Horoscope Today 18 June: ಈ ರಾಶಿಯವರು ತಮಗೆ ಅನುಕೂಲವಾಗುವಂತೆ ಮಾತನಾಡಿ ಗೆಲ್ಲುವರು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಬುಧವಾರ ಸಂಗಾತಿಯಿಂದ ಬೇಸರ, ದುರಭ್ಯಾಸದಿಂದ ದೂರ, ಆರ್ಥಿಕ ಸಲಹೆಗೆ ಪ್ರಭಾವಿ ಭೇಟಿ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ – 06 : 05 am, ಸೂರ್ಯಾಸ್ತ – 07 : 02 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:34 – 14:11, ಯಮಘಂಡ ಕಾಲ 07:43 – 09:20, ಗುಳಿಕ ಕಾಲ 10:57 – 12:34
ಮೇಷ ರಾಶಿ: ಬಲದಿಂದ ವಶ ಕಷ್ಟವಾದರೆ ಭಾವದಿಂದ ಸಾಧ್ಯ. ಇಂದು ಮನೆಯ ಹಲವು ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗುವುದು. ಆದರೆ ನಿಮ್ಮ ಆರೋಗ್ಯವನ್ನೂ ನೀವು ಉಳಿಸಿಕೊಳ್ಳಬೇಕಾಗುವುದು. ನಿಮ್ಮ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು. ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ತಿಳಿವಳಿಕೆ ಇಲ್ಲದ ಕೆಲಸದಲ್ಲಿ ಜಾಗರೂಕತೆಯಿಂದ ಹೆಜ್ಜೆ ಇಡಿ. ವಾಹನವನ್ನು ಖರೀದಿಸುವಾಗ ಅವಶ್ಯಕತೆಯ ಬಗ್ಗೆ ಅರಿವಿರಲಿ. ನಂಬಿದವರಿಗೆ ಭರವಸೆಯ ಮಾತನ್ನಾದರೂ ಕೊಡಿ. ಕೂಲಂಕಷ ಅಧ್ಯಯನ ಮುಖ್ಯ. ಹಲವು ಸಂಗತಿಗಳು ಇಂದು ಸಂಗಾತಿಯ ಕಡೆಯಿಂದ ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಗೌಪ್ಯತೆಯ ವಿಚಾರದಲ್ಲಿ ಮೆಚ್ಚುಗೆ.
ವೃಷಭ ರಾಶಿ: ಹೇಳಿದ್ದಷ್ಟನ್ನೇ ಮಾಡಿದರೆ ಎಲ್ಲಿಗೂ ಹೋಗಲಾರಿರಿ. ಇಂದು ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ನಿಮಗೆ ಬಾಣಲಿಯಿಂದ ಬೆಂಕಿಗೆ ಬಿದ್ದ ಅನುಭವವಾಗಬಹುದು. ಮನಸ್ಸು ಒಂದು ಕಡೆ ನಿಲ್ಲದೇ ಓಡಾಡುವುದು. ಕಳೆದುಕೊಂಡದ್ದನ್ನು ಪಡೆಯುವ ಹಠವಿರುವುದು. ಅದು ನಿಮ್ಮ ವ್ಯಕ್ತಿತ್ವವನ್ನೂ ತೋರಿಸುವುದು. ಪ್ರೀತಿಸುವವರನ್ನು ಮುಕ್ತವಾಗಿ ಬಿಡುವಿರಿ. ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಕೆಟ್ಟ ಕನಸು ನಿಮ್ಮ ಚಿಂತಿತರನ್ನಾಗಿ ಮಾಡುವುದು. ನೀವಿಂದು ಕಷ್ಟದ ಕೆಲಸವನ್ನು ಸುಲಭವಾಗಿ ಮಾಡುವ ವಿಧಾನವನ್ನು ಹುಡುಕುವಿರಿ.ಮನೆಯಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಹುಡುಗಾಟ ಬುದ್ಧಿಯನ್ನು ಕಡಿಮೆ ಮಾಡುವುದು ಒಳ್ಳೆಯದು. ಉದ್ಯೋಗದಲ್ಲಿ ನೀವು ಸಡಿಲಾಗುವುದು ಬೇಡ. ನಿಮ್ಮ ಸ್ಥಾನವನ್ನು ಬಿಡುವುದು ಬೇಡ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ.
ಮಿಥುನ ರಾಶಿ: ನಿಮ್ಮ ಬಗ್ಗೆ ಇತರರು ಅಧ್ಯಯನ ಮಾಡಬಹುದು. ಇಂದು ನಿಮ್ಮ ಮನಸ್ಸಿಗೆ ಬೇಕಾದ ವಿಶ್ರಾಂತಿಗೆ ಸ್ಥಳದ ಅನ್ವೇಷಣೆ ಮಾಡುವಿರಿ. ನಿಮ್ಮ ಮಗುವಿನ ಬಗ್ಗೆ ನೀವು ಹೆಮ್ಮೆಪಡುತ್ತೀರಿ. ನೀವು ಕೆಲವು ನಷ್ಟಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಐತಿಹಾಸಿಕ ದೇವಾಲಯವನ್ನು ನೋಡುವ ಹಂಬಲವಿರುವುದು. ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಲಿದೆ. ಅತಿಯಾದರೆ ಅಮೃತವೂ ವಿಷ. ದುರಭ್ಯಾಸವು ಗೊತ್ತಾಗದಂತೆ ನಿಮಗೆ ಬರಲಿದೆ. ಬಿಡಿಸಲು ಮನೆಯವರ ಪ್ರಯತ್ನ ಮಾಡುವರು. ಅಹಂಕಾರದಿಂದ ಮುಗ್ಗರಿಸಿ ಬೀಳುವಿರಿ. ನೀವು ನಿಮ್ಮ ಬಗ್ಗೆ ಮಾಡಿಕೊಳ್ಳುವ ಸಮರ್ಥನೆಯು ಅಹಂಕಾರವೆನಿಸುವುದು. ಮಂದಗತಿಯಲ್ಲಿ ಸಾಗುವ ಜೀವನ ಎಂದು ಮೂದಲಿಸದೇ ಖುಷಿಯಿಂದ ಮುನ್ನಡೆಯಿರಿ. ಸಂತೋಷವು ಸಿಗಲಿದೆ. ಅಸಾಧ್ಯವಾದ ಕಾರ್ಯವನ್ನು ಮಾಡಿ ಸಮಯವನ್ನು ವ್ಯರ್ಥ ಮಾಡುವುದು ಬೇಡ. ಶರೀರಪೀಡೆಯನ್ನು ನೀವು ಅನುಭವಿಸುವುದು ಕಷ್ಡವಾಗಬಹುದು. ಎಲ್ಲ ಕಾರ್ಯಗಳನ್ನು ಭಯದಿಂದ ಮಾಡುವಿರಿ.
ಕರ್ಕಾಟಕ ರಾಶಿ: ಮಕ್ಕಳಿಗೆ ಬೇಕೆಸಿನಿಸಿದ್ದನ್ನು ಕೂಡಲೆ ಕೊಡಲು ಹೋಗುವಿರಿ. ಇಂದು ನಿಮ್ಮ ಅಸತ್ಯದ ಮಾತು ಎಲ್ಲರಿಗೂ ತಿಳಿಯುವುದು. ಯಾರನ್ನೂ ಅವಲಂಬಿಸಬೇಕು ಅನ್ನಿಸದು. ನೀವು ಹಣಕಾಸಿನ ಲಾಭವನ್ನು ಆನಂದಿಸುವ ಸಾಧ್ಯತೆ ಇದೆದೆ. ಹುಟ್ಟಿನಿಂದ ಬಂದ ಸ್ವಭಾವವನ್ನು ತಿದ್ದಲಾಗದು. ಸಮಯವನ್ನು ತಿನ್ನುವವರಿಗೆ ಸಿಗದೇ ಇದ್ದರೆ ಒಳ್ಳೆಯದು. ಮನೆಯಲ್ಲಿ ನಿಮ್ಮ ಸ್ವಭಾವವನ್ನು ತಿದ್ದಲು ಪ್ರಯತ್ನಿಸುವರು. ಮಕ್ಕಳು ನಿಮ್ಮನ್ನು ಅತಿಯಾಗಿ ಹಚ್ಚಿಕೊಳ್ಳುವರು. ತುರ್ತು ನಿರ್ಧಾರವನ್ನು ತೆಗೆದುಕೊಳ್ಳುವುದು ಅಪಾಯಕಾರಿ. ಅತಿ ಪರಿಚಯವು ನಿಮಗೆ ಮುಳುವಾಗಬಹುದು. ಅನಾರೋಗ್ಯವು ನಿಮಗೆ ಅಭ್ಯಾಸವಾಗಿದ್ದರೂ ಗುಣಪಡಿಸಿಕೊಳ್ಳುವುದು ಉತ್ತಮ. ಓದುವ ಸಮಯವನ್ನು ಓದಲೆಂದೇ ಮೀಸಲಿಡಿ. ಅವಕಾಶಗಳಿಗೆ ಕಾಯಬೇಡಿ. ಮಾಡಬೇಕು ಎಂದು ಅನ್ನಿಸಿದ್ದನ್ನು ಮಾಡಿಮುಗಿಸಿ. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು. ಸಕಾರಾತ್ಮಕವಾಗಿ ಸ್ವೀಕರಿಸಿ ಮುಂದೆ ಸಾಗಿ.
ಸಿಂಹ ರಾಶಿ: ನೀವು ಕಳಿಸಿದ ವಸ್ತು ಮತ್ತಾರನ್ನೋ ತಲುಪುವುದು. ಭಾಗ್ಯವನ್ನು ಇಂದು ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಭಯದಿಂದ ಹಿಂಜರಿಯುವಿರಿ. ಸಮಯ ಮುಂದುವರೆದಂತೆ ನಿಮ್ಮ ಆಲೋಚನೆಗಳನ್ನು ಅಳವಡಿಸಿಕೊಳ್ಳುವುದು ಯಶಸ್ಸಿಗೆ ಕಾರಣವಾಗುತ್ತದೆ. ಹೊಸವಾಹನ ಖರೀದಿಗೆ ಮನಸ್ಸು ಮಾಡಿದರೆ ಸ್ವಲ್ಪ ಮುಂದೂಡುವುದು ಉಚಿತ. ಯಾರಿಗೂ ತಿಳಿಸದೇ ಎಲ್ಲಿಗೋ ಹೋಗುವಿರಿ. ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಸಮಾರಂಭದಲ್ಲಿ ಮುಖ್ಯಸ್ಥಾನವನ್ನು ಪಡೆಯುವಿರಿ. ಅಪವಾದಗಳನ್ನು ಕೇಳುವ ಸ್ಥಿತಿಯೂ ಬರಬಹುದು. ಮನಸ್ಸಿನಲ್ಲಿ ದೃಢತೆ ಇರಲಿ. ಅನುಭವಿಸುವುದನ್ನು ತಪ್ಪಿಸಲಾಗದು. ಇಂದು ಅನಿವಾರ್ಯವೊಂದು ಒದಗಿ ಬಂದಾಗ ಇದನ್ನು ಮೊದಲೇ ಕಲಿಯಬೇಕಿತ್ತು ಎಂದನ್ನಿಸುವುದು. ನಿಮಗೆ ಕೊಟ್ಟ ಹುದ್ದೆಯನ್ನು ನಿರ್ವಹಿಸುವಾಗ ಅದರ ಭಾರವೆಷ್ಟು ಎಂದು ಅರಿಯಿರಿ. ನಿಮ್ಮನ್ನು ಅಳೆಯುತ್ತಿರುವರು ಎಂಬುದನ್ನು ಗಮನಿಸಿ. ಬಹಳ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವಿರಿ. ಮನಸ್ಸು ಇಂದು ಒಂದೆಡೆ ಕುಳಿತುಕೊಳ್ಳಲು ಬಿಡದು.
ಕನ್ಯಾ ರಾಶಿ: ತಾಳ್ಮೆ ಇದ್ದರೆ ಏನನ್ನೂ ಪಡೆಯಬಹುದು. ನೀವು ಹೂಡಿಕೆಯನ್ನು ಗೌಪ್ಯವಾಗಿ ಇಡಲಾಗದು. ಅನಂತರ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಬಿಡುವಿನ ವೇಳೆಯನ್ನು ಸ್ವಯಂ ಸೇವಕರಾಗಿ ಅಥವಾ ಇತರರಿಗೆ ಸಹಾಯ ಮಾಡಲು ಕಳೆಯಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದ್ದು ನಿಮಗೆ ಅಚ್ಚರಿಯಾಗಬಹುದು. ನಿಮ್ಮ ಮಾತು ಕೇಳುವುದಿಲ್ಲ ಎಂದೆನಿಸುವುದು. ಸದ್ಯ ಗ್ರಹಗತಿಗಳ ಬದಲಾವಣೆಯಿಂದ ಇದು ಸಾಧ್ಯವಾಗಿದೆ. ಅದನ್ನು ದುರುಪಯೋಗಪಡಿಸಿಕೊಳ್ಳಬೇಡಿ. ಇನ್ನೊಬ್ಬರ ವಿಷಯಕ್ಕೆ ಮೂಗು ತೂರಿಸಲು ಹೋಗದೇ ನಿಮ್ಮ ಕಾರ್ಯದಲ್ಲಿ ಮಗ್ನರಾಗಿರಿ. ಆಘಾತದ ಸ್ಥಿತಿಯನ್ನೂ ಎದುರಿಸಬೇಕಾಗುವುದು. ಕಂಡಿದ್ದನ್ನು ಮಾತ್ರ ಸತ್ಯವೆಂದು ನಂಬಬೇಡಿ. ಸಮಯ ಸರಿದಾಗ ಎಲ್ಲವೂ ಅರಿವಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು.
ತುಲಾ ರಾಶಿ: ತಾನಾಗಿಯೇ ಬಂದ ಭೂಮಿಯ ಅವಕಾಶವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಿ. ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಇಂದು ಕಸಿದುಕೊಳ್ಳಬಹುದು. ವಾಹನದ ಖರೀಗೆ ಸಾಲ ಮಾಡಬೇಕಾಗುವುದು. ಮಕ್ಕಳಿಗೆ ಹೆಚ್ಚಿನ ಗಮನವನ್ನು ಕೊಡಬೇಕಾಗುವುದು. ಪುಣ್ಯಸ್ಥಳಕ್ಕೆ ಹೊರಟ ನಊರಿಂದ ಊರಿಗೆ ವರ್ಗಾವಣೆಯಾಗುತ್ತಿರುವುದಕ್ಕೆ ಬೇಸರ ಮಾಡಿಕೊಳ್ಳುವಿರಿ. ಅದಕ್ಕೆ ನಿಮ್ಮ ಸ್ನೇಹಿತರು ಸಮಾಧಾನವನ್ನು ಮಾಡುವುದು ಬಿಟ್ಟು ಸೊಪ್ಪು ಹಾಕುವರು. ಎಷ್ಟೋ ದಿನದ ಹಿಂದೆ ಹೊಸ ವಸ್ತುಗಳನ್ನು ಖರೀದಿಸಿದ್ದು ಇಂದು ನಿಮಗೆ ನೆನಪಾಗುವುದು. ಆರೋಗ್ಯದ ಕಡೆ ಹೆಚ್ಚು ಗಮನವಹಿಸುವ ಅಗತ್ಯವಿದೆ. ದಿನಚರಿಯನ್ನು ಸರಿಮಾಡಿಕೊಳ್ಳಿ. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಇಷ್ಟಪಟ್ಟ ವಸ್ತುವನ್ನು ಪಡೆಯಲು ಹಣದ ಅಭಾವವು ಕಾಣಿಸಬಹುದು.
ವೃಶ್ಚಿಕ ರಾಶಿ: ದ್ವಿಚಕ್ರ ವಾಹನ ಸವಾರಿ ದುಸ್ತರವಾದರೆ ವಿಶ್ರಾಂತಿ ಪಡೆಯಿರಿ. ಇನ್ಮೊಬ್ಬರ ಮಾತಿಗೆ ಛಲ ತೋರಿಸುವುದು ಬೇಡ. ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ನಿಮಗೆ ಸಿಗಲಿದೆ. ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಹುಣ್ಣನ್ನು ಕೆದಕಿದಷ್ಟೂ ಅದು ದೊಡ್ಡ ಗಾಯವಾಗುವುದು. ಮಾತನಾಡದೇ ಸುಮ್ಮನಿರಿ. ತಾನಾಗಿಯೇ ತಣ್ಣಗಾಗುವುದು. ಯೋಜನೆಯಿಲ್ಲದೇ ಖರ್ಚನ್ನು ಹೆಚ್ಚು ಮಾಡಿಕೊಳ್ಳುವಿರಿ. ಅಸಂಭಾವ್ಯ ವಿಚಾರವನ್ನು ಸಂಭಾವ್ಯ ಮಾಡಿಕೊಂಡು ಹತಾಶರಾಗುವಿರಿ. ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದಿಕೆಯಾಗಲಿದೆ. ಖರ್ಚನ್ನು ತಡೆಗಟ್ಟುವ ಸೂತ್ರವನ್ನು ಕಂಡುಕೊಳ್ಳಿ. ಮನಸ್ಸು ಹೇಳಿದಂತೆ ಕೇಳದೇ ಸಮಾಧಾನದಿಂದ ಇರಿ. ನಿಮಗೆ ಅವಶ್ಯಕತೆ ಇರುವ ಮಾಹಿತಿಯನ್ನು ಸರಿಯಾದ ಕಡೆಯಿಂದ ಪಡೆದುಕೊಳ್ಳಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.
ಧನು ರಾಶಿ: ತಪ್ಪಿಹೋದ ಸಂಬಂಧವನ್ನು ಮತ್ತೆ ಜೋಡಿಸುವ ಪ್ರಯತ್ನ ಮಾಡುವಿರಿ. ಇಂದು ಸಹಾಯ ಮಾಡುವ ನಿಮ್ಮ ನಿರಂತರ ಅಭ್ಯಾಸಕ್ಕೆ ನಿಮಗೆ ದಣಿವಾಗಬಹುದು. ದುರಭ್ಯಾಸದ ಜನರ ಸಹವಾಸ ಇರುವುದು. ಒಳ್ಳೆಯ ಕಾಲ ಬರುವುದೆಂದು ಕಾದು ಕುಳಿತರೆ ಪ್ರಯೋಜನವಿಲ್ಲ. ಅಗ್ನಿಯ ಭಯದಿಂದ ಏನನ್ನೂ ಮಾಡಲು ಬೆಚ್ಚುವಿರಿ. ನಿಮ್ಮ ಕೆಲಸವನ್ನು ನೀವು ಮಾಡಿ. ಕಾಲ ಬಂದಾಗ ಅದು ಮಾಡಬೇಕಾದುದನ್ನು ಮಾಡುತ್ತದೆ. ಮಕ್ಕಳ ಭವಿಷ್ಯವು ಚೆನ್ನಾಗಿರಲು ಅವರ ಹೆಸರಿನಲ್ಲಿ ಹೂಡಿಕೆ ಮಾಡುವಿರಿ. ಮಕ್ಕಳ ವಿಚಾರದಲ್ಲಿ ತಾರತಮ್ಯವನ್ನು ತೋರಿಸಿ ಅವರ ಬಾಯಿಗೆ ಸಿಗುವಿರಿ. ನಿಮ್ಮ ಯೋಜನೆಗೆ ಸ್ನೇಹಿತ ಬಳಗ ಸಹಾಯ ಮಾಡುವುದು. ಭೂಮಿಗೆ ಸಂಬಂಧಿಸಿದ ಉದ್ಯೋಗವನ್ನು ಆರಂಭ ಮಾಡಬೇಡಿ. ಇರುವ ಉದ್ಯೋಗವು ಯಥಾಸ್ಥಿತಿಯಲ್ಲಿ ಇರಲಿ. ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸೋಲುವಿರಿ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು.
ಮಕರ ರಾಶಿ: ಕೆಲವು ಭೇಟಿಗಳು ಅನಿರೀಕ್ಷಿತವಾಗಿ ಸಂಧಿಸುವುವು. ನೀವು ಇಂದು ಅನಗತ್ಯ ವಾದಗಳಿಗೆ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುವದರ ಜೊತೆ ಹೆಸರೂ ಹಾಳಾಗುವುದು. ಹೆಚ್ಚುವರಿ ಆದಾಯವನ್ನು ಗಳಿಸಲು ನಿಮ್ಮ ಕ್ರೀಯಾಶೀಲತೆ ಅಗತ್ಯವಾಗಿ ಬೇಕು. ಹಿರಿಯರ ಸೇವೆಯನ್ನು ಬಲವಾದ ಕಾರಣವಿಲ್ಲದೇ ಮಾಡಲಾರಿರಿ. ಭೂಮಿಯ ವ್ಯವಹಾರವನ್ನು ಸದ್ಯ ಮುಂದುವರಿಸಬೇಡಿ. ನ್ಯಾಯಾಲಯದ ಮೆಟ್ಟಿಲೇರಿದ ದೂರು ಇಂದು ಇತ್ಯರ್ಥವಾದೀತು. ಕಲೆಗಳಲ್ಲಿ ಆಸಕ್ತಿ ಇಲ್ಲದೇ ನೀರಸವಾಗಿ ಇರುವಿರಿ. ಉದ್ಯೋಗದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಬಹುದು. ದಾಂಪತ್ಯದ ಉತ್ತಮ ಹಾಗೂ ಖುಷಿಯ ದಿನವನ್ನು ಅನುಭವಿಸುವಿರಿ. ಅಪರಿತರು ನಿಮಗೆ ಸಹಾಯವನ್ನು ಮಾಡಲು ಬಂದರೆ ನೀವು ಅದನ್ನು ಸ್ವೀಕರಿಸುವುದಿಲ್ಲ. ಕೆಲಸಗಳು ಕೈಗೂಡುವುದು ಎಂಬ ಆಸೆ ಇರಲಿದೆ. ಕಛೇರಿಯಲ್ಲಿ ಗೌರವ ಸಿಗಲಿದೆ. ಎಂದೂ ನಂಬದವರ ಮಾತನ್ನು ನೀವು ಇಂದು ನಂಬಬೇಕಾಗುವುದು. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು. ಇಂದು ಪರಿಶ್ರಮವಿದ್ದರೂ ಫಲವು ಅಲ್ಪವಿರಲಿದೆ.
ಕುಂಭ ರಾಶಿ: ನಿಮ್ಮದಲ್ಲದ ತಪ್ಪನ್ನು ಒಪ್ಪಿಕೊಳ್ಳುವಿರಿ, ಮಾತ್ರವಲ್ಲ ಅದಕ್ಕೆ ಸಕಾರಣವನ್ನೂ ನೀವೇ ಊಹೆ ಮಾಡಿ ಸಮಾಧಾನ ಮಾಡಿಕೊಳ್ಳುವಿರಿ. ಇಂದು ನಿಮ್ಮ ಉದಾರತೆಯು ಖರ್ಚಿನಿಂದ ಆರಂಭವಾಗುವುದು. ಮನೆಗೆ ಅತಿಥಿಗಳ ಆಗಮನವು ಹೊಸ ಹೊಳಪು ಕೊಡುವುದು. ಗೆಲುವು ಸಣ್ಣದಾದರೂ ಸಂಭ್ರಮ ಮಾತ್ರ ದೊಡ್ಡದಾಗಿರುವುದು. ಮೇಲಧಿಕಾರಿಗಳ ವರ್ತನೆಯಿಂದ ಉದ್ಯೋಗವನ್ನು ಬಿಡುವ ಯೋಚನೆ ಮಾಡುವಿರಿ ಮತ್ತು ಮುಂದಿನ ವೃತ್ತಿಜೀವನದ ಬಗ್ಗೆ ಗೊಂದಲವೂ ಇರಬಹುದು. ಮಿತ್ರರ ಸಹಾಯದಿಂದ ಬಂದೊದಗಿದ ಅಪಾಯವನ್ನು ದೂರಮಾಡಿಕೊಳ್ಳುವಿರಿ. ಅವಿಶ್ರಾಂತ ಕೆಲಸವು ನಿಮಗೆ ಆಯಾಸವನ್ನು ನೀಡುವುದು. ಆರೋಗ್ಯದಲ್ಲಿ ವ್ಯತ್ಯವಾಗಬಹುದು. ಬಂಧುಗಳು ನಿಮ್ಮನ್ನು ಆಡಿಕೊಳ್ಳುವರು. ಆಲಸ್ಯದಿಂದ ಕೆಲಸವು ಹಿಂದೆ ಬೀಳುವುದು. ಇಂದು ನಡೆದ ಅಹಿತಕರ ಘಟನೆಯನ್ನು ಕೆಟ್ಟ ಘಳಿಗೆ ಎಂದು ಮರೆತುಬಿಡಿ. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಚುಚ್ಚಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಮೊದಲ ಬಾರಿ ನಿಷ್ಠುರದ ಮಾತನಾಡಿ ಪಶ್ಚಾತ್ತಾಪಗೊಳ್ಳುವಿರಿ.
ಮೀನ ರಾಶಿ: ನಿಮ್ಮ ಮನಸ್ಸಿಗೆ ಆಗದೇ ಇರುವ ಸಂಗತಿಗಳು ತಾನಾಗಿಯೇ ಗೊತ್ತಾಗಲಿದೆ. ಸೂಕ್ಷ್ಮತೆಯ ಮೂಲಕ ಅದರಿಂದ ದೂರವಿರಿ. ಇಂದು ನಿಮ್ಮ ಸಂತೋಷದ ಕ್ಷಣಗಳನ್ನು ನೀವೇ ಸೃಷ್ಟಿಸಿಕೊಳ್ಳುವಿರಿ. ಮನೆಯಲ್ಲಿ ನಿಮ್ಮ ಮಕ್ಕಳು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲಾರರು. ಅನುರೂಪ ಸಂಗಾತಿಯ ಭೇಟಿ ಮಾಡುವಿರಿ. ಆದರೆ ಅದು ನಿಮಗೆ ಗೊತ್ತಾಗದು. ಕುಟುಂಬದ ಹಿರಿಯರಿಗೆ ನೀಡಬೇಕಾದ ಗೌರವವನ್ನು ನೀಡಿ. ನಿರಂತರವಾಗಿ ನಡೆಸಿಕೊಂಡುಬಂದ ಉದ್ಯಮದಿಂದ ಲಾಭವಾಗುವುದು. ಆರೋಗ್ಯವನ್ನು ನಿಮ್ಮ ಕೈಯ್ಯಾರೆ ಹಾಳು ಮಾಡಿಕೊಳ್ಳುವಿರಿ. ಯೋಗ್ಯವಾದ ಔಷಧೋಪಚಾರವು ಸಿಗುವುದು. ನಿದ್ರಾಹೀನತೆಯಿಂದ ಬಳಲುತ್ತಿದ್ದು ವಾತಾವರಣವು ನಿಮ್ಮ ನಿದ್ರೆಗೆ ಪೂರಕವಾಗಿರದೇ ಇರುವುದು ಕಾರಣವಾಗಿದೆ. ಕುಟುಂಬದಿಂದ ನಿರೀಕ್ಷಿಸುವ ವಸ್ತುವು ನಿಮಗೆ ಸಿಗಲಿದೆ. ನಿಮ್ಮ ಯಶಸ್ಸನ್ನು ಕಂಡು ಅಸೂಯೆ ಪಡುವರು. ಕೋಪವನ್ನು ಮಾಡುವ ಸಂದರ್ಭವು ಎದರಾಗಲಿದ್ದು, ನಿಮ್ಮ ನಿಯಂತ್ರಣದಲ್ಲಿ ಇರಲಿ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು.
-ಲೋಹಿತ ಹೆಬ್ಬಾರ್ – 8762924271 (what’s app only)




