AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 05 August: ಇಂದು ಈ ರಾಶಿಯವರಿಗೆ ಅದೃಷ್ಟ ಸಂಪತ್ತು ಪ್ರಾಪ್ತಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಶ್ರಾವಣ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಮಂಗಳವಾರ ಪಿತ್ತದಿಂದ ರೋಗ, ಜಾಡ್ಯತೆಯ ನಿವಾರಣೆ, ತಂದೆಯಿಂದ ಅಕಾರಣ ನಿಂದನೆ, ಲಾಭ ಪಡೆಯಲು ಹಲವರಿಂದ ತಂತ್ರ ಇವೆಲ್ಲ ಈ ದಿನದ ವಿಶೇಷ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today 05 August: ಇಂದು ಈ ರಾಶಿಯವರಿಗೆ ಅದೃಷ್ಟ ಸಂಪತ್ತು ಪ್ರಾಪ್ತಿ
ದಿನ ಭವಿಷ್ಯ
TV9 Web
| Updated By: ವಿವೇಕ ಬಿರಾದಾರ|

Updated on: Aug 05, 2025 | 1:59 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ: ಕರ್ಕಾಟಕ, ಮಹಾನಕ್ಷತ್ರ: ಆಶ್ಲೇಷಾ, ವಾರ: ಮಂಗಳ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಬ್ರಹ್ಮ, ಕರಣ: ವಣಿಜ, ಸೂರ್ಯೋದಯ – 06 : 18 am, ಸೂರ್ಯಾಸ್ತ – 06 : 59 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:49 – 17:24 ಗುಳಿಕ ಕಾಲ 12:39 – 14:14 ಯಮಗಂಡ ಕಾಲ 09:28 – 11:04

ಮೇಷ ರಾಶಿ: ಯಾವ ಒತ್ತಡವೂ ಇಲ್ಲದೇ ನಿಮ್ಮ ಕೆಲಸ ವೇಗಪಡೆಯದು. ನಿಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯುವ ಅವಕಾಶವು ಮತ್ತೆ ಸಿಗುವುದು. ವಿವಾದಗಳಿಂದ ನೀವು ಆತಂಕದಲ್ಲಿ ಇರುವಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ನಿಮ್ಮ ಕಾರ್ಯಗಳಿಗೆ ಇಂದು ಸಂಗಾತಿಯು ಬೆಂಬಲ ನೀಡಬಹುದು. ಕಛೇರಿಯಲ್ಲಿ ಉಳಿದ ಕೆಲಸಗಳನ್ನು ಮಾಡಲು ನೀವು ಇಂದು ಆದ್ಯತೆ ನೀಡುವಿರಿ. ಮಾಧ್ಯಮದವರ ಮೇಲೆ ನಿಮಗೆ ಭಯವುಂಟಾಗುವುದು. ಬೇಕಾದ ವಿಷಯದಲ್ಲಿ ಬೇಕಾದಷ್ಟನ್ನು ಮಾತ್ರ ಮಾತನಾಡಿ. ನಿಮ್ಮನ್ನು ನಂಬಿದವರಿಗೆ ಸರಿಯಾದ ವ್ಯವಸ್ಥೆಯನ್ನು ಮಾಡಿಕೊಡುವಿರಿ. ನಿಮ್ಮ ಕಲ್ಪನೆಗಳು ವಾಸ್ತವಕ್ಕೆ ಹತ್ತಿರವಿರಲಿ. ಯುಕ್ತಿಯಿಂದ ಕೆಲಸವನ್ನು ಮಾಡಿ. ವಾಹನ ಖರೀದಿಗೆ ನಿಮ್ಮ ಬಳಗದ ಸಹಕಾರ ಇರುವುದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಹೆಚ್ಚಿನ ಆದಾಯದ ಬಗದಗೆ ಚಿಂತನೆ ಮಾಡುವಿರಿ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು ನೆನಪಿಸಿಕೊಳ್ಳುವಿರಿ.

ಮಿಥುನ ರಾಶಿ: ದೂರ ಪ್ರಯಾಣ ಹೊರಟ ನಿಮಗೆ ವಾಹನಗಳು ಸರಿಯಾಗಿ ಸಿಗದೇಹೋಗುವುದು. ಕೌಟುಂಬಿಕ ತೊಂದರೆಯನ್ನು ಧಾರ್ಮಿಕ ವಿಧಾನದಿಂದ ಸರಿಮಾಡಿಕೊಳ್ಳುವುದು ಉತ್ತಮ. ಆಪ್ತರ ಜೊತೆ ಹೊಸ ಉದ್ಯೋಗವನ್ನು ಆರಂಭಿಸುವ ಪ್ರಯತ್ನದಲ್ಲಿ ಇರುವಿರಿ. ಗೃಹ ಕೃತ್ಯಗಳನ್ನು ಪೂರೈಸಲು ಇಂದು ಅನುಕೂಲ ದಿನ. ಯಾರೋ ಕೊಡುವ ದುಡ್ಡಿಗೆ ಕಾಯುವುದು ಬೇಸರವೆನಿಸುವುದು. ನಿಮ್ಮ ಮಾತುಗಳನ್ನು ನಿರ್ಲಕ್ಷ್ಯ ಮಾಡಿದ್ದು ನಿಮಗೆ ಗೊತ್ತಾಗಿ ನೀವು ಅವರನ್ನು ದೂರವಿಡುವಿರಿ. ಕೊನೆಯ ಹಂತದಲ್ಲಿ ಆತುರ ತೋರಿ ಎಲ್ಲ ಕಾರ್ಯವನ್ನೂ ವ್ಯತ್ಯಾಸ ಮಾಡುವಿರಿ. ಹೊರ ಬರಲು ಸಮಯವನ್ನು ಕಾಯಬೇಕಾಬಹುದು. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಮನಸ್ಸಾಗಲಿದೆ‌. ಹಳೆಯ ನೆನಪಿನಿಂದ ನಿಮಗೆ ಸಂಕಟವಾಗುವುದು. ನಿಮಗಿಂತ ಹಿರಿಯರಿಗೆ ಗೌರವವನ್ನು ಕೊಡುವುದು ನೆನಪಿನಲ್ಲಿ ಇರಲಿ. ಭೂಮಿಯ ವ್ಯವಹಾರವು ಸ್ವಲ್ಪ ಹಿಮ್ಮುಖವಾಗಿ ಹೋಗಬಹುದು. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ.

ಮಿಥುನ ರಾಶಿ: ಹೇಳಿದ ಸಮಯಕ್ಕೆ ಬರದ ಪ್ರೇಮಿಯ ಮೇಲೆ ಸಿಟ್ಟಾಗುವಿರಿ. ಅಧಿಕಾರವು ನಿಮ್ಮದಾದ ಕಾರಣ ಜವಾಬ್ದಾರಿಯೂ ನಿಮ್ಮದೇ ಆಗಿರುತ್ತದೆ. ನಿಮಗೆ ಇಂದು ಧೈರ್ಯವು ಕಡಿಮೆ ಆದಂತೆ ತೋರುತ್ತದೆ. ಸರ್ಕಾರದಿಂದ ಬರುವ ಹಣಕ್ಕೆ ಕಾನೂನು ಮೆಟ್ಟಿಲೇರುವ ಸಂದರ್ಭ ಬರಬಹುದು. ಯಾವ ಕೆಲಸವನ್ನೂ ನೀವು ಭಯಮುಕ್ತವಾಗಿ ಮಾಡಲಾರಿರಿ. ಆಸ್ತಿಯನ್ನು ಇನ್ನೊಬ್ಬರು ಒಡೆದುಕೊಳ್ಳಲು ಸಂಚು ರೂಪಿಸುತ್ತಿರುವರು. ಆಹಾರವು ನಿಮಗೆ ಸರಿಯಾದ ಸಮಯಕ್ಕೆ ಸಿಗದು. ನಿಮ್ಮ ಬೇಜವಾಬ್ದಾರಿಯ ಮಾತುಗಳು ನಿಮ್ಮ ಉದ್ಯೋಗಕ್ಕೆ ತೊಂದರೆಯಾಗುವುದು. ಹೇಳಿದ ಕೆಲಸವನ್ನು ನಿಮಗೆ ಮಾಡಲಾಗದೇ ಒರಟಾಗಿ ಮಾತನಾಡುವಿರಿ. ಆಲಸ್ಯದಿಂದ ಹೊರಬಂದರೆ ನಿಮಗೆ ಹತ್ತಾರು ದಾರಿಗಳು ಕಾಣಿಸಿಕೊಂಡಾವು. ಮಿತಿ ಮೀರಿದ ನಿಮ್ಮ ವರ್ತನೆಯು ಕಿರಿಕಿರಿಯನ್ನು ಉಂಟುಮಾಡೀತು. ನಿಮ್ಮ ಮಾತನ್ನು ಸಂಗಾತಿಯು ತಳ್ಳಿಹಾಕಿದ್ದು ನಿಮಗೆ ಬೇಸರ ತಂದೀತು. ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಇಷ್ಟದವರನ್ನು ಭೇಟಿ ಮಾಡುವ ತವಕ.

ಕರ್ಕಾಟಕ ರಾಶಿ: ನಿಮ್ಮ ವಸ್ತುವನ್ನು ಮಾರಾಟ ಮಾಡಿಸಿಕೊಟ್ಟಿದ್ದಕ್ಕೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ‌ ಕಾಣಿಸುವುದು. ನಾಯಕರಾಗುವುದಕ್ಕಿಂತ ಹಾಗೆ ನಡೆದುಕೊಳ್ಳುವುದೂ ಮುಖ್ಯವಾಗಲಿದೆ. ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದು ಸಾಧಿಸುವಿರಿ. ನಿಮ್ಮ ಗೌಪ್ಯತೆಯನ್ನು ಕಾಪಾಡಲು ನೀವು ವಿಫಲರಾಗುವಿರಿ. ಉದ್ಯೋಗದಲ್ಲಿ ನೀವು ದಿಕ್ಕು ತೋಚದೆ ಬಹಳ ಆತಂಕ ಪಡುವಿರಿ. ನಿಮ್ಮದೇ ಆದ ಕೆಲಸಗಳು ನಿಮಗೆ ಬೇಕಾದಷ್ಟು ಇದ್ದರೂ ನೀವು ಅವುಗಳನ್ನು ಲೆಕ್ಕಿಸದೇ ನೀವು ಆರಾಮಾಗಿ ಇರುವಿರಿ. ಏಕಾಗ್ರತೆಯು ನಿಮ್ಮ ಕೆಲಸಕ್ಕೆ ಅತ್ಯುಪಕಾರಿಯಾಗಿದೆ. ವಿದೇಶಕ್ಕೆ ಹೋಗುವ ಸೂಚನೆ ಇಂದು ಸಿಗಬಹುದು. ಮಕ್ಕಳಿಂದ ಸ್ವಲ್ಪ ಕಿರಿಕಿರಿಯಾದೀತು. ಮಾತನಾಡದೇ ನಿಮ್ಮ ಕೆಲಸದಲ್ಲಿ ಮಗ್ನರಾಗಿರಿ. ಹೊಸ ಜನ, ಹೊಸ ಸ್ಥಳ ಹಾಗೂ ಹೊಸ ವಿಚಾರದ ಕಡೆ ಗಮನವು ಬೇಕೆನಿಸುವುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಇನ್ನೊಬ್ಬರಿಂದ ನಿಮಗೆ ಉತ್ತೇಜನ ಸಿಗಲಿದೆ. ಸಹೋದ್ಯೋಗಿಗಳ ಬಗ್ಗೆ ನಿಮಗೆ ಅನಾದರ ಬರಬಹುದು.

ಸಿಂಹ ರಾಶಿ: ಮನೆಗೆ ಬಂದು ಹಣ ಕೇಳುವವರಿಗೆ ಏನನ್ನೂ ಕೊಡದೇ ಕಳುಹಿಸುವಿರಿ. ಮಕ್ಕಳಿಂದ ನಿಮ್ಮ ತೊಂದರೆ ದೂರಾಗುವುದು. ನಿಮ್ಮರ ಜೊತೆ ನಿಮಗೆ ಕೆಲಸ ಮಾಡಲು ಸಾಧ್ಯವಾಗದೇ ಇರಬಹುದು. ನಿಮ್ಮ ಜೊತೆ ಕೆಲಸ ಮಾಡುವವರೂ ನಿಮ್ಮ ವರ್ತನೆಯನ್ನು ಸಹಿಸಲಾರದೇ ದೂರ ಉಳಿಯಬಹುದು. ನೀವು ಮಾಡಿಸಿದ ಮನೆಯ ಕೆಲಸವನ್ನು ಅಲ್ಲಗಳೆಯುವ ಕುಟುಂಬದವರಿಗೆ ಏನೂ ಉತ್ತರ ಕೊಡಲಾಗದು. ಹೂಡಿಕೆಯಿಂದ ನಿಮಗೆ ಆರ್ಥಿಕ ತೊಂದರೆ ಅನಿಸುವುದು. ಆಂತರಿಕ ಕಲಹವು ಅತಿಯಾದ ವ್ಯಥೆಯನ್ನು ಉಂಟುಮಾಡೀತು. ತುರ್ತು ಖರ್ಚಿಗೆ ಯಾರನ್ನಾದರೂ ಆಶ್ರಯಿಸುವಿರಿ. ಸೌಂದರ್ಯಕ್ಕೆ ಮನಸೋಲುವ ಸಾಧ್ಯತೆ ಇದೆ. ನಿಮ್ಮ ಮನಸ್ಸಿನ ಮೇಲೆ ಆದಷ್ಟು ನಿಯಂತ್ರಣವಿರಲಿ. ಬೇಡದ್ದರ ಕಡೆಗೆ ಮನಸ್ಸನ್ನು ಹರಿಸುವುದು ಬೇಡ. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಮಕ್ಕಳಿಗೆ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತೆಯಿಂದ ಇರುವುದು ಸುಖವೆನಿಸಬಹುದು. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು.

ಕನ್ಯಾ ರಾಶಿ: ನಿಮ್ಮ ಬಗೆಗಿನ ಅಭಿಮಾನವನ್ನು ದೂರವಾಗಿಸಿಕೊಳ್ಳುವುದು ಕಷ್ಟ. ಕುಟುಂಬದಲ್ಲಿ ಬರುವ ಕಲಹಕ್ಕೆ ವಿರಾಮದ ಅಗತ್ಯವಿದೆ. ದೀರ್ಘ ಮಾಡಿಕೊಂಡು ದಿನವನ್ನು ಹಾಳುಮಾಡಿಕೊಳ್ಳಬೇಕಾಗುವುದು. ಅನೀಕ್ಷಿತ ತಿರುವುಗಳು ನಿಮಗೆ ಬಹಳ ಉದ್ವೇಗವನ್ನು ಉಂಟುಮಾಡೀತು. ಮುಂಗಡ ಕೊಟ್ಟು ಮೋಸ ಹೋಗುವ ಸ್ಥಿತಿ ಬರಲಿದೆ. ಆತುರದಲ್ಲಿ ಏನನ್ನಾದರೂ ಮಾಡಿಕೊಳ್ಳುವ ಸಾಧ್ಯತೆ ಇದೆ. ಪಕ್ಷಪಾತಕ್ಕೆ ಸಂಬಂಧಿಸಿದಂತೆ ಅಪವಾದಗಳು ಕೇಳಿಬರಬಹುದು. ಉಪಕಾರದ ಸ್ಮರಣೆಯನ್ನು ನೀವು ಸದಾ ಇಟ್ಟಕೊಳ್ಳಬೇಕಾದೀತು. ದೂರ ಪ್ರಯಾಣವನ್ನು ಮಾಡುವ ಉತ್ಸಾಹವಿಲ್ಲದಿದ್ದರೂ ಮಾಡಬೇಕಾಗುವುದು. ಮಕ್ಕಳ ಜೊತೆಗಿನ ಸಲುಗೆಯು ನಿಮಗೆ ಕಷ್ಟವಾದೀತು. ಕೆಟ್ಟ ಕೆಲಸಗಳು ನಿಮ್ಮನ್ನು ಆಕರ್ಷಿಸಬಹುದು. ಸ್ವಂತಿಕೆಯನ್ನು ಇಲ್ಲಿ ಉಪಯೋಗಿಸಿ ಕೆಲಸಮಾಡಿ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ಮಕ್ಕಳ ತೀರ್ಮಾನಕ್ಕೆ ನೀವು ಬದ್ಧರಾಗಬೇಕಾಗುವುದು.

ತುಲಾ ರಾಶಿ: ನೀವು ಕೇಳಿದ್ದಕ್ಕಿಂತ ಹೆಚ್ಚು ಸಾಲ ಸಿಕ್ಕಿದೆ ಎಂಬ ಸಂತಸ ಇದೆ. ಆದರೆ ಅದರ ಬಡ್ಡಿಯ ಬಗ್ಗೆಯೂ ಚಿಂತನೆ ನಡೆಸುವುದು ಮುಖ್ಯ. ನಿಮಗೆ ಸಿಗುವ ಜಯದಿಂದ ಕುಟುಂಬಕ್ಕೆ ಸಂತಸ. ನಿಮಗೆ ಸಮಾಜಮುಖೀ ಕಾರ್ಯವನ್ನು ಮಾಡಲು ಉತ್ಸಾಹವಿದ್ದು ನಿಮಗೆ ಮಾರ್ಗದರ್ಶನದ ಕೊರತೆ ಕಾಣಬಹುದು. ಅನ್ನಸಂತರ್ಪಣೆಯ ಪುಣ್ಯವು ಪ್ರಾಪ್ತವಾಗಲಿದೆ. ಸಂಗಾತಿಯ ವಿಚಾರದಲ್ಲಿ ನೀವು ನಿರ್ಲಕ್ಷ್ಯ ತೋರಿಸಿದ್ದೀರಿ ಎಂದು ನಿಮ್ಮನ್ನು ದೂರಬಹುದು. ಅಕಾರಣಾವಾಗಿ ನಿಂದನೆ ಸರಿಯಲ್ಲ. ನಿಮ್ಮ ಮೇಲೆ ಅಪನಂಬಿಕೆಗಳು ಬರಬಹುದು. ವೈಯಕ್ತಿಕ ಖರ್ಚುಗಳ ಬಗ್ಗೆ ಲಕ್ಷ್ಯವಿರಲಿ. ತಂದೆಯ ಸಹಕಾರವು ನಿಮಗೆ ಸಿಗಲಿದೆ‌. ಸೋಲಿಂದ ಹೆದರುವ ಅವಶ್ಯಕತೆ ಇಲ್ಲ.‌ ಧೃತಿಗೆಡದೇ ಕಾರ್ಯವನ್ನು ಸಾಧಿಸಲು ಯೋಜನೆಯನ್ನು ಹೂಡಿ. ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಟ್ಟಿಯಾದ ತೀರ್ಮಾನವನ್ನು ಪಡೆಯುವುದು ಕಷ್ಟವಾಗುವುದು. ವಿವಾದವನ್ನು ಮಾಡಿಕೊಳ್ಳಲು ಮನಸ್ಸಾಗದು. ವಿಶ್ವಾಸವನ್ನು ಉಳಿಸಿಕೊಳ್ಳುವ ಬಗ್ಗೆ ನಿಮ್ಮ ಪ್ರಯತ್ನ ಇರುವುದು.

ವೃಶ್ಚಿಕ ರಾಶಿ: ನಿಮ್ಮ ಅಸ್ಮಿತೆಯನ್ನು ತೋರಿಸಿಕೊಡುವಿರಿ. ನಿಮ್ಮ‌ ಸಮಾನರಿಗೂ ಕೆಲವು ಸಂದರ್ಭದಲದಲಿ ಗೌರವ ಕೊಡಬೇಕಾಗುವುದು. ಮಕ್ಕಳ ವಿಚಾರದಲ್ಲಿ ಸಂತೋಷವಿರಲಿದೆ. ಸ್ತ್ರೀಯರು ಪುರುಷರನ್ನೂ ಪುರುಷರು ಸ್ತ್ರೀಯರನ್ನು ದ್ವೇಷಿಸುವರು. ಔಷಧವನ್ನು ಸೇವಿಸುವಾಗ ಅದರ ಮುಕ್ತಾಯದ ದಿನವನ್ನು ನೋಡಿಕೊಳ್ಳಿ. ಹಾಳಾದ ಔಷಧಿಂದ ಅಪಾಯ ಬರುವುದು. ಪಾಲುದಾರಿಕೆಯ ವ್ಯವಹಾರಗಳಲ್ಲಿ ಸಂಯಮವಿರಲಿ. ಕಷ್ಟವು ನಿಮ್ಮನ್ನು ಒಂದರಮೇಲೊಂದು ಬಂದು ಕಾಡಿದರೂ ನಿಮ್ಮ ಧೈರ್ಯವು ಕುಗ್ಗದು. ಹೊಸ ಕೆಲಸವನ್ನು ನೀವು ಆರಂಭಿಸುವ ಹುನ್ನಾರವು ಒಳ್ಳೆಯದೇ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಶುಭಫಲ. ಹಣದ ಚಿಂತೆ ಇರಲಿದ್ದು ಹೊಂದಿಸಿಕೊಳ್ಳಲು ಬೇಕಾದ ಕ್ರಮವನ್ನು ಕೈಗೊಳ್ಳುವಿರಿ. ನಿಮ್ಮ ದೌರ್ಬಲ್ಯಗಳನ್ನು ನೀವು ಇಂದು ಅವಲೋಕನ ಮಾಡಿಕೊಳ್ಳಬಹುದು. ಸಂದರ್ಭಕ್ಕೆ ಯೋಗ್ಯವಾದ ಮಾತುಗಳನ್ನು ನೀವಾಡಿ. ನಿಮ್ಮ ಸೋಲನ್ನು ಸಾಧಾರಣಕ್ಕೆ ಒಪ್ಪಿಕೊಳ್ಳಲಾರಿರಿ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ.

ಧನು ರಾಶಿ: ಸಂಗಾತಿ ಅಭಿಪ್ರಾಯ ಸರಿಯಿಲ್ಲದಿದ್ದರೂ ಒಪ್ಪಿಕೊಳ್ಳಬೇಕಾಗುವುದು. ಕಾನೂನಿಗೆ ಸಮ್ಮತವಾದ ಕಾರ್ಯವನ್ನು ಮಾಡುವಿರಿ. ನಿಮ್ಮ ತಿಳಿವಳಿಕೆಯ ಮಟ್ಟವು ಇತರರಿಗೆ ತಿಳಿಯಲಿದೆ. ನಿಮ್ಮ ಬಹುದಿನದ ನಿರೀಕ್ಷೆ ಇಂದು ಸಾಕಾರಗೊಳ್ಳಬಹುದು. ಕೃಷಿಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುವಿರಿ. ನಕಾರಾತ್ಮಕ ಚಿಂತನೆಯನ್ನು ಮಾಡಿ ಅವಕಾಶಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ದುಃಖವನ್ನು ಮರೆಯುವ ಸಂದರ್ಭವು ಬರಲಿದೆ. ವಿದೇಶದ ಶಿಕ್ಷಣಕ್ಕಾಗಿ ಅಲ್ಪ ಸಾಲ ಮಾಡಬೇಕಾಗುವುದು. ನಿಮಗೆ ಇಂದು ಅಪರಿಚಿತರಿಂದ ಅಪಮಾನವಾಗಬಹುದು. ನಿಮ್ಮ ಅಭಿಮಾನಕ್ಕೆ ತೊಂದರೆಯಾಗಬಹುದು. ಖಾಸಗಿ ಉದ್ಯೋಗಿಗಳಿಗೆ ವೇತನ ಹೆಚ್ಚಳಕ್ಕೆ ನಿಮ್ಮನ್ನು ಹಾಗೂ ನಿಮ್ಮ ಕಾರ್ಯವನ್ನೂ ವೀಕ್ಷಿಸಬಹುದು. ಹೂಡಿಕೆಯಿಂದ ಲಾಭವಾಗುವ ವಿಧಾನ ತಿಳಿಯುವಿರಿ. ವಿದ್ಯಾರ್ಥಿಗಳು ಪ್ರೋತ್ಸಾಹದ ಕೊರತೆಯಿಂದ ಹಿಂದೆ ಉಳಿದಾರು. ಯಾರಮೇಲೂ ಒತ್ತಡಬೇಡ. ಸಂಗಾತಿಯ ಮಾತುಗಳು ನಿಮಗೆ ಅನಿರೀಕ್ಷಿತ ಆದೀತು. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ.

ಮಕರ ರಾಶಿ: ಎಲ್ಲವೂ ಅರ್ಥವಾದಂತೆ ಅನಿಸದರೂ ಅನಂತರ ಖಾಲಿ ಖಾಲಿಯಾದ ಅನುಭವ. ಇಂದು ನೀವು ಬೇರೆಯವರ ಕಷ್ಟಕ್ಕೆ ಸ್ಪಂದಿಸಬೇಕಾಗಬಹುದು. ಸ್ವಂತ ಕಾರ್ಯಕ್ಕೆ ಸಮಯವನ್ನು ಪ್ರಯತ್ನಪೂರ್ವಕವಾಗಿ ತೆಗೆದುಕೊಳ್ಳಬೇಕಾಗಬಹುದು. ನಿರುದ್ಯೋಗದ ಬಗ್ಗೆ ನಿಮಗೆ ಬೇಸರವಾಗಬಹುದು. ಮುಗ್ಧತೆಯನ್ನು ಎಲ್ಲಾದರಲ್ಲಿ ತೋರಿಸಲಾಗದು. ನಿಮ್ಮ ಶಿಸ್ತನ್ನು ಪಾಲಿಸಲಾಗದೇ ಸಹೋದ್ಯೋಗಿಗಳು ಗೊಣಗುವರು. ಕುಟುಂಬವನ್ನು ನಿಭಾಯಿಸುವ ಸಾಮರ್ಥ್ಯವನ್ನು ನೀವು ಬೆಳಸಿಕೊಂಡಿದ್ದೀರಿ. ನಿಮ್ಮ ನಡೆಯನ್ನು ಆಡಿಕೊಳ್ಳುವುದು ನಿಮ್ಮವರಿಗೆ ಸಹಜವಾಗಿರುತ್ತದೆ. ಕೈಗಳು ಶಕ್ತಿಯನ್ನು ಇಂದು ಕಳೆದುಕೊಂಡ ಅನುಭವವಾಗಲಿದೆ. ವೇಗವಾದ ವಾಹನ ಚಾಲನೆಯಿಂದ ದಂಡ ತೆರಬೇಕಾಗಬಹುದು. ಕಾಲಿನ ಬಾಧೆಯಿಂದ ಕಷ್ಟವಾಗುವುದು. ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಪಾಲುದಾರಿಕೆಯಲ್ಲಿ ಅನವಶ್ಯಕ ವಾದವನ್ನು ಮಾಡಬೇಕಾಗುವುದು. ಉದ್ಯಮವು ಬೆಳವಣಿಗೆಯಿಂದ ಸಂತೋಷವಾಗಲಿದೆ.

ಕುಂಭ ರಾಶಿ: ಪರರ ರಹಸ್ಯವನ್ನು ಕೇಳುವ ಕುತೂಹಲವಿರುವುದು. ಇಂದು ನಿಮಗೆ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ ಕಡಿಮೆ ಆಗುವುದು. ಬಹಳ ದಿನಗಳ ಅನಂತರ ಹಿರಿಯರ ಭೇಟಿಯಿಂದ ಖುಷಿಯಾಗುವುದು. ಯಂತ್ರೋಪಕರಣಗಳಿಗೆ ನೀವು ಧನವನ್ನು ಕಳೆದುಕೊಳ್ಳುವಿರಿ. ಸಂಗಾತಿಯ ಮಾತನ್ನು ಕೇಳುವ ವ್ಯವಧಾನವು ಇಂದು ಕಡಿಮೆ ಇರುವುದು. ಕಚೇರಿ ಕೆಲಸದಲ್ಲಿ ನೆಮ್ಮದಿ ಇರದು. ಸಾಮಾನ್ಯವಾದ ಕೆಲಸವನ್ನು ಮಾಡಲೂ ಇಂದು ಜಾಡ್ಯ ಬರಬಹುದು. ಕಳೆದುಹೋದ ವಸ್ತುಗಳಿಗೆ ದುಃಖವಾಗುವುದು. ಮಂದಗತಿಯ ನಿಮ್ಮ ಕೆಲಸಕ್ಕೆ ಸಮಯವು ಸಾಲದೆಂದು ಅನ್ನಿಸಲಿದೆ. ಬೇಸರವನ್ನು ನೀವು ನುಂಗಿಕೊಳ್ಳುವುದು ಅಭ್ಯಾಸವಾದ ಸಂಗತಿಯಾಗಿದೆ. ಭೂಮಿಯನ್ನು ಕಳೆದುಕೊಳ್ಳಬೇಕಾಗಬಹುದು. ವಿನಾ ಕಾರಣ ಕಾಲಹರಣ ಮಾಡಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ವಾತರೋಗದಿಂದ ನಿಮಗೆ ಕಷ್ಟವಾಗುವುದು.

ಮೀನ ರಾಶಿ: ಚಿತ್ತವು ಏಕಾಗ್ರವಾಗಿದ್ದಾಗ ಸಣ್ಣ ಕ್ಷುಲ್ಲಕ ಸಂಗತಿಗಳು ಕಾಣಿಸದು. ಅವು ಬಂದರೂ ಗೊತ್ತಾಗದಂತೆ ಹೋಗುವುದು. ಇಂದು ನಿಮ್ಮ ಉದ್ಯೋಗದಲ್ಲಿ ಉತ್ತಮ ಪ್ರಗತಿಯು ಇರುವುದು. ವ್ಯವಹಾರಿಕ ನಷ್ಟವನ್ನು ಸರಿ ಮಾಡಿಕೊಳ್ಳುವ ಬಗೆಯನ್ನು ಚಿಂತಿಸುವಿರಿ. ದೈವಭಕ್ತಿಯ ಕೊರತೆ ಹೆಚ್ಚು ಇರಲಿದೆ. ನಿಮ್ಮ ಮಾತನ್ನು ಬದಲಾಯಿಸುವಿರಿ. ಮನ ಬಂದಂತೆ ವರ್ತನೆಯನ್ನು ನಿಲ್ಲಿಸಿ. ನಿಮ್ಮವರು ನಿಮಗೆ ಹತ್ತಿರವಾಗಲು ಅನೇಕ‌ ಕಾರಣಗಳು ಇರಬಹುದು. ಈ ವಿಚಾರದಲ್ಲಿ ನೀವು ಅಸಹಾಯಕರಾಗುವುದು ಯೋಗ್ಯವಿದೆ.‌ ವಾಹನ ಸಂಚಾರದಲ್ಲಿ ಗಮನಬೇಕು. ಸಂಗಾತಿಯನ್ನು ಹೆಚ್ಚು ಪ್ರೀತಿಸುವ ಅವಕಾಶ ಸಿಗಬಹುದು. ಆಕೆಗೆ ಬೇಕಾದ ವಸ್ತುಗಳನ್ನು ನೀವು ತಂದುಕೊಡುವಿರಿ. ನಿಮ್ಮ ನಡುವೆ ಸಂತೋಷದ ಬಾಂಧವ್ಯ ಇನ್ನಷ್ಟು ಬಿಗಿಯಾಗುವುದು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ