AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಇಂದಿನ ಕೆಲವು ನಡೆಗಳು ವ್ಯವಹಾರದ ಪ್ರಗತಿಗೆ ಮಾರಕವಾಗುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ ಭಾನುವಾರ ರಮ್ಯಸ್ಥಾನಕ್ಕೆ ಗಮನ, ವ್ಯಾಪಾರದಲ್ಲಿ ತುಷ್ಟಿ, ಆರೋಗ್ಯದಲ್ಲಿ ಪುಷ್ಟಿ, ನಿರ್ಧಾರದಲ್ಲಿ ಗೊಂದಲ ಇವೆಲ್ಲ ಈ ದಿನಸ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿಮ್ಮ ಇಂದಿನ ಕೆಲವು ನಡೆಗಳು ವ್ಯವಹಾರದ ಪ್ರಗತಿಗೆ ಮಾರಕವಾಗುವುದು
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 15, 2025 | 1:50 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸಿದ್ಧ, ಕರಣ: ಬವ, ಸೂರ್ಯೋದಯ – 06 : 04 am, ಸೂರ್ಯಾಸ್ತ – 07 : 00 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 17:24 – 19:02, ಯಮಘಂಡ ಕಾಲ 12:33 – 14:10, ಗುಳಿಕ ಕಾಲ 15:47 – 17:24

ತುಲಾ ರಾಶಿ: ಮುನ್ನೋಟಕ್ಕೆ ಖರ್ಚು ಎಂದರೂ ಆದಾಯವಾಗಿಯೇ ಹಿಂದಿರುಗುವುದು. ನಿಮ್ಮ ಇಂದಿನ ಕೆಲವು ನಡೆಗಳು ವ್ಯವಹಾರದ ಪ್ರಗತಿಗೆ ಮಾರಕವಾಗುವುದು. ಹೊಸ ಕೆಲಸವನ್ನು ಪ್ರಾರಂಭಿಸುವುದು ನಿಮಗೆ ಸಂತೋಷವನ್ನು ನೀಡುತ್ತದೆಯಾದರೂ ಕ್ರಮಬದ್ಧ ಮಾಡಿಕೊಳ್ಳದಿದ್ದರೆ ಅದೂ ಗೊಂದಲವಾದೀತು. ಕೇಳಿ ಪಡೆದ ಹಣವನ್ನು ಕೇಳದೇ ಕೊಡಿ. ಮನಸ್ಸು ಭಾರವಾಗಿದ್ದರೂ, ಸಾಯಂಕಾಲದವರೆಗೆ ಸ್ಥಿತಿಗತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಧಾರದಲ್ಲಿ ಯಶಸ್ಸು ಸಿಗುತ್ತದೆ ಎಂಬ ನಂಬಿಕೆಯಿಡಿ. ಇತರರ ಮಾತು ಕೇಳಿ ನಿಮ್ಮ ಯೋಜನೆಗಳನ್ನು ಬದಲಾಯಿಸುವುದು ಹಾನಿಕಾರಕವಾಗಬಹುದು. ಜನರೊಡನೆ ಬಾಂಧವ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ. ಅವರ ಸಹಾಯ ಮುಂದೊಂದುದಿನ ಬೇಕಾದೀತು. ನಿಮ್ಮ ಗುರಿಯ ಬಗ್ಗೆ ಅಸ್ಪಷ್ಟತೆ ಇರಲಿ. ದೀರ್ಘಕಾಲದ ವೈರವು ಮುಕ್ತಾಯವಾಗುವುದು. ಮಾತನ್ನು ಚೆನ್ನಾಗಿ ಬಲ್ಲವರಾಗಿದ್ದರು ಕಟುವಾದ ಮಾತುಗಳನ್ನು ಆಡಬೇಡಿ. ಹೊಸ ಉದ್ಯೋಗಿಗಳನ್ನು ನಿಯೋಜಿಸಿಕೊಂಡು ಕಾರ್ಯವನ್ನು ವಿಸ್ತರಿಸಿ ಲಾಭವನ್ನು ಪಡೆಯುವ ದೀರ್ಘಕಾಲದ ಯೋಜನೆಯ ಕನಸನ್ನು ಕಾಣುವಿರಿ. ನೇರವಾಗಿ ಯಾರನ್ನೂ ದೂರುವುದಿಲ್ಲ. ಎಂತಹ ನೈಪುಣ್ಯವಿದ್ದರೂ ವ್ಯವಹಾರದಲ್ಲಿ ಒಮ್ಮೆ ಎಚ್ಚರ ತಪ್ಪುವುದು.

ವೃಶ್ಚಿಕ ರಾಶಿ: ಪ್ರೇಮಪಾಶದಿಂದ ಕೊಂಚ ಬಿಡುಗಡೆ ಸಿಗಲಿದೆ. ಅತಿಯಾದದ್ದು ಕೊನೆಗೆ ವಿಷವೇ ಆಗಿ ಪರಿವರ್ತನೆಯಾಗುವುದು. ಇಂದು ಅನವಶ್ಯಕ ಸಮಸ್ಯೆಗಳನ್ನು ಬೇಕೆಂದೇ ಎಳೆದುಕೊಳ್ಳುವಿರಿ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿ ನಿಮ್ಮ ಆತ್ಮಸ್ಥೈರ್ಯವು ಕುಸಿಯದಂತೆ ಇರಬೇಕಾಗುವುದು. ನಿಮ್ಮನ್ನು ಸಕಾರಾತ್ಮಕವಾಗಿ ಇಟ್ಟುಕೊಂಡು ಮುಂದಾಗಿ. ಕೆಲಸದಲ್ಲಿ ಸಣ್ಣ ಬದಲಾವಣೆಗಳು ಆಗಬಹುದು. ಕೆಲವೊಂದು ವಿಷಯಗಳಲ್ಲಿ ಸಹೋದ್ಯೋಗಿಗಳಿಂದ ಸ್ಪಷ್ಟತೆ ಬೇಕಾಗುತ್ತದೆ. ಹಣದ ಲೆಕ್ಕಾಚಾರದಲ್ಲಿ ತಪ್ಪು ಸಾಧ್ಯ. ಬಂಧುಗಳಿಂದ ನಿರೀಕ್ಷಿತ ಸಹಾಯ ಸಿಗಲಿದೆ. ಅನಾರೋಗ್ಯಕ್ಕೆ ಕಾರಣವು ಸಿಗದೇ ವಿವಿಧ ಔಷಧಗಳನ್ನು ಮಾಡುವಿರಿ. ಪ್ರಣಯ ಪ್ರಸಂಗದಲ್ಲಿ ಆಕಸ್ಮಿಕ ತಿರುವು ಬರಲಿದೆ. ಬಹಳ ಚಂಚಲವಾದ ಮನಸ್ಸನ್ನು ಶುಭವಾದ ಕಾರ್ಯದಲ್ಲಿ ಜೋಡಿಸಿ. ತಾಳ್ಮೆಯಿಂದ ಇದ್ದರೆ ಎಲ್ಲವನ್ನೂ ಸಾಧಿಸಲು ಸಾಧ್ಯ. ನಿಮ್ಮ ಸಂಕಟವನ್ನು ಹೇಳಿಕೊಂಡರೂ ತೊಂದರೆ, ಸುಮ್ಮನೆ ಇದ್ದರೂ ತೊಂದರೆ ಆಗುವುದು. ಅಪರಿಚಿತ ಕರೆಗಳು ಹೆಚ್ಚಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ.

ಧನು ರಾಶಿ: ಜವಾಬ್ದಾರಿಯಿಂದ ನಯವಾಗಿ ಜಾರಿಕೊಳ್ಳುವಿರಿ. ಇಂದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಣವನ್ನು ಖರ್ಚುಮಾಡಬೇಕಾಗುವುದು. ನಿಮ್ಮನ್ನು ನೀವೇ ಏಕಾಂಗಿ ಎಂದು ಲೆಕ್ಕಿಸುವುದು ಬೇಡ. ನಿಮ್ಮ ವೃತ್ತಿಜೀವನವನ್ನು ಮುನ್ನಡೆಸಲು ಮಾರ್ಗದರ್ಶನವನ್ನು ಪಡೆಯುತ್ತೀರಿ. ಮುಂದಾಳುವಾಗಲು ನಿಮ್ಮನ್ನೇ ದೂಡಬಹುದು. ಹಣದ ವ್ಯವಹಾರದಲ್ಲಿ ನೀವು ತಕ್ಷಣ ವಿಶ್ವಾಸಕ್ಕೆ ಬರಬೇಡಿ. ವ್ಯಾಪಾರದವರು ಹೊಸ ಅವಕಾಶ ಪಡೆಯಬಹುದು. ಕುಟುಂಬದಲ್ಲಿ ಸಂತೋಷದ ಸನ್ನಿವೇಶ. ಮಕ್ಕಳ ಯಶಸ್ಸು ನಿಮಗೆ ಗರಿಮೆ ತರುತ್ತದೆ. ನಿಮ್ಮ ಶ್ರಮಕ್ಕೆ ಫಲ ಕೂಡಲೇ ಸಿಗುವುದು ಕಷ್ಟ, ತಾಳ್ಮೆ ಬೇಕು. ನೋವಾಗದ ರೀತಿಯಲ್ಲಿ ಹೇಳಿದರೆ ಸಂಬಂಧವು ಚೆನ್ನಾಗಿರುವುದು. ಇರುವುದರಲ್ಲಿ ತೃಪ್ತಿ ಇರಲಿ. ಆಗದವರಿಗೆ ನೀವು ಇಂದು ಸಹಾಯ ಮಾಡಲಿದ್ದೀರಿ. ನಿಮ್ಮ ಗುಣಮಟ್ಟವನ್ನು ಕಾಯ್ದಿರಿಸಿಕೊಳ್ಳುವುದು ಕಷ್ಟವಾದೀತು. ಇಂದು ಶತ್ರುವಿನ ಆಗಲಿಕೆಯಿಂದ ಸಂತೋಷವಾಗುವುದು‌. ನಿಮ್ಮ ವಿದ್ಯಾಭ್ಯಾಸದ ಸಾಮರ್ಥ್ಯವನ್ನು ತೋರಿಸುವಿರಿ. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ಅತಿಯಾದ ಸಲುಗೆಯಿಂದ ನಿಮಗೆ ತೊಂದರೆ ಆಗಬಹುದು.

ಮಕರ ರಾಶಿ: ಯಾರ ಮಾತೂ ನಿಮಗೆ ನಂಬಿಕೆಗೆ ಅರ್ಹವಾಗಿರದು. ನಿಮ್ಮ ನಕಾರಾತ್ಮಕ ಆಲೋಚನೆಗಳು ಅನ್ಯರ ಇಷ್ಟವಾಗದು. ನಿಮ್ಮ ಸಾಂಸಾರಿಕ ತೊಂದರೆಗೆ ನಿಮ್ಮ ಸಹೋದರ ಸಹೋದರಿಯರಿಂದ ಸರಿಯಾದ ಪರಿಹಾರವು ಪ್ರಾಪ್ತವಾಗಲಿದೆ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿದರೆ ಉತ್ಸಾಹ ಹೆಚ್ಚಾಗುತ್ತದೆ. ಕಛೇರಿಯ ವಸ್ತುವನ್ನು ಸ್ವಂತ ಖರ್ಚಿನಿಂದ ಮಾಡಿಸುವಿರಿ. ಪ್ರವಾಸದ ಯೋಜನೆ ಕೈಗೊಳ್ಳಬಹುದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸಿಗಬಹುದು. ವಿವಾದಾತ್ಮಕ ವಿಷಯಗಳಿಂದ ದೂರವಿರುವುದು ಉತ್ತಮ. ಶತ್ರುಗಳು ನಿಮ್ಮ ಸಂಪತ್ತನ್ನು ಕರಗಿಸಲು ತಂತ್ರವನ್ನು ಹೆಣೆಯಬಹುದು. ಕೆಳಸ್ತರದವರ ಜೊತೆ ಬಹಳ ಅಸಹ್ಯವಾಗಿ ನಡೆದುಕೊಳ್ಳುವುದು ಬೇಡ. ಇಂದಿನ ಕಛೇರಿಯ ಕೆಲಸದಲ್ಲಿ ಪೂರ್ಣ ಮನಸ್ಸು ಇರಲಾರದು. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ಚರಾಸ್ತಿಯ ವಿಷಯದಲ್ಲಿ ನೀವು ಅಸ್ವತಂತ್ರರಾಗಿ ಇರುವಿರಿ. ಮನೆಯ ಕಾರ್ಯದಲ್ಲಿ ನಿಮಗೆ ಒತ್ತಡವು ಅಧಿಕವಾಗಿ ಇರಲಿದೆ. ಯಾವುದೋ ಅಜ್ಞಾತ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ.

ಕುಂಭ ರಾಶಿ: ಪಾಲುದಾರಿಕೆಯ ಬಿಕ್ಕಟ್ಟನ್ನು ಸಡಿಲಗೊಳಿಸುವಿರಿ. ನೀವು ಅಗತ್ಯದ ಖರ್ಚುಗಳನ್ನೂ ನಿಯಂತ್ರಿಸಲು ಹೋಗಿ ಎಡವಟ್ಟು ಮಾಡಿಕೊಳ್ಳಬಹುದು. ಆಧ್ಯಾತ್ಮಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯವನ್ನು ಕಳೆದು ನೆಮ್ಮದಿಯನ್ನು ಪಡೆಯುವಿರಿ. ಚಿಂತೆಯ ಸ್ಥಿತಿಯನ್ನು ಸ್ವತಃ ನಿರ್ಮಾಣ ಮಾಡಿಕೊಳ್ಳುವಿರಿ. ಕೆಲವೊಂದು ನಿರ್ಧಾರಗಳನ್ನು ಬದಲಾಯಿಸಬೇಕಾದ ಪರಿಸ್ಥಿತಿ ಇರದು. ಹಳೆಯ ಪರಿಚಯಗಳು ಪುನಃ ಸಂಪರ್ಕಕ್ಕೆ ಬರಲಿವೆ. ಖರ್ಚು ಹೆಚ್ಚು ಆಗುವ ದಿನವಿದು. ಕುಟುಂಬದಲ್ಲಿ ಬೇರೆ ಬೇರೆ ಅಭಿಪ್ರಾಯಗಳು ಮೂಡಬಹುದು. ನಿಮ್ಮ ಇಚ್ಛೆಗೆ ಅನುಸಾರವಾಗಿ ನಡೆಯುವುದು ಕಷ್ಟವಾಗುವುದು. ಇಂದು ಕಷ್ಟಕರವಾಗಿದ್ದರೂ ಪ್ರಯಾಣವನ್ನು ಮಾಡಲೇ ಬೇಕಾಗಿದೆ. ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ. ನಿಮ್ಮ ಆರೋಗ್ಯದ ಸಮಸ್ಯೆಯನ್ನು ತಳ್ಳಿಹಾಕುವುದು ಬೇಡ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ.

ಮೀನ ರಾಶಿ: ಯಾರಿಂದಲೋ ಆಗುವ ನೋವನ್ನು ಸಹಿಸಿಕೊಂಡು ಇರಲಾರಿರಿ. ಪ್ರತಿಕ್ರಿಯೆಯನ್ನು ಕೂಡಲೇ ಕೊಡುವಿರಿ. ಇಂದು ಕಾರ್ಯದ ಸರಿಯಾದ ಫಲವನ್ನು ಪಡೆಯದಿದ್ದರೂ ಸಂಯಮದಿಂದ ವರ್ತಿಸಿ. ಯಾರಾದರೂ ಸಾಲವನ್ನು ಕೇಳಿ ಬರಬಹುದು. ನಯವಾಗಿ ತಳ್ಳಿಹಾಕುವಿರಿ. ಕೋಪಗೊಳ್ಳುವ ಬದಲು ಶಾಂತರೀತಿಯಿಂದ ಸಮಸ್ಯೆಯನ್ನು ಪರಿಹರಿಸಿ. ನಿಮ್ಮ ಕೆಲಸದ ಗತಿಯು ಹೆಚ್ಚು ಚುರುಕುಗೊಳ್ಳುವುದು. ಕೌಟುಂಬಿಕ ವಿಚಾರದಲ್ಲಿ ಮಾತುಕತೆ ಗಂಭೀರವಾಗಬಹುದು. ಸ್ನೇಹಿತರಿಂದ ಅಲ್ಪ ನಿರಾಶೆ ಸಿಗಬಹುದು. ಹಣದ ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಿ. ಅಪಮಾನವಾಗುವ ಘಟನೆಗಳು ನಡೆಯಬಹುದು. ಆರ್ಥಿಕ ಸಂಕಷ್ಟಕ್ಕೆ ನಿಮ್ಮ ಉಪಾಯಗಳನ್ನು ಆರಂಭಿಸುವಿರಿ. ಆಸ್ತಿ ವ್ಯವಹಾರದಲ್ಲಿ ಸ್ವಲ್ಪಮಟ್ಟಿಗೆ ಕಲಹಾದಿಗಳು ಆಗಿ ಬಗೆ ಹರಿಯುವುದು. ಉದ್ಯೋಗದ ಸ್ಥಳದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಕುಟುಂಬದ ಜೊತೆ ಸಮಯವನ್ನು ಕಳೆಯಬೇಕು ಎಂದುಕೊಂಡರೂ ಅದು ಆಗದು. ನಿಮ್ಮ ಆತ್ಮೀಯವಾದ ಮಾತಿನಿಂದ ಅಪರಿಚಿತರ ಸ್ನೇಹವನ್ನು ಗಳಿಸುವಿರಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್