Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 07 April: ಈ ರಾಶಿಯವರ ಸಹವಾಸ ಬಹುಕ್ಷೇಶಕರ, ಬಿಟ್ಟರೂ ಹಿಡಿದರೂ ತೊಂದರೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಸೋಮವಾರ ವ್ಯಾವಹಾರಿಕ ಶುದ್ಧಿ, ಒಳ್ಳೆಯದನ್ನು ಮಾಡುವ ಬುದ್ಧಿ, ಕಲೆಯ ಸಿದ್ಧಿ ಇವೆಲ್ಲ ಈ ದಿನದಂದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 07 April: ಈ ರಾಶಿಯವರ ಸಹವಾಸ ಬಹುಕ್ಷೇಶಕರ, ಬಿಟ್ಟರೂ ಹಿಡಿದರೂ ತೊಂದರೆ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Apr 07, 2025 | 1:05 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಸುಕರ್ಮ, ಕರಣ: ಭದ್ರ, ಸೂರ್ಯೋದಯ – 06:25 am, ಸೂರ್ಯಾಸ್ತ – 06:44 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:58 – 09:30, ಯಮಘಂಡ ಕಾಲ 11:02 – 12:35, ಗುಳಿಕ ಕಾಲ 14:07 – 15:40

ಮೇಷ ರಾಶಿ: ನೀವು ಈಗಲೇ ಮನೆಯ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಆಸಕ್ತಿ ತೋರಿಸಲಾರಿರಿ. ಆರಾಮಾಗಿ ಇರುವ ಯೋಚನೆ ಇದೆ. ಎಲ್ಲದಕ್ಕೂ ಕುಟುಂಬದ ಸಹಕಾರವನ್ನು ಪಡೆಯುವಿರಿ. ಸಂಗಾತಿಯ ಸಂಪತ್ತಿನಿಂದ ಖುಷಿಪಡುವಿರಿ. ಕುಟುಂಬದೊಂದಿಗೆ ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಯೋಜಿಸಬಹುದು. ಖರ್ಚುಗಳು ಅಧಿಕವಾಗಿರುತ್ತವೆ. ನಿಮ್ಮ ಮೇಲಿನ ಪ್ರೀತಿಯಿಂದ ಯಾರಾದರೂ ಅಗತ್ಯ ಸಹಕಾರವನ್ನು ಕೊಡುವರು. ವ್ಯಾಪಾರವನ್ನು ವಿಸ್ತರಿಸಲು ಕುಟುಂಬದ ಸದಸ್ಯರ ಸಹಾಯ ತೆಗೆದುಕೊಳ್ಳಬೇಕಾಗಬಹುದು. ನಿಮ್ಮ ವೃತ್ತಿಗೆ ಸಂಬಂಧಿಸಿದ ಬೇರೆ ಬೇರೆ ಮಜಲುಗಳನ್ನು ಅರಿಯುವಿರಿ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಮುಖ್ಯ ಕೆಲಸವನ್ನು ನೀವು ಮರೆಯುವಿರಿ. ಅಪರಿಚಿತರಿಂದ ನಿಮಗೆ ಕೆಲಸ ಸಿಗಬಹುದು. ಇಂದು ನೀವು ಮಾನಸಿಕವಾಗಿ ತುಂಬಾ ಆಯಾಸವನ್ನು ಅನುಭವಿಸಬಹುದು. ಪ್ರೇಮ ಜೀವನದಲ್ಲಿ ಏರಿಳಿತಗಳಿರಬಹುದು.

ವೃಷಭ ರಾಶಿ: ಮಾನಸಿಕವಾಗಿ ಉತ್ಸಾಹವು ಭಂಗಗೊಳ್ಳುವ ಸಾಧ್ಯತೆಯಿದೆ. ಪಿತ್ರಾರ್ಜಿತ ಸಂಪತ್ತಿನಿಂದ ಸುಖವು ಇರುವುದು. ಸಹೋದರ ಜೊತೆ ಕಲಹವು ಆಗಬಹುದು. ಬಂಧುಗಳಿಂದ‌ ಸಹಾಯ ದೊರೆಯಬಹುದು. ಮನಸ್ಸಿನಲ್ಲಿ ನೀವು ತಾಜಾತನವನ್ನು ಅನುಭವಿಸುವಿರಿ. ನೀವು ಕೆಲಸದಲ್ಲಿ ಸಹೋದ್ಯೋಗಿಗಳಿಂದ ಸಹಾಯ ಪಡೆಯುವುದನ್ನು ಮುಂದುವರಿಸುತ್ತೀರಿ. ನಿಮಗೆ ಬೆಂಬಲ ಸಿಗುತ್ತದೆ. ವೈರಾಗ್ಯಭಾವವನ್ನು ಉಂಟಾಗಲಿದೆ. ನೀವು ಕೆಲವು ನಿರಾಶಾದಾಯಕ ಮಾಹಿತಿಯನ್ನು ಇಂದು ಪಡೆಯುವಿರಿ. ನಿಮ್ಮ ದೀರ್ಘಾವಧಿಯ ಕಾನೂನು ಪ್ರಕರಣವು ನಿಮ್ಮ ಪರವಾಗಿ ಬಂದಿದ್ದು ಖುಷಿಕೊಡುವುದು. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ. ವೃತ್ತಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳ ನಿರೀಕ್ಷೆಯಲ್ಲಿ ಇರುವಿರಿ. ಶತ್ರುಗಳು ಪ್ರಬಲರಾಗದಂತೆ ನೋಡಿಕೊಳ್ಳಿ. ಕೆಲವು ಸಂಕೀರ್ಣವಾದ ವಿಷಯಗಳನ್ನು ಪರಿಹರಿಸಬಹುದು.

ಮಿಥುನ ರಾಶಿ: ಇಂದು ನಿಮ್ಮ ಪ್ರಭಾವವು ಜನರಿಗೆ ತಾನಾಗಿಯೇ ಗೊತ್ತಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಸಿಗದೆಂದು ಮತ್ತೇನನ್ನೋ ಮಾಡಲು ಹೋಗುವುದು ಬೇಡ. ನಿಮ್ಮ ಪ್ರತಿಭೆಯನ್ನು ಗುರುತಿಸುವುದೂ ಕಷ್ಟವೇ. ಅನಾರೋಗ್ಯದಿಂದ ಬಳಲುವಿರಿ. ನೀವು ಶೈಕ್ಷಣಿಕ ಕೆಲಸಕ್ಕಾಗಿ ಬೇರೆ ಸ್ಥಳಕ್ಕೆ ಹೋಗಬಹುದು. ನಿಮಗೆ ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ನಿಮಗೆ ಆರ್ಥಿಕ ಲಾಭಗಳು ಸಿಗುವ ಸಾಧ್ಯತೆ ಇದೆ. ವ್ಯವಹಾರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಪುತ್ರನಿಂದ ಧನಸಹಾಯ ಸಿಗಲಿದೆ‌. ನಿಮ್ಮ ಒಳ್ಳೆಯ ತನಕ್ಕೆ ಗೆಲವು. ನಿಮ್ಮ ನಾಯಕತ್ವದ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವಿರಿ. ನಿಮ್ಮ ಆಪ್ತರ ಜೊತೆ ಕೆಲವು ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಸ್ನೇಹಿತರ ಜೊತೆ ಸಂಬಂಧದಲ್ಲಿ ನಡೆಯುತ್ತಿರುವ ಭಿನ್ನಾಭಿಪ್ರಾಯವು ಪರಿಹರಿಸಲ್ಪಡುತ್ತದೆ. ಭೂಮಿಯ ವ್ಯವಹಾರದಲ್ಲಿ ಬೇಸರ ಬರಬಹುದು. ನಿಮ್ಮ ಬಗ್ಗೆ ಇರುವ ಭಾವನೆ ಬದಲಾಗುವುದು. ನೀವು ಆಡಂಬರದಿಂದ ದೂರವಿರಿ. ಆರ್ಥಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ಬಂಧುಗಳ ಜೊತೆ ಚರ್ಚಿಸುವಿರಿ.

ಕರ್ಕಾಟಕ ರಾಶಿ: ಮಾತಿನಿಂದ ನಿಮಗೆ ಆಗಬೇಕಾದ ಕೆಲಸವು ಆಗುವುದು. ಕುಟುಂಬದಲ್ಲಿ ಸ್ವಸ್ಥವಾತಾವರಣ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಯಾವುದೇ ಸಮಸ್ಯೆ ಇದ್ದಕ್ಕಿದ್ದಂತೆ ಉದ್ಭವಿಸಬಹುದು. ನಿಮ್ಮ ಖರ್ಚಿನ ಪ್ರಮಾಣ ಹೆಚ್ಚಾಗುತ್ತದೆ. ಮಾತನಾಡುವಾಗ ನೀವು ಜಾಗರೂಕರಾಗಿರಬೇಕು. ಆದರೆ ಇಂದು ಲಾಭದ ಅವಕಾಶಗಳು ಇರುತ್ತವೆ, ಆದರೆ ಸುತ್ತಲೂ ಓಡಾಟ ಕೂಡ ಇರುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಂಡೀತು. ಪೂರ್ವಜರ ಪುಣ್ಯ ನಿಮ್ಮನ್ನು ಆಪತ್ತಿಂದ ಕಾಪಾಡಲಿದೆ. ಶಿಕ್ಷಕವೃತ್ತಿಯಲ್ಲಿ ಮಾನಸಿಕ ನೆಮ್ಮದಿ ಇಲ್ಲ. ಧನಾಗಮನವಾಗುವ ಸಾಧ್ಯತೆ ಇದೆ. ಅನಾರೋಗ್ಯದ ಕಾರಣಕ್ಕೆ ಹಣವನ್ನು ವ್ಯಯಿಸುವಿರಿ. ಇಂದು ನೀವು ಯಾರಿಂದಲೋ ಪಡೆದ ಹಣವನ್ನು ಮರಳಿಸುವುದು ಸೂಕ್ತ. ನಿಮ್ಮ ಇಂದಿನ ದಿನಚರಿಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು.

ಸಿಂಹ ರಾಶಿ: ಇಂದು ನೀವು ಪಿತ್ರಾರ್ಜಿತ ಆಸ್ತಿಯ ಬಗ್ಗೆ ಆಸಕ್ತಿ ಹೊಂದುವಿರಿ.‌ ನಿಮ್ಮ ಪ್ರಭಾವ ಇಂದು ಯಾವ ಕಾರ್ಯಕ್ಕೂ ಸಹಾಯಮಾಡದು. ಬೌದ್ಧಿಕ ಕೆಲಸಗಳು ಆದಾಯದ ಮೂಲಗಳನ್ನು ಸೃಷ್ಟಿಸುತ್ತವೆ. ವ್ಯವಹಾರ ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ಸಹೋದರ ಸಹೋದರಿಯರಿಂದ ನೀವು ಆರ್ಥಿಕ ಸಹಾಯವನ್ನು ಪಡೆಯಬಹುದು. ಅವರೆದುರು ನಿಮ್ಮ ಪ್ರತಿಭೆಯ ಅನಾವರಣವಿಂದು. ಹಳೆಯ ನೋವುಗಳು ಇಂದು ಹೆಚ್ವಾಗಬಹುದು. ಸಂಗಾತಿಯ ಜೊತೆ ಮನಿಸು ಕಾಣಿಸಿಕೊಳ್ಳುವುದು. ಧಾರ್ಮಿಕ ಕಾರ್ಯಗಳನ್ನು ಮಾಡಲು ಮನಸ್ಸು ಇಚ್ಛಿಸುವುದು. ಸಹೋದರನಿಂದ‌ ಸಹಾಯ ಸಿಗಲಿದೆ. ವ್ಯಯಿಸುವ ಸಂಪತ್ತಿಗೆ ಕಡಿವಾಣ ಹಾಕಿಕೊಳ್ಳಿ. ನೀವು ಹಿರಿಯರ ಮಾತನ್ನು ಕೇಳಬೇಕು ಮತ್ತು ಅನುಸರಿಸುವದೂ ಮುಖ್ಯ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು. ನೀವು ಇಂದು ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಇಂದು ಹಠಾತ್ ಘಟನೆಯ ಬಗ್ಗೆ ಯಾವುದೇ ತಕ್ಷಣದ ನಿರ್ಧಾರ ತೆಗೆದುಕೊಳ್ಳುವುದನ್ನು ಬೇಡ.

ಕನ್ಯಾ ರಾಶಿ: ಎಷ್ಟೇ ಎಚ್ಷರವಿದ್ದರೂ ಪ್ರೀತಿಯಲ್ಲಿ ಬೀಳುವ ಸಾಧ್ಯತೆ ಇದೆ.‌ ಇಂದು ಹುಟ್ಟಿದ್ದು ನೈಜವಾದ ಪ್ರೇಮವೇ ಆಗಿರಬೇಕಿಂದಿಲ್ಲ. ಕಾಲಿನ ನೋವಿನಿಂದ ಓಡಾಡ ಕಷ್ಟ.‌ ಪ್ರವಾಸ ಹೋಗುವ ಬಗ್ಗೆ ಯೋಚಿಸಬಹುದು. ನಿಮ್ಮ ಮಕ್ಕಳು ಮತ್ತು ಹೆಂಡತಿಯಿಂದಲೂ ನೀವು ಸಂತೋಷವನ್ನು ಪಡೆಯುತ್ತೀರಿ. ನಿಮ್ಮ ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ಮಾತನಾಡದೇ ಸುಮ್ಮನಿರುವುದು ಒಳ್ಳೆಯದು. ಅದು ಇಂದು ಪೂರ್ಣಗೊಳ್ಳುವುದಕ್ಕೆ ಒತ್ತಡವು ಅನಿವಾರ್ಯವಾದೀತು. ಸಂಪನ್ಮೂಲಗಳನ್ನು ಕಾಳಜಿಯಿಂದ ರಕ್ಷಿಸಿಕೊಳ್ಳಿ. ಆದಾಯದ ಸ್ವಲ್ಪ ಭಾಗವನ್ನು ಉಳಿಸಲು ಬೇಕಾದ ಚಿಂತನೆ ಇರಲಿದೆ. ಯಾವುದಾರೂ ಅಪ್ರಬುದ್ಧ ವಿವಾದಕ್ಕೆ ಸಿಲುಕಿಕೊಂಡು ಮನಸ್ತಾಪವಾಗುವುದು. ನಿಮ್ಮ ಮಕ್ಕಳ ಜೀವನವನ್ನು ಸುಧಾರಿಸಲು ನೀವು ಪ್ರಯತ್ನಿಸುತ್ತೀರಿ. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ. ನಿಮ್ಮ ಆಸೆಯೂ ಈಡೇರುತ್ತದೆ. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ನೀವು ಅಗತ್ಯ ಸಹಾಯವನ್ನು ಪಡೆಯುತ್ತೀರಿ.

ತುಲಾ ರಾಶಿ: ನಿಮ್ಮ ಸಂಗಾತಿಯ ಮುಗ್ಧ ಪ್ರೀತಿಯು ಅರ್ಥವಾಗಿ ಪಶ್ಚಾತ್ತಪಪಡುವಿರಿ. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಾಣುವುದು. ಮಕ್ಕಳೇ ಶತ್ರುಗಳಂತೆ ವರ್ತಿಸಿಯಾರು. ನಿಮ್ಮ ಕೆಲಸವನ್ನು ಜನರು ಮಾಡುವಂತೆ ಮಾಡುವಲ್ಲಿ ನೀವು ಹೆಚ್ಚಿನ ಮಟ್ಟಿಗೆ ಯಶಸ್ವಿಯಾಗುತ್ತೀರಿ. ಧರ್ಮಕಾರ್ಯಗಳಲ್ಲಿ ಅನಾಸಕ್ತಿಯೆದ್ದು ತೋರುವುದು. ನೀವಾಡುವ ಮಾತುಗಳನ್ನು ನಿಮ್ಮ ಸಹಾಯಕ್ಕೆ ಇದ್ದವರು ಕೇಳಬಹುದು. ಯಾರ ಮೇಲೂ ಅಸೂಯೆಪಡದೇ ನಿರ್ಮಲ‌ಮನಸ್ಸಿನಿಂದ ಇರುವಿರಿ. ಇಂದು ನಿಮ್ಮವರೆ ಮೇಲೆ‌ ಅತಿಯಾದ ಅಕ್ಕರೆ ಇರುವುದು. ಶತ್ರುಗಳು ನಿಮ್ಮ ಹಿಂದೆ ಗಾಸಿಪ್ ಮಾಡಬಹುದು. ಇದು ನಿಮ್ಮ ಪ್ರಚಾರದ ಮೇಲೂ ಪರಿಣಾಮ ಬೀರಬಹುದು. ಅತಿಯಾದ ಕ್ರಮವನ್ನು ತೆಗೆದುಕೊಳ್ಳುವುದು ಬೇಡ. ನಿಮ್ಮ ವ್ಯವಹಾರದ ದೀರ್ಘಾವಧಿಯ ಯೋಜನೆಗಳಿಗೆ ನೀವು ಸಂಪೂರ್ಣ ಗಮನ ಹರಿಸಬೇಕು. ನಿಮ್ಮ ತಾಯಿವು ದೈಹಿಕ ನೋವನ್ನು ಅನುಭವಿಸಬಹುದು. ನಿಮ್ಮ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಬೇಕಾಗುತ್ತದೆ.

ವೃಶ್ಚಿಕ ರಾಶಿ: ಅಪ್ರಯೋಜನವಾದ ವಿಷಯದ ಬಹ್ಗೆ ಹೆಚ್ಚು ಚರ್ಚೆ ಮಾಡುವಿರಿ. ಅಕಾರಣವಾಗಿ ಶೀಘ್ರ ಕೋಪಿಗಳಾಗುವಿರಿ. ಸತ್ಯವನ್ನು ಅರ್ಥಮಾಡಿಕೊಳ್ಳಲು ಮನಸ್ಸು ನಿಮ್ಮದಾಗಿರುವುದಿಲ್ಲ. ಉದ್ಯೋಗದಲ್ಲಿ ಬಡ್ತಿಯ ಹಾಗೂ ಬದಲಾವಣೆ ಸಿಗುವ ಸಾಧ್ಯತೆ ಇದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಧರ್ಮಕರ್ಮಗಳಲ್ಲಿ ಭಾಗವಹಿಸಿ. ಮಾನಸಿಕ ನೆಮ್ಮದಿಯು ನಿಮ್ಮದಾದೀತು. ನೀವು ಹಿಂಜರಿಕೆಯಿಲ್ಲದೆ ಅಂದುಕೊಂಡ ಕಾರ್ಯದಲ್ಲಿ ಮುಂದುವರಿಯುವಿರಿ. ನಿಮ್ಮ ಬಗ್ಗೆ ನಡೆಯುತ್ತಿರುವ ಅಪಶ್ರುತಿ ಬಗೆಹರಿಯಲಿದೆ. ಕೆಲಸಗಳು ಪೂರ್ಣಗೊಳ್ಳಲು ನೀವು ದೀರ್ಘಕಾಲ ಕಾಯುತ್ತಿದ್ದರೆ, ಅದು ಸಂಭವಿಸಬಹುದು. ಆತ್ಮವಿಶ್ವಾಸವು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲು ಆಗದು. ಇಂದು ನೀವು ಜನರನ್ನು ಆಕರ್ಷಿಸುವಿರಿ. ಜನರು ನಿಮ್ಮ ಆಲೋಚನಾ ವಿಧಾನವನ್ನು ಇಷ್ಟಪಡುತ್ತಾರೆ. ನಿಮ್ಮ ಸಲಹೆಯಿಂದ ಜನರು ಪ್ರಯೋಜನ ಪಡೆಯುತ್ತಾರೆ. ಇಂದು ಕೆಲವು ಒಳ್ಳೆಯ ಸುದ್ದಿಗಾಗಿ ಕಾಯುತ್ತಿದ್ದಾರೆ. ಪ್ರೀತಿಯ ಜೀವನಕ್ಕೆ ದಿನವು ಸಾಮಾನ್ಯವಾಗಿದೆ.

ಧನು ರಾಶಿ: ಇಂದು ನಿಮ್ಮ ಸುತ್ತಲು ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನುವ ಕಾಯುತ್ತಿರಬಹುದು. ನಿಮಗೆ ಬಂದ ಕಾರ್ಯಗಳನ್ನು ನೀವೇ ಮಾಡಿ. ಅನಗತ್ಯ ಕೋಪ ಮತ್ತು ವಾದಗಳನ್ನು ತಪ್ಪಿಸಿ. ಶತ್ರುಗಳ ಹೇಗೂ ಪ್ರವೇಶ ಮಾಡಬಹುದು. ನಿಮ್ಮ ಕೆಲಸದಲ್ಲಿ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಆದರೆ ಕೆಲಸದ ಸ್ಥಳದಲ್ಲಿ ತೊಂದರೆಗಳು ಉಂಟಾಗಬಹುದು. ಮಾತುಗಳನ್ನು ಎಚ್ಚರದಿಂದ ಆಡಿ. ಮಾತು ಕಂಟಕಗಳನ್ನು ತಂದೀತು. ನಿಮ್ಮ ಜೀವನಶೈಲಿಯನ್ನು ಆಕರ್ಷಕವಾಗಿಸಲು ನೀವು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ನಿಮ್ಮ ಪೋಷಕರ ಜೊತೆ ಕೆಲವು ವಿಷಯದ ಬಗ್ಗೆ ನೀವು ಕಲಹದ ಸಾಧ್ಯತೆ ಇದೆ. ಮಕ್ಕಳಿಗಾಗಿ ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಬಹುದು. ವಿರೋಧಿಗಳನ್ನು ತತ್ಸಾರ ಮಾಡುವ ಅವಶ್ಯಕತೆ ಇಲ್ಲ. ಮಾತು ನಿಯಂತ್ರಣ ತಪ್ಪಬಹುದು. ಕೆಲಸದ ಸ್ಥಳದಲ್ಲಿ ವಾತಾವರಣವು ನಿಮಗೆ ಅನುಕೂಲಕರವಾಗಿಲ್ಲದಿದ್ದರೆ, ನಿಮ್ಮ ಮನಃಸ್ಥಿತಿಯು ಹದಗೆಡುತ್ತದೆ. ದೈನಂದಿನ ಕೆಲಸದಲ್ಲಿ ಸಮಸ್ಯೆಗಳು ಉಳಿಯಬಹುದು. ನೀವು ಯೋಜಿಸಿದ ನಿಮ್ಮ ಕೆಲಸವೂ ಪೂರ್ಣಗೊಳ್ಳುವುದಿಲ್ಲ.

ಮಕರ ರಾಶಿ: ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ. ಸಂಗಾತಿಗೆ ಇಷ್ಟವಾಗುವ ಕೆಲಸವನ್ನು ಮಾಡಿ, ಆಕೆಯ ಸಿಹಿಯಪ್ಪುಗೆಯ ಅನುಭವವನ್ನು ಪಡಯುವಿರಿ. ಪ್ರೀತಿಪಾತ್ರರನ್ನು ಭೇಟಿ ಆಗುವುದರಿಂದ ನೀವು ಸಂತೋಷವನ್ನು ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರುತ್ತದೆ. ಆರಂಭದಲ್ಲಿ ಕೆಲವು ತೊಂದರೆಗಳು ಎದುರಾಗಬಹುದು. ಆರೋಗ್ಯವನ್ನು ಕಾಪಾಡಿಕೊಳ್ಳುವತ್ತ ಪ್ರಯತ್ನಿಸಿ. ನೀವು ಕೆಲವು ಸಣ್ಣ ಕೆಲಸವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ, ಸರಿಯಾದ ಸಮಯಕ್ಕಾಗಿ ಕಾಯಿರಿ. ವ್ಯವಹಾರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು. ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು. ಒಳ್ಳೆಯ ಮಾತುಗಳನ್ನು ಹೇಳುವ ಮೂಲಕ ನಿಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೀರಿ.

ಕುಂಭ ರಾಶಿ: ನಿಮ್ಮ ಉತ್ತಮ ಸ್ನೇಹಿತರ ಬಳಗವನ್ನು ಹೊಂದಿ ಈ ದಿನ ಹೆಚ್ಚಿನ ಸಮಯವನ್ನು ಅವರ ಜೊತೆ ಕಳೆಯುವಿರಿ. ನಿಮಗೆ ವೃತ್ತಿಸಂಬಂಧ ಸಮಸ್ಯೆಗಳು ಯಾರದೋ ಮೂಲಕ ಎದುರಾಗಬಹುದು. ಕಲೆ ಮತ್ತು ಸಾಹಿತ್ಯದಲ್ಲಿ ನಿಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ನಿಮಗೆ ಸಾಧ್ಯವಾಗುತ್ತದೆ. ತಾಯಿ ಮತ್ತು ಕುಟುಂಬದ ಎಲ್ಲ ಸದಸ್ಯರೊಂದಿಗೆ ಆತ್ಮೀಯತೆ ಹೆಚ್ಚಾಗುತ್ತದೆ. ಅಲ್ಪಾವಧಿಯ ವಲಸೆಯ ಸಾಧ್ಯತೆಯಿದೆ. ಚಾಣಾಕ್ಷ ಬುದ್ಧಿಯಿಂದ ಅದನ್ನು ಪರಿಹರಿಸಿಕೊಳ್ಳುವಿರಿ. ಬಾಕಿ ಉಳಿಸಕೊಂಡ ಕೆಲಸವನ್ನು ಶೀಘ್ರವಾಗಿ ಮುಗಿಸುವಿರಿ. ಕುಟುಂಬದ ಎಲ್ಲರನ್ನು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತೀರಿ. ಪ್ರಮುಖ ಕೆಲಸಗಳಲ್ಲಿ ವಿಳಂಬ ಮಾಡಬೇಡಿ. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ನೀವು ಮಕ್ಕಳಿಂದ ಬೆಂಬಲವನ್ನು ಪಡೆಯುತ್ತೀರಿ. ನೀವು ಕಠಿಣ ಪರಿಶ್ರಮದಿಂದ ನಿಮ್ಮ ಯೋಜನೆಯನ್ನು ಪೂರ್ಣಗೊಳಿಸುತ್ತೀರಿ.

ಮೀನ ರಾಶಿ: ಮನೆಯಲ್ಲಿ ಯಾರಿಂದಲಾದರೂ ನಿಮಗೆ ನಿರಾಸೆಯ ಅನುಭವವಾಗಬಹುದು. ಸಹೋದರರ ನಡುವೆ ಮನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರುಬುದು. ಶೈಕ್ಷಣಿಕ ಕೆಲಸವು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ಆದರೆ ನಿಮ್ಮ ತಾಯಿಯ ಅನಾರೋಗ್ಯದ ಕಾರಣ ನೀವು ಚಿಂತೆಯಲ್ಲಿರುತ್ತೀರಿ. ನಿಮ್ಮ ಗೌರವಕ್ಕೆ ಧಕ್ಕೆ ಉಂಟಾಗುವುದರಿಂದ ನೀವು ದುಃಖಿತರಾಗುವಿರಿ. ಆಪ್ತರ ಭೇಟಿ ಹಾಗೂ ಮಾರ್ಗದರ್ಶನದ ಸುತ್ತಾಟದಲ್ಲಿ ಇಂದು ಮುಕ್ತಾಯಗೊಳ್ಳಲಿದೆ‌. ಪ್ರಶಂಸೆಗಳು ನಿಮ್ಮನ್ನು ಅರಸಿ ಬರಲಿವೆ. ನಿಮ್ಮ ಕೆಲಸದ ಸ್ಥಳದಲ್ಲಿ ನಿಮ್ಮನ್ನು ಹೆಚ್ಚು ಗಮನಿಸುತ್ತ ಇರಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರು ತಮ್ಮ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುವುದು. ನಿಮ್ಮ ಕೆಲಸಕ್ಕಿಂತ ಇತರರ ಕೆಲಸಗಳ ಮೇಲೆ ಹೆಚ್ಚು ಗಮನವಿರುವುದು. ನಿಮ್ಮ ಮೇಲೆ ದುಷ್ಪರಿಣಾಮ ಬೀರಬಹುದು. ಉದ್ಯಮಿಗಳಿಗೆ ಸಮಯ ಉತ್ತಮವಾಗಿಲ್ಲ. ಯಾರಿಗೂ ಸಾಲ ನೀಡುವುದನ್ನು ತಪ್ಪಿಸಿ. ಹಳೆಯ ಸಾಲವು ನಿಮಗೆ ಒತ್ತಡವನ್ನು ಉಂಟುಮಾಡಬಹುದು.

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!