AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣದ ತೊಂದರೆಗೆ ಅನ್ಯರ ಸಹಾಯವನ್ನು ಕೇಳಬೇಕಾಗುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ ಬುಧವಾರ ವಿದ್ಯಾಭ್ಯಾಸದಲ್ಲಿ ಆತ್ಮವಿಶ್ವಾಸ, ಅನುರೂಪದ ಸಂಗಾತಿ, ಉನ್ನತ ಸ್ಥಾನದಲ್ಲಿ ಭೀತಿ, ಇಚ್ಛಾಶಕ್ತಿಯ ಕೊರತೆ ಇವೆಲ್ಲ ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ಹಣದ ತೊಂದರೆಗೆ ಅನ್ಯರ ಸಹಾಯವನ್ನು ಕೇಳಬೇಕಾಗುವುದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jul 16, 2025 | 1:36 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ಗ್ರೀಷ್ಮ, ಸೌರ ಮಾಸ: ಕರ್ಕಾಕಟ, ಮಹಾನಕ್ಷತ್ರ: ಪುನರ್ವಸು, ವಾರ: ಬುಧ, ತಿಥಿ : ಷಷ್ಠೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶೋಭನ, ಕರಣ: ಗರಜ, ಸೂರ್ಯೋದಯ – 06 : 12 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:48 – 17:26, ಯಮಘಂಡ ಕಾಲ09:17 – 10:54, ಗುಳಿಕ ಕಾಲ 12:32 – 14:10

ಇಂದಿನಿಂದ ದಕ್ಷಿಣಾಯನ ಆರಂಭವಾಗಿಲಿದ್ದು, ಸೂರ್ಯನ‌ ಗತಿ‌ ದಕ್ಷಿಣಕ್ಕೆ ಬರಲಿದ್ದು. ಹಗಲಿನ ಪ್ರಮಾಣ ಕಡಿಮೆ, ರಾತ್ರಿಯ ಪ್ರಮಾಣ ಹೆಚ್ಚಿರುವುದು. ಹಬ್ಬಗಳು ಇನ್ನು ಆರಂಭವಾಗುವುವು. ಸ್ವರ್ಗದ ದ್ವಾರ ಇಂದು ಮುಚ್ಚಲಿದೆ ಎಂಬ ಮಾತು ಜನಜನಿತವಾಗಿರುವುದು. ಮಹಾವಿಷ್ಣುವು ಯೋಗನಿದ್ರೆಯಲ್ಲಿ ಈಗಾಲೇ ಇದ್ದಾಗಿದೆ. ಈ ದಿನ ಅಯನ ಸಂಕ್ರಮಣವೂ ಆಗಿರುವ ಕಾರಣ, ದೇವತೋಪಾಸನೆಯಿಂದ ಮನಸ್ಸನ್ನು ನಿರ್ಮಲವಾಗಿಸಿ, ಭಕ್ತಿಯಿಂದ ಇಷ್ಟದೇವರನ್ನೂ ಕುಲದೇವರನ್ನೂ ಆರಾಧಿಸಿ.

ಮೇಷ ರಾಶಿ: ಅಪರಿಚಿತ ಇಂದು ಒಂದೇ ಕಾರ್ಯವನ್ನು ಮತ್ತೆ ಮಾಡಬೇಕಾಗುವುದು. ಮಧ್ಯ ಸಣ್ಣ ವಿರಾಮವನ್ನು ನೀವು ಬಯಸುವಿರಿ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ವಿದ್ಯಾರ್ಥಿಗಳು ಆತ್ಮವಿಶ್ವಾಸ ತುಂಬಿಕೊಳ್ಳುವರು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ಅತಿಯಾದ ಆಸೆಯಿಂದ ನೀವು ವ್ಯಾಪಾರದಲ್ಲಿ ಅಪಾಯವನ್ನು ತಂದುಕೊಳ್ಳುವಿರಿ. ಮಕ್ಕಳು ಸ್ವತಂತ್ರವಾಗಿ ದುಡಿಯಲು ಉಪಯೋಗವಾಗುವಂತೆ ಮಾಡುವಿರಿ. ಎಲ್ಲ ಸಂದರ್ಭದಲ್ಲಿ ಒಂದೇ ರೀತಿಯ ಭಾವನೆ ಬೇಡ. ಸಂಗಾತಿಯ ವಿಚಾರವನ್ನು ಇನ್ನೊಬ್ಬರ ಬಳಿ ಹೇಳಿ ಸಮಾಧಾನ ಪಡುವಿರಿ. ನಿಮ್ಮವರ ಬಗ್ಗೆ ದೂರು ಬರಬಹುದು. ನಗಣ್ಯ ಮಾಡದೇ ವಿಚಾರಿಸುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ.

ವೃಷಭ ರಾಶಿ: ಮರೆತು ಹೋದ ವಿಚಾರವು ಯಾವುದೋ ಕಡೆಯಿಂದ ನಿಮ್ಮನ್ನು ಎಚ್ಚರಿಸುವುದು. ನಿಮ್ಮ ನಿಶ್ಚಿತವಾದ ಯೋಜನೆಯನ್ನು ಬದಲಾಯಿಸುವಿರಿ. ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಅನುರೂಪ ಸಂಗಾತಿಯನ್ನು ಕಂಡುಕೊಳ್ಳುವರು. ಕುಟುಂಬ ಬಂಧನದಿಂದ ಬಿಡುಗಡೆ ಅನಿಸುವುದು. ಕೃಷಿಯಲ್ಲಿ ಏನಾದರೂ ಮಾಡುವ ಕನಸು ಕಂಡು ಕಾರ್ಯಪ್ರವೃತ್ತರಾಗುವಿರಿ. ದಾಂಪತ್ಯದಲ್ಲಿ ಪರಸ್ಪರ ತಪ್ಪುಗ್ರಹಿಕೆಗಳನ್ನು ಹೊಂದಿರುವ ಸಾಧ್ಯತೆ ಇದೆ. ನವವಿವಾಹಿತರು ಸಂತಸದ ಸುದ್ದಿಯನ್ನು ಕೊಡುವರು. ನೀವು ಕೆಲಸದಲ್ಲಿ ಬದಲಾವಣೆಗಳನ್ನು ಗಮನಿಸಿ. ಇದು ನಿಮಗೆ ಅನುಕೂಲಕರ ಪರಿಣಾಮಗಳನ್ನು ಉಂಟುಮಾಡಬಹುದು. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಮಾನಸಿಕತೆಯಲ್ಲಿ ನೀವು ಇರುವಿರಿ. ನಿಮ್ಮ ಮೇಲೆ ವಿರೋಧಿಗಳ ಆಕ್ರಮಣವು ಆಗಬಹುದು. ಬೇಡದಿದ್ದರೂ ಸಹಾಯವು ನಿಮ್ಮ ಪಾಲಿಗೆ ಬರುವುದು.

ಮಿಥುನ ರಾಶಿ: ಬರಬೇಕಾದ ಹಣ ಕೈ ಸೇರುವವರೆಗೂ ಮೌನವಹಿಸಿ. ನಿಮ್ಮ ಬಗ್ಗೆ ಅಪರಿಚಿತರು ಪ್ರೀತಿ ತೋರಿಸಿದರೆ ಮುಜುಗರವಾಗುವುದು. ಯಾರನ್ನೇ ಆದರೂ ಅವರನ್ನು ಒಂದು ಹಂತದವರಗೆ ಮಾತ್ರ ಒಳಗೆ ಕರೆಯುವುದು ಸೂಕ್ತ. ನಿಮ್ಮ ಪ್ರಣಯ ಜೀವನವು ಉತ್ತಮವಾಗಿ ಬದಲಾಗಬಹುದು. ನಿಮ್ಮ ಪ್ರಣಯವು ಸಂಗಾತಿಯ ಜೊತೆ ಅಭಿವ್ಯಕ್ತವಾಗುವ ಸಾಧ್ಯತೆ ಇದೆ. ಪ್ರೀತಿಸುವವರಿಗೆ ಸ್ವಲ್ಪ ಸಮಯ ಕೊಡಬೇಕಾಗುವುದು. ಸುಮ್ಮನೇ ಮಾತನಾಡುವ ಚಪಲವು ಅಧಿಕವಾಗುವುದು. ನಿಮ್ಮ ಸಾಮರ್ಥ್ಯಗಳನ್ನು ಸುಧಾರಿಸಲು ಇದು ಒಂದು ಅವಕಾಶವಾಗಿರುತ್ತದೆ. ಪ್ರಯಾಣದ ಲೆಕ್ಕಾಚಾರ ತಲೆಕೆಳಗಾಗಬಹುದು. ಯಾರಾದರೂ ನಿಮಗೆ ಒಳ್ಳೆಯ ಹೊಸ ಮಾರ್ಗದರ್ಶನವನ್ನು ನೀಡಬಹುದು. ಅಧಿಕ ಅಲಂಕಾರದಿಂದ ಆಕರ್ಷಣೆ ಹೋಗಬಹುದು. ನಿಮ್ಮ ಕೌಶಲ್ಯದಿಂದಾಗಿ ನೀವು ಇಂದಿನ ದೊಡ್ಡ ಸಭೆಯನ್ನು ಉತ್ತಮವಾಗಿ ನಿರ್ವಹಿಸಬಹುದು. ವಿದೇಶಿ ಕಂಪೆನಿ ಉದ್ಯೋಗವನ್ನು ಬಯಸುವಿರಿ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ.

ಕರ್ಕಾಟಕ ರಾಶಿ: ಜೀವನಕ್ಕೆ ಉಪಯುಕ್ತ ಮಾಹಿತಿಯನ್ನು ಪಡೆದುಕೊಳ್ಳುವಿರಿ. ಇಂದು ನಿಮ್ಮ ಪ್ರೇಮವು ಸ್ನೇಹಿತರ ಮೂಲಕ ಸಫಲವಾಗುವುದು. ಕೆಲಸದ ಸ್ಥಳದಲ್ಲಿ ಹಿರಿಯರು ಮಾರ್ಗದರ್ಶನ ಪಡೆಯಿರಿ. ಸಹೋದರರ ಸಹಾಯದಿಂದ ನಿಮ್ಮ ವೃತ್ತಿಪರ ಯಶಸ್ಸಿಗೆ ಕಾರಣವಾಗುವುದು. ವಿದೇಶದಿಂದ ಆಗಮನವಾಗಲಿದ್ದು ವಾತಾವರಣದ ಹೊಂದಾಣಿಕೆ ಕಷ್ಟವಾಗುವುದು. ಹಠದಿಂದ ಯಾವ ಕಾರ್ಯವನ್ನೂ ಮಾಡಲು ಹೋಗವುದು ಬೇಡ. ತಪ್ಪಾದರೆ ಎಲ್ಲರೂ ಆಡಿಕೊಳ್ಳುವರು. ವ್ಯಾಪಾರದ ಉದ್ದೇಶಗಳಿಗಾಗಿ ವಿದೇಶ ಪ್ರವಾಸವು ಈ ದಿನ ಅನುಕೂಲಕರ. ನಿಮ್ಮ ಸಂಗಾತಿಯ ಜೊತೆ ಭಿನ್ನಾಭಿಪ್ರಾಯ, ಕೋಪ, ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗಬಹುದು. ನಿಮ್ಮ ಪಾಲುದಾರಿಕೆಯಲ್ಲಿ ನಿಮ್ಮ ಗಮನ ಅಗತ್ಯವಾಗಿ ಬೇಕು. ಇಲ್ಲವಾದರೆ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನಿಮ್ಮ ವೃತ್ತಿ, ಹಣಕಾಸು ಮತ್ತು ಸಂಬಂಧಕ್ಕೆ ಬಂದಾಗ ವಿಷಯಗಳನ್ನು ಹೆಚ್ಚು ಯೋಚಿಸಬೇಡಿ. ಚಿತ್ತವೃತ್ತಿಗಳು ನಿಮ್ಮನ್ನು ಸುಮ್ಮನೆ ಇರಲು ಬಿಡದು. ಇಂದು ತಲ್ಲೀನರಾಗಿ ಎಲ್ಲ ಕಾರ್ಯವನ್ನು ಮಾಡುವಿರಿ.

ಸಿಂಹ ರಾಶಿ: ಉನ್ನತ ಸ್ಥಾನವನ್ನ ಕಳೆದುಕೊಳ್ಳುವ ಭೀತಿ ಕಾಡುವುದು. ಇಂದು ನೀವು ನಿಶ್ಚಿಂತೆಯಿಂದ ವೃತ್ತಿಯಲ್ಲಿ ತೊಡಗಿಕೊಳ್ಳುವಿರಿ. ಕುಟುಂಬದಲ್ಲಿ ನಡೆಯಲಿರುವ ವಿವಾಹ ಕಾರ್ಯದ ಓಡಾಟವಿರುವುದು. ಇಂದು ನೀವು ಉತ್ತಮ ಆರ್ಥಿಕ ಪ್ರಗತಿಯನ್ನು ಹೊಂದಿದ್ದು ನೀವು ಹೇಳಿದ ರೀತಿಯಲ್ಲಿಯೇ ಎಲ್ಲವೂ ನಡೆಯುವುದು. ನಿಮ್ಮ ಪ್ರಯತ್ನಗಳು ನಿಮ್ಮ ಆತ್ಮ ವಿಶ್ವಾಸವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಹಣದ ವ್ಯವಹಾರವು ಸಂಬಂಧವನ್ನು ದೂರ ಮಾಡುವುದು. ಕೃತಜ್ಞತೆಯು ನಿಮ್ಮ ಸ್ವಭಾವವನ್ನು ಹೇಳುತ್ತದೆ. ಸಂಯಮವನ್ನು ಕಾಪಾಡಿಕೊಳ್ಳಿ. ಒತ್ತಡವಿಲ್ಲದೆ, ನಿಮ್ಮ ಜೀವನವನ್ನು ಆನಂದಿಸಲು ಪ್ರಯತ್ನಿಸಿ. ನಿಮ್ಮ ಆರೋಗ್ಯದ ವಿಷಯದಲ್ಲಿ ಅನುಕೂಲಕರವಾಗಿ ಇರಲಿದೆ. ವೇಗವಾಗಿ ಹಣವನ್ನು ಗಳಿಸುವ ವಿಧಾನವನ್ನು ನೀವು ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ. ದಾಖಲೆಗಳ ನವೀಕರಣ ವಿಚಾರದ ಕಡೆ ಗಮನ ಹೆಚ್ಚು ಇರಲಿ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸಾಮಾಜಿಕವಾಗಿ ಏನನ್ನಾದರೂ ಮಾಡಬೇಕು ಎಂದೆನಿಸಬಹುದು.

ಕನ್ಯಾ ರಾಶಿ: ಏನನ್ನೋ ಹುಡುಕಲು ಹೋಗಿ ಮತ್ತೇನನ್ನೋ ಪಡೆಯುವಿರಿ. ನೀವು ಇಂದು ಆಪ್ತರನ್ನೇ ದ್ವೇಷಿಸುವಿರಿ. ಹಣದ ತೊಂದರೆಗೆ ಅನ್ಯರ ಸಹಾಯವನ್ನು ಕೇಳಬೇಕಾಗುವುದು. ದಿನದ ಆರಂಭದಲ್ಲಿ ಗಮನಾರ್ಹ ಹಣಕಾಸಿನ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಬಹುದು. ಬಹಳ ಸಮಯ ಒಂದೆ ಕಡೆ ಕುಳಿತಿರಲಾಗದು. ಅಪರಿಚಿರ ಒಡನಾಟವು ಹೊಸ ದಿಕ್ಕಿನ ಕಡೆ ಕರೆದೊಯ್ಯುವುದು. ನಿಮ್ಮ ವೃತ್ತಿಜೀವನವು ಉತ್ತಮವಾದ ಆರಂಭವನ್ನು ಪಡೆಯಬಹುದು. ಹೊಸ ಕೆಲಸ, ಕಾರ್ಯಗಳಲ್ಲಿ ಉತ್ಸಾಹವಿರಲಿದೆ. ಇಂದು ಇರುವ ಲವಲವಿಕೆಯು ಮತ್ತು ಶಕ್ತಿಯುತವಾಗಿ ಇರಬಹುದು. ಯಾರೋ ನಿಮ್ಮನ್ನು ಆಳುವುದು ಇಷ್ಟವಾಗದು. ನಿಮ್ಮ ಶೈಕ್ಷಣಿಕ ಪ್ರಗತಿಯು ಹೆಚ್ವಲಿದೆ. ಕಾರ್ಯಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪ್ರಸ್ತುತಿ ಪಡಿಸಿ. ಇದರಿಂದ ಯೋಜನೆ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು.‌ ಬೇಕಾದಷ್ಟು ಸಂಪತ್ತಿದ್ದರೂ ಅದನ್ನು ಖರ್ಚು ಮಾಡುವ ಮನಸ್ಸು ಬಾರದು. ಒಮ್ಮೆಲೆ ಕಷ್ಟಗಳು ಬರುವುದರಿಂದ ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ.

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ