AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳು ಎದುರಾಗುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ ಬುಧವಾರ ವಿದ್ಯಾಭ್ಯಾಸದಲ್ಲಿ ಆತ್ಮವಿಶ್ವಾಸ, ಅನುರೂಪದ ಸಂಗಾತಿ, ಉನ್ನತ ಸ್ಥಾನದಲ್ಲಿ ಭೀತಿ, ಇಚ್ಛಾಶಕ್ತಿಯ ಕೊರತೆ ಇವೆಲ್ಲ ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳು ಎದುರಾಗುವುದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Jul 16, 2025 | 1:49 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು: ಗ್ರೀಷ್ಮ, ಸೌರ ಮಾಸ: ಕರ್ಕಾಕಟ, ಮಹಾನಕ್ಷತ್ರ: ಪುನರ್ವಸು, ವಾರ: ಬುಧ, ತಿಥಿ : ಷಷ್ಠೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶೋಭನ, ಕರಣ: ಗರಜ, ಸೂರ್ಯೋದಯ – 06 : 12 am, ಸೂರ್ಯಾಸ್ತ – 07 : 04 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 15:48 – 17:26, ಯಮಘಂಡ ಕಾಲ09:17 – 10:54, ಗುಳಿಕ ಕಾಲ 12:32 – 14:10

ಇಂದಿನಿಂದ ದಕ್ಷಿಣಾಯನ ಆರಂಭವಾಗಿಲಿದ್ದು, ಸೂರ್ಯನ‌ ಗತಿ‌ ದಕ್ಷಿಣಕ್ಕೆ ಬರಲಿದ್ದು. ಹಗಲಿನ ಪ್ರಮಾಣ ಕಡಿಮೆ, ರಾತ್ರಿಯ ಪ್ರಮಾಣ ಹೆಚ್ಚಿರುವುದು. ಹಬ್ಬಗಳು ಇನ್ನು ಆರಂಭವಾಗುವುವು. ಸ್ವರ್ಗದ ದ್ವಾರ ಇಂದು ಮುಚ್ಚಲಿದೆ ಎಂಬ ಮಾತು ಜನಜನಿತವಾಗಿರುವುದು. ಮಹಾವಿಷ್ಣುವು ಯೋಗನಿದ್ರೆಯಲ್ಲಿ ಈಗಾಲೇ ಇದ್ದಾಗಿದೆ. ಈ ದಿನ ಅಯನ ಸಂಕ್ರಮಣವೂ ಆಗಿರುವ ಕಾರಣ, ದೇವತೋಪಾಸನೆಯಿಂದ ಮನಸ್ಸನ್ನು ನಿರ್ಮಲವಾಗಿಸಿ, ಭಕ್ತಿಯಿಂದ ಇಷ್ಟದೇವರನ್ನೂ ಕುಲದೇವರನ್ನೂ ಆರಾಧಿಸಿ.

ತುಲಾ ರಾಶಿ: ತಾತ್ಕಾಲಿಕವಾಗಿ ಹೊರ ಪ್ರದೇಶದಲ್ಲಿ ಇರಬೇಕಾಗುವುದು. ಇಂದು ಅವಸರದಲ್ಲಿ ಉದ್ಯೋಗದ ತೀರ್ಮಾನವನ್ನು ನೀವು ತೆಗೆದುಕೊಳ್ಳಬೇಡ. ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟವಾಗುತ್ತದೆ. ಹೇಳದೇ ಪರರ ವಸ್ತುವನ್ನು ಪಡೆಯುವಿರಿ. ಮಕ್ಕಳಿಂದ ನೆಮ್ಮದಿಯು ನಿಮಗೆ ಸಿಗುತಗತದೆ. ಇಂದು ವ್ಯಾಪಾರಸ್ಥರಿಗೆ ಸ್ವಲ್ಪ ನಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಸುಧಾರಿತ ಆರ್ಥಿಕ ಸ್ಥಿತಿಯು ನಿಮಗೆ ಹೆಚ್ಚು ಸುಖವನ್ನು ಉಂಟುಮಾಡುತ್ತದೆ. ನಿಮ್ಮ ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ದಿನದ ಆರಂಭದಲ್ಲಿ ನೀವು ಸ್ವಲ್ಪ ಖಿನ್ನತೆಗೆ ಒಳಗಾಗುವ ಸಾಧ್ಯತೆಗಳು ಇರುತ್ತವೆ. ಕೃತಜ್ಞತೆಯಿಂದ ಉಪಕರಿಸಿದವರನ್ನು ನೆನಪಿಸಿಕೊಳ್ಳುವಿರಿ. ಇಂದು ನೀವು ಹೆಚ್ಚು ವಿಶ್ರಾಂತಿ ಅನುಭವಿಸಲು ಇಚ್ಛಿಸುವಿರಿ. ಇದು ನಿಮ್ಮನ್ನು ನಕಾರಾತ್ಮಕ ಭಾವನೆಗಳಿಂದ ಹೊರಬರಲು ಸಹಾಯ ಮಾಡುತ್ತದೆ. ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಉದ್ಯೋಗದ ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ.

ವೃಶ್ಚಿಕ ರಾಶಿ: ನಿಮಗೆ ವಸ್ತುಗಳ ಮೇಲೆ ಅಧಿಕಾರಬಿದ್ದರೂ ಅದನ್ನು ಬಳಸಲಾಗದು. ಇಂದು ಸ್ನೇಹಿತರು ನಿಮಗೆ ಬೇಕಾದ ಸಲಹೆಯನ್ನು ಪಡೆಯುವಿರಿ. ಅನಿರೀಕ್ಷಿತವಾಗಿ ಬಂದ ಜವಾಬ್ದಾರಿಗಳು ನೀವು ನಿರ್ವಹಿಸಬೇಕಾಗುವುದು. ಆದಾಯವನ್ನು ಉತ್ತಮ ಮಾಡಿಕೊಳ್ಳುವಿರಿ. ಒತ್ತಡದ ತರುವ ಕೆಲಸದಿಂದ ವಿರಾಮವನ್ನು ಪಡೆಯಬೇಕಾದೀತು. ಇತ್ತೀಚಿನ ಹೂಡಿಕೆಯ ಜೊತೆ ಹಳೆಯ ಹೂಡಿಕೆಯ ಲಾಭವನ್ನು ಪಡೆಯುವಿರಿ. ವಿದೇಶದ ಉದ್ಯೋಗದಲ್ಲಿ ನಿಮಗೆ ಕಷ್ಟ ಬರುವ ಸಾಧ್ಯತೆ ಇಧೆ. ನಿಮ್ಮನ್ನು ಪರಿಚಯಿಸಿಕೊಳ್ಳಲು ನಿಮಗೆ ಮುಜುಗರವಾಗುವುದು. ಹೊಸದಾಗಿ ಕೆಲಸಕ್ಕೆ ಸೇರಿದವರು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವನ್ನು ಅನುಭವಿಸಬೇಕಾದೀತು. ನಿಮ್ಮ ಕೆಲಸದ ಹೊರೆ, ಒತ್ತಡವು ನಿಮ್ಮನ್ನು ಬಹಳಷ್ಟು ಹಿಂಸೆ ಮಾಡಬಹುದು. ನಿಮ್ಮ ವೃತ್ತಿಪರ ಜೀವನದಲ್ಲಿ ಅದೃಷ್ಟವು ನಿಮ್ಮ ಪರವಾಗಿರಬಹುದು. ಸೃಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದಾಯ ಸಿಗುವುದು.

ಧನು ರಾಶಿ: ಯಾರ ಬೆಂಬಲವೂ ಅಕಾರಣವಾಗಿ ಸಿಗುವುದಿಲ್ಲ ಎಂಬುದು ಗೊತ್ತಿರಲಿ. ಇಂದು ಸಿಟ್ಟಿನ ಭರದಲ್ಲಿ ನೀವು ವಿವೇಚನೆಯನ್ನು ಕಳೆದುಕೊಳ್ಳುವ ಪ್ರಸಂಗ ಎದುರಾಗುವುದು. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ನಿಮ್ಮ ಅಜ್ಞಾನದಿಂದ ನಷ್ಟವಾಗದಂತೆ ಎಚ್ಚರ ವಹಿಸಿ. ಹಿಂದಿನ ಕೆಲವು ಹಣಕಾಸಿನ ಸಮಸ್ಯೆಗಳು ಮತ್ತೆ ಕಾಣಿಸಿಕೊಳ್ಳಬಹುದು ಮತ್ತು ನಿಮ್ಮ ಗಮನವನ್ನು ಕೋರಬಹುದು. ನಿಮ್ಮ ಸಾಧನೆಯು ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ಬೋಧಕ ವರ್ಗದಲ್ಲಿ ಕಾರಣಾಂತರಗಳಿಂದ ಇದ್ದಕ್ಕಿದ್ದಂತೆ ಒತ್ತಡ ಬರಲಿದೆ. ಸ್ವೀಕರಿಸುವುದೂ ಕಷ್ಟವಾಗುತ್ತದೆ. ನಿಮ್ಮ ಸಾಧನೆಗೆ ಇತರರು ಮೆಚ್ಚುಗೆ ವ್ಯಕ್ತಪಡಿಸುವರು. ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ವಿವೇಕದ ಅಗತ್ಯವಿದೆ. ನಿಮ್ಮ ಮನಃಸ್ಥಿತಿಯನ್ನು ಬದಲಾಯಿಸುವ ಅತ್ಯುತ್ತಮ ತಂತ್ರವೆಂದರೆ ನಿಮ್ಮ ಶಕ್ತಿಯನ್ನು ನೀವು ಗುರುತಿಸಿಕೊಳ್ಳುವುದು. ನಿಮ್ಮ ಜೀವನವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವಿರಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಕಳೆದುಕೊಂಡಿದ್ದನ್ನು ಹೇಗಾದರೂ ಮಾಡಿ ಪಡೆದುಕೊಳ್ಳುವಿರಿ.

ಮಕರ ರಾಶಿ: ಬಲವಾದ ನಂಬಿಕೆಯೇ ಇಂದು ನಿಮಗೆ ಚಮತ್ಕಾರ ಮೂಡಿಸುವುದು. ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳು ಎದುರಾಗುವುದು. ಕುಟುಂಬದವರ ಅನಾರೋಗ್ಯದ ಕಾಳಜಿ‌ ಮಾಡಬೇಕಾಗುವುದು. ನಿಮ್ಮ ಕೆಲಸ ಮತ್ತು ವೈಯಕ್ತಿಕ ಜೀವನದಲ್ಲಿ ಏರಿಳಿತದ ಜೊತೆ, ಅಸ್ತವ್ಯಸ್ತವಾಗಬಹುದು. ಭವಿಷ್ಯದ ಬಗ್ಗೆ ಈ ದಿನವನ್ನು ಆನಂದಿಸಲು, ನೀವು ಮೊದಲು ಜವಾಬ್ದಾರಿಗಳನ್ನು ಪೂರೈಸುವತ್ತ ಗಮನ ಹರಿಸಬೇಕು. ಸಂಗಾತಿಗೆ ನೇರವಾಗಿ ಹೇಳದೇ ಹೇಳಬೇಕಾದುದನ್ನು ಹೇಳುವಿರಿ. ಜೊತೆಗೆ, ವ್ಯಕ್ತಿಗತ ಸಂಬಂಧಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ತಾಳ್ಮೆಯ ಬಗ್ಗೆ ನಿಮಗೆ ನಿರಂತರ ಉಪದೇಶ ಬೇಕಾಗುವುದು. ಆರ್ಥಿಕವಾಗಿ ಸಂಬಂಧಿಸಿದಂತೆ ನಿರೀಕ್ಷಿತ ಲಾಭ ಮತ್ತು ಉಳಿತಾಯವನ್ನು ಕಾಣಬಹುದು. ಕೆಲವು ಸವಾಲುಗಳು ಉದ್ಭವಿಸಬಹುದು. ನಿಮ್ಮ ವಿವಾಹವು ಕಾನೂನು ವಿವಾದದ ವಿಷಯವಾಗಿದ್ದರೆ, ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಪ್ರಯೋಗ ವಿಭಾಗದಲ್ಲಿ ಕೆಲಸ ಮಾಡುವರು. ನೀವು ಏನು ಎಂದು ನಿಮಗೆ ಗೊತ್ತಿರಲಿ.

ಕುಂಭ ರಾಶಿ: ನಿಮ್ಮ ಎದುರಿಗೆ ಯಾರೂ ಬರುವುದನ್ನು ಇಷ್ಟಪಡಲಾರಿರಿ. ಹೂಡಿಕೆಯ ಕಾರಣದಿಂದ‌ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು‌ ಮರುಕಳಿಸಬಹುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಉತ್ತಮ ಸಂಬಂಧಗಳು ಇರಲಿದೆ. ನಿಂದನೆಯನ್ನು ಅತಿಯಾಗಿ ಸಹಿಸುವಿಕೆ ನಿಮ್ಮಲ್ಲಿ‌ ಇರದು. ನಿಮ್ಮ ಸಂವಹನಕ್ಕೆ ವಿವಿಧ ಮಾರ್ಗಗಳನ್ನು ಹುಡುಕುವಿರಿ. ಒಳ್ಳೆಯ ಸಮಯವನ್ನು ಒಟ್ಟಿಗೆ ಕಳೆಯಿರಿ ಮತ್ತು ಪರಸ್ಪರರ ಭಾವನೆಗಳನ್ನು ಗ್ರಹಿಸಲು ಪ್ರಯತ್ನಿಸಿ. ಶೈಕ್ಷಣಿಕ ಉದ್ದೇಶಗಳನ್ನು ಸಾಧಿಸಲು ವಿದ್ಯಾರ್ಥಿಗಳು ಸಾಕಷ್ಟು ಪ್ರಯತ್ನಿಸುವರು. ನೀವು ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವಿರಿ. ಉದ್ಯಮದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ವ್ಯಾಪಾರದ ವಿಸ್ತರಣೆಯನ್ನು ಮಾಡುವಿರಿ. ನಿಮ್ಮ ಪ್ರಯತ್ನಗಳಿಂದ ಉತ್ತಮ ಫಲಿತಾಂಶವನ್ನು ಕಾರಣವಾಗಬಹುದು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು.

ಮೀನ ರಾಶಿ: ಆರ್ಥಿಕ ಸಬಲತೆಯೇ ಇಂದಿನ ಮೂಲ ಚಿಂತನೆಯಾಗಿದ್ದು ಅದನ್ನು ಹೆಚ್ಚಿಸುವ ಕುರಿತು ಪ್ರಯತ್ನ ಸಾಗುವುದು. ನಿಮಗೆ ವ್ಯವಹಾರವು ಅಂದುಕೊಂಡಷ್ಟು ಸಾಧಿಸಲಾಗದೇ ಇಂದು ಬೇಸರವಾಗಬಹುದು. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ನೀವು ಸರಿಯಾದ ವಿಧಾನವನ್ನು ಆಯ್ಕೆ ಮಾಡುವಿರಿ. ಉಜ್ವಲ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು, ನೀವು ಉಪಕ್ರಮವನ್ನು ತೆಗೆದುಕೊಳ್ಳಬಹುದು. ನಿರುತ್ಸಾಹ ನಿಮ್ಮೊಳಗೆ ಬಾರದಂತೆ ನೊಕಡಿಕೊಳ್ಳಿ. ದಿನದ ಕೊನೆಯಲ್ಲಿ ಅನುಕೂಲಕರ ವಾತಾವರಣದಿಂದ ನೀವು ಆರ್ಥಿಕವಾಗಿ ಲಾಭ ಪಡೆಯಬಹುದು. ಶಿಕ್ಷಣದಿಂದ ನೀವು ಯಶಸ್ಸು ಗಳಿಸುವಿರಿ. ನಿಮ್ಮ ಸಂಗಾತಿಗೆ ಸ್ವಲ್ಪ ಹೆಚ್ಚಿನ ಗಮನ, ಪ್ರೀತಿ ನೀಡಿದರೆ ನಿಮ್ಮ ಪ್ರೀತಿಯ ಜೀವನವು ಉತ್ತಮವಾಗಿರುವುದು. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ಎಲ್ಲ ಕಾರ್ಯದಲ್ಲಿಯೂ ಶ್ರದ್ಧೆಯು ಕಡಿಮೆಯಾಗುವುದು. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ನಿಮ್ಮನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವಿರಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ