Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 09 April: ಈ ರಾಶಿಯವರು ಎಲ್ಲರನ್ನೂ ಸಂದೇಹದಿಂದಲೇ ನೋಡುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ, ಬುಧವಾರ ಪ್ರಯಾಣದ ವ್ಯತ್ಯಾಸ, ಅನಾರೋಗ್ಯ, ಭವಿಷ್ಯದ ಚಿಂತೆ, ಸಜ್ಜನರ ಸೇವೆ ಇಲವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 09 April: ಈ ರಾಶಿಯವರು ಎಲ್ಲರನ್ನೂ ಸಂದೇಹದಿಂದಲೇ ನೋಡುವರು
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 09, 2025 | 1:10 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಶೂಲಿ, ಕರಣ: ತೈತಿಲ, ಸೂರ್ಯೋದಯ – 06:23 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:34 – 14:07, ಯಮಘಂಡ ಕಾಲ 07:56 – 09:29, ಗುಳಿಕ ಕಾಲ 11:02 – 12:34

ಮೇಷ ರಾಶಿ: ಸ್ವಪ್ರತಿಷ್ಠೆಯಿಂದ ಮನಸ್ಸನ್ನು ಹಾಳಾಗುವುದು. ಹಿರಿಯರೆದುರು ವಿನಯ, ವಿಧೇಯತೆ ಇರಲಿ. ದೇವತಾ ಕಾರ್ಯಗಳಲ್ಲಿ ಆಸಕ್ತಿಯಿಂದ ಭಾಗಿ. ವ್ಯಸನಕ್ಕೆ ತುತ್ತಾಗಿ ಹಣವನ್ನೂ ಆರೋಗ್ಯವನ್ನೂ ಉಳಿಸಿಕೊಳ್ಳಿ. ವ್ಯಾಪರದಲ್ಲಿ ಲಾಭವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಸಂಗಾತಿಯ ಪರೀಕ್ಷೆ ನಡೆಯುವುದು. ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ‌ ಮಾಡಿಕೊಳ್ಳಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ. ನಿಮ್ಮ ಆದಾಯವೆಲ್ಲ ನೀರಿನಂತೆ ಖರ್ಚಾಗಬಹುದು. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಕೋಪವನ್ನು ಯಾರೆದುರೂ ಪ್ರಕಟಿಸುವುದು ಬೇಡ.

ವೃಷಭ ರಾಶಿ: ವಿರೋಧಿಗಳ ಅಪಪ್ರಚಾರಕ್ಕೆ ನೀವು ಆಹಾರ. ನೀವು ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದ ಕಾರ್ಯವನ್ನು ನಿಭಾಯಿಸಲು ಕಲಿಯುವಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೊಟ್ಟ ಸಾಲ ಮರಳಿಬರಹುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಹಲವು ದಿನಗಳಿಂದ ಸೋಲಿನ ವಾರ್ತೆ ಕೇಳಿದ್ದ ನಿಮಗೆ ಗೆಲವಿನ ಸೂಚನೆ ಸಿಗಲಿದ್ದು ಉತ್ಸಾಹ ಬರಲಿದೆ. ನೀವು ಅಪರಿಚಿತರ ಸಂಪರ್ಕವನ್ನು ಹೆಚ್ಚು ಮಾಡುವಿರಿ. ಹೂಡಿಕೆಯಲ್ಲಿ ದೀರ್ಘಾವಧಿಯ ಯೋಜನೆಗಳು ಮಾಡಿಕೊಳ್ಳಿ. ನಿಮ್ಮ ಮೇಲಿನ ವಿಶ್ವಾಸವು ದೂರವಾಗಬಹುದು. ನೀವು ಹಿರಿಯರಿಂದ ಬೆಂಬಲವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ವಿನಾಕಾರಣ ಸುತ್ತಾಟದಿಂದ ಆಯಾಸವಾಗುವುದು. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು. ಯಾರದೋ ಸಂತೋಷಕ್ಕಾಗಿ ನೀವು ದುಡಿಯಬೇಕಾಗಬಹುದು.

ಮಿಥುನ ರಾಶಿ: ಅಸಹಜವಾದ ಮನಃಸ್ಥಿತಿಯಿಂದ ಹೊರಲೇ ಬೇಕಾಗುವುದು. ನಿಮ್ಮ ವಾಹನದಲ್ಲಿ ದೀರ್ಘಪ್ರಯಾಣವು ಇಂದು ಮಾಡುವುದು ಬೇಡ. ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಎಲ್ಲವುದೂ ಅಂದುಕೊಂಡಂತೆ ಆಗದು. ಸಹೋದರರಿಂದ ಸಲಹೆ ಪಡೆದು ಮುನ್ನಡೆಯಿರಿ. ಗಾಳಿ ಸುದ್ದಿಗಳು ನಿಮ್ಮ ಮನಸ್ಸಿಗೆ ತೊಂದರೆ ಕೊಡುವುದು. ಹೊಸ ಕಲಿಕೆಯ ಬಗ್ಗೆ ಆಸಕ್ತಿಯು ಹೆಚ್ಚಾಗಬಹುದು. ಭೂಮಿಯ ವ್ಯವಹಾರದಲ್ಲಿ ನಿಮಗೆ ಅನುಕೂಲ ಕಡಿಮೆ ಇರುವುದು. ನಿಮ್ಮ ಜವಾಬ್ದಾರಿಯನ್ನು ಇತರರು ಮಾಡಬೇಕಾಗಬಹುದು. ಸಾಮೂಹಿಕ ಕಾರ್ಯದಲ್ಲಿ ನಿಮಗೆ ಯಶಸ್ಸು ಸಿಗಬಹುದು. ನಿಮಗೆ ಬೇಕಾದ ಆರ್ಥಿಕಬೆಂಬಲವನ್ನು ಯಾರೂ ಸೂಚಿಸದೇ ಇರಬಹುದು. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ.

ಕರ್ಕಾಟಕ ರಾಶಿ: ಮಾಡದ ತಪ್ಪಿಗೆ ಪಶ್ಚಾತ್ತಾಪವಾಗಲಿದೆ. ಅಹಂಕಾರದಿಂದ ಕೆಲವರನ್ನು ಕಳೆದುಕೊಳ್ಳುವಿರಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ನಿಮ್ಮ ಸಾಹಿತ್ಯ ಇಂದು ಪ್ರಸಿದ್ಧಿಗೆ ಬರುವುದು. ಮಕ್ಕಳಿಗೆ ಯೋಗ್ಯವಾದ ಮಾರ್ಗದರ್ಶನವನ್ನು ಮಾಡಿ. ನಿಮ್ಮ ಇಷ್ಟದ ವಿಷಯಗಳಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡುತ್ತೀರಿ. ನಿಮ್ಮವರ ವಿಶ್ವಾಸವನ್ನು ನೀವು ಸುಲಭವಾಗಿ ಗೆಲ್ಲಲು ಸಾಧ್ಯವಾಗುತ್ತದೆ. ನೀವು ಅನೇಕ ವ್ಯವಹಾರಗಳನ್ನು ನಿಭಾಯಿಸಲು ಕಷ್ಟಪಡುವರು. ಮನೆಗೆ ಅಪರಿಚಿತ ವ್ಯಕ್ತಿಯ ಆಗಮನವಾಗಲಿದೆ. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.‌

ಸಿಂಹ ರಾಶಿ: ಸಾಧ‌ನೆ ಎಂದಮೇಲೆ ಅಡೆತಡೆಗಳು ಸಹಜ. ಅದನ್ನು ಹಿಂದೆ ಹಾಕಿ ನಡೆಯುವುದು ನಿಜವಾದ ತಾಕತ್ತು. ನಿಮ್ಮ ಕುಟುಂಬದ ಸದಸ್ಯ ಇಂದು ನಿಮ್ಮ ಜೊತೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಕೈಗೆ ಬಂದ ಹಣ ಆಸ್ಪತ್ರೆಯ ಪಾಲಾಗಬಹುದು. ನೀವು ಕೆಲಸದ ನಿಯಮಗಳ ಬಗ್ಗೆ ಗಮನ ಹರಿಸಬೇಕು. ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮ‌ ಮಾಡಲು ಬಯಸುವಿರಿ. ಮನೋಯಾತನೆಯನ್ನು ನುಂಗುವುದೇ ಸೂಕ್ತ. ಯಾರ ಕಡೆಯಿಂದಲಾದರೂ ಸಾಲ ಪಡೆಯುವುದನ್ನು ತಪ್ಪಿಸಿ. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು. ಅಕಾರಣವಾಗಿ ಸಂತೋಷಪಡುವಿರಿ. ಈ ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು.

ಕನ್ಯಾ ರಾಶಿ: ಇಂದು ವೇಷ ಮರೆಸಿ ವಂಚಿಸುವ ಸಾಧ್ಯತೆ ಇದೆ. ಇಂದು ನೀವು ಕೋಪವನ್ನು ಹತೋಟಯಲ್ಲಿ ಇಟ್ಟುಕೊಳ್ಳುವುದು ಅಗತ್ಯ. ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ನೀವು ಜೀವನದಲ್ಲಿ ಏನೋ ಅಂದುಕೊಂಡು ಮತ್ತೇನೋ ಆಗುವ ಸ್ಥಿತಿ ಬರಬಹುದು. ಅನೇಕ ದಿನಗಳಿಂದ ಕಾದ ಸ್ಥಾನ ಕೊನೆಗೂ ಲಭ್ಯ. ಪಾಲುದಾರರ ಜೊತೆ ಕೈಜೋಡಿಸುವ ಮೊದಲು ಯೋಚಿಸಿ. ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ನಿಮಗೆ ಈಗ ಸ್ವಲ್ಪವಾದರೂ ಪರಿಹಾರ ದೊರಕುವುದು ಖಚಿತ. ನಿಮ್ಮ ಭೇಟಿಯ ಸಮಯದಲ್ಲಿ ಅಪರಿಚಿತರು ಕೆಲವು ಪ್ರಮುಖ ಮಾಹಿತಿಯನ್ನು ನಿಮ್ಮಿಂದ ಪಡೆಯಬಹುದು. ಸ್ನೇಹಿತರ ಜೊತಗೆ ಸ್ವಲ್ಪ ಸಮಯ ಮೋಜಿನಿಂದ ಕಳೆಯುತ್ತೀರಿ. ಹಳೆಯ ನೆನಪುಗಳು ನಿಮ್ಮನ್ನು ಘಾಸಿಮಾಡಬಹುದು. ನಿಮ್ಮ ಸಂಬಂಧಿಕರಿಂದ ಕೆಲವು ಉತ್ತಮ ಸಲಹೆಯನ್ನು ಪಡೆಯಬಹುದು. ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ. ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡುವರು.

ತುಲಾ ರಾಶಿ: ನಿಮ್ಮ ನ್ಯಾಯಾಲಯದ ಹೋರಾಟಕ್ಕೆ ಸಾಕ್ಷಿ ಸಿಗದು. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿರುವ ನಿಮಗೆ ಪ್ರೇಮ ಜೀವನವು ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಏನಾದರೂ ಬಾಲಿಶವಾದದ್ದನ್ನು ಮಾಡುವ ಮೊದಲು ನಿಮ್ಮ ವರ್ತನೆಯ ಪರಿಣಾಮದ ಬಗ್ಗೆ ಆಲೋಚಿಸಿ. ರಾತ್ರಿ ವೇಳೆ‌ಪ್ರಯಾಣ ಬೇಡ. ದಾಂಪತ್ಯಜೀವನ ಅಪರೂಪದ ಕ್ಷಣಗಳ ಇಂದಿರಲಿವೆ. ನೀವು ಹೆಚ್ಚು ಭೌತಿಕ ವಿಷಯಗಳ ಮೇಲೆ ಮನಸ್ಸನ್ನು ಕೇಂದ್ರೀಕರಿಸುವಿರಿ. ನಿಮ್ಮ ಕಾರ್ಯದ ತಪ್ಪಿನಿಂದ ಅಧಿಕಾರಿಗಳು ನಿಮ್ಮನ್ನು ನಿಂದಿಸಬಹುದು. ಅಪರೂಪಕ್ಕೆ ಬಂಧುಗಳ ಭೇಟಿ. ಉತ್ತಮ ಆತಿಥ್ಯ. ನಿಮ್ಮ ಮನಸ್ಸಿಗೆ ಬಂದಂತೆ ವರ್ತಿಸುವುದು ಕಷ್ಟಕರವಾಗುವುದು. ವಿರಳ ಲಾಭದ ಅವಕಾಶಗಳ ಬಗ್ಗೆಯೂ ನೀವು ಗಮನ ಹರಿಸಬೇಕು. ಇದು ಜಾಣತನವೂ ಹೌದು. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಇನ್ನೊಬ್ಬರ ಬಗ್ಗೆ ಆಡಿಕೊಳ್ಳುವುದು ಸರಿ ಎನಿಸದು.

ವೃಶ್ಚಿಕ ರಾಶಿ: ಬದ್ಧತೆ ಇಲ್ಲದೇ ಯಾವ ಕೆಲಸವೂ ಇಂದು ಪೂರ್ಣವಾಗದು. ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಪ್ರೇಯಸಿ ಜೊತೆ ಸುತ್ತಾಟ ಮಾಡುವಿರಿ. ಸಂಸ್ಥೆಯ ಪ್ರಮುಖರಿಗೆ ಒಳಗನವರಿಂದ ಆತಂಕ. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ನೀವು ಸಣ್ಣ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ತಂದೆ ಹಾಗೂ ಮಕ್ಕಳ ನಡುವೆ ವ್ಯಾವಹಾರಿಕ ಕಲಹ. ಸಾಮಾಜಿಕ ಕಾರ್ಯಗಳನ್ನು ನೀವು ಹೆಚ್ಚು ಮಾಡುವಿರಿ. ನೀವು ಹೊಸದನ್ನು ಪ್ರಾರಂಭಿಸುವುದು ಒಳ್ಳೆಯದೇ. ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸಲು ಆಲೋಚಿಸುವಿರಿ. ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು.

ಧನು ರಾಶಿ: ದಾಂಪತ್ಯದ ಕಲಹದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಯಾರಾದರೂ ಮೌನದಿಂದ ಇದ್ದು, ಕಲಹವನ್ನು ಮೊದಲು ಶಾಂತ ಮಾಡಿ. ನೀವು ವ್ಯಾಪಾರದ ಕಾರಣಕ್ಕೆ ಕೈಗೊಂಡ ಪ್ರಯಾಣವು ದೀರ್ಘಾವಧಿಯಲ್ಲಿ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ಸಣ್ಣ ನೌಕರರಿಗೆ ಜೀವನದ ಮೇಲೆ ಉತ್ಸಾಹ ಆರಂಭವಾಗಲಿದೆ. ನಿಮ್ಮ ಪೋಷಕರ ಜೊತೆ ನೀವು ಆಸ್ತಿಯ ವಿಚಾರವಾಗಿ ಚರ್ಚಿಸುವಿರಿ. ಎಲ್ಲರ ಜೊತೆ ಪ್ರೀತಿಯನ್ನು ಹಂಚಿಕೊಳ್ಳುವಿರಿ. ಇಂದು ನೀವು ಆಚರಣೆಗೆ ಹೆಚ್ಚು ಒತ್ತು ನೀಡುವಿರಿ. ಆನುವಂಶಿಕ ಖಾಯಿಲೆ ನಿಮ್ಮಲ್ಲಿ ಕಾಣಿಸಬಹುದು.‌ ಕೂಡಲೇ ಬೇಕಾದ ಚಿಕಿತ್ಸೆಗೆ ಗಮನಕೊಡಿ. ರಾಜಕೀಯದಲ್ಲಿ ನಿಮಗೆ ಜನಬೆಂಬಲ ಹೆಚ್ಚಾಗಬಹುದು. ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಶ್ರದ್ಧೆ ಹೆಚ್ಚಿರುವುದು. ಇನ್ನೊಬ್ಬರನ್ನು ಹಿಂದಿಕ್ಕಲು ಪ್ರಯತ್ನ ಪೂರ್ವಕವಾಗಿ ಕಾರ್ಯ ಮಾಡುವಿರಿ. ಸ್ನೇಹಿತನ ಮನೆಯಲ್ಲಿ ಇಂದು ಹಬ್ಬದ ವಾತಾವರಣವು ಇರಲಿದೆ. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳಿಂದ ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶ.

ಮಕರ ರಾಶಿ: ಹಣಕಾಸಿನ ವ್ಯವಹಾರ ನಿಮಗೆ ಕುತ್ತು ತರಬಹುದು. ನೀವು ಈ ದಿನವನ್ನು ಜಾಗರೂಕತೆಯಿಂದ ಆಯೋಜಿಸಿ ಕಾರ್ಯವನ್ನು ಸಾಧಿಸಿಕೊಳ್ಳಿ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಇಂದು ಪುಣ್ಯಕಾರ್ಯದಿಂದ ಪ್ರಾಣಾಪಾಯ ತಪ್ಪಿರುವುದು. ಸಹೋದ್ಯೋಗಿಗಳ ಬಗ್ಗೆ ಪೂರ್ವಾಗ್ರಹವಿರುವುದು. ನೀವು ಸಂಬಂಧಿಕರ ಜೊತೆ ಸ್ವಲ್ಪ ಸಮಯ ಒಟ್ಟಿಗೆ ಕುಳಿತು ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಿರಿ. ವಿದ್ಯುತ್ ಗೆ ಸಂಬಂಧಿಸಿದ ಕೆಲಸ ಮಾಡುವವರು ಜಾಗರೂಕತೆಯಿಂದ ಮಾಡಿ. ನಿಮ್ಮ ಗೌರವಕ್ಕೆ ಧಕ್ಕೆ ಬರಬಹುದು. ನಾಯಕತ್ವದ ಸಾಮರ್ಥ್ಯವು ಬಲವಾಗಬಹುದು. ಕ್ರಿಯಾಶೀಲತೆಯು ನಿಮ್ಮ ಅಧಿಕಾರಕ್ಕೆ ಪೂರಕವಾಗಿರುವುದು. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು.

ಕುಂಭ ರಾಶಿ: ಸ್ಪರ್ಧಾತ್ಮಕ ವಿಚಾರದಲ್ಲಿ ನಿಮಗೆ ಗೆಲವು.‌ ಪರೀಕ್ಷಯ ಫಲಿತಾಂಶದಿಂದ ನೆಮ್ಮದಿ. ನೀವು ಸಂಗಾತಿಯ ಜೊತೆ ಸಂತೋಷವನ್ನು ಹಂಚಿಕೊಳ್ಳಲು ಬಯಸುವಿರಿ. ಆದರೆ ಅವರ ಸಮಸ್ಯೆಗಳ ಬಗ್ಗೆ ಮಾತನಾಡಿ ನಿಮ್ಮನ್ನು ಇನ್ನಷ್ಟು ತೊಂದರೆಗೊಳಿಸಬಹುದು. ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಮನೆಯವರು ನಿಮ್ಮ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಬಹುದು. ಇಂದು ನಿಮಗಾಗಿ ಯಾರಾದರೂ ಸಹಕಾರವನ್ನು ನೀಡಲು ಬರಬಹುದು. ಹೆಚ್ಚುತ್ತಿರುವ ವೆಚ್ಚಗಳನ್ನು ಕಡಿವಾಣ ಹಾಕಿಕೊಳ್ಳಿ. ನೀವು ಅಪೂರ್ಣವಾದ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುವಿರಿ. ನಿಮ್ಮ ಕಾರ್ಯದ ಒಟ್ಟು ಅವಲೋಕನದ ಅವಶ್ಯಕತೆ ಇರಲಿದೆ. ಉನ್ನತ ಸ್ಥಾನಕ್ಕೆ ಹೋಗುವ ಆಯ್ಕೆಯ ಪಟ್ಟಿಯಲ್ಲಿ ನೀವಿರುವಿರಿ. ನಿಮ್ಮ ಮಾತಿನಿಂದ ಸ್ಥಾನಮಾನ ಮತ್ತು ಪ್ರತಿಷ್ಠೆಗಳು ಹೆಚ್ಚಾಗಬಹುದು. ವಿಷಯದಲ್ಲಿ ನೀವು ಗೊಂದಲವಿರಬಹುದು.

ಮೀನ ರಾಶಿ: ಹೂಡಕೆಯಿಂದ ನಷ್ಟ. ಆರ್ಥಿಕ ದಾಖಲೆಗಳನ್ನು ಭದ್ರವಾಗಿರಿಸಿಕೊಳ್ಳಿ. ಇಂದು ನಿಮ್ಮ ಒರಟುತನದಿಂದ ದಾಂಪತ್ಯದಲ್ಲಿ ಕಲಹವಾಗುವ ಸಾಧ್ಯತೆ ಇದೆ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ರಾಜಕೀಯ ನಾಯಕರಿಗೆ ಅನಿರೀಕ್ಷಿತ ಬೆಂಬಲ. ಕಾರ್ಯಕ್ಕೆ ಮತ್ತಷ್ಟು ಉತ್ಸಾಹ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ಆರ್ಥಿಕ ವ್ಯವಹಾರಕ್ಕೆ ಇಂದು ಶುಭ ದಿನವಾಗಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ಹೆಚ್ಚಿಸುವಿರಿ. ಪ್ರೀತಿಪಾತ್ರರ ಬೆಂಬಲ ನಿಮ್ಮೊಂದಿಗೆ ಇದ್ದರೂ ಮಾನಸಿಕವಾಗಿ ಒಪ್ಪಿಕೊಳ್ಳಲಾರಿರಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು.

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ