AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಆರ್ಥಿಕ ಸ್ಥಿತಿ ಚೇತರಿಕೆ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 13 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Nitya Bhavishya: ಆರ್ಥಿಕ ಸ್ಥಿತಿ ಚೇತರಿಕೆ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 13, 2024 | 12:15 AM

Share

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ಇಲ್ಲಿ ತಿಳಿಯಿರಿ. ನಿಮ್ಮ ಇಂದಿನ (ಜನವರಿ 13) ದಿನ ಭವಿಷ್ಯ (Horoscope) ಹೀಗಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವಜ್ರ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 9:52 ರಿಂದ 11:16ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:06 ರಿಂದ 03:31ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:02 ರಿಂದ 08:27ರ ವರೆಗೆ.

ಧನು ರಾಶಿ: ಇಂದು ನಿಮ್ಮ ಕೆಲಸಕ್ಕೆ ಇತರರ ಹಸ್ತಕ್ಷೇಪವು ಇರಲಿದ್ದು ಅದನ್ನು ಸಹಿಸುವುದು ಆಗದು. ನಿಮ್ಮ ಸ್ವಾಭಿಮಾನವನ್ನು ಎಲ್ಲ ಕಡೆಗಳಲ್ಲಿ ಪ್ರದರ್ಶಿಸಿ ತೊಂದರೆಗೆ ಸಿಕ್ಕಿಕೊಳ್ಳುವಿರಿ. ಕಬ್ಬಿಣ ಮುಂತಾದ ವ್ಯಾಪಾರವನ್ನು ಮಾಡುವವರಿಗೆ ಆದಾಯವು ಹೆಚ್ಚಾಗುವುದು. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಣಕಾಸಿನ ವ್ಯವಹಾರದ ಪ್ರತಿನಿಧಿಗಳು ಅಂದುಕೊಂಡ ಕೆಲಸವನ್ನು ಸಾಧಿಸಿಕೊಳ್ಳುವರು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪರಿಗಳಿಗೆ ಉತ್ತಮ ಲಾಭವಿರಲುದೆ. ಇಂದು ನಿಮ್ಮ ಕಾರ್ಯಗಳನ್ನು ಇನ್ನೊಬ್ಬರು ಮಾಡಬಹುದು.

ಮಕರ ರಾಶಿ: ನಿಮ್ಮ ದ್ವಂದ್ವ ಯೋಚನೆಯಿಂದ ಇಂದು ನಿಮ್ಮ‌ ಕೆಲಸಗಳು ಹಾದಿ ತಪ್ಪಬಹುದು.‌ ಕಾರ್ಯದ ಕಾರಣ ಸಂಭ್ರಮವನ್ನು ಕಳೆದುಕೊಳ್ಳಬೇಕಾಗುವುದು. ಶಿಕ್ಷಕವೃತ್ತಿಯವರು ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವರು. ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಯೋಚಿಸುವುದು ಉತ್ತಮ. ಧಾರ್ಮಿಕ‌ಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ಒಗ್ಗಟ್ಟಿನಿಂದ ಕಾರ್ಯವನ್ನು ಸಾಧಿಸುವುದು ಇಂದಿನ ಅಗತ್ಯವೂ ಇದೆ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ.

ಕುಂಭ ರಾಶಿ: ಶತ್ರುಗಳು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಇಚ್ಛಿಸುವರು. ಕಳೆದುಕೊಂಡ ವಸ್ತುವಿನ ಚಿಂತೆಯನ್ನು ನೀವು ಬಿಡುವುದು ಕಷ್ಟವಾದೀತು. ಅನಗತ್ಯ ಖರ್ಚುಗಳು ಒಂದಾದಮೇಲೆ ಒಂದು ಬರಲಿದ್ದು ಕಷ್ಟವಾದೀತು. ನಿಮ್ಮ ವ್ಯಾಪಾರಕ್ಕೆ ವಿದೇಶದ ಸಂಪರ್ಕವು ಬರಬಹುದು. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಔಷಧಗಳ ವ್ಯತ್ಯಾಸದಿಂದ ಮತ್ತೇನಾದರೂ ಆದೀತು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಕೇಳಬೇಕಾದೀತು. ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ‌ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ಪ್ರೀತಿಯಿಂದ ಸಿಗುವುದು.

ಮೀನ ರಾಶಿ: ದೈವದತ್ತವಾದ ವಿಶೇಷತೆಗಳನ್ನು ಕಳೆದುಕೊಳ್ಳುವುದು ಬೇಡ.‌ ರೂಢಿಸಿಕೊಳ್ಳಲು ಪ್ರಯತ್ನಿಸಿ. ಆರ್ಥಿಕ ಸ್ಥಿತಿಯು ಚೇತರಿಕೆಯಾಗಬಹುದು. ಕಾರ್ಯದ ಒತ್ತಡದಿಂದ ನೀವು ವಿಶ್ರಾಂತಿಯನ್ನು ಪಡೆಯುವುದು ಕಷ್ಟವಾದೀತು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿನ್ನಡೆಯಾಗುವುದು. ಆಭರಣ ಮಾರಾಟಗಾರು ಲಾಭವನ್ನು ಗಳಿಸಬಹುದು. ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಇಂದಿನ‌ ಬಹುಪಾಲು ಸಮಯವನ್ನು ಅನ್ಯ ಚಿಂತನೆಯಲ್ಲಿ ಕಳೆಯುವಿರಿ.‌ ಕಲಾವಿದರಿಗೆ ಅವಕಾಶದ ದೊಡ್ಡ ಬಾಗಿಲು ತೆರೆದುಕೊಳ್ಳಬಹುದು. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ಒಂದೇ ಸಾರಿ ಖರ್ಚಿನ ಎಲ್ಲ ಅವಕಾಶಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಬಂಧುಗಳ‌ ಮನೊಲಿಸುವುದು ವ್ಯರ್ಥವೆನಿಸಬಹುದು.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್