ಉದ್ಯಮದ ಯಶಸ್ಸಿಗೆ ಪ್ರಶಂಸೆ, ಪ್ರಶಸ್ತಿಗಳು ಬರಲಿವೆ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಮಂಗಳವಾರ ಗಣ್ಯರ ಒಡನಾಟ, ಆದಾಯದಲ್ಲಿ ತನ್ಮಯತೆ, ಮರೆವಿಗೆ ಮದ್ದು, ಪಕ್ಷಪಾತದಿಂದ ಬೇಸರ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶೂಲಿ, ಕರಣ: ಕೌಲವ, ಸೂರ್ಯೋದಯ – 06 : 08 am, ಸೂರ್ಯಾಸ್ತ – 07 – 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:51 – 17:28, ಯಮಘಂಡ ಕಾಲ 09:23 – 10:59, ಗುಳಿಕ ಕಾಲ 12:37 – 14:14
ಮೇಷ ರಾಶಿ: ಉದ್ಯಮದ ಯಶಸ್ಸಿಗೆ ಪ್ರಶಂಸೆ, ಪ್ರಶಸ್ತಿಗಳು ಬರಲಿವೆ. ಇಂದು ನಿಮ್ಮನ್ನು ನೀವು ಪ್ರಶಂಸಿಸಿಕೊಳ್ಳುವುದು ಇತರರಿಗೆ ಇಷ್ಟವಾಗದು. ಉಪಯೋಗಕ್ಕೆ ಬಾರದ ಕೆಲಸವನ್ನು ಬಿಟ್ಟುಬಿಡುವುದು ಒಳ್ಳೆಯದು. ಗಣ್ಯರ ಜೊತೆ ಉತ್ತಮ ಸಂಪರ್ಕ ಹೊಂದುವಿರಿ. ಮಂಗಲಕರವಾದ ಕಾರ್ಯಗಳನ್ನು ಮಾಡಲಿದ್ದೀರಿ. ಮನೆಯಲ್ಲಿಯೇ ಇರುವ ನಿಮಗೆ ಮನೆಯವರ ಮಾತುಗಳು ಕಿರಿಕಿರಿ ಎನಿಸಬಹುದು. ನಿಮ್ಮ ಮಾತು ಜೊತೆಗಾರರಿಗೆ ಮನ ನೋಯುವಂತೆ ಇರಲಿದೆ. ನೀವು ಇಂದು ನಡೆದಾಡಲೂ ಇಷ್ಟಪಡುವುದಿಲ್ಲ. ಕಂಕಣಬಲ ಕೂಡಿ ಬರಲು ಯಾತ್ರೆ ಮಾಡುವಿರಿ. ಒಂದು ಸಂದರ್ಭದಂತೆ ಮತ್ತೊಂದು ಸಂದರ್ಭವನ್ನು ಊಹಿಸಿಕೊಳ್ಳಬೇಡಿ. ನಿಮ್ಮ ವೇಗವನ್ನು ಹಿಮ್ಮೆಟ್ಟಿಸಲು ನಾನಾ ತಂತ್ರಗಳು ನಡೆಯಬಹುದು. ನಿಮ್ಮ ಕೆಲಸವೇ ಅವರಿಗೆ ಉತ್ತರವಾಗಲಿ. ಮಾತು ಆದಷ್ಟು ಕಡಿಮೆ ಇರುವುದೇ ಒಳ್ಳೆಯದು. ನಿಮ್ಮನ್ನು ದಿಕ್ಕು ತಪ್ಪಿಸಿ ವೇಗವನ್ನು ಕಡಿಮೆ ಮಾಡಿಸಬಹುದು. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ಅಂತಃಕರಣದ ಒಪ್ಪಿಗೆಯಿಂದ ಕಾರ್ಯವನ್ನು ಮಾಡುವಿರಿ.
ವೃಷಭ ರಾಶಿ: ಆರೋಗ್ಯದ ಬಾಧೆಯಿಂದ ಉದ್ಯೋಗಕ್ಕೆ ತೊಂದರೆ. ಇಂದು ಕಳೆದುಕೊಂಡ ಸಂಪತ್ತು ನಿಮಗೆ ಸಿಗದು. ನಿಮ್ಮ ಸಂತೋಷಕ್ಕೆ ಕಾರಣದ ಅವಶ್ಯಕತೆ ಇಲ್ಲ. ನೀವು ಕೊಟ್ಟಿರುವ ಸಂಪತ್ತು ತಾನಾಗಿಯೇ ಬರಲಿದೆ. ದಾಂಪತ್ಯವು ಸುಖವಾಗಿರಲು ಇಬ್ಬರೂ ಪ್ರಯತ್ನಿಸಬೇಕು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಜನರು ಬಹಳ ಪ್ರಯತ್ನಿಸಬಹುದು. ನಿಮ್ಮ ನಡೆಯು ಸುಲಭಕ್ಕೆ ತಿಳಿಯದು. ಐಷಾರಾಮಿಯಾಗಿ ಇರಲು ಈ ದಿನವನ್ನು ಇಷ್ಟಪಡುವಿರಿ. ಅನಿರೀಕ್ಷಿತವಾಗಿ ಧನಾಗಮನದಿಂದ ಸಂತೋಷ ಸಿಗಲಿದೆ. ಸ್ತ್ರೀಯರ ಜೊತೆ ಅಗೌರವ ತೋರುವಿರಿ. ಆರ್ಥಿಕತೆಯಲ್ಲಿ ಭಿನ್ನಾಭಿಪ್ರಾಯಗಳು ಬರಬಹುದು. ಸ್ನೇಹಿತರಿಗೆ ಸಹಾಯವನ್ನು ಮಾಡುವಿರಿ. ಕಾರ್ಯವು ನಿಧಾನವಾಗಿದೆ ಎಂದು ಕಂಡರೂ ಚಿಂತೆ ಬೇಡ. ಪೂರ್ಣವಾಗಲಿ ಸರಿಯಾಗಿ. ನಿಮ್ಮ ಬಳಿ ಯಾರೂ ವಾದಮಾಡಬಾರದು ಎನ್ನವ ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಇನ್ನೊಬ್ಬರನ್ನು ಕೆರಳಿಸುವ ಸ್ವಭಾವವನ್ನು ಬಿಡುವುದು ಉತ್ತಮ.
ಮಿಥುನ ರಾಶಿ: ಆದಾಯವನ್ನು ಹೆಚ್ಚಿಸಿಕೊಳ್ಳುವ ಉತ್ಸಾಹ ಕಾಣಲಿದೆ. ಮೇಲಧಿಕಾರಿಗಳು ತೋರಿಸುವ ಪಕ್ಷಪಾತದ ಧೋರಣೆಯು ನೀವು ಸಹಿಸಲಾರಿರಿ. ನಿಮಗೆ ಬೇಕಾದ ಸಲಹೆ ಸಹಕಾರಗಳು ಸಿಗಲಿವೆ. ಬಂಧುಗಳ ಮಾತು ಕಹಿ ಎನಿಸಬಹುದು. ನಿಮ್ಮ ಮನಸ್ಸನ್ನು ಕುಗ್ಗಿಸಬಹುದು. ಸಂಗಾತಿಯ ಅಸಂಬದ್ಧ ಮಾತುಗಳನ್ನು ಕೇಳಿ ನಿಮಗೆ ಬೇಸರವಾದೀತು. ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಿಯಿಂದ ಭಾಗವಹಿಸುವಿರಿ. ದುಷ್ಟ ಶಕ್ತಿಯಿಂದ ತೊಂದರೆಯಾಗುವ ಅನುಮಾನ ಕಾಡವುದು. ವಾಹನದಿಂದ ಆಗುವ ಅಪಘಾತವು ಸಣ್ಣ ಅಂತರದಿಂದ ರಕ್ಷಣೆಯಾಗುವಿರಿ. ಸ್ನೇಹಿತರ ಅಥವಾ ಕುಟುಂಬದ ಜೊತೆ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಸಂಗಾತಿಯನ್ನು ತಿದ್ದುವ ಮೂರ್ಖತನ ಬೇಡ. ಆರ್ಥಿಕವಾಗಿ ದುರ್ಬಲವಲ್ಲದಿದ್ದರೂ ಸಮಯಕ್ಕೆ ಸರಿಯಾಗಿ ಹಣವಂತೂ ಸಿಗದು. ತಿದ್ದಿಕೊಳ್ಳುವ ಅಂಶಗಳನ್ನು ಗಮನಿಸುವುದು ಮುಖ್ಯವಾದೀತು. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಆಲಸ್ಯದಿಂದ ಕೆಲವು ಅನಿವಾರ್ಯ ಕಾರ್ಯವನ್ನು ಮಾಡಲಾರಿರಿ.
ಕರ್ಕಾಟಕ ರಾಶಿ: ನಿಮಗೆ ಗೊತ್ತಿರುವುದನ್ನು ಇತರರಿಗೆ ಹೇಳುವಿರಿ. ಎಲ್ಲ ಸಂದರ್ಭವನ್ನೂ ಆರ್ಥಿಕ ದೃಷ್ಟಿಯಿಂದ ಅಳೆಯುವುದು ಕಷ್ಟವೇ ಆದೀತು. ಹಳೆಯ ಸಿಟ್ಟನ್ನು ನೆನಪಿಸಿಕೊಂಡು ದ್ವೇಷವನ್ನು ಸಾಧಿಸುವ ಕೆಲಸವನ್ನು ಮಾಡಬೇಡಿ. ನಿಮ್ಮ ಹಳೆಯ ವಾಹನವನ್ನು ಮಾರಾಟಮಾಡುವ ಆಲೋಚನೆ ಮಾಡುವಿರಿ. ಎಲ್ಲವೂ ಗೊತ್ತಿದೆ ಎಂಬ ಅಹಂಕಾರವನ್ನು ತೋರಿಸುವಿರಿ. ಉದ್ಯೋಗದ ನಿಮಿತ್ತ ನೀವು ಹೊರದೇಶಕ್ಕೆ ಹೋಗಬಹುದು. ಅನೇಕ ವರ್ಷಗಳ ಅನಂತರ ಆದ ಸಂತಾನದಿಂದ ಸಂತಸ ಆಗಲಿದೆ. ವಿವಾಹ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಆಪ್ಯಾಯಮಾನವಾದ ಸಂಗತಿಗಳಿಗೆ ಮನ ಸೋಲುವುದು. ಹಳೆಯ ಸ್ನೇಹಿತರು ಸಿಕ್ಕಿ ಹಳೆಯ ವಿಚಾರಗಳನ್ನು ಸ್ಮರಿಸಿಕೊಳ್ಳುವಿರಿ. ಸ್ವಂತ ಉದ್ಯೋಗವಿದ್ದರೆ ಹೆಚ್ಚು ಶ್ರಮ ಆದೀತು. ನಿಮ್ಮ ಪರೀಕ್ಷೆಯನ್ನು ನೀವು ಮಾಡಿಕೊಳ್ಳುವುದು ಉತ್ತಮ. ಉನ್ನತ ಅಧಿಕಾರದ ಆಸೆಯನ್ನು ಸಹೋದ್ಯೋಗಿಗಳು ನಿಮಗೆ ತಿಳಿಸಬಹುದು. ಕಾನೂನಾತ್ಮಕ ವಿಚಾರವು ನಿಮಗೆ ಅರ್ಥವಾಗದಿರಬಹುದು.
ಸಿಂಹ ರಾಶಿ: ಮರೆವು ನಿಮಗೆ ಹೆಚ್ಚಾದಂತೆ ತೋರಲಿದ್ದು, ಅದನ್ನು ಸರಿಮಾಡುವ ಕ್ರಮವು ಅರಿವಾಗದು. ಇಂದು ಮನೆಯ ನಿರ್ಮಾಣದ ಕಾರ್ಯಕ್ಕೆ ನಿಮ್ಮವರಿಂದ ತೊಂದರೆ ಬರಬಹುದು. ಯಾರಾದರೂ ನಿಮ್ಮ ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸದೇ ತೊಂದರೆಗಳನ್ನು ಕೊಡಬಹುದು. ಮನೆಯ ಹಿರಿಯರ ಸೇವೆಯನ್ನು ಮಾಡುವಿರಿ. ಸರ್ಕಾರಿ ಉದ್ಯೋಗದವರಿಗೆ ಕಛೇರಿಯಲ್ಲಿ ಕಿರಿಕಿರಿಯಾಗಬಹುದು. ಕಂಟಕವನ್ನು ಲಘುವಾಗಿ ಕಾಣುವುದು ಬೇಡ. ಬಂಧುಗಳ ಮಾತಿನಿಂದ ಬೇಸರವಾದರೂ ಅದನ್ನು ತೋರಿಸಿಕೊಳ್ಳುವುದಿಲ್ಲ. ನಿಮ್ಮ ಮಕ್ಕಳು ನಿಮಗೇ ತಿರುಗಿ ಉತ್ತರ ನೀಡುವರು. ಸ್ನೇಹದಲ್ಲಿ ಒಳಿತು ಎರಡೂ ಕಡೆಯಲ್ಲಿದ್ದರೆ ಚೆಂದ. ಊಹೆಗೂ ಮೀರಿದ ಧನಲಾಭವು ಆಗಬಹುದು. ಇನ್ನೊಬ್ಬರ ಬಗ್ಗೆ ಚಿಂತಿಸುವ ಬದಲು ನಿಮ್ಮ ಬಗ್ಗಯೇ ಆಲೋಚಿಸಿ. ಒಂದಿಷ್ಟು ಬದಲಾವಣೆಗಳು ಆಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ವಿವಾಹದ ಬಗ್ಗೆ ಎಲ್ಲರೂ ನಿಮ್ಮನ್ನು ಪ್ರಶ್ನಿಸುವರು. ಮುಜುಗರಕ್ಕೆ ಸಿಕ್ಕಿಕೊಳ್ಳಬೇಕಾದೀತು.
ಕನ್ಯಾ ರಾಶಿ: ಆರೋಗ್ಯಕರ ಚರ್ಚೆಯು ಕಲಹವಾಗಿ ಬದಲಾಗುವುದು. ಇಂದು ನಿಮಗೆ ಗೊಂದಲಗಳಿಂದ ವೃತ್ತಿಯನ್ನು ನಿರ್ಧರಿಸಲು ಕಷ್ಟವಾದೀತು. ಹೊಸ ಕೆಲಸಗಳನ್ನು ಹುಡುಕಲು ಪ್ರಯತ್ನಿಸಿ. ಸಂಗಾತಿಯಿಂದ ಅಪಮಾನವೂ ಆಗಬಹುದು. ಆಸ್ತಿಯನ್ನು ಕಳೆದುಕೊಳ್ಳುವ ಸ್ಥಿತಿ ಬರಬಹುದು. ಆಗದ ಕೆಲಸಕ್ಕೆ ಸುಮ್ಮನೇ ಕೈ ಹಾಕಬೇಡಿ. ಅಧಿಕಾರಿಗಳಿಂದ ಏನಾದರೂ ತೊಂದರೆಯಾದೀತು. ಲೆಕ್ಕಪತ್ರವು ಇಂದು ಪರಿಶೀಲನಗೆ ಕೊಡಬೇಕಾಗುವುದು. ಅದೇ ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ನಿಮ್ಮನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಪಡಬೇಕಾದೀತು. ಬಂಧುಗಳಿಂದ ದೂರವಿರುವ ಮನಸ್ಸು ಮಾಡುವಿರಿ. ಹಣಕಾಸಿನ ತೊಂದರೆಯಿಂದ ಕೆಲವು ಕೆಲಸಗಳನ್ನು ಮುಂದೂಡುವಿರಿ. ಖರೀದಿಯ ವಿಚಾರದಲ್ಲಿಯೂ ಹಿಂಜರಿಯುವಿರಿ. ನೇರವಾದ ಮಾತುಗಳು ನಿಮಗೆ ಒಪ್ಪಿಗೆ ಆಗದೇಹೋಗಬಹುದು. ಅಧಿಕ ಲಾಭಕ್ಕೆ ಯೋಜನೆಯನ್ನು ರೂಪಿಸುವುದು ಒಳ್ಳೆಯದು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಕೋಪದಿಂದ ಎಲ್ಲವನ್ನೂ ಸಾಧಿಸಲಾಗದು.




