Horoscope: ಈ ರಾಶಿಯವರು ತಮ್ಮ ವೃತ್ತಿಯಲ್ಲಿ ಯಶಸ್ಸು ಗಳಿಸುವಿರಿ, ಅಶುಭವಾರ್ತೆ ಕೇಳುವಿರಿ

19 ಅಕ್ಟೋಬರ್​ 2024: ಶುಕ್ರವಾರದಂದು ಮೇಷ, ವೃಷಭ, ಮಿಥುನ, ಕರ್ಕಾಟಕ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿರುದ್ಯೋಗದಿಂದ ನಿಮಗೆ ಬಿಡುಗಡೆ ಸಿಗುವುದು. ಹೆಚ್ಚಿನ ವೆಚ್ಚಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಮಾಡುವಿರಿ. ಉದರಕ್ಕೆ‌ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ಹಾಗಾದರೆ ಅಕ್ಟೋಬರ್ 19ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ತಮ್ಮ ವೃತ್ತಿಯಲ್ಲಿ ಯಶಸ್ಸು ಗಳಿಸುವಿರಿ, ಅಶುಭವಾರ್ತೆ ಕೇಳುವಿರಿ
ಈ ರಾಶಿಯವರು ತಮ್ಮ ವೃತ್ತಿಯಲ್ಲಿ ಯಶಸ್ಸು ಗಳಿಸುವಿರಿ, ಅಶುಭವಾರ್ತೆ ಕೇಳುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2024 | 12:05 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಸಿದ್ಧಿ​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:50ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:45 ರಿಂದ 03:13ರವರೆಗೆ, ಗುಳಿಕ ಕಾಲ ಸಂಜೆ 06:26 ರಿಂದ 07:54 ರವರೆಗೆ.

ಮೇಷ ರಾಶಿ: ಹಂಚಿಕೊಂಡು ಬದುಕುವುದು ಗೊತ್ತಿರಲಿ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಉದ್ಯೋಗವು ಮಂದಗತಿಯಲ್ಲಿ ಸಾಗಲಿದೆ. ಮಾನಸಿಕ ಜಾಡ್ಯವು ನಿಮ್ಮ ಎಲ್ಲ ಕೆಲಸವೂ ಹಿಂದುಳಿಯುವುದು. ಹಿರಿಯರಿಗೆ ಅಗೌರವವನ್ನು ಕೊಡುವುದು ಬೇಡ. ಪ್ರಯಾಣದಿಂದ ನಿಮಗೆ ಆಯಾಸವಾಗಬಹುದು. ಅರ್ಥಿಕವಾಗಿ ಕಷ್ಟವಿದ್ದರೂ ವಿದ್ಯಾಭ್ಯಾಸಕ್ಕೆ ಒತ್ತು ಕೊಡುವಿರಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ದಾನವಾಗಿ ಕೊಡುವಿರಿ. ನಿಮಗೆ ಸಿಕ್ಕ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವಿರಿ. ಆಗದಿರುವ ಕಾರ್ಯವನ್ನು ಒಪ್ಪಿಕೊಂಡು ಸಂಕಟಪಡುವಿರಿ. ಅನಧಿಕೃತ ವ್ಯವಹಾರದಿಂದ ನಿಮಗೆ ತೊಂದರೆಯಾಗಲಿದೆ. ನಿಮ್ಮ ಮಿತ್ರರನ್ನು ಭೇಟಿಯಾಗಲಿದ್ದೀರಿ. ವಿವಾಹದ ಮಾತುಕತೆ ನಡೆಯಬಹುದು. ನಿಮಗಾದ ಅಪಮಾನಕ್ಕೆ ಪ್ರತಿಕಾರ ಬೇಡ. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಎಲ್ಲರ ಬಗ್ಗೆಯೂ ಗೌರವ ಇರಲಿ.‌

ವೃಷಭ ರಾಶಿ: ಮಾತಿಗೆ ಮಾತು ಬೆಳೆಯಬಹುದು. ಅದನ್ನು ನಿಭಾಯಿಸುವ ಕಲೆ ಗೊತ್ತಿರಲಿ. ನಿಮ್ಮ ಭೂಮಿಯ ಮಾರಾಟಕ್ಕೆ ಯಾರಾದರೂ ಬರಬಹುದು. ನಿಮ್ಮ ಬಗ್ಗೆ ಕುಟುಂಬಕ್ಕೆ ಕನಿಕರ ಬರಬಹುದು. ಉದ್ಯೋಗಕ್ಕೆ ಬಂಧುಗಳಿಂದ ಸಹಾಯ ದೊರೆಯುವುದು. ವೃತ್ತಿಯಲ್ಲಿ ಯಶಸ್ಸು ಸಿಗಲಿದೆ. ಕೆಲಸಗಳಿಗೆ ನಿಮ್ಮ ಮೇಲೆ‌ ಒತ್ತಡ ಬರಬಹುದು. ಸ್ನೇಹಿತರ ಮಧ್ಯದಲ್ಲಿ ಅನ್ಯರ ಪ್ರವೇಶವು ಆಗಬಹುದು. ನಿಮ್ಮ ವೈಫಲ್ಯವನ್ನು ನೀವು ಸಕಾರಾತ್ಮಕವಾಗಿಯೇ ತೆಗೆದುಕೊಳ್ಳುವಿರಿ. ನಿರುದ್ಯೋಗದಿಂದ ನಿಮಗೆ ಬಿಡುಗಡೆ ಸಿಗುವುದು. ಹೆಚ್ಚಿನ ವೆಚ್ಚಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಮಾಡುವಿರಿ. ಉದರಕ್ಕೆ‌ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ಮನೆಯಲ್ಲಿಯೇ ಸೂಕ್ತ ಔಷಧವನ್ನು ಮಾಡಿಕೊಳ್ಳಿ. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ನೀವು ಯಾರಿಗೂ ಭಾರವಾಗದಂತೆ ಇರಿ. ನಿಮ್ಮ ಬಗ್ಗೆ ಹೇಳಿಕೊಳ್ಳುವುದು ಅಹಂಕಾರವಾದೀತು.

ಮಿಥುನ ರಾಶಿ: ವಿದೇಶದ ವ್ಯಾಪಾರದಲ್ಲಿ ಸ್ಥಿರತೆ ಸಾಧಿಸುವುದು ಕಷ್ಟವಾದೀತು. ಇಂದು ಸಹೋದರನ ನಡತೆ ನಿಮಗೆ ಸಂಶಯ ತರಿಸಬಹುದು. ನಿಮ್ಮ ಕಾರ್ಯಗಳಿಗೆ ಕೂಡಲೇ ಫಲವನ್ನು ನಿರೀಕ್ಷಿಸುವ ಅಗತ್ಯವಿಲ್ಲ. ನಿಮ್ಮ ಕಾರ್ಯದಲ್ಲಿ ನಿಷ್ಠೆಯಿಂದ ಇರಲಿ. ಇನ್ನೊಬ್ಬರಿಗೆ ಸಹಾಯವನ್ನು ಮಾಡುವ ಮನಸ್ಸಾಗುವುದು. ಮಕ್ಕಳಿಂದ ಶುಭಸಮಾಚಾರವು ಬರಲಿದೆ. ಸ್ವಂತ ಲಾಭವನ್ನು ಮಾಡುವ ಹಪಹಪಿಕೆ ಇರುವುದು. ತಪ್ಪಿಲ್ಲದೇ ಇದ್ದರೂ ತಲೆ ತಗ್ಗಿಸಬೇಕಾದ ಸ್ಥಿತಿಯು ಬರಬಹುದು. ಸಾಹಸ ಕಾರ್ಯಗಳಿಗೆ ಹೋಗುವುದು ಬೇಡ. ಇಟ್ಟ ಹೆಜ್ಜೆ ಸರಿಯಾಗಿದೆಯೇ ನೋಡಿಕೊಳ್ಳಿ. ಸಿಟ್ಟಾಗಲು ಇಂದು ನಿಮಗೆ ಬಹಳ ಅವಕಾಶಗಳು ಸಿಗಲಿದೆ. ನಿಮ್ಮ ವರ್ತನೆಯ ಮೇಲೆ ಮುಂದಿನದ್ದು ನಿರ್ಣಯವಾಗುವುದು. ಉದ್ಯಮವನ್ನು ಬಹಳ ಯೋಜನೆಯಿಂದ ನಡೆಸಬೇಕಾಗುವುದು. ಒತ್ತಡದಿಂದ ಮುಕ್ತರಾಗ ಸಂದರ್ಭವು ಬರಬಹುದು. ಇಂದಿನ ಒತ್ತಡವನ್ನು ಸಹಿಸಿಕೊಂಡು ಇರುವುದು ಕಷ್ಟವಾದೀತು. ಇರುವುದನ್ನು ಇದ್ದಂತೆ ಹೇಳುವುದು ಇನ್ನೊಬರಿಗೆ ಆಗಿಬಾರದು. ಅಧಿಕಾರವು ನಿಮ್ಮ ಕೈ ತಪ್ಪಬಹುದು.

ಕರ್ಕಾಟಕ ರಾಶಿ: ಯಾರದೋ ಯೋಜನೆಯನ್ನು ನೀವು ಬಳಸಿಕೊಳ್ಳಬಹುದು. ನಿಮ್ಮ ಪ್ರಭಾವದಿಂದಾಗಿ ಇನ್ನೊಬ್ಬರಿಗೆ ಸಹಾಯ ಸಿಗಲಿದೆ. ಯಾರ ಜೊತೆ ಹೇಗೆ ವ್ಯವಹರಿಸಬೇಕು ಎಂಬ ಔಚಿತ್ಯದ ಕೊರತೆಯು ಕಾಣಿಸುವುದು. ವ್ಯಾಪಾರದಲ್ಲಿ ಇದು ಬಹಳ ಮುಖ್ಯವಾಗಿ ಬೇಕಾಗಬಹುದು. ಸ್ತ್ರೀಯರ ಮಾತಿಗೆ ನಿಮ್ಮ ಬೆಂಬಲವು ಇರಲಿದೆ. ನಿಮ್ಮ ಮಾತು ವಿಶ್ವಾರ್ಹವಾಗಿರಲಿ. ಆಕಸ್ಮಿಕ ಧನಲಾಭವು ನಿಮಗೆ ಗೊಂದಲವನ್ನೂ ಸಂತೋಷವನ್ನೂ ತರುವುದು. ಇನ್ನೊಬ್ಬರ ಸುಖವನ್ನು ಕಸಿದುಕೊಳ್ಳುವ ಪ್ರಯತ್ನ ಒಳ್ಳೆಯದಲ್ಲ. ಸಂಗಾತಿಯ ಜೊತೆ ಅಕಾರಣವಾಗಿ ಕಲಹವಾಗಬಹುದ. ಮನೆಯಿಂದ ದೂರದಲ್ಲಿ ವಾಸ ಮಾಡುವ ಸ್ಥಿತಿಯು ಬರಬಹುದು. ಆಪ್ತರನ್ನು ದೂರ ಮಾಡಿಕೊಳ್ಳುವುದು ನಿಮಗೆ ಕಷ್ಟವಾದೀತು. ನಿಮ್ಮ ಯೋಜನೆಯನ್ನು ನೀವಂದುಕೊಂಡಂತೆ ನಡೆಸಲಾಗದು. ಅಸಭ್ಯ ಮಾತಿನಿಂದ ನಿಮ್ಮ ಕೆಲಸವು ಹಾಳಾಗುವುದು. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು.

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ