ಹಣಕಾಸು ಸಂಬಂಧಿತ ನ್ಯಾಯಾಲಯದ ವಿಚಾರದಲ್ಲಿ ನೀವು ಲಾಭ ಗಳಿಸಬಹುದು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ, ಮಂಗಳವಾರ ಉಪದೇಶಕ್ಕೆ ಉದ್ದೇಶ, ವ್ಯಾಪಾರಕ್ಕೆ ವಿದೇಶ, ಹಿರಿಯರಿಂದ ಸಂದೇಶ, ಉದ್ಯೋಗಕ್ಕೆ ಪ್ರವೇಶ, ಮಾತಿನಲ್ಲಿ ಆವೇಶ ಎಲ್ಲವೂ ಇರವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಅತಿಗಂಡ, ಕರಣ: ಚತುಷ್ಪಾತ್, ಸೂರ್ಯೋದಯ – 06 : 04 am, ಸೂರ್ಯಾಸ್ತ – 06 : 55 pm, ಇಂದಿನ ಶುಭಾಶುಭಕಾಲ: ರಾಹು ಕಾಲ 15:43 – 17:19, ಯಮಘಂಡ ಕಾಲ 09:17 – 10:53, ಗುಳಿಕ ಕಾಲ 12:30 – 14:06
ತುಲಾ ರಾಶಿ: ನೆಮ್ಮದಿಯನ್ನು ಕೊಡುವವರೇ ಅದನ್ನು ಹಾಳುಮಾಡಿಕೊಂಡಂತಾಗುತ್ತದೆ. ನೀವು ಇಂದು ಉದ್ಯೋಗದ ಸ್ಥಳದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ಹೊಸ ಹೂಡಿಕೆ ಯೋಜನೆಗಳ ಕುರಿತು ಅಧ್ಯಯನ ಮಾಡಿ ನಂತರ ನಿರ್ಧಾರ ಕೈಗೊಳ್ಳಿ. ಕುಟುಂಬದೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಪ್ರಾಮಾಣಿಕತೆ ಮತ್ತು ಶ್ರದ್ಧೆಯಿಂದ ನಿಮ್ಮ ಕೌಶಲ್ಯ ಗುರುತಿಸಲ್ಪಡುತ್ತದೆ. ಉದ್ಯೋಗವನ್ನು ಬದಲಿಸುವ ನಿರೀಕ್ಷೆಯಲ್ಲಿರುವಿರಿ. ಸರಳ ಸಮಾರಂಭದಲ್ಲಿ ಭಾಗಿಯಾಗಬಹುದು. ಸಮಯವನ್ನು ದುರುಪಯೋಗ ಮಾಡಿಕೊಳ್ಳಿದ್ದೀರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು. ದಾಂಪತ್ಯದಲ್ಲಿ ಮುಸುಕಿನ ಸಮರ ನಡೆಯುತ್ತಿರುವುದು.
ವೃಶ್ಚಿಕ ರಾಶಿ: ಮಕ್ಕಳಿಂದ ನಿಮಗೆ ಕಾಳಜಿ ಸಿಕ್ಕಿದ್ದು ಸಂತೋಷವಾಗುವುದು. ಬಲವಂತದ ಪ್ರೇಮವಾದರೆ ಅದು ತಪ್ಪಿಹೋಗಬಹುದು. ನಿಮಗಿಷ್ಟವಾದವರ ಜೊತೆ ನಿಮ್ಮ ವಿಹಾರ ಇರುವುದು. ಇಂದು ಬಾಯಿ ಚಪಲಕ್ಕೆ ಅಹಿತಕರಚಮವಾದ ಆಹಾರವನ್ನು ಸೇವಿಸುವಿರಿ. ಹಣದ ಕುರಿತು ಸಕಾಲಿಕ ನಿರ್ಧಾರ ಅಗತ್ಯ. ಒಗ್ಗಟ್ಟನ್ನು ಪ್ರದರ್ಶಿಸಲು ಹೋಗಿ ಎಡವಟ್ಟು ಮಾಡಿಕೊಳ್ಳುವಿರಿ. ಕುಟುಂಬದ ಒಗ್ಗಟ್ಟಿಗೆ ಬಲ ನೀಡುವ ಯತ್ನ ಮಾಡಿ. ಪ್ರೀತಿಯ ಸಂಬಂಧ ಹೆಚ್ಚು ಆಳವಾಗಬಹುದು. ಉದ್ಯೋಗದಲ್ಲಿ ಸ್ಪಷ್ಟ ದೃಷ್ಟಿಕೋನದಿಂದ ಯಶಸ್ಸು ಸಾಧ್ಯ. ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಿ. ಕಾನೂನಿನ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು. ಭಯದಿಂದ ಕೆಲಸ ಮಾಡಿಸಿಕೊಳ್ಳುವಿರಿ.
ಧನು ರಾಶಿ: ಯಾರ ಪ್ರಶಂಸೆಯನ್ನೂ ನೀವು ಸುಲಭವಾಗಿ ಒಪ್ಪಲಾರಿರಿ. ಎದುರಿಗೆ ಒಂದು ಹಿಂದೆ ಒಂದು ಮಾಡಿದವರನ್ನು ಮೆಚ್ಚಲಾರಿರಿ. ಇಂದು ವಿದ್ಯಾರ್ಥಿಗಳಿಗೆ ತಂದೆಯಿಂದ ಅಗತ್ಯವಿರುವ ಧನವು ಲಭ್ಯವಾಗಬಹುದು. ಅಧರ್ಮ ಮಾರ್ಗದಲ್ಲಿ ಹೋಗಲು ಯಾರದರೂ ಪ್ರೇರಣೆ ಕೊಡಬಹುದು. ಖರ್ಚು ಹೆಚ್ಚಾಗಬಹುದು. ಮಿತ್ರನ ಸಲಹೆಯಿಂದ ಹಣಕಾಸಿನ ಲಾಭ ಸಂಭವಿಸುತ್ತದೆ. ಮನೆಯವರು, ಮಕ್ಕಳೊಂದಿಗೆ ಕಾಲ ಕಳೆಯುವುದು ಮನಸ್ಸಿಗೆ ನೆಮ್ಮದಿ ನೀಡಲಿದೆ. ಅಂತರಂಗವು ಸರಿಯಾಗಿ ಇನ್ನೊಬ್ಬರಿಗೆ ತಿಳಿಯುವುದು. ನಿಮ್ಮ ಸ್ವಭಾವವು ಇತರರಿಗೆ ಇಷ್ಟವಾಗದೇ ಹೋಗಬಹುದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು. ಉನ್ನತ ವಿದ್ಯಾಭ್ಯಾಸಕ್ಕೆ ನಿಮ್ಮವರು ಸಲಹೆ ಕೊಡಬಹುದು. ನಿಮ್ಮ ಹಣವನ್ನು ಪರಿಚಿತರು ಕೇಳಬಹುದು. ಅಧಿಕಾರವು ಅಹಂಕಾರವಾಗಿ ಬದಲಾಗುವುದು ಬೇಡ. ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ಸರಿಯಾಗಿ ಪ್ರತಿಕ್ರಯಿಸಲು ನಿಮಗೆ ಬಾರದೇ ಇರುವುದು.
ಮಕರ ರಾಶಿ: ನಿಮ್ಮ ಲಾಭವನ್ನು ಮತ್ಯಾರೋ ನಿರೀಕ್ಷಿಸಿ, ನಿಮ್ಮಿಂದ ಹಣ ಪಡೆಯಬಹುದು. ನೀವು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳು ಮಾಡಿಕೊಳ್ಳುವಿರಿ. ಹಿರಿಯರ ಸಲಹೆಯನ್ನು ಪಡೆಯಿರಿ. ಸುಮ್ಮನೆ ಸ್ವಲ್ಪ ಹೊತ್ತು ಕುಳಿತುಕೊಳ್ಳಿ. ಮನಸ್ಸು ಶಾಂತವಾಗುವುದು. ಒತ್ತಡದಲ್ಲಿ ಸಿಲುಕಿಕೊಳ್ಳಬೇಡಿ. ನಡವಳಿಕೆಯಿಂದ ತೊಂದರೆ ಆಗಬಹುದು, ತಾಳ್ಮೆಯಿಂದ ಮುಂದುವರಿಯಿರಿ. ಹಣಕಾಸಿನ ವಿಚಾರದಲ್ಲಿ ಲಾಭದಾಯಕ ದಿನ. ಸಂಗಾತಿಯ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಿ. ನಿಮ್ಮ ಪ್ರತಿಭೆ ಗುರುತಿಸಲ್ಪಡುವ ದಿನವಾಗಬಹುದು. ಸುಂದರವಾದ ಜೀವನ ನಮ್ಮ ಪೂರ್ವಜರ ಪುಣ್ಯದ ಫಲವೆಂದು ಇಂದು ಆನ್ನಿಸಬಹುದು. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ಹಿತೈಷಿಗಳ ಸಹವಾಸದಿಂದ ಮನಸಿಗೆ ಸಂತಸ ಉಂಟಾಗುವುದು. ಹೊಸ ವ್ಯವಹಾರಕ್ಕೆ ಹಿಂದೇಟು ಮನಸ್ಸು ಹಾಕುವುದು. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು.
ಕುಂಭ ರಾಶಿ: ಅಭ್ಯಾಸವು ಮರೆತುಹೋಗುವ ಭಯವಿದೆ. ಇಂದು ಮನೆಯಿಂದ ದೂರವಿರುವ ನಿಮಗೆ ಮನೆಯ ನೆನಪಾಗುವುದು. ಎಂದೋ ಹೂಡಿದ ಹಣವು ಇಂದು ಉಪಯೋಗಕ್ಕೆ ಬರಲಿದೆ. ಹಣಕಾಸು ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗುತ್ತವೆ. ಧರ್ಮಾರ್ಥ ಕಾರ್ಯಗಳಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಪಡೆದ ಹಣವನ್ನು ಹಿಂದಿರುಗಿ ಪ್ರೀತಿಯ ವಿಷಯದಲ್ಲಿ ಹೊಸ ತಿರುವು ಸಾಧ್ಯ. ಉದ್ಯೋಗದಲ್ಲಿ ಉತ್ತಮ ಸಾಧನೆ ಸಾಧ್ಯವಿದೆ. ಮನಸ್ಸು ಹಗುರಾದೀತು. ಕಛೇರಿಯಲ್ಲಿ ನಿಮಗೆ ಹೊಸ ನಾಯಕ ಬರಬಹುದು. ಅವರನ ಜೊತೆ ನಿಮ್ಮ ವರ್ತನೆಯು ಆಪ್ತವಾಗಿ ಇರಲಿದೆ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು. ನೀವು ರುಚಿಕರವಾದ ಆಹಾರದಿಂದ ಸಂತೋಷಿಸುವಿರಿ. ಸಾಮಾಜಿಕ ಕಾರ್ಯಗಳಿಗೆ ಒತ್ತಡಗಳು ಇರಲಿದೆ.
ಮೀನ ರಾಶಿ: ನಿಮ್ಮ ಸ್ಥಿರತೆಗೆ ಯಾರಾದರೂ ಭಂಗ ತರಬಹುದು. ಇಂದು ನಿಮಗೆ ಎಲ್ಲ ಕಾರ್ಯದಲ್ಲಿಯೂ ಉತ್ಸಾಹ ಉತ್ಸಾಹವು ಕಡಿಮೆ ಇರುವುದು. ಯಾರ ಜೊತೆಗೂ ವಿವಾದವನ್ನು ಮಾಡಲು ಹೋಗಬೇಡಿ. ನಿಮ್ಮನ್ನು ಬಿಟ್ಟುಕೊಡಲು ಆಗದು. ಸೋಲನ್ನು ಒಪ್ಪಿಕೊಳ್ಳಲು ನಿಮಗೆ ಇಂದು ಆಗದು. ಹಣಕಾಸು ಸಂಬಂಧಿತ ನ್ಯಾಯಾಲಯದ ವಿಚಾರದಲ್ಲಿ ನೀವು ಲಾಭ ಗಳಿಸಬಹುದು. ಮಕ್ಕಳ ಸಾಧನೆ ನಿಮ್ಮಲ್ಲಿ ಹೆಮ್ಮೆ ಹುಟ್ಟಿಸುತ್ತದೆ. ಕೊರತೆಯಿಂದ ನಿರಾಶೆ ಉಂಟಾಗಬಹುದು, ಆದರೆ ಸಹನಯೇ ಗುರಿಯಾಗಿರಲಿ. ಆಕಸ್ಮಿಕವಾಗಿ ಬಂದ ವಾರ್ತೆಯು ನಿಮಗೆ ಖುಷಿಯನ್ನೂ ಬೇಸರವನ್ನೂ ತರಬಹುದು. ಆಪ್ತರ ಜೊತೆ ದೂರಪ್ರಯಾಣ ಮಾಡಲಿದ್ದೀರಿ. ವಿದ್ಯಾರ್ಥಿಗಳು ಓದಿನ ಕಡೆ ಗಮನಹರಿಸಬೇಕಿದೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ. ನಿಮ್ಮ ಕಷ್ಟವನ್ನು ಆಪ್ತರ ಜೊತೆ ಹಂಚಿಕೊಳ್ಳುವುದೂ ಕಷ್ಟವಾಗುವುದು.




