Horoscope: ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಜಾಗರೂಕತೆ ಇರಲಿ

ಸೆಪ್ಟೆಂಬರ್​ 11,​ 2024ರ​​ ನಿಮ್ಮ ರಾಶಿಭವಿಷ್ಯ:ಇಂದು ನಿರುದ್ಯೋಗಿಗಳಿಗೆ ಒಂದೊಂದೆ ಚಿಂತೆ ಕಾಡುವುದು. ವ್ಯಾಪಾರದಲ್ಲಿ ಉತ್ತಮ‌ ಫಲಿತಾಂಶಕ್ಕಾಗಿ ಕಾಯುವಿರಿ. ಹೊಸ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬಹುದು. ಕಠಿಣ ಪರಿಶ್ರಮದಿಂದ ಹಿಂದೆ ಸರಿಯುವುದು ಅಪಮಾನವೆನಿಸಬಹುದು. ಹಾಗಾದರೆ ಸೆಪ್ಟೆಂಬರ್​ 11ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಜಾಗರೂಕತೆ ಇರಲಿ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 11, 2024 | 12:15 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:35 ಗಂಟೆ, ರಾಹು ಕಾಲ ಬೆಳಿಗ್ಗೆ 12:29 ರಿಂದ ಸಂಜೆ 02:01, ಯಮಘಂಡ ಕಾಲ ಬೆಳಿಗ್ಗೆ 07:54 ರಿಂದ 09:26ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:57 ರಿಂದ 12:29ರ ವರೆಗೆ.

ಮೇಷ ರಾಶಿ : ಇಂದು ನಿಮ್ಮ. ವ್ಯವಹಾರದಲ್ಲಿ ಅನಗತ್ಯ ಚರ್ಚೆಯನ್ನು ತಪ್ಪಿಸಿ. ಉದ್ಯೋಗಕ್ಕಾಗಿ ಇಲ್ಲಿಂದ ಅಲ್ಲಿಗೆ ಅಲೆಯಬೇಕಾಗುತ್ತದೆ. ಪರಿಚಿತರನ್ನು ಅತಿಯಾಗಿ ನಂಬುವುದೂ ಮಾರಕವಾಗಬಹುದು. ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುವ ಜನರು ತಮ್ಮ ಮೇಲಧಿಕಾರಿಯಿಂದ ಟೀಕೆಗೆ ಒಳಗಾಗಬಹುದು. ಪ್ರೇಮ ಜೀವನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಜಾಣ್ಮೆಯಿಂದ ನಿರ್ವಹಿಸಿ. ಸಣ್ಣಪುಟ್ಟ ಸಮಸ್ಯೆಗಳತ್ತ ಗಮನ ಹರಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾಗುವುದು. ಎಚ್ಚರಿಕೆಯಿಂದ ಯೋಚಿಸಿದ ಅನಂತರ ನಿಮ್ಮ ವ್ಯಾಪಾರ ಯೋಜನೆಯನ್ನು ರಹಸ್ಯವಾಗಿ ಕೈಗೊಳ್ಳಿ. ಯಾರು ಏನು ಹೇಳಿದರೂ ಕೇಳಬೇಡಿ. ಇಂದು ವಾಹನ ಖರೀದಿಸುವುದನ್ನು ತಪ್ಪಿಸಿ. ಹೊಸ ವ್ಯಕ್ತಿಗಳ ಪರಿಚಯವಾಗಲಿದ್ದು ಆಪ್ತತೆಯೂ ಬೆಳೆದು, ವಿನಾಕಾರಣ ದೂರವೂ ಆಗಬಹುದು. ಹಿರಿಯರ ಜೊತೆಗಿನ ಮಾತುಕತೆ ನಿಮಗೆ ಪ್ರಯೋಜನಕಾರಿಯಾಗಲಿದೆ.

ವೃಷಭ ರಾಶಿ : ಧಾರ್ಮಿಕ ಆಸಕ್ತಿಯಲ್ಲಿ ಕೊರತೆ ಕಾಣಿಸುವುದು. ಉದ್ಯಮ ಕ್ಷೇತ್ರದಲ್ಲಿ ಹೊಸ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹಣದ ವ್ಯವಹಾರಗಳಲ್ಲಿ ಸ್ವಲ್ಪ ಎಚ್ಚರಿಕೆ ಬಳಸಿ. ವೈದ್ಯಕೀಯ ವೃತ್ತಿಗೆ ಸಂಬಂಧಿಸಿದ ಜನರು ಗಮನಾರ್ಹ ಯಶಸ್ಸು ಕಾಣುವರು. ಪ್ರೀತಿಯ ವಿಚಾರದಲ್ಲಿ ಪ್ರಾಮಾಣಿಕವಾಗಿರುವುದು ಮುಖ್ಯ. ಇಂದು ಅನುಪಯುಕ್ತ ವಿಷಯಗಳ ಬಗ್ಗೆ ಮಾತನಾಡುವುದು ಒಳ್ಳೆಯದಲ್ಲ. ಕಚೇರಿಯ ಒತ್ತಡವನ್ನು ನಿಮ್ಮ ಮನೆಗೆ ತರುವುದು ಬೇಡ. ಇಂದು ನೀವು ನಿಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ವಾಹನ ಸಂಚಾರದಲ್ಲಿ ಜಾಗರೂಕತೆ ಇದ್ದರೂ ಅಪಘಾತ ಸಾಧ್ಯತೆ ಇದೆ. ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಕೊರತೆಯಿಂದ ಹಿನ್ನಡೆ. ಕುಟುಂಬದಲ್ಲಿ ಕಲಹದ ಕಾರಣ ಕೆಲಸ ಕಾರ್ಯವು ವಿಳಂಬವಾಗುವುದು. ತಾಳ್ಮೆಯಿಂದ ಎಲ್ಲವನ್ನೂ ಮಾಡುವ ಅನಿವಾರ್ಯತೆಯೂ ಇರುವುದು.

ಮಿಥುನ ರಾಶಿ : ಇಂದು ಉದ್ಯೋಗದಲ್ಲಿ ಉನ್ನತ ಅಧಿಕಾರಿಗಳ ಜೊತೆ ಆತ್ಮೀಯತೆ ಹೆಚ್ಚಾಗಬಹುದು. ಸರ್ಕಾರದಿಂದ ಆಗುವ ಕಾರ್ಯವು ಅಪೂರ್ಣವಾಗಿಯೇ ಇರುವುದು. ಕಳೆದು ಹೋದ ಬಗ್ಗೆ ಹೆಚ್ಚು ಯೋಚಿಸಿ ಮಾತನಾಡಬೇಡಿ. ಇದರಿಂದ ನಿಮ್ಮ ಸಂಗಾತಿಗೆ ನೋವಾಗಬಹುದು. ನಿಮ್ಮ ಸಂಗಾತಿಯನ್ನು ಯಾವುದೇ ಷರತ್ತುಗಳಿಲ್ಲದೇ ನೋಡಿಕೊಳ್ಳಿ. ಉದ್ಯೋಗಕ್ಕಾಗಿ ಅಲೆದಾಡುವ ಜನರಿಗೆ ಇಂದು ಉದ್ಯೋಗ ದೊರೆಯಲಿದೆ. ಭೂವ್ಯವಹಾರವು ರಾಜಕೀಯ ತಿರುವನ್ನು ಪಡೆಯಬಹುದು. ಚಾಂಚಲ್ಯದ ಸ್ವಭಾವವು ನಿಮ್ಮ ನಿಯಂತ್ರಣಕ್ಕೆ ಬರಬೇಕಿದೆ. ಉದ್ಯಮದಲ್ಲಿ ಹೊಸ ಸಹವರ್ತಿಗಳು ಸಿಗುವರು. ನೀವು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರವನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಅಲಂಕಾರದ ಬಗ್ಗೆ ಹೆಚ್ಚಿನ ಗಮನವಿರಲಿದೆ. ಜನರು ತಮ್ಮ ಮೇಲಧಿಕಾರಿಯಿಂದ ಪ್ರೋತ್ಸಾಹವನ್ನು ಪಡೆಯುವರು.

ಕರ್ಕಾಟಕ ರಾಶಿ : ಇಂದು ನಿರುದ್ಯೋಗಿಗಳಿಗೆ ಒಂದೊಂದೆ ಚಿಂತೆ ಕಾಡುವುದು. ವ್ಯಾಪಾರದಲ್ಲಿ ಉತ್ತಮ‌ ಫಲಿತಾಂಶಕ್ಕಾಗಿ ಕಾಯುವಿರಿ. ಹೊಸ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬಹುದು. ಕಠಿಣ ಪರಿಶ್ರಮದಿಂದ ಹಿಂದೆ ಸರಿಯುವುದು ಅಪಮಾನವೆನಿಸಬಹುದು. ನಿಮ್ಮ ಒಳ್ಳೆಯ ಮತ್ತು ಕೆಟ್ಟ ಭಾವನೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಿ. ಜೀವನ ಸಂಗಾತಿಯನ್ನು ಬೆಂಬಲಿಸಿ. ಸಾಧ್ಯವಾದಷ್ಟು. ಸಂಬಂಧವನ್ನು ಬಲಪಡಿಸಲು ಪ್ರಯತ್ನಿಸಿ. ಇಂದು ನಿಮ್ಮ ಸಂಬಂಧವು ಪೋಷಕರ ಬೆಂಬಲವನ್ನು ಪಡೆಯಬಹುದು. ನೀವು ರಾಜಕೀಯದಲ್ಲಿ ಕೆಲವು ಪ್ರಮುಖ ಜವಾಬ್ದಾರಿಗಳನ್ನು ಪಡೆಯಬೇಕಾಗಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಬರುವುದು. ಸಮಾಜದಲ್ಲಿ ಗೌರವ, ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳುವಿರಿ.

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ