Horoscope Today 27 April: ಈ ರಾಶಿಯವರಿಂದು ಜಾಗೃತರಾಗಿರಿ; ಅಪಹಾಸ್ಯಕ್ಕೆ ಒಳಗಾಗಬೇಕಾದೀತು
Daily Horoscope, 27 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಸೋಮವಾರದಂದು ಪರರಿಂದ ಪ್ರೇರಣೆ, ಮನೆಯಲ್ಲಿ ದುರಭ್ಯಾಸದಿಂದ ಆತಂಕ, ಮೌನವೇ ಕಲಹಕ್ಕೆ ಕಾರಣ, ಅವ್ಯವಹಾರದಿಂದ ತೊಂದರೆ ಇವೆಲ್ಲ ಈ ದಿನದ ಭವಿಷ್ಯ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದಶಮೀ ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಶೂಲಿ, ಕರಣ : ಕೌಲವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:40 – 09:14, ಯಮಗಂಡ ಕಾಲ 10:48 – 12:22, ಗುಳಿಕ ಕಾಲ 13:56 – 15:30.
ಮೇಷ ರಾಶಿ: ನೀವು ಎಲ್ಲರಿಗಿಂತ ಉತ್ತಮವಾದ ಮಾರ್ಗದ ಅನ್ವೇಷಣೆಯಲ್ಲಿ ಇರುವಿರಿ. ಮುಖ್ಯಸ್ಥರನ್ನು ಖುಷಿಪಡಿಸಲು ಧಾರಾಳ ಖರ್ಚು ಮಾಡಬಹುದು. ಹಳೆಯ ಕೌಟುಂಬಿಕ ಸಮಸ್ಯೆಗಳಿಗೆ ನ್ಯಾಯ ವ್ಯವಸ್ಥೆಯ ದಾರಿ ಉಪಯುಕ್ತವಾಗಬಹುದು. ಇತರರ ಅಭಿಪ್ರಾಯವನ್ನೂ ಪರಿಗಣಿಸಿ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು.
ವೃಷಭ ರಾಶಿ: ಇಂದು ತಂದೆಯ ಅನಾರೋಗ್ಯದ ಬಗ್ಗೆ ನಿಮ್ಮ ಅಧಿಕಾರದ ಗರ್ವವನ್ನು ಪಕ್ಕಕ್ಕಿರಿಸಿ. ಸಂಬಂಧ ಬಲವಾಗಿಸಲು ಪ್ರೀತಿಯವರಿಗೆ ಸಮಯ ಮೀಸಲಿಡಿ. ಕೆಲಸದ ಒತ್ತಡದಲ್ಲಿ ಸಹಜವಾಗಿ ದೂಡಲ್ಪಡುವಿರಿ. ಸಮಾರಂಭಗಳಿಗೆ ಆಹ್ವಾನ ಸಿಕ್ಕಿ ಸಂತಸ. ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಶಂಸೆ ಲಭ್ಯವಾಗುವುದು. ಸಹೋದರರ ನಡುವೆ ಸೌಹಾರ್ದತೆ ಇರಲಿದೆ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು.
ಮಿಥುನ ರಾಶಿ: ನಿಮಗೆ ಎಂತಹ ಆರೋಪವನ್ನೂ ಗೆಲ್ಲುವುದೂ ಗೊತ್ತಾಗಲಿದೆ. ಉದ್ಯೋಗದಲ್ಲಿ ತೊಂದರೆ ಬಂದರೂ ನಿರೀಕ್ಷೆಯ ಬೆಳಕು ಕಾಣುವಿರಿ. ಸುತ್ತಲಿರುವ ಜನರಿಂದ ದೂರವಿರಿ, ಅವರ ಮಾತುಗಳಿಗೆ ಕಿವಿಗೊಡಬೇಡಿ. ಮೋಸದ ಆಟದಿಂದ ಎಚ್ಚರಿಕೆಯಿಂದಿರಿ. ಧಾರ್ಮಿಕ ಕಾರ್ಯವನ್ನು ನಿರ್ಮಲ ಮನಸ್ಸಿನಿಂದ ಮಾಡುವಿರಿ. ಯಾರ ಜೊತೆಯೂ ಮಿತಿಮೀರಿದ ಸಲುಗೆ ಬೇಡ. ಆಪ್ತರು ನಿಮ್ಮನ್ನು ಬಿಡಬಹುದು. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ.
ಕರ್ಕಾಟಕ ರಾಶಿ: ಫಲವನ್ನು ನಿರೀಕ್ಷಿಸದೇ ಕಾರ್ಯವನ್ನು ಮಾಡಿ. ಹಳೆಯ ವ್ಯಕ್ತಿಯೊಂದಿಗೆ ಮತ್ತೆ ಸಂಪರ್ಕ ಆಗಬಹುದು. ಈ ಬದಲಾವಣೆ ನಿಮ್ಮ ಜೀವನದಲ್ಲಿ ಹೊಸ ಬೆಳಕು ತರುತ್ತದೆ. ಅದೃಷ್ಟ ಸಹಾಯ ಮಾಡಲಿದೆ. ವಿಘ್ನನಿವಾರಕನಿಗೆ ನಮಸಿ ಹೊಸ ಕಾರ್ಯವನ್ನು ಆರಂಭಿಸಿ. ವ್ಯಾವಹಾರಿಕ ಜಂಜಾಟವು ನಿಮ್ಮ ಉದ್ವೇಗಕ್ಕೆ ಕಾರಣವಾಗುವುದು. ನೀವು ಇಂದು ಯಾವುದೇ ಅಪೇಕ್ಷೆ ಇಲ್ಲದೇ ಕೆಲಸವನ್ನು ಮಾಡಲಾರಿರಿ. ಸ್ಥಿರಾಸ್ತಿಯ ಭಾಗವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು.
ಸಿಂಹ ರಾಶಿ: ಆಪ್ತರ ಜೊತೆ ವಿದೇಶದ ವ್ಯಾಪಾರದ ಕುರಿತು ಚರ್ಚಿಸುವಿರಿ. ಮಕ್ಕಳೊಂದಿಗೆ ಹೆಚ್ಚಿನ ಸಮಯ ಕಳೆಯುವುದು ಉತ್ತಮ. ನಿಮ್ಮ ಕಷ್ಟಕ್ಕೆ ಆದವರೇ ಜೊತೆಯಲ್ಲಿ ಇರುವರು. ಸಂಬಂಧಗಳಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆ ಇತರರ ನಂಬಿಕೆಗೆ ಕಾರಣವಾಗುತ್ತದೆ. ನಿಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳಿ. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿಮ್ಮ ಮೌನವು ಕುಟುಂಬದಲ್ಲಿ ಭಯವನ್ನು ಉಂಟುಮಾಡೀತು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ.
ಕನ್ಯಾ ರಾಶಿ: ಹಿರಿಯರಿಂದ ಅವಮಾನವಾಗುವ ಸಾಧ್ಯತೆ ಇದೆ. ಹಣದ ವ್ಯವಹಾರ ಶುಭವಾಗುವ ದಿನ. ನಿಮ್ಮ ಮಾತುಗಳು ಗುಣಮಟ್ಟದ್ದಾಗಿರಲಿ. ಸಂಗಾತಿಯೊಂದಿಗೆ ಗೌಪ್ಯ ವಿಷಯ ಹಂಚಿಕೆ ವೇಳೆ ಎಚ್ಚರಿಕೆ ಇರಲಿ. ಪ್ರೇಮ ನಿಖರತೆ ನೀಡುತ್ತದೆ. ಸ್ನೇಹಿತರಿಂದ ವೃತ್ತಿಯಲ್ಲಿ ಬೆಂಬಲ ಸಿಗಲಿದೆ. ಸಂಗಾತಿಯೊಂದಿಗೆ ಸಮಯ ಕಳೆಯುವುದು ಸಂತೋಷ ತಂದೀತು. ಅತಿಯಾದ ಕೋಪದ ಕಾರಣ ನೀವು ಒಂಟಿಯಾಗಬೇಕಾದೀತು. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧಾನ ಇರಲಿದೆ.
ತುಲಾ ರಾಶಿ: ಅಮೂಲ್ಯವಾದ ವಸ್ತುವೊಂದು ನಿಮ್ಮ ಸ್ನೇಹಿತರಿಂದ ಕೊಡುಗೆಯಾಗಿ ಸಿಗಲಿದೆ. ನಿಮ್ಮ ಸುತ್ತಮುತ್ತಲಿನವರ ಪ್ರಗತಿ ನಿಮಗೆ ಆಹ್ಲಾದವಾಗದು. ನಿಮ್ಮ ಕಲ್ಪನೆಯ ಪ್ರಪಂಚದಿಂದ ಹೊರಬರಲು ನಿಮಗೆ ನುರಿತ ವ್ಯಕ್ತಿಯ ಮಾರ್ಗದರ್ಶನ ಅಗತ್ಯವಿದೆ. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು.
ವೃಶ್ಚಿಕ ರಾಶಿ: ತಪ್ಪುಗಳು ನಿಮ್ಮ ಸ್ವಭಾವವನ್ನು ತೋರಿಸುವುದು. ರಚನಾತ್ಮಕ ನಿಮ್ಮ ಶೈಲಿ ಪ್ರೇರಣೆಯುಂಟುಮಾಡುತ್ತದೆ. ಹೊಸ ಯೋಜನೆಗಳಲ್ಲಿ ಶಕ್ತಿ ಹೂಡಲು ಇದು ಸೂಕ್ತ ಸಮಯ. ನೀವು ಮಾಡಿದ ತಪ್ಪುಗಳನ್ನು ಒಪ್ಪಿಕೊಳ್ಳಿ ಮತ್ತು ಕ್ಷಮೆ ಕೇಳಿ. ಸತಿ ತಪ್ಪುಗಳ ಗೊಂದಲಕ್ಕೆ ಸಿಲುಕುವಿರಿ. ಇದು ನಿಮಗೆ ಸಮಾಧಾನ ಮತ್ತು ಸ್ವೀಕಾರ ನೀಡುತ್ತದೆ. ನಿಮ್ಮ ವರ್ತನೆಗಳು ತಂದೆಯ ಅಸಮಾಧಾನಕ್ಕೆ ಕಾರಣವಾಗಬಹುದು. ಮನಶ್ಚಾಂಚಲ್ಯದಿಂದ ಕೆಲವು ಕಹಿಯಾದ ಅನುಭವಗಳು ಆಗಬಹುದು.
ಧನು ರಾಶಿ: ಮಕ್ಕಳಿಂದ ಬಂದ ಅಶುಭವಾರ್ತೆಯನ್ನು ಸಹಿಸಲಾಗದು. ನಿಮ್ಮ ನಿಷ್ಠೆಯಿಂದ ಬಂಧುಗಳು ಬೆಂಬಲ ನೀಡುತ್ತಾರೆ. ಅವರಿಂದ ಪ್ರೀತಿ ಹಾಗೂ ಸಹಾಯ ದೊರೆಯಲಿದೆ. ನಿಜವಾಗಿಯೂ ನೀವು ಬೆಲೆಬಾಳುವವರಾಗಿದ್ದೀರಿ ಎಂಬ ಅನುಭವ ಬರುವುದು. ಹೊಸ ವ್ಯಕ್ತಿಯ ಪರಿಚಯ ನಿಮ್ಮ ಜೀವನಶೈಲಿಯಲ್ಲಿ ಬದಲಾವಣೆ ತರಬಹುದು. ಯಾರನ್ನೂ ತಾರತಮ್ಯ ಭಾವದಿಂದ ನೋಡುವುದು ಬೇಡ. ಕಛೇರಿಯ ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ. ಮನೆಯಿಂದ ಹೊರ ಹೋಗುವುದು ನಿಮಗೆ ಇಷ್ಟವಾಗದು.
ಮಕರ ರಾಶಿ: ಹಣಕಾಸಿನ ಕುರಿತು ಅತಿಯಾದ ಆಲೋಚನೆಯು ನಿಮ್ಮನ್ನು ಅತಿಯಾಗಿ ಕಾಡಬಹುದು. ಕೌಶಲ್ಯಕ್ಕೆ ಯೋಗ್ಯವಾದ ಸ್ಥಳ ಸಿಗುವುದು. ಗಡುವಿಗೆ ಮುನ್ನ ಕೆಲಸ ಪೂರ್ಣಗೊಳಿಸುವ ಸಾಧ್ಯತೆ ಇದೆ. ಹೂಡಿಕೆಯಲ್ಲಿ ಸರಿಯಾದ ಸಮಯವನ್ನು ನೋಡಿಕೊಳ್ಳಿ. ಸಮಯೋಚಿತವಾಗಿ ಕಾರ್ಯವನ್ನು ಮಾಡಿ. ದೂರಪ್ರಯಾಣವನ್ನು ಮೊಟಕುಗೊಳಿಸಿ. ವ್ಯಾಪರದಲ್ಲಿ ಲಾಭವಿದೆ. ನಿಮ್ಮ ಊಹೆಗಳು ಎಲ್ಲವೂ ವಾಸ್ತವಕ್ಕೆ ದೂರವಾದುದಾಗಿದೆ.
ಕುಂಭ ರಾಶಿ: ಕಳೆದ ವಸ್ತುಗಳ ಬಗ್ಗೆ ಅಧಿಕ ಚಿಂತೆ ಉಂಟಾಗಲಿದೆ. ಎಷ್ಟೋ ದಿನದ ಸಾಲಗಳು ಇಂದು ಮುಕ್ತಾಯಗೊಳ್ಳುವುದು. ಯಶಸ್ಸಿಲ್ಲದ ಯೋಜನೆಯ ನೆನೆಪು ದಣಿವನ್ನು ಉಂಟುಮಾಡಬಹುದು. ನಿಮ್ಮ ಶಕ್ತಿಯನ್ನು ಹೊಸದಾಗಿ ಪ್ರೇರಣೆಯಾದ ಕೆಲಸಗಳಿಗೆ ತಿರುಗಿಸಿ. ರಾಜಕೀಯದ ಒತ್ತಡವು ಅಧಿಕಾರದಲ್ಲಿ ಇದ್ದವರಿಗೆ ಬರಲಿದೆ. ಆದಷ್ಟು ಸ್ವಂತಿಕೆಯನ್ನು ಇಟ್ಟುಕೊಂಡು ಕೆಲಸ ಮಾಡಿ. ಕಾರ್ಯದಲ್ಲಿ ಆಗುವ ತೊಂದರೆಗಳಿಗೆ ಹಿರಿಯರ ಮಾರ್ಗದರ್ಶನವನ್ನು ಪಡೆಯಿರಿ.
ಮೀನ ರಾಶಿ: ನಿಮ್ಮ ತಮಾಷೆಯಿಂದ ಇನ್ನೊಬ್ಬರಿಗೆ ನೋವಾಂಟಾಗಬಹುದು. ಹಿರಿಯ ಹಾಗೂ ಪ್ರಮುಖವ್ಯಕ್ತಿಗಳನ್ನು ಇಂದು ಭೇಟಿಯಾಗುತ್ತೀರಿ. ಉದ್ಯೋಗದಲ್ಲಿ ಅಡಚಣೆಗಳಿರಬಹುದು, ಆದರೆ ಇವು ತಾತ್ಕಾಲಿಕ. ನಿಮ್ಮ ಸುತ್ತಲಿರುವ ಜನರಿಂದ ದೂರವಿರುವುದು ಒಳಿತು. ನಿಮ್ಮ ಹತ್ತಿರದರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಜಾಣ್ಮೆಯಿಂದ ಅದನ್ನು ಬಗೆಹರಿಸಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಥಳವನ್ನು ಬದಲಿಸುವಿರಿ. ಇಂದು ಭೂಮಿಯ ಮಾರಾಟದಿಂದ ಕಲಹವಾಗುವುದು.
ಲೋಹಿತ ಹೆಬ್ಬಾರ್ – 8762924271 (what’s app only)




