ಇಂದು ವಾಹನ ಖರೀದಿಯ ಆಸೆಯನ್ನು ಪೂರ್ಣ ಮಾಡಿಕೊಳ್ಳುವಿರಿ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ, ಮಂಗಳವಾರ ಉಪದೇಶಕ್ಕೆ ಉದ್ದೇಶ, ವ್ಯಾಪಾರಕ್ಕೆ ವಿದೇಶ, ಹಿರಿಯರಿಂದ ಸಂದೇಶ, ಉದ್ಯೋಗಕ್ಕೆ ಪ್ರವೇಶ, ಮಾತಿನಲ್ಲಿ ಆವೇಶ ಎಲ್ಲವೂ ಇರವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಅತಿಗಂಡ, ಕರಣ: ಚತುಷ್ಪಾತ್, ಸೂರ್ಯೋದಯ – 06 : 04 am, ಸೂರ್ಯಾಸ್ತ – 06 : 55 pm, ಇಂದಿನ ಶುಭಾಶುಭಕಾಲ: ರಾಹು ಕಾಲ 15:43 – 17:19, ಯಮಘಂಡ ಕಾಲ 09:17 – 10:53, ಗುಳಿಕ ಕಾಲ 12:30 – 14:06
ಮೇಷ ರಾಶಿ: ಹಳೆಯ ಗಾಯಕ್ಕೇ ಬರೆಬಿದ್ದರೆ ಗಾಯ ವಾಸಿಯಾಗದು. ಬೇರೆ ಹೂಡಿಕೆಯಲ್ಲಿ ನಿಮಗೆ ಆಸಕ್ತಿ ಹೆಚ್ಚಿರುವುದು. ನೀವು ಅಂದುಕೊಂಡ ರೀತಿಯಲ್ಲಿ ನಡೆಯದೇ ವಿರುದ್ಧವಾಗಿ ನಡೆಯುವುದನ್ನು ಕಂಡು ನಿರಾಸೆಗೊಳ್ಳುವಿರಿ. ಹಚ್ಚಲೇಬೇಕಿದ್ದರೆ ಹಣತೆಯನ್ನು ಕತ್ತಲಲ್ಲಿ ಹಚ್ಚಿ. ನಿಮಗೂ ಕೆಲವರಿಗೂ ಬೆಳಕಾದೀತು. ಹಣದ ಹೊಸ ಮಾರ್ಗಗಳು ಕಣ್ಮುಂದೆ ಬರುತ್ತವೆ, ಆದರೆ ನಿರ್ಧಾರಗಳ ಕಡೆ ಯತ್ನಪೂರ್ವಕವಾಗಿ ಸಾಗಬೇಕು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹ ಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ಬಹಳ ಕಾಲದ ಆಪ್ತನಿಂದ ವಿಶ್ವಾಸಘಾತಕವಾಗಿ ನೋವಾಗಲಿದೆ. ನಿಮ್ಮ ಆಶೀರ್ವಾದವನ್ನು ಪಡೆಯಲು ಮೊಮ್ಮಕ್ಕಳು ಬರಬಹುದು. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು.
ವೃಷಭ ರಾಶಿ: ನಿಮ್ಮ ನಡಿಗೆ ವಿಜಯದ ಕಡೆಗೆ ಇದೆಯೇ ಎಂಬುದನ್ನು ದೃಢಮಾಡಿ. ಯಾರದೋ ಮಾತಿಗೆ ದಾರಿತಪ್ಪುವ ಸಾಧ್ಯತೆ ಇದೆ. ಉದ್ದೇಶವಿಲ್ಲದವರಿಂದ ಉಪದೇಶ ಕೇಳಬೇಕಾಗುವುದು. ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು. ಒಮ್ಮೆಲೆ ಹತ್ತಾರು ವಿಚಾರಗಳಲ್ಲಿ ಆಸಕ್ತಿಯನ್ನು ಹೊಂದುವಿರಿ. ಮಹಿಳೆಯರಿಂದ ನಿಮಗೆ ವಿರೋಧವು ಬರಬಹುದು. ತುಂಬಾ ಭಾವುಕವಾಗಿ ಇರುವ ಕಾರಣದಿಂದ ನಿಮಗೆ ಕೆಲ ಸಂದರ್ಭಗಳಲ್ಲಿ ಕೋಪ ವಶವಾಗುವ ಸಾಧ್ಯತೆ ಇದೆ. ಹಣದ ವಿಚಾರದಲ್ಲಿ ನಿಮ್ಮ ನಿರ್ಧಾರಗಳು ನಿಖರವಾಗಿರಬೇಕಾಗಿದೆ. ಸಂಬಂಧಿಕರೊಂದಿಗೆ ನಿಮ್ಮ ನಡವಳಿಕೆಯಲ್ಲಿ ಸಹನೆ ಅಗತ್ಯ. ಎಂದೂ ಆಗದ ವಿಚಾರದಲ್ಲಿ ನಿಮಗೆ ಆಸಕ್ತಿ ಇರುವುದು. ಹೊರಗಡೆಗೆ ಊಟಕ್ಕೆ ಹೋಗಲಿದ್ದೀರಿ. ಸಂಪನ್ಮೂಲಗಳನ್ನು ರಕ್ಷಿಸಿಕೊಳ್ಳುವ ಪ್ರಯತ್ನ ಮಾಡುವಿರಿ. ಕುಟುಂಬದವರ ಜೊತೆ ಸಮಯವನ್ನು ಕಳೆಯುವಿರಿ. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ.
ಮಿಥುನ ರಾಶಿ: ಆಗುವುದನ್ನು ತಡೆಯಲಾಗದಮೇಲೆ ಚಿಂತೆ ಬೇಕಿಲ್ಲ. ಧೈರ್ಯವನ್ನಷ್ಟೇ ನಿಮ್ಮಕಡೆಯಿಂದ ಮಾಡಲು ಸಾಧ್ಯ. ನಿಮ್ಮ ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಇಂದು ವಾಹನದ ಸಮಯವು ವ್ಯತ್ಯಾಸವಾದ್ದರಿಂದ ನಡೆಯಬೇಕಾಗ ಸ್ಥಿತಿ ಬರಬಹುದು. ಹಣಕಾಸು ವ್ಯವಹಾರದಲ್ಲಿ ಸುಧಾರಣೆಯಾಗಲಿದೆ. ಹೆತ್ತವರ ಜೊತೆ ಬಾಂಧವ್ಯ ಗಟ್ಟಿ ಮಾಡಿಕೊಳ್ಳಿ. ಪ್ರೀತಿಯ ಪ್ರಭಾತವು ನಿಮ್ಮ ಜೀವನವನ್ನು ಬೆಳಗಿಸುತ್ತದೆ. ವೃತ್ತಿಪರ ಬದುಕಿನಲ್ಲಿ ಹೊಸ ಅವಕಾಶಗಳು ಸಿಗಬಹುದು. ಮೋಸದಿಂದ ನಿಮ್ಮ ಹಣವು ಕಳೆದುಹೋಗುವುದು. ನಿಮ್ಮ ಪ್ರೇಮಪ್ರಕರಣವು ಗಂಭೀರಸ್ಥಿತಿಯನ್ನು ತಲುಪಲಿದೆ. ತಾಳ್ಮೆಯಿಂದ ವ್ಯವಹರಿಸಿ, ಸರಿ ಮಾಡಿಕೊಳ್ಳಿ. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ.
ಕರ್ಕಾಟಕ ರಾಶಿ: ಏನನ್ನಾದರೂ ಕೇಳಿಕೊಳ್ಳಲು ಉತ್ತಮ ಸಮಯ. ನಿಮಗೆ ಎಂದಿಗೂ ಉಚಿತವಾದುದನ್ನೇ ಕೇಳಿ. ಸಾಲಬಾಧೆಯೂ ಬಿಡದೇ ನಿಮ್ಮನ್ನು ಅತಿಯಾಗಿ ಕಾಡಲಿದೆ. ಅಷ್ಟೇ ಅಲ್ಲದೇ ಸಾಲ ಕೊಟ್ಟವರೂ ನಿಮ್ಮನ್ನು ದಿನವೂ ಕೇಳುವರು. ಮಾತನ್ನು ಆಡುವಾಗ ಪದಗಳ ಮೇಲೆ ಗಮನವಿರಲಿ. ಕೆಲವು ಪದಗಳೂ ನಿಮ್ಮ ಜೊತೆ ವೈಮನಸ್ಯವನ್ನು ತರುವುದು. ಹಣದ ವ್ಯವಹಾರಗಳಲ್ಲಿ ನೆಮ್ಮದಿ ಅನುಭವಿಸಲಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಮಾತುಕತೆ ಸಂತೋಷ ನೀಡಲಿದೆ. ಪ್ರೀತಿಯ ಕ್ಷಣಗಳು ಮನಸ್ಸಿಗೆ ಹತ್ತಿರವಾಗುತ್ತವೆ. ಕೆಲಸದ ಒತ್ತಡದಲ್ಲೂ ನಿಮ್ಮ ಶಕ್ತಿಯ ಪ್ರದರ್ಶನ ಸುಧಾರಿತವಾಗಿರುತ್ತದೆ. ವಿವಾಹವಾಗಲು ಬಹಳ ಆತುರಪಡುವಿರಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು.
ಸಿಂಹ ರಾಶಿ: ಯಾರನ್ನೂ ಆತಂಕಗೊಳಿಸಬೇಡಿ. ಹೇಳುವುದನ್ನು ಹೇಳುವಹಾಗೇ ಹೇಳಿ. ಉದ್ಯೋಗವನ್ನು ಅರಸುತ್ತ ಇದ್ದರೆ ಇಂದು ಉತ್ತಮ ಉದ್ಯೋಗವು ಅನಿರೀಕ್ಷಿತವಾಗಿ ಸಿಗಲಿದೆ. ಸಿಕ್ಕ ಉದ್ಯೋಗವು ಮುಂದೆ ಅನೇಕ ಲಾಭವನ್ನು ಮಾಡಿ ಕೊಡಲಿದೆ. ಶಿಷ್ಟ ನಡವಳಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತದೆ. ಕಟುವಚನದಿಂದ ಅವಾಂತರ ಸೃಷ್ಟಿಯಾದೀತು. ಹಣದ ವ್ಯಯದಲ್ಲಿ ಮಿತಿಮೀರಬೇಡಿ, ಸಣ್ಣ ಉಡುಗೊರೆಗೂ ಸಂಯಮ ಬೇಕಾಗುತ್ತದೆ. ಕುಟುಂಬ ಸದಸ್ಯರ ಭಾವನೆಗಳಿಗೆ ಗೌರವ ನೀಡಿ, ಬೇಜವಾಬ್ದಾರಿಯ ಮಾತುಗಳಿಂದ ದೂರವಿರಿ. ವಿನಾಕಾರಣ ಮನೆಯವರನ್ನು ದೂರುತ್ತ ಕುಳಿತುಕೊಳ್ಳಬೇಡಿ. ನಿಮ್ಮ ಕರ್ತವ್ಯವೇನು ಎಂಬುದು ನೀವೇ ನೆನಪಿಗೆ ತಂದುಕೊಂಡು ಮಾಡಿ. ಅತಿಯಾಸೆಯಿಂದ ದುಃಖವು ಬರಬಹುದು. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ.
ಕನ್ಯಾ ರಾಶಿ: ನಿಮಗೆ ಇಂದು ಬಹಳ ಸೂಕ್ಷ್ಮ ಕಾಲವಾಗಿದ್ದು, ನಡೆತೆಯನ್ನು ಸರಿಯಿಟ್ಟುಕೊಳ್ಳುವ ಪ್ರಯತ್ನ ಚಾಲ್ತಿಯಲ್ಲಿರಲಿ. ಇಂದು ಹಲವಾರು ದಿನಗಳಿಂದ ವಾಹನ ಖರೀದಿಯ ಆಸೆಯನ್ನು ಪೂರ್ಣಮಾಡಿಕೊಳ್ಳುವಿರಿ. ವಿನಾಕಾರಣ ವಾಗ್ವಾದಗಳು ನಡೆಯಬಹುದು. ನ್ಯಾಯಾಲಯದಲ್ಲಿ ನಿಮಗೆ ಜಯವು ಸಿಗಲಿದೆ. ಕೋಪವನ್ನು ನಿಯಂತ್ರಿಸುವುದು ಅತ್ಯಗತ್ಯ, ಇಲ್ಲದಿದ್ದರೆ ಸಂಬಂಧಗಳು ಹಾಳಾಗಬಹುದು. ಹಣದ ಸಮಸ್ಯೆಗಳಿಂದಾಗಿ ನಿರ್ಣಯಗಳಲ್ಲಿ ಎಚ್ಚರಿಕೆ ಅಗತ್ಯ. ಮನೆಮಂದಿಯೊಂದಿಗೆ ನಿಮ್ಮ ಮಾತು ಸರಳವಾಗಿರಲಿ. ಕೆಲಸದ ಸ್ಥಳದಲ್ಲಿ ಒತ್ತಡ ಹೆಚ್ಚಾಗಬಹುದು. ಕುಟುಂಬದವರಿಗೆ ಸಮಯ ಮೀಸಲಿಡಿ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಹೊರದೇಶದಲ್ಲಿ ಇರುವವರಿಗೆ ಕಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ.




