Horoscope Today June 9, 2024: ಈ ರಾಶಿಯವರ ಪ್ರೇಮ ಜೀವನದಲ್ಲಿ ತಿರುವು, ಸಂಗಾತಿಯ ಕಾರ್ಯಕ್ಕೆ ಸಹಕರಿಸುವಿರಿ

2024 ಜೂನ್ 8 ದಿನ ಭವಿಷ್ಯ: ಭಾನುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 9, 2024: ಈ ರಾಶಿಯವರ ಪ್ರೇಮ ಜೀವನದಲ್ಲಿ ತಿರುವು, ಸಂಗಾತಿಯ ಕಾರ್ಯಕ್ಕೆ ಸಹಕರಿಸುವಿರಿ
ಈ ರಾಶಿಯವರ ಪ್ರೇಮ ಜೀವನದಲ್ಲಿ ತಿರುವು, ಸಂಗಾತಿಯ ಕಾರ್ಯಕ್ಕೆ ಸಹಕರಿಸುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 08, 2024 | 7:35 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜೂನ್ 0​9) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಸಂಜೆ 05:23 ರಿಂದ 06:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:32 ರಿಂದ 02:09ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:46 ರಿಂದ 05:23ರ ವರೆಗೆ.

ಮೇಷ ರಾಶಿ: ಇಂದು ನೀವು ಮಾಡಿದ ಹೂಡಿಕೆಯಿಂದ ಲಾಭವಿದೆ. ದುರಭ್ಯಾಸದಿಂದ ಹಣವನ್ನು ಕಳೆದುಕೊಳ್ಳುವಿರಿ. ವ್ಯಾಪರದಲ್ಲಿ ಲಾಭವಾಗಲಿದೆ. ಇಂದು ನೀವು ವಾಹನಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಧಾರ್ಮಿಕ ಕಾರ್ಯಗಳನ್ನು ನಡೆಸುವ ಉದ್ದೇಶವಿದ್ದರೆ ಇಂದೇ ಮಾಡಿಕೊಳ್ಳಿ. ನಿಮ್ಮ ಬಗ್ಗೆ ಮನೆಯಲ್ಲಿ ಮಾತನಾಡುವರು. ಇಂದು ನೀವು ಕಾರ್ಯದ ಒತ್ತಡದಲ್ಲಿ ಇದ್ದರೂ ನೀವು ಕುಟುಂಬಕ್ಕಾಗಿ ಸಮಯವನ್ನು ಕೊಡುವಿರಿ. ಸಂಗಾತಿಯು ನಿಮಗೆ ಸಂಪೂರ್ಣ ಬೆಂಬಲ ನೀಡುವರು. ತಾಯಿಯ ಕಡೆಯ ಬಂಧುಗಳು ನಿಮ್ಮನ್ನು ಭೇಟಿಯಾಗಲಿದ್ದಾರೆ. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಕೋಪವನ್ನು ಯಾರೆದುರೂ ಪ್ರಕಟಿಸುವುದು ಬೇಡ. ಬೇಕಾದುದನ್ನು ಆಪ್ತರಿಂದ ಕೇಳಿಪಡೆಯುವಿರಿ.

ವೃಷಭ ರಾಶಿ: ಇಂದು ನೀವು ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದ ಕಾರ್ಯವನ್ನು ನಿಭಾಯಿಸಲು ಕಲಿಯುವಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ. ಕೊಟ್ಟ ಸಾಲ ಮರಳಿಬರಹುದು. ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ಇಂದು ನೀವು ಕುಟುಂಬದ ಅಗತ್ಯತೆಗಳನ್ನು ಪೂರೈಸಲು ಓಡಾಟ ನಡೆಸಲಿದ್ದೀರಿ. ನಿಮ್ಮ ತಾಯಿಯು ಕಿರಿಯ ಮಗನಾದ ನಿಮಗೆ ಬೆಂಬಲವನ್ನು ಕೊಡುವರು. ಹಳೆಯ ವಸ್ತುಗಳ ದುರಸ್ತಿಯಾಗಲಿದೆ. ಯಂತ್ರೋದ್ಯಮಿಗಳು ಇಂದು ಉತ್ತಮ ಲಾಭವನ್ನು ಪಡೆಯುವರು. ಹಿರಿಯರ ಆಸೆಗಳನ್ನು ಪೂರ್ಣಗೊಳಿಸುವ ಒಮ್ಮನಸ್ಸು ಇರಲಿದೆ. ಇಂದು ಆಸ್ತಿಯ ವಿವಾದವು ಬಗೆಹರಿಯಲಿದೆ. ಯಾರಾದರೂ ನಿಮ್ಮನ್ನು ಕಂಡು ಅವಮಾನಿಸುವರು. ಉತ್ತರಿಸಿ ಇನ್ನಷ್ಟು ಹತಾಶರಾಗಬೇಡಿ. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು.

ಮಿಥುನ ರಾಶಿ; ಇಂದು ನಿಮ್ಮ ವಾಹನದಲ್ಲಿ ದೀರ್ಘಪ್ರಯಾಣವು ಮಾಡುವುದು ಬೇಡ. ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗಗಳು ತೆರದುಕೊಳ್ಳಬಹುದು. ಇಂದು ನಿಮ್ಮ ಸಾಮಾರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ನಿಮಗೆ ಮಕ್ಕಳ ಕಡೆಯಿಂದ ಸಮಸ್ಯೆಗಳು ಬರಬಹುದು. ಹೊರಗೆ ತಿನ್ನುವುದು ಮತ್ತು ಕುಡಿಯುವುದನ್ನು ತಪ್ಪಿಸಿ, ಇಲ್ಲದಿದ್ದರೆ ನಿಮ್ಮ ಆರೋಗ್ಯವು ಹದಗೆಡಬಹುದು. ಹಿರಿಯರ ಜೊತೆ ನೀವು ಅನುಭವವನ್ನು ಪಡೆಯುವಿರಿ. ನಿಮ್ಮವರಿಂದ ನಿಮಗೆ ಕಷ್ಟಗಳು ಬರಬಹುದು ಎಂಬ ನಿರೀಕ್ಷೆಯಲ್ಲಿ ಇರುವಿರಿ. ಆಸ್ತಿ ಖರೀದಿಯ ಬಗ್ಗೆ ಚಿಂತನೆ ಇರುವುದು. ಲಾಭಕ್ಕೋಸ್ಕರ ಕೆಲಸವನ್ನು ಮಾಡದೇ ಖುಷಿಗೆ ಉದ್ಯೋಗವನ್ನು ಪ್ರಾರಂಭಿಸುವ ಮನಸ್ಸು ಮಾಡುವಿರಿ. ಸಾಮೂಹಿಕ ಕಾರ್ಯದಲ್ಲಿ ನಿಮಗೆ ಯಶಸ್ಸು ಸಿಗಬಹುದು. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆದು ಅಹಂಕಾರ ಮಡುವುದು ಬೇಡ. ಹಿರಿಯರೆದುರು ವಿನಯವಿರಲಿ.

ಕರ್ಕಾಟಕ ರಾಶಿ: ಅಹಂಕಾರದಿಂದ ಕೆಲವರನ್ನು ಕಳೆದುಕೊಳ್ಳುವಿರಿ. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯ ಮತ್ತಾವುದೂ ಇಲ್ಲ. ದಾಂಪತ್ಯವು ಇನ್ನೊಬ್ಬರು ಚಾಡಿಯಿಂದ ಹಾಳಾಗಬಹುದು. ಸಂತಾನದ ಉತ್ಸಾಹದಲ್ಲಿ ಇರುವಿರಿ. ಇಂದು ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳುವಿರಿ. ಅದು ನಿಮ್ಮ ಮನಸ್ಸನ್ನು ಸಂತೋಷಪಡಿಸುತ್ತದೆ. ದುಂದು ವೆಚ್ಚಗಳನ್ನು ತಪ್ಪಿಸಿ. ಅವಶ್ಯಕತೆಯಿದ್ದಷ್ಟು ಮಾತ್ರ ಹಣವನ್ನು ಬಳಸಿ. ಸಂದರ್ಭದ ವರ್ತನೆಯನ್ನು ಕಂಡು ಯಾರ ಬಗ್ಗೆಯೂ ತೀರ್ಮಾನಕ್ಕೆ ಬರಬೇಡಿ. ಮನೆಯ ಸ್ಥಳವನ್ನು ಬದಲಾಯಿಸುವ ಅನಿವಾರ್ಯತೆ ಬಂದೀತು. ಅನ್ಯಾನ್ಯ ಮಾರ್ಗಗಳಿಂದ ಹಣವು ಬರಬಹುದು. ‌ಕಳೆದಕೊಂಡ ವಸ್ತುವಿಗೆ ತೀವ್ರ ಹುಡುಕಾಟ ಇರುವುದು.‌ ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ.

ಸಿಂಹ ರಾಶಿ: ಇಂದು ಕುಟುಂಬದ ಸದಸ್ಯ ನಿಮ್ಮ ಜೊತೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ಮಾತು ಕಡಿಮೆ, ಕಾರ್ಯ ಹೆಚ್ಚು ಮಾಡುವತ್ತ ಗಮನ ಹರಿಸುವುದು ಉತ್ತಮ. ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕಛೇರಿಯ ಕೆಲಸದಲ್ಲಿ ವ್ಯತ್ಯಾಸವಾದ ಕಾರಣ ಕೋಪಗೊಳ್ಳುವಿರಿ. ನಿಮ್ಮ ಮೇಲೆ ಸಹೋದ್ಯೋಗಿಗಳು ಕಿಡಿಕಾರಬಹುದು‌. ಉದ್ಯೋಗವನ್ನು ಬಿಡುವುದಾಗಿ ಬೆದರಿಸಿಯಾರು. ಮನೆಯ ಹಿರಿಯರ ಮಾರ್ಗದರ್ಶನದಲ್ಲಿ ಕುಟುಂಬ ವ್ಯವಹಾರವು ಮತ್ತೆ ಬೆಳೆಯುತ್ತದೆ. ನಿಮ್ಮ ಬುದ್ಧಿಯನ್ನು ಪ್ರದರ್ಶಿಸಬೇಡಿ. ನಿಮ್ಮ ವೈಯಕ್ತಿಕವಿಚಾರವನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು. ಅಕಾರಣವಾಗಿ ಸಂತೋಷಪಡುವಿರಿ. ಈ ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು.

ಕನ್ಯಾ ರಾಶಿ: ಇಂದು ನೀವು ಕೋಪವು ಹತೋಟಯಲ್ಲಿ ಇರಲಿ. ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ವಿದೇಶದ ವ್ಯಕ್ತಿಗಳ ಸ್ನೇಹವಾಗಲಿದೆ. ನೀವು ಬುದ್ಧಿವಂತಿಕೆಯಿಂದ ಕೆಲಸ ಮಾಡಿದರೂ ಕೈಗೂಡದೇ ಹೋಗಬಹುದು. ವ್ಯವಹಾರದಲ್ಲಿ ಅಧಿಕ ಲಾಭವನ್ನು ಅಪೇಕ್ಷಿಸುವಿರಿ. ಒಳ್ಳೆಯ ಕಡೆಗೆ ಹೂಡಿಕೆ ಮಾಡುವುದರಿಂದ ನಿಮ್ಮ ಸಂಪತ್ತು ವೃದ್ಧಿಯಾಗುವುದು. ತುಂಬ ದಿನಗಳಿಂದ ನಡೆಯುತ್ತಿರುವ ಕುಟುಂಬದ ಕಲಹವು ನಿಮಗೆ ಬೇಸರ ತರಿಸೀತು‌. ಯಾರನ್ನಾದರೂ ವಹಿಸಿಕೊಂಡು ಹೋಗುವಿರಿ, ಅವರಿಂದ ನೋವಾಗಲಿದೆ. ನಿಮ್ಮ ಸಂಬಂಧಿಕರಿಂದ ಕೆಲವು ಉತ್ತಮ ಸಲಹೆಯನ್ನು ಪಡೆಯಬಹುದು. ಕಾನೂನು ಪ್ರಕರಣದಲ್ಲಿ ನೀವು ಗೆಲ್ಲುವ ಎಲ್ಲ ಸಾಧ್ಯತೆಗಳಿವೆ. ನಿಮ್ಮ ಉದ್ಯೋಗವನ್ನು ಅಪಹಾಸ್ಯ ಮಾಡಬಹುದು.

ತುಲಾ ರಾಶಿ: ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿರುವ ನಿಮಗೆ ಪ್ರೇಮ ಜೀವನವು ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ದೈವದ ಬಗ್ಗೆ ಭಕ್ತಿಯ ಕೊರತೆ ಹೆಚ್ಚಾಗಿ ಕಾಣಿಸುವುದು. ಸಂಬಂಧವು ಗಟ್ಟಿಯಾದರೂ ಖರ್ಚು ಹೆಚ್ಚಾಗಬಹುದು ಎಂಬ ಭಾವನೆಯಲ್ಲಿ ನೀವಿರುವಿರಿ. ನಿಮ್ಮ ಕಾರ್ಯಗಳಿಗೆ ಸಂಗಾತಿಯು ಸಹಕರಿಸಬಹುದು. ಸ್ವ ಉದ್ಯೋಗವನ್ನು ನಡೆಸುತ್ತಿದ್ದರೆ, ಕೆಲಸಕ್ಕೆ ಕೆಲವರನ್ನು ಸೇರಿಸಿಕೊಳ್ಳುವಿರಿ. ಸ್ನೇಹಿತರು ನಿಮ್ಮ ಜೊತೆ ಎಂದಿನಂತೆ ಇಲ್ಲವೆಂಬ ಬುದ್ಧಿಯು ತರ್ಕಿಸುವುದು. ಸಂತೋಷಕ್ಕೆ ಬೇಕಾದ ಎಲ್ಲ ಇದ್ದರೂ ಚಿಂತೆ ಇರಲಿದೆ. ಸಕಾರಾತ್ಮಕ ಆಲೋಚನೆ ಇರಲಿ. ವಿರಳ ಲಾಭದ ಅವಕಾಶಗಳ ಬಗ್ಗೆಯೂ ನೀವು ಗಮನ ಹರಿಸಬೇಕು. ಇದು ಜಾಣತನವೂ ಹೌದು. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಇನ್ನೊಬ್ಬರ ಬಗ್ಗೆ ಆಡಿಕೊಳ್ಳುವುದು ಸರಿ ಎನಿಸದು.

ವೃಶ್ಚಿಕ ರಾಶಿ; ಇಂದು ನೀವು ಮಾತನ್ನು ಕಡಿಮೆ ಮಾಡುವಿರಿ. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಅವಿವಾಹಿತರಿಗೆ ಮಾಂಗಲ್ಯ ಭಾಗ್ಯ ಕೂಡಿಬರಲಿದೆ. ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ನಿಮ್ಮ ಸ್ನೇಹಿತರು ಮತ್ತು ಬಂಧುಗಳ ಕಾರಣದಿಂದ ಮನೆಯಲ್ಲಿ ಕಲಹಗಳು ಉಂಟಾಗಬಹುದು. ಒತ್ತಡಕ್ಕೆ ಸಿಲುಕಿ ಅಪ್ರಬುದ್ಧವಾಗಿ ಮಾತನಾಡಬೇಡಿ. ಕುಟುಂಬ ಜೀವನದಲ್ಲಿ ಜಾಗರೂಕರಾಗಿರಿ, ಕೋಪವನ್ನು ನಿಮ್ಮ ಹತೋಟಿಯಲ್ಲಿ ಇಟ್ಟುಕೊಳ್ಳಿ. ಇಲ್ಲದಿದ್ದರೆ ನಿಮ್ಮ ಸಂಬಂಧವು ಮುರಿದುಹೋಗುವುದು. ಆರ್ಥಿಕವಾಗಿ ಸಬಲರಾಗಲು ನಿಮಗೆ ಅನೇಕ ದಾರಿಗಳು ಕಾಣಿಸುವುವು. ನೀವು ಯಾರಿಗಾದರೂ ಹಣವನ್ನು ಸಾಲವಾಗಿ ನೀಡಿದ್ದರೆ, ಅದನ್ನು ಮರಳಿ ಪಡೆಯುವ ಸಾಧ್ಯತೆ ತುಂಬಾ ಕಡಿಮೆ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವ ಅವಶ್ಯಕತೆ ಇಲ್ಲ. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು.

ಧನು ರಾಶಿ: ಇಂದು ನೀವು ಉದ್ಯಮದ ಕಾರಣಕ್ಕೆ ಕೈಗೊಂಡ ಪ್ರಯಾಣವು ಪ್ರಯೋಜನಕಾರಿಯಾಗಲಿದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಸಂಬಂಧಗಳು ಕೂಡಿ ಬರಲಿದೆ. ನಿಮ್ಮ ವೃತ್ತಿಯ ಬಗ್ಗೆ ನಿಮಗೆ ಕೀಳರಿಮೆ ಬರಬಹುದು. ವಿನಾಕಾರಣ ಯಾರ ಮೇಲೂ ಸಿಟ್ಟಾಗಬೇಡಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿಮ್ಮ ಆಸಕ್ತಿಯು ಹೆಚ್ಚಾಗುತ್ತದೆ. ನೀವು ದೊಡ್ಡ ವ್ಯಕ್ತಿಗಳ ಭೇಟಿಯಾಗಲಿದೆ. ಒಟ್ಟಿಗೆ ಬದುಕುವ ಆನಂದವನ್ನು ಅನುಭವಿಸುವಿರಿ. ಅವಿವಾಹಿತರು ವಿವಾಹಕ್ಕೆ ಸಂಬಂಧಿಸಿದ ಶುಭ ಸುದ್ದಿಗಳನ್ನು ಪಡೆಯುವಿರಿ. ಸುಮ್ಮನಿರುವ ಶತ್ರುಗಳನ್ನು ತಟ್ಟಿ ಎಬ್ಬಿಸಬೇಡಿ. ನಿಮ್ಮ ಕಾರ್ಯವನ್ನು ಮೊದಲು ಪೂರ್ತಿ ಮಾಡಿಕೊಳ್ಳಿ. ವಿದೇಶಕ್ಕೆ ಬೇಕಾದ ತಯಾರಿಗಳನ್ನು ಮಾಡುವಿರಿ. ಸ್ನೇಹಿತನ ಮನೆಯಲ್ಲಿ ಇಂದು ಹಬ್ಬದ ವಾತಾವರಣವು ಇರಲಿದೆ. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಕೊಡುವುದು.

ಮಕರ ರಾಶಿ: ಇಂದು ನೀವು ಜಾಗರೂಕತೆಯಿಂದ ಆಯೋಜಿಸಿ ಕಾರ್ಯವನ್ನು ಸಾಧಿಸಿ. ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು ಅನುಭವಿಸುತ್ತೀರಿ.‌ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿರುತ್ತವೆ. ಸಂಬಂಧಗಳು ಸಡಿಲವಾಗದಂತೆ ಸಂಭಾಳಿಸಿಕೊಂಡು ಹೋಗಿ. ಪ್ರಯತ್ನಪೂರ್ವಕವಾಗಿ ಮಾಡಿದ ಕೆಲಸವು ವ್ಯರ್ಥವಾಗಬಹುದು. ಬೇಸರಿಸದೇ ಅದನ್ನು ಆಸ್ವಾದಿಸಿ. ಖುಷಿಯಿಂದ ಇರಬಹುದು. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವರು. ನಿಮ್ಮ ಇಚ್ಛೆಗೆ ಪೂರಕವಾಗಿಲ್ಲವೆಂದು ಕೋಪಗೊಳ್ಳುವುದು ಬೇಡ. ನಿಮ್ಮ ಕೆಲಸವು ಅನೇಕರಿಗೆ ಇಷ್ಟವಾಗಲಿದೆ. ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಂದರ್ಭಗಳು ಬರಬಹುದು. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು. ಆಲಸ್ಯದಿಂದ ಮುಖ್ಯ ಕೆಲಸವನ್ನೇ ಮರೆಯುವಿರಿ.

ಕುಂಭ ರಾಶಿ: ನೀವು ಸಂಗಾತಿಯ ಜೊತೆ ಸಂತೋಷವನ್ನು ಹಂಚಿಕೊಳ್ಳುವಿರಿ. ಆದರೆ ಅವರ ಸಮಸ್ಯೆಗಳ ಬಗ್ಗೆ ಮಾತನಾಡಿ ನಿಮ್ಮನ್ನು ಇನ್ನಷ್ಟು ತೊಂದರೆಗೊಳಿಸಬಹುದು. ತಂದೆಗೆ ಸಮಾನವಾದವರ ಬಳಿ ಹಿತೋಪದೇಶವನ್ನು ಆಲಿಸಿ. ನೀವು ಉತ್ತಮ ವ್ಯಕ್ತಿಯನ್ನು ಭೇಟಿಯಾಗಿ, ಅವರ ಜೊತ ಕಾಲವನ್ನು ಕಳೆಯುವಿರಿ. ನಿಮ್ಮ ಕಠಿಣ ಪರಿಶ್ರಮದಿಂದ ನಿಮ್ಮ ಕಾರ್ಯವು ಸಾಧ್ಯವಾಗುವುದು. ನಿಮ್ಮ ಯಶಸ್ಸನ್ನು ಸಹಿಸಲಾಗದೇ ನೊಂದುಕೊಳ್ಳುವವರಿದ್ದಾರೆ. ದಾಂಪತ್ಯಜೀವನದಲ್ಲಿ ವಿವಾದವಾಗುವ ಸಾಧ್ಯತೆ ಇದೆ. ಅರ್ಥವಿಲ್ಲದ ಚರ್ಚೆಗಳಲ್ಲಿ ಸಮಯ ಮತ್ತು ಹಣ ಎರಡೂ ನಷ್ಟ ಮಾಡಿಕೊಳ್ಳಬೇಕಾಗಬಹುದು. ನಿಮ್ಮ ಮನಸ್ಸನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ತೊಂದರೆಯಾಗುವುದು ಗೊತ್ತಿದ್ದರೂ ಬೇಕೆಂದೇ ಸಿಕ್ಕಿಹಾಕಿಕೊಳ್ಳುವಿರಿ. ವಿಷಯದಲ್ಲಿ ನೀವು ಗೊಂದಲವಿರಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವ್ಯವಸ್ಥೆಯನ್ನು ಮಾಡುವಿರಿ.

ಮೀನ ರಾಶಿ: ನಿಮ್ಮ ಒರಟುತನದಿಂದ ದಾಂಪತ್ಯದಲ್ಲಿ ಕಲಹವಾಗುವ ಸಾಧ್ಯತೆ ಇದೆ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸಿದರೆ ಉತ್ತಮ. ಅಪ್ರಬುದ್ಧರ ಎದುರು ನಿಮ್ಮ ಮನೆಯ ವ್ಯವಹಾರಗಳನ್ನು ಹೇಳಬೇಡಿ. ಅದು ಮತ್ತೇನೋ ಆಗಿ ನಿಮ್ಮ ಮರ್ಯಾದೆಗೆ ಕುತ್ತು ಬರಬಹುದು. ಸ್ವಲ್ಪ ದೇಹಕ್ಕೂ ಮನಸ್ಸಿಗೂ ವಿಶ್ರಾಂತಿಯನ್ನು ಕೊಟ್ಟರೆ ಒಳ್ಳೆಯದು. ಇದರಿಂದ ಅತ್ಯಂತ ಮಹತ್ತ್ವದ ಯೋಜನೆಯು ಪ್ರಾರಂಭವಾಗುತ್ತದೆ. ಸಂಬಂಧಗಳನ್ನು ಸರಿಯಾಗಿ ಇಟ್ಟುಕೊಳ್ಳಲು ಪ್ರಯತ್ನಿಸಿ‌. ಈ ದಿನ ನಿಮ್ಮ ಆರ್ಥಿಕ ಸ್ಥಿತಿಯನ್ನು ನೋಡಿಕೊಳ್ಳಿ ಮತ್ತು ಅಪರಿಚಿತರ ಜೊತೆ ಹಣದ ವ್ಯವಹಾರ ಮಾಡಬೇಡಿ. ನಿಮ್ಮ ಆರ್ಥಿಕ ಪರಿಸ್ಥಿತಿಯು ಮೊದಲಿಗಿಂತ ಉತ್ತಮವಾಗಿದ್ದು, ಹೂಡಿಕೆಯ ಕಡೆ ಗಮನವಿರುವುದು. ನಿಮ್ಮ ಪ್ರಮುಖ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮ್ಮ ಕೈಲಾದಷ್ಟು ಪ್ರಯತ್ನಿಸಿ.

-ಲೋಹಿತ ಹೆಬ್ಬಾರ್-8762924271 (what’s app only)

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ