Horoscope: ಈ ರಾಶಿಯವರು ಇಂದು ಎಚ್ಚರಿಕೆಯಿಂದ ಮಾತನಾಡಿ, ನಿಮ್ಮ ಮಾತು ಇನ್ನೊಬ್ಬರಿಗೆ ತೊಂದರೆಯಾದೀತು

24 ಅಕ್ಟೋಬರ್​ 2024: ಶುಕ್ರವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ದುರಭ್ಯಾಸಗಳು ಸಹವಾಸದಿಂದ ಬರಬಹುದು. ಮನೆಗೆ ಇಂದು ವಿಳಂಬವಾಗಿ ಹೋಗುವಿರಿ. ಮನೋರಂಜನೆಗೆ ಹಣವನ್ನು ಖರ್ಚು ಮಾಡುವಿರಿ. ಹಣಸಂಪಾದನೆಯ ವಿಚಾರವೇ ತಲೆಯಲ್ಲಿ ಓಡಾಡಲಿದೆ‌ ಹಾಗಾದರೆ ಅಕ್ಟೋಬರ್ 24ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ಇಂದು ಎಚ್ಚರಿಕೆಯಿಂದ ಮಾತನಾಡಿ, ನಿಮ್ಮ ಮಾತು ಇನ್ನೊಬ್ಬರಿಗೆ ತೊಂದರೆಯಾದೀತು
ಈ ರಾಶಿಯವರು ಇಂದು ಎಚ್ಚರಿಕೆಯಿಂದ ಮಾತನಾಡಿ, ನಿಮ್ಮ ಮಾತು ಇನ್ನೊಬ್ಬರಿಗೆ ತೊಂದರೆಯಾದೀತು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 24, 2024 | 12:05 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಸಿದ್ಧ​​, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 26 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:44 ರಿಂದ 03:12 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:27 ರಿಂದ 07:54ರವರೆಗೆ, ಗುಳಿಕ ಕಾಲ ಬೆಳಿಗ್ಗೆ 09:22 ರಿಂದ 10:49 ರವರೆಗೆ.

ಮೇಷ ರಾಶಿ: ನಿಮ್ಮ ಕಾರ್ಯವೇ ಇಂದು ಎಲ್ಲವನ್ನು ಹೇಳುವುದು. ನೀವು ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಇಟ್ಟುಕೊಳ್ಳಬೇಕಾಗುವುದು. ನಿಮ್ಮ ಕಾರ್ಯವು ಆಗಬೇಕಾದರೆ ತಿರುಗಾಟವನ್ನು ಮಾಡುವುದು ಅನಿವಾರ್ಯ. ಸಂಗಾತಿಗೆ ಯಾವುದಾದರೂ ರೀತಿಯಲ್ಲಿ ಸಂತೋಷವಾಗುವಂತೆ ನೋಡಿಕೊಳ್ಳುವಿರಿ. ಇಬ್ಬರ ನಡುವೆ ವಾಗ್ವಾದವೂ ಆಗಲಿದೆ. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಮಾತೇ ನಿಮಗೆ ತೊಂದರೆಯನ್ನು ತರುವುದು. ಸಂಗಾತಿಯು ಇತರರನ್ನು ಹೋಲಿಸಿಕೊಂಡು ಮಾತನಾಡುವರು. ಹಿನ್ನಡೆಯನ್ನೂ ಸಕಾರಾತ್ಮಕವಾಗಿ ನೋಡಿಕೊಳ್ಳುವಿರಿ. ನಿಮ್ಮ ಉತ್ಸಾಹವನ್ನು ಭಂಗ ಮಾಡುವ ಮಾತುಗಳು ನಿಮ್ಮ ನಡುವೇ ಬರಬಹುದು. ವಿಜಯದ ಮೆಟ್ಟಿಲು ನಿಮಗೆ ಕಷ್ಟವಾಗದು. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ.

ವೃಷಭ ರಾಶಿ: ಎಲ್ಲವನ್ನೂ ಕಳೆದುಕೊಳ್ಳುವ ಬದಲು ಅಲ್ಪವಾದರೂ ಉಳಿದುಕೊಳ್ಳಲಿ ಎಂಬ ನಿರ್ಧಾರವೇ ಸರಿ. ವೃತ್ತಿಯನ್ನು ಹೊರತುಪಡಿಸಿ ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಸಂಕೀರ್ಣತೆಯಿಂದ‌ ಹೊರಬಂದಾಗ ದಾರಿ ಸಿಗುವುದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ಇದ್ದರೂ ನಿಮಗೆ ಸಮಾಧಾನ ಇರದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ನೀಡುವಿರಿ. ಸಿಟ್ಟನ್ನು ಮಾಡಬಾರದು ಎಂದುಕೊಂಡರೂ ಸಂದರ್ಭವು ನಿಮ್ಮ ನಿರ್ಧಾರವನ್ನು ಬದಲಿಸುವುದು. ಮಕ್ಕಳಿಂದ ನೆಮ್ಮದಿಯು ಸಿಗುವುದು. ಎಲ್ಲವೂ ಗೊತ್ತಿದ್ದರೂ ಹಿರಿಯರನ್ನು ಕೇಳಿ ಮುನ್ನಡೆಯಿರಿ. ನಿಮ್ಮನ್ನು ಅಲ್ಪಜ್ಞರೆಂದೇ ಭಾವಿಸಿ. ವ್ಯವಹಾರವನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳಲು ನೀವು ಸೋಲಬಹುದು. ನಿಮ್ಮ ಗುರಿಯನ್ನು ತಲುಪಲು ನಿಮಗೆ ವಿಘ್ನಗಳು ಬರಬಹುದು. ಅಂದುಕೊಂಡಿದ್ದನ್ನು ಸಾಧಿಸಲಾಗದು ಎಂಬ ಅಳುಕು ನಿಮ್ಮಲ್ಲಿ ಇರುವುದು.

ಮಿಥುನ ರಾಶಿ: ನಿಮ್ಮ ಹಸ್ತಕ್ಷೇಪವು ಬೇರೆಯವರಿಗೆ ಹಿಡಿಸದು. ಇಂದು ನಿರುಪಯೋಗಿ ವಸ್ತುಗಳನ್ನು ಅನ್ಯರಿಗೆ ಕೊಡುವಿರಿ. ವೈಯಕ್ತಿಕ‌ ಕೆಲಸಗಳು ಬಹಳಷ್ಟು ಇದ್ದು ಅದನ್ನು ಮಾಡಲು ನಿಮಗೆ ಸಮಯವು ಸಿಗದಾಗುವುದು. ಮಿತ್ರರ ಸಹಾಯದಿಂದ ನಿಮಗೆ ಉತ್ತಮ‌ ಲಾಭವು ಸಿಗಲಿದೆ. ಎಲ್ಲರೆದುರು ನಿಮಗೆ ಅಪಮಾನವಾಗುವ ಸಂದರ್ಭವು ಬರಬಹುದು. ಇನ್ನೊಬ್ಬರ ನೋವನ್ನು ನೋಡಿ ಸುಮ್ಮನೆ ಇರಲಾಗದು. ನಿಮ್ಮ‌ಇಂದಿನ‌ ಸಂಪಾದನೆಯು ಮನೆಯ ಬಳಕಗೇ ಆಗವುದು. ಕುಲದೇವರ ದರ್ಶನವನ್ನು ನೀವು ಮಾಡಲಿದ್ದು ನೆಮ್ಮದಿ ಇರುವುದು.‌ ಗೆಳೆತನದಿಂದ ಸಲ್ಲದ ಮಾತುಗಳು ನಿಮ್ಮ ಬಗ್ಗೆ ಬರಬಹುದು. ನಿಮ್ಮ ಹೇಳಿಕೆಗಳು ಕಾನೂನು ಚೌಕಟ್ಟಿನಲ್ಲಿ ಇರಲಿ. ಯಾರ‌ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ನಡೆಯುವಿರಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.

ಕರ್ಕಾಟಕ ರಾಶಿ: ನಿಮ್ಮ ದೈಹಿಕ‌ ಸಮಸ್ಯೆಯನ್ನು ಮುಚ್ಚಿಟ್ಟು ಪ್ರಯೋಜನವಾಗದು. ಅವಿವಾಹಿತರಿಗೆ ಇಂದು ವಿವಾಹಕ್ಕೆ ಯೋಗ್ಯವಾದ ಮಾತುಗಳು ಕೇಳಿಸಬಹುದು. ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರ ಹಾಕಲು ಸೂಕ್ತ ಸ್ಥಳವು ಸಿಗಬಹುದು. ನಿಮಗೆ ಇಷ್ಟವಾದ ವಿಚಾರವನ್ನು ಬೇಗ ಗ್ರಹಿಸುವಿರಿ. ಮತ್ತೇನನ್ನೂ ವಿಚಾರಿಸದೇ ಸಿಕ್ಕ ಅವಕಾಶವನ್ನು ಸದ್ಯ ಬಳಸಿಕೊಳ್ಳಿ. ನಿಮ್ಮ‌ನಕಾರಾತ್ಮಕ ಆಲೋಚನೆಗಳಿಂದ ಕುಟುಂಬವನ್ನೂ ಕೆಡಸುವುದು ಬೇಡ. ನಿಮ್ಮ ಸಮಸ್ಯೆಗೆ ಅನಿರೀಕ್ಷಿತ ಪರಿಹಾರವೂ ಸಿಗುವುದು. ಅಪರಿಚಿತರು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಲಹೆಯನ್ನು ಕೊಡುವರು. ಪ್ರೀತಿಪಾತ್ರರ ಭೇಟಿಯು ನಿಮಗೆ ನೆಮ್ಮದಿಯನ್ನು ನೀಡಬಹುದು. ಉದ್ಯೋಗದ ಕಾರಣ ಓಡಾಟವು ಇರಬಹುದು. ನಿಮಗೆ ಆಯ್ಕೆಗಳನ್ನು ಮಾಡಲು ಗೊಂದಲವಿರಬಹುದು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಆತುರದಲ್ಲಿ ನಿಮ್ಮ ಎಲ್ಲ ಕಾರ್ಯವೂ ಮೊಟಕುಮಾಡುವಿರಿ. ಆರ್ಥಿಕವಾಗಿ ಸಮಸ್ಯೆಯಾದರೂ ಅದು ತೊಂದರೆಯಂತೆ ತೋರದು.

ಸಿಂಹ ರಾಶಿ: ನಿಮ್ಮ ಪೂರ್ವನಿರ್ಧಾರಗಳು ಬದಲಾಗಬಹುದು. ನಿಮ್ಮ ಬಂಧುಗಳ ಕಡೆಯಿಂದ ವಿವಾಹವು ಏರ್ಪಡಬಹುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸುವಿರಿ. ನೀವು ಮಾಡುವ ಕಾರ್ಯದಲ್ಲಿ ಗೊಂದಲವಿದ್ದರೆ ಯಾರನ್ನಾದರೂ ಕೇಳಿ. ನಿಮ್ಮ ಅನುಕೂಲತೆಯನ್ನು ನೋಡಿಯೇ ಹೆಜ್ಜೆ ಇಡುವುದು ಉತ್ತಮ. ಮುಂದೂಡುತ್ತ ಕುಳಿತರೆ ಇನ್ನಷ್ಟು ಗೊಂದಲಗಳು ಹೆಚ್ಚಾದೀತು. ಸಂಗಾತಿಯ ವಿಷಯಕ್ಕೆ ನಿಮಗೆ ಬೇಸರವಾಗುವುದು. ನಿಮಗೆ ಬೇಕಾಗಿರುವ ಸಂಪತ್ತನ್ನು ಸ್ನೇಹಿತರಿಂದ ಸಾಲವಾಗಿ ಪಡೆಯುವಿರಿ. ವ್ಯವಹಾರದಲ್ಲಿ ಯಾವುದೇ ದಾಕ್ಷಿಣ್ಯ ತೋರುವುದು ಬೇಡ. ದುರಭ್ಯಾಸಗಳು ಸಹವಾಸದಿಂದ ಬರಬಹುದು. ಮನೆಗೆ ಇಂದು ವಿಳಂಬವಾಗಿ ಹೋಗುವಿರಿ. ಮನೋರಂಜನೆಗೆ ಹಣವನ್ನು ಖರ್ಚು ಮಾಡುವಿರಿ. ಹಣಸಂಪಾದನೆಯ ವಿಚಾರವೇ ತಲೆಯಲ್ಲಿ ಓಡಾಡಲಿದೆ‌. ಇಂದಿನ ದಿನಕ್ಕೆ ನಿಮಗೆ ತಾಳ್ಮೆ ಅವಶ್ಯಕ.

ಕನ್ಯಾ ರಾಶಿ: ನಿಮ್ಮ ಉತ್ಸಾಹಕ್ಕೆ ಯಾರಾದರೂ ತಣ್ಣೀರು ಹಾಕಬಹುದು. ಇಂದು ನಿಮ್ಮ ಉದ್ಯಮದಲ್ಲಿ ಆದ ನಷ್ಟದಿಂದ ಮನಸಿನೊಳಗೆ ಸಂಕಟಪಡುವಿರಿ. ಸುಲಭ ಮಾರ್ಗದಲ್ಲಿ ಆದಾಯವನ್ನು ಪಡೆಯುವ ಯೋಜನೆಯು ಯಶಸ್ವಿಯಾಗದು. ಸರ್ಕಾರಿ ಕೆಲಸಗಳು ಒತ್ತಡದಿಂದಾಗಿ ಮುಂದುವರಿಯುವುದು. ನೀವು ಮೌನದಿಂದ ಇದ್ದಷ್ಟು ಎಲ್ಲದಕ್ಕೂ ಒಪ್ಪಿಗೆ ಸೂಚಿಸಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವಿರಿ. ದೇವರ ದರ್ಶನಕ್ಕೆ‌ ನೀವು ಇಂದು ಬಿಡುವು‌ಮಾಡಿಕೊಂಡು ಹೋಗುವಿರಿ. ನಿಮ್ಮ ಕಾರ್ಯವು ನಿಮಗೆ ತೃಪ್ತಿಕೊಡದೇಹೋಗಬಹುದು. ವಾಹನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಾಗರೂಕತೆ ಇರಲಿ. ಒಂದು ತೀರ್ಮಾನಕ್ಕೆ ಬರಲು ಹತ್ತು ಬಾರಿ ಯೋಚಿಸಿ. ಮಕ್ಕಳು ನಿಮ್ಮನ್ನು ಪ್ರೀತಿಸುವರು. ಕೃಷಿಯ ಕಾರ್ಯವನ್ನು ಮಾಡಲು ನೀವೂ ಭಾಗಿಯಾಗುವಿರಿ.

ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ