Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು
ಇಂದಿನ ರಾಶಿ ಭವಿಷ್ಯ: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಚತುರ್ದಶೀ ತಿಥಿ ಶನಿವಾರ ಬೇಸರ ಪ್ರಯಾಣ, ನಿರುದ್ಯೋಗ ಚಿಂತೆ, ಅಸಹಿಷ್ಣುತೆ, ವ್ಯಾಪಾರ ವರ್ಧನೆ, ಗೌರವ, ಆರ್ಥಿಕ ಸಮಸ್ಯೆ ಇವೆಲ್ಲಾ ಈ ದಿನದ ವಿಶೇಷ.

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09-44 – 11:09, ಯಮಗಂಡ ಕಾಲ 13:59 – 15:25, ಗುಳಿಕ ಕಾಲ 06:54 – 08:18.
ಮೇಷ ರಾಶಿ: ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನೀವು ನೀಡುವ ಅಗೌರವವು ಪಶ್ಚಾತ್ತಾಪಕ್ಕೆ ಕಾರಣವಾಗಲಿದೆ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ಚು ಆಗುವುದು. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅವಶ್ಯಕತೆ ಇರುವಷ್ಟು ಬಳಸಿಕೊಂಡು, ಇನ್ನೊಬ್ಬರ ವಸ್ತುವನ್ನು ಹಿಂದಿರುಗಿಸುವಿರಿ.
ವೃಷಭ ರಾಶಿ: ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ನೀವು ಇಂದು ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ಕೆಲಸದಲ್ಲಿ ನೈಪುಣ್ಯತೆಯನ್ನು ಬೆಳೆಸಿಕೊಂಡಿರುವಿರಿ. ನಿಮಗೆ ಕೆಲವು ಪರೋಕ್ಷ ಮಾತುಗಳು ಅಭಿಮಾನಕ್ಕೆ ಭಂಗ ತರಬಹುದು. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ವಿನಯದಿಂದ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳಬಹುದು.
ಮಿಥುನ ರಾಶಿ: ಇಂದಿನ ವರ್ತನೆಯು ಊಹಾತೀತವಾಗಿರುವುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ನಿಮ್ಮ ಮನೆಯ ವಾತಾವರಣವು ಅನೇಕ ದಿನಗಳ ಅನಂತರ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ಎಲ್ಲ ಕಡೆಗಳಲ್ಲಿ ತಾರತಮ್ಯ ತೋರುವುದು ಬೇಡ. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟಕೊಳ್ಳಿ.
ಕರ್ಕಾಟಕ ರಾಶಿ: ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ನಂಬಿಕೆ ಬಾರದ ಕಡೆ ವ್ಯವಹಾರವನ್ನು ಮುಂದುವರಿಸುವುದು ಬೇಡ. ಧನವ್ಯಯವಾದರೂ ದೊಡ್ಡ ಸಮಸ್ಯೆ ಆಗುವುದಿಲ್ಲ. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು.
ಸಿಂಹ ರಾಶಿ: ಯಾರನ್ನೂ ಕೊಂಡುಕೊಳ್ಳಲಾಗದು, ಇನ್ನೊಬ್ಬರಿಗೆ ಕೊಟ್ಟುಕೊಂಡರೆ ಕೆಲಸ ಸಲೀಸು. ಆರ್ಥಿಕತೆಯಿಂದ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು. ಇಂದು ನಿಮಗೆ ವ್ಯಕ್ತಿಗಿಂತ ಕೆಲಸವೇ ಮುಖ್ಯವಾಗುವುದು. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಬರುವ ಆದಾಯವನ್ನು ಜಾಣ್ಮೆಯಿಂದ ಬಳಸಿಕೊಳ್ಳುವಿರಿ. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ.
ಕನ್ಯಾ ರಾಶಿ: ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭ ಗಳಿಸುವಿರಿ. ಯಾರಿಗೂ ನೋವಾಗಂದಂತೆ ಇರುವುದು ಸುಲಭವಲ್ಲ. ಸಂಗಾತಿಯ ಬಯಕೆಯನ್ನು ಪೂರ್ಣವಾಗಿಸುವಿರಿ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ.
ತುಲಾ ರಾಶಿ: ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸುವಿರಿ. ಸಂತೋಷವನ್ನು ಇನ್ನೊಂದರಲ್ಲಿ ಹುಡುಕುವುದಕ್ಕಿಂತ ನಿಮ್ಮೊಳಗೆ ಇದೆಯೇ ಎಂದು ಭಾವಿಸಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು.
ವೃಶ್ಚಿಕ ರಾಶಿ: ಪ್ರೇಮಿಗಳು ಇಂದು ಸ್ವತಂತ್ರವಾಗಿ ಇರಲು ಆಸೆಪಡುವರು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ವರ್ಚಸ್ಸು ಅಧಿಕವಾದಷ್ಟೂ ಅಪಾಯವೇ ನಿಮಗೆ. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು.
ಧನು ರಾಶಿ: ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸುವ ಅಗತ್ಯವಿದೆ. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು. ಆಕಸ್ಮಿಕವಾಗಿ ಉದ್ಯೋಗವು ನಿಮ್ಮ ಪಾಲಿಗೆ ಬರುವುದು. ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ಇಂದಿನ ನಿಮ್ಮ ಉತ್ಸಾಹವು ಸಮಾರಂಭಗಳಲ್ಲಿ ಸಂತೋಷದಿಂದ ಭಾಗವಿಸುವಂತೆ ಮಾಡುವುದು.
ಮಕರ ರಾಶಿ: ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಅತಿಯಾದ ನಿರೀಕ್ಷೆಯನ್ನು ಇಟ್ಟು ಕಾರ್ಯ ಮಾಡುವುದು ಬೇಡ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ.
ಕುಂಭ ರಾಶಿ: ಅಂತಸ್ತಿನ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ.
ಮೀನ ರಾಶಿ: ಉದ್ಯಮದಲ್ಲಿ ಬರುವ ದಾಖಲೆಗಳ ಸಮಸ್ಯೆಯೂ ದೂರಾಗುವುದು. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯವು ಸುಸ್ಥಿರವಾಗಿದ್ದು ಇಂದು ಅನುಕೂಲವೇ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದದಿಂದ ಬೇಸರ ಇರಲಿದೆ.
ಲೋಹಿತ ಹೆಬ್ಬಾರ್ -8762924271 (what’s app only)
