AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ಇಂದು ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ

ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಚೈತ್ರ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ, ಭಾನುವಾರ ಬುದ್ಧಿಯ ಪ್ರಯೋಗ, ಕೌಟುಂಬಿಕ ವಿವಾದ, ಅಪರೂಪದ ವ್ಯಕ್ತಿಗಳ ಭೇಟಿ ಇವೆಲ್ಲ ಇರಲಿದೆ. ಈ ದಿನ 30-3-25ರ ದಿನ ಯುಗಾದಿ. ನೂತನ ವರ್ಷದ ಮೊದಲ ದಿನದ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಈ ರಾಶಿಯವರು ಇಂದು ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Mar 30, 2025 | 1:25 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ: ಉತ್ತರಾಭಾದ್ರ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ : ರೇವತಿ, ಯೋಗ: ಐಂದ್ರ, ಕರಣ: ನಾಗವಾನ್, ಸೂರ್ಯೋದಯ 06: 30 am, ಸೂರ್ಯಾಸ್ತ 06 : 43 pm, ಇಂದಿನ ಶುಭಾಶುಭಕಾಲ: ರಾಹು ಕಾಲ 17:12 – 18:43, ಯಮಘಂಡ ಕಾಲ 12:37 – 14:09, ಗುಳಿಕ ಕಾಲ 15:40 – 17:12

ವಿಶ್ವಾವಸು ಎನ್ನುವ ನೂತನ ವರ್ಷ ಆರಂಭವಾಗುತ್ತಿದೆ. ಹೊಸ ಆಲೋಚನೆ, ಉತ್ತಮ ಗುಣ, ಒಳ್ಳೆಯ ಬುದ್ಧಿಯನ್ನು ದೇವರಲ್ಲಿ ಪ್ರಾರ್ಥಿಸಿದರೆ ಇಡೀ ವರ್ಷ ನೆಮ್ಮದಿ, ಸುಖ, ಸಂಭ್ರಮದಿಂದ ಇರಲು ಸಾಧ್ಯ. ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲ, ಇಡಿಯ ಪ್ರಕೃತಿಗೇ ಹೊಸ ವರ್ಷ. ಇದನ್ನು ಸಂಭ್ರಮಿಸುತ್ತ ಸ್ವಾಗತಿಸಿ, ಅವಗುಣಗಳನ್ನು ದೂರ ಮಾಡಿಕೊಳ್ಳಬೇಕು. ಸರ್ವರಿಗೂ ಯುಗಾದಿಯ ಶುಭಾಶಯ.

ಮೇಷ ರಾಶಿ: ಯಾವುದನ್ನೂ ಸಂಕೀರ್ಣ ಮಾಡಿಕೊಳ್ಳದೇ ನಿಭಾಯಿಸಿ. ಇಂದು ನಿಮ್ಮ ಕೆಲಸದಲ್ಲಿ ಆತುರಗೊಂಡರೆ, ಅಸ್ತವ್ಯಸ್ತವೇ ಆಗಬಹುದು. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ತಮ್ಮ ಕೆಲಸಕ್ಕೆ ಆದ್ಯತೆ ನೀಡಬೇಕು. ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯಬೇಕು ಎಂದಿದ್ದರೂ ಆಗದು. ಸಂಸಾರವನ್ನು ಮುನ್ನಡೆಸುವ ಚಾತುರ್ಯವನ್ನು ನೀವು ತಿಳಿದುಕೊಳ್ಳುವಿರಿ. ಸಂಗಾತಿಯ ಜೊತೆ ಮಾತು ಮಿತಿಮೀರಬಹುದು.‌ ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನೀವು ಕೆಲವು ಹೊಸ ಒಪ್ಪಂದಗಳ ಲಾಭವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನಗಳಲ್ಲಿ ನೀವು ತೊಡಗಿರುವಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದೋ ಕೆಲಸವನ್ನು ಮಾಡಿಕೊಡಬೇಕಾಗುವುದು. ಅಚಾತುರ್ಯದಿಂದ ತಪ್ಪನ್ನು ಮಾಡಿ, ಪಶ್ಚಾತ್ತಾಪ ಪಡುವಿರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗಿ ಆತಂಕ ಪಡುವಿರಿ. ಕುಟುಂಬದ ಸದಸ್ಯರ ಪ್ರೀತಿಯು ಸಿಕ್ಕಿ ಹರ್ಷಿಸುವಿರಿ.

ವೃಷಭ ರಾಶಿ: ಆರ್ಥಿಕ ವೃದ್ಧಿ ಮತ್ತು ಆರೋಗ್ಯ ವೃದ್ಧಿಯ ನಡುವೆ ಗೊಂದಲ ಬಂದಾಗ ಆರೋಗ್ಯವನ್ನು ಆರಿಸಿಕೊಳ್ಳಿ. ಆರ್ಥಿಕತೆಯ ಸುಧಾರಣೆ ಮತ್ತೆಂದೋ ಆಗುವುದು.‌ ಆರೋಗ್ಯ ಹಾಗಲ್ಲ. ಸೃಜನಾತ್ಮಕ ಪ್ರಯತ್ನಗಳಿಂದ ನಿಮಗೆ ಮೊದಲಿನಂತೆ ಖುಷಿ ಸಿಗದು. ನೀವು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯವನ್ನು ಸ್ವೀಕರಿಸುತ್ತೀರಿ. ವ್ಯಾಪಾರ ಯೋಜನೆಯನ್ನು ಪೂರ್ಣಗೊಳಿಸಲು ನೀವು ಹೆಚ್ಚು ಗಮನ ಹರಿಸಬೇಕು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ಪರಸ್ಪರ ಸಹಕಾರದ ಭಾವನೆ ನಿಮ್ಮೊಳಗೆ ಉಳಿಯುತ್ತದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ಸಾಮಾಜಿಕ ಕಾರ್ಯವನ್ನು ಮಾಡಲು ಒತ್ತಡವು ಬರಬಹುದು. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ. ಇನ್ನೊಬ್ಬರನ್ನು ಸರಿ ಮಾಡಲು ಹೋಗಿ ನೀವೇ ಹಾಳಾಗಬಹುದು.

ಮಿಥುನ ರಾಶಿ: ನಿಮ್ಮ ಸಣ್ಣ ದೈಹಿಕ ಸಮಸ್ಯೆಗಳನ್ನೂ ಇಂದು ನಿರ್ಲಕ್ಷಿಸಬೇಡಿ. ಅದು ಅನಂತರ ದೊಡ್ಡ ಸಮಸ್ಯೆಯಾಗಿ ಬದಲಾಗಬಹುದು. ನೀವು ಕೆಲಸದ ನಿಮಿತ್ತ ಪ್ರವಾಸಕ್ಕೆ ಹೋಗಬಹುದು. ಜೀವನದ ಗುರಿಯೊಂದನ್ನು ಸಾಧನೆಯಾಗಲಿದೆ. ಹಳೆಯ ಕೆಲಸಗಳು ಅತಿ ವೇಗವಾಗಿ ನೆರವೇರಲಿವೆ. ಕುಟುಂಬದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಯಾವುದೇ ಹೊರಗಿನವರಿಗೆ ಬಹಿರಂಗಪಡಿಸುವುದು ಬೇಡ. ಯಾರಾದರೂ ಲಾಭ ಪಡೆಯಲು ಪ್ರಯತ್ನಿಸಬಹುದು. ನೀವು ಶುಭ ಸಮಾರಂಭಗಳಲ್ಲಿ ಭಾಗವಹಿಸಬಹುದು. ನಿಮ್ಮ ಆದಾಯ ಹೆಚ್ಚಾದಂತೆ ನಿಮ್ಮ ಸಂತೋಷಕ್ಕೆ ಮಿತಿಯಿಲ್ಲ, ಆದರೆ ನೀವು ಭವಿಷ್ಯಕ್ಕಾಗಿ ಸ್ವಲ್ಪ ಹಣವನ್ನು ಉಳಿಸಿದರೆ ಅದು ನಿಮಗೆ ಉತ್ತಮ. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದ ಮಾಡುವಿರಿ. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ಕೊಡುವುದು. ನಿಮಗೆ ಅಭದ್ರತೆಯು ಕಾಡಬಹುದು. ಸಂಗಾತಿಯು ನಿಮಗೆ ಬೇಕಾದ ಹಣವನ್ನು ನೀಡುವರು. ಸಂಶೋಧನೆಯು ನಿಮಗೆ ಖುಷಿ ಕೊಡುವುದು.

ಕರ್ಕಾಟಕ ರಾಶಿ: ನೀವು ಅಪರಿಚಿತರ ಜೊತೆ ಬಾಂಧವ್ಯವನ್ನು ಹೆಚ್ಚುಮಾಡಿಕೊಳ್ಳುವಿರಿ. ಉದ್ಯಮಕ್ಕೆ ಸಹಕಾರಿ. ನೀವು ಸಾಮಾಜಿಕ ಚಟುವಟಿಯಲ್ಲಿ ಭಾಗವಹಿಸಲಾರಿರಿ. ಧಾರ್ಮಿಕ ಕಾರ್ಯಗಳಿಗೆ ಶ್ರದ್ಧೆಯು ಕಡಿಮೆ ಆದಂತೆ ತೋರುವುದು. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗುವುದು. ಕೆಲವು ಪ್ರಮುಖ ಚರ್ಚೆಯಲ್ಲಿ ಭಾಗವಹಿಸಬಹುದು. ವ್ಯವಹಾರದಲ್ಲಿ ಕೆಲವು ಹಳೆಯ ಯೋಜನೆಗಳಿಂದ ನೀವು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಕುಟುಂಬ ಸದಸ್ಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸಿ, ವಿರೋಧಿಸುವಿರಿ. ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು. ಇದ್ದ ನಿಮ್ಮ ಸ್ವಭಾವದಲ್ಲಿ ಪರಿವರ್ತನೆ ಕಾಣಿಸಿಕೊಳ್ಳುವುದು. ನಿಮ್ಮ ವಸ್ತುಗಳ ಉಪಯೋಗವನ್ನು ನೀವು ಬಹಳ ನಿರ್ಲಕ್ಷ್ಯದಿಂದ ಮಾಡುವಿರಿ.

ಸಿಂಹ ರಾಶಿ: ನಿಮ್ಮ ಒಳ ಮನಸ್ಸನ್ನು ಅರ್ಥಮಾಡಿಕೊಂಡವರ ಜೊತೆ ಸ್ನೇಹ ಬೆಳೆಯುವುದು. ನಿಮ್ಮ ಸೌಕರ್ಯಗಳಿಗೆ ನೀವು ಸಂಪೂರ್ಣ ಒತ್ತು ನೀಡುತ್ತೀರಿ. ನಿರುದ್ಯೋಗಿಗಳು ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕಾಣಲಿವೆ ಹಾಗೂ ಆದಾಯ ವೃದ್ಧಿಸಲಿವೆ. ನೀವು ಕೆಲಸಕ್ಕೆ ಯೋಗ್ಯವಾದ ಗೌರವವನ್ನೂ ಪಡೆಯಬಹುದು. ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವುದು. ನಿಮ್ಮ ವಿರೋಧಿಗಳು ನಿಮಗೆ ತೊಂದರೆ ನೀಡಲು ಪ್ರಯತ್ನಿಸುತ್ತಾರೆ. ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಸೋಲಿಸಲು ಸಾಧ್ಯವಾಗುತ್ತದೆ. ಗೃಹೋದ್ಯಮದಲ್ಲಿ ನೀವು ಲಾಭವನ್ನು ಗಳಿಸುವಿರಿ. ನಿಮ್ಮ ಶಾಂತವಾದ ಮನಸ್ಸೇ ಹಲವು ಸಮಸ್ಯೆಗಳನ್ನು ದೂರ ಮಾಡುವುದು. ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಅಪರೂಪದ ವ್ಯಕ್ತಿಗಳ ಭೇಟಿಯಾಗಲಿದೆ. ನಿಮ್ಮ ಸರಳತೆಯು ನಿಮಗೆ ಧನಾತ್ಮಕ ಅಂಶಗಳಿಗೆ ಕಾರಣವಾಗುವುದು. ಯಾರ ಮೇಲಾದರೂ ಮುನಿಸು ತಾತ್ಕಾಲಿಕವಾಗಿ ಇರುವುದು. ಸ್ತ್ರೀಯರಿಂದ ನಿಮಗೆ ಸಂತೋಷವು ಸಿಗುವುದು.

ಕನ್ಯಾ ರಾಶಿ: ಆದಾಯ ಹಾಗೂ ಖರ್ಚನ್ನು ಸರಿದೂಗಿಸುವ ಪ್ರಯತ್ನವು ವಿಫಲವಾಗುವುದು. ಇಂದು ನಿಮ್ಮ ಹಣಕಾಸಿನ ಪರಿಸ್ಥಿತಿಯ ಬಗ್ಗೆ ಸ್ವಲ್ಪ ಚಿಂತಿತರಾಗಿರುವಿರಿ. ಅಧ್ಯಾತ್ಮದ ಕಡೆಗೆ ನಿಮ್ಮ‌ ಸೆಳೆತ ಇರುವುದು. ನೀವು ಚಿಂತನಶೀಲವಾಗಿ ಕೆಲಸ ಮಾಡಿದರೆ, ಅದು ನಿಮಗೆ ಉತ್ತಮ. ನೀವು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಯೋಚಿಸಿದ್ದರೆ, ನಿಮ್ಮ ಆಸೆಯೂ ಈಡೇರಬಹುದು. ನಿಮ್ಮ ಮಗುವಿಗೆ ನೀವು ಹೊಸ ವಾಹನವನ್ನು ಮನೆಗೆ ತರಬಹುದು. ನೀವು ಸ್ನೇಹಿತನ ಜೊತೆ ವಿವಾದವನ್ನು ಹೊಂದಿದ್ದರೆ, ಅವರು ನಿಮ್ಮನ್ನು ಸಮಾಧಾನಪಡಿಸಲು ಬರಬಹುದು. ಹಳೆಯ ತಪ್ಪಿನಿಂದ ಪಾಠ ಕಲಿಯಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆಯು ಕಡಿಮೆ ಆಗುವುದು. ಆಗಿಹೋದ ವಿಚಾರಕ್ಕೆ ಸಂಗಾತಿಯ ಜೊತೆ ಪುನಃ ಜಗಳವಾಡುವಿರಿ. ಆದಷ್ಟು ಒಬ್ಬರಾದರೂ ಸುಮ್ಮನಿದ್ದರೆ ಕಲಹವು ಶಾಂತವಾಗುವುದು. ನಿಮ್ಮ ಆಲೋಚನೆಯನ್ನು ಕೆಲವಷ್ಟಕ್ಕೆ ಸೀಮಿತಗೊಳಿಸಿಕೊಳ್ಳುವಿರಿ. ಉತ್ತಮ ವಸ್ತುಗಳು ಸಿಕ್ಕರೂ ಅದನ್ನು ಉಳಿಸಿಕೊಳ್ಳಲು ಕಷ್ಟಪಡುವಿರಿ.

ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್