Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 15 April: ಈ ರಾಶಿಯವರು ತಮ್ಮ ಸಂಪತ್ತನ್ನು ಕಳೆದುಕೊಳ್ಳುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ, ಮಂಗಳವಾರದಲ್ಲಿ ಇಷ್ಟವಿಲ್ಲ ಕಾರ್ಯ, ಆಪ್ತರ ಭೇಟಿ, ಕುಟುಂಬದ ಜೊತೆ ಅನ್ಯೋನ್ಯತೆ, ಮಕ್ಕಳಿಗೆ ಧೈರ್ಯ ಇದೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 15 April: ಈ ರಾಶಿಯವರು ತಮ್ಮ ಸಂಪತ್ತನ್ನು ಕಳೆದುಕೊಳ್ಳುವರು
ಈ ರಾಶಿಯವರು ತಮ್ಮ ಸಂಪತ್ತನ್ನು ಕಳೆದುಕೊಳ್ಳುವರು
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 15, 2025 | 12:02 AM

ಬೆಂಗಳೂರು, ಏಪ್ರಿಲ್​ 15, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಸಿದ್ಧಿ, ಕರಣ : ಗರಜ, ಸೂರ್ಯೋದಯ – 06 – 20 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:39 – 17:12, ಯಮಘಂಡ ಕಾಲ 09:26 – 10:59, ಗುಳಿಕ ಕಾಲ 12:33 – 14:06.

ಮೇಷ ರಾಶಿ: : ನೀವು ಆಸಕ್ತಿಯನ್ನು ತೋರಿಸುವುದರಲ್ಲಿ ಎಂದಿಗಿಂತ‌ ಕಡಿಮೆ ಸ್ಪಂದನವಿರಲಿದೆ. ಇಂದು ಸ್ಪರ್ಧಿಸುವ ಮೊದಲು ನಿರ್ಲಕ್ಷ್ಯದಿಂದ ಸೋಲಾಗಬಹುದು. ಜನರ ಮಾತಿಗೆ ನಿಮ್ಮ ಪ್ರತಿಕ್ರಿಯೆ ಬೇಡ. ಗುರಿಯೇ ನಿಮಗೆ ಮುಖ್ಯವಾಗಿರಲಿ. ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು. ಕಾರ್ಯದ ಶಿಸ್ತಿಗೆ ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆನಿಸುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಹಣಕಾಸಿನ ವಿಚಾರದಲ್ಲಿ ನೀವು ನಾಜೂಕುತನವನ್ನು ಇಟ್ಟುಕೊಳ್ಳುವಿರಿ. ಮನೆಯ ಕಾರ್ಯದಲ್ಲಿ ಇಂದು ಮಗ್ನರಾಗುವಿರಿ. ನಿಮ್ಮ ಬಗ್ಗಯೇ ನೀವು ಹೇಳಿಕೊಳ್ಳುವುದು ಉಚಿತವಲ್ಲ, ಅದರೂ ಅನಿವಾರ್ಯ. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಅದನ್ನು ಕ್ಷಮಾಪಣೆಯಿಂದ ಸರಿಮಾಡಿಕೊಳ್ಳಿ.

ವೃಷಭ ರಾಶಿ: : ಪರಾಕ್ರಮದಿಂದ ಸಾಧಿಸುವುದು ಸಹಜವಾಗದು.‌ ಇಂದು ನೀವಂದುಕೊಂಡಂತೆ ವೇಗವಾಗಿ ಸಮಯಕ್ಕೆ ಸರಿಯಾಗಿ ಕೆಲಸ ಆಗಲಿದ್ದು, ಅನಂತರ ಸ್ವಲ್ಪ ವಿಶ್ರಾಂತಿಯನ್ನೂ ಪಡೆಯುವಿರಿ. ಸಾಲಕ್ಕೆ ಸಂಬಂಧಿಸಿದ ವಿಷಯಗಳು ಇತ್ಯರ್ಥವಾಗಲಿವೆ. ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ಇತರರ ತಪ್ಪು ಕೆಲಸದಿಂದ ನಿಮಗೆ ತೊಂದರೆ. ನೀವು ಅದನ್ನು ತಿದ್ಸಬೇಕಸದೀತು. ಕಡಿಮೆ ಪ್ರಯತ್ನದಲ್ಲಿ ಹೆಚ್ಚಿನ ಯಶಸ್ಸು ಪಡೆಯುವ ಸಾಧ್ಯತೆಗಳಿವೆ. ಮಕ್ಕಳು ಮತ್ತು ಕುಟುಂಬದವರ ಜೊತೆಗೆ ಉತ್ತಮ ಸಮಯವನ್ನು ಕಳೆಯುವಿರಿ. ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಯಾರ ಮೇಲೂ ಹಗುರಾದ ಮನೋಭಾವ ಬೇಡ. ದುಃಸ್ವಪ್ನವು ನಿಮ್ಮ ನಿದ್ರೆಯನ್ನು ಕೆಡಿಸೀತು. ದೀರ್ಘಕಾಲದ ಗೆಳೆತನವು ಮಾತಿನಿಂದ ಒಡೆದುಹೋಗಬಹುದು. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು.

ಮಿಥುನ ರಾಶಿ: : ಆಲಸ್ಯದ ಕಾರಣ ಆಹ್ಲಾಕರ ವಾತಾವರಣದಿಂದ ದೂರಿರುವಿರಿ. ಹೊಸದಾಗಿ ವೃತ್ತಿಯನ್ನು ಆರಂಭಿಸಿದವರಿಗೆ ತಮ್ಮ ವೃತ್ತಿಜೀವನದ ಬಗ್ಗೆ ಗೊಂದಲ ಉಂಟಾಗುವುದು.  ಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. ನಿಮ್ಮ ಕೆಲಸದ ಗುಣಮಟ್ಟವನ್ನು ಸುಧಾರಿಸಲು ಪ್ರಯತ್ನಿಸಿ. ಪರಿಣಾಮಗಳನ್ನು ಪರಿಗಣಿಸಿ ಮುನ್ನಡೆಯಬೇಕು. ಅಸಂಬದ್ಧ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಿ ಇರುವುದು. ಸಂಗಾತಿಯನ್ನು ಎಲ್ಲಿಗಾದರೂ ದೂರ ಕರೆದುಕೊಂಡು ಹೋಗಲು ಆಸೆಯಾಗುವುದು. ಹಣಕಾಸಿನ ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಿಕೊಳ್ಳಿ. ಸಾಲವನ್ನು ಹಿಂದಿರುಗಿಸಲು ನಿಮ್ಮ ಹೂಡಿಕೆಯನ್ನು ತೆಗೆಯಬೇಕಾಗುವುದು. ಕೆಲವು ವ್ಯವಹಾರದಲ್ಲಿ ನೀವು ಹಿಂದುಳಿದಂತೆ ನಿಮಗೆ ಅರಿವಾಗುವುದು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ಸಮಾರಂಭಗಳಿಗೆ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯು ಹಿಡಿಸದೇ ಇದ್ದೀತು. ವಿದೇಶದಲ್ಲಿ ಇರವವರಿಗೆ ಅಸಮಾಧಾನ ಹೆಚ್ಚಿರುವುದು.

ಕರ್ಕಾಟಕ ರಾಶಿ: : ನಿಮ್ಮ ಸಹಕಾರವು ಪಡೆದವರಿಗೆ ಅತಿಯಾದ ಪ್ರಯೋಜನ ನೀಡುವುದು. ಇಂದು ಯಾವುದೇ ವಿಘ್ನಗಳು ಬಾರದೇ ನಿಮ್ಮ ಕಾರ್ಯಗಳು ಸುಲಭದಲ್ಲಿ ಪೂರ್ಣಗೊಳ್ಳುವುದು. ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯವಿರುತ್ತದೆ. ನಿಮ್ಮ ಇಷ್ಟದ ಜನರಿಂದ ನೀವು ಬೆಂಬಲವನ್ನು ಪಡೆಯುತ್ತಿರುವಿರಿ. ಶೀಘ್ರದಲ್ಲೇ ಸಂಬಂಧಗಳನ್ನು ಸುಧಾರಿಸುವ ಅವಕಾಶವನ್ನು ನೀವು ಪಡೆಯಬಹುದು. ಪೂರಕ ವಾತಾವಾರಣದಿಂದ ಆತ್ಮವಿಶ್ವಾಸ ಬಲಗೊಳ್ಳಲಿದೆ. ಇಂದು ನೀವು ಕಾನೂನಾತ್ಮಕ ವಿಚಾರಗಳಿಗೆ ಹೆಚ್ಚು ಸಮಯವನ್ನು ಕೊಡುವಿರಿ. ಮಕ್ಕಳ‌ ವಿಚಾರದಲ್ಲಿ ನಿಮಗೆ ಸರಿಯಾದ ಮಾಹಿತಿ ದೊರಕದೇ ಬೇಸರಿಸುವಿರಿ. ಮನಸ್ಸಿಗೆ ನೆಮ್ಮದಿಯು ಬೇಕೆಂದು ಅನ್ನಿಸುವುದು. ಕೆಲವು ಸವಾಲುಗಳನ್ನು ನೀವು ಎದುರಿಸುವುದು ಅನಿವಾರ್ಯವಾದೀತು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಯಾರಾದರೂ ಪ್ರಾಬಲ್ಯವನ್ನು ಸಾಧಿಸಬಹುದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ.

ಸಿಂಹ ರಾಶಿ: : ಇಂದು ನೀವು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲು ಹಿಂಜರಿಯುವಿರಿ. ನೀವು ಆತ್ಮವಿಶ್ವಾಸವು ಶಕ್ತಿಯಿಂದ ತುಂಬಿರುವಿರಿ. ಬಹಳ ದಿನಗಳ ಅನಂತರ ಹೊರಗಿನ‌ ಸುತ್ತಾಟವು ಹಿತವೆನಿಸುವುದು. ಗುರು ಹಿರಿಯರಿಂದ ಒಳ್ಳೆಯ ಕಾರ್ಯಕ್ಕೆ ಪ್ರೋತ್ಸಾಹ. ಉನ್ನತ ಅಧಿಕಾರಿಯ ಜೊತೆ ಆಗಬೇಕಾದ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿ ವರ್ಗ ಸ್ವೀಕರಿಸುವುದು. ನಿಮ್ಮ ಗುಣಮಟ್ಟವು ನಿಮ್ಮದೇ ಕಾರಣದಿಂದ ತಗ್ಗಬಹುದು. ಆಡಳಿತದಲ್ಲಿ ಆಗಬೇಕಾದ ಬದಲಾವಣೆಯನ್ನು ನೀವು ತರುವಿರಿ. ಒಮ್ಮೆಲೇ ಎಲ್ಲವನ್ನೂ ಮಾಡಿ ಮುಗಿಸಬೇಕು ಎನ್ನುವ ಆತುರವು ಬೇಡ. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಎಲ್ಲರ ಜೊತೆ ವಾದಕ್ಕಿಳಿಯುವ ಮನಸ್ಸಿನಲ್ಲಿ ಇರುವಿರಿ. ಶಿಸ್ತಿನಿಂದ ಇಂದಿನ ಕಾರ್ಯವನ್ನು ಮಾಡುವಿರಿ. ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಲ್ಲಿ ಇರುವಂತೆ ತೋರಸಲಾರಿರಿ.

ಕನ್ಯಾ ರಾಶಿ: : ನಿಮ್ಮ ಯೋಚನೆ ಕಾರ್ಯರೂಪಕ್ಕೆ ತಂದು ಸಂತೋಷಿಸುವಿರಿ. ಇಂದು ಬೆಲೆಯುಳ್ಳ ವಸ್ತುವನ್ನು ಖರೀದಿಸುವ ಸಂದರ್ಭ ಇದೆ. ಅನಗತ್ಯ ಮೋಜಿನಲ್ಲಿ ಸಮಯ ವ್ಯರ್ಥ ಮಾಡಬಾರದು. ನಿಮ್ಮ ಉದ್ಯೋಗದ ಸ್ಥಳಾಂತರವಾಗುವ ಸಾಧ್ಯತೆ ಇವೆ. ವ್ಯಾಪಾರ ಮಾಡುವಾಗ ಹಣದ ಕುರಿತು ಬಹಳ ಎಚ್ಚರಿಕೆ ಅಗತ್ಯವಾಗಿ ಮಾಡಿ. ಇಂದು ಅನಿವಾರ್ಯ ಓಡಾಟವು ಬರಲಿದ್ದು ವಾಹನ ಚಲಾಯಿಸುವಾಗ ನಿಮಗೆ ಜಾಗರೂಕತೆ ಬೇಕಾಗುವುದು. ಕೊಡಬೇಕಾದವರಿಗೆ ಸರಿಯಾದ ಗೌರವವನ್ನು ಕೊಡಿ. ವೈದ್ಯ ವೃತ್ತಿಯಲ್ಲಿ ಇರುವವರಿಗೆ ಒತ್ತಡ ಹೆಚ್ಚು. ಕೆಲಸಕ್ಕೆ ಅನುಗುಣವಾಗಿ ಸಮಯವನ್ನು ಹೊಂದಿಸಿಕೊಳ್ಳಿ. ಯಾರನ್ನೋ ಮೆಚ್ಚಿಸಲು ಕೆಲಸಮಾಡಬೇಕಾಗುವುದು. ತಪ್ಪುಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಹಣಕಾಸಿನಲ್ಲಿ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

ತುಲಾ ರಾಶಿ: : ನಿಮ್ಮ ಕೆಲವು ನಡತೆಗಳು ಪ್ರಗತಿಗೆ ಮಾರಕವಾಗುವುದು. ಹೊಸ ಕೆಲಸವನ್ನು ಪ್ರಾರಂಭಿಸುವುದು ನಿಮಗೆ ಸಂತೋಷವನ್ನು ನೀಡುತ್ತದೆಯಾದರೂ ಕ್ರಮಬದ್ಧ ಮಾಡಿಕೊಳ್ಳದಿದ್ದರೆ ಅದೂ ಗೊಂದಲವಾದೀತು. ಸರ್ಕಾರಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ವ್ಯಕ್ತಿಗಳಿಗೆ ತಕ್ಕಂತೆ ಬದಲಾವಣೆಗಳನ್ನು ನೀವೇ ಮಾಡುಕೊಳ್ಳುವಿರಿ.. ಕುಟುಂಬಕ್ಕೆ ನಿಮ್ಮ ಸಂಗಾತಿಯ ಸಮರ್ಪಣೆಯು ನಿಮ್ಮನ್ನು ಒತ್ತಡದಿಂದ ಮುಕ್ತಗೊಳಿಸುತ್ತದೆ. ಹಳೆಯ ಅನುಭವವನ್ನು ಪಾಠವಾಗಿಸಿಕೊಳ್ಳಿ. ಕಲಾವಿದರು ಬಹಳ ಸಂತೋಷವನ್ನು ಅನುಭವಿಸುವರು. ಸಂಗಾತಿಯ ಹೂಡಿಕೆಯನ್ನು ನೀವು ಬಳಸಿಕೊಳ್ಳುವಿರಿ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ ಲಾಭವನ್ನು ಪಡೆಯುವ ದೀರ್ಘಕಾಲದ ಯೋಜನೆಯ ಕನಸನ್ನು ಕಾಣುವಿರಿ. ನೇರವಾಗಿ ಯಾರನ್ನೂ ದೂರುವುದಿಲ್ಲ. ಎಂತಹ ನೈಪುಣ್ಯವಿದ್ದರೂ ವ್ಯವಹಾರದಲ್ಲಿ ಒಮ್ಮೆ ಎಚ್ಚರ ತಪ್ಪುವ ಸಾಧ್ಯತೆ ಇದೆ. ಇಂದು ನಿಮ್ಮ ಕರ್ಮವೇ ನಿಮಗೆ ಹಿಂದಿರುಗಿ ಬರುವಂತೆ ಅನ್ನಿಸುವುದು.

ವೃಶ್ಚಿಕ ರಾಶಿ: : ಅನವಶ್ಯಕ ಸಮಸ್ಯೆಗಳನ್ನು ನಿಮ್ಮಮೇಲೆ ಬೇಕೆಂದೇ ಎಳೆದುಕೊಳ್ಳುವಿರಿ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮಸ್ಥೈರ್ಯವು ಕುಸಿಯದಂತೆ ನೋಡಿ. ಹಣಕಾಸು ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಶುಭ ವಾರ್ತೆ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಕಾಲಕ್ಕೆ ಯೋಗ್ಯವಾದ ರೀತಿಯಲ್ಲಿ ವ್ಯಾಪಾರ ನಡೆಸಿ ಲಾಭ ಗಳಿಸುವೆರು. ನಿಮ್ಮ ಕುಟುಂಬದಲ್ಲಿ ಹೊರಗಿನವರಿಗೆ ಹಸ್ತಕ್ಷೇಪ ಮಾಡಲು ಬಿಡುವುದು ಬೇಡ. ನೀವು ಇಂದು ಉದ್ಯಮದ ಕಾರಣಕ್ಕೆ ಸ್ನೇಹಬಂಧವನ್ನು ಬಿಗಿ ಮಾಡಿಕೊಳ್ಳುವಿರಿ. ಕಚೇರಿಯಲ್ಲಿ ನೀವು ತಗ್ಗಿ ಬಗ್ಗಿ ನಡೆಯುವುದು ಒಳ್ಳೆಯದು. ಹಿರಿಯರ ಸೇವೆಯನ್ನು ಮಾಡುವ ಅವಕಾಶವು ಸಿಗಲಿದ್ದು, ಅದನ್ನು ಕಳೆದುಕೊಳ್ಳುವುದು ಬೇಡ. ತಾಳ್ಮೆಯಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ನಿಮ್ಮ ಸಂಕಟವನ್ನು ಹೇಳಿಕೊಂಡರೂ ತೊಂದರೆ, ಸುಮ್ಮನೆ ಇದ್ದರೂ ತೊಂದರೆ ಆಗುವುದು. ಅಪರಿಚಿತ ಕರೆಗಳು ಹೆಚ್ಚಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯನ್ನು ತಂದುಕೊಳ್ಳಲಾರಿರಿ.

ಧನು ರಾಶಿ: : ನೀವು ತೆಗೆದುಕೊಳ್ಳುವ ನಿರ್ಧಾರವು ಕುಟುಂಬಕ್ಕೆ ಪೂರಕವಾಗಿ ಇರಲಿ. ವಿದ್ಯಾಭ್ಯಾಸಕ್ಕಾಗಿ ಹಣವನ್ನು ಖರ್ಚುಮಾಡುವಿರಿ. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯ ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿಯನ್ನು ನೀವೇ ತಂದುಕೊಳ್ಳುವಿರಿ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು. ಬಹು ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ, ಉತ್ಪಾದದನಾ ಕ್ಷೇತ್ರದಲ್ಲಿ ಕೊಂಚ ಹಿನ್ನಡೆ ಆಗಬಹುದು. ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಘಟನೆಯು ಇಂದು ನಡೆಯುವುದು. ನಿಮ್ಮ ಧಾರ್ಮಿಕ ಶ್ರದ್ಧೆಗೆ ಇನ್ನಷ್ಟು ಬಲವು ಬರಲಿದೆ. ಭೂಮಿಯನ್ನು ಭೋಗ್ಯಕ್ಕಾಗಿ ಯಾರಿಗಾದರೂ ನೀಡಬಹುದು. ನಿಮ್ಮ ವಿದ್ಯಾಭ್ಯಾಸದ ಸಾಮರ್ಥ್ಯವನ್ನು ತೋರಿಸುವಿರಿ. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು. ಅಂದುಕೊಂಡಷ್ಟು ಸರಳವಾಗಿ ಇಂದಿನ ಕಾರ್ಯವು ಸಮಾಪ್ತಿಯಾಗದು.

ಮಕರ ರಾಶಿ: : ನಕಾರಾತ್ಮಕ ಆಲೋಚನೆಗಳು ಅನ್ಯರ ಕಾರಣದಿಂದ ಬರಬಹುದು. ಅದನ್ನು ದೊಡ್ಡ ಮಾಡುವುದು ಬೇಡ. ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ದೂರದೃಷ್ಟಿಯ ಅಗತ್ಯವಿದೆ. ಕುಟುಂಬ ಸದಸ್ಯರ ಜೊತೆ ಚರ್ಚಿಸಿದ ಅನಂತರವೇ ನಿರ್ಧಾರಗಳನ್ನು ತೆಗೆದುಕೊಳ್ಳಿ. ಅತಿಯಾದ ದುರಾಸೆಯಿಂದ ನೀವು ಕಷ್ಟದಲ್ಲಿ ಸಿಕ್ಕಿಕೊಳ್ಳಬಹುದು. ಸಂಬಂಧವನ್ನು ಚೆನ್ನಾಗಿ ನಿಭಾಯಿಸುವ ಕಲೆಯು ಗೊತ್ತಿದೆ. ಯಾರಾದರೂ ಹೊಸ ಯೋಜನೆಗಳ ಬಗ್ಗೆ ಸಲಹೆಯನ್ನು ಕೊಡುವರು, ಉದ್ಯೋಗದ ಕಾರಣದಿಂದ ನೀವು ಓಡಾಟವನ್ನು ಮಾಡಬೇಕಾಗುವುದು. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಅಜ್ಞಾತ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ.

ಕುಂಭ ರಾಶಿ: : ನೀವು ಅಗತ್ಯ ಖರ್ಚುಗಳನ್ನೂ ನಿಯಂತ್ರಿಸಲು ಹೋಗಿ ಎಡವಟ್ಟು ಮಾಡಿಕೊಳ್ಳಬಹುದು. ಆಭರಣದ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು. ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕು.‌ವ್ಯವಹಾರದಲ್ಲಿ ಕಠಿಣ ಪರಿಶ್ರಮವಿರುತ್ತದೆ, ಯೋಜನೆಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಗಳಿವೆ. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆಗೆ ನಿಮ್ಮ ವರ್ತನೆ ಬದಲಾದೀತು. ನಿಮಗೆ ಅನೇಕರು ಪ್ರಭಾವಿತರಾಗಬಹುದು.‌ ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಗಂಭೀರವಾದ ನಿರ್ಧಾರವನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ.

ಮೀನ ರಾಶಿ: : ಇಂದು ನೀವು ಕಾರ್ಯದ ಸರಿಯಾದ ಫಲವನ್ನು ಪಡೆಯದಿದ್ದರೂ ಸಂಯಮದಿಂದ ವರ್ತಿಸುವುದು ಮುಖ್ಯವಾಗಲಿದೆ. ಯಾರಾದರೂ ಸಾಲವನ್ನು ಕೇಳಿ ಬರಬಹುದು. ಕೋಪಗೊಳ್ಳುವ ಬದಲು ಶಾಂತರೀತಿಯಿಂದ ಸಮಸ್ಯೆಯನ್ನು ಪರಿಹರಿಸಿ. ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಅಹಂಕಾರವು ಬಂದೀತು, ನಿಮಗೆ ಸಾಮಾನ್ಯರ ಜೊತೆ ಸಾಮಾನ್ಯರಂತೆ ವರ್ತಿಸುವುದು ಇಷ್ಟವಾಗುವುದು. ಅನಿವಾರ್ಯವಾಗಿ ಕಾರ್ಯಗಳನ್ನು ಮಾಡಬೇಕಾಗಬಹುದು. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಆಗದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು.

– ಲೋಹಿತ ಹೆಬ್ಬಾರ್ – 8762924271 (what’s app only)

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ