ಪರೀಕ್ಷಾರ್ಥವಾಗಿ ಮಾಡಿದ ಕೆಲಸ ಫಲ ನೀಡುವುದು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸ ಶುಕ್ಲ ಪಕ್ಷದ ಪಂಚಮೀ ತಿಥಿ, ಶನಿವಾರ ತೋರಕಿಯಿಂದ ಸಮಾಧಾನ, ಮಾತಿನಿಂದ ಅಪನಂಬಿಕೆ, ನಿಮ್ಮ ಮಾತಿನ ಅರ್ಥದ ಬದಲಾವಣೆ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಪರೀಕ್ಷಾರ್ಥವಾಗಿ ಮಾಡಿದ ಕೆಲಸ ಫಲ ನೀಡುವುದು
ಜ್ಯೋತಿಷ್ಯ
Edited By:

Updated on: May 31, 2025 | 1:50 AM

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ವೃಷಭ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ – 06 : 03 am, ಸೂರ್ಯಾಸ್ತ – 06 : 57 pm, ಇಂದಿನ ಶುಭಾಶುಭಕಾಲ: ರಾಹು ಕಾಲ 09:17 – 10:54, ಯಮಘಂಡ ಕಾಲ 14:07 – 15:44, ಗುಳಿಕ ಕಾಲ 06:04 – 07:41​

ತುಲಾ ರಾಶಿ: ಮನೆಯ ದುರಸ್ತಿ ನಡೆಯಲಿದ್ದು ಶಾಶ್ವತ ಪರಿಹಾರದ ಬಗ್ಗೆಯೇ ಯೋಚಿಸಿ. ಇಂದು ನಿಮ್ಮ ಸಮಾಜಮುಖೀ ಕಾರ್ಯಗಳಿಗೆ ಗೌರವ, ಪ್ರಶಂಸೆಗಳು ಸಿಗಲಿವೆ. ನೆರೆ-ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಿ. ಮೇಲಧಿಕಾರಿಗಳಿಂದ ಕ್ಷಣಕಾಲ ತಪ್ಪಿಸಿಕೊಂಡರೆ ಅಷ್ಟೇ ಸಾಕು. ನಿಮ್ಮ ಕಾರ್ಯಕ್ಕೆ ವಿದೇಶದಿಂದ ಕರೆ ಬರಬಹುದು. ಹೂಡಿಕೆಗೆ ಮೊದಲು ಎಲ್ಲವನ್ನೂ ಅಧ್ಯಯನ ಮಾಡಿ. ಕುಟುಂಬದವರೊಂದಿಗೆ ಕಳೆಯುವ ಸಮಯ ಹೃದಯ ತಣಿಸುತ್ತದೆ. ಪ್ರೇಮ ಸಂಬಂಧದಲ್ಲಿ ಬುದ್ದಿವಂತಿಕೆ ಮುಖ್ಯ. ನಿಮ್ಮ ನಿಷ್ಠೆ ಮತ್ತು ಶ್ರಮವು ಮೆರೆದೀತು. ನಿಮ್ಮ‌ ಮಾತಿಗೆ ಬೆಲೆ ಇಲ್ಲವಾದೀತು. ದೈವದ ಮೇಲೆ‌ ಅಪನಂಬಿಕೆ ಬರಬಹುದು. ನಿಮ್ಮ ತಪ್ಪನ್ನು ಎಲ್ಲರೆದು ಒಪ್ಪಿಕೊಳ್ಳಲು ಆಗದು. ಅಧಿಕ ಆಸ್ತಿಯೇ ನಿಮಗೆ ತೊಂದರೆಯನ್ನು ಉಂಟುಮಾಡಬಹುದು. ಕಲಾವಿದರ ಜೊತೆ ನಿಮ್ಮ ನಂಟು ಬೆಳೆಯಬಹುದು. ಮಾತನ್ನು ಕಡಿಮೆ ಮಾಡಿ ಕಾರ್ಯದಲ್ಲಿ ತೋರಿಸಿ. ಅನಪೇಕ್ಷಿತ ವಿಚಾರದ ಬಗ್ಗೆ ಚರ್ಚೆ ಮಾಡಿ ಕಾಲಹರಣ ಮಾಡುವಿರಿ.

ವೃಶ್ಚಿಕ ರಾಶಿ: ನಿಮ್ಮ ಮೇಲಿನ ಆರೋಪಕ್ಕೆ ಆಧಾರ ಕೇಳುವಿರಿ. ನೀವು ಅಂದುಕೊಂಡಿದ್ದು ಮಾತ್ರ ಸತ್ಯವಾಗಲಾರದು. ಅದಕ್ಕಿರುವ ಮುಖವನ್ನು ಗಮನಿಸಿ ತೀರ್ಮಾನಕ್ಕೆ ಬನ್ನಿ. ಸಾಲವಾಧೆ ಎದುರಾಗಲಿದ್ದು ಸಮಸ್ಯೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಹಠವನ್ನು ಮುಂದಿಡುವುದು ಬೇಡ. ಒಂಟಿಯಾಗಿಯೇ ಇರಬೇಕಾಗುವುದು. ಕೆಲಸದಲ್ಲಿ ಅವಕಾಶಗಳು ಸಿಗಬಹುದು ಆದರೆ ತೀರ್ಮಾನದಲ್ಲಿ ತಾಳ್ಮೆ ಅಗತ್ಯ. ಖರ್ಚುಗಳು ನಿಮ್ಮ ಮೇಲೆ ಒತ್ತಡ ತರುತ್ತವೆ. ಮನೆಯ ಅಲಂಕರಣದ ಚಿಂತನೆ ಮೂಡಬಹುದು ಆದರೆ ಮುಂದಕ್ಕೆ ಹಾಕುವುದು ಉತ್ತಮ. ಸ್ನೇಹಿತರ ಜೊತೆಗಿನ ಸಮಯ ಖುಷಿಯನ್ನು ನೀಡುತ್ತದೆ. ಶಿಸ್ತನ್ನು ಕಾಪಾಡಿಕೊಂಡು ನಿಮ್ಮ ಮೌಲ್ಯವನ್ನು ಹೆಚ್ಚಿಸಿಕೊಳ್ಳಿ. ಅನಗತ್ಯ ಚಟುವಟಿಕೆಗಳಲ್ಲಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ಸಂತಾನದ ಬಗ್ಗೆ ನಿಮಗೆ ಅತಿಯಾದ ಆಸೆಯಾಗುವುದು. ಆಪ್ತರ ವಿಯೋಗವು ನಿಮ್ಮನ್ನು ಕುಗ್ಗಿಸಬಹುದು. ಅಧಿಕಾರದ ಬಗ್ಗೆ ವ್ಯಾಮೋಹವು ಕಡಿಮೆಯಾಗುವುದು.

ಧನು ರಾಶಿ: ನಿಮ್ಮ ಉದ್ಯಮದ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡುವಿರಿ. ಅಲ್ಪ ಜ್ಞಾನದವರ ಸಂಗದಿಂದ ಸ್ವಾಭಿಮಾನ ಧಕ್ಕೆ ಬರುವುದು. ಮುಜುಗರವನ್ನು ಎದುರಿಸಬೇಕಾಗಬಹುದು. ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬಯಸಿದರೆ ನಕಾರಾತ್ಮಕ ಉತ್ತರವನ್ನು ಕೊಡಬೇಡಿ. ಧೈರ್ಯದಿಂದ ಕೆಲಸದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಮಾತಿನಂತೆ ನಡಿಗೆ ನೂಲಿನಂತೆ ಬಟ್ಟೆ ಇರುವಂತೆ ಇರಬೇಕು. ಹಣಕಾಸು ಸ್ಥಿತಿಯಲ್ಲಿ ಸ್ಥಿರತೆ ಇರುತ್ತದೆ. ಖರ್ಚುಗಳಲ್ಲಿ ನಿಯಂತ್ರಣ ವಹಿಸಿ. ಮನೆಯವರು ನಿಮ್ಮ ಸಮಯ ಮತ್ತು ಪ್ರೀತಿಗೆ ಕಾಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ಹೊತ್ತುಕೊಂಡು ಇರುವುದು ಕಷ್ಟ. ಉದ್ಯೋಗದ ನಿಮಿತ್ತ ಬೇರೆ ಕಡೆಗೆ ಹೋಗಬಹುದು. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಇರಲಿದೆ. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ನಿಮಗೆ ಇಷ್ಟವಾಗದು. ನೀವು ಬೇಕಾದ ಸಹಾಯವು ಸರಿಯಾದ ಸಮಯಕ್ಕೆ ಸಿಗುವುದು. ನಿಮ್ಮ ಮಾತಿಗೆ ಬೆಂಬಲವಿರುವುದು. ಹಳೆಯ ನೆನಪುಗಳು ನಿಮ್ಮ ಕಾಡುವುವು.

ಮಕರ ರಾಶಿ: ಏನನ್ನೇ ಮಾಡಿದರೂ ಹಿರಿಯರ ಅನುಮತಿ ಅವಶ್ಯಕ. ಮೇಲಧಿಕಾರಿಗಳ ಮಾತನ್ನು ಲಘುವಾಗಿ ತೆಗೆದುಕೊಂಡು ಕೆಂಗಣ್ಣಿಗೆ ಗುರಿಯಾಗುವಿರಿ. ಕಾರ್ಯದ ಒತ್ತಡ ನಿಮ್ಮನ್ನು ಇಂದು ಬಂಧಿಸಿ ಇಡಲಿದೆ. ಹೊಸ ವಸ್ತ್ರದ ಖರೀದದಿಯಾಗಲಿದೆ‌. ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಿದರೂ ಮನಸ್ಸು ಬೇರೆಡೆ ಇರಬಹುದು. ಹಣಕಾಸು ಸ್ಥಿತಿಯಲ್ಲಿ ನಿರ್ವಹಣಾ ಜಾಣ್ಮ ಅಗತ್ಯ. ಕೈ ಮೀರಿದ ಆರೋಗ್ಯವನ್ನು ನಿಯಂತ್ರಣಕ್ಕೆ ತರಲಾಗದು. ಸಹೋದ್ಯೋಗಿಯಿಂದ ಸ್ಪರ್ಧಾತ್ಮಕ ಮನೋಭಾವನೆ ಎದುರಾಗಬಹುದು. ಹೊಸ ವಿಷಯ ಕಲಿಯಲು ಉತ್ತಮ ಸಮಯ. ಬೇಕಾದುದನ್ನು ಪಡೆಯದೇ ಮನಸ್ಸಿಗೆ ಸಂಕಟವಾಗುವುದು. ಕಲಾಸಕ್ತಿಯು ನಿಮ್ಮನ್ನು ಕಲಿಕೆಗೆ ಜೋಡಿಸಬಹುದು. ಯಾರ ಮಾತನ್ನೂ ನೀವು ಕೇಳಲಾರಿರಿ. ಸಂಶೋಧನೆಯಲ್ಲಿ ಹೊಸ ಮಾರ್ಗವು ಕಾಣಿಸಿಕೊಳ್ಳುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು.

ಕುಂಭ ರಾಶಿ: ಪರೀಕ್ಷಾರ್ಥವಾಗಿ ಮಾಡಿದ ಕೆಲಸ ಫಲ ನೀಡುವುದು. ಅದನ್ನೇ ಮುಂದುರಿಸುವಿರಿ. ಇಂದು ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ ಎನಿಸಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ. ಯಾರ ಮೇಲೂ ದ್ವೇಷವನ್ನು ಸಾಧಿಸಿ ಆಗುವುದೇನಿಲ್ಲ. ಸಮಯ ಹಾಳು ಅಷ್ಟೇ. ಉದ್ಯೋಗದಲ್ಲಿ ಚುರುಕು ಮತ್ತು ಯೋಜನೆ ಮುಖ್ಯ. ಹಣಕಾಸಿನಲ್ಲಿ ಸ್ಥಿರತೆ ಇದ್ದರೂ ಸಾಲ ಅಥವಾ ಸಾಲಕೊಡಿಕೆ ಬೇಡ. ಪ್ರೀತಿಯಲ್ಲಿ ಸಹನಶೀಲತೆಯಿಂದ ಸ್ಪಂದಿಸಿ, ಅತಿವಿಚಾರ ಬೇಡ. ನಿಮ್ಮ ಆತ್ಮಸ್ವಭಾವವನ್ನು ನಂಬಿ. ಪ್ರವಾಸದ ಯೋಜನೆ ಆಕಸ್ಮಿಕವಾಗಿ ಬರುತ್ತದೆ. ಆತ್ಮಚಿಂತನದಿಂದ ಶಾಂತಿ ಸಿಗಲಿದೆ. ಆಕಸ್ಮಿಕವಾಗಿ ಆಗಿವ ಘಟನೆಗಳನ್ನು ಮನಸಾರೆ ಸ್ವೀಕರಿಸಿ. ನಿಮ್ಮನ್ನು ನೀವು ತಿದ್ದಿಕೊಳ್ಳುವ ಪ್ರಯತ್ನ ಮಾಡುವುದು ಶ್ರೇಯಸ್ಕರ. ನಿಮ್ಮ ತಂದೆಯ ಜೊತೆ ಸ್ನೇಹದ ಸಂಬಂಧವನ್ನು ಇಟ್ಟುಕೊಳ್ಳುವಿರಿ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು.

ಮೀನ ರಾಶಿ: ಪ್ರೇಮಿಗಳಲ್ಲಿ ಪರಸ್ಪರ ವೈರುಧ್ಯ ಏರ್ಪಡಬಹುದು. ನಿಮ್ಮ ಸಂಕೋಚದ ಸ್ವಭಾವದಿಂದ ಹೇಳಬೇಕಾದ ವಿಚಾರವನ್ನು ಹೇಳದೇ ಸುಮ್ಮನಾಗುವಿರಿ.‌ ಉದ್ಯೋಗ ಸೃಷ್ಟಿಗೆ ಬೇಕಾದ ಬಂಡವಾಳವು ಸಿಗಲಿದೆ. ಸಾಲ ಪಡೆದವರು ಮರಳಿ ನೀಡಲಿದ್ದಾರೆ. ಹಣಕಾಸು ಸಂಬಂಧಿತ ವಿಷಯಗಳು ನಿಮ್ಮ ಗಮನಕ್ಕೆ ಬರುತ್ತವೆ. ನೀವು ಸೇವಿಸುವ ಔಷಧ ಅಡ್ಡ ಪರಿಣಾಮ ನೀಡಬಹುದು. ತಪ್ಪುಗಳು ನಡೆದಾಗ ನಿಮ್ಮ ಪರವಾದ ಮಾತುಗಳು ಕೇಳಿಸದೇ ಇರಬಹುದು. ಮಕ್ಕಳ ಸಾಧನೆ ಸಂತೋಷ ನೀಡಲಿದೆ. ಪ್ರೀತಿಯಲ್ಲಿ ಚಿಕ್ಕ ಚಿಕ್ಕ ವ್ಯತ್ಯಾಸಗಳನ್ನು ಸಮಾಧಾನದಿಂದ ಮುಗಿಸಿ. ಅನಗತ್ಯ ಚರ್ಚೆಗಳಿಗೆ ದೂರವಿರಿ. ಸಂಗಾತಿಯ ಜೊತೆ ಸುಂದರ ಕ್ಷಣವನ್ನು ಕಳೆಯಿರಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಸಾಲಕ್ಕೆ ಏನನ್ನಾದರೂ ಅಡವಿಡಬೇಕಾಗಬಹುದು. ವಾಹನಕ್ಕಾಗಿ ಖರ್ಚು ಮಾಡಬೇಕಾಗುವುದು. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು.