AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ಭವಿಷ್ಯ : ಇಂದು ಈ ರಾಶಿಯವರಿಂದ ಕೆಲವು ಅಸಾಧ್ಯ ಕಾರ್ಯಗಳು ಸಾಧ್ಯವಾಗಲಿವೆ, ನಿಃಸ್ಪೃಹತೆ ಇರಲಿ…

ಆಗಸ್ಟ್ 11, 2026 ರ ನಿತ್ಯ ಭವಿಷ್ಯವು ಪ್ರತಿ ರಾಶಿಯವರಿಗೆ ವೃತ್ತಿ, ಹಣಕಾಸು, ವೈಯಕ್ತಿಕ ಜೀವನ ಮತ್ತು ಸಂಬಂಧಗಳ ಕುರಿತು ಮಾರ್ಗದರ್ಶನ ನೀಡುತ್ತದೆ. ಕೆಲ ರಾಶಿಯವರಿಗೆ ಅಸಾಧ್ಯವೆನಿಸಿದ್ದ ಕಾರ್ಯಗಳು ಇಂದು ಸುಲಭವಾಗಲಿವೆ, ಆದರೆ ಮನಸ್ಸು ಪ್ರಶಾಂತವಾಗಿರಬೇಕು. ಶುಭ-ಅಶುಭ ಕಾಲ, ಯೋಗ, ಕರಣಗಳ ವಿವರಗಳೊಂದಿಗೆ, ದಿನದ ಸವಾಲುಗಳನ್ನು ಎದುರಿಸಲು ಮತ್ತು ಅವಕಾಶಗಳನ್ನು ಬಳಸಿಕೊಳ್ಳಲು ಅಗತ್ಯ ಸಲಹೆಗಳನ್ನು ಪಡೆಯಿರಿ.

ನಿತ್ಯ ಭವಿಷ್ಯ : ಇಂದು ಈ ರಾಶಿಯವರಿಂದ ಕೆಲವು ಅಸಾಧ್ಯ ಕಾರ್ಯಗಳು ಸಾಧ್ಯವಾಗಲಿವೆ, ನಿಃಸ್ಪೃಹತೆ ಇರಲಿ...
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Aug 11, 2026 | 4:36 AM

Share

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಮಂಗಳವಾರದಂದು ಅನಿರೀಕ್ಷಿತ ಖ್ಯಾತಿ, ಖಾಸಗಿ ತನಕ್ಕೆ ಅಡ್ಡಿ, ಸ್ವಾವಲಂಬನೆ, ಇಷ್ಟದವರ ಭೇಟಿ, ಸಂಸ್ಥೆಯ ಜೊತೆ ಒಪ್ಪಂದ, ವಾಕ್ಸಮರ, ಆಹಾರ ಅಲಭ್ಯ ಇವೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಪುಷ್ಯಾ, ಯೋಗ : ಸಿದ್ಧಿ , ಕರಣ : ಭದ್ರ, ಸೂರ್ಯೋದಯ – 06 – 08 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:33 – 17:07, ಯಮಗಂಡ ಕಾಲ 09:16 – 10:51, ಗುಳಿಕ ಕಾಲ 12:25 – 13:59

ಮೇಷ ರಾಶಿ :

ಯಾರನ್ನೂ ನೇರವಾಗಿ ಖಂಡಿಸಲು ಸಾಧ್ಯವಾಗದು. ಎಲ್ಲವೂ ಏಕಕಾಲಕ್ಕೆ ಪ್ರಕಟವಾಗದು. ಇಂದು ನೀವು ವೃತ್ತಿಜೀವನದ ಪ್ರಯೋಜನವನ್ನು ಪಡೆಯುವಿರಿ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗುತ್ತವೆ ಆದರೆ ಮಾನಸಿಕ ಗೊಂದಲದಿಂದಾಗಿ ನೀವು ಪ್ರಯೋಜನಗಳಿಂದ ವಂಚಿತರಾಗಬಹುದು. ಸಂಗಾತಿಯು ನಿಮ್ಮ ಗುಟ್ಟನ್ನು ಹೊರಹಾಕಬಹುದು. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ.

ವೃಷಭ ರಾಶಿ :

ನಿಮ್ಮ ಆಶಯಗಳು ಈ ದಿನ ಈಡೇರಬಹುದು.‌ ಉದ್ಯೋಗ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಸೈದ್ಧಾಂತಿಕ ಯಶಸ್ಸು ಇರುತ್ತದೆ. ಮಕ್ಕಳ ಕಡೆಯಿಂದ ಸಮಾಧಾನಕರ ಸುದ್ದಿ ಸಿಗಲಿದೆ. ಕೆಲಸಕ್ಕೆ ಕೊಡುವ ಸಲಹೆಯಿಂದ ನಿಮಗೇ ಜವಾಬ್ದಾರಿ ಬರಲಿದೆ. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇದೆ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು.

ಮಿಥುನ ರಾಶಿ :

ಇಂದು ನಿಮ್ಮ ಕಾರಣದಿಂದ ಕುಟುಂಬದಲ್ಲಿ ಸಂತೋಷ ಇರಲಿದೆ. ಮಕ್ಕಳ ಜವಾಬ್ದಾರಿಯನ್ನು ಪೂರೈಸಬಹುದು. ಪ್ರಯಾಣವು ಆಹ್ಲಾದಕರ ಮತ್ತು ಪ್ರಯೋಜನಕಾರಿ. ನೀವು ಆತ್ಮೀಯರ ದರ್ಶನ ಮತ್ತು ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ. ನಿಮ್ಮ ವಿರುದ್ಧ ಮಾತನಾಡಿದವರಿಗೆ ಇಂದು ಕಾಲವೇ ಉತ್ತರಿಸುವುದು. ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗವಾಗುವ ಸಾಧ್ಯತೆ ಇದೆ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು.

ಕರ್ಕಾಟಕ ರಾಶಿ :

ನೀರೀಕ್ಷಿಸಿದ ವಸ್ತುಗಳು ಕೆಲವು ಅನಿರೀಕ್ಷಿತವಾಗಿ ಸಿಗಲಿವೆ. ಮನಸ್ಸು ಸ್ವಲ್ಪ ಎಲ್ಲವನ್ನೂ ಮರೆತು ಹಗುರಾಗಬಹುದು. ಇಂದು ಬಹಳ ಸಂತೋಷದಾಯಕವಾಗಿರುತ್ತದೆ. ವ್ಯಾಪಾರದ ಮಾರುಕಟ್ಟೆಯಲ್ಲಿ ನಿಮ್ಮದೇ ಮೇಲ್ಗೈ ಆಗಲಿದೆ. ಕಳೆದುಕೊಂಡದ್ದನ್ನು ಪಡೆಯಬೇಕು ಎಂಬ ಛಲವು ನಿಮ್ಮಲ್ಲಿ ಇರುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ. ಆಸ್ತಿಯ ವಿಚಾರಕ್ಕೆ ನೆರೆಹೊರೆಯ ನಡುವೆ ಕಲಹವಾದೀತು.

ಸಿಂಹ ರಾಶಿ :

ವಿದೇಶಕ್ಕೆ ಹೋಗಲು ಆಲೋಚನೆ ಮಾಡಿದ್ದರೆ ಹೊರಡಬಹುದು. ನಿಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿ. ಸಿಹಿಯಾದ ಜೇನು ಪಡೆಯಲು ಸಣ್ಣ ನೋವನ್ನು ಸಹಿಸಬೇಕಾಗುವುದು. ಉದ್ಯೋಗ ಮತ್ತು ವ್ಯವಹಾರದ ವಿಷಯದಲ್ಲಿ ದಿನವು ಮಿಶ್ರವಾಗಿರುತ್ತದೆ. ಬುದ್ಧಿವಂತಿಕೆಯಿಂದ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಿ. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಲಿದೆ. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು.

ಕನ್ಯಾ ರಾಶಿ :

ನೀವು ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು.‌ ಇದ್ದಕ್ಕಿದ್ದಂತೆ ನೀವು ಕೆಲವು ಪ್ರತಿಕೂಲವಾದ ಸುದ್ದಿಗಳನ್ನು ಕೇಳಬಹುದು, ಅನಂತರ ನೀವು ಹಠಾತ್ ಪ್ರಯಾಣಕ್ಕೆ ಹೋಗಬೇಕಾಗಬಹುದು. ಸುಲಭದಲ್ಲಿ ಆಗುವ ಕಾರ್ಯವನ್ನು ಕಷ್ಟದಿಂದ ಮಾಡುವಿರಿ. ನಿಮ್ಮ ಮಾತುಗಳು ಯಾರೊಂದಿಗಾದರೂ ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳಿಗೆ ಕಾರಣವಾಗಬಹುದು. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಸಣ್ಣ ಉಳಿತಾಯಕ್ಕೆ ಇಂದು ಬೆಲೆಯು ಬಂದಂತಾಗುವುದು. ಜೀವನದ ಲಕ್ಷ್ಯವು ಬೇರೆ ಕಡೆಗೆ ಬದಲಿಸಬಹುದು.

ತುಲಾ ರಾಶಿ :

ನೀವು ನಿಮ್ಮ ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ. ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಈ ವಿವೇಕದಿಂದ ಮಾಡಿದ ಕೆಲಸದ ಬಗ್ಗೆ ನಿಮಗೆ ಮೆಚ್ಚುಗೆ ಸಿಗುತ್ತದೆ. ವೃತ್ತಿಜೀವನದಲ್ಲಿ ಗೌರವ ಸಿಗುತ್ತದೆ. ಹೊಸ ಉದ್ಯಮಗಳು ಅಭಿವೃದ್ಧಿ ಹೊಂದುತ್ತವೆ. ಮಗುವಿಗೆ ಸಂಬಂಧಿಸಿದ ಸುವಾರ್ತೆಯೊಂದಿಗೆ ಮನಸ್ಸು ಸಂತೋಷವಾಗುತ್ತದೆ. ಹಿರಿಯರ ಪ್ರೀತಿಯು ನಿಮಗೆ ಖುಷಿಕೊಡುವುದು.

ವೃಶ್ಚಿಕ ರಾಶಿ :

ನಡೆ, ನುಡಿಗಳಲ್ಲಿ ಬಹಳ ಜಾಗರೂಕರಾಗಿರಿ. ಸಮಯವು ಬಹಳ ಉತ್ಸಾಹ ಮತ್ತು ನೆಮ್ಮದಿಯಿಂದ ಕಳೆದುಹೋಗುತ್ತದೆ. ಅಂತರಂಗದ ಭಾವವನ್ನು ಯಥಾವತ್ತಾಗಿ ತಿಳಿಸಲಾರಿರಿ. ರಾಜಕೀಯ ಕ್ಷೇತ್ರದಲ್ಲಿ ಮಾಡುವ ಪ್ರಯತ್ನಗಳು ನಿಮಗೆ ಯಶಸ್ಸಿನ ಬಾಗಿಲು ತೆರೆಯುತ್ತದೆ. ವೃತ್ತಿಯಲ್ಲಿ ಆತಂಕವು ಇರಲಿದೆ. ಪ್ರಾಣಿಗಳಿಂದ ಭಯಗೊಳ್ಳುವ ಸಾಧ್ಯತೆ ಇದೆ. ಎದುರಿನವರ ಇಂಗಿತವನ್ನು ತಿಳಿದುಕೊಳ್ಳದೇ ಏನನ್ನಾದರೂ ಹೇಳುವಿರಿ.

ಧನು ರಾಶಿ :

ಅನಿರೀಕ್ಷಿತ ಎದುರಾದ ನೀವು ಗಮನ ಕೊಡದಿದ್ದರೆ, ಅನೇಕ ಉತ್ತಮ ಅವಕಾಶಗಳು ಕಳೆದುಹೋಗುತ್ತವೆ. ನಿಮ್ಮ ಕೆಲಸದಿಂದ ಸಂತುಷ್ಟರಾಗಿರುವ ನಿಮ್ಮ ವಿರೋಧಿಗಳು ಸಹ ನಿಮ್ಮನ್ನು ಹೊಗಳುತ್ತಾರೆ. ಸಾಮಾಜಿಕ ಕಾರ್ಯದಿಂದ ನಿಮ್ಮ ವರ್ಚಸ್ಸು ಹೆಚ್ಚಾಗಲಿದೆ. ಮಕ್ಕಳೊಂದಿಗೆ ವಿವಾದಗಳು ಉಂಟಾಗಬಹುದು. ಸಣ್ಣ ಸಮಸ್ಯೆಯನ್ನು ದೊಡ್ಡ ಮಾಡಿಕೊಳ್ಳಲಿದ್ದೀರಿ. ಬಂಧುಗಳು ನಿಮ್ಮ ಸಹಾಯಕ್ಕೆ ಬರಬಹುದು. ಯಾರಾದರೂ ನಿಮ್ಮನ್ನು ಚೇಡಿಸಬಹುದು.

ಮಕರ ರಾಶಿ :

ವಿವಾಹಿತರು ತಮ್ಮ ಸಂಗಾತಿಯ ಬೆಂಬಲವನ್ನು ಪಡೆಯುತ್ತಾರೆ. ಪ್ರಯಾಣದ ಆಯಾಸಕ್ಕೆ ವಿಶ್ರಾಂತಿ ಪಡೆದು ಸಾಗಿರಿ. ಮಗುವಿನಿಂದ ನಿರಾಶಾದಾಯಕ ಸುದ್ದಿಗಳನ್ನು ಸ್ವೀಕರಿಸಬಹುದು, ಇದರಿಂದಾಗಿ ಮನಸ್ಸು ಹಾಳಾಗಬಹುದು. ಲಾಭ ಪಡೆಯಲು ಮಾಡಿದ ಪ್ರಯತ್ನಗಳು ಯಶಸ್ವಿಯಾಗುವುದು. ಮಿತ್ರರ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು.

ಕುಂಭ ರಾಶಿ :

ದಾಂಪತ್ಯ ಜೀವನದಲ್ಲಿ ಹಲವು ದಿನಗಳಿಂದ ಇದ್ದ ತೊಂದರೆಗಳು ಕೊನೆಗೊಂಡು ಬಾಂಧವ್ಯ ಮಧುರವಾಗಿರುತ್ತದೆ. ಇಂದು ಸಂಬಂಧಿಕರ ಜೊತೆಗೆ ಅನುಚಿತವಾಗಿ ವರ್ತಿಸಬೇಡಿ. ಸಂಬಂಧದಲ್ಲಿ ಹದಗೆಡುವ ಸಾಧ್ಯತೆಯಿದೆ. ಸಮಾಜದಲ್ಲಿ ನಿಮ್ಮ ಹೆಸರೂ ಕೂಡ ಹಾಳಾಗಬಹುದು. ಕೆಲವು ಉತ್ತಮ ಪ್ರಯೋಜನಗಳ ಯೋಗವಿದೆ. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು. ಇಂದಿನ ಆದಾಯದಿಂದ ನಿಮ್ಮ ಪಡೆಯಬೇಕಾದುದನ್ನು ಪಡೆಯುವಿರಿ.

ಇದನ್ನೂ ಓದಿ: ಬುಧ ಸಂಚಾರ ಫಲ: ಈ ರಾಶಿಯವರಿಗೆ ಒಲಿಯಲಿದೆ ದಿಢೀರ್ ಧನಯೋಗ ಹಾಗೂ ವೃತ್ತಿ ಪ್ರಗತಿ

ಮೀನ ರಾಶಿ :

ಸ್ವಬುದ್ಧಿಯಿಂದ ಕಾರ್ಯಗಳನ್ನು ಮಾಡುವಿರಿ. ನಿಮ್ಮ ಪ್ರೇಮವು ಸನ್ಮಾರ್ಗದಲ್ಲಿ ಕರೆದುಕೊಂಡು ಹೋಗದು. ಇಂದು ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವಿದ್ಯಾಭ್ಯಾಸಕ್ಕೆ ನಿಮ್ಮವರಿಂದ ಮನೆಯ ಹೊರಗೆ ವಿಚಾರಣೆ ಇರುತ್ತದೆ. ಹಣ ಪಡೆಯುವುದು ಸುಲಭವಾಗುತ್ತದೆ. ಸಂತೋಷ ಇರುತ್ತದೆ. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು.

-ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ