AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope 09 December 2024: ನಿಮ್ಮ ಆಲೋಚನೆಗಳಿಗೆ ಸರಿಹೊಂದುವವರೊಂದಿಗೆ ಸ್ನೇಹ ಮಾಡುವಿರಿ

09 ಡಿಸೆಂಬರ್​​ 2024: ಸೊಮವಾರದಂದು ದ್ವಾದಶ ರಾಶಿಗಳ ರಾಶಿಫಲ ಹೇಗಿದೆ? ಜಾತಕವನ್ನು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯಿಂದ ಲೆಕ್ಕಹಾಕಲಾಗುತ್ತದೆ. ಮೇಷದಿಂದ ಮೀನ ರಾಶಿಯವರಿಗೆ ಇಂದು ಏನು ಫಲ? ಎನ್ನುವುದನ್ನು ತಿಳಿದುಕೊಳ್ಳಿ.

Daily Horoscope 09 December 2024: ನಿಮ್ಮ ಆಲೋಚನೆಗಳಿಗೆ ಸರಿಹೊಂದುವವರೊಂದಿಗೆ ಸ್ನೇಹ ಮಾಡುವಿರಿ
ನಿಮ್ಮ ಆಲೋಚನೆಗಳಿಗೆ ಸರಿಹೊಂದುವವರೊಂದಿಗೆ ಸ್ನೇಹ ಮಾಡುವಿರಿ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 09, 2024 | 12:02 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಅಷ್ಟಮೀ/ನವಮೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸಿದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:12 ರಿಂದ 09:36ರ ವರೆಗೆ, ಯಮಘಂಡ ಕಾಲ 11:01 ರಿಂದ ಮಧ್ಯಾಹ್ನ 12:25 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:50 ರಿಂದ 03:14 ರವರೆಗೆ.

ಮೇಷ ರಾಶಿ: ಎಲ್ಲವೂ ನೀವು ಅಂದುಕೊಂಡಂತೆ ಸಿಗದು. ಇಂದು ನಿಮ್ಮ‌ ಜೊತೆಗಾರರ ವರ್ತನೆಯ ಮೇಲೆ ಅನುಮಾನವು ಬರಬಹುದು. ಸ್ತ್ರೀಯರು ಈ ದಿನವನ್ನು ಬಹಳ ಉತ್ಸಾಹದಿಂದ ಕಳೆಯುವರು. ಕುಟುಂಬದ ಸೌಖ್ಯದಲ್ಲಿ ನೀವು ಭಾಗಿಯಾಗುವಿರಿ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಂಡು ಕಾರ್ಯದಲ್ಲಿ ಪ್ರಗತಿಯನ್ನು ಕಾಣುವಿರಿ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಮಾಡಿಕೊಳ್ಳುವಿರಿ. ಮಕ್ಕಳಿಂದ ಆಗುವ ಅಸಮಾಧಾನವನ್ನು ಸಹಿಸಲಾರಿರಿ. ನಿಮ್ಮ ಇಂದಿನ ಧೈರ್ಯವು ಹೆಚ್ಚಿನ ಪ್ರಗತಿಗೆ ಪೂರಕ. ನಿಮ್ಮ ಉದ್ಯೋಗದ ತೊಂದರೆಗಳನ್ನು ಸರಿಮಾಡಿಕೊಂಡು ಮುನ್ನಡೆಯುವಿರಿ. ಮೊದಲಿಗೆ ಹೊಂದಿಕೊಳ್ಳುವುದು ಅನಿವಾರ್ಯ. ವಾಹನ ಖರೀದಿಯ ವ್ಯವಹಾರವು ನಿಮಗೆ ಸರಿಯಾಗದು. ಉಪಕಾರ ಸ್ಮರಣೆಯನಲು ನಿಮಗೆ ಇಲ್ಲದೇ ಹೋಗುವುದು. ಸಹೋದರರ ನಡುವೆ ಆಪ್ತತೆಯು ಇರುವುದು. ಹೂಡಿಕೆಯಲ್ಲಿ ಹಿನ್ನಡೆ ಸಾಧ್ಯತೆ ಇದೆ. ಇದರ ಕೋಪವನ್ನು ಯಾರೆದುರೂ ಪ್ರಕಟಿಸುವುದು ಬೇಡ.

ವೃಷಭ ರಾಶಿ: ಕಣವು ಕರಗುವುದನ್ನು ನೀವು ಸಹಿಸಲಾರಿರಿ. ನಿಮಗೆ ಬೇಕಾದಷ್ಟು ಸೌಲಭ್ಯಗಳಿದ್ದರೂ ಕೊರತೆ ಎನಿಸಬಹುದು. ನಿಮ್ಮ ತಪ್ಪುಗಳೇ ಫಲಿತಾಂಶದಲ್ಲಿ ಬರುವುದು. ಮಂದಗತಿಯ ಕಾರ್ಯಕ್ಕೆ ನಿಮ್ಮನ್ನು ಯಾರಾದರೂ ಹೀಯಾಳಿಸಬಹುದು. ನೀವು ಪ್ರಯಾಣ ಮಾಡದೇ ಬಹಳ ದಿನಗಳಾದಂತೆ ಅನ್ನಿಸುವುದು. ಪುಣ್ಯಸ್ಥಳಗಳ ದರ್ಶನವನ್ನು ಮಾಡಲು ಆಸಕ್ತಿ ಇರುವುದು. ಸಾಮಾಜಿಕ ಕಾರ್ಯಗಳು ನಿಮಗೆ ಯಶಸ್ಸನ್ನು ತಂದುಕೊಡುವುದು. ಹುಡುಕಾಟದ ಅಂತ್ಯವಾಗುವುದು ಒಳ್ಳೆಯದು. ವೃತ್ತಿಯಲ್ಲಿ ನಿಮಗೆ ಭಯವು ಕಾಡಲಿದ್ದು ಆಪ್ತರ ಜೊತೆ ಅದನ್ನು ಹೇಳಿ. ನಿಮ್ಮ ಸಾಮರ್ಥ್ಯವು ಇಂದು‌ ಕಾಣಿಸಿಕೊಳ್ಳದು. ಪ್ರೀತಿಯನ್ನು ಹೇಳಲು ಹಿಂದೇಟು ಹಾಕುವಿರಿ. ಮಾತುಗಳನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುವಿರಿ. ಪ್ರಭಾವಿ ವ್ಯಕ್ತಿಗಳ ಆಕಸ್ಮಿಕ ಭೇಟಿಯಿಂದ ಸಂತೋಷವಾಗಲಿದೆ. ಬೇರೆ ಸ್ಥಳದಲ್ಲಿ ನಿಮ್ಮ ವಾಸವು ಇರಬಹುದು.

ಮಿಥುನ ರಾಶಿ: ನಿಮ್ಮ ಸ್ಥಳವನ್ನು ವಶಪಡಿಸಿಕೊಳ್ಳುವ ಸಾಧ್ಯತೆ ಇದೆ. ಒತ್ತಡವನ್ನು ನಿಭಾಯಿಸಕೊಳ್ಳಲು ಕಷ್ಟವಾದೀತು. ಸಹೋದ್ಯೋಗಿಗಳ ಜೊತೆ ಮನಸ್ತಾಪ ಬಂದು ಜಗಳವಾಡುವಿರಿ. ಮೇಲಧಿಕಾರಿಗಳ ಜೊತೆ ವಿನಾಕಾರಣ ವಾಗ್ವಾದ ಬೇಡ. ಯಾವ ಮುನ್ಸೂಚನೆಯೂ ಇಲ್ಲದೇ ನಿಮ್ಮ ಮೇಲೆ ಆಕ್ರಮಣ ಮಾಡಬಹುದು. ಎಷ್ಟೋ ಕೆಲಸಗಳು ನಿಮ್ಮ ಬಳಿಯೇ ಬಾಕಿ ಇರುವುದು. ನೀವು ಹೇಳಬೇಕಾದ ವಿಷಯಗಳನ್ನು ಇನ್ನೊಬ್ಬರಿಗೆ ಹೇಳುವಿರಿ. ಯಾವುದೋ ಯೋಚನೆಯಲ್ಲಿ ಮುಖ್ಯ ಕಾರ್ಯಗಳು ಮರೆತುಹೋಗಬಹುದು. ಭೂಮಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನಾತ್ಮಕ ತೊಂದರೆ ಬರುವುದು. ಉದ್ಯಮವನ್ನು ಮಾಡುವ ಮೊದಲು ಸರಿಯಾದ ಯೋಜನೆಯನ್ನು ತಯಾರಿಸಿ. ಅಪರಿಚಿತರ ಕರೆಯಿಂದ ದೂರವಿರುವಿರಿ. ಅಹಂಕಾರದಿಂದ ಸಜ್ಜನರ ಸಹವಾಸದಿಂದ ಮಾಡಲಾರಿರಿ. ಸಾಮೂಹಿಕ ಕಾರ್ಯದಿಂದ ನಿಮಗೆ ಯಶಸ್ಸು ಸಿಗಬಹುದು. ಸ್ತ್ರೀಯರಿಗೆ ಖಾಸಗಿ ಸಂಸ್ಥೆಯಲ್ಲಿ ಅಧಿಕಾರ ಸಿಗಲಿದೆ.

ಕರ್ಕಾಟಕ ರಾಶಿ: ಸ್ವಂತಿಕೆಯ ನಿಮ್ಮ ಜವಾಬ್ದಾರಿಯನ್ನು ಮಾಡಿದರೆ ಸ್ಥಾನಕ್ಕೆ ಏರುವ ಸಂಭವವಿದೆ. ನಿಮ್ಮ ಇಂದಿನ ಮಧ್ಯ ಯಾವ ಪಕ್ಷಪಾತವನ್ನೂ ತೋರಿಸದು. ಸ್ವಂತ ಉದ್ಯೋಗಸ್ಥರಿಗೆ ಲಾಭವಾಗುವುದು. ಗೊಂದಲದಿಂದ ಹೊರಬರುವುದು ಕಷ್ಟವಾದೀತು. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಇರಲಿದೆ. ಸಂತೋಷವನ್ನು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಸ್ವತಂತ್ರವಾಗಿದ್ದರೂ ಏನನ್ನಾದರೂ ಕಳೆದುಕೊಳ್ಳುತ್ತೇನೆ ಎಂಬ‌ ಭಯವು ಇರಲಿದೆ‌. ದಾಂಪತ್ಯದ ಬಿರುಕನ್ನು ನೀವು ಸರಿ ಮಾಡಲು ಪ್ರಯತ್ನಿಸಿದರೆ ಆಗುವುದು. ಹೊಸತನ್ನು ಕಲಿಯುವ ಅವಕಾಶವನ್ನು ಹುಡುಕಿಕೊಳ್ಳುವಿರಿ. ನಿಮ್ಮ ಕುಲದಿಂದ‌ ಗೌರವ ಸಿಗಬಹುದು. ನೀವೇ ಬೇಡದ್ದನ್ನು ಮೈಮೇಲೆ‌ ಹಾಕಿಕೊಂಡು ಒದ್ದಾಡಬೇಕಾದೀತು. ತೋರಿಕೆಗೆ ಮಾಡುವ ಕೆಲಸದಲ್ಲಿ ನಿಮಗೆ ಸಂತೋಷ ಸಿಗದು. ‌ಬೇಕಾದ ವಸ್ತುವುದು ನಿಮಗೆ ಸಿಗದೇಹೋಗಬಹುದು.

ಸಿಂಹ ರಾಶಿ; ಶತ್ರುಗಳ ಚಿಂತೆಯಿಂದ ಆರೋಗ್ಯ ಹಾಳಾಗುವುದು. ಪರೋಪಕಾರವು ಉತ್ತಮವಾದ ಗುಣವಾದರೂ ಅದು ವಿಷಕಾರಿ ಸರ್ಪದಂತೆ ಆಗಬಹುದು. ಉತ್ತಮ‌ ಅವಕಾಶಗಳಿಗೆ ನೀವು ಕಾಯುತ್ತಿರುವಿರಿ. ಯಾರದೋ ಮಾತಿನಿಂದ ನಿಮ್ಮ ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ದೂರಾಲೋಚನೆ ಹಾದಿಯನ್ನು ತಪ್ಪುವುದು. ಏನೂ ಲಾಭವಿಲ್ಲದೇ ಪ್ರಯಾಣವು ನಿಮಗೆ ಬೇಸರ ಎನಿಸುವುದು. ಇಂದು ನಿಮಗೆ ಪ್ರಶಂಸೆಯಿಂದ ಜವಾಬ್ದಾರಿಗಳೂ ಹೆಚ್ಚುವುದು. ಬಂಧುಗಳು ನಿಮ್ಮನ್ನು ಅಳೆಯುವರು. ವ್ಯಾಪಾರದಲ್ಲಿ ಸ್ತ್ರೀಯರ ಸಹಾಯದಿಂದ ಲಾಭವನ್ನು ಪಡೆಯುವಿರಿ. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನೌಕರರು ಒಪ್ಪುವುದಿಲ್ಲ. ಪ್ರಯಾಣದ ಆಯಾಸವನ್ನು ಪರಿಹರಿಸಿಕೊಳ್ಖುವುದು ನಿಮಗೆ ಕಷ್ಟವಾದೀತು. ಇಬ್ಬರೂ ಒಪ್ಪಿಕೊಂಡ ಬಾಂಧವ್ಯವು ದೂರವಾಗಬಹುದು. ನಿಮ್ಮ ವರ್ತನೆಯನ್ನು ಕಂಡು ಯಾರಾದರೂ ಅಪಹಾಸ್ಯ ಮಾಡಬಹುದು. ನೀವು ಇಂದು ಆರಂಭಿಸುವ ಕೆಲಸವು ಹೆಚ್ಚು ಸಮಯವನ್ನು ಪಡೆಯಬಹುದು.

ಕನ್ಯಾ ರಾಶಿ: ಪರರ ಬೆಳವಣಿಗೆಯನ್ನು ಸಹಿಸುವ ಬಗ್ಗೆ ಗಮನವಿರಲಿ. ನಿಮ್ಮವರ ಮೇಲೆ ನಿಮಗೆ ಸಂದೇಹವು ಆರಂಭವಾಗುವುದು. ಇಂದು ನಿಮ್ಮ‌ ನಿರೀಕ್ಷಿತ ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಅನಿರೀಕ್ಷಿತ ದೂರ ಪ್ರಯಾಣವನ್ನು ಮಾಡಲಿದ್ದೀರಿ. ಸಣ್ಣ ವಿಚಾರಗಳಿಗೂ ಕೋಪ ಮಾಡಿಕೊಳ್ಳುವಿರಿ. ಯೋಚನೆಗಳು ನೂರಿದ್ದರೂ ಪಾಲುದಾರಿಕೆಯಲ್ಲಿ ನಿರ್ಧಾರ ಒಂದೇ ಇರಲಿ. ಇಂದು ಹಣದ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗುವುದು. ಅಧಿಕಾರಿಗಳು ಹೆಚ್ಚು ಒತ್ತಡದಿಂದ ಇರುವರು. ಅಧಿಕ ಹೂಡಿಕೆಯು ನಿಮಗೆ ಸ್ಥಾನದ ಪ್ರಶ್ನೆಯಾಗಿ ಉಳಿಯುವುದು. ನಿಮಗೆ ಮುಜುಗರವಾದೀತು. ಮಕ್ಕಳು ನಿಮ್ಮ ಮಾತಿಗೆ ಸ್ಪಂದಿಸುವರು. ವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾತುಗಳು ನಿಖರವಾಗಿ ಇರಲಿ. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ನಿಯಮಗಳನ್ನು ಹಾಕಿಕೊಳ್ಳುವುದು ಉತ್ತಮ. ಸಹೋದ್ಯೋಗಿಗಳ ಜೊತೆ ಸಲುಗೆಯಿಂದ ಇರುವಿರಿ. ಅಧಿಕಲಾಭಕ್ಕಾಗಿ ಏನನ್ನಾದರೂ ಮಾಡಲು ಹೋಗುವುದು ಬೇಡ.

ತುಲಾ ರಾಶಿ: ಒಟ್ಟು ಸೇರಿ ಕೆಲಸವನ್ನು ಪೂರೈಸಯವಿರಿಉ. ಮನೆಯಲ್ಲಿ ಯಾರಾದರೂ ನಿಮ್ಮನ್ನೇ ಗುರಿಯಾಗಿಸಿಕೊಂಡು ಮಾತನಾಡಬಹುದು. ಬಂಧುಗಳಿಂದ ನಿಮಗೆ ಇಂದು ಆಲಸ್ಯದ ಪಟ್ಟವು ಸಿಗಬಹುದು. ನಿಮ್ಮ ನಿರುದ್ಯೋಗ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವಿರಿ. ಸಂಗಾತಿಯನ್ನು ದೂರ ಮಾಡಿಕೊಂಡು ಮನೆಯಲ್ಲಿ ಕಷ್ಟವಾದೀತು. ಅಗತ್ಯತೆಗೆ ಅನುಸಾರವಾಗಿ ಕಾರ್ಯವನ್ನು ವಿಭಾಗಿಸಿ. ನಿಮ್ಮ ಗುರಿಯಾಗಿಸಿಕೊಂಡು ಸಹೋದ್ಯೋಗಿಗಳು ಕೆಲಸವನ್ನು ಮಾಡುವರು. ಕೈಗೆ ಸಿಕ್ಕ ಭೂಮಿಯು ತಪ್ಪಿ ಹೋಗಬಹುದು. ನಿಮ್ಮ ಮಾತನಾಡುವ ಸ್ವಭಾವವು ಇತರರಿಗೆ ಕಿರಿಕಿರಿ ಉಂಟಾದೀತು. ನಿಮ್ಮ ವಸ್ತುವನ್ನು ಕಳೆದುಕೊಳ್ಳುವಿರಿ. ಅವಹೇಳನಕಾರಿ ಮಾತುಗಳನ್ನು ಎಲ್ಲರೆದುರು ಆಡುವಿರಿ. ಉನ್ನತ ವ್ಯಾಸಂಗಕ್ಕಾಗಿ ನೀವು ಸ್ನೇಹಿತನ‌ ಜೊತೆ ತೆರಳುವಿರಿ. ಸ್ಥಾನಚ್ಯುತಿಯ ಭಯವು ಇರುವುದು. ಇಂದು ನೀವು ಕೆಲಸದಿಂದ ವಿರಾಮವನ್ನು ಪಡೆಯುವ ಯೋಚನೆ ಬರುವುದು. ಸ್ನೇಹಿತರ ಅಸಹಕಾರವು ನಿಮಗೆ ಬೇಸರ ಕೊಡಬಹುದು.

ವೃಶ್ಚಿಕ ರಾಶಿ: ಇಂದು ನಿಮಗೆ ಅತಿಯಾದ ಹಸಿವಾಗವುದು. ವಿದ್ಯಾರ್ಥಿಗಳು ಅಭ್ಯಾಸದ ವಿಷಯದಲ್ಲಿ ಮೈಮರೆಯಬಹುದು. ಇಂದು ನೀವು ಮಾಡುವ ಕಾರ್ಯದಲ್ಲಿ ವಿಳಂಬವು ಕಾಣಿಸುವುದು. ದಿನದ ಆರಂಭವು ಬಹಳ ಉತ್ಸಾಹದಿಂದ ಇರುವುದು. ಆಸ್ತಿಯ ಖರೀದಿಗೆ ಎರಡು ಮನಸ್ಸು ಇರುವುದು. ಪುಣ್ಯಸ್ಥಳಗಳ ದರ್ಶನದಿಂದ ನೆಮ್ಮದಿ. ನಿಮ್ಮ ಚುರುಕುತನಕ್ಕೆ ಅಚ್ಚರಿಗೊಳ್ಳುವರು. ಜವಾಬ್ದಾರಿಯು ನಿಮಗೆ ಅತಿಯಾಗುವುದು. ಆರ್ಥಿಕತೆಯು ನಿಮ್ಮನ್ನು ಚಿಂತೆಗೀಡುಮಾಡುವುದು. ಸ್ನೇಹಿತರ ಸಹಾಯದಿಂದ ನಿಮಗೆ ಬಲವು ಬರುವುದು. ದೂರದ ಬಂಧುಗಳಾದರೂ ಸಹಾಯವು ಸಿಗಬಹುದು. ದಾಂಪತ್ಯದಲ್ಲಿ ಮಧುರ ಕ್ಷಣಗಳಿಂದ ಖುಷಿಯಾಗಲಿದೆ. ಎಲ್ಲವನ್ನೂ ತಿಳಿದುಕೊಂಡರೂ ಹಿಂದೆ ಸರಿಯುವಿರಿ. ಬಂಧುಗಳ ಕಾರಣದಿಂದ ಮನೆಯಲ್ಲಿ ವೈಮನಸ್ಯ ಉಂಟಾಗಬಹುದು. ಒತ್ತಡದಿಂದ ನೀವು ಯಾವುದಾದರೂ ಮಾರ್ಗವನ್ನು ಅನುಸರಿಸುವಿರಿ. ತಪ್ಪಾದ ಆಚರಣೆಯನ್ನು ಮಾಡುವುದು ಬೇಡ.

ಧನು ರಾಶಿ: ಹೇಳಿದ್ದನ್ನು ಕೂಡಲೇ ಮಾಡಲಾಗದು. ಅಧ್ಯಾತ್ಮದ ಕಡೆಗೆ ನಿಮ್ಮ ಮನಸ್ಸು ಹರಿದರೂ ಸರಿಯಾದ ಮಾರ್ಗದರ್ಶನವೂ ಬೇಕು. ದಾಂಪತ್ಯದಲ್ಲಿ ನಂಬಿಕೆ ದೂರಾಗಬಹುದು. ಚರಾಸ್ತಿಯಲ್ಲಿ ಗೊಂದಲ ಇರುವುದು. ಪ್ರಯತ್ನಿಸಿದ ಕಾರ್ಯಕ್ಕೆ ಫಲವನ್ನು ನಿರ್ದಿಷ್ಟ ಮಾಡಿಕೊಳ್ಳುವಿರಿ. ಮನೆಯ ಸ್ಥಳವನ್ನು ಬದಲಾಯಿಸುವಿರಿ. ಬೇರೆ ಕಾರ್ಯಗಳಿಂದ ಹಣವು ಕೈ ಸೇರುವುದು. ‌ಉತ್ಸಾಹಕ್ಕೆ ತೊಂದರೆ ಆಗುವ ಕಡೆ ನೀವು ಇರಲಾರಿರಿ. ನಿಮ್ಮ ಉದ್ಯೋಗದ ಸ್ಥಳವನ್ನು ನೀವು ಬದಲಾಯಿಸುವಿರಿ. ನಿಮ್ಮ ಕೆಲಸವನ್ನು ಬಿಟ್ಟು ಬೇರೆಯವತ ಕಾರ್ಯದ ಕಡೆ ಗಮನ ಇರುವುದು. ಉದ್ಯೋಗದಲ್ಲಿ ಅಧಿಕ ಲಾಭಕ್ಕಾಗಿ ಶ್ರಮಿರಿಸಿದರೂ ಲಾಭವು ಕಷ್ಟವಾದೀತು. ಪ್ರಾಮಾಣಿಕತೆಯಿಂದ ನಿಮಗೆ ಉನ್ನತ ಸ್ಥಾನವನ್ನು ನಿರೀಕ್ಷಿಸುವಿರಿ. ಸಂಗಾತಿಯ ವಿಚಾರದಲ್ಲಿ ನಿಮಗೆ ಗೊಂದಲವಾಗಬಹುದು. ನಂಬಿಕೆಯಿಂದ ಕೆಲಸವನ್ನು ಮಾಡುವಿರಿ. ಪ್ರಯತ್ನಿಸಿದ ಕಾರ್ಯಗಳು ನಿಮಗೆ ಬಹುಪಾಲು ಉತ್ತಮ‌ ಫಲಿತಾಂಶವು ಕೊಡುವುದು.

ಮಕರ ರಾಶಿ: ಹಳೆಯ ನಂಟು ಮತ್ತೆ ಚಿಗುರೊಡೆಯಬಹುದು. ಮನೆಯಲ್ಲಿ ನಡೆಯುವ ಮಂಗಳ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಮಹಿಳೆಯರು ಉನ್ನತ ಅಧಿಕಾರವನ್ನು ಪಡೆಯುವರು. ಸಹನೆಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಸ್ವಪ್ರತಿಷ್ಠೆಯಿಂದ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ಹಿರಿಯರೆದುರು ವಿನಯವಿರಲಿ. ದೇವತಾಕಾರ್ಯಗಳಲ್ಲಿ ಆಸಕ್ತಿಯು ಶ್ರದ್ಧೆಯಿಂದ ಭಾಗವಹಿಸುವಿರಿ. ಕಛೇರಿಯಲ್ಲಿ ಅಧಿಕಾರಿಗಳು ನಿಮ್ಮ ಕಾರ್ಯಕ್ಕೆ ಸಂಬಂಧಿಸಿದಂತೆ ವಾಗ್ವಾದ ಮಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ದುರ್ಬಲರಾಗುವಿರಿ. ಪರೋಪಕಾರಕ್ಕೆ ನಿಮ್ಮ ಮನಸ್ಸು ಕರಗುವುದು. ನಿಮ್ಮ ಕೈತಪ್ಪಿ ಹೋದ ಸ್ಥಾನವನ್ನು ಪುನಃ ಪಡೆದುಕೊಳ್ಳುವಿರಿ. ಯಾರಿಗೂ ಸಾಲವನ್ನು ಕೊಡುವುದು ಬೇಡ. ನಿಮ್ಮ ಸಂಬಂಧಗಳನ್ನು ಬಳಸದೇ ದೂರವಾಗುವುದು. ಬುದ್ಧಿಪೂರ್ವಕವಾಗಿ ತಪ್ಪುಗಳನ್ನು ಮಾಡಿ ಅನಂತರ ಸಂಕಟಪಟುವಿರಿ. ಸಕಾರಾತ್ಮಕ ಅಂಶಗಳನ್ನು ಸ್ವೀಕರಿಸಲು ಸಿದ್ಧರಿರಿ. ಆಸ್ತಿಯ ಭಾಗವನ್ನು ಮಾರಾಟ ಮಾಡಬೇಕಾದೀತು.

ಕುಂಭ ರಾಶಿ: ಸಾಂತ್ವನದ ಮಾತುಗಳು ನಿಮ್ಮಿಂದ ಬರಬಹುದು. ನಿಮ್ಮ ಆಲೋಚನೆಗಳಿಗೆ ಸರಿಹೊಂದುವವರ ಜೊತೆ ಸಖ್ಯವಾಗಲಿದೆ. ನಿಮಗೆ ಇಂದು ದೇಹಾರೋಗ್ಯವು ಕ್ಷೀಣಿಸಿದಂತೆ ಭಾಸವಾಗುವುದು. ಪ್ರಭಾವಿಗಳ ಭೇಟಿಯಿಂದ ಸಂತೋಷವಾಗಲಿದೆ. ಹಣದ ಕೂಡುವಿಕೆಯಲ್ಲಿ ಸಫಲತೆ ಕಾಣಿಸುವುದು. ಅನ್ಯಸ್ಥಳದಲ್ಲಿ ನಿಮ್ಮ ವಾಸವು ಇರಲಿದೆ. ಸುಖವಾದ ಭೋಜನವನ್ನು ಮಾಡುವಿರಿ. ಕೋಪದಲ್ಲಿ ಏನನ್ನಾದರೂ ಹೇಳುವಿರಿ. ದೂರದೃಷ್ಟಿಯಿಂದ ಮುಂಬರುವ ತೊಂದರೆಯನ್ನು ಸರಿಮಾಡಿಕೊಳ್ಳುವಿರಿ. ಭವಿಷ್ಯದ ಬಗ್ಗೆ ಅಸ್ಪಷ್ಟವಾದ ಚಿಂತೆಯು ಬೇಡ. ಯಂತ್ರಗಳ ವ್ಯಾಪಾರಿಗಳಿಗೆ ಲಾಭದ ದಿನ. ಉತ್ಸಾಹವು ಎಷ್ಟೇ ಇದ್ದರೂ ನೆಮ್ಮದಿಯ ಮನಸ್ಸಿನಿಂದ ನಿರ್ಧಾರಿಸಿ. ಹಿರಿಯರಿಂದ ಉತ್ತಮ ವಿಚಾರಗಳನ್ನು ತಿಳಿಯುವಿರಿ. ಇಂದು ನಿಮ್ಮ ಪರಿಶ್ರಮವು ವ್ಯರ್ಥವಾದಂತೆ ತೋರುವುದು. ಹಿತಶತ್ರುಗಳಿಗೆ ನಿಮ್ಮ ಯಶಸ್ಸನ್ನು ಸಹಿಸಲಾಗದು. ವೃಥಾ ಚರ್ಚೆಯಿಂದ ಸಮಯವನ್ನು ಕಳೆಯುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವ್ಯವಸ್ಥೆಯನ್ನು ಮಾಡಿಕೊಡಬೇಕಾಗಬಹುದು.

ಮೀನ ರಾಶಿ: ಕೈಯಲ್ಲಿ ಹಣ ನಿಲ್ಲದಾಗ ಹೂಡಿಕೆ ಮಾಡಿ ಅಥವಾ ಉಳಿತಾಯದಲ್ಲಿ ಇರಿಲಿ. ನಿಮ್ಮ ದೌರ್ಬಲ್ಯವೇ ಶಕ್ತಿಯ ಕೇಂದ್ರವೂ ಆಗಬಹುದು. ರಾಜಕೀಯ ಕ್ಷೇತ್ರದಲ್ಲಿ ಕಾದಾಟ, ವಾಗ್ವಾದಗಳು ಅಧಿಕವಾಗಿ ಇರಲಿವೆ. ಬೇಸರದಿಂದ ಹೊರಬರಲು ನಿಮಗೆ ಕಷ್ಟವಾದೀತು. ಅಧಿಕಾರ ಪ್ರಾಪ್ತಿಗೆ ಓಡಾಟವನ್ನು ಮಾಡುವಿರಿ. ಹೇಳಿದ ಸಮಯಕ್ಕೆ ಕೆಲಸವನ್ನು ಮಾಡಿಕೊಡಲಾಗುವುದು. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಿಮ್ಮ ಪ್ರಗತಿಗೆ ಶತ್ರುಗಳು ಅಡ್ಡಗಾಲು ಹಾಕಬಹುದು. ಬೇಸರದಿಂದ ಹೊರಬರಲು ಮಾರ್ಗವನ್ನು ಹುಡುಕಿಕೊಳ್ಳುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ಅಧಿಕಾರಿಗಳಿಂದ ಮೆಚ್ಚುಗೆ ಗಳಿಸುವಿರಿ. ಸ್ತ್ರೀಯರ ಸಹಕಾರದಿಂದ ಕೆಲಸವನ್ನು ಮುಗಿಸುವಿರಿ. ನಿಮ್ಮ ಮಕ್ಕಳ ಬಗ್ಗೆ ಗಮನ ಇರಲಿ. ತಿಳಿವಳಿಕೆ ಇಲ್ಲದವರ ಮುಂದೆ ನಿಮ್ಮ ಉದ್ಯೋಗವನ್ನು ಹೇಳಿಕೊಳ್ಳುವಿರಿ. ಕಾರ್ಯದಲ್ಲಿ ಯಾರೋ ಮಾಡಿದ ತಪ್ಪನ್ನು ನೀವು ಸರಿ ಮಾಡಬೇಕಾದೀತು. ನಿಮ್ಮ ಪ್ರಮುಖ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ.

ಲೋಹಿತ ಹೆಬ್ಬಾರ್-8762924271 (what’s app only)

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ