AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ

Horoscope Today 14 April : ಇಂದಿನ ರಾಶಿ ಭವಿಷ್ಯ 14 ಏಪ್ರಿಲ್ 2026: ಮಂಗಳವಾರದಂದು ದ್ವಾದಶ ರಾಶಿಗಳ ದೈನಂದಿನ ಜಾತಕವನ್ನು ತಿಳಿಯಿರಿ. ಪ್ರಯತ್ನದಿಂದ ಯಶಸ್ಸು, ದೈವಾನುಕೂಲದಿಂದ ಕಾರ್ಯಸಿದ್ಧಿ, ಹಣಕಾಸು ವ್ಯವಹಾರ, ವ್ಯಾಪಾರ, ಪ್ರಯಾಣ, ಮತ್ತು ಕುಟುಂಬ ಸಂಬಂಧಗಳಲ್ಲಿನ ಬೆಳವಣಿಗೆಗಳ ಕುರಿತು ಸಮಗ್ರ ಮಾಹಿತಿ ಇಲ್ಲಿದೆ. ನಿಮ್ಮ ದಿನವನ್ನು ಯೋಜಿಸಲು ಈ ಭವಿಷ್ಯವು ಸಹಾಯಕವಾಗಲಿದೆ.

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Apr 14, 2026 | 2:33 AM

Share

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಮಂಗಳವಾರದಂದು ಒತ್ತಡದಿಂದ ಕೆಲಸ, ಅನಪೇಕ್ಷಿತ ಮಾತು, ವ್ಯಾಪಾರ ಸುಗಮ, ವಾಹನದಿಂದ ಲಾಭ, ಮಿತ್ರರ ಜೊತೆ ಯಾತ್ರೆ, ಹಣದ ಆಗಮನ ಇವೆಲ್ಲ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರಾ, ಯೋಗ : ಶುಭ, ಕರಣ : ಭದ್ರ, ಸೂರ್ಯೋದಯ – 06 – 12 am, ಸೂರ್ಯಾಸ್ತ – 06 – 36 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:31 – 17:04, ಯಮಗಂಡ ಕಾಲ 09:19 – 10:52, ಗುಳಿಕ ಕಾಲ 12:25 – 13:58

ಮೇಷ ರಾಶಿ :

ತಾಯಿಯ ಕಡೆಯಿಂದ ನಿಮಗೆ ಸಹಾಯವು ಸಿಗಬಹುದು. ಇಂದು ನಿಮ್ಮ ಜೀವನಕ್ಕೆ ಅವಶ್ಯಕವಾದ ವಸ್ತುವನ್ನು ಪಡೆಯಲು ಅಸತ್ಯವನ್ನು ಹೇಳುವಿರಿ. ಅಲ್ಪಾವಧಿಯ ಹೂಡಕೆಯಿಂದ ಅಲ್ಪ ಲಾಭ. ಇಂದು ನಿಮ್ಮ ತಂತ್ರಗಾರಿಕೆಯು ಫಲಿಸಬಹುದು. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ. ಕೆಲಸವನ್ನು ಇಂದು ಮನಸ್ಸಿನಿಂದ ಮಾಡಿ.

ವೃಷಭ ರಾಶಿ :

ದೂರ ಪ್ರಯಾಣದಿಂದ ಪ್ರಯಾಸ. ಅನಾರೋಗ್ಯಕ್ಕೆ ಕಾರಣ. ಮನಸ್ಸು ಶುದ್ಧವಾಗಿದ್ದು ಪುರುಷಪ್ರಯತ್ನವೇ ಶ್ರೇಷ್ಠ ಎಂದು ನಂಬುವವರು ಇಂದು ನೀವಾಗುವಿರಿ. ಸ್ಥಿರಾಸ್ತಿಗೆ ಸಂಬಂಧಿಸಿದ ಕೌಟುಂಬಿಕ ವಿವಾದವನ್ನು ಮುಕ್ತಾಯ ಮಾಡಿಕೊಳ್ಳುವುದು ಉತ್ತಮ. ನೀವು ಹಳೆಯ ಸ್ನೇಹವು ಪುನಃ ನವೀಕರಣವಾಗುಉದು. ಧಾರ್ಮಿಕ ಕಾರ್ಯದಲ್ಲಿ ತೊಡಗುವಿಕೆ, ಮನಸ್ಸಿಗೆ ಅಲ್ಪ ಶಾಂತತೆ. ತಾಯಿಯ ಕಡೆಯಿಂದ ಲಾಭದ ಭರವಸೆ ಇರುತ್ತದೆ.

ಮಿಥುನ ರಾಶಿ :

ಎಲ್ಲರ ಜೊತೆ ಪ್ರೀತಿಯಿಂದ ಇರುವ, ವರ್ತಿಸುವ ಗುಣ ನಿಮ್ಮದು. ಅತಿಥಿಗಳಿಗೆ ಊಟೋಪಾಚರದಲ್ಲಿ ಗಮನ ಕೊಡುವಿರಿ. ಸಹಾಯವನ್ನು ಪಡೆದುಕೊಂಡವರ ಭೇಟಿಯಾಗಲಿದೆ. ಅವರಿಂದ ಗೌರವವಾದರು ಸಿಗಲಿವೆ. ಸಾಕಷ್ಟು ಸಂಪತ್ತು ಇದ್ದರೂ, ಕುಟುಂಬದಲ್ಲಿ ಸ್ವಲ್ಪ ಅಶಾಂತಿ ಇರುತ್ತದೆ. ವಾಹನ ದುರಸ್ತಿಯಿಂದ ಧನನಷ್ಟ ಮತ್ತು ವಾಹನ ಮೇಲಿನ ನಂಬಿಕೆ ಹೋಗುವುದು. ಯಾರೆದುರೂ ನಿಮ್ಮ ಪರಾಕ್ರಮವನ್ನು ಪ್ರದರ್ಶಿಸುವುದು ಬೇಡ. ಸ್ನೇಹಿತರ ಸಹಕಾರವು ನಿಮಗೆ ಸಾಕು ಎನಿಸಬಹುದು.

ಕರ್ಕಾಟಕ ರಾಶಿ :

ಎಲ್ಲವನ್ನೂ ನೀವು ಲಾಭದಾಯಕವನ್ನಾಗಿ ಮಾಡಿಕೊಳ್ಳುವಿರಿ. ಏನನ್ನಾದರೂ ಜನಬಲದ ಮೂಲಕ ಸಾಧಿಸುವುದು ಸುಲಭ. ಇಂದು ನಿಮ್ಮವರ ಬಗ್ಗೆಯೇ ಯೋಚಿಸಲು ಸಮಯ ಸಿಗದು. ದಿನದ ಆರಂಭವು ಬಹಳ ಉತ್ಸಾಹದಿಂದ ಇರಲಿದ್ದು ಎಲ್ಲ ಜೊತೆ ಸೌಹಾರ್ದವಾಗಿ ಇರುವಿರಿ. ಸಮಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಆರ್ಥಿಕ ವಿಷಯಗಳಲ್ಲಿ ಪ್ರಯೋಜನವಿದೆ ಮತ್ತು ನಿಮ್ಮ ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ಉತ್ಸಾಹವು ಹೆಚ್ಚಾಗುತ್ತದೆ

ಸಿಂಹ ರಾಶಿ :

ಅನಿರೀಕ್ಷಿತ ಹಣದ ವ್ಯಯದಿಂದ ಚಂಚಲರಾಗುವಿರಿ. ಮೊದಲ ವೇತನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಉತ್ಸಾಹಕ್ಕೆ ಬರುವ ಅಡ್ಡಿಗಳನ್ನು ನೀವು ಸಹಿಸಲಾರಿರಿ. ನಿಮ್ಮ ಮೇಲಿನ ಪ್ರಕರಣಗಳು ಒಂದೊಂದಾಗಿ ಬಗೆಹರಿಯುವುದು. ಈ ಕಾರಣಕ್ಕೆ ನಿಮಗೆ ಕೆಲಸದ ಪ್ರದೇಶದಲ್ಲಿ ಅಸ್ಥಿರತೆ ಇರುತ್ತದೆ. ಮನೆಯ ನಿರ್ಮಾಣದ ಯೋಜನೆಯನ್ನು ರೂಪಿಸುವಿರಿ. ಆಕಸ್ಮಿಕ ಸುದ್ದಿಯಿಂದ ದುಃಖಿಸಬೇಕಾದೀತು. ದಾಂಪತ್ಯ ಸುಖವು ಹೆಚ್ಚಾಗುವುದು. ಸಂಕೀರ್ಣ ಕಾರ್ಯಗಳನ್ನು ಸರಳ ಮಾಡಿಕೊಂಡು ಕಾರ್ಯಗತ ಗೊಳಿಸಲಾಗುವುದು.

ಕನ್ಯಾ ರಾಶಿ :

ಸಂಗಾತಿಯ ಮುನಿಸಿಗೆ ನೀವು ಆಹಾರವಾಗುವಿರಿ. ಹೆಚ್ಚು ಲಾಭ ಪಡೆಯಲು ಹೋಗಿ ಯಾರಿಗಾದರೂ ಸಿಕ್ಕಿಹಾಕಿಕೊಳ್ಳುವಿರಿ. ಉದ್ಯೋಗದಲ್ಲಿ ಅಕಸ್ಮಾತ್ ಬದಲಾವಣೆಗಳು ಆಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ಪಿರ್ತಾರ್ಜಿತ ಆಸ್ತಿಯನ್ನು ಗೊಂದಲಗಳು ಇರಬಹುದು. ವೃತ್ತಿ ಮತ್ತು ಆರ್ಥಿಕ ವಿಷಯಗಳಲ್ಲಿ ಇಂದು ಶುಭಕರವಾಗಿದ್ದು ಅಹಿತಕರ ವಾತಾವರಣಕ್ಕೆ ಆಸ್ಪದವನ್ನು ಕೊಡಲಾರಿರಿ.

ತುಲಾ ರಾಶಿ :

ನಿಮ್ಮ ಕಾರ್ಯವನ್ನು ಕೆಲವರು ಆಡಿಕೊಳ್ಳಬಹುದು. ಸಂಗಾತಿಯ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ಇನ್ನೊಬ್ಬರ ವ್ಯಕ್ತಿತ್ವವನ್ನು ಅನುಕರಣೆ ಮಾಡುವಿರಿ. ನೌಕರರ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಮಂದಿರಗಳಿಗೆ ಭೇಟಿ ನೀಡಿ ಸ್ವಲ್ಪ ಸಮಯವನ್ನು ಅಲ್ಲಿ ಕಳೆದು ಬರುವುದು ಒಳಿತು. ಇಂದು ನೀವು ನಿಮ್ಮ ಕುಟುಂಬದ ಜೊತೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವಿರಿ. ಅನಪೇಕ್ಷಿತ ಚರ್ಚೆಯು ನಿಮ್ಮ ನೆಮ್ಮದಿಯನ್ನು ಹಾಳುಮಾಡೀತು.

ವೃಶ್ಚಿಕ ರಾಶಿ :

ಅಪ್ರಿಯಾವಾದ ಆಪಾದನೆಗಳು ಬರಬಹುದು. ಹಠದ ಸ್ವಭಾವವು ನಿಮ್ಮನ್ನು ಒಂಟಿಗನನ್ನಾಗಿ ಮಾಡುತ್ತದೆ‌. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ಪ್ರಯಾಣದ ಸಮಯದಲ್ಲಿ ನಿಮ್ಮ ವಸ್ತುಗಳು ಕಳೆದುಹೋಗಬಹುದು. ಸಜ್ಜನರ ಸಂಯೋಗದಿಂದ ಮನಸ್ಸಿಗೆ ಸಂತೋಷವಾಗುತ್ತದೆ. ವ್ಯಾಪಾರ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಅನೇಕ ಅನುಭವಗಳನ್ನು ನೀವು ಪಡೆಯುತ್ತೀರಿ. ಪ್ರತಿಭೆಯ ಖ್ಯಾತಿಯನ್ನು ನೀವು ಪಡೆಯಬಹುದು.

ಧನು ರಾಶಿ :

ಇಂದು ಗೊತ್ತಿಲ್ಲದೇ ನಿಮ್ಮ ಸಮಯವು ವ್ಯರ್ಥವಾಗಬಹುದು. ವಿದೇಶದ ವ್ಯಕ್ತಿಗಳಿಂದ ತೊಂದರೆ. ಸಂಗಾತಿಯ ಜೊತೆಗೆ ಸಣ್ಣ ಕಲಹವು ಆಗಬಹುದು. ನಿಮ್ಮ ಭಾವನೆಗಳಿಗೆ ಬೆಲೆಯು ಇಲ್ಲದೇ ಹೋಗಬಹುದು. ಕೃಷಿಯಲ್ಲಿ ನೆಮ್ಮದಿಯನ್ನು ಕಾಣುವಿರಿ. ನೀವು ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಬರಬಹುದು. ನಿಮ್ಮ ಪಾಲಿನ ಕರ್ತವ್ಯಗಳನ್ನು ಮುಂದುವರಿಸಿ. ಪ್ರೇಮವು ವಿಪರೀತ ಹೊದಲದಲ್ಲಿ ಸಿಕ್ಕಿಕೊಂಡಿದ್ದು ಇದು ಅದೇ ಚಿಂತೆಯು ನಿಮ್ಮನ್ನು ಕಾಡುವುದು.

ಮಕರ ರಾಶಿ :

ಸಾಲವನ್ನು ಮಾಡಿ ವಾಹನವನ್ನೋ, ಭೂಮಿಯನ್ನೋ, ಮನೆಯನ್ನೋ ಖರೀದಿಸಲು ಹೋಗಬೇಡಿ. ನಿಮ್ಮವರಿಗೆ ನಿಮ್ಮನ್ನು ನೋಡಿ ಮಾತನಾಡಬೇಕು ಎನ್ನಿಸಬಹುದು. ಅದಕ್ಕೆ ಇಲ್ಲವೆನ್ನಬೇಡಿ. ಸುರಕ್ಷತೆಯ ಗಮನಾಗಮನ ಇಂದು ಬಹಳ ಮುಖ್ಯ. ಯಾರ ಸಹಕಾರವೂ ನಿಮ್ಮನ್ನು ಏನೂ ಮಾಡಲಾಗದು. ಜೊತೆಗಾರರನ್ನು ಆತ್ಮೀಯವಾಗಿ ಕಾಣುವಿರಿ. ಕುಟುಂಬಕ್ಕೆ ನಿಮ್ಮಿಂದ ಆಗಬೇಕಾದ ಕಾರ್ಯಗಳ ಬಗ್ಗೆ ತಿಳಿದುಕೊಳ್ಳುವಿರಿ. ನಿಮ್ಮ ವಿದೇಶ ಪ್ರವಾಸವು ಕಾರಣಾಂತರಗಳಿಂದ ರದ್ದಾಗುವುದು.

ಕುಂಭ ರಾಶಿ :

ಹಿರಿಯರ ಮಧ್ಯಸ್ಥಿಕೆಯಲ್ಲಿ ಕಾರ್ಯವು ಮುನ್ನಡೆದರೆ ಸೊಗಸು. ನ್ಯಾಯಾಲಯದಲ್ಲಿ ವಾದ-ವಿವಾದಗಳನ್ನು ಮಾಡಲಿದ್ದೀರಿ. ದೂರಪ್ರಯಾಣವನ್ನು ಮಾಡಿ ಆಯಾಸಗೊಳ್ಳಬೇಡಿ. ಸ್ಥಿರಾಸ್ತಿಯ ಮಾಹಿತಿಯನ್ನು ಕೊಡಬೇಕಾಗುವುದು. ಸಂತೃಪ್ತಿಯಿಂದ ನೀವು ನಿಮ್ಮ ಹಳೆಯ ಎಲ್ಲವನ್ನೂ ಮರೆಯುವಿರಿ. ಹಣದ ಅನಿವಾರ್ಯತೆಯು ಬರಲಿದ್ದು, ಹೇಗೋ ಹೊಂದಿಕೆಯಾಗಲಿದೆ. ಸಂಗಾತಿಯ ಬಗ್ಗೆ ಪೂರ್ವಾಗ್ರಹವು ಇರುವ ಕಾರಣ ಯಾವುದೂ ಇಷ್ಟವಾಗದು.

ಮೀನ ರಾಶಿ :

ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ. ಶ್ರಮದ ಫಲವನ್ನು ಉಣ್ಣುವ ಕಾಲ ಬಂದಿರುತ್ತದೆ. ಇಂದು ನೀವು ಅಪರಿಚಿತರಿಂದ ಬೆಂಬಲ ಪಡೆಯಬಹುದು. ಲಾಭದ ಹಾದಿಯು ಅಡ್ಡಿಯಿಂದ ಚಿಂತೆ ಕಾಡಬಹುದು. ಅಲ್ಪಾವಧಿಯಲ್ಲಿ ಹೆಚ್ಚು ಪಡೆಯಬೇಕು ಎನ್ನುವ ಅತಿಯಾದ ಆಸೆ ಬೇಡ. ಸಂಗಾತಿಯ ಜೊತೆ ಕಲಹವಾಡಿ ಯಾವ ಕಾರ್ಯವನ್ನೂ ಮಾಡಲು ಹೋಗುವುದು ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

Follow Us