AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 07 August: ಇಂದು ಈ ರಾಶಿಯವರಿಗೆ ಸಿಕ್ಕ ವಸ್ತುವಿನಿಂದ ಅಪಾಯ ಆರಂಭ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಶ್ರಾವಣ ಮಾಸ ಶುಕ್ಲ ಪಕ್ಷದ ಚತುರ್ದಶೀ ತಿಥಿ ಗುರುವಾರ ನಿರ್ಲಕ್ಷ್ಯದ ಅನುಭವ, ವ್ಯಕ್ತಿಯ ಬದಲಾವಣೆ, ಔದ್ಯೋಗಿಕ ವ್ಯಕ್ತಿತ್ವ, ಸಮೂಹದಲ್ಲಿ ತಪ್ಪು, ಅತಿಮಾನಿಷ ಶಕ್ತಿಯ ಆವಾಹನೆ ಇವೆಲ್ಲ ಈ ದಿನದ ಭವಿಷ್ಯ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today 07 August: ಇಂದು ಈ ರಾಶಿಯವರಿಗೆ ಸಿಕ್ಕ ವಸ್ತುವಿನಿಂದ ಅಪಾಯ ಆರಂಭ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Aug 07, 2025 | 1:37 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ: ಕರ್ಕಾಟಕ, ಮಹಾನಕ್ಷತ್ರ: ಆಶ್ಲೇಷಾ, ವಾರ: ಗುರು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ವೈಧೃತಿ, ಕರಣ: ಕೌಲವ, ಸೂರ್ಯೋದಯ – 06 : 18 am, ಸೂರ್ಯಾಸ್ತ – 06 : 58 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 14:13 – 15:48 ಗುಳಿಕ ಕಾಲ 09:08 – 11:03 ಯಮಗಂಡ ಕಾಲ 06:19 – 07:54

ಮೇಷ ರಾಶಿ: ಇಂದು ನಿಮಗೆ ಮಾನಸಿಕ ಹಾಗೂ ದೈಹಿಕ ಶ್ರಮಕ್ಕೆ ಒಪ್ಪಿಗೆಯನ್ನು ಮನಸ್ಸೇ ಕೊಡದು. ನೀವು ಈಗಲೇ ಮನೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಮರ್ಥರಿಲ್ಲ. ಎಲ್ಲದಕ್ಕೂ ಕುಟುಂಬದ ಸಹಕಾರವನ್ನು ಪಡೆಯುವಿರಿ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ನಿರೀಕ್ಷಿತ ಗುರಿಯನ್ನು ತಲುಪಲು‌ ನೀವು ವಿಳಂಬ ಆಗಬಹುದು. ಇನ್ನೊಬ್ಬರ ತಪ್ಪನ್ನು ಅರ್ಥಮಾಡಿಕೊಳ್ಳುವ ಸ್ಥಿತಿಯಲ್ಲಿ ನೀವು ಇರಲಾರಿರಿ. ವಿಕಲ್ಪಗಳು ನಿಮ್ಮ ಮಾರ್ಗಕ್ಕೆ ಆಗಾಗ ಅಡ್ಡಿಯನ್ನು ಕೊಡುತ್ತವೆ. ದಾರಿಯನ್ನು ಸರಿ ಮಾಡಿಕೊಳ್ಳುವುದು ಉತ್ತಮ. ಪರೀಕ್ಷೆಗಳನ್ನು ಎದುರಿಸುವುದು ನಿಮಗೆ ಸಹಜ ಕೆಲಸವಾಗಿದೆ. ಜೀವನ ಪರೀಕ್ಷೆಯನ್ನೂ ಜೀವನಕ್ಕೆ ಬೇಕಾದ ಪರೀಕ್ಷೆಯನ್ನೂ ನೀವು ಎದುರಿಸುವಿರಿ. ನಿಮ್ಮ ಪ್ರೇಮಿಗೆ ಅಚ್ಚರಿಯ ಉಡುಗೊರೆ ನೀಡಲು ಇಂದು ಸೂಕ್ತ ದಿನ. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ವಿಶ್ವಾಸವನ್ನು ಹೆಚ್ಚಿಸುತ್ತದೆ. ಸಂಗಾತಿಯ ಜೊತೆಗಿನ ಸಂಬಂಧವನ್ನು ಗಟ್ಟಿಯಾಗಿಸುವಿರಿ. ನಿಮ್ಮನ್ನು ನಂಬಿದವರಿಗೆ ಕಿಂಚಿತ್ ಸಹಾಯವೂ ದೊಡ್ಡದಾಗಿರುತ್ತದೆ.

ಮಿಥುನ ರಾಶಿ: ಅರಿಸಿದ್ದು ಒಳ್ಳೆಯ ವ್ಯಕ್ತಿಯೇ ಆದರೂ ಸಮಯ ಅವನನ್ನು ಬದಲಿಸುವುದು. ಬಹಳ ಹಳೆಯ ಗೆಳೆಯನವಾದರೂ ಹಂಚಿಕೊಳ್ಳುವಷ್ಟು ಆಪ್ತತೆ ಬಾರದು. ಎಲ್ಲ ಶರತ್ತುಗಳಿಗೂ ಸರಿಯಾದ ನಿಬಂಧನೆ ಇರಲಿ. ಪಿತ್ರಾರ್ಜಿತ ಸಂಪತ್ತಿನಿಂದ ಸುಖವು ಇರುವುದು. ಸಹೋದರ ಜೊತೆ ಕಲಹವು ಆಗಬಹುದು. ಸಾಹಸ ಮಾಡಲು ಹೋಗುವಾಗ ಎಚ್ಚರವಿರಲಿ. ‌ಮುಖಭಂಗ ಮಾಡಿಕೊಂಡು ಬರಬೇಕಾದೀತು. ಆಪ್ತರಿಂದ ಧನವನ್ನು ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ವಿದ್ಯಾಭ್ಯಾಸವನ್ನು ನೀವು ಅನ್ಯರ ಒತ್ತಾಯಕ್ಕೆ ಮಾಡುವಿರಿ. ಸ್ವಪ್ರತಿಷ್ಠೆ ಜಾಗವನ್ನಾದರೂ ಉಳಿಸಿಕೊಳ್ಳುವಷ್ಟು ಒಳ್ಳೆಯವರಾಗಿ. ಗೊತ್ತಿಲ್ಲ ಕೆಲಸವನ್ನು ಕಲಿತು ಸಾಧಿಸಿದ್ದು ನಿಮಗೆ ಹೆಮ್ಮೆಯಾಗಲಿದೆ. ಸ್ವಂತಿಕೆಯ ವಿಚಾರದಲ್ಲಿ ನಿಮಗೆ ಗೊಂದಲವೆನಿಸುವುದು. ಜಾಣ್ಮೆಯಿಂದ ನೀವು ಬೇರೆಯರಿಂದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಅತಿಯಾದ ಮರೆವು ಉಂಟಾಗಲಿದೆ ಇಂದು. ಪರಿಚಯವಿಲ್ಲದ ಜನರಿಂದ ನೀವು ಅಂತರವನ್ನು ಕಾಯ್ದುಕೊಳ್ಳುವಿರಿ.

ಮಿಥುನ ರಾಶಿ: ಎಲ್ಲ ಕಡೆಗಳಲ್ಲಿ ಔದ್ಯೋಗದ ಮಾನಸಿಕತೆಯಲ್ಲಿ ಇರುವಿರಿ. ಉದ್ಯೋಗದಲ್ಲಿ ಎಲ್ಲಿಗಾದರೂ ಪ್ರಯಾಣ ಮಾಡುವ ಅವಕಾಶ ಬರುವುದು. ಇಂದು ನಿಮ್ಮ ಪ್ರಭಾವವು ಜನರಿಗೆ ತಾನಾಗಿಯೇ ಗೊತ್ತಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಸಿಗದೆಂದು ಮತ್ತೇನನ್ನೋ ಮಾಡಲು ಹೋಗುವುದು ಬೇಡ. ಸರ್ಕಾರದಲ್ಲಿ ಆಗಬೇಕಾದ ನಿಮ್ಮ ಕೆಲಸವು ಸ್ವಲ್ಪ ವೇಗವನ್ನು ಪಡೆಯವುದು. ಅಹಂಕಾರಕ್ಕೆ ಪೆಟ್ಟಾದರೆ ಅಹಂ ಹೋಗುತ್ತದೆ.‌ ಕೇವಲ ಕಾರ ಮಾತ್ರ ಉಳಿಯುತ್ತದೆ. ಅಧಿಕಾರಿಗಳ ಭೇಟಿಯಿಂದ ಆದಾಯವು ಚಿಂತಿಸಿದ ಮಟ್ಟದಲ್ಲಿದ್ದರೂ ಖರ್ಚು ಅದಕ್ಕಿಂತಲೂ ಹೆಚ್ಚಾಗಲಿದೆ. ನೀವು ಇಂದು ವೃತ್ತಿಯನ್ನು ಆನಂದಿಸುವಿರಿ. ದೇಹದ ಕೆಲವು ಭಾಗಗಳಲ್ಲಿ ತಾತದ ಕಾರಣದಿಂದ ನೋವುಗಳು ಕಾಣಿಸಬಹುದು. ಕೃಷಿಯ ಉತ್ಪನ್ನಗಳನ್ನು ಮಾರಾಟ ಮಾಡಲು ನೀವು ಸೋಲಬಹುದು. ಯಾರೋ ನೀಡಿದ ವಸ್ತುಗಳನ್ನು ಉಪಯೋಗಿಸುವಾಗ ಹಿಂದೇಟು ಹಾಕುವಿರಿ. ನಿಮ್ಮ ಆಪ್ತರ ಜೊತೆ ಕೆಲವು ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಸ್ನೇಹಿತರ ಜೊತೆ ಸಂಬಂಧದಲ್ಲಿ ನಡೆಯುತ್ತಿರುವ ಭಿನ್ನಾಭಿಪ್ರಾಯ ದೂರ.

ಕರ್ಕಾಟಕ ರಾಶಿ: ಒಮ್ಮೆ ಸಿಕ್ಕ ರುಚಿಯಿಂದ ವಿಮುಖರಾಗುವುದು ಸುಲಭವಲ್ಲ. ನಿಮಗೆ ಬೇರೆ ಕಡೆಗಳಿಂದ ಬರಬೇಕಾದ ಹಣವು ಆಕಸ್ಮಿಕವಾಗಿ ಬರಲಿದೆ. ನಿಮ್ಮ ಮಾತಿನಿಂದ ಇಂದು ಆಗಬೇಕಾದ ಕೆಲಸವು ಆಗುವುದು. ನವೀನ ಆಲೋಚನೆಗಳು ಮತ್ತು ಸೃಜನಶೀಲತೆಯೊಂದಿಗೆ ಮಾಡಿದ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಇಂದು ನೀವು ಹೆಚ್ಚು ಶೋಕಿ ಮಾಡಲು ಇಷ್ಡಪಡುವಿರಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಕೇಳಿಯಾರು. ಸ್ತ್ರೀಯರು ನಿಮ್ಮ ತಾಳ್ಮೆಯನ್ನು ಕೆಡಿಸುವರು. ಕೊಟ್ಟರೂ ಕೊಡದಿದ್ದರೂ ಮನಸ್ತಾಪ ಏಳಬಹುದು. ಯೋಗ್ಯ ವಿವಾಹಸಂಬಂಧವು ಬರಬಹುದು‌. ನಿಮ್ಮ ಕ್ಷುಲ್ಲಕ ಕಾರಣದಿಂದ ಅದನ್ನು ಬಿಟ್ಟ ಬಿಡುವುದು ಬೇಡ. ಮನಸ್ಸನ್ನು ಸಂಗಾತಿಯ ಜೊತೆ ಹಂಚಿಕೊಳ್ಳಿ. ನೀವು ದೊಡ್ಡ ಅಪಾಯವನ್ನು ತೆಗೆದುಕೊಳ್ಳುವ ಶಕ್ತಿಯನ್ನು ಇಟ್ಟುಕೊಂಡಿಲ್ಲ. ದೂರದಲ್ಲಿ ಇದ್ದರಷ್ಟೇ ಚೆನ್ನ ಎಲ್ಲವೂ ಎನ್ನುವ ಅರಿವು ಬರಬಹುದು. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು. ಕೆಲವು ವಿಶೇಷ ಕೆಲಸಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.

ಸಿಂಹ ರಾಶಿ: ನಿಮ್ಮ ನಿರ್ಧಾರವನ್ನು ಮೇಲಿನವರು ನಿಮ್ಮನ್ನು ಕೇಳದೇ ಬದಲಿಸುವರು. ಇದರಿಂದ ಮನಸ್ಸಿಗೆ ಬೇಸರ. ಅವಿವಾಹಿತರಿಗೆ ವಿವಾಹದ ಚಿಂತೆ ಹೆಚ್ಚಾಗುವುದು. ಇಂದು ನೀವು ಪಿತ್ರಾರ್ಜಿತ ಆಸ್ತಿಯ ಬಗ್ಗೆ ಆಸಕ್ತಿ ಹೊಂದುವಿರಿ.‌ ನಿಮ್ಮ ಪ್ರಭಾವ ಇಂದು ಯಾವ ಕಾರ್ಯಕ್ಕೂ ಸಹಾಯಮಾಡದು. ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳ ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು. ಪುಸ್ತಕ ಮಾರಾಟ ಮಾಡುವವರಿಗೆ ಲಾಭ. ಆಸ್ತಿಯ ಮಾರಾಟಕ್ಕೆ ಮಾಡಿದ ಪ್ರಯತ್ನ ಸಫಲವಾಗಲಿದೆ. ದಾಂಪತ್ಯದಲ್ಲಿ ಪ್ರೀತಿ ಬೆಳೆಯಲು ಇಬ್ಬರ ಸಹಕಾರ ಅಗತ್ಯ. ಅದು ವಿಪರೀತ ಪರಿಣಾಮವನ್ನು ಉಂಟುಮಾಡೀತು. ಜವಾಬ್ದಾರಿಯನ್ನು ಶಿಸ್ತುಬದ್ಧವಾಗಿ ನಿಭಾಯಿಸುವಿರಿ. ಅಮೂಲ್ಯ ವಸ್ತುಗಳ ಬಗ್ಗೆ ಜಾಗರೂಕರಾಗಿರುವುದು ಉಚಿತ. ಸಂಬಂಧಗಳಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ ನೀವು ಹಿರಿಯರ ಮಾತನ್ನು ಕೇಳಬೇಕು ಮತ್ತು ಅನುಸರಿಸುವದೂ ಮುಖ್ಯ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು.

ಕನ್ಯಾ ರಾಶಿ: ಸಮೂಹದಲ್ಲಿ ಕೆಲಸ ಮಾಡುವಾಗ ಅನ್ಯರ ತಪ್ಪಿಗೆ ನೀವು ಸೇರಿಕೊಳ್ಳುವಿರಿ. ಇಂದು ನೀವು ಅನ್ಯಸ್ಥಳದಲ್ಲಿ ಆಕಸ್ಮಿಕವಾಗಿ ವಾಸಮಾಡಬೇಕಾಗುವುದು. ಎಷ್ಟೇ ಎಚ್ಷರವಿದ್ದರೂ ಪ್ರೀತಿಯಲ್ಲಿ ಬೀಳುವ ಸಾಧ್ಯತೆ ಇದೆ.‌ ನೀವು ಏಕಾಗ್ರತೆಯ ಕೊರತೆಯನ್ನು ಅನುಭವಿಸುವಿರಿ. ಕೆಲಸವು ಮಧ್ಯಂತರವಾಗಿ ಮುಂದುವರಿಯುತ್ತದೆ. ಹಣವನ್ನು ಸಾಲವಾಗಿ ಪಡೆದು, ಮರಳಿ ಕೊಡಲು ಆಗದೇಹೋಗಬಹುದು. ಪುಣ್ಯ ಕೆಲಸದಲ್ಲಿ ನೀವು ಹೆಚ್ಚು ಭಾಗಿಯಾಗುವಿರಿ. ಮಾತನಿಂದ ಮರುಳು ಮಾಡಿ ಕೆಲಸ ಸಾಧಿಸುವಿರಿ. ಖರ್ಚನ್ನು ನೀವು ನಿಯಂತ್ರಣ ಮಾಡುವ ಅವಶ್ಯಕತೆ ಇಂದು ಬರಬಹುದು. ಅನಗತ್ಯ ಖರ್ಚಿನಿಂದ ಮನಸ್ಸು ಸ್ವಲ್ಪ ವಿಚಲಿತವಾಗಬಹುದು. ಮಹಿಳೆಯರು ನಿಮ್ಮಿಂದ ಸಹಾಯವನ್ನು ಪಡೆಯುವರು. ವಿದ್ಯಾಭ್ಯಾಸಕ್ಕೆ ಯಾವುದಾರೂ ಅಪ್ರಬುದ್ಧ ವಿವಾದಕ್ಕೆ ಸಿಲುಕಿಕೊಂಡು ಮನಸ್ತಾಪವಾಗುವುದು. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ನೀವು ಅಗತ್ಯ ಸಹಾಯವನ್ನು ಪಡೆಯುತ್ತೀರಿ.

ತುಲಾ ರಾಶಿ: ಹಣದ ಋಣದಿಂದ ಹೊರಬರಲು ಅತಿಮಾನುಷ ಶಕ್ತಿಯನ್ನು ಆಶ್ರಯಿಸುವಿರಿ. ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಬಗ್ಗೆ ಚಿಂತೆ ಹೆಚ್ಚುವುದು. ನೀವು ಹಣಕಾಸಿನ ಮುಗ್ಗಟ್ಟು ಎದುರಿಸಬೇಕಾಗುವುದು. ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ವೈದ್ಯವೃತ್ತಿಯಲ್ಲಿ ತೊಡಗಿದ್ದರೆ ನಿಮಗೆ ಕೆಟ್ಟ ವಾರ್ತೆಯು ಬರಬಹುದು. ಬೇಡವೆಂದರೂ ನಕಾರಾತ್ಮಕ ವಿಚಾರಗಳೇ ನಿಮ್ಮ ಕಿವಿಗಳಿಗೆ ಬರಲಿವೆ. ನೌಕರರ ನೋವನ್ನೂ ಕೇಳಬೇಕಾಗಬಹುದು. ಉದ್ಯಮದಲ್ಲಿ ಹೊಸ ರೀತಿಯ ಲಾಭಾವನ್ನು ಪಡೆಯಲು ಆಲೋಚಿಸುವಿರಿ. ಮಾನಸಿಕ ಒತ್ತಡವು ನಿಮ್ಮ ಕೆಲಸಗಳನ್ನು ಹಾಳು ಮಾಡೀತು. ದಾಂಪತ್ಯದಲ್ಲಿ ಸಣ್ಣ ವಿರಸವು ಉಂಟಾಗಬಹುದು. ತಾಳ್ಮೆ ತಪ್ಪಿ ಆಡಿದ ಮಾತಿಗೆ ಪಶ್ಚಾತ್ತಾಪ ಪಡಬೇಕಾದೀತು. ಮೃಷ್ಟಾನ್ನ ಭೋಜನ ನಿಮಗೆ ಇಂದು ಸಿಗಲಿದೆ. ಭೋಗವಸ್ತುಗಳನ್ನು ಖರೀದಿಸಿ ಹಣವನ್ನು ವ್ಯರ್ಥಮಾಡಿಕೊಳ್ಳದೇ ಅದರ ಪ್ರಯೋಜನ ಪಡೆಯಿರಿ. ಪ್ರಣಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ವೃಶ್ಚಿಕ ರಾಶಿ: ವೈಯಕ್ತಿಕ ಕೆಲಸಗಳಿಂದ ಹೊರಬರಲು ಆಗದು. ನೀವು ಇಂದು ಅಪ್ರಯೋಜಕ ವಿಷಯಗಳ ಕುರಿತು ಹೆಚ್ಚು ಚರ್ಚೆ ಮಾಡುವಿರಿ. ಅಕಾರಣ ಹಾಗೂ ಶೀಘ್ರ ಕೋಪಿಗಳಾಗುವಿರಿ. ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ‌ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಆತ್ಮೀಯತೆಯು ನಿಮ್ಮ ನಿಲುವನ್ನು ಬದಲಿಸಬಹುದು. ನಿಮ್ಮನ್ನು ನಿಮ್ಮವರಿಗೆ ಪರಿಚಯ ಮಾಡಿಕೊಡುವ ಸನ್ನಿವೇಶ ಬರಬಹುದು. ಹಳೆಯ ಸ್ನೇಹಿತೆಯ ಭೇಟಿಯಾಗಿ ಮಾತುಕತೆ ನಡೆಸುವಿರಿ. ಪ್ರಾಮಾಣಿಕತೆಯಿಂದ ಉದ್ಯೋಗಕ್ಕೆ ನಿಮಗೆ ಆಹ್ವಾನ ಮರಳಿ ಬರುವುದು. ನಂಬಿಕೆಯನ್ನು ಮೋಸವಾಗಬಹುದು. ಅನಾರೋಗ್ಯದಿಂದ ನಿಮ್ಮ ಯೋಜಿತ ಕಾರ್ಯಗಳು ವ್ಯತ್ಯಾಸವಾಗಬಹುದು. ಇಟ್ಟುಕೊಳ್ಳಲು ಕೊಟ್ಟ ಹಣವು ಪುನಃ ಬಾರದೇ ಇದ್ದೀತು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ. ಆತ್ಮವಿಶ್ವಾಸವು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲು ಆಗದು. ಕಳೆದುದರ ಬಗ್ಗೆ ಮಾತನಾಡುವುದು ಇಷ್ಟವಾಗದು.

ಧನು ರಾಶಿ: ಕಳ್ಳರ ಭಯದಿಂದ ಅಡಗಿಸಿಟ್ಟ ವಸ್ತುವು ನಿಮಗೂ ಅದು ಸಿಗದು. ಯಾರ ಮೇಲೋ ಹಠಸಾಧಿಸುವುದು ಬೇಡ. ನಿಮ್ಮಷ್ಟಕ್ಕೆ ನೀವು ಇರಿ. ಇಂದು ನಿಮ್ಮ ಸುತ್ತಲು ವಿರೋಧಿಗಳು ಹೊಂಚು ಹಾಕಿ ನಿಮ್ಮ ಅವನತಿಯನ್ನುವ ಕಾಯುತ್ತಿರಬಹುದು. ನಿಮಗೆ ಬಂದ ಕಾರ್ಯಗಳನ್ನು ನೀವೇ ಮಾಡಿ. ಮಕ್ಕಳ‌‌ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು. ವಾಹನದಿಂದ ಅಲ್ಪ ಸಂಪಾದನೆಯಾಗುವುದು. ಭೂಸ್ವಾಧೀನ‌‌ ಮಾಡಿಕೊಳ್ಳುವಲ್ಲಿ ಎಡವುವುದು. ಸುಳ್ಳಿನಿಂದ‌ ಇಂದು ನಿಮ್ಮ ವ್ಯಕ್ತಿತ್ವಕ್ಕೆ ತೊಂದರೆ ಆದೀತು. ವಿಶೇಷವಾದ ವಸ್ತುವನ್ನು ಕೊಳ್ಳುವ ವಿಚಾರದಲ್ಲಿ ಮೋಸ ಹೋಗುವಿರಿ. ದೇವರಲ್ಲಿ ಶುದ್ಧ ಮನಸ್ಸಿಂದ ಜಪಮಾಡಿ. ವಾಹನದಿಂದ ಲಾಭವನ್ನು ಪಡತುವಿರಿ. ಅತಿಯಾದ ವೇಗ ಬೇಡ. ಹಣಕಾಸಿಗೆ ಸಂಬಂಧಿಸಿದ ವೃತ್ತಿಯಲ್ಲಿ ಒತ್ತಡ ಕಾಣಿಸುವುದು.

ಮಕರ ರಾಶಿ: ರಾಜಕೀಯ ವ್ಯಕ್ತಿಗಳಿಗೆ ಅನ್ಯಸ್ಥಳಕ್ಕೆ ಅತಿಥಿಗಳಾಗಿ ಹೋಗುವ ಸಂದರ್ಭ ಬರಬಹುದು. ಏನೋ ಮಾಡಲು ಹೋಗಿ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಈ ದಿನವನ್ನು ಕಳೆಯಲು ನಿಮಗೆ ಕಷ್ಟವಾಗುವುದು. ಹೊಸ ಆರ್ಥಿಕ ವ್ಯವಹಾರಗಳನ್ನು ಇಂದು ನೀವು ಮಾಡಿರಿ. ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ಅಕಾಲದಲ್ಲಿ ಭೋಜನ ನಿಮಗೆ ಸಂತೃಪ್ತಿ ನೀಡದು. ಸ್ವಂತ ಉದ್ಯೋಗವಿದ್ದರೆ ಜನರು ವಂಚಿಸಬಹುದು. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಲಾರದು. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗುವುದು. ಅಧಿಕ ಶ್ರಮದಿಂದ ದೈಹಿಕ‌ ಮಾನಸಿಕ ಆಘಾತವಾಗಲಿದೆ. ಇದೇ ನಿಮಗೆ ಇಷ್ಟದ ವಿಚಾರವಾಗಿದೆ. ನೂತನ ವಸ್ತುಗಳ ಖರೀದಿಗೆ ಹಣವು ಖರ್ಚಾದೀತು. ನೀವು ಎಲ್ಲರ ಜೊತೆ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಕಷ್ಡವಾಗಬಹುದು. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು.

ಕುಂಭ ರಾಶಿ: ವಿವೇಚನೆ ಇಲ್ಲದೇ ಕೋಪಗೊಂಡ ಮನಸ್ಸು ಅನಂತರ ಭಯಗೊಳ್ಳುವುದು. ಇಂದು ನಿಮಗೆ ಆತ್ಮೀಯರ‌ ಒಡನಾಡ ಅಧಿಕವಾಗಲಿದೆ. ನೀವು ಉತ್ತಮ ಸ್ನೇಹಿತರ ಬಳಗವನ್ನು ಹೊಂದಿರುವಿರಿ. ವೃತ್ತಿ ಜೀವನದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಅತಿಥಿಗಳ ಆಗಮನದಿಂದ ಮನೆಯಲ್ಲಿ ಆಹ್ಲಾದಕರ ವಾತಾವರಣವಿರುತ್ತದೆ. ಪರರ ಮೇಲೆ ಪಶ್ಚಾತ್ತಾಪ ಭಾವ ಬರುವುದು. ಬಹಳ ದಿನಗಳಿಂದ ನಿಂತ‌ ಕಾರ್ಯಕ್ಕೆ ಚಾಲನೆ‌ ಸಿಗಲಿದೆ. ವಿವಾಹದ ಮಾತುಕತೆ ವಿಳಂಬವಾಗಿ‌ ನಿಮಗೆ ಬೇಸರ ತರಿಸಬಹುದು. ಲೆಕ್ಕಪತ್ರ ವಿಷಯದಲ್ಲಿ ನೀವು ಹಿಂದುಳಿಯುವಿರಿ. ಸಭೆಯಲ್ಲಿ ನಿಮ್ಮನ್ನು ಗೌರವಿಸಬಹುದು. ವಾಹನದಲ್ಲಿ ನೀವು ಪ್ರಯಾಣ ಮಾಡಲು ನಿಮಗೆ ಕಷ್ಟವಾದೀತು. ಸಿಗದುದರ ಬಗ್ಗೆ ಬಹಳ ಆಲೋಚನೆ ಬೇಡ. ನಿಮ್ಮ ಇಷ್ಟದವರ ಭೇಟಿಯಾಗಲಿದೆ. ಒಂಟಿ ಜನರು ಇಂದು ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿಯಾಗುತ್ತಾರೆ. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ವೃದ್ಧಿಸಲು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ.

ಮೀನ ರಾಶಿ: ವಿದ್ಯಾರ್ಥಿಗಳಿಗೆ ಪದವಿ ಸಿಗುವ ಸಾಧ್ಯತೆ ಇದೆ. ಇಂದು ಮನೆಯಲ್ಲಿ ನಿಮಗೆ ನಿರಾಸೆಯ ಅನುಭವ ಆಗಬಹುದು. ಸಹೋದರರ ನಡುವೆ ಮನೆಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಬರಬಹುದು. ತೀರ್ಥಯಾತ್ರೆಯಲ್ಲಿ ಅನಿರೀಕ್ಷಿತನೀವು ಇಂದು ಸಂಪನ್ಮೂಲ‌ ವ್ಯಕ್ತಿಳಾಗಿ ನೀವು ಇರುವಿರಿ. ಇಷ್ಟವಾದ ವಸ್ತುಗಳ ಖರೀದಿಯಲ್ಲಿ ಆಸಕ್ತಿ ಅಧಿಕವಾಗುವುದು. ಸಮಯಕ್ಕೆ ನೀವು ಹೆಚ್ಚು ಮಹತ್ತ್ವವನ್ನು ಕೊಡಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣವನ್ನು ನೀವೇ ನಿರ್ಮಿಸುವಿರಿ. ಸರ್ಕಾರದ ಕೆಲಸದಲ್ಲಿ ಇರುವವರಿಗೆ ತೊಂದರೆ. ಅತಿಯಾದ ಕೋಪವು ಕಡಿಮೆಯಾದರೂ ನಷ್ಟವಾಗಬಹುದು. ಸಂಬಂಧವಿಲ್ಲದ ವಿಚಾರದಲ್ಲಿ ಅನಗತ್ಯ ಹಸ್ತಕ್ಷೇಪ‌ ಇರುವುದು. ಹೆಚ್ಚು ಶ್ರವಹಿಸಿ ಕೆಲಸ ಮಾಡುವುದನ್ನು ನಿಲ್ಲಿಸಬಹುದು. ವಿಶೇಷ ವ್ಯಕ್ತಿಯ ಬಗ್ಗೆ ಒಂಟಿ ಜನರ ಆಸಕ್ತಿ ಹೆಚ್ಚಾಗುತ್ತದೆ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವನ್ನು ಹೆಚ್ಚಿಸುತ್ತದೆ.

-ಲೋಹಿತ ಹೆಬ್ಬಾರ್-8762924271 (what’s app only)

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು