Horoscope Today 10 August: ಇಂದು ಈ ರಾಶಿಯವರಿಗೆ ಯಾರೂ ಏನೂ ಹೇಳಿಲ್ಲ ಎಂಬ ಬೇಸರ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಶ್ರಾವಣ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಭಾನುವಾರ ಕಲೆಯಲ್ಲಿ ಆಸಕ್ತಿ, ಪ್ರತಿಕೂಲದಿಂದ ಅನುಕೂಲ, ಪತ್ರವ್ಯವಹಾರದ ದಾಖಲೆ, ಸ್ನೇಹಿತರ ಜೊತೆ ಮೋಜು, ಕೃತಜ್ಞತೆಯಿಂದ ತೃಪ್ತಿ ಇವೆಲ್ಲ ಈ ದಿನದ ವಿಶೇಷ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ: ಆಶ್ಲೇಷಾ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಆಯುಷ್ಮಾನ್, ಕರಣ : ಬಾಲವ, ಸೂರ್ಯೋದಯ – 06 : 19 am, ಸೂರ್ಯಾಸ್ತ – 06 : 56 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:22 – 18:57 ಗುಳಿಕ ಕಾಲ 15:47 – 17:22 ಯಮಗಂಡ ಕಾಲ 12:38 – 14:13
ಮೇಷ ರಾಶಿ: ನೀವು ಇಂದು ಕೊಡುವ ಮಾಹಿತಿ ಪ್ರಾಮಾಣಿಕವಾಗಿಲರಲಿ. ಒಬ್ಬರ ಭವಿಷ್ಯವನ್ನು ನಿರ್ಧರಿಸುವ ಮಾತುಗಳನ್ನು ಸರಿಯಾಗಿ ಆಡಬೇಕಾಗುವುದು. ಅವಸರದಿಂದ ಇಂದಿನ ಕಾರ್ಯಗಳನ್ನು ಮಾಡಬೇಕಾಗಬಹುದು. ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ವಿದೇಶೀ ವಸ್ತುಗಳ ಮೇಲೆ ವ್ಯಾಮೋಹ ಬರಬಹುದು. ಸಣ್ಣ ವಲಯವಾದರೂ ಗುರುತಿಸಿಕೊಳ್ಳುವ ಆಸ್ಥೆ ಇರುವುದು. ಹಿರಿಯರಿಗೆ ಇಷ್ಟವಾಗದ ಕಾರ್ಯವನ್ನು ಮಾಡಿ, ಅವರನ್ನು ಬೇಸರಗೊಳಿಸುವಿರಿ. ಅಧ್ಯಾತ್ಮದ ಕಡೆ ನಿಮ್ಮ ಮನಸ್ಸು ಒಲಿಯಬಹುದು. ನಿಮ್ಮ ಜೀವನಕ್ಕೆ ಬೇಕಾದ ಅಂಶಗಳನ್ನು ನೀವು ಕಳೆದುಕೊಂಡು ಪುನಃ ಪಡೆಯುವ ಯತ್ನ ಮಾಡುವಿರಿ. ಹೊಸ ವ್ಯವಹಾರವನ್ನು ಮಾಡಲು ಉತ್ಸಾಹ ಕಡಿಮೆ ಆಗಲಿದೆ. ಮಾನಸಿಕ ಏಕಾಗ್ರತೆಯನ್ನು ಸಾಧಿಸುವುದು ಕಷ್ಟವಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು.
ವೃಷಭ ರಾಶಿ: ಮೇಲಿನವರಿಗೆ ಕೊಟ್ಟ ಮಾತನ್ನು ಉಳಿಸಿಕೊಡಲು ಹೆಚ್ಚಿನ ಅವಧಿ ಕೆಲಸ ಮಾಡುವಿರಿ. ಅಪರಿಚಿತರಿಂದ ಹಣಕ್ಕಾಗಿ ಒತ್ತಡ ಬರಬಹುದು. ನಿಮ್ಮವರ ಬಗ್ಗೆ ನಿಮಗೆ ಬಹಳ ಕಾಳಜಿ ಇರಲಿದೆ. ನಿಮಗೆ ಉಂಟಾದ ತೊಂದರೆಯನ್ನು ಮರೆತು ನೀವು ಮೊದಲಿನಂತೆ ಆಗುವಿರಿ. ವಿದ್ಯಾಭ್ಯಾಸಕ್ಕೆ ಬೇಕಾದ ವಾತಾವರಣ ಸಿಗದೇ ಕಷ್ಟವಾದೀತು. ಮನೆಗೆ ಅವಶ್ಯಕವಿರುವ ವಸ್ತುಗಳನ್ನು ನೀವು ಖರೀದಿಸುವಿರಿ. ಧನನಷ್ಟವೆಂಬ ಭಾವವೂ ನಿಮ್ಮೊಳಗೆ ಅವ್ಯಕ್ತವಾಗಿ ಇರಲಿದೆ. ಲಲಿತಕಲೆಗಳಲ್ಲಿ ಆಸಕ್ತಿ ಹೆಚ್ಚಾಗುವುದು. ನಿಮಗೆ ಸಮ್ಮಾನಗಳು ಬರಬೇಕು ಎಂಬ ಬಯಕೆ ಇದ್ದರೂ ಸದ್ಯ ಅದು ಸಾಧ್ಯವಾಗದು. ಅನ್ಯರ ಮಾತುಗಳನ್ನು ಕೇಳುವ ವ್ಯವಧಾನವು ಕಡಿಮೆ ಇದ್ದೀತು. ಈ ದಿನವನ್ನು ಅನಾಯಾಸವಾಗಿ ಕಳೆಯುವಿರಿ. ತನ್ನವರು ಯಾರಿಲ್ಲ ಎಂಬ ಭಾವವು ನಿಮ್ಮೊಳಗೆ ಬರಬಹುದು. ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ತೊಡಗಿಸಲು ಪ್ರಯತ್ನಶೀಲರಾಗುವಿರಿ. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನಿಮಗೆ ಯಾರಾದರೂ ಸುಳ್ಳುಹೇಳಬಹುದು.
ಮಿಥುನ ರಾಶಿ: ಮನಸ್ಸು ಮೃದುವಾಗಿದ್ದು ಮಾತು ಕಠೋರವೆನಿಸುವುದು. ನಿಮ್ಮ ಈ ಒರಟು ಸ್ವಭಾವದಿಂದ ಎಲ್ಲರಿಂದ ದೂರಾಗುವಿರಿ. ಯಾರಾದರೂ ಆಮಿಷವನ್ನು ತೋರಿಸಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಭವಿಷ್ಯದ ಬಗ್ಗೆ ನಿಮಗೆ ಸರಿಯಾದ ಕಲ್ಪನೆ ಸಿಗದೇಹೋಗಬಹುದು. ಸಂಗಾತಿಯ ಮನವೊಲಿಸಲು ಸತತ ಪ್ರಯತ್ನ ಮಾಡುವಿರಿ. ನಿಮ್ಮ ಇಚ್ಛಾಶಕ್ತಿಯಿಂದ ಬೇಕಾದುದನ್ನು ನೀವು ಪಡೆದುಕೊಳ್ಳುವಿರಿ. ಒತ್ತಾಯಕ್ಕೆ ಮಣಿದು ನಿಮ್ಮ ಕೆಲಸವನ್ನು ಬದಲಿಸಿಕೊಳ್ಳುವ ಸಾಧ್ಯತೆ ಇದೆ. ಆಪ್ತರ ಮಾತಿನಿಂದ ದುಃಖಿಸುವಿರಿ. ಆರೋಗ್ಯವು ನಿಮಗೆ ವರವಾಗಿರಲಿದೆ. ಅಧಿಕೃತವಾಗಿ ಬರುವ ವಿಚಾರಗಳನ್ನು ಮಾತ್ರ ನೀವು ನಂಬಿಕೆ. ಗಾಳಿ ಮಾತುಗಳಿಗೆ ಯಾವ ಬೆಲೆಯೂ ಇರದು. ಸಿಗಬೇಕಾದವರ ಭೇಟಿಯು ಬಹಳ ವಿಳಂಬವಾದೀತು. ಬರಬೇಕಾದ ಹಣದ ಬಗ್ಗೆ ತಿಳಿದಿರಲಿ. ಸಂಗಾತಿಯ ಸಹಕಾರ ನಿಮಗೆ ಸಿಗದೇ ಕಷ್ಟವಾಗುವುದು. ಇಂದು ನಿಮಗೆ ಆಹಾರದಿಂದ ತೊಂದರೆಯಾದೀತು.
ಕರ್ಕಾಟಕ ರಾಶಿ: ವೃತ್ತಿಯಲ್ಲಿ ನಿಮ್ಮದಾದ ಯಾವುದೇ ಬುದ್ಧಿಯನ್ನು ಬಳಸಲಾರಿರಿ. ಉದ್ಯಮದಲ್ಲಿ ಬೇಡಿಕೆಗೆ ತಕ್ಕ ಪೂರೈಕೆ ಕಷ್ಟವಾದೀತು. ನಿಮ್ಮ ವರ್ತನೆಯಿಂದ ಅಧಿಕಾರವು ತಪ್ಪಬಹುದು. ಆಸ್ತಿಯ ಬಗ್ಗೆ ಸರಿಯಾದ ದಾಖಲೆಗಳು ಇರಲಿ. ವಿಶ್ರಾಂತಿ ಇಲ್ಲದೇ ಮಾಡುವ ಕೆಲಸವು ನಿಮಗೆ ಆಯಾಸವನ್ನು ತಂದುಕೊಟ್ಟೀತು. ಹಿತಶತ್ರುಗಳ ತೊಂದರೆಯು ಅಧಿಕವಾಗಿ ಇರಲಿದೆ. ಸಾಧಿಸಲು ಅವಕಾಶಗಳು ಹಲವಿದ್ದರೂ ಸಾಗಿಸುವ ಬಗ್ಗೆ ನಿಮಗೆ ಪೂರ್ಣ ಕಲ್ಪನೆ ಇರದು. ಅಪರಿಚಿತರ ಜೊತೆ ಹೊಂದಾಣಿಕೆಯಲ್ಲಿ ಇರುವಿರಿ. ದುರಭ್ಯಾಸದಿಂದ ವಿಮುಖರಾಗುವ ಮನಸ್ಸು ನಿಮ್ಮದಾಗಲಿದೆ. ಪ್ರತಿಕೂಲ ವಾತಾವರಣವನ್ನು ಅನುಕೂಲಕರವಾದ ವಾತಾವರಣವನ್ನು ಮಾಡಿಕೊಳ್ಳುವ ಕಲೆ ನಿಮಗೆ ಸಿದ್ಧಿಸಲಿದೆ. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಭೂಮಿಯ ಉತ್ಪನ್ನದಿಂದ ಲಾಭವಿದೆ.
ಸಿಂಹ ರಾಶಿ: ಮನೆಯ ದುರಸ್ತಿಯನ್ನು ತುರ್ತು ಗಮನಕೊಡುವಿರಿ. ಸಿಕ್ಕ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಆಲೋಚಿಸಿ. ಸಂಬಂಧದಿಂದ ಭೂಮಿಯ ಲಾಭವು ಆಗುವುದಾದರೂ ಅದನ್ನು ಪರಿಶೀಲಿಸಿ ಒಪ್ಪಿಕೊಳ್ಳಿ. ನಿಮ್ಮ ಪ್ರತಿಷ್ಠೆಯನ್ನು ತೋರಿಸುಬಿರಿ. ನಿಮಗೆ ಆತ್ಮವಿಶ್ವಾಸವೇ ಇಡೀ ದಿನದ ಕೆಲಸವನ್ನು ಸುಲಲಿತವಾಗಿ ಮುಗಿಸಿಕೊಡುವುದು. ನಿಮ್ಮ ನಿರ್ಧಾರವನ್ನು ಸುಲಭಕ್ಕೆ ಬದಲಿಸುವುದು ಬೇಡ. ಬಲವಾದ ಕಾರಣವಿಲ್ಲದೇ ನೀವು ಸಾಲದ ಬಗ್ಗೆ ಚಿಂತಿಸುವುದು ಬೇಡ. ಬಹಳ ದಿನದ ಭೂಮಿಯ ವ್ಯವಹಾರದ ಕಲಹದಿಂದ ನಿಮಗೆ ಜಯವಾಗಬಹುದು. ಮಕ್ಕಳ ಮೇಲೆ ನಿಮಗೊಂದು ಕಣ್ಣಿರಲಿ. ವಿದೇಶ ಪ್ರವಾಸವನ್ನು ಕಾರ್ಯ ನಿಮಿತ್ತ ಮಾಡುವಿರಿ. ಒಂಟಿತನ ಭಯವು ನಿಮ್ಮನ್ನು ಕಾಡಬಹುದು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ಯಾರನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ಅನಿರೀಕ್ಷಿತ ಜನಪ್ರಿಯತೆ ಉಂಟಾಗಬಹುದು.
ಕನ್ಯಾ ರಾಶಿ: ತೋರಿಕೆಯ ಪ್ರೇಮವೇ ಗೆಲ್ಲುವುದು. ನಿಜವಾದ ಪ್ರೇಮಕ್ಕೆ ಬೆಲೆ ಇಲ್ಲ. ಮಹಿಳಾ ಕಲಾವಿದರಿಗೆ ಪ್ರಶಂಸೆ ಇರಲಿದೆ. ಇಂದು ನಿಮಗೆ ಯಾರಿಂದಲಾದರೂ ಯೋಗ್ಯ ಸಂಗಾತಿಯ ಮಾಹಿತಿಗಳು ಸಿಗುವುದು. ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವುದನ್ನು ತಪ್ಪಿಸಿ. ಸ್ಫೂರ್ತಿದಾಯಕ ಸಂಗತಿಗಳು ನಿಮ್ಮನ್ನು ಇನ್ನಷ್ಟು ಬಲಗೊಳಿಸುವುವು. ಇಂದಿನ ಸಮಯವನ್ನು ಸುಮ್ಮನೇ ವ್ಯರ್ಥವಾಗಿ ಕಳೆಯುವಿರಿ. ಮನೆಯಲ್ಲಿ ಒಂಟಿಯಾಗಿರುವ ನಿಮಗೆ ಏನನ್ನಾದರೂ ಹೊಸತನ್ನು ಮಾಡಬೇಕು ಎಂದು ಅನಿಸುವುದು. ಪ್ರೇಮಿಗಳು ಇಂದು ಸುಖವಾಗಿ ಸುತ್ತಾಡಲಿದ್ದಾರೆ. ವಿದ್ಯಾರ್ಥಿಗಳು ಬಲವಂತಾಗಿ ಓದಲು ಕುಳಿತುಕೊಳ್ಳುವರು. ನಿಮ್ಮ ನೇರ ನುಡಿ ಎಲ್ಲ ಕಡೆಗೆ ಪ್ರಯೋಜನಕ್ಕೆ ಬಾರದು. ಸೃಜನಾತ್ಮಕ ಚಟುವಟಿಕೆಗಳ ಬಗ್ಗೆ ನೀವಿಂದು ಹೆಚ್ಚು ಗಮನಕೊಡುವಿರಿ. ಪಿತ್ತ ಮತ್ತು ಕಫಗಳ ಸಂಬಂಧದಿಂದ ರೋಗಗಳು ಬರಬಹುದು. ಆಹಾರವನ್ನು ಸರಿಯಾಗಿ ಸ್ವೀಕರಿಸಿ ಅದನ್ನು ಸರಿಮಾಡಿಕೊಳ್ಳಿ. ಯಾವುದನ್ನಾದರೂ ಆಯ್ಕೆ ಮಾಡುವಾಗ ನಿಮ್ಮನೇ ನೀವು ಕೇಳಿಕೊಳ್ಳುವಿರಿ.
ತುಲಾ ರಾಶಿ: ವಿದೇಶದಲ್ಲಿ ಕೆಲವು ಕಾಲ ವೃತ್ತಿಯನ್ನು ಮಾಡಲು ಹೋಗುವಿರಿ. ಹಿರಿಯರ ಮಾತನ್ನು ಕೇಳಿ, ತೊಂದರೆಯನ್ನು ತಪ್ಪಿಸಿಕೊಳ್ಳುವಿರಿ. ನಿಮ್ಮನ್ನು ಇಂದು ಭೇಟಿಯಾಗುವ ವ್ಯಕ್ತಿಗಳು ಸಾಮಾನ್ಯರಲ್ಲ. ಅವರಿಗೆ ಗೌರವ ಕೊಡಿ. ನಿಮ್ಮ ಎಂದಿನ ಬಿಮ್ಮನ್ನು ಬಿಡಬೇಕಾಗಬಹುದು. ನೀವು ಇಂದು ಇಚ್ಛಿಸಿದವರಿಗೆ ದಾನವನ್ನು ಕೊಡುವಿರಿ. ನಿಮ್ಮ ನಿಯಮಗಳನ್ನು ಬಿಟ್ಟು ನೀವು ಹೋಗಲಾರಿರಿ. ಸಹೋದ್ಯೋಗಿಗಳು ನಿಮ್ಮ ನಕಾರಾತ್ಮಕ ಆಲೋಚನೆ ಉಳ್ಳವರಾಗುವರು. ಕೃಷಿ ಕಾರ್ಯಕ್ಕೆ ಸೂಕ್ತ ಸಮಯವಾಗಿದ್ದು, ಬಿಡುವು ಮಾಡಿಕೊಳ್ಳುವಿರಿ. ನೀವು ಹಣ ಸಂಪಾದನೆಗೆ ಆರಿಸಿಕೊಂಡ ಮಾರ್ಗವು ಸರಿಯೆನಿಸದೇ ಇರಬಹುದು. ಅಪಮಾನವನ್ನು ಸಹಿಸಿಕೊಳ್ಳಲು ನಿಮಗೆ ಕಷ್ಟವಾದೀತು. ವಾಹನವನ್ನು ಎಚ್ಚರಿಕೆಯಿಂದ ಚಲಾಯಿಸಿ. ಮನೋರಂಜನೆಯ ನಿಮಿತ್ತ ನೀವು ಇಂದು ಕಾಲವನ್ನು ಕಳೆಯಬಹುದು. ಹಣ ಸಂಪಾದನೆಗೆ ಉತ್ತಮವಾದ ಮಾರ್ಗವು ನಿಮಗೆ ಗೊತ್ತಾಗಲಿದೆ. ನಿಮ್ಮ ಅಮೂಲ್ಯ ವಸ್ತುಗಳು ನಷ್ಟವಾಗಬಹುದು. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಎಲ್ಲರದ್ದೂ ಒಂದಾದರೆ ನಿಮ್ಮದೇ ಒಂದು ದಾರಿಯಾಗಲಿದೆ.
ವೃಶ್ಚಿಕ ರಾಶಿ: ಅಪರಿಚಿತರ ಪತ್ರವ್ಯವಹಾರಕ್ಕೆ ಸ್ಪಂದನೆ ಇರದು. ಇಂದು ಹಿತಶತ್ರುಗಳಿಂದ ಧನವು ನಷ್ಟವಾಗಲಿದೆ. ನಿಮ್ಮ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ಬಗ್ಗೆ ಆಪ್ತರ ಸಲಹೆ ಅವಶ್ಯಕ. ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಹೊಸತನವನ್ನು ನೀವು ರೂಡಿಸಿಕೊಳ್ಳುವ ಹಂಬಲವನ್ನು ಆಪ್ತರ ಜೊತೆ ಹಂಚಿಕೊಳ್ಳುವಿರಿ. ದೂರವಾಣಿ ಕರೆಗಳಿಂದ ಆಯಾಸವಾಗಲಿದೆ. ಕೇಳಿದವರಿಗೆ ಹಣವನ್ನು ನೀಡುವಿರಿ. ಸಂಪತ್ತಿನ ಹಿಂದೆ ನೀವು ಓಡಬೇಕಾಗಿಲ್ಲ. ನಿಮ್ಮ ಕೆಲಸವೇ ಸಂಪತ್ತು ಬರುವಂತೆ ಮಾಡುವುದು. ಎಲ್ಲರನ್ನೂ ಆತ್ಮೀಯವಾಗಿ ಕಾಣುವಿರಿ. ನಿಮ್ಮನ್ನು ಕಂಡು ಸಂಕಟಪಡುವವರು ಇರುವರು. ಮಂದಗತಿಯಲ್ಲಿ ಕೆಲಸವು ಸಾಗಲಿದೆ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಇಂದು ಪೂರ್ಣ ನಿಮ್ಮ ದಿನವಾಗಲಾರದು. ಸ್ನೇಹಿತರ ಜೊತೆ ಹೆಚ್ಚು ಮೋಜಿನಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು.
ಧನು ರಾಶಿ: ನಿಮ್ಮ ದೃಷ್ಟಿ ಹೇಗಿದೆಯೋ ಸೃಷ್ಟಿಯೂ ಹಾಗೆ ಕಾಣಿಸುವುದು. ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ನೀವು ಪರರ ತಪ್ಪಿನಿಂದ ಕಲಿಯುವುದು ಉತ್ತಮ. ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ಧಾರ್ಮಿಕ ಆಚರಣೆಯಿಂದ ಶ್ರೇಯಸ್ಸು ಪ್ರಾಪ್ತಿ. ನಿಮ್ಮನ್ನು ದ್ವೇಷಿಸಲು ಕಾರಣವಿಲ್ಲದಿದ್ದರೂ ದ್ವೇಷಿಸುವರು. ಕರ್ತವ್ಯದಲ್ಲಿ ಲೋಪವಾಗುವ ಸಾಧ್ಯತೆ ಇದೆ. ಸಂಗಾತಿಯು ನಿಮ್ಮನ್ನು ಬೆಂಬಲಿಸುವರು. ಹಳೆಯದನ್ನು ನೆನಪಿಸಿಕೊಳ್ಳುವುದು ನಿಮಗೆ ಖುಷಿಯ ವಿಷಯ. ಮಕ್ಕಳ ಜೊತೆ ಕುಳಿತು ಹರಟೆ ಹೊಡೆಯುವುದು ನಿಮಗೆ ಖುಷಿ ಕೊಡಬಹುದು. ತಾಯಿಯ ಕಡೆಯಿಂದ ನಿಮಗೆ ಅಮೂಲ್ಯ ವಸ್ತುವು ಪ್ರಾಪ್ತವಾದೀತು. ನಿಮ್ಮ ವಿರುದ್ಧ ಮಾತನಾಡುವುದನ್ನು ಸಹಿಸಿಕೊಳ್ಳಲಾರಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಪೂರ್ವ ತಯಾರಿ ಇಲ್ಲದೇ ಯಾವ ಕಾರ್ಯವನ್ನೂ ಮಾಡಬೇಡಿ.
ಮಕರ ರಾಶಿ: ಸತ್ಯವಿಲ್ಲದ ವಿಷಯವನ್ನು ಎಷ್ಟೇ ಮಥಿಸಿದರೂ ಅದರಿಂದ ಸಾರವತ್ತಾದ ನವನೀತ ಬರದು. ಇಂದಿನ ವಿಫಲತೆಯು ನಿಮಗೆ ಛಲವನ್ನು ತರಬಹುದು. ಇಂದು ನಿಮ್ಮ ಹಳೆಯ ದಾಯಾದಿ ಕಲಹವು ಪುನಃ ಆರಂಭವಾಗಬಹುದು. ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ಸಹೋದರರಿಂದ ನಿಮಗೆ ಬೇಕಾದ ಸಂಪತ್ತು ಸಿಗಲಿದೆ. ಸಮಯಕ್ಕೆ ಬೆಲೆ ಕೊಡಬೇಕಾದೀತು. ಮನೆಯಲ್ಲಿ ಧಾರ್ಮಿಕ ಕಾರ್ಯವನ್ನು ನೀವು ಇಂದು ಮಾಡಿಸುವಿರಿ. ಕಾಲಕ್ಕೆ ತಕ್ಕಂತೆ ಹೆಜ್ಜೆಹಾಕಬೇಕಾದ ಸ್ಥಿತಿ ಬರಲಿದೆ. ವಿದ್ಯಾಭ್ಯಾಸಕ್ಕಾಗಿ ಸ್ಥಳಾಂತರ ಮಾಡುವಿರಿ. ಆಯಾಸದಿಂದ ನಿಮಗೆ ಮುಕ್ತಿ ಸಿಗಬಹುದು. ಅನಧಿಕೃತ ವ್ಯವಹಾರವನ್ನು ನೀವು ಬೆಂಬಲಿಸುವುದು ಬೇಡ. ನೀವಿಂದು ಹೇಳುವ ಸುಳ್ಳು ಎಲ್ಲರಿಗೂ ಗೊತ್ತಾದೀತು. ಇಂದು ನೀವು ಉದ್ಯೋಗದಿಂದ ಸ್ವಲ್ಪ ವಿಶ್ರಾಂತಿ ಪಡೆಯುವಿರಿ. ವೈವಾಹಿಕ ಸಂಬಂಧಗಳನ್ನು ಬಂಧುಗಳಲ್ಲಿ ಬೆಳೆಸುವಿರಿ. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು.
ಕುಂಭ ರಾಶಿ: ವ್ಯವಹಾರ ಮಾಡಲು ಪೈಪೋಟಿಯಲ್ಲಿ ಬೀಳುವಿರಿ. ನಿಮ್ಮ ವ್ಯಾಪಾರದಲ್ಲಿ ಲಾಭವು ಕಡಿಮೆ ಕಾಣಿಸುವುದು. ನೀವು ಇಂದು ಅಧಿಕಾರಗಳ ಜೊತೆ ವಾಗ್ವಾದ ಮಾಡುವಿರಿ. ಇಂದಿನ ಹಣಕಾಸಿನ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಕಡಿಮೆ ಶ್ರಮದಿಂದ ಹೆಚ್ಚು ಗಳಿಸುವ ಬಗ್ಗೆ ಚಿಂತಿಸುವಿರಿ. ಯಾರನ್ನೂ ದ್ವೇಷಿಸುವ ಮನಃಸ್ಥಿತಿಯನ್ನು ಬೆಳೆಸಿಕೊಳ್ಳುವುದು ಬೇಡ. ಸ್ಥಾನಮಾನದ ಬಗ್ಗೆ ಹೆಮ್ಮೆ ಇರುವುದು. ನಿರ್ಮಾಣದವರಿಗೆ ಒತ್ತಡ ಹೆಚ್ಚಾಗುವುದು. ನಿಮ್ಮ ಕಾರ್ಯಗಳು ಇಂದು ಮುಕ್ತಾಯಗೊಳ್ಳಬಹುದು. ಆಪ್ತರು ನಿಮ್ಮನ್ನು ಮತ್ತಷು ಇಷ್ಟಪಡುವರು. ಓದಿನ ಬಗ್ಗೆ ಸ್ವಲ್ಪ ಗಮನವು ಕಡಿಮೆ ಆಗಲಿದೆ. ತಿಳಿವಳಿಕೆಯ ಕೊರತೆಯು ನಿಮ್ಮನ್ನು ಅತಿಯಾಗಿ ಕಾಡಬಹುದು. ಸಮಯವನ್ನು ಸದುಪಯೋಗ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ಉದ್ಯೋಗದಲ್ಲಿ ಅಭಿವೃದ್ಧಿ ಕಾಣಿಸುವುದು.
ಮೀನ ರಾಶಿ: ಯಾರಾದರೂ ಕೈ ಜೊಡಿಸಿದರೆ ನಿಮ್ಮ ಭಾರವೂ ಕಡಿಮೆಯಾಗಲಿದೆ. ಇಂದು ನಿಮಗೆ ಲಾಭ ನಷ್ಟಗಳ ವಿವೇಚನೆ ಅಧಿಕವಾಗಿರುವುದು. ಇಂದು ನೀವೊಬ್ಬರೇ ಯತ್ನಿಸಿದರೂ ಕಾರ್ಯದಲ್ಲಿ ಜಯವು ಸಿಗುವುದು. ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ನಿಮ್ಮ ಜವಾಬ್ದಾರಿಯು ಮುಕ್ತಾಯ ಆಗಬಹುದು. ಹೊರಗಿನಿಂದ ಕಣ್ಣಿಗೆ ತೊಂದರೆ ಬರಲಿದೆ. ತಂದೆಯಿಂದ ಸಂಪತ್ತನ್ನು ಅಪೇಕ್ಷಿಸುವಿರಿ. ಸಂದರ್ಭೋಚಿತ ನಿಮ್ಮ ವರ್ತನೆಯು ಅಪಾರ್ಥವನ್ನು ಕೊಡಬಹುದು. ಸ್ನೇಹಿತರಿಗೆ ಮಾಡಿದ ಸಹಾಯಕ್ಕೆ ಕೃತಜ್ಞತೆಯನ್ನು ಅರ್ಪಿಸುವಿರಿ. ದೇವರನ್ನು ನೀವು ಬಲವಾಗಿ ನಂಬಿ ಕೆಲಸದಲ್ಲಿ ಆಸಕ್ತಿಯನ್ನು ಇಟ್ಟುಕೊಳ್ಳಿ. ಉತ್ತಮ ಗತಿಯೂ ಸಿಕ್ಕೀತು. ನಿರ್ಧಾರಗಳು ಅಸ್ಪಷ್ಟವಾಗಿ ಇರುವುದು ಬೇಡ. ಅನಗತ್ಯ ಹಸ್ತಕ್ಷೇಪದಿಂದ ನಿಮ್ಮ ಗೌರವ ಕಡಿಮೆ ಆಗಬಹುದು. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು.
– ಲೋಹಿತ ಹೆಬ್ಬಾರ್-8762924271 (what’s app only)




