Horoscope Today June 29, 2024: ಈ ರಾಶಿಯವರಿಗೆ ಒಂಟಿಯಾಗೆ ಸುತ್ತಾಡುವ ಬಯಕೆ, ಹಣಕಾಸಿನ ಬಗ್ಗೆ ಎಚ್ಚರವಹಿಸಿ

2024 ಜೂನ್ 29 ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 29, 2024: ಈ ರಾಶಿಯವರಿಗೆ ಒಂಟಿಯಾಗೆ ಸುತ್ತಾಡುವ ಬಯಕೆ, ಹಣಕಾಸಿನ ಬಗ್ಗೆ ಎಚ್ಚರವಹಿಸಿ
ಈ ರಾಶಿಯವರಿಗೆ ಒಂಟಿಯಾಗೆ ಸುತ್ತಾಡುವ ಬಯಕೆ, ಹಣಕಾಸಿನ ಬಗ್ಗೆ ಎಚ್ಚರವಹಿಸಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 28, 2024 | 10:09 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶನಿವಾರ (ಜೂನ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:50ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:08 ರಿಂದ 07:45ರ ವರೆಗೆ.

ಮೇಷ ರಾಶಿ: ಇಂದು ಶ್ರಮಪಟ್ಟು ಮಾಡಿದ ಕೆಲಸವು ಕೊನೆಯ ಕ್ಷಣದಲ್ಲಿ ಹಾಳಾಗಬಹುದು. ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಿ. ಹಿರಿಯರ ದಿನವನ್ನು ಶ್ರದ್ಧೆಯಿಂದ ಮಾಡಿ.‌ ಅನೇಕ ಲಾಭಗಳು ನಿಮಗಾಗಲಿವೆ. ಬುದ್ಧಿಪೂರ್ವಕವಾಗಿ ನೀವಿಂದು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ.‌ ನಿಮ್ಮ ಬಗ್ಗೆ ಅಸಮಾಧಾನದ ಮಾತುಗಳು ಕೇಳಿಬರಬಹುದು. ನಿಮಗಿರುವ ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳು ಇರಲಿವೆ. ಹಿರಿಯರ ಉಪದೇಶವನ್ನು ಕೇಳುವಿರಿ. ದೇವತಾದರ್ಶನವನ್ನು ಪಡೆಯುವುದು ಉತ್ತಮ. ದಾಂಪತ್ಯದಲ್ಲಿ ಕಲಹವಿದ್ದರೂ ತಣ್ಣಗಾಗಿ ಹೊಂದಾಣಿಕೆಯಿಂದ ಮುಂದುವರಿಯುವಿರಿ. ಸಣ್ಣ ಕಲಾವಿದರಿಗೆ ಪ್ರೋತ್ಸಾಹವು ಸಿಗಲಿದೆ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮನೆಯಿಂದ ದೂರ ಕಳಿಸುವಿರಿ. ಭಿನ್ನಾಭಿಪ್ರಾಯಗಳಿಗೆ ಅತಿಯಾದ ಮಹತ್ತ್ವ ಕೊಡುವುದು ಬೇಡ.

ವೃಷಭ ರಾಶಿ: ಇಂದು ನಿಮ್ಮ ಹಣವು ಯಾವುದೋ ಒಂದು ರೀತಿಯಲ್ಲಿ ಖರ್ಚಾಗುವ ಸಾಧ್ಯತೆ ಇದ್ದು, ಅದನ್ನು ನಿಭಾಯಿಸಿ. ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಜಾರಿ ಬಿದ್ದು ನೋವನ್ನು ಅನುಭವಿಸುವಿರಿ. ನೀವಂದುಕೊಂಡ ಉದ್ಯೋಗವು ಸಿಗದೇ ಹೋಗಬಹದು. ಅತ್ತ ಕಡೆ ನಿಮ್ಮ ಗಮನವಿರಲಿ. ಅನಿರೀಕ್ಷಿತ ಪ್ರಯಾಣವನ್ನು ಮಾಡಬೇಕಾಗಬಹುದು. ಮಕ್ಕಳಿಂದ ಸಂತೋಷವಾಗಲಿದೆ. ತಿರುಗಾಟದಿಂದ‌ ಏನಾದರೂ ಅನಾಹುತವಾಗಬಹದು. ಮಾತುಗಳನ್ನು ಆಡಿವಾಗ ಎಚ್ಚರವಿರಲಿ. ಕಾಲ್ನಡೆಗೆಯಲ್ಲಿಯೇ ಬಹಳ ದೂರ ಕ್ರಮಿಸಬೇಕಾಗಬಹುದು. ನಡೆದಾಡುವ ಹಾದಿಗಳು ಒಂದೇ ರೀತಿ ಇರದು ಎನ್ನುವುದು ಗಮನದಲ್ಲಿಟ್ಟುಕೊಳ್ಳಿ. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ನಿಮ್ಮ ಹೆಜ್ಜೆಗಳೆಲ್ಲ ಗುರುತಾಗಬೇಕು ಎಂದರೆ ಸಾಧ್ಯವಾಗದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬಂಧುಗಳ ಬಗ್ಗೆ ಸಮಾಧಾನವಿರದು.

ಮಿಥುನ ರಾಶಿ: ನೀವು ನಾಲ್ಕು ಜನರನ್ನು ಕೇಳಿಯಾದರೂ ತೊಂದರೆಯಿಲ್ಲ, ನಿಮ್ಮ ಹೆಜ್ಜೆಗಳು ಸರಿಯಾಗಿರಿಲಿ. ಉನ್ನತ ಚಿಂತನೆಗಳು ನಿಮ್ಮನ್ನು ಉತ್ತಮ ಸ್ತರಕ್ಕೆ ಕೊಂಡೊಯ್ಯುವುದು. ಇಂದು ನಿಮಗೆ ಭವಿಷ್ಯದ ಬಗ್ಗೆ ಬಹಳ ಆಲೋಚನೆ ಇರಲಿದೆ‌. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕೆನಿಸುವುದು. ಎಲ್ಲದಕ್ಕೂ ಇನ್ನೊಬ್ಬರ ತಪ್ಪನ್ನೇ ತೋರಿಸುವುದು ಬೇಡ. ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು. ದೂರಪ್ರಯಾಣದಿಂದ ನಿಮಗೆ ತೊಂದರೆಗಳು ಕಾಣಿಸಿಕೊಳ್ಳುವುದು. ದೊಡ್ಡ ಅಪಾಯವೊಂದು ತಪ್ಪಿಹೋಗಿವುದು. ಕೃಷಿಯಲ್ಲಿ ಏನನ್ನಾದರೂ ಸಾಧಿಸಬೇಕೆನ್ನುವ ಹಂಬಲ ಇರಲಿದೆ. ಸಂಗಾತಿಯ ಜೊತೆ ಕಾಲಕಳೆಯುವಿರಿ. ತಂದೆಯಿಂದ ಅಸಮಾಧನಾವಾದೀತು. ದೈವವೇ ನಿಮ್ಮನ್ನು ಅನುಕೂಲ ವಾತಾವರಣದ ಕಡೆ ಒಯ್ಯಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಬರಲು ಯಾರಾದರೂ ಕಾಯುತ್ತಿರಬಹುದು. ಹಿತಶತ್ರುಗಳ ಕಿರುಕುಳವನ್ನು ನೀವು ಸಹಿಸಲಾರಿರಿ. ನಿಮ್ಮ ಸಿಟ್ಟಿನಿಂದ ಯಾರೂ ಮಾತನಾಡಿಸದೇ ಇರಬಹುದು.

ಕಟಕ ರಾಶಿ: ಇಂದು ನಿಮ್ಮ ಮನೆಯ ಹಿರಿಯರ ಸೇವೆಯಿಂದ ನೆಮ್ಮದಿ ಸಿಗುವುದು. ತಂತ್ರಜ್ಞರು ಉನ್ನತ ಸ್ಥಾನದ ಬಯಕೆಯಿಂದ ಕಛೇರಿಯನ್ನು ಬಿಡಬಹುದು. ನೂತನ ಉದ್ಯೋಗವನ್ನು ಪ್ರಾರಂಭಿಸುವ ಅಲೋಚನೆ ಇದ್ದರೆ ಸದ್ಯ ಕೈಬಿಡಿ. ಉದ್ಯೋಗಕ್ಕೆ ಸಂಬಂಧಿಸಿದಂತೆ ಗೊಂದಲಗಳನ್ನು ಪೂರ್ಣವಾಗಿ ಸರಿ ಮಾಡಿಕೊಳ್ಳಿ. ಮಕ್ಕಳ ವಿಚಾರದಲ್ಲಿ ನಿಮಗೆ ಹೆಮ್ಮೆ ಎನಿಸಬಹುದು. ಸುಂದರವಾದ ಪುರುಷನ ಬಲೆಗೆ ಬೀಳುವಿರಿ. ಮೋಜಿನಲ್ಲಿ ಜಾಗರೂಕತೆ ಇರಲಿ. ಸಕಾರಾತ್ಮಕ ಚಿಂತನೆಗಳು ಇರಲಿ. ಅತಿಯಾದ ಆಲೋಚನೆಯಿಂದ ಪ್ರಯೋಜನವಾಗದು. ನಿಮ್ಮದಾದ ಜನರನ್ನು ಸಂಪಾದಿಸಿಕೊಳ್ಳಿ. ವಸ್ತುಗಳ ಖರೀದಿಯು ಖರ್ಚನ್ನು ಹೆಚ್ಚು ಮಾಡುವುದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತವಾಗಿ ಇರದು. ಯಂತ್ರಗಳ ಕೆಲಸವು ನಿಮಗೆ ಸಾಕೆನಿಸಬಹುದು. ಆಸ್ತಿಯ ವಿಚಾರದಲ್ಲಿ ಆಕಸ್ಮಿಕ ತಿರುವು ಬರಬಹುದು. ಅನಿರೀಕ್ಷಿತ ತಿರುವುಗಳಲ್ಲಿ ನಿಮ್ಮ ನಡತೆ ಸಹಜವಾಗಿರಲಿ.

ಸಿಂಹ ರಾಶಿ: ನಿಮ್ಮ ಅನಾರೋಗ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಇಂದು ಪೂರ್ಣವಿಶ್ರಾಂತಿಯ ಕಡೆಗೆ ನೀವು ಹೋಗಬೇಕಾಗುವುದು. ಅರ್ಥಿಕತೆಯು ಏರಿಕೆಯಾಗಲಿದೆ. ನಿಮ್ಮವರ ಮೇಲೆ‌ ನಿಮಗೆ ಬೇಸರ ಉಂಟಾಗಬಹುದು. ವಿವಾಹವಾಗಬೇಕೆಂಬ ಆತುರ ಸರಿಯಲ್ಲ.‌ ಆಡಿದ ಮಾತನ್ನೇ ಮತ್ತೆ ಮತ್ತೆ ಹೇಳಿ ಕಿರಿಕಿರಿ ತರಿಸುವಿರಿ. ಕಾಲ ಬಂದಾಗ ಎಲ್ಲವೂ ಸರಿಯಾಗುತ್ತದೆ. ಪರಪುರುಷರ ಜೊತೆ ಮಾತನಾಡುವುದನದನು ಕಡಿಮೆ‌ ಮಾಡಿ. ಮನೆಯ ವಾತಾವರಣ ಹಿಡಿಸದೇ ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವನ್ನು ಪಡೆಯಬಹುದು. ಯಾರನ್ನೂ ಒತ್ತಾಯಕ್ಕೆ ಬಳಸಿಕೊಳ್ಳುವುದು ಬೇಡ. ಅತಿಯಾದ ಆಸೆಯಿಂದ ಮೋಸ ಹೋಗಬೇಕಾಗಬಹುದು. ಎಚ್ಚರಿಕೆ ಇಂದ ವ್ಯವಹರಿಸಿ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನವಾಗಿ ಕಾಣಿಸುವುದು.

ಕನ್ಯಾ ರಾಶಿ: ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ವಿದೇಶಕ್ಕೆ ಹೋಗಲು ನಿಮಗೆ ಕಛೇರಿಯಲ್ಲಿ ಅನುಮೋದನೆ ಸಿಗಬಹುದು. ಗೊಂದಲವಿರುವ ವಿಚಾರದ ಬಗ್ಗೆ ಅತಿಯಾಗಿ ತಲೆ ಕಡಸಿಕೊಳ್ಳಬೇಡಿ.‌ ಸ್ವಲ್ಪ ದಿನ ಅದನ್ನು ತಲೆಯಿಂದ ತೆಗದು ಹಾಕಿ. ನಿಮ್ಮ ಗೊಂದಲವನ್ನು ಇನ್ನೊಬ್ಬರಿಗೆ ಹೇರುವುದು ಬೇಡ. ಮೇಲಧಿಕಾರಿಗಳನ್ನು ಚೆನ್ನಾಗಿ ನೋಡಿಕೊಳ್ಳಿ.‌ ಅವರ ಕೆಲಸಗಳಿಗೆ ಸ್ಪಂದಿಸಿ. ಅವರ ಕಾರ್ಯಗಳನ್ನು ಪ್ರೀತಿಯಿಂದ ಮಾಡಿಕೊಡುವಿರಿ. ನಿಮ್ಮೊಳಗಿನ ಜಗಳವು ಬೀದಿಗೆ ಬರಬಹುದು. ಪತ್ನಿಗೆ ನೂತನ ವಸ್ತ್ರವನ್ನು ಖರೀದಿಸಿ ಕೊಂಡೊಯ್ಯುವಿರಿ. ನಿಮ್ಮ ಬೆಳವಣಿಗೆತಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ವೈದ್ಯವೃತ್ತಿಯಲ್ಲಿ ಒತ್ತಡವಿರುವುದು. ನೀವು ಕಷ್ಟವನ್ನೂ ಸಂತೋಷದಿಂದ ಕಳೆಯುವಿರಿ. ಇಂದು ಕೆಲಸಕ್ಕಿಂತ ಪ್ರಯಾಣವೇ ಹೆಚ್ಚಾಗಬಹುದು.

ತುಲಾ ರಾಶಿ: ಇಂದು ನಿಮಗೆ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಾಗಬಹುದು. ಎಲ್ಲ ನಿರರ್ಥಕ ಎನ್ನುವ ಭಾವನೆಯು ನಿಮ್ಮಲ್ಲಿ ಬರಬಹುದು. ಒಂಟಿಯಾಗೆ ಸುತ್ತಾಡುವ ಬಯಕೆ ಉಂಟಾಗಲಿದೆ. ಅಧಿಕ ಸುತ್ತಾಟದಿಂದ ಆಯಾಸವಾಗಬಹುದು. ನಿಮ್ಮ ಶಕ್ತಿಯನ್ನು ಆಧರಿಸಿಕೊಂಡು ಮುಂದುವರಿಯಿರಿ. ಜೀವನಕ್ಕೆ ಅನುಭವಿಗಳ ಮಾರ್ಗದಶರ್ನವನ್ನು ಪಡೆದುಕೊಳ್ಳುವಿರಿ. ಹಣಕಾಸಿನ ವಿಷಯದಲ್ಲಿ ಸಾಕಷ್ಟು ಗೊಂದಲವಿರಬಹುದು. ಸಹಾಯಕ್ಕೆ ಯಾರೂ ಬರುವುದಿಲ್ಲ ಎಂಬ ಅನಾಥ ಪ್ರಜ್ಞೆಯು ಕಾಡಬಹುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇದ್ದು ಅದನ್ನು ಆಪ್ತರ ಬಳಿ ಹೇಳಿಕೊಳ್ಳುವ ಮನಸ್ಸಾದೀತು. ಹಳೆಯ ನೋವುಗಳು ಬಾಧಿಸುವುದು. ನಿಮ್ಮ ವಾಹನವು ದುರಸ್ತಿಗೆ ಬರಬಹುದು. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ಇಂದು ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ.

ವೃಶ್ಚಿಕ ರಾಶಿ: ಭವ್ಯ ಗೃಹದ ಕನಸನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಕೃಷಿಯಲ್ಲಿ ಏನಾದರೂ ಮಾಡಬೇಕು ಎಂಬ ಆಸಕ್ತಿಯು ಬರವುದು. ವಾಹನಕ್ಕೋಸ್ಕರ ಸಾಲಮಾಡುವ ಸ್ಥಿತಿ. ಬಂಧುಗಳ ಸಹಕಾರ ಸಿಗದೇ ಅವರನ್ನು ದ್ವೇಷಿಸಬಹುದು. ಅತಿಯಾದ ಹಠವು ಒಳ್ಳೆಯದಲ್ಲ. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಿದರೆ ಕೂಡಲೇ ಸಿಗುತ್ತದೆ ಎಂಬ ಭ್ರಮೆ ಬೇಡ. ಯಾರ ಹಂಗಿಲ್ಲದೇ ಸ್ವಾತಂತ್ರ್ಯವಾಗಿ ಇರಲು ಬಯಸುವಿರಿ. ಇಂದು ಮಾಡಬೇಕೆಂಬ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಮನೆಯಿಂದ ದೂರವಿರುವವರಿಗೆ ಇಂದು ಮನೆಯ ನೆನಪಾಗಬಹುದು. ದ್ವಂದ್ವದಲ್ಲಿ ನಿಮ್ಮ ಮನಸ್ಸು ಇರಲಿದೆ. ದೇವರ ವಿಷಯದಲ್ಲಿ ನಂಬಿಕೆ ಕಡಿಮೆ ಆಗಬಹುದು. ಆಲಸ್ಯದಿಂದ‌ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು.

ಧನು ರಾಶಿ: ಇಂದು ನಿಮ್ಮ ನಡತೆಯು ಸಾಮಾನ್ಯರಂತೆ ಕಂಡರೂ ಪ್ರಭಾವವು ಅಧಿಕವಾಗಿರುತ್ತದೆ‌. ಸಾಮಾಜಿಕವಾಗಿ ನಿಮ್ಮ ಕಾರ್ಯವನ್ನು ಗುರುತಿಸಿ ಸಮ್ಮಾನಿಸಬಹುದು. ಹೂಡಿಕೆಯನ್ನು ಮಾಡಿ ಹಣವನ್ನು ಉಳಿಸಿಕೊಳ್ಳುವುದು ಉತ್ತಮ. ಇಂದಿನ ಒತ್ತಡವನ್ನು ಚೆನ್ನಾಗಿ ನಿಭಾಯಿಸಬಲ್ಲಿರಿ. ಉದ್ಯೋಗವನ್ನು ಬಿಡುವ ಮನಸ್ಸಾಗಬಹುದು. ರಮಣೀಯವಾದ ಪ್ರದೇಶಕ್ಕೆ ಹೋಗಬೇಕೆನ್ನುವ ಆಸೆ ಬರಬಹುದು. ಚಂಚಲವಾದ ಮನಸ್ಸಿಗೆ ಧ್ಯಾನ ಪರಿಹಾರವಾಗಲಿದೆ. ನಿಮ್ಮ ಕಷ್ಟಕ್ಕೆ ಬಂದವರು ಆಪ್ತರಾಗಬಹುದು. ಮನೆಯ ಕೆಲಸವು ನಿಧಾನವಾಗಿ ಸಾಗಬಹುದು. ಯಾವುದನ್ನೇ ಆದರೂ ಸಾಮರ್ಥ್ಯದಷ್ಟೇ ಸೇವಿಸಿ. ಇಲ್ಲವಾದರೆ ಅಜೀರ್ಣವಾದೀತು. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಮನಸ್ಸಿನ ಸ್ಥಿರತೆಯಲ್ಲಿ ಅಭಾವವಿದ್ದು ನಿಮ್ಮ ಗುರಿಯೂ ಬದಲಾಗುವುದು. ಪ್ರೇಮವು ಕೊನೆಗೂ ನಿಮ್ಮ ಇಚ್ಛೆಯಂತೆ ಆಗಲಿದೆ.

ಮಕರ ರಾಶಿ: ನಿಮ್ಮ ಕಾರ್ಯದ ದಕ್ಷತೆಯಿಂದ ಉನ್ನತ ಸ್ಥಾನವು ಸಿಗುವುದು. ಕೆಲವರಿಗೆ ವೃತ್ತಿಯನ್ನು ಬದಲಿಸಬೇಕಾಗಿ ಬರಬಹುದು. ಮನೆಯಲ್ಲಿ ಮಕ್ಕಳ ಜೊತೆ ಸುಂದರ ವಾತಾವರಣವಿರುತ್ತದೆ. ಸಂಗಾತಿಯಿಂದ ದೂರ ಉಳಿಯಬೇಕಾದ ಸ್ಥಿತಿ ಬರಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಆಡಿಕೊಂಡಾರು. ಸಹೋದ್ಯೋಗಿಗಳು ನಿಮ್ಮ ಮೇಲೆ ಕೆಲಸದ ಭಾರವನ್ನು ಹೊರಿಸಬಹುದು. ನಿಮ್ಮ ನೋವನ್ನು ಸಂಗಾತಿಯ ಜೊತೆ ಹಂಚಿಕೊಳ್ಳಿ. ಮನೆಗೆ ಬಂದ ಅತಿಥಿಗಳ ಜೊತೆ ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳು ಶಿಕ್ಷಕರ ಸಹಾಯವನ್ನು ಪಡೆದು ಮುಂದಿನ ಓದಿನ ಬಗ್ಗೆ ಗಮನಹರಿಸಬಹುದು. ಕೆಲಸವು ಅಪೂರ್ಣವಾಗಿ ನೀವು ಆದಷ್ಟು ಬೇಗ ಮುಗಿಸುವ ತವಕದಲ್ಲಿ ಇರುವಿರಿ. ದಾಂಪತ್ಯದ ವಿರಸವು ಬಗೆ ಹರಿಯಬಹುದು. ಕುಟುಂಬದ ನೆಮ್ಮದಿಯು ನಿಮ್ಮ ಕಠೋರ ಮಾತಿನಿಂದ ವಿಚಲಿತವಾಗುವುದು.

ಕುಂಭ ರಾಶಿ: ಇಂದು ನಿಮ್ಮವರ ಅವಶ್ಯಕತೆ ತಿಳಿಯುವುದು. ಮನೆಯವರ ನೆನಪು ನಿಮ್ಮನ್ನು ಬಹಳ ಕಾಡಬಹುದು. ಸಹೋದರರ ಜೊತೆ ಕಲಹವಾಗಿ ಕೆಲವು ಕಾಲ ಮೌನವಹಿಸುವಿರಿ. ಕೆಟ್ಟವರ ಸಹವಾಸದಿಂದ ಕೆಟ್ಟ ಹೆಸರೇ ಬರಲಿದೆ.‌ ಮನೆಯ ಕಾರ್ಯದಲ್ಲಿ ನೀವು ಭಾಗಿಯಾಗುವಿರಿ. ನಿಗದಿತ ಸಮಯಕ್ಕೆ ನಿಮ್ಮ ಕೆಲಸಗಳು ಮುಗಿಯದು. ಮುಂದೆ ಮಾಡಿದರಾಯಿತು ಎಂಬ ಮಾನಸಿಕ ಸ್ಥಿತಿಯನ್ನು ಬಿಡುವುದು ಒಳ್ಳೆಯದು. ತಂದೆಯಿಂದ ಹಿತವಚನವು ಸಿಗಬಹುದು. ಹಳೆಯ ಸ್ನೇತರು ದೂರವಾಣಿಯ ಮೂಲಕ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಾರು.‌ ತಾಳ್ಮೆಯಿಂದ ಎಲ್ಲವನ್ನೂ ಆಲಿಸಿ. ಅವರಿಗೆ ಪರಿಹಾರ ಸಿಗದಿದ್ದರೂ ಸಮಾಧಾನವಂತೂ ಸಿಗಲಿದೆ. ಅವರಿಗೆ ಬೇಸರವಾಗುವಂತೆ ನೋಡಿಕೊಳ್ಳಬೇಡಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ. ವಿದ್ಯಾಭ್ಯಾಸದ ಪ್ರಗತಿಯಿಂದ ಮನೆಯಲ್ಲಿ ಖುಷಿ ಇರಲಿದೆ.

ಮೀನ ರಾಶಿ: ಇಂದು ನೀವು ಭೂಮಿಯ ವಿಚಾರವಾಗಿ ಕಲಹವನ್ನು ಮಾಡಬೇಕಾಗಿಬರಬಹುದು. ನೀವು ಪ್ರಯತ್ನಿಸಿದ ಕಾರ್ಯಗಳು ಫಲಿಸುವುದು ಎಂಬ ನಂಬಿಕೆ ಇರುವುದು. ವಾಹನವನ್ನು ಓಡಿಸುವ ಎಚ್ಚರಿಕೆಯಿಂದ ಇರಿ. ನೀವು ಮಾಡಲು ಹೊರಟ ಕೆಲಸದ ಮೇಲೇ ಹೆಚ್ಚು ಗಮನವಿರಲಿ. ಅನ್ಯ ವಿಚಾರದಲ್ಲಿ ನೀವು ತಲೆ ಹಾಕಿ ಮುಖ್ಯ ಕೆಲಸವನ್ನು ಮರೆಯಬಹುದು. ತಪ್ಪು ನಡೆಯದೇ ಇದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆ ಇಲ್ಲ. ನಿಮ್ಮ ಕೆಲಸವನ್ನು ಸುಲಭಗೊಳಿಸುವ ವಿಧಾನವನ್ನು ಕಂಡುಕೊಳ್ಳಿ. ಸ್ನೇಹಿತರ ಜೊತೆ ಆಪ್ತಸಮಾಲೋಚನೆ ನಡೆಯಲಿದೆ. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ನಿಮ್ಮ ಗುರಿಯ ಬಗ್ಗೆ ವಿಶ್ವಾಸವು ನಿಮಗಿರಲಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗೆ ಪರಿಹಾರ ಕಾಣುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವು ಇರುವದು.

ಲೋಹಿತ ಹೆಬ್ಬಾರ್ – 8762924271 (what’s app only)

Published On - 10:03 pm, Fri, 28 June 24

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?