AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 11 December 2024: ಇಂದಿನ ದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ

11 ಡಿಸೆಂಬರ್​​ 2024:ಬುಧವಾರದಂದು ದ್ವಾದಶ ರಾಶಿಗಳ ರಾಶಿಫಲ ಹೇಗಿದೆ? ಜಾತಕವನ್ನು ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯಿಂದ ಲೆಕ್ಕಹಾಕಲಾಗುತ್ತದೆ. ಮೇಷದಿಂದ ಮೀನ ರಾಶಿಯವರಿಗೆ ಇಂದು ಏನು ಫಲ? ಎನ್ನುವುದನ್ನು ತಿಳಿದುಕೊಳ್ಳಿ. ಹಾಗೇ ನಿತ್ಯಪಂಚಾಂಗದಲ್ಲಿ ಗುಳಿಕ ಕಾಲ, ರಾಹುಕಾಲ ಹಾಗೂ ಯಮಘಂಡ ಕಾಲದ ಬಗ್ಗೆಯೂ ತಿಳಿಯಿರಿ.

Horoscope Today 11 December 2024: ಇಂದಿನ ದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ
ನಿತ್ಯ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ರಮೇಶ್ ಬಿ. ಜವಳಗೇರಾ|

Updated on: Dec 11, 2024 | 1:40 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ವರಿಯಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:26 ರಿಂದ 13:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:13 ರಿಂದ 09:37 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 11:02 12:26 ರಿಂದ 12:26 ರವರೆಗೆ.

ಮೇಷ ರಾಶಿ :ನಿಮ್ಮ ಸುತ್ತ ಎಂತಹ ಪ್ರಪಂಚವಿದ್ದರೂ ನೀವು ಮಾತ್ರ ಸುತ್ತುವುದು ನಿಮ್ಮ ಸುತ್ತಲೇ. ವಿದೇಶದಲ್ಲಿ ಇರವ ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸುವರು. ನಿಮ್ಮದಾದ ಸ್ವತಂತ್ರ ಆದಾಯವನ್ನು ಇಟ್ಟುಕೊಳ್ಳಿ. ಖಾಸಗಿ ವೃತ್ತಿಯಲ್ಲಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮಾತನಾಡುವಿರಿ. ಶತ್ರುಗಳಿಗೆ ನೀವೇ ಕೇಂದ್ರಬಿಂದು ಆಗಿರಬಹುದು. ಸ್ಪರ್ಧಾತ್ಮಕವಾಗಿ ಚಟುವಟಿಕೆಗಳನ್ನು ಮಾಡಲು ಮನಸ್ಸು ಒಪ್ಪುವುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ನಿಮಗೆ ತಾಳ್ಮೆಯೂ ಬಹಳ ಮುಖ್ಯವಾಗುವುದು. ಅಧ್ಯಾತ್ಮದಲ್ಲಿ ಹೆಚ್ಚು ಮನಸ್ಸು ಇರುವುದು. ನಿಮ್ಮ ವ್ಯಾಪಾರದಿಂದ ಅಧಿಕ ಲಾಭವು ಸಿಗುವುದು. ಅಧಿಕಾರಿ ವರ್ಗದವರ ಕಣ್ಣು ನಿಮ್ಮ ಮೇಲೆ ಇರಲಿದೆ. ಇಂದು ಯಾವ ವಾಗ್ವಾದಗಳಿಗೂ ಅವಕಾಶಶನ್ನು ಕೊಡಬೇಡಿ. ಕೆಲವು ಘಟನೆಗಳು ನಿಮ್ಮ ನಿದ್ರೆಯನ್ನು ಕೆಡಿಸಬಹುದು.

ವೃಷಭ ರಾಶಿ :ಕೋಪಿಸಿಕೊಂಡಷ್ಟೂ ಸಮಯ ಹಾಳು. ಇಂದು ವ್ಯಾವಹಾರಿಕವಾಗಿರುವ ಮನಶ್ಚಾಂಚಲ್ಯ ಅನೇಕ ವಿಧವಾಗಿ ನಿಮ್ಮನ್ನು ಕಾಡಬಹುದು.‌ ನಿಮ್ಮ ಪ್ರಯಾಣವನ್ನು ತಡೆಯಬಹುದು. ಸಂಗಾತಿಯ ಮನೋಭಾವವನ್ನು ಅರಿತುಕೊಳ್ಳಲು ಕಷ್ಟವಾದೀತು. ದೂರದ ಸ್ಥಳಕ್ಕೆ ಪ್ರವಾಸ ಹೋಗುವ ಸಂದರ್ಭವು ಬರಬಹುದು. ‌ಆಗದವರ ಬಗ್ಗೆ ವಿನಾ ಆಕ್ಷೇಪ ಮಾಡುವಿರಿ. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಕಛೇರಿಯ ಒತ್ತಡವನ್ನು ಮನೆಯವರೆಗೂ ತರುವುದು ಬೇಡ. ಇಂದಿನ ಆದಾಯದಿಂದ ನಿಮ್ಮ ಆಸೆಗಳನ್ನು ತೀರಿಸಿಕೊಳ್ಳುವಿರಿ. ನೀವು ಪರಿಚಿತರಿಂದ ಸಹಾಯವನ್ನು ಅಪೇಕ್ಷಿಸುವಿರಿ. ಕಛೇರಿಯಲ್ಲಿ ಎಲ್ಲರ ಜೊತೆ ಸೌಹಾರ್ದದಿಂದ ವರ್ತಿಸಿ. ಪ್ರೀತಿಯ ವಿಚಾರದಲ್ಲಿ ಇಂದು ಬೇಸರವಾಗಬಹುದು. ನಿಮಗೆ ಅಗೌರವ ತೋರಬಹುದು. ಸಹೋದ್ಯೋಗಿಗಳ ಕಾರ್ಯದಿಂದ ನೀವು ಕೋಪಗೊಳ್ಳುವಿರಿ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು.

ಮಿಥುನ ರಾಶಿ :ನಿಮ್ಮನ್ನೇ ಹೊಗಳಬೇಕು ಎಂದು ಆಶಿಸುತ್ತಾ ಇರುವಿರಿ. ಇಂದು ಹಿತಶತ್ರುಗಳು ನಿಮಗೆ ಬರುವ ಲಾಭವನ್ನು ತಪ್ಪಿಸುವರು. ಸಮಾಜದಿಂದ ಸಿಗುವ ಗೌರವವೂ ಬಾರದೇ ಇರುವುದು. ಹೊಸ ಉದ್ಯೋಗಕ್ಕೆ ನಿಮ್ಮ‌ ಮನಸ್ಸು ತೆರದುಕೊಳ್ಳುವುದು. ಹಿತಶತ್ರುಗಳು ಲಾಭವನ್ನು ತಪ್ಪಿಸುವರು. ಸಮಾಜದಿಂದ ಸಿಗುವ ಗೌರವವೂ ನಿಮಗೆ ಬಾರದು. ಸಂಕಟಗಳು ನಿಮ್ಮನ್ನು ಪರಿವರ್ತಿಸಲೂ ಬರಬಹುದು. ಬಂಧುಗಳು ನಿಮ್ಮ ಸಹಾಯವನ್ನು ಕೇಳಬಹುದು. ಇಂದು ನಿಮ್ಮಿಂದ ಕುಟುಂಬವು ಸಂತೋಷಗೊಳ್ಳುವುದು. ನಿದ್ರೆಯಲ್ಲಿ ಕೆಟ್ಟ ಕನಸುಗಳನ್ನು ಕಂಡು ಚಿಂತೆಗೊಳ್ಳುವಿರಿ. ದುಂದುವೆಚ್ಚವನ್ನು ನಿಯಂತ್ರಿಸುವಲ್ಲಿ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗುವಿರಿ. ಸಹೋದ್ಯೋಗಿಗಳು ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳು ಹೆಚ್ಚು ಹೇಳಬಹುದು. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಏಕಾಂತವು ಬೇಸರ ತರಿಸಿದ್ದು ಸ್ನೇಹಿತರ ಜೊತೆ ಕಾಲವನ್ನು ಕಳೆಯುವಿರಿ. ನಿಮಗೆ ಜವಾಬ್ದಾರಿಯನ್ನು ಬಿಟ್ಟು ಹಗುರಾಗುವ ಮನಸ್ಸಿದೆ.

ಕರ್ಕಾಟಕ ರಾಶಿ :ನಿಮ್ಮ ಆಲೋಚನೆಗೆ ಪ್ರತಿಕೂಲವಾಗಿ ಏನಾದರು ನಡೆದರೆ ಸಹಿಸಲಾಗದು. ಇಂದು ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ನೀರೀಕ್ಷಿಸಿದ ವಸ್ತುಗಳು ಕೆಲವು ಸಿಗಲಿವೆ. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಉದ್ಯೋಗದಲ್ಲಿ ಒತ್ತಡವು ಅಧಿಕವಾಗಿ ಇರಲಿದೆ. ಅದು ದಾಂಪತ್ಯದಲ್ಲಿ ಮೇಲೂ ಪರಿಣಾಮವನ್ನು ಬೀರುವುದು. ಸಿಟ್ಟಿನಿಂದ ಕೂಗಾಡುವಿರಿ. ಸಹೋದರನ ಕಡೆಯಿಂದ ಸಹಾಯವನ್ನು ಅಪೇಕ್ಷಿಸುವಿರಿ. ನಿಮ್ಮ ಕಾರ್ಯಕ್ಕೆ ಧನಸಹಾಯವನ್ನು ಸಾಲವಾಗಿ ಪಡೆಯುವಿರಿ. ವ್ಯವಹಾರದ ಅಭಿವೃದ್ಧಿಗೆ ವಿದೇಶದ ಸಂಪರ್ಕವು ಬೆಳೆಯಬಹುದು. ಜೊತೆಗಾರರ ಗುಣದ ಬಗ್ಗೆ ಸದಭಿಮಾನವಿರಲಿ. ನೀವೇ ಇಲ್ಲದ ಕಲ್ಪನೆಯನ್ನು ಮಾಡಿಕೊಂಡು ನಿಮ್ಮವರನ್ನು ದೂರಮಾಡಿಕೊಳ್ಳುವಿರಿ. ಸಜ್ಜನರ ಸಹವಾಸವು ನಿಮಗೆ ಸಂತೋಷವಾಗುವುದು. ಯಾರೂ ಮಾತೂ ನಿಮಗೆ ಪಥ್ಯವಾಗದು. ಅನಾಮಿಕರ ಜೊತೆ ಅತಿಯಾದ ಸಲುಗೆ ಬೇಡ. ಬಂಧುಗಳು ನಿಮ್ಮ ಬಗ್ಗೆ ಏನಾದರೂ ಆಡಿಕೊಂಡಾರು.

ಸಿಂಹ ರಾಶಿ :ದೇವರಿಗೆ ಏನಾದರೂ ಸೇವೆಯನ್ನು ಸಲ್ಲಿಸುವ ಮನಸ್ಸಾಗುವುದು. ನೀವು ಇಂದು ಹೊಸತನವನ್ನು ತೆರೆದ ಮನಸ್ಸಿನಿಂದ ಸ್ವಾಗತಿಸುವಿರಿ. ವೃತ್ತಿಯಲ್ಲಿ ಆತಂಕದ ವಾತಾವರಣವು ಇರಲಿದೆ. ನಿರಂತರ ಕೆಲಸವು ನಿಮಗೆ ಬೇಸರ ತಂದೀತು. ಇಂದು ವೃತ್ತಿಯಲ್ಲಿ ಆತಂಕವು ಬರಬಹುದು. ಪ್ರಾಣಿಗಳಿಂದ ಬಹುಭೀತರಾಗುವಿರಿ. ನಿಮ್ಮ ಇಷ್ಟದವರ ಭೇಟಿಯಿಂದ ಸಮಾಧಾನ ಸಿಗುವುದು. ನಿಮ್ಮ ಸಾಮರ್ಥ್ಯಕ್ಕೆ ಯೋಗ್ಯವಾದ ಕೆಲಸವನ್ನು ಮಾಡಿ. ಯಾರ ಬಗ್ಗೆಯೂ ಅನಗತ್ಯ ಟೀಕೆಗಳು ಬೇಡ. ಆಧ್ಯಾತ್ಮದ ಕಡೆ ಮನಸ್ಸು ಇರಬಹುದು. ಇನ್ನೊಬ್ಬರಿಗೆ ಹೋಲಿಸಿಕೊಂಡು ಸಂಕಟಪಡುವಿರಿ. ಇಂದು ನೀವು ಸಂತೋಷ ಆಗದೇಹೋಗಬಹುದು. ನಿಮ್ಮ ಪ್ರತಿಭೆಯನ್ನು ಪ್ರಕಟಿಸಲು ಉತ್ತಮ ಅವಕಾಶವಿರುವುದು. ಅವಕಾಶವನ್ನು ಮಾಡಿಕೊಂಡರೆ ಉತ್ತಮ ಭವಿಷ್ಯವು ಸಿಗುವುದು. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳು ಬರಬಹುದು.

ಕನ್ಯಾ ರಾಶಿ :ಇಂದು ನಿಮ್ಮ ಹಳೆಯ ಕಾರ್ಯಗಳನ್ನೇ ಮಾಡಲು ನೆನಪಿಸಬೇಕಾಗುವುದು. ಆರ್ಥಿಕಸ್ಥಿತಿಯು ಸುಧಾರಿಸಿದ್ದು ನಿಮಗೆ ಸ್ವಲ್ಪ ನೆಮ್ಮದಿ ಇರುವುದು. ಹಿರಿಯರಲ್ಲಿ ಭಕ್ತಿಯನ್ನು ತೋರಿಸುವಿರಿ. ಸಮಸ್ಯೆಯನ್ನು ಬರುವ ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಇರಿ. ಬಹಳ ದಿನಗಳಿಂದ‌ ನಿರೋದ್ಯೋಗ ಸಮಸ್ಯೆಯಿಂದ ಮಾನಸಿಕ ಹಿಂಸೆಯನ್ನು ಅನುಭವಿಸುವಿರಿ. ಸಿಕ್ಕ ಸಣ್ಣ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಿ. ನಿಮ್ಮ ಕೆಲಸದಲ್ಲಿ ಇಂದು ಅಡತಡೆಗಳು ಬರಲಿದೆ. ಅದನ್ನು ಗಂಭಿರವಾಗಿ ತೆಗೆದುಕೊಳ್ಳುವುದು ಬೇಡ. ನೆರೆಯವರ ವರ್ತನೆಯಿಂದ ನಿಮಗೆ ಸಿಟ್ಟಿಗೆ ಬರಬಹುದು. ಹೊಸ ಉದ್ಯೋಗವನ್ನು ಆರಂಭಿಸಬೇಕು ಎನಿಸಬಹುದು. ಪ್ರೇಮ ಅನುಮಾನವನ್ನು ಇಟ್ಟುಕೊಳ್ಳುವುದು ಬೇಡ. ಸಹೋದರನ ಪ್ರಗತಿಯಲ್ಲಿ ನೀವು ಸಂತೋಷ ಆಗಲಿದೆ. ಸಣ್ಣ ಉಳಿತಾಯವೂ ನಿಮಗೆ ಉಪಯೋಗವಾದೀತು.

ತುಲಾ ರಾಶಿ :ಇಂದು ನಿಮ್ಮ ವೈವಾಹಿಕ ಜೀವನದ ಕೆಲವು ಪ್ರಸಂಗಗಳು ಮುಜುಗರ ತರಿಸುವುದು. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮಿಂದ ಉಪಕಾರ ಪಡೆದವರು ನಿಮ್ಮ ವಿರುದ್ಧ ಬೀಳಬಹುದು. ಬದುಕಿಗೆ ತಿರುವು ಬರುವ ಸಾಧ್ಯತೆ ಇದೆ. ಇಂದಿನ‌ ಕಾರ್ಯವು ನಿಮಗೆ ಸಮಾಧಾನ‌ ಕೊಡದೇ ಇರಬಹುದು. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸುವಿರಿ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು.‌ ನಿಮ್ಮ‌ ಸಣ್ಣ ಉಳಿತಾಯಕ್ಕೆ ಇಂದು ಬೆಲೆ‌ಯು ಬಂದಂತಾಗುವುದು. ಏನಾದರೂ ಮಾಡುತ್ತ ನಿಮ್ಮ ಮನಸ್ಸಿಗೆ ಕೆಲಸವನ್ನು ಕೊಡುವಿರಿ. ಜಾಣ್ಮೆಯಿಂದ ಇಂದು ನೀವು ಪ್ರಶಂಸೆಯನ್ನು ಪಡೆಯುವಿರಿ. ವೃತ್ತಿಯಲ್ಲಿ ಕೆಲವು ಸಂತೋಷದ ಕ್ಷಣಗಳು ನಿಮ್ಮದಾಗಲಿವೆ. ಪ್ರಭಾವೀ ಜನರ ಜೊತೆ ಆತ್ಮೀಯತೆಯನ್ನು ಬೆಳೆಸಿಕೊಳ್ಳುವಿರಿ. ಆಹಾರದಿಂದ ಆರೋಗ್ಯವು ಹಾಳಾಗಬಹುದು. ಮಾನಸಿಕವಾಗಿ ಉಂಟಾಗುವ ಕಿರಿಕಿರಿಗೆ ನಿಮಗೆ ಕೋಪ ಬರಬಹುದು.

ವೃಶ್ಚಿಕ ರಾಶಿ :ಇಂದು ನಿಮ್ಮ ಗೌರವಕ್ಕೆ ಮೇಲಿನವರಿಂದ ಚ್ಯುತಿಯಾಗಬಹುದು. ಯಾವ ಅಪವಾದವನ್ನೂ ನೀವು ಇಟ್ಟುಕೊಳ್ಳುವುದು ಇಷ್ಟಪಡುವುದಿಲ್ಲ. ಅಪಮಾನವನ್ನು ಗೆಲ್ಲುವ ಛಲ ಬರಬಹುದು. ನಿಮ್ಮದೆಂದುಕೊಂಡವು ವಸ್ತುವು ನಿಮ್ಮಿಂದ ದೂರವಾಗಬಹುದು. ಬೇಸರಪಟ್ಟುಕೊಳ್ಳುವ ಸಾಧ್ಯತೆ ಇದೆ. ಇಂದುಬಅತಿಯಾದ ನಿದ್ರೆಯಿಂದ ಜಾಡ್ಯವು ಬರುವುದು. ದೈಹಿಕ ಶ್ರಮವು ಇಂದು ಹೆಚ್ಚಿರುವುದು. ನಿಮ್ಮ‌ ಶಿಷ್ಯರಿಂದ ನಿಮಗೆ ಉಡುಗೊರೆ ಸಿಗುವ ಸಾಧ್ಯತೆ ಇದೆ. ಯಾವ ಆರೋಪವನ್ನೂ ನೀವು ಸಹಿಸಿಕೊಳ್ಳದೇ ಎಲ್ಲವನ್ನೂ ಹೊರಹಾಕುವಿರಿ. ಉತ್ಸಾಹದಿಂದ ನೀವು ಇಂದಿನ ಕೆಲಸವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಕೆಟ್ಟ ಮಾತುಗಳು ಬರಬಹುದು. ಭವಿಷ್ಯದ ಬಗ್ಗೆ ಅತಿಯಾದ ಆಲೋಚನೆ ಇರಲಿದೆ. ಸಹೋದರನಿಂದ ನಿಮಗೆ ಸಮಸ್ಯೆ ಆಗಬಹುದು. ಹಠದ ಸ್ವಭಾವದಿಂದ ಸಂಗಾತಿಗೆ ಕಿರಿಕಿರಿ ಎನಿಸಬಹುದು. ಇಂದು ನಿಮ್ಮ ಅನಾರೋಗ್ಯವನ್ನು ಯಾರ ಬಳಿಯೂ ಹೇಳಿಕೊಳ್ಳಲಾರಿರಿ.

ಧನು ರಾಶಿ :ಯಾರಿಗೂ ನಿಮ್ಮ ಬೆರಳನ್ನು ಕೊಡುವುದು ಬೇಡ. ಹಸ್ತವನ್ನು ನುಂಗಿಯಾರು. ನೀವು ಪ್ರಯಾಣವನ್ನು ಅನಿವಾರ್ಯ ಕಾರಣಕ್ಕೆ ಮಾಡಬೇಕಾಗಬಹುದು. ಉದ್ಯೋಗದಲ್ಲಿ ಇಷ್ಟವಿಲ್ಲದೆ ಕಡೆ ವರ್ಗಾವಣೆ ಆಗಲಿದೆ. ಆಪ್ತರ ಮಾತಿಗೆ ಯಾವ ಬೆಲೆಯನ್ನೂ ನೀವು ಕೊಡುವುದಿಲ್ಲ. ಸಭೆಯಲ್ಲಿ ನಿಮಗೆ ಗೌರವವು ಸಿಗುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ. ಸಮಯಪ್ರಜ್ಞೆಯು ಇಂದು ಕೆಲಸ‌ ಮಾಡದು. ನಿಮ್ಮನ್ನು ಇಷ್ಟವಿಲ್ಲದ ಕಡೆ ವರ್ಗಾವಣೆ ಮಾಡುವ ತೀರ್ಮಾನವಾಗಬಹುದು. ಉದ್ಯೋಗದ ಸ್ಥಳದಲ್ಲಿ ಕಹಿ‌ ಅನುಭವವಾದೀತು. ಯಾರದೋ ತಪ್ಪಿನಿಂದ ನಿಮಗೆ ದೋಷವು ಅಂಟಿಕೊಂಡಿದ್ದು ತಿಳಿದುಬರುವುದು. ದುರಭ್ಯಾಸದಿಂದ ಆರ್ಥಿಕ ನಷ್ಟವಾಗುತ್ತದೆ. ಅವಕಾಶಗಳಿಂದ ನೀವು ವಂಚಿತರಾಗುವಿರಿ. ಕುಟುಂಬದ ನಡವಳಿಕೆಯು ನಿಮಗೆ ಅರ್ಥವಾಗದೇ ಹೋದೀತು. ಅಪರಿಚಿತರ ಜೊತೆ ವ್ಯವಹಾರವನ್ನು ಮಾಡುವಾಗ ನಿಮ್ಮ ಗುಟ್ಟನ್ನು ಬಿಟ್ಟಕೊಡಬೇಡಿ. ನಕಾರಾತ್ಮಕ ಆಲೋಚನೆಗೆ ಅವಕಾಶವನ್ನು ಕೊಡಬೇಡಿ.

ಮಕರ ರಾಶಿ :ಅಪನಂಬಿಕೆಯ ಕಾರಣ ರೋಗ ಶಮನವಾಗದು. ನೀವು ಹಿರಿಯರ ಜೊತೆ ಗೌರವಯುತವಾಗಿ ವರ್ತಿಸಿ. ಅನಗತ್ಯ ಹರಟೆಯಿಂದ ಈ ದಿನವನ್ನು ಕಳೆಯುವಿರಿ. ನಿಮ್ಮ ಏಕಾಗ್ರತೆಯ ಕಾರ್ಯಕ್ಕೆ ಭಂಗವಾಗುವ ಸಾಧ್ಯತೆ ಇದೆ. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು. ಜವಾಬ್ದಾರಿಯಿಂದ ತಲೆ ಭಾರವಾಗುವುದು. ಅನವಶ್ಯಕ ಹರಟೆಯಿಂದ ಅಧಿಕಾರಿಗಳು ನಿಮ್ಮ ಮೇಲೆ ಸಿಟ್ಟಾಗಬಹುದು. ಕಳೆದುಕೊಂಡ ವಸ್ತುವಿನ ಬಗ್ಗೆ ವ್ಯಾಮೋಹ ಹೋಗದು. ಸಂಗಾತಿಗೆ ಇಂದು ಸಂತೋಷವನ್ನು ಕೊಡುವಿರಿ. ಕಾರ್ಯದ ಒತ್ತಡವಿರುವ ಕಾರಣ ಸಮಯದ ಅಭಾವ ಎನಿಸಬಹುದು. ನೀವು ಹಿರಿಯರ ಜೊತೆ ಸಣ್ಣ ವಿಚಾರಕ್ಕೂ ವಾಗ್ವಾದಕ್ಕೆ ಇಳಿಯುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಎಲ್ಲರ ಬಳಿ ಹೇಳಿಕೊಳ್ಳುವಿರಿ. ತಂದೆಯ ವಿಚಾರದಲ್ಲಿ ನಿಮಗಿರುವ ಅಸಮಾಧಾನವನ್ನು ತಾಯಿಯ ಬಳಿ ಹೇಳಿಕೊಳ್ಳುವಿರಿ. ನಿಮಗೆ ಮಕ್ಕಳು ಅವಶ್ಯಕತೆ ಇರುವ ಹಣದ ಸಹಾಯವನ್ನು ಮಾಡುವರು.

ಕುಂಭ ರಾಶಿ :ಇಂದು ಸಂಪತ್ತಿನ ವ್ಯಯ ಆಗುವುದು. ಆದರೆ ಅದನ್ನು ಮತ್ಯಾವುದಾದರೂ ರೀತಿಯಲ್ಲಿ ವಿನೊಯೋಗವಾಗುವಂತೆ ಮಾಡಿಕೊಳ್ಳಿ. ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಕಾಲಾವಕಾಶದ ಕೊರತೆ ಇರುವುದು. ನಿಮ್ಮ ಬಗ್ಗೆಯೇ ನೀವು ಕೊರಗುವುದು ಬೇಡ. ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ಸಭ್ಯರಂತೆ ಇಂದು ನೀವು ತೋರುವಿರಿ. ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಸಮಯವು ಸಿಗದೇ ಹೋದೀತು. ಭವಿಷ್ಯದ ಬಗ್ಗೆ ಹೆಚ್ಚು ಚಿಂತೆ ಮಾಡುವ ಅವಶ್ಯಕತೆ ಇರದು. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು. ವೃತ್ತಿಗಾಗಿ ನೀವು ಮಾಡುವ ಪ್ರಯತ್ನವು ಫಲಿಸುವುದು. ಸಿಗದಿರುವುದರ ಬಗ್ಗೆ ಆಸೆಯನ್ನು ಬಿಡುವಿರಿ. ಅಪರಿಚಿತರ ಒಡನಾಟ ಹೆಚ್ಚು ಶ್ರೇಯಸ್ಕರವಲ್ಲ. ನಿಮ್ಮ ಅನುಕೂಲತೆಗೆ ತಕ್ಕಂತೆ ಕೆಲಸವನ್ನು ಮುಂದುವರಿಸಿ. ಯಾರಾದರೂ ಬಂದು ನಿಮ್ಮ ಬಳಿ ಕೆಲಸ ಮಾಡಿಕೊಡಲು ಕೇಳಬಹುದು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು.

ಮೀನ ರಾಶಿ :ಇನ್ನೊಬ್ಬರ ವಿರೋಧವನ್ನು ಕಟ್ಟಿಕೊಂಡಾದರೂ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಇಂದು ಮನಸ್ಸಿನ ಕಿರಿಕಿರಿಯನ್ನು ಅನುಭವಿಸದೇ ಅನ್ಯ ಮಾರ್ಗವಿರದು. ವಿವಾಹಯೋಗವು ಬಂದರೂ ನಿಮಗೆ ಅಂತಹ ಯೋಗ್ಯತೆಯ ಕೊರತೆ ಎದ್ದು ಕಾಣುವುದು. ನಿಮ್ಮ ನಿರೀಕ್ಷಿತ ಸಮಯವು ಸಮೀಪಿಸುತ್ತಿರುವಂತೆ ನಿಮಗೆ ಅನ್ನಿಸುವುದು. ಆತುರದಲ್ಲಿ ಏನನ್ನಾದರೂ ಮಾಡಿಕೊಂಡೀರ. ನಿಮ್ಮ ಮಾತಿನಲ್ಲಿ ತಾರ್ಕಿಕತೆ ಹೆಚ್ಚು ಕಾಣುವುದು. ಒಳಗೆ ನೋವನ್ನು ಇಟ್ಟುಕೊಂಡು ಶಾಂತರೀತಿಯಲ್ಲಿ ಇರುವಂತೆ ತೋರುವಿರಿ. ವಿವಾಹಯೋಗವು ಬಂದರೂ ಅದನ್ನು ನೀವು ಸ್ವೀಕರಿಸುವ ರೀತಿ ಭಿನ್ನವಾಗಿ ಇರಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಕಾರ್ಮಿಕ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸದೇ ಗುಟ್ಟಾಗಿ ಇಟ್ಟುಕೊಳ್ಳುವಿರಿ. ಸಂಗಾತಿಗೆ ಸುಳ್ಳು ಹೇಳಿ ನಿಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ