
ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ವೃಷಭ ಮಾಸ, ಮಹಾನಕ್ಷತ್ರ : ಕೃತ್ತಿಕಾ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಶುಕ್ರವಾರ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಸಾಧ್ಯ, ಕರಣ : ಬವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 52 pm, ಇಂದಿನ ಶುಭಾಶುಭಕಾಲ : ರಾಹು ಕಾಲ 10:53 – 12:29, ಯಮಘಂಡ ಕಾಲ 15:41 – 17:16, ಗುಳಿಕ ಕಾಲ 07:42 – 09:18
ತುಲಾ ರಾಶಿ: :ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳನ್ನು ಕೇಳಿ ಸುಮ್ಮನಾಗುವಿರಿ. ಅವಸರದಲ್ಲಿ ಉದ್ಯೋಗದ ತೀರ್ಮಾನವನ್ನು ತೆಗೆದುಕೊಳ್ಳಬೇಡ. ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟವಾಗುತ್ತದೆ. ಮಕ್ಕಳಿಂದ ನೆಮ್ಮದಿಯು ನಿಮಗೆ ಸಿಗುತಗತದೆ. ಹಣಕ್ಕಾಗಿ ಕಿರಿಕಿರಗಳು ಅಧಿಕವಾದಂತೆ ತೋರುವುದು. ಹೂಡಿಕೆಗೆ ಮೊದಲು ಎಲ್ಲವನ್ನೂ ಅಧ್ಯಯನ ಮಾಡಿ. ಕುಟುಂಬದವರೊಂದಿಗೆ ಕಳೆಯುವ ಸಮಯ ಹೃದಯ ತಣಿಸುತ್ತದೆ. ಬೃಹತ್ ಮೊತ್ತದ ಕಾಮಗಾರಿ ನಿಮಗೆ ಸಿಗಬಹುದು. ಪ್ರೇಮ ಸಂಬಂಧದಲ್ಲಿ ಬುದ್ಧಿವಂತಿಕೆ ಮುಖ್ಯ. ನಿಮ್ಮ ನಿಷ್ಠೆ ಮತ್ತು ಶ್ರಮವು ಮೆರೆದೀತು. ನಿಮಗೆ ಇಂದು ಬರುವ ಅಶುಭವಾರ್ತೆಯಿಂದ ತಲ್ಲಣಿಸಬಹುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಮನಃಶಾಂತಿಗೆ ಧ್ಯಾನವನ್ನು ರೂಢಿ ಮಾಡಿಕೊಳ್ಳಿ. ಮಹಿಳೆಯರಿಗೆ ಈ ದಿನ ಶುಭವಿರುವುದು. ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಬಹುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗವಾಗುವಂತೆ ನೋಡಿ.
ವೃಶ್ಚಿಕ ರಾಶಿ: :ಮೈ ಮರೆತರೆ ಅಪಘಾತವಾಗಬಹುದು. ಇಂದು ಸ್ನೇಹಿತರು ನಿಮಗೆ ಬೇಕಾದ ಸಲಹೆಯನ್ನು ಪಡೆಯುವಿರಿ. ಅನಿರೀಕ್ಷಿತವಾಗಿ ಬಂದ ಜವಾಬ್ದಾರಿಗಳು ನೀವು ನಿರ್ವಹಿಸಬೇಕಾಗುವುದು. ಆದಾಯವನ್ನು ಉತ್ತಮ ಮಾಡಿಕೊಳ್ಳುವಿರಿ. ಕೆಲಸದಲ್ಲಿ ಅವಕಾಶಗಳು ಸಿಗಬಹುದು ಆದರೆ ತೀರ್ಮಾನದಲ್ಲಿ ತಾಳ್ಮೆ ಅಗತ್ಯ. ಬಟ್ಟೆಯನ್ನು ಮನೆಯವರಿಗೆ ಖರೀದಿಮಾಡುವಿರಿ. ಖರ್ಚುಗಳು ನಿಮ್ಮ ಮೇಲೆ ಒತ್ತಡ ತರುತ್ತವೆ. ಮನೆಯ ಅಲಂಕರಣದ ಚಿಂತನೆ ಮೂಡಬಹುದು ಆದರೆ ಮುಂದಕ್ಕೆ ಹಾಕುವುದು ಉತ್ತಮ. ಸ್ನೇಹಿತರ ಜೊತೆಗಿನ ಸಮಯ ಖುಷಿಯನ್ನು ನೀಡುತ್ತದೆ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಸಹೋದ್ಯೋಗಿಗಳು ಉದ್ಯೋಗಕ್ಕೆ ಸಂಬಂಧಿಸಿದ ಗೊಂದಲವನ್ನು ಪರಿಹರಿಸಲು ಸಹಕಾರ ನೀಡಬಹುದು. ಅದೃಷ್ಟವನ್ನು ಮಾತ್ರ ನಂಬಿ ಕೆಲಸ ಮಾಡುವುದು ಬೇಡ. ನೀವು ಪಡೆದ ಸಾಲವನ್ನು ಮರುಪಾವತಿಸುವಿರಿ. ಸರ್ಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು.
ಧನು ರಾಶಿ: :ಮುಂಗಡ ಹಣವನ್ನು ಕೊಟ್ಟರೂ ನಿಮ್ಮ ಕೆಲಸ ಆಗದೇ ಮೋಸ ಹೋಗುವಿರಿ. ಸಿಟ್ಟಿನ ಭರದಲ್ಲಿ ವಿವೇಚನೆಯನ್ನು ಕಳೆದುಕೊಳ್ಳುವಿರಿ. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ನಿಮ್ಮ ಆಕ್ರೋಶವನ್ನು ಮನೆಯಲ್ಲಿ ಹೊರಹಾಕುವಿರಿ. ಧೈರ್ಯದಿಂದ ಕೆಲಸದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಹಣಕಾಸು ಸ್ಥಿತಿಯಲ್ಲಿ ಸ್ಥಿರತೆ ಇರುತ್ತದೆ. ಖರ್ಚುಗಳಲ್ಲಿ ನಿಯಂತ್ರಣ ವಹಿಸಿ. ಮನೆಯವರು ನಿಮ್ಮ ಸಮಯ ಮತ್ತು ಪ್ರೀತಿಗೆ ಕಾಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ಉಜ್ವಲ ಭವಿಷ್ಯಕ್ಕಾಗಿ ಸಮರ್ಪಿತ ಯತ್ನ ಅಗತ್ಯ. ಅಧಿಕಾರ ಪ್ರಾಪ್ತಿಗಾಗಿ ನೀವು ತಂತ್ರ ಹೂಡುವಿರಿ. ಮಕ್ಕಳ ಮೇಲೆ ಪಕ್ಷಪಾತ ಮಾಡುವುದು ಬೇಡ. ಮಾತನಾಡುವಾಗ ಒಂದು ಮಿತಿಯಲ್ಲಿ ಇರಲಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಇಂದು ಸೇವಿಸುವ ಆಹಾರದ ಬಗ್ಗೆ ನಿಮಗೆ ಸರಿಯಾದ ನಿಗಾ ಇರಲಿ.
ಮಕರ ರಾಶಿ: :ನಿಮ್ಮ ಬೆಂಬಲಿಗರನ್ನು ಹಿತಶತ್ರುಗಳು ದೂರಮಾಡುವರು. ಇಂದು ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳನ್ನು ಎದುರಿಸಬೇಕಾಗುವುದು. ಕುಟುಂಬದವರ ಅನಾರೋಗ್ಯದ ಕಾಳಜಿ ಮಾಡಬೇಕಾಗುವುದು. ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಿದರೂ ಮನಸ್ಸು ಬೇರೆಡೆ ಇರಬಹುದು. ಹಣಕಾಸು ಸ್ಥಿತಿಯಲ್ಲಿ ನಿರ್ವಹಣಾ ಜಾಣತನ ಅಗತ್ಯ. ಸಹೋದ್ಯೋಗಿಯಿಂದ ಸ್ಪರ್ಧಾತ್ಮಕ ಮನೋಭಾವನೆ ಎದುರಾಗಬಹುದು. ಅಂತರ್ಜಾಲದಿಂದ ಸಂಗಾತಿಯನ್ನು ಹುಡುಕುವ ಪ್ರಯತ್ನ ಮಾಡುವಿರಿ. ಹೊಸ ವಿಷಯ ಕಲಿಯಲು ಉತ್ತಮ ಸಮಯ. ಅಧಿಕ ಖರ್ಚನ್ನು ನಿಯಂತ್ರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಅಶಕ್ತರಿಗೆ ಸಹಾಯ ನಿಮ್ಮಿಂದ ಸಹಕಾರ ನೀಡಿ. ಯಾರಾದರೂ ನಿಮ್ಮನ್ನು ಯಾವುದಾದರೂ ಕಾರ್ಯಕ್ಕೆ ಪ್ರೋತ್ಸಾಹಿಸಬಹುದು. ನಿಮ್ಮ ಬಗ್ಗೆ ನಿಮಗೆ ಗೊತ್ತಿರಲಿ.
ಕುಂಭ ರಾಶಿ: :ವಿದೇಶದ ಅಪರಿಚಿತ ಕರೆ ಬರಬಹುದು. ಹೂಡಿಕೆಯಿಂದ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು ಮರುಕಳಿಸಬಹುದು. ಪರಸ್ಪರ ಪ್ರೀತಿಯು ದಾಂಪತ್ಯದಲ್ಲಿ ಹೊಂದಾಣಿಕೆ ಬೆಳೆಯುವುದು. ಉದ್ಯೋಗದಲ್ಲಿ ಚುರುಕು ಮತ್ತು ಯೋಜನೆ ಮುಖ್ಯ. ಹಣಕಾಸಿನಲ್ಲಿ ಸ್ಥಿರತೆ ಇದ್ದರೂ ಸಾಲ ಅಥವಾ ಸಾಲಕೊಡಿಕೆ ಬೇಡ. ವ್ಯಾಪಾರಾದ ಪೈಪೋಟಿಗೆ ನೀವು ಸಿದ್ಧರಾಗಿಲ್ಲ. ಪ್ರೀತಿಯಲ್ಲಿ ಸಹನಶೀಲತೆಯಿಂದ ಸ್ಪಂದಿಸಿ. ಪ್ರವಾಸದ ಯೋಜನೆ ಅಕಸ್ಮಿಕವಾಗಿ ಬರುತ್ತದೆ. ಆತ್ಮಚಿಂತನದಿಂದ ಶಾಂತಿ ಸಿಗಲಿದೆ. ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮೈಯ್ಯಲ್ಲ ಕಣ್ಣಿದ್ದರೂ ನಿಮಗೆ ವಂಚಿಸುವವರು ಇರುವರು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.
ಮೀನ ರಾಶಿ: :ಜವಾಬ್ದಾರಿಯಿಂದ ಜಾರಿಕೊಳ್ಳಲು ಆಗದು. ನಿಮ್ಮನ್ನು ಬಿಡರು. ಇಂದು ನಿಮಗೆ ವ್ಯಾಪಾರದಲ್ಲಿ ಅಂದುಕೊಂಡಷ್ಟು ಸಾಧಿಸಲಾಗದೇ ಬೇಸರವಾಗಬಹುದು. ಧನವು ವ್ಯಯವಾಗುವ ಬಗ್ಗೆ ನಿಮಗೆ ಅಸಮಾಧಾನವಿದ್ದು, ಅದನ್ನು ಸರಿಯಾದ ರೀತಿಯಲ್ಲಿ ವ್ಯಯವಾಗುವಂತೆ ನೋಡಿಕೊಳ್ಳಿ. ಹಣಕಾಸು ಸಂಬಂಧಿತ ವಿಷಯಗಳು ನಿಮ್ಮ ಗಮನಕ್ಕೆ ಬರುತ್ತವೆ. ಮಕ್ಕಳ ಸಾಧನೆ ಸಂತೋಷ ನೀಡಲಿದೆ. ಪ್ರೀತಿಯಲ್ಲಿ ಚಿಕ್ಕ ಚಿಕ್ಕ ವ್ಯತ್ಯಾಸಗಳನ್ನು ಸಮಾಧಾನದಿಂದ ಮುಗಿಸಿ. ಅನಗತ್ಯ ಚರ್ಚೆಗಳಿಗೆ ದೂರವಿರಿ. ಸಂಗಾತಿಯ ಜೊತೆ ಸುಂದರ ಕ್ಷಣವನ್ನು ಕಳೆಯಿರಿ. ಕಲಿತ ವಿದ್ಯೆಯ ಪ್ರದರ್ಶನಕ್ಕೆ ಅವಕಾಶವು ಸಿಗಲಿದೆ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ವ್ಯಾಪಾರದ ಆದಾಯಕ್ಕೆ ನಿಮ್ಮದೇ ತಂತ್ರವನ್ನು ಬಳಸುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ಕಾರ್ಯದಲ್ಲಿ ಶ್ರದ್ಧೆಯು ಕಡಿಮೆಯಾಗುವುದು. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು.
-ಲೋಹಿತ ಹೆಬ್ಬಾರ್ – 8762924271 (what’s app only)