
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಶಿವ, ಕರಣ : ಗರಜ, ಸೂರ್ಯೋದಯ – 06 – 32 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 08:03 – 09:33, ಯಮಗಂಡ ಕಾಲ 11:03 – 12:33, ಗುಳಿಕ ಕಾಲ 14:03 – 15:33
ಮೇಷ ರಾಶಿ: ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಬರಹಗಳು ನಿಮ್ಮ ಆದಾಯಕ್ಕೆ ಹೆಚ್ಚಿನ ಒತ್ತನ್ನು ಕೊಡುವುದು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಮಾಣೀಕರಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಯಾವುದನ್ನು ಖಂಡಿಸುವಾಗಲೂ ಅದರ ಪೂರ್ಣ ಮಾಹಿತಿ ಇರಲಿ. ಸ್ನೇಹಿತರ ಸಹವಾಸ ಅಧಿಕಾಗುವುದು. ಮಾತಿನಲ್ಲಿ ಲವಲವಿಕೆ ಇರುವುದು.
ವೃಷಭ ರಾಶಿ: ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ವಾಹನದ ಖರೀದಿಸುವ ಆಸೆಯು ಪ್ರಬಲವಾಗಬಹುದು. ನಯವಂಚಕತನವು ನಿಮಗೆ ಪ್ರಿಯವಾಗಬಹುದು. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ದುಂದುವೆಚ್ಚದಿಂದ ಬೇಸರ. ಮಕ್ಕಳ ಜೊತೆ ಸಂತೋಷದ ಕ್ಷಣವು ಇರಲಿದೆ. ಶ್ರದ್ಧೆಯಿಂದ ಯಾವುದನ್ನೂ ಇಂದು ಮಾಡಲಾರಿರಿ.
ಮಿಥುನ ರಾಶಿ: ವ್ಯಾಪಾರದ ಬದಲಾವಣೆಗಳನ್ನು ಅಧ್ಯಯನ ಮಾಡಿ ಬದಲಾಯಿಸಿ. ಚುರುಕುತನವು ನಿಮಗೆ ಸಾಧ್ಯವಾಗದು. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ನೆರೆಯವರು ನಿಮ್ಮ ವ್ಯವಹಾರದಲ್ಲಿ ಪ್ರವೇಶಪಡೆಯಬಹುದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು.
ಕರ್ಕಾಟಕ ರಾಶಿ: ಆದಾಯದ ಗೌಪತೆಯನ್ನು ಕಾಪಾಡಿಕೊಳ್ಳಿ. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಅಲ್ಪ ಆದಾಯವನ್ನು ಹೆಚ್ಚು ಮಾಡಿ ಹೇಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳೊಂದಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರುವುವು.
ಸಿಂಹ ರಾಶಿ: ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಂತಾನವು ನಿಮ್ಮ ಖುಷಿಯನ್ನು ಹೆಚ್ಚಿಸುವುದು. ಮಕ್ಕಳಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ.
ಕನ್ಯಾ ರಾಶಿ: ಕಡಿಮೆ ಖರ್ಚು ಮತ್ತು ಆದಾಯದ ಉದ್ಯಮಕ್ಕೆ ಆದ್ಯತೆ ಕೊಡುವಿರಿ. ನಿಮ್ಮ ಯಶಸ್ಸಿಗೆ ವಿರೋಧಿಗಳು ಅಡ್ಡಗಾಲು ಹಾಕಬಹುದು. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದು ಸ್ವಭಾವವಿರುವುದು. ವಿಶ್ವಾಸವನ್ನು ಗಟ್ಟಿಗೊಳಿಸುವ ಪ್ರಯತ್ನವನ್ನು ಮಾಡಲಿದ್ದೀರಿ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ವೈದ್ಯಕೀಯ ಕ್ಷೇತ್ರದ ಕಲಿಕೆ ಬಹಳ ಕಷ್ಟವೆನಿಸಬಹುದು. ಕೆಲವು ವಿಚಾರದಲ್ಲಿ ಮರೆವೂ ನಿಮಗೆ ವರವಾದಂತೆ ಅನ್ನಿಸುವುದು.
ತುಲಾ ರಾಶಿ: ಹಿರಿಯರ ಮಾತಿನಿಂದ ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಸಂಗಾತಿಯ ಮಾತನ್ನು ನಡೆಸಿಕೊಡಲಾಗದು. ಹಣಕ್ಕಾಗಿ ಕಿರಿಕಿರಗಳು ಅಧಿಕವಾದಂತೆ ತೋರುವುದು. ಮಕ್ಕಳಿಗೆ ಯಾವುದಾದರೂ ಉತ್ತಮ ಹವ್ಯಾಸದ ರುಚಿ ಬರುವಂತೆ ಮಾಡುವಿರಿ. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಿ.
ವೃಶ್ಚಿಕ ರಾಶಿ: ಮಾತುಗಳನ್ನು ಬದಲಿಸಿ, ಎಲ್ಲರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸಬಹುದು. ಅಂತರಂಗವನ್ನು ಆದಷ್ಟು ಗೌಪ್ಯವಾಗಿ ಇಡುವುದು ಬೇಕಾದೀತು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗಿ ಸ್ಪಂದಿಸುವ್ವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯವು ಬಹಳ ಇರಲಿದೆ. ಅಸಹಜ ವ್ಯವಹಾರದಿಂದ ಹಿಂದೆ ಸರಿಯುವುದು ಉತ್ತಮ.
ಧನು ರಾಶಿ: ಧಾರ್ಮಿಕ ಕಾರ್ಯಗಳು ಶ್ರದ್ಧೆಯಿಂದ ಪೂರ್ಣವಾಗಲಿದೆ. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ರಾಜಕೀಯ ಪ್ರೇರಿತ ಕಾರ್ಯದಲ್ಲಿ ಸಿಕ್ಕಿಕೊಳ್ಳುವಿರಿ. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಭೂಮಿಯ ವಿವಾದ ಹೊಸದಾಗಿ ಆರಂಭವಾಗಲಿದೆ. ತೀರ್ಥ ಕ್ಷೇತ್ರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಪುಣ್ಯವೆಂದು ಭಾವಿಸಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ.
ಮಕರ ರಾಶಿ: ಮಾತು ಎಷ್ಟೇ ಸಹೃದಯತೆಯಿಂದ ಇದ್ದರೂ ಕೇಳಿಸಿಕೊಳ್ಳುವ ಸಹೃದಯರು ಸಿಗುವುದಿಲ್ಲ. ಉದ್ವಿಗ್ನತೆಯು ಉಂಟಾದಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಸಿಗಲಿರುವ ಸ್ಥಿರಾಸ್ತಿಯು ಕೈತಪ್ಪಿಹೋಗಬಹುದು. ನಿಮ್ಮ ಸಮಸ್ಯೆಗಳಿಗೆ ಹಲವರು ಹಲವು ರೀತಿಯ ಸಲಹೆಗಳನ್ನು ನೀಡಬಹುದು. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ.
ಕುಂಭ ರಾಶಿ: ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ಗುರಿಯ ಸಾಧನೆಗೆ ಸಾರ್ವಜನಿಕ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಹೊಸ ವಿಚಾರಗಳ ಕಡೆ ಹೊರಳುವ ಆಲೋಚನೆ ಮನಸ್ಸಿಗೆ ಬರಲಿದೆ. ನಿಮ್ಮಿಂದ ಆಗದೇ ಇರುವ ಕಾರ್ಯ ಎಂದು ಯಾವುದೂ ಇರದು. ಆದರೆ ಕೆಲವಕ್ಕೆ ಸಮಯ ಹೆಚ್ಚು ಬೇಕು ಅಷ್ಟೇ.
ಮೀನ ರಾಶಿ: ನಿಮ್ಮ ದೈನಂದಿನ ಕಾರ್ಯದಲ್ಲಿ ವ್ಯತ್ಯಾಸ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ.
ಲೋಹಿತ ಹೆಬ್ಬಾರ್ – 8762924271 (what’s app only)