Daily Horoscope 10 December 2024: ಒಂದರ ಮುಕ್ತಾಯವು ಇನ್ನೊಂದರ ಆರಂಭ ಎಂಬ ಸತ್ಯ ತಿಳಿಯಲಿದೆ
10 ಡಿಸೆಂಬರ್ 2024: ಮಂಗಳವಾರದಂದು ದ್ವಾದಶ ರಾಶಿಗಳ ರಾಶಿಫಲ ಹೇಗಿದೆ? ಜಾತಕವನ್ನು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯಿಂದ ಲೆಕ್ಕಹಾಕಲಾಗುತ್ತದೆ. ಮೇಷದಿಂದ ಮೀನ ರಾಶಿಯವರಿಗೆ ಇಂದು ಏನು ಫಲ? ಎನ್ನುವುದನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ವ್ಯತಿಪಾತ್, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:14 ರಿಂದ 04:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:37 ರಿಂದ 11:01 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:26 ರಿಂದ 01:50 ರವರೆಗೆ.
ಮೇಷ ರಾಶಿ: ನಿಮ್ಮವರನ್ನು ಯಾವ ಸಂದರ್ಭದಲ್ಲಿಯೂ ಬಿಟ್ಟುಕೊಡಲಾರಿರಿ. ಸ್ಥಾನದ ಮಹತ್ತ್ವವನ್ನು ಅರಿತು ಮಾತನಾಡಬೇಕು. ಅವಸರವಸರದಿಂದ ಇಂದಿನ ಕಾರ್ಯಗಳನ್ನು ಮಾಡಬೇಕಾಗಬಹುದು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ಮಂಗಲ ಕಾರ್ಯವನ್ನು ಮಾಡಲು ನಿಮಗೆ ಮನಸ್ಸು ಇರುವುದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ವ್ಯಾಯಾಮ ಮುಂತಾದ ದೈಹಿಕ ಕಸರತ್ತನ್ನು ಮಾಡಲು ಯೋಚಿಸುವಿರಿ. ಯಾವುದೇ ಆತುರದ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರದಲ್ಲಿ ಇಂದು ಜಾಗರೂಕತೆ ಬೇಕು. ವಿವಾಹಕ್ಕೆ ಸಂಬಂಧಿಸಿದಂತೆ ಕುತೂಹಲವು ಇರಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾನಸಿಕವಾಗಿ ಸ್ಥಿರವಾಗಬೇಕಿದೆ. ನಿಮ್ಮ ಮಾತೇ ನಿಮಗೆ ಹಿಂದಿರುಗಿ ಬರಬಹುದು. ಹಳೆಯ ವಸ್ತುಗಳನ್ನು ಮಾರಾಡ ಮಾಡುವಿರಿ. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ.
ವೃಷಭ ರಾಶಿ: ಸುಲಭಕ್ಕೆ ಸಿಗುವುದನ್ನು ಬಳಸಿಕೊಳ್ಳುವಿರಿ. ಒಂದರ ಮುಕ್ತಾಯವು ಇನ್ನೊಂದರ ಆರಂಭ ಎಂಬ ಸತ್ಯವನ್ನು ಸ್ಮರಿಸಿಕೊಂಡು ಮುನ್ನಡೆಯಿರಿ. ಅಪರಿಚಿತರಿಂದ ಹಣಕ್ಕಾಗಿ ಒತ್ತಡ ಬರಬಹುದು. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ. ಆರ್ಥಿಕತೆಯ ಕಾರಣದಿಂದ ಕುಟುಂಬದಲ್ಲಿ ಕೆಲವು ಮಾತುಗಳು ಬರಬಹುದು. ವಿನಮ್ರತೆಯು ನಿಮ್ಮನ್ನು ಕಾಪಾಡಬಹುದು. ಮಾತಿನ ಮೇಲೆ ನಿಯಂತ್ರಣ ಇಟ್ಟುಕೊಂಡು ಮಾತನಾಡಿ. ಬಾಕಿ ಸಾಲದ ಮೊತ್ತವನ್ನು ತುಂಬಲು ಸ್ನೇಹಿಯರ ಸಹಾಯವನ್ನು ಕೇಳುವಿರಿ. ಸಹೋದರರ ಅಸಹಕಾರವು ಸಿಟ್ಟು ಬರುವಂತೆ ಮಾಡುವುದು. ಸಕಾರಾತ್ಮಕ ಆಲೋಚನೆಯು ನಿಮಗೆ ನೆಮ್ಮದಿ ಕೊಡುವುದು. ಇನ್ನೊಬ್ಬರ ವಿಚಾರಕ್ಕೆ ನೀವು ಮೂಗು ತೂರಿಸುವುದು ಬೇಡ. ತಾಯಿಯಿಂದ ಬೈಗುಳ ಸಿಕ್ಕೀತು. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನಿಮಗೆ ಯಾರಾದರೂ ಸುಳ್ಳುಹೇಳಿ ದಾರಿ ತಪ್ಪಿಸಬಹುದು.
ಮಿಥುನ ರಾಶಿ: ಸಣ್ಣ ಪ್ರಶಂಸೆಯೂ ದೊಡ್ಡ ಕೆಲಸವನ್ನು ಮಾಡಿಸುವುದು. ನಿಮ್ಮ ಒರಟು ಸ್ವಭಾವದಿಂದ ಎಲ್ಲರಿಂದ ದೂರಾಗುವಿರಿ. ಕುಟುಂಬದ ಮನಸ್ತಾಪವನ್ನು ಶಾಂತ ರೀತಿಯಿಂದ ಬಗೆಹರಿಸುವಿರಿ. ಯಂತ್ರೋಪಕರಣಗಳ ಮಾರಾಟದಿಂದ ಲಾಭವಿರಲಿದೆ. ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಗುವುದು. ಇಂದು, ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು. ಮಾತಿಗೆ ಮಾತು ಬೆಳೆಯಬಹುದು. ನಿಮ್ಮ ಶತ್ರುಗಳಿಂದ ಸೃಷ್ಟಿಯಾಗುವ ಕೆಲವು ಸಣ್ಣ ಸಮಸ್ಯೆಯನ್ನು ನಗಣ್ಯ ಮಾಡುವುದು ಬೇಡ. ಅಧಿಕಾರಿಗಳ ಜೊತೆ ವ್ಯವಹರಿಸುವಾಗ ನೀವು ಜಾಗರೂಕತೆ ಇರಲಿ. ದೂರ ಪ್ರಯಾಣವನ್ನು ನೀವು ಇಂದು ಮಾಡುವುದು ಬೇಡ. ನಿಮ್ಮ ಸಾಮರ್ಥ್ಯವನ್ನು ಕಛೇರಿಯ ಜನರು ತಿಳಿದುಕೊಳ್ಳುವರು. ಹಿರಿಯರಿಂದ ಆಶೀರ್ವಾದವು ಸಿಗಲಿದೆ. ನಿಮ್ಮ ಮಾತು ನಿಮ್ಮದಾಗಿ ಮಾತ್ರ ಇರಲಿ.
ಕರ್ಕಾಟಕ ರಾಶಿ: ಸಂಕೋಚವು ನಿಮಗೆ ಅತೃಪ್ತಿಯನ್ನು ನೀಡುವುದು. ವ್ಯಾವಹಾರಿಕ ನಿರ್ಬಂಧಗಳನ್ನು ಮೀರಿ ವ್ಯವಹರಿಸುವ ಅವಶ್ಯಕತೆ ಇರದು. ಉದ್ಯೋಗಿಗಳಿಗೆ ಬೇಡಿಕೆಗ ತಕ್ಕ ಪೂರೈಕೆ ಕಷ್ಟವಾದೀತು. ಸಾಮಾಜಿಕ ವಲಯದಲ್ಲಿ ನಿಮ್ಮ ಹೆಸರು ಕೇಳಿ ಬರಬಹುದು. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು. ಚರಾಸ್ತಿಯ ವ್ಯವಹಾರವನ್ನು ನೀವು ಜಾಣ್ಮೆಯಿಂದ ಮಾಡುವಿರಿ. ಹೂಡಿಕೆಯು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ಮೇಲಧಿಕಾರಿಗಳ ಜೊತೆ ದಕ್ಷತೆಯಿಂದ ವ್ಯವಹರಿಸುವಿರಿ ಉದ್ಯಮವನ್ನು ಬೆಳೆಸುವ ಚಿಮಯನೆ ಮಾಡುವಿರಿ. ಪ್ರಭಾವೀ ವ್ಯಕ್ತಿಗಳ ನಡೆಯನ್ನು ನೀವು ಅರ್ಥಮಾಡಿಕೊಳ್ಳಲಾರಿರಿ. ಸಮಸ್ಯೆಗಳನ್ನು ನೀವು ಹಂಚಿಕೊಳ್ಳಲು ಹಿಂದೆ ಹೆಜ್ಜೆ ಹಾಕುವಿರಿ. ಬಂಧುಗಳ ವಿಯೋಗವು ಅಚ್ಚರಿ ಎನಿಸೀತು. ನಿಮ್ಮ ಜೀವನದ ದಿನಚರಿಯನ್ನು ಬದಲಾಯಿಸಿಕೊಳ್ಳುವಿರಿ. ದಾಂಪತ್ಯದಲ್ಲಿ ನಿಮಗೆ ವೈಮನಸ್ಯ ಉಂಟಾದರೂ ಸರಿಮಾಡಿಕೊಳ್ಳುವಿರಿ.
ಸಿಂಹ ರಾಶಿ: ಮಾರ್ಗದರ್ಶನದ ಕೊರತೆ ಹೆಚ್ಚು ಕಾಣಿಸುವುದು. ಇಂದು ನಿಮಗೆ ಉಳಿಸಿಕೊಳ್ಳುವುದಕ್ಕಿಂತ ಕಳೆದುಕೊಳ್ಳುವುದಕ್ಕೆ ಆಸಕ್ತಿ ಹೆಚ್ಚು. ಮನೆಯ ಬೇಡದ ವಸ್ತುಗಳನ್ನು ಎಲ್ಲವನ್ನೂ ಖಾಲಿ ಮಾಡುವಿರಿ. ಹತ್ತಾರು ಸಮಸ್ಯೆಯನ್ನು ನಿಭಾಯಿಸುವುದು ಕಷ್ಟವಾದೀತು. ಇಂದು ನೀವು ಹಠದ ಸ್ವಭಾವವನ್ನು ಬಿಡುವುದು ಉತ್ತಮ. ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ. ಯಾರ ಜೊತೆಯೂ ಆದಷ್ಟು ವಾದಕ್ಕೆ ಇಳಿಯಬೇಡಿ. ನಿಮ್ಮ ಕುಟುಂಬದ ಸದಸ್ಯರ ಜೊತೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವಿರಿ. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಆರ್ಥಿಕತೆಯ ದೃಷ್ಟಿಯಿಂದ ಈ ದಿನವು ಶುಭವಲ್ಲ. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸಲಾರರು. ಅವರಿಂದ ಏನಾದರೂ ತೊಂದರೆ ಆದೀತು. ಇಂದು ದೂರದ ಪ್ರಯಾಣಕ್ಕೆ ಹೆಚ್ಚು ಅನುಕೂಲವಲ್ಲ. ಕೆಲಸವನ್ನು ಮಾಡಿಸಿಕೊಳ್ಳಲು ನೀವು ಹೆಚ್ಚು ಸಮಯವನ್ನು ನೀಡುವಿರಿ. ಸ್ತ್ರೀಯರ ಸಹಕಾರ ಪಡೆದು ನೀವು ಕಛೇರಿಯ ಕೆಲಸವನ್ನು ಬೇಗ ಮಾಡುವಿರಿ. ನೀವು ಒಳ್ಳೆಯದನ್ನು ಮಾಡಲು ಕಾರಣಗಳನ್ನು ಹುಡುಕುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ.
ಕನ್ಯಾ ರಾಶಿ: ಹಾಲಿಗೆ ಹುಳಿ ಸೇರಿ ಮೊಸರಾದರೆ ಚಂದ. ಹಾಳಾದರೆ ಎಲ್ಲವೂ ದಂಡ. ನೀವು ಭಾವನಾತ್ಮಕ ವಿಚಾರಕ್ಕೆ ಸೋಲುವ ಸಾಧ್ಯತೆ ಇದೆ. ಮಹಿಳಾ ಕಲಾವಿದರಿಗೆ ಪ್ರಶಂಸೆ ಇರಲಿದೆ. ಸಂಶೋಧನೆಗೆ ಮಾರ್ಗದರ್ಶನ ಸಿಗಲಿದೆ. ಪ್ರೀತಿಯಲ್ಲಿ ತೊಡಗಿರುವವವರು ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವಿರಿ. ಉದ್ಯೋಗಾಕಾಂಕ್ಷಿಗಳು ಹೆಚ್ಚುವರಿ ಪ್ರಯತ್ನದಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಬಹಳ ದಿನಗಳಿಂದ ನಿರೀಕ್ಷಿಸಿದ್ದ ಮಕ್ಕಳ ಪ್ರಗತಿಯು ಇಂದು ಸಫಲತೆಯನ್ನು ಕಾಣುವುದು. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ನಿಮ್ಮ ವ್ಯಾವಹಾರಿಕ ಓಡಾಟವು ವ್ಯರ್ಥವಾದೀತು. ಸಾಲ ಮಾಡಲು ಇಷ್ಟವಿಲ್ಲದಿದ್ದರೂ ಅದನ್ನು ಮಾಡಬೇಕಾದೀತು. ಅದೃಷ್ಟವನ್ನು ಮಾತ್ರ ನಂಬಿ ನಿಮ್ಮ ಪ್ರಯತ್ನವನ್ನು ಮೊಟಕುಗೊಳಿಸುವಿರಿ. ದಾಂಪತ್ಯದ ನಡುವಿನ ಅಂತರವು ಕಡಿಮೆ ಆಗಬಹುದು. ಮೂರನೇ ವ್ಯಕ್ತಿಯಿಂದ ಬರುವ ಮಾತನ್ನು ನಂಬಬೇಡಿ.
ತುಲಾ ರಾಶಿ: ಮನೆಯವರ ಬಗ್ಗೆ ಕಾಳಜಿ ಅಧಿಕವಾಗುವುದು. ನಿಮ್ಮನ್ನು ಯಾವುದಾದರೂ ಕಾರಣಕ್ಕೆ ಹೊಗಳುವವರು ಇರುವರು. ಏನಾದರೂ ಮಾಡಬೇಕು ಎಂಬ ಇಚ್ಛೆಯು ಅಧಿಕವಾಗುವುದು. ಧೈರ್ಯದಿಂದ ಏನನ್ನೂ ಎದುರಿಸುವ ಮನೋಬಲವು ಕಡಿಮೆ ಆದೀತು. ಎಲ್ಲ ಕಾರ್ಯಗಳಿಗೂ ಉತ್ಸಾಹ ಭಂಗವಾಗುವುದು. ಚೆನ್ನಾಗಿ ಯೋಚಿಸಿದ ಮಾಡಿದ ಕಾರ್ಯವು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುವುದು. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಅಸಾಧ್ಯ ಎಂದು ಅನ್ನಿಸಬಹುದು. ಆಸ್ತಿ ವ್ಯವಹಾರಗಳಿಂದ ನಿಮಗೆ ಲಾಭವು ಇರುವುದು. ಉದ್ಯೋಗಸ್ಥರು ಪ್ರಗತಿಯನ್ನು ಕಾಣುವರು. ಆರ್ಥಿಕ ವಿಚಾರದಲ್ಲಿ ಸಖ್ಯವು ಏರ್ಪಡುವುದು. ಕಛೇರಿಯ ಕೆಲಸಗಳು ಸಾಕೆನಿಸಬಹುದು. ವಿದ್ಯಾಭ್ಯಾಸಕ್ಕೆ ಮಕ್ಕಳಿಗೆ ಸಹಕಾರವನ್ನು ಕೊಡುವಿರಿ. ನೀವು ಹಣ ಸಂಪಾದನೆಗೆ ಆರಿಸಿಕೊಂಡ ಮಾರ್ಗವು ಸರಿಯೆನಿಸದೇ ಇರಬಹುದು. ನಿಮ್ಮ ಅಮೂಲ್ಯ ವಸ್ತುಗಳು ನಷ್ಟವಾಗಬಹುದು.
ವೃಶ್ಚಿಕ ರಾಶಿ: ಮಾತು ಪರಿಣಾಮಕಾರಿಯಾಗಲು ಸುಮ್ಮನಿರುವುದೂ ಮುಖ್ಯ. ಇನ್ನೊಬ್ಬರ ತಪ್ಪನ್ನು ಕ್ಷಮಿಸಿ ಮುನ್ನಡೆಯುವುದೂ ನಾಕತ್ವದ ಗುಣವಾಗಲಿದೆ. ಇಂದು ಹಿತಶತ್ರುಗಳಿಂದ ಧನವು ನಷ್ಟವಾಗಲಿದೆ. ನೇರ ಮಾತಿನಿಂದ ನಿಮ್ಮವರು ದೂರಾಗಬಹುದು. ನಂಬಿಕೆಗಳು ಅನ್ಯರಿಂದ ಹಾಳಾಗುವುದು. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ವ್ಯವಹಾರಗಳ ವಿಷಯದಲ್ಲಿ ಅದೃಷ್ಟವಂತರಾಗಿರುವಿರಿ. ನೀವು ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ಪ್ರೇಮಿಗಳಿಗೆ ಇಂದು ಶುಭವಾಗಿಲ್ಲ. ನಿಮ್ಮನ್ನು ಹುದ್ದೆಯಿಂದ ಕೆಳಗೆ ಹಾಕಲು ನೋಡಬಹದು. ಎಲ್ಲರ ಜೊತೆ ವಿನಾಕಾರಣ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳು ಕಿರಿಕಿರಿ ಮಾಡುವರು. ನಿಮಗೆ ನಾನಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳುವಿರಿ. ಜಲಭೀತಿಯು ಕಾಡಬಹುದು. ಉದ್ಯೋಗದ ವಿಚಾರದಲ್ಲಿ ನಿಮಗೆ ನೆಮ್ಮದಿ ಇರದು.
ಧನು ರಾಶಿ: ಪರಾವಲಂಬನೆಯಿಂದ ನಿಮಗೆ ಮುಜುಗರದ ಸನ್ನಿವೇಶ ಕಾಣಿಸುವುದು. ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಇನ್ನೊಬ್ಬರ ವಸ್ತುಗಳನ್ನು ಬಳಸಿಕೊಳ್ಳುವಿರಿ. ಕಲಾವಿದರು ಹೆಚ್ಚಿನ ಶ್ರಮದಿಂದ ಆದಾಯವನ್ನು ಗಳಿಸುವರು. ಸಾಮಾಜಿಕ ಕಾರ್ಯಗಳಿಂದ ಅಭಿಮಾನ ಹೆಚ್ಚಾಗುವುದು. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಪರಿಚಿತರ ಸಖ್ಯವು ಬೇಡ. ಕಣ್ಣಿನ ತೊಂದರೆಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. ವಿವಾಹ ಸಂಬಂಧದಿಂದ ಕಿರಿಕಿರಿ ಆಗಬಹುದು. ಕಛೇರಿಯಲ್ಲಿ ಕೆಲಸವು ಮಂದಗತಿಯಲ್ಲಿ ಇರುವುದು. ಆಪ್ತ ಬಂಧುಗಳನ್ನು ನೀವು ಕಳೆದುಕೊಳ್ಳುವಿರಿ. ಯಾವುದೇ ಕಾರಣಕ್ಕೂ ಅಹಂಕಾರಕ್ಕೆ ಆಸ್ಪದ ಕೊಡುವುದು ಬೇಡ. ಅನಿರೀಕ್ಷಿತವಾಗಿ ಅತಿಥಿಗಳ ಭೇಟಿಯಿಂದ ಗಲಿಬಿಲಿಗೊಳ್ಳುವ ಸಂದರ್ಭವು ಬರಲಿದೆ.
ಮಕರ ರಾಶಿ: ನಮ್ಮ ಮೇಲಿನ ಹೊರೆಗಳು ಬೇರೆ ಕಾರ್ಯಕ್ಕೆ ಅಡ್ಡಿ ಮಾಡುವುವು. ಇಂದು ಕಡಿಮೆ ಖರ್ಚಿನಲ್ಲಿ ಉತ್ತಮ ವಸ್ತುವನ್ನು ಪಡೆಯುವಿರಿ. ಇಂದಿನ ವಿಫಲತೆಯು ನಿಮಗೆ ಛಲವನ್ನು ತರಬಹುದು. ನಿಮ್ಮಿಂದ ಧನಸಹಾಯವನ್ನು ನಿರೀಕ್ಷಿಸುವರು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನೀವು ಪ್ರಭಾವೀ ವ್ಯಕ್ತಿಗಳಂತೆ ತೋರುವಿರಿ. ಹೊಸ ಪಾಲುದಾರಿಕೆಗೆ ಪ್ರವೇಶಿಸಬಹುದು ನಿಮ್ಮ ಲಾಭವನ್ನು ಹೆಚ್ಚಿಸುವುದು. ನೀವು ಕೆಲಸಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದ್ದರೆ, ಪ್ರಯತ್ನ ಮುಂದುವರಿಯಲಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಆಪ್ತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದದ ರೂಪವು ಬದಲಾಗುವುದು. ಪ್ರೀತಿಯ ಸ್ಥಳದಲ್ಲಿ ನಿಮಗೆ ಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ವೈವಾಹಿಕ ಸಂಬಂಧಗಳನ್ನು ಬಂಧುಗಳಲ್ಲಿ ಬೆಳೆಸುವಿರಿ. ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ.
ಕುಂಭ ರಾಶಿ: ವಿದೇಶದ ಕಡೆಗೆ ಮನಸ್ಸು ಜಾರುವುದು. ಇಂದು ನೀವು ಯಾವುದನ್ನು ಉಳಿಸಿಕೊಳ್ಳಬೇಕು ಮತ್ತು ಬೇಡ ಎನ್ನುವುದನ್ನು ಸ್ಪಷ್ಟವಾಗಿ ನಿರ್ಧರಿಸಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ನಿಮ್ಮ ಗುರಿಗೆ ಹಾದಿಯು ಸ್ಪಷ್ಟವಾಗಿ ಇರದೇ ಹೋಗಬಹುದು. ಎಲ್ಲ ಕಾರ್ಯಗಳಿಗೆ ಸಂಬಂಧಿಸಿದ ಒಟ್ಟು ಫಲಿತಾಂಶ ಸಾಧಾರಣವಾಗಿರುವುದು. ನಿಮ್ಮ ಜಾಣ್ಮೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡಿ. ನಾನಾ ಕಾರಣಗಳಿಂದ ನಿಮ್ಮ ವ್ಯವಹಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದು. ಆತ್ಮೀಯರಿಂದ ನೀವು ಕೆಲವು ಸಲಹೆಯನ್ನು ಪಡೆಯುವಿರಿ. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದೇ ಹೋದೀತು. ಸಹೋದರರು ನಿಮಗೆ ಸಹಕಾರವನ್ನು ಕೊಡುವರು. ಹಳೆಯ ರೋಗವು ಮತ್ತೆ ಕಾಣಿಸಿಕೊಂಡರೆ ಕಷ್ಟವಾಗುವುದು. ಅನಿರೀಕ್ಷಿತ ಸುದ್ದಿಯು ನಿಮ್ಮ ಮನಸ್ಸಿಗೆ ನೋವನ್ನು ಉಂಟುಮಾಡಬಹುದು. ನೇರ ಮಾತಿನಿಂದ ವ್ಯಾಪರಕ್ಕೆ ತೊಂದರೆ ಉಂಟಾಗಬಹುದು.
ಮೀನ ರಾಶಿ: ಇನ್ನೊಬ್ಬರ ದಯೆಯಿಂದ ಜೀವಿಸುವುದು ಇಷ್ಡವಾಗದು. ಇಂದು ನಿಮಗೆ ಲಾಭ ನಷ್ಟಗಳ ವಿವೇಚನೆ ಅಧಿಕವಾಗಿರುವುದು. ಪ್ರಾಪಂಚಿಕ ಸುಖದ ಮೇಲೆ ಆಸಕ್ತಿಯು ಕಡಿಮೆ ಆದೀತು. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದೆ. ದ್ವೇಷಿಸುವವರನ್ನು ಇಷ್ಟಪಡುವಿರಿ. ಶತ್ರುಗಳ ಉಪಟಳವು ನಿಮ್ಮನ್ನು ಕುಂಠಿತಗೊಳಿಸೀತು. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ವೇತನದಲ್ಲಿ ಸುಧಾರಣೆ ಇರಲಿದೆ. ದಾಂಪತ್ಯ ಜೀವನವನ್ನು ಸೂಕ್ಷ್ಮವಾಗಿ ನಡೆಸಬೇಕಾದೀತು. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಿಯುಂಟುಮಾಡುವುದು. ಯಾರದೋ ಒತ್ತಡದಿಂದ ದಿನಚರಿಯನ್ನು ವ್ಯತ್ಯಾಸ ಮಾಡಿಕೊಳ್ಳಬೇಕಾಗುವುದು. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದು ಮನಸ್ಸಿಗೆ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿಕೊಂಡು ಮುಂದುವರಿಯುವುದು ಉತ್ತಮ. ಅನಗತ್ಯ ಹಸ್ತಕ್ಷೇಪದಿಂದ ನಿಮ್ಮ ಗೌರವಕ್ಕೇ ತೊಂದರೆ. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು.
ಲೋಹಿತ ಹೆಬ್ಬಾರ್-8762924271 (what’s app only)




