬರ ಕುರಿತು ಹರಟೆ ಮಾಡುವಿರಿ. ನಿಮಗೆ ಇಂದು ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರವು ಗಟ್ಟಿತನ ಕೊಡಲಿದೆ. ಸಾಹಿತ್ಯ ಕ್ಷೇತ್ರದ ಕಡೆಗೆ ನಿಮ್ಮ ಗಮನ ಹೆಚ್ಚಾಗುವುದು. ಸಾಲವನ್ನು ಮರುಪಾವತಿ ಮಾಡದೇ ಇರುವ ನಿಮ್ಮ ಸಂಬಂಧಿಕರಿಗೆ ಇಂದು ಸಾಲ ಕೊಡಬಾರದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ಪ್ರತಿಕೂಲ ವಾತಾವರಣವನ್ನು ನಿಭಾಯಿಸುವ ಕಲೆಯನ್ನು ಗೊತ್ತುಮಾಡಿಕೊಳ್ಳುವಿರಿ. ನಿಮ್ಮನ್ನು ಬೆಂಬಲಸಿಸದವರಿಗೆ ಕೃತಜ್ಞತೆ ಇರಲಿ. ಹಳೆಯ ವಸ್ತುಗಳು ನಿಮಗೆ ಸಾಕೆನಿಸಬಹುದು. ಮಕ್ಕಳ ಭವಿಷ್ಯಕ್ಕೆ ಹಣವನ್ನು ಕೂಡಿಡಬೇಕಾಗುವುದು. ಸಾಲ ಕೊಟ್ಟವರು ನಿಮ್ಮನ್ನು ಇಂದು ಏನೂ ಕೇಳುವುದಿಲ್ಲ. ಮಕ್ಕಳು ನಿಮಗೆ ಬೇಕಾದ ಆರ್ಥಿಕ ನೆರವನ್ನು ಕೊಡುವರು.

ಮಕರ ರಾಶಿ: ಹೂಡಿಕೆಗೆ ತಪ್ಪಾದ ಮಾಹಿತಿ ಸಿಗವುದು. ಎಲ್ಲ ಕಡೆಗಳಿಂದ ತೊಂದರೆಯಾದಂತೆ ಅನ್ನಿಸೀತು. ಸಾಲದ ವಸೂಲಿಯನ್ನು ಬಹಳ ತಾಳ್ಮೆಯಿಂದ ಸಿಟ್ಟನ್ನೆಲ್ಲ ನಿಯಂತ್ರಣದಲ್ಲಿ ಇರಿಸಿಕೊಂಡು ಮಾಡಬೇಕಾಗುತ್ತದೆ. ಇಂದು‌ನೀವು ದೈಹಿಕ ಸೌಕರ್ಯವನ್ನು ಇಷ್ಟಪಡುವಿರಿ. ಯಾರಮೇಲಾದೂ ಶಂಕೆ ಇದ್ದರೆ, ಸುಮ್ಮನೇ ಕುಳಿತಿರಬೇಡಿ. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ಎಲ್ಲ ಕಡೆಗಳಲ್ಲಿ ನೀವು ಆತ್ಮರಕ್ಷಣೆಯನ್ನು ಮಾಡಿಕೊಳ್ಳುವಿರಿ. ದಿನವನ್ನು ಜಾಗರೂಕತೆಯಿಂದ ಆಯೋಜಿಸಿ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಿಂದಾಗಿ ಕೆಲವು ಅವಕಾಶಗಳು ತಪ್ಪುವುದು. ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ನಿಮ್ಮ ಬಗ್ಗೆ ಕುಟುಂಬದಲ್ಲಿ ಒಳ್ಳೆಯ ಅಭಿಪ್ರಾಯವು ಇರುವುದು. ವೈವಾಹಿಕ ಜೀವನದಲ್ಲಿ ಏರಿಳಿತವು ಆರಂಭವಾಗಬಹದು. ಸಾಲ ಕೊಟ್ಟವರು ನಿಮ್ಮನ್ನು ಶತ್ರುಗಳಂತೆ ಕಾಣುವರು.

ಕುಂಭ ರಾಶಿ: ಅಧಿಕಾರಿಗಳ ವಿರುದ್ಧ ತಂತ್ರ ನಡೆಯುವುದು. ನಿಮ್ಮ ಇಷ್ಟದ ವಸ್ತುಗಳನ್ನು ಪಡೆಯುವ ಖುಷಿಯು ಇಂದು ಇರಲಿದೆ. ನಿಮಗೆ ಉದ್ಯೋಗದಲ್ಲಿ ಬಡ್ತಿ ಸಿಗುವ ಬಗ್ಗೆ ಖುಷಿ ಇರಲಿದೆ. ಕೆಲವು ಸಂದರ್ಭದಲ್ಲಿ ನೀವು ತಾಳ್ಮೆಯನ್ನು ಕಳೆದುಕೊಳ್ಳಬಹುದು. ಹಣಕ್ಕಾಗಿ ತಾಯಿಯನ್ನು ಪೀಡಿಸುವುದು ಬೇಡ. ನಿಮ್ಮದೇ ಸರಿ ಇದ್ದರೂ ಅದನ್ನು ಪ್ರತಿಪಾದಿಸುವ ಕ್ರಮವು ವ್ಯತ್ಯಾಸವಾಗುವುದು. ಇನ್ನೊಬ್ಬರಿಗೆ ನೀವು ಸಹಾಯವನ್ನು ಮಾಡಲು ಹೆಚ್ಚು ಇಷ್ಟಪಡುವಿರಿ. ಹಣದ ವ್ಯವಹಾರದಲ್ಲಿ ಮೋಸ. ಹೇಳಿಕೊಳ್ಳಲು ಭಯ. ನಿಮ್ಮ ಎಲ್ಲ ಕೆಲಸವನ್ನು ಬಿಟ್ಟು ಸಂಗಾತಿಯ ಜೊತೆ ಸಮಯವನ್ನು ಕಳೆಯಲು ಬಯಸುವಿರಿ. ಹಳೆಯ ರೋಗ ನಿಮ್ಮನ್ನು ಕಾಡಲಿದ್ದು, ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಜೀವನದ ತೊಂದರೆಗಳನ್ನು ಸಂಗಾತಿಯ ಜೊತೆಗೆ ಹಂಚಿಕೊಳ್ಳಲು ಬಯಸುವಿರಿ. ಸಂಬಂಧಿಕರ ಜೊತೆ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತವೆ. ಆತುರಾತುರವಾಗಿ ಯಾವುದನ್ನೂ ಮಾಡಲು ಹೋಗುವುದು ಬೇಡ. ಇನ್ನೊಬ್ಬರು ತೋರುವ ನಿರ್ಲಕ್ಷ್ಯದಿಂದ ನೀವು ಬಹಳ ದುಃಖಿಸುವಿರಿ.

ಮೀನ ರಾಶಿ: ಬಹುನಿರೀಕ್ಷತ ಅವಕಾಶಗಳು ನಿಮ್ಮ ಪಾಲಿಗೆ ಒದಗುವುದು. ನೀವು ಇಂದು ಬಂಧುಗಳಿಂದ ಯಾವುದಾದರೂ ಒಂದು ರೀತಿಯಲ್ಲಿ ಸಹಾಯವನ್ನು ಬಯಸುವಿರಿ. ಅಲ್ಪ ಜಮೀನಿನ ಕೃಷಿಯಲ್ಲಿ ಒಳ್ಳೆಯ ಲಾಭವನ್ನು ಗಳಿಸಲಿದ್ದೀರಿ. ಪ್ರಭಾವಿ ವ್ಯಕ್ತಿಗಳ ಭೇಟಿಗೆ ಇಂದು ಅವಕಾಶ ಸಿಗದೇ ಹೋಗದೆ ಇರಬಹುದು. ಆರ್ಥಿಕ ವ್ಯವಹಾರದಲ್ಲಿ ದಾಖಲೆ ನಷ್ಟ. ಇಂದು ಬಂಧುಗಳ ಆಗಮನವಾದ ಕಾರಣ ಕುಟುಂಬ ಜೊತೆ ಹೆಚ್ವು ಕಾಲ ಕಳೆಯಿರಿ. ನೀವು ಕೆಲಸದಲ್ಲಿ ಇಂದು ಒಂದು ಒಳ್ಳೆಯ ಸುದ್ದಿ ಪಡೆಯಬಹುದು. ನಿಮ್ಮ ಯೋಜನೆಗಳು ಭವಿಷ್ಯವನ್ನು ನಿರ್ಮಿಸುವುದು. ಮಾನಸಿಕವಾಗಿ ಸ್ವಲ್ಪ ಮಟ್ಟಿನ ಕಿರಿಕಿರಿಯನ್ನು ಅನುಭವಿಸುವಿರಿ. ಒಂಟಿತನವನ್ನು ಇಷ್ಟಪಡುತ್ತೀರಿ. ಗುರುವಿನ ದರ್ಶನವನ್ನು ಪಡೆಯಿರಿ. ಇಂದು ನೀವಾಡುವ ಮಾತಿನ ಮೇಲೆ ನಿಮ್ಮ ಕಾರ್ಯಗಳು ನಿಂತಿರುವುದು. ಓಡಾಟಕ್ಕೆ ನಿಮಗೆ ವಾಹನದ ಅನುಕೂಲತೆಯೂ ಆಗುವುದು. ಸ್ವಂತ ಉದ್ಯಮದಲ್ಲಿ ನಿರೀಕ್ಷಿತ ಲಾಭವನ್ನು ಕಾಣುವಿರಿ. ಪ್ರೇಮವು ನಿಮಗೆ ನಿಮ್ಮನ್ನು ಉತ್ಸಾಹದಿಂದ ಇಡುವುದು.

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್