AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 14 August: ಇಂದು ಈ ರಾಶಿಯವರೇ ತಂದುಕೊಳ್ಳುವ ಸಂಕಟಕ್ಕೆ ಅನ್ಯರಿಂದ ಪರಿಹಾರ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಶ್ರಾವಣ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ ಗುರುವಾರ ಅವಿವೇಕಿತನ, ಭಯ ದೂರ, ಲೋಪದಿಂದ ಕೋಪ, ಮಹತ್ಕಾರ್ಯಕ್ಕೆ ಧನ ಸಂಗ್ರಹ, ಉತ್ತಮ‌ವಸ್ತುವಿಗೆ ಅತಿಮೌಲ್ಯ, ಸಂಗಾತಿಯ ಜೊತೆ ಸುತ್ತಾಟ ಇವೆಲ್ಲ ಇಂದಿನ ವಿಶೇಷ. ಇಂದು ಯಾವ ರಾಶಿಗಳ ಜನರ ಭವಿಷ್ಯ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ

Horoscope Today 14 August: ಇಂದು ಈ ರಾಶಿಯವರೇ ತಂದುಕೊಳ್ಳುವ ಸಂಕಟಕ್ಕೆ ಅನ್ಯರಿಂದ ಪರಿಹಾರ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Aug 14, 2025 | 1:52 AM

Share

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ವರ್ಷ, ಚಾಂದ್ರ ಮಾಸ: ಶ್ರಾವಣ, ಸೌರ ಮಾಸ: ಕರ್ಕಾಟಕ, ಮಹಾನಕ್ಷತ್ರ: ಆಶ್ಲೇಷಾ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಸುಕರ್ಮ, ಕರಣ: ಕೌಲವ, ಸೂರ್ಯೋದಯ – 06 : 19 am, ಸೂರ್ಯಾಸ್ತ – 06 : 54 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 14:12 – 15:46 ಗುಳಿಕ ಕಾಲ 09:29 – 11:03 ಯಮಗಂಡ ಕಾಲ 06:20 – 07:54

ಮೇಷ ರಾಶಿ: ಅವಿವೇಕಿತನದಿಂದ ನೀವೇ ಮೂರ್ಖರಾಗಬಹುದು. ಅಧಿಕಾರಯುತವಾದ ಮಾತಿನಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ಮನಸ್ಸಿನ ಚಾಂಚಲ್ಯವನ್ನು ಕಡಿಮೆ‌ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಇಂದು ನೀವು ಕೆಲವು ಸಂದರ್ಭದಲ್ಲಿ ಮೌನ ವಹಿಸುವುದು ಉತ್ತಮ. ಬಳಕೆಯಲ್ಲಿ ಇಲ್ಲದೇ ನಿಮ್ಮ ಸಂಬಂಧಗಳು ಸಡಿಲಾಗಬಹುದು. ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಯಾಮಾರುವ ಸನ್ನಿವೇಶ ಬರಬಹುದು. ತಾವಾಡಬೇಕಾದ ಮಾತನ್ನು ನಿಮ್ಮಿಂದ ಆಡಿಸುವರು. ಇಂದು ವ್ಯಾಪಾರವನ್ನು ಬಹಳ ನಾಜೂಕಾಗಿ ಮಾಡಬೇಕಿದೆ. ನಿಮ್ಮ ಸುಳ್ಳು ಮಾತುಗಳಿಂದಲೇ ನಿಮಗೆ ತೊಂದರೆಯಾಗಬಹುದು. ಮಾತಿನ‌ ಮೇಲೆ‌ ಗಮನ ಇರಬೇಕಾಗುವುದು. ನಿಮ್ಮಿಂದ ಹಣದ ಸಹಾಯವನ್ನು ಬಯಸುವವರು ವಂಚಿಸಲೂ ಸಾಧ್ಯವಿದೆ. ಬೇಡವಾದುದ್ದೇ ನಿಮ್ಮನ್ನು ಹೆಚ್ಚು ಆಕರ್ಷಿಸುವುದು. ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು. ಹಳೆಯ ಹಣಕಾಸಿನ ವ್ಯವಹಾರವನ್ನು ನೀವು ತೀರಿಸಿಕೊಳ್ಳುವಿರಿ.

ವೃಷಭ ರಾಶಿ: ಪಠ್ಯೇತರ ಚಟುವಟಿಕೆಗೆ ತೋರಿಸುವ ಆಸಕ್ತಿ ಕಲಿಕೆಯಲ್ಲಿ ಕಾಣಿಸದು. ಇಂದು ನೀವು ಸ್ತ್ರೀಯರ ವಿಚಾರದಲ್ಲಿ ಸೂಕ್ಷ್ಮಮತಿಗಳಾಗುವಿರಿ. ನೀವು ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಇನ್ನಷ್ಟು ಸಮಸ್ಯೆಯನ್ನು ಮಾಡಿಕೊಳ್ಳುವಿರಿ. ಆದರೆ ನಿಮ್ಮ ನಿರ್ಧಾರವು ಅಚಲವಾಗಿರಲಿ. ಎಂದೋ ಆರಂಭವಾದ ಕಾರ್ಯವು ಕುಂಟುತ್ತಾ ಸಾಗವುದು. ವಿರುದ್ಧ ಪ್ರಯತ್ನದಿಂದ ನಿಮಗೆ ಶ್ರಮವೇ ಅಧಿಕ. ಆದರೂ ಅದರಲ್ಲಿಯೇ ಆಸಕ್ತಿ ಹೆಚ್ಚು. ಜಾಡ್ಯವನ್ನು ದೂರ ಮಾಡಿಕೊಳ್ಳುವತ್ತ ಗಮನವಿರಲಿದೆ. ಹೊಸ ವಸ್ತುಗಳ ಮೇಲೆ ವ್ಯಾಮೋಹ ಕಾಣಿಸುವುದು. ನೂತನ ವಸ್ತುಗಳನ್ನು ಖರೀದಿಸುವಲ್ಲಿ ಮೋಸವಾಗಬಹುದು. ಸಣ್ಣ ವಿಷಯವನ್ನು ನೀವು ದೊಡ್ಡ‌ ಮಾಡುವುದು‌ ಬೇಡ. ಏಕಾಂತವು ನಿಮಗೆ ಹಿತವೆನಿಸಬಹುದು. ಫಲಾಪೇಕ್ಷೆಯಿಲ್ಲದೇ ಕರ್ತವ್ಯಗಳನ್ನು ಮಾಡಿರಿ. ಹೆಚ್ಚು ಸಮಯವನ್ನು ಕುಟುಂಬದೊಂದಿಗೆ ಕಳೆಯುವಿರಿ. ಆಲೋಚನೆ ಮಾಡುವಷ್ಟರಲ್ಲಿ ಕೆಲಸವೇ ಮುಗಿಯಬಹುದು. ಹಿತಶತ್ರುಗಳನ್ನು ದೂರವಿರಿಸುವುದು ಕಷ್ಟವಾದೀತು.

ಮಿಥುನ ರಾಶಿ: ನಿಮ್ಮ ಬಳಕೆ ಮಾಡಿಸ ವಸ್ತುಗಳನ್ನು ದಾನವಾಗಿ ಕೊಡುವಿರಿ. ನಕಾರಾತ್ಮಕ ಯೋಚನೆಗಳು ನಿಮ್ಮನ್ನು ಸುಮ್ಮನಿರಲು ಬಿಡದು. ಗುರುಸನ್ನಿಧಿಯನ್ನು ನೀವು ಇಂದು ಬಯಸುವಿರಿ. ದೇವರಿಗೆ ಸಂಬಂಧಿಸಿದ ವಿಚಾರದಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಬಹುದು. ಕೃಷಿಕರೆ ಆತಂಕ ಬರುವ ಸಂಭವ ಇದೆ. ಸ್ನೇಹಿತರು ಜಗಳವಾಡಿ ನಿಮ್ಮನ್ನು ಬಿಟ್ಟುಹೋಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತೊಡಗಲು ಕಷ್ಟಪಡುವರು. ಪ್ರೀತಿಯನ್ನು ಒಪ್ಪಿಕೊಳ್ಳುವ ಮೊದಲು ಹತ್ತು ಬಾರಿ ಯೋಚಿಸಿ. ಮಕ್ಕಳು ದಾರಿ ತಪ್ಪಬಹುದು. ಅವರಿಗೆ ಸರಿಯಾದ ಮಾರ್ಗದರ್ಶನ ಅಗತ್ಯ. ತಾಯಿಯ ಜೊತೆ ಕಲಹ ಮಾಡಿಕೊಳ್ಳುವಿರಿ. ನಿಮ್ಮನ್ನು ನೆಚ್ಚುವವರು ಹೆಚ್ಚಾಗಬಹುದು. ಅಧಿಕ ಮಾತನ್ನಾಡಯವುದು ಬೇಡ. ನಿಮ್ಮ ದುರ್ವರ್ತನೆಯು ಸಾಕ್ಷಿ ಸಹಿತ ಸಿಗಲಿದೆ. ಮನೆಯಲ್ಲಿ ಸಂತೋಷಕೂಟವು ನಿರ್ಮಾಣವಾಗುವುದು. ಶ್ರಮಕ್ಕೆ ಯೋಗ್ಯವಾದ ಫಲವು ಲಭಿಸುವುದು. ಅಪರೂಪದ ವಸ್ತುವು ನಿಮಗೆ ಲಾಭವಾಗಲಿದೆ. ನೀವೇ ಮಾಡಿದ ಕಾರ್ಯವಾದರೂ ಪರಿಶೀಲನೆ ಮುಖ್ಯ.

ಕರ್ಕಾಟಕ ರಾಶಿ: ತಪ್ಪಿತಸ್ಥ ಭಾವನೆಯಿಂದ ಆತ್ಮವಿಶ್ವಾಸವೂ ಕಳೆಗುಂದುವುದು. ನೀವು ಇಂದು ಏನನ್ನು ಕೊಡುವುದಿದ್ದರೂ ಮನಃಪೂರ್ವಕವಾಗಿ ಕೊಡುವುದು ಉತ್ತಮ. ಬೇರೆಯವರಿಗೆ ಅಪಕೀರ್ತಿ ತರಲು ಹೋಗಿ ನಿಮ್ಮ ಯಶಸ್ಸನ್ನೇ ಹಾಳುಮಾಡಿಕೊಳ್ಳಬೇಕಾಗುವುದು. ಇಂದ್ರಿಯ ಸಂಯಮವನ್ನು ಸಾಧಿಸುವುದು ಕಷ್ಟವಾದೀತು. ಒತ್ತಾಯಕ್ಕೆ ಮಣಿದು ನಿಮ್ಮ ಪೂರ್ವಯೋಜನೆಯನ್ನು ಬದಲಿಸುವಿರಿ. ಏನನ್ನೋ ಸಾಧಿಸಿದವರಂತೆ ಬೀಗುವುದು ಬೇಡ. ದೊಡ್ಡವರ ವಿಚಾರದಲ್ಲಿ ಮೂಗುತೂರಿಸುವಿರಿ. ನೂತನ ವಸ್ತ್ರಗಳನ್ನು ಧರಿಸುವಿರಿ. ಕಲಾವಿದರು ಅವಕಾಶವನ್ನು ಬಳಸಿಕೊಳ್ಳುವರು. ಹಿತಶತ್ರುಗಳು ಎಂದು ಅನ್ನಿಸಿದರೆ ಅವರನ್ನು ದೂರವಿಡುವುದು ಉತ್ತಮ. ಪಡೆದುಕೊಂಡಿದ್ದನ್ನು ಉಳಿಸಿಕೊಳ್ಳುವ ಎಚ್ಚರಿಕೆ ಬೇಕು. ಅಪರಿಚಿತ ಪ್ರದೇಶದಲ್ಲಿ ಜಾಗರೂಕತೆ ಬೇಕು. ಪಶ್ಚಾತ್ತಾಪ ಪಟ್ಟು ಪ್ರಯೋಜನವಾಗದು. ಆತ್ಮವಿಶ್ವಾಸದ ಕೊರತೆ ಎದ್ದು ಕಾಣುವುದು. ಆಕಸ್ಮಿಕ ವಿಚಾರಕ್ಕೆ ಗಲಿಬಿಲಿಯಾಗುವಿರಿ. ಪ್ರಯಾಣದ ಅಡೆತಡೆಯು ನಿಮಗೆ ಕೋಪ ತರಿಸಬಹುದು. ಸ್ವಂತಕ್ಕೆ ಪ್ರಯೋಜನವಿಲ್ಲದ ಯಾವ ಕಾರ್ಯವನ್ನೂ ನೀವು ಮಾಡಲಾರಿರಿ.

ಸಿಂಹ ರಾಶಿ: ನಿಮ್ಮ ಬಗ್ಗೆ ಬರುವ ಆರೋಪವನ್ನು ಧೈರ್ಯದಿಂದ ಎದುರಿಸುವಿರಿ. ನೀವು ನಿರ್ಲಕ್ಷ್ಯ ಮಾಡುವ ಸಂಗತಿಗಳೇ ನಿಮ್ಮ ಬಂದು ಸೇರುವುದು. ಮಕ್ಕಳಿಂದ ನಿಮಗೆ ಶುಭವಾರ್ತಯನ್ನು ನಿರೀಕ್ಷಿಸಿ. ಸರ್ಕಾರದಿಂದ ಆಗಬೇಕಾದ ಕೆಲಸವನ್ನು ನೀವು ಮಾಡಿಸಿಕೊಳ್ಳಲು ನೀವು ಶ್ರಮಪಡಬೇಕಾದೀತು. ಪ್ರಭಾವಿ ವ್ಯಕ್ತಿಗಳ ಸಂಪರ್ಕವಾಗಲಿದೆ. ವ್ಯಕ್ತಿಗತ ಕೋಪವನ್ನು ಬಿಟ್ಟು ವಿಷಯಕ್ಕೆ ಬೇಕಾದ ಮಹತ್ತ್ವವನ್ನು ನೀಡುವಿರಿ. ನಿಮ್ಮದಲ್ಲದ ವಸ್ತುವನ್ನು ಬಯಸಿ ಪಡೆದುಕೊಳ್ಳಲು ಕಷ್ಟಪಡುವಿರಿ. ಸುಂದರ ಸ್ಥಳಗಳನ್ನು ನೋಡಲು ನೀವು ಇಷ್ಟಪಡುವಿರಿ. ತಪ್ಪಿನ ಕಾರ್ಯದಿಂದ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ನಿಮಗೆ ಸಹೋದ್ಯೋಗಿಗಳು ಬೆಂಬಲ ಕೊಡುವುದು ಕಷ್ಟವಾದೀತು. ಇಂದು ಇಡೀ ದಿನ ಕೋಪದಿಂದ ಇರುವಿರಿ. ಪ್ರಯಾಣದ ವಿಚಾರದಲ್ಲಿ ಕಲಹವಾಗಬಹುದು. ಅನ್ನಿಸಿದ್ದನ್ನು ಹೇಳುವ ರೀತಿಯಲ್ಲಿ ಹೇಳಿ. ಇಂದು ನಿಮ್ಮವರ ಬಗ್ಗೆಯೇ ಯೋಚಿಸಲು ಸಮಯ ಸಿಗದು. ದಿನದ ಆರಂಭವು ಬಹಳ ಉತ್ಸಾಹದಿಂದ ಇರಲಿದ್ದು ಎಲ್ಲ ಜೊತೆ ಸೌಹಾರ್ದವಾಗಿ ಇರುವಿರಿ.

ಕನ್ಯಾ ರಾಶಿ: ನಿಮ್ಮ ಕಾರ್ಯದ ವೇಗವನ್ನು ತಗ್ಗಿಸಲು ಒಂದಿಷ್ಟು ಕೆಲಸಗಳನ್ನು ನೀಡುವರು. ಮಹಿಳೆಯರ ಜೊತೆ ಕೆಲಸ ಮಾಡುವುದು ಕಷ್ಟವಾಗುವುದು. ಅವಮಾನದವನ್ನು ನೀವು ಅನುಭವಿಸುವ ಪ್ರಸಂಗವೂ ಬರಬಹುದು. ಪ್ರತ್ಯೇಕವಾಗಿ ನಿಮ್ಮನ್ನು ಗುರುತಿಸಿಕೊಳ್ಳಲು ಬಯಸುವಿರಿ. ನಿಮ್ಮ ಮಾತುಗಳು ನಿಮಗೆ ತಿರುಗುಬಾಣವಾಗಿ ಬರಬಹುದು.‌ ಸಂಗಾತಿಯು ಉದ್ಯಮದಲ್ಲಿ ಪ್ರವೇಶ ಮಾಡಬಹುದು. ಆಪತ್ಕಾಲದ ಸಂಪತ್ತನ್ನು ಇಂದು ಬಳಸಿಕೊಳ್ಳುವಿರಿ. ಬಂಗಾರದ ವ್ಯಾಪಾರಿಗಳು ಅಧಿಕ ಲಾಭವನ್ನು ಗಳಿಸಲಿದ್ದಾರೆ. ಆಕಸ್ಮಿಕ ಧನಲಾಭವು ನಿಮಗೆ ಸಂತೋಷವನ್ನು ಕೊಡದು. ಸ್ನೇಹಿತರ ಮೇಲೆ ಅನುಮಾನಪಟ್ಟುಕೊಂಡು ಅವರನ್ನು ದೂರವಿರಿಸುವಿರಿ. ಸರ್ಕಾರಿ ಉದ್ಯೋಗವನ್ನು ಪಡೆಯಲು ಬಹಳ ಪ್ರಯತ್ನಪಡುವಿರಿ. ನಷ್ಟವಾದುದರ ಅನುಭವವು ನಿಮಗಾಗುವುದು. ಈ ಕಾರಣಕ್ಕೆ ನಿಮಗೆ ಕೆಲಸದ ಪ್ರದೇಶದಲ್ಲಿ ಅಸ್ಥಿರತೆ ಇರುತ್ತದೆ. ಕಷ್ಟದ ಫಲವು ನಿಮಗೆ ಇಂದು ಗೊತ್ತಾಗಲಿದೆ. ಸಮಯದೊಂದಿಗೆ ಚಲಿಸುವ ಮೂಲಕ ನೀವು ಪ್ರಗತಿ ಹೊಂದುತ್ತೀರಿ.

ತುಲಾ ರಾಶಿ: ಮಹತ್ಕಾರ್ಯಕ್ಕೆ ಸಾರ್ವಜನಿಕವಾಗಿ ಧನ ಸಂಗ್ರಹ ಮಾಡುವಿರಿ. ನಿಮ್ಮ ಇಂದಿನ ಕಾರ್ಯವು ತಾರ್ಕಿಕ ಅಂತ್ಯವನ್ನು ಕಾಣದೇ ಹೋಗಬಹುದು. ನಿಮ್ಮ ಚಂಚಲವಾದ ಮನಸ್ಸನ್ನು ನಿಗ್ರಹಿಸಲು ನಿಮಗೆ ಕಷ್ಟವಾದೀತು. ಕೃಷಿಕರಿಗೆ ಹೆಚ್ಚಿನ ಆದಾಯವು ಬರಬಹುದು. ಭೂಮಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಕಲಾವಿದರಿಗೆ ಪ್ರೋತ್ಸಾಹ ಸಿಗದೇ ಬೇಸರ ಮಾಡಿಕೊಳ್ಳಬೇಕಾಗಬಹುದು. ಸುಪ್ತಪ್ರಜ್ಞೆ ನಿಮ್ಮನ್ನು ಒಳಿತಿನ ಕಡೆಗೆ ಒಯ್ಯುವುದು. ಏಕಾಂತದಲ್ಲಿ ಸಮಯವನ್ನು ಕಳೆಯುವಿರಿ. ನಿಮ್ಮ ಕೆಲವು ಸ್ವಭಾವವನ್ನು ಸಂಗಾತಿಯು ತಿದ್ದಲು ಬಯಸಬಹುದು. ಅಕಾರಣವಾಗಿ ನಿಮ್ಮವರನ್ನು ನೀವು ತೆಗಳುವಿರಿ. ದೈವದಲ್ಲಿ ನಂಬಿಕೆ ಕಡಿಮೆಯಾದೀತು. ಮಿತ್ರರಿಗೋಸ್ಕರ ತಿರುಗಾಟ ಮಾಡಬೇಕಾದೀತು. ಉದ್ಯೋಗದಲ್ಲಿ ಅಕಸ್ಮಾತ್ ಬದಲಾವಣೆಗಳು ಆಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ಆಪ್ತರ ಭೇಟಿಯು ಬಹಳ ದಿನಗಳ ಅನಂತರ ಆಗಬಹುದು.

ವೃಶ್ಚಿಕ ರಾಶಿ: ಬೇಕಾದ ವಸ್ತುಗಳ ಖರೀದಿಗೆ ಅಲೆದಾಟ ಮಾಡುವಿರಿ. ಜವಾಬ್ದಾರಿಗಳು ನಿಮಗೆ ಭಾರವೆನಿಸಬಹುದು. ನಿಮ್ಮಿಂದಾಗದು ಎಂಬ ವಿಚಾರವನ್ನು ನೀವು ಹಠವಾಗಿ ತೆಗೆದುಕೊಳ್ಳುವಿರಿ. ನೀವು ಎಲ್ಲರ ವಿರೋಧದ ನಡುವೆಯೂ ನೀವು ಮಾಡಬೇಕಾದುದನ್ನು ಮಾಡುವಿರಿ. ಹೊಸ ಪ್ರೇಮಾಂಕುರವು ಹುಟ್ಟಿಕೊಳ್ಳಲಿದೆ. ಮನ ಬಂದಂತೆ ಮಾತನಾಡುವುದಕ್ಕೆ ಕಡಿವಾಣ ಬೀಳಲಿದೆ. ಇಂದಿನ ಕೆಲಸವನ್ನು ಬಹಳ ಶ್ರಮದಿಂದ ಮಾಡುವಿರಿ. ಸಹಿಸಿಕೊಳ್ಳಲಾಗದ ನೋವನ್ನು ನೀವು ಅನುಭವಿಸುವಿರಿ. ಪ್ರೀತಿಯಿಂದ ನಿಮಗೆ ಸಂತೋಷವು ಸಿಗುವುದು. ಇದ್ದಕ್ಕಿದ್ದಂತೆ ಏನ್ನಾದರೂ ಹೊಸತನ್ನು ಮಾಡಲು ಉತ್ಸಾಹ ಬರಲಿದೆ. ಇಂದು ನಿಮ್ಮದೇ ಜಗತ್ತಿನಲ್ಲಿ ಇರುವಿರಿ. ನಿಮ್ಮ ಕಾರ್ಯವನ್ನು ಕೆಲವರು ಆಡಿಕೊಳ್ಳಬಹುದು. ಸಂಗಾತಿಯ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ತಂದೆಯ ಮಾತನ್ನು ಗೌರವಿಸುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಭೂ ವ್ಯವಹಾರದಲ್ಲಿ ಯಶಸ್ಸು ಸಿಗುವುದು.

ಧನು ರಾಶಿ: ಗುಣಮಟ್ಟದ ವಸ್ತುವನ್ನು ಪಡೆಯಬೇಕಾದರೆ ಹಣವನ್ನು ವ್ಯಯಿಸುವರು. ನಿರುದ್ಯೋಗಿಗಳಿಗೆ ಸ್ನೇಹಿತರಿಂದ ಸಹಕಾರವು ಸಿಗುವುದು. ಇದು ನಿಮ್ಮನ್ನು ಉದ್ವೇಗಕ್ಕೆ ತಳ್ಳಬಹುದು. ಇಂದು ಸಭೆ ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಅನ್ಯರ ಮೂಲಕ ಇಂದು ಮಾಡಿಸಿದ ಎಲ್ಲ ಕೆಲಸಗಳು ಹಾಳಾಗಬಹುದು. ಪರರ ಸುಖದಿಂದ ಅಸೂಯೆಯಾಗಲಿದೆ. ಸ್ತ್ರೀಯರು ನೋವನ್ನು ಅನುಭವಿಸಬೇಕಾದೀತು. ಸಹೋದ್ಯೋಗಿಗಳು ನಿಮ್ಮ ಸಹಾಯಕ್ಕೆಂದು ಬರಬಹುದು. ಅದೃಷ್ಟವು ಕೈಕೊಡುವುದು. ಆಕಸ್ಮಿಕ ಧನಲಾಭವು ಆಗುವುದು. ಹಿರಿಯರು ನಿಮಗೆ ಲಾಭದಾಯಕವಾದ ಕೆಲಸವೊಂದನ್ನು ಮಾಡುವರು. ಅಶಿಸ್ತಿನಿಂದ ಇಂದು ನೀವು ವರ್ತಿಸುವಿರಿ. ತಾಳ್ಮೆಯನ್ನು ಬೆಳೆಸಿಕೊಳ್ಳುವುದು ಉತ್ತಮ. ಯಂತ್ರೋಪಕರಣ ಅಥವಾ ವಾಹನದಿಂದ ಧನವು ನಷ್ಟವಾಗಿ ಬೇಸರವೂ ಆಗಲಿದೆ. ನಿಮಗೆ ಆಗಬೇಕಾದ ಕಾರ್ಯಕ್ಕೆ ಹಣವೂ ಓಡಾಟವೂ ಅತಿಯಾಯಿತು ಎಂದು ಅನ್ನಿಸುವುದು. ವಿದ್ಯಾಭ್ಯಾಸದಲ್ಲಾದ ಪ್ರಗತಿಯು ಖುಷಿ ಕೊಡುವುದು.

ಮಕರ ರಾಶಿ: ದೂರದಲ್ಲಿದ್ದ ಮಕ್ಕಳ‌ ಆಗಮನದಿಂದ ಹಬ್ಬದ ವಾತಾವರಣ ಇರಲಿದೆ. ಕಛೇರಿಯ ವ್ಯವಹಾರವು ನಿಮಗೆ ಚಿಂತೆಯನ್ನು ಹೆಚ್ಚು ಮಾಡಬಹುದು. ಉದ್ಯಮದಲ್ಲಿ ಇರುವ ದೌರ್ಬಲ್ಯವನ್ನು ಸರಿ ಮಾಡಿಕೊಳ್ಳಿ. ಅದಕ್ಕಾಗಿ ದೇಹವನ್ನು ದೃಢವಾಗಿಸಿಕೊಳ್ಳುವ ಕುರಿತು ಪ್ರಯತ್ನಿಸುವಿರಿ. ಬೇಡದ ಕಡೆ ಹಣವನ್ನು ವ್ಯಯಿಸುವುದು ಮನೆಯವರಿಗೆ ಇಷ್ಟವಾಗದು. ದಿನದಿಂದ ದಿನಕ್ಕೆ ಸಾಮರ್ಥ್ಯ ಬೆಳೆಯುವತ್ತ ಗಮನವಿರಲಿ. ಉಳಿತಾಯ ಮಾಡದೇ ಖರ್ಚು ಮಾಡಿದ್ದಕ್ಕೆ ಇಂದು ಪಶ್ಚಾತ್ತಾಪ ಪಡಬೇಕಾದೀತು. ವಿದ್ಯಾರ್ಥಿಗಳಿಂದ ಸಮ್ಮಾನ ದೊರೆಯುವುದು. ಅಧಿಕೃತವಾಗಿ ನಿಮಗೆ ಆಧಿಕಾರವು ನಿಮಗೆ ದೊರೆಯಬಹುದು. ಸಂತಾನವಿಲ್ಲ ಎಂಬ ಚಿಂತೆ ನಿಮ್ಮನ್ನು ಅಧಿಕವಾಗಿ ಕಾಡಲಿದೆ. ನೆಮ್ಮದಿಗೆಂದು ವಾಯುವಿಹಾರಕ್ಕೆ ಹೋಗಲು ಇಚ್ಛಿಸುವಿರಿ. ಧೈರ್ಯದಿಂದ ನೀವು ಕಾರ್ಯಗಳನ್ನು ಮಾಡಲು ಹಿಂಜರಿಯುವಿರಿ. ಏನನ್ನಾದರೂ ಮಾತನಾಡಿ ಸಿಕ್ಕಿಬೀಳುವಿರಿ. ತಪ್ಪನ್ನು ನೀವೇ ತಿದ್ದಿಕೊಂಡರೆ ಒಳ್ಳೆಯದು. ಕುಟುಂಬಕ್ಕೆ ನಿಮ್ಮಿಂದ ಆಗಬೇಕಾದ ಕಾರ್ಯಗಳ ಬಗ್ಗೆ ತಿಳಿದುಕೊಳ್ಳುವಿರಿ.

ಕುಂಭ ರಾಶಿ: ಕುಟುಂಬದ ಮುಂದೆ ಬೇರೆಲ್ಲ ನಗಣ್ಯವಾಗಲಿದೆ. ಆತುರದಲ್ಲಿ ಏನನ್ನಾದರೂ ಮಾಡಿಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಶತ್ರುಗಳು ರಾಜಿಯಾಗಲು ಇಂದು ಬರಬಹುದು. ಹಿರಿಯರ ಮಧ್ಯಸ್ಥಿಕೆಯಲ್ಲಿ ಕಾರ್ಯಗಳು ಮುನ್ನಡೆದರೆ ಒಳ್ಳೆಯದು. ದೂರದಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ವೃತ್ತಿಯು ಸಾಕೆನಿಸಬಹುದು. ಅಸಧುನಿಕ ಉಪಕರಣಗಳ ಬಳಕೆ ಹೆಚ್ಚಾಗುವುದು. ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ನೀವು ಇಂದು ಉದ್ಯಮಿಗಳ ಜೊತೆ ಮುಖಾಖಿಯಾಗಲಿದ್ದೀರಿ. ವ್ಯವಹಾರವನ್ನು ಮಾಡುವಾಗ ನೀವು ಗ್ರಾಹಕರ ಬಗ್ಗೆ ಗಮನವಿಡುವುದು ಮುಖ್ಯವಾಗಲಿದೆ. ಯಂತ್ರಗಳ ಮಾರಾಟವು ನಿಮಗೆ ಅಧಿಕಲಾಭವನ್ನು ಕೊಟ್ಟೀತು. ಮನಶ್ಚಾಂಚಲ್ಯಕ್ಕೆ ಉಪಶಮನ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ ನಿರ್ಧಾರವನ್ನು ನೀವು ಇಂದು ಸಡಿಲಮಾಡುವಿರಿ. ಒಂದೇ ಕೆಲಸದಿಂದ ಎರಡು ಫಲವನ್ನು ಪಡೆಯುವ ಸಾಧ್ಯತೆ ಇದೆ. ಬಂಧುಗಳ ವಿಚಾರಕ್ಕೆ ಆರ್ಥಿಕನಷ್ಟವಾಗುವುದು. ಸಂಗಾತಿಯ ಬಗ್ಗೆ ಪೂರ್ವಾಗ್ರಹವು ಇರುವ ಕಾರಣ ಯಾವ ಇಷ್ಟವಾಗದು. ಹೂಡಿಕೆಯಿಂದ ಇಂದು ದೂರವಿರುವಿರಿ. ಕುಟುಂಬದ ಮೇಲಿರುವ ಅಭಿಪ್ರಾಯವು ಬದಲಾಗುವುದು.

ಮೀನ ರಾಶಿ: ನೇರ ಮಾತುಗಳನ್ನು ಸಂದರ್ಭ ನೋಡಿ ಆಡುವಿರಿ. ಗೊಂದಲದ ಕಾರಣದಿಂದ ಯಾವುದನ್ನೂ ಪೂರ್ಣವಾಗಿ ನಿರ್ಧಾರ ಮಾಡಲಾಗಸು. ನೀವು ದಿನದ ಆರಂಭದಿಂದ ಕೊನೆಯ ತನಕ ಉತ್ಸಾಹವಿರುವುದು. ಗೊತ್ತಿಲ್ಲ ವಿಚಾರಗಳನ್ನು ಅನುಭವಿಗಳಿಂದ, ಹಿರಿಯರಿಂದ ತಿಳಿದುಕೊಳ್ಳಲು ಪ್ರಯತ್ನಿಸಿ. ನಿಮ್ಮನ್ನು ನೀವು ಬುದ್ಧಿವಂತರೆಂದು ತಿಳಿದುಕೊಂಡಿದ್ದರೆ ಅದು ಸುಳ್ಳಾಗಬಹುದು. ಉದ್ಯಮವನ್ನು ವಿಸ್ತರಿಸುವ ಬಗ್ಗೆ ಸ್ಥಳ ಪರಿಶೀಲನೆ ಮಾಡುವಿರಿ. ಇನ್ನೊಬ್ಬರ ಹಿತಚಿಂತನೆಯಲ್ಲಿ ನೀವು ಭಾಗಿಯಾಗುವಿರಿ. ಕಳೆದ ಸಮಯದ ಮೆಲುಕನ್ನು ನೀವು ಹಾಕುವಿರಿ. ಇಂದು ನಿಮಗೆ ಹಿತಕರವಾದ ವಾರ್ತೆತೊಂದು ಬರಲಿದ್ದು ಮನಸ್ಸು ಉಲ್ಲಾಸದಿಂದ ಕೂಡಿರಲಿದೆ. ಕುಟುಂಬದ ಜೊತೆ ಸಂತೋಷದಿಂದ ಕಾಲಕಳೆಯುವಿರಿ. ನಿಮ್ಮಿಷ್ಟವರ ಜೊತೆ ಸಮಯವನ್ನು ಕಳೆಯುವಿರಿ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದ್ದು ಅತ್ತ ಕಡೆ ಗಮನವಿರುವುದು. ನಿಮ್ಮ ಹೊಸ ಪ್ರಯತ್ನಕ್ಕೆ ಕುಟುಂಬದ ಬೆಂಬಲವು ಸಿಗುವುದು. ಅಲ್ಪಾವಧಿಯಲ್ಲಿ ಹೆಚ್ಚು ಪಡೆಯಬೇಕು ಎನ್ನುವ ಅತಿಯಾದ ಆಸೆ ಬೇಡ.

-ಲೋಹಿತ ಹೆಬ್ಬಾರ್ – 8762924271 (what’s app only)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ