Daily Horoscope 17 October 2024: ಇಂದಿನ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

ಅಕ್ಟೋಬರ್ 17,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ಇಂದಿನ (2024 ಅಕ್ಟೋಬರ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 17 October 2024: ಇಂದಿನ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 17, 2024 | 1:09 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ರೇವತೀ, ಯೋಗ: ವ್ಯಾಘಾತ​, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ 13:46 ರಿಂದ 15:14rವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:25 ರಿಂದ 07:54ರವರೆಗೆ, ಗುಳಿಕ ಕಾಲ ಬೆಳಿಗ್ಗೆ 09:22 ರಿಂದ 10:50 ರವರೆಗೆ.

ಮೇಷ ರಾಶಿ :ಇಂದು ಮನೆಯಿಂದ ದೂರವಿರಬೇಕಾದ ಸ್ಥಿತಿ ಬರುವುದು. ಪ್ರತಿಭಾವಂತರು ಜಾಣ್ಮೆಯಿಂದ ಹೆಸರು ಮಾಡುವರು. ಸಂತೋಷದಿಂದ ಇರುತ್ತಾರೆ. ಉನ್ನತಸ್ಥಾನದ ಪ್ರಾಪ್ತಿಗೆ ಕೆಲವು ಅಡೆತಡೆಗಳು ಎದುರಾಗಬಹುದು. ಆಪ್ತರ ನಡುವೆ ಸಂದೇಹವು ಬರುವ ಸಂಭವವಿದೆ. ಯಾರದೋ ಮಾತಿಗೆ ನಿಮ್ಮ ಪ್ರತಿಕ್ರಿಯೆ ಸಲ್ಲದು. ನೂತನ ಗೃಹನಿರ್ಮಾಣದ ಕಾರ್ಯಕ್ಕೆ ದೊಡ್ಡ ಯೋಜನೆಯನ್ನು ರೂಪಿಸುವಿರಿ. ನಿಮಗೆ ಸಿಗಬೇಕಾದ ವಸ್ತುಗಳನ್ನು ಹಕ್ಕಿನಿಂದ ಪಡೆಯುವಿರಿ. ನಿಮ್ಮ ಉದ್ಯೋಗವು ಅನ್ಯರ ಕಿವಿಕಚ್ಚುವಿಕೆಯಿಂದ ಕಳೆದುಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಯನ್ನು ಸಹೋದರನಿಗೆ ಕೊಟ್ಟು‌ ಮನೆಯಿಂದ ದೂರ ಹೋಗುವಿರಿ. ಶತ್ರುಗಳ ತೊಂದರೆಯನ್ನು ತಡೆಯಲು ಕಾನೂನಿಗೆ ಶರಣಾಗುವಿರಿ. ಬೆಂಬಲವಿದೆ ಎಂದು ಏನನ್ನಾದರೂ ಮಾಡುವುದು ಬೇಡ.

ವೃಷಭ ರಾಶಿ :ಇಂದು ಸ್ಥಿರಾಸ್ತಿಯ ಒಡೆತನ ನಿಮಗೆ ಸಿಗಬಹುದು. ಮನಸ್ಸಿಗೆ ಅಹಿತಕರ ಘಟನೆಗಳು ತೊಂದರೆಯನ್ನು ತರಬಹುದು. ಯಾರ ಮಾತನ್ನೇ ಕೇಳುವುದಿದ್ದರೂ ನಿಮ್ಮದಾದ ಪೂರ್ವಯೋಜನೆ ಇರಲಿ. ನಿಮ್ಮ ಕಷ್ಟಕ್ಕೆ ಯಾರೂ ಬರದಿರುವುದು ನಿಮಗೆ ಬೇಸರವನ್ನು ತರಿಸಬಹುದು. ಮನೆಯಿಂದ ಅನಿರೀಕ್ಷಿತ ಸುದ್ದಿಯೊಂದು ಬರಬಹುದು. ನಿಮ್ಮ ಸಾಮರ್ಥ್ಯದ ಮೇಲೆ ನಿಮಗೆ ಪೂರ್ಣವಿಶ್ವಾಸವು ಇರದು. ನಿಮ್ಮ ನೆಮ್ಮದಿಯನ್ನು ಪರರು ಸಹಿಸಲಾರರು. ಯಾವುದಾದರೂ ಆಮಿಷಕ್ಕೆ ಬಲಿಯಾಗಿ ಕಾನೂನಿಗೆ ವಿರುದ್ಧವಾದ ಕಾರ್ಯದಲ್ಲಿ ತೊಡಗುವಿರಿ. ಪತ್ನಿಯ ಭಾವಕ್ಕೆ ಸ್ಪಂದಿಸಲು ನಿಮಗೆ ಇಂದು ಆಗದು. ಇದು ಮನಸ್ತಾಪಕ್ಕೆ ಕಾರಣವಾದೀತು. ಸಂಗಾತಿ ಮತ್ತು ಮಕ್ಕಳನ್ನು ಅವರಷ್ಟಕ್ಕೆ ಬಿಟ್ಟು ನೀವು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ. ಅಪರಿಚಿತರು ನಿಮ್ಮ ಹಣವನ್ನು ಪಡೆಯಬಹುದು.

ಮಿಥುನ ರಾಶಿ :ಅಪ್ರಾಮಾಣಿಕತೆಯಿಂದ ಆದ ಲಾಭವು ಸದ್ಯಕ್ಕೆ ಸಂತೋಷವನ್ನು ಕೊಡುವುದು. ಮಕ್ಕಳ‌ ಮೇಲೆ‌ ಪ್ರೀತಿ ಇದ್ದರೂ ಹುಸಿ ಮುನಿಸು ಅಗತ್ಯವಾಗಿ ಬೇಕು. ನಿಮ್ಮ ಅಧಿಕ ಶ್ರಮದಿಂದ ನಿಮಗೇ ಯಶಸ್ಸು ಸಿಗುವುದು. ಸ್ವಲ್ಪಮಟ್ಟಿಗೆ ಆಯಾಸವೂ ಆಗುವುದು. ಸಜ್ಜನರ ಅಕಸ್ಮಾತ್ ಭೇಟಿಯಾಗುವುದು. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿ ಇರುವಿರಿ. ನಿಮ್ಮ ಕಡೆಯಿಂದ ಆದ ತಪ್ಪಿಗೆ ಕ್ಷಮೆಯನ್ನು ಯಾಚಿಸಿ. ಸರಳವಾದ ಕಾರ್ಯವನ್ನು ಕಷ್ಟವಾಗಿಸಿಕೊಳ್ಳುವುದು ಬೇಡ. ನೀವು ಕುಟುಂಬದ ವಿಚಾರದಲ್ಲಿ ತೆಗೆದುಕೊಂಡ ತೀರ್ಮಾನವು ಇತರರಿಗೂ ಸರಿ ಎನಿಸಬಹುದು. ಆರೋಗ್ಯದ ಹೆಚ್ಚು ಗಮನವಿರಲಿ. ಹೊಸ ಸಂಬಂಧದಲ್ಲಿ ನಿಮಗೆ ಆಸಕ್ತಿಯು ಹೆಚ್ಚಿರುವುದು. ನಿಮಗೆ ಬರುವ ಜವಾಬ್ದಾರಿಯನ್ನು ಅಕಾರಣವಾಗಿ ತಳ್ಳಿಹಾಕುವಿರಿ. ಗಣ್ಯರ ಭೇಟಿಯು ಸಂತೋಷವನ್ನು ನೀಡುವುದು. ತಂದೆಯಿಂದ ನಿಮ್ಮ ವ್ಯವಹಾರಗಳಿಗೆ ಸಹಕಾರ, ಸಹಾಯ ದೊರೆಯುತ್ತದೆ.

ಕರ್ಕಾಟಕ ರಾಶಿ :ಅನ್ಯರ ದೋಷವನ್ನೇ ಹುಡುಕುತ್ತ ಇರುವುದು ಸರಿಯಾಗದು. ಸಂಗಾತಿಗಾಗಿ ಮನಸ್ಸಿಲ್ಲದಿದ್ದರೂ ಖರ್ಚು ಮಾಡಬೇಕಾಗುವುದು. ವೃತ್ತಿಯ ಸ್ಥಳದಲ್ಲಿ ನೀವು ಇಂದು ಖುಷಿಯಿಂದ ಇರುವಿರಿ. ನೀವಾಡುವ ಮಾತು ಸರಳವೂ ಸ್ಪಷ್ಟವಾಗಿ ಆಗಿರಲಿ. ಆಗ ಮಾತ್ರ ನಿಮ್ಮ ಮಾತನ್ನು ಆಲಿಸುವರು. ನಿಮ್ಮ ತಪ್ಪನ್ನು ಇನ್ನೊಬ್ಬರ ಮೇಲೆ ಹಾಕುವಿರಿ. ಆಸ್ತಿಯನ್ನು ಸ್ವಾಯತ್ತ ಮಾಡಿಕೊಳ್ಳಲು ಏನಾದರೂ ತಂತ್ರವನ್ನು ಹೂಡುವಿರಿ. ಅಧ್ಯಾತ್ಮದ ಕಡೆ ಒಲವು ಅಧಿಕವಾಗಿ ಕಾಣುವುದು. ಪ್ರೇಮ ವಿವಾಹವು ನಿಮಗೆ ಇಷ್ಟವಾಗದು. ಮನೆಯ ಜವಾಬ್ದಾರಿಯು ಬಹಳ ಬೇಗ ಬಂದಿದ್ದು ನಿಮ್ಮ ಎಲ್ಲ ಕ್ರಿಯಾಶೀಲತೆಯನ್ನು ಸದ್ಯ ನಿಲ್ಲಿಸಬೇಕಾಗುವುದು. ನಿಮ್ಮ ವಸ್ತುಗಳನ್ನು ಕಳೆದುಕೊಂಡಿದ್ದು ಗೊತ್ತಾಗದೇಹೋಗುವುದು. ಸಮಾರಂಭಗಳಿಗೆ ಭೇಟಿಯು ಅನಿರೀಕ್ಷಿತವವೂ ಆಗಬಹುದು. ಉದ್ಯೋಗದಲ್ಲಿ ತಾಂತ್ರಿಕ ಪರಿಣತರಿಗೆ ಹೆಚ್ಚಿನ ಸ್ಥಾನ ದೊರೆತು ಸಂತಸವಾಗುತ್ತದೆ. ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು.

ಸಿಂಹ ರಾಶಿ :ಅಪರಿಚಿತರ ಮಾತಿಗೆ ಮನಸೋಲುವಿರಿ. ಪ್ರೀತಿ ಶುರುವಾಗಬಹುದು. ನಿಮ್ಮ ಕಾರ್ಯವು ಸಫಲವಾಗಲು ಶ್ರಮ ಅಗತ್ಯ. ಈ ಓಡಾಟದಿಂದ ಆಯಾಸ ಹೆಚ್ಚಾಗುವುದು. ಪರಪುರುಷರಿಂದ ಆದಷ್ಟು ದೂರವಿರುವುದು ಉತ್ತಮ. ನಿಮ್ಮ ಇಂದಿನ ಕೆಲಸವು ಗೊಂದಲದಿಂದ ಕೂಡಿರಲಿದೆ. ಸಂಪತ್ತಿದ್ದರೂ ಅದನ್ನು ಸದುಪಯೋಗ ಮಾಡುವ ಮಾರ್ಗವು ಗೊತ್ತಾಗದೇ ಇರಬಹುದು. ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಂಗಾತಿಯ ಮೇಲೆ ದ್ವೇಷ ಸಾಧಿಸಲು ಹೋಗುವುದು ಸರಿಯಲ್ಲ. ಮುಂಗೋಪವನ್ನು ಕಡಿಮೆ ಮಾಡಿಕೊಂಡರೂ ಅದು ನಿಮ್ಮ ಹತೋಟಿಗೆ ಬರುವ ತನಕ ಕಷ್ಟವಾದೀತು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳುವುದು ಸರಿಯಾಗದು. ಹಿರಿಯರಿಗೆ ಯೋಗ್ಯವಾದ ಗೌರವವನ್ನು ನೀಡಿ. ದುರ್ಬಲ ಸ್ಥಿತಿಯನ್ನು ಸಕಾರಾತ್ಮಕವಾಗಿ ನೋಡುವಿರಿ. ನಿಮ್ಮ ಮೇಲೆ‌ ನಂಬಿಕೆಯು ಕಡಿಮೆಯಾದೀತು. ಹೂಡಿಕೆಯ ವಿಚಾರದ ಬಗ್ಗೆ ಚರ್ಚೆ ನಡೆಸುವಿರಿ. ಕಛೇರಿಯಲ್ಲಿ ಒತ್ತಡದ ಕಾರ್ಯವನ್ನು ಮುಗಿಸಿದರೂ ನಿಮ್ಮಲ್ಲಿ ಉತ್ಸಾಹವು ಅಧಿಕವಾಗಿರುವುದು.

ಕನ್ಯಾ ರಾಶಿ :ಸಂಗಾತಿಯನ್ನು ಸಂಭಾಳಿಸಲು ಸೋಲಾಗಬಹುದು. ಶತ್ರುಗಳು ನಿಮ್ಮ ವಿರುದ್ಧ ಮಾಡುವ ತಂತ್ರಗಳು ನಿಮಗೆ ಪೂರಕವಾಗಿಯೇ ಬರುವುದು. ಕೆಲವರಿಗೆ ನಿಮ್ಮ ವರ್ತನೆಯು ಇಷ್ಟವಾಗದೇ ಇರಬಹುದು. ಎಂದೋ ಆಡಿದ ಮಾತಿನ ದುಷ್ಪರಿಣಾಮವು ಇಂದು ಹೊತ್ತಾಗುವುದು. ಆಸಮಯದಲ್ಲಿ ಭೋಜನವನ್ನು ಮಾಡುವುದು ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಉಂಟುಮಾಡಬಹುದು. ಭೂಮಿಯ ವ್ಯವಹಾರದಲ್ಲಿ ನಿಮಗೆ ಅತೀವ ಆಸಕ್ತಿಯು ಇರುವುದು. ಹೂಡಿಕೆಯನ್ನು ಸರಿಯಾದ ಸ್ಥಳದಲ್ಲಿ ಮಾಡಿ. ಯಾವ ಸನ್ನಿವೇಶವೂ ಬರಬಹುದು. ಮನಸ್ಸನ್ನು ಸಮಸ್ಥಿತಿಯಲ್ಲಿ ಇಟ್ಟುಕೊಳ್ಳುವುದು ಮುಖ್ಯ. ಸಾಹಿತ್ಯಾಸಕ್ತರು ಹೆಚ್ಚಿನ ಲಾಭವನ್ನು ಪಡೆಯುವಿರಿ. ಬಂಧುಗಳ ನಡುವೆ ವಾಗ್ವಾದವು ನಡೆದು ವೈಮನಸ್ಯ ಉಂಟಾಗಬಹುದು. ವ್ಯವಹಾರದಲ್ಲಿ ಚುರುಕುತನ ಅಗತ್ಯ. ಕಾರ್ಯದ ಒತ್ತಡದಿಂದ ಸಂಗಾತಿಯು ನಿಮ್ಮ ಜೊತೆ ಸರಿಯಾಗಿ ಮಾತನಾಡದೇ ಇರಬಹುದು.

ತುಲಾ ರಾಶಿ :ಮೆಚ್ಚುಗೆಗಾಗಿ ಮಾಡುವ ಕೆಲಸವು ವ್ಯರ್ಥವಾಗುವುದು. ಸ್ಪರ್ಧಾತ್ಮಕ ವಿಚಾರಗಳಲ್ಲಿ ನಿಮಗೆ ಸೋಲಾಗಬಹುದು. ನಿಮಗೆ ಮೊದಲೇ ಸರಿ ಎನಿಸಿದ್ದು ಈಗ ತಪ್ಪು ಎಂದು ಅರಿವಿಗೆ ಬರುವುದು. ನೀವು ಸರಿಯಾದ ಮಾರ್ಗದರ್ಶನವನ್ನು ಪಡೆಯುವುದು ಮುಖ್ಯ. ಜೀರ್ಣವಾಗದ ಆಹಾರದಿಂದ ಸಂಕಟವಾಗುವುದು. ಯಾರು ಏನಂದುಕೊಳ್ಳುತ್ತಾರೇನೋ ಎಂಬ ಹಿಂಜರಿಕೆ ಬೇಡ. ಭೋಗ ವಸ್ತುಗಳಗೆ ಹೆಚ್ಚು ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಸಂತೋಷವನ್ನೇ ಮುಖ್ಯವಾಗಿ ಇಟ್ಟುಕೊಂಡು ಕೆಲಸಮಾಡುವಿರಿ. ನಿಮ್ಮ ಅಕ್ಕಪಕ್ಕದವರನ್ನು ನಿರ್ಲಕ್ಷ್ಯ ಮಾಡುವಿರಿ. ನಿಮ್ಮ ವಿದ್ಯೆಯ ಬಗ್ಗೆ ಅಹಂಕಾರ ಬರಬಹುದು. ಆದಷ್ಟು ಸಾಮಾಜಿಕವಾಗಿ ಸಭ್ಯರಂತೆ ವರ್ತಿಸಿ. ಕುಟುಂಬದ ಮರ್ಯಾದೆಯನ್ನು ಕಾಪಾಡುವ ಕೆಲಸವೂ ನಿಮ್ಮಿಂದ ಆಗಬೇಕಿದೆ. ಸಂಗಾತಿಯ ಸಿಡುಕಿನ ನುಡಿಗಳು ನಿಮಗೆ ನೋವು ತರುತ್ತದೆ. ಆಕಸ್ಮಿಕವಾಗಿ ಸಿಕ್ಕ ಉದ್ಯೋಗವನ್ನು ಸರಿಯಾಗಿ ಬಳಸಿಕೊಳ್ಳಿ.

ವೃಶ್ಚಿಕ ರಾಶಿ :ನಿಮ್ಮ ಗೃಹ ನಿರ್ಮಾಣಕ್ಕೆ ಯಾರಿಂದಲಾದರೂ ಸಹಕಾರ ಸಿಗಲಿದೆ. ಎಷ್ಟೋ ವರ್ಷಗಳ ಅನಂತರದ ಸ್ನೇಹಮಿಲನ ನಿಮಗೆ ಆಹ್ಲಾದವನ್ನು ತರುವುದು. ಆಯಾಸಕರವಾದ ಕಛೇರಿಯ ಕೆಲಸವನ್ನು ಮುಗಿಸಿದರೂ ನಿಮ್ಮಲ್ಲಿ ಉತ್ಸಾಹವು ಅಧಿಕವಾಗಿ ಇರುವುದು. ಒಂದೇ ರೀತಿಯ ದಿನಚರಿಯನ್ನು ಕಂಡು ಸ್ತ್ರೀಯರು ಹೊಸ ಪಾಕದತ್ತ ಹೆಚ್ಚಿನ ಒಲವು ತೋರಿಸುವರು. ದಾಂಪತ್ಯದಲ್ಲಿ ಹೊಂದಾಣಿಕೆಯೇ ಹೆಚ್ಚಾಗಿ ಇರುವುದು. ಯಾರನ್ನೂ ಯಾರೂ ಬಿಟ್ಟುಕೊಡದ ಸ್ಥಿತಿಯು ಬರಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಯನ್ನು ಮುಂದುವರಿಸಿ. ನಿಮ್ಮ ಕಾರ್ಯಗಳು ಎಂದಿಗಿಂತ ಶಿಸ್ತಿನಿಂದ ಇರುವುದು ನಿಮಗೆ ಅಚ್ಚರಿಯನ್ನು ತರಬಹುದು. ನಿಮ್ಮ ಕೋಪವು ತಾತ್ಕಾಲಿಕವಾಗಿ ಇರುವುದು. ಅದನ್ನು ಪಡೆದುಕೊಳ್ಳಲು ಕಷ್ಟವಾದೀತು. ಮಾನಸಿಕ ಅಸ್ವಾಸ್ಥ್ಯವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ನಿಮ್ಮ ಸಂಪತ್ತನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ.

ಧನು ರಾಶಿ :ಅನಪೇಕ್ಷಿತ ಮಾತುಗಳನ್ನು ಕಿವಿಗೆ ಹಾಕಿಕೊಳ್ಳುವುದು ಬೇಡ. ಅನಿರೀಕ್ಷಿತ ವಿಚಾರಗಳನ್ನು ಎದುರಿಸುವುದು ನಿಮಗೆ ಕಷ್ಟವಾದೀತು. ಅತಿಯಾದ ಆತ್ಮವಿಶ್ವಾಸವೇ ಎಲ್ಲ ಕೆಲಸಗಳನ್ನೂ ಅರ್ಧಕ್ಕೆ ನಿಲ್ಲುವಂತೆ ಮಾಡುವುದು. ವ್ಯಾಪಾರದಲ್ಲಿ ಚುರುಕುತನದ ಅವಶ್ಯಕತೆ ಹೆಚ್ಚು ಇರಬೇಕಾಗುವುದು. ಮಾತು ಸರಳವೂ ನೇರವೂ ಆಗಿರಲಿ. ಹೊಸ ಮನೆಗೆ ಹೋಗುವ ಯೋಚನೆ ಇರಲಿದೆ. ನಿಮ್ಮನ್ನೇ ನೀವು ಪ್ರಶಂಸಿಸಿಕೊಳ್ಳುವುದು ಬೇಡ. ಮಕ್ಕಳ ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರವು ಸರಿಯಾಗಿರದೇ ಹೋಗಬಹುದು. ನಿಮ್ಮ ರಹಸ್ಯವಾದ ಸಂಗತಿಯನ್ನು ನೀವು ಇನ್ನೊಬ್ಬರಿಗೆ ಗೊತ್ತಾಗದೇ ಹೇಳುವಿರಿ. ಎಂಥವರನ್ನೂ ನಂಬಿಸುವಂತೆ ಮಾತನಾಡುವಿರಿ. ಸಂಬಂಧಗಳಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಇದೆ. ಮಾತು ಹಿತವಾಗಿ ಇರಲಿ. ವಸ್ತ್ರಾಭರಣಗಳನ್ನು ಮಿತವಾಗಿ ಖರೀದಿಸಿ. ಪ್ರಭಾವಿ ವ್ಯಕ್ತಿಗಳ ಜೊತೆ ಸೌಹಾರ್ದದ ಮಾತನಾಡಿ. ಆಸ್ತಿಯನ್ನು ಸ್ವಂತಕ್ಕೆ ಮಾಡಿಕೊಳ್ಳುವ ಉಪಾಯವು ಹೊಳೆಯಬಹುದು.

ಮಕರ ರಾಶಿ :ವ್ಯವಹಾರದ ನಷ್ಟವನ್ನು ತುಂಬಿಕೊಳ್ಳಲು ಬೇಕಾದ ಯೋಜನೆ ಮಾಡುವಿರಿ. ಹೊಸ ಕಾರ್ಯವನ್ನು ಮಾಡುವುದು ನಿಮಗೆ ಕಷ್ಟವಾಗಬಹುದು. ಪ್ರಯಾಣದ ಆಯಾಸದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಪ್ರೀತಿಗಾಗಿ ಕೆಲವನ್ನು ತ್ಯಾಗ ಮಾಡಬೇಕು. ನಿಮ್ಮದೊಂದೇ ಸಮಸ್ಯೆ ಎನ್ನುವಂತೆ ಎಲ್ಲವನ್ನೂ ನೀವು ಚಿಂತೆಯಿಂದ ಇರುವಿರಿ. ಕುಟುಂಬದ ಜೊತೆ ಇರುವುದು ನಿಮ್ಮ ಬಹಳ ಖುಷಿಯನ್ನು ಕೊಡುವುದು. ಹಣಾಕಾಸಿಗೆ ಸಂಬಂಧಿಸಿದಂತೆ ನೀವು ಕಠೋರ ನಿಲುವನ್ನು ತೆಗೆದುಕೊಳ್ಳುವಿರಿ. ಸಂಗಾತಿಯ ದುಃಖದಲ್ಲಿ ಭಾಗಿಯಾಗಿ ಸಾಂತ್ವನವನ್ನು ಹೇಳುವಿರಿ. ಆಕಸ್ಮಿಕವಾಗಿ ಧನಲಾಭವೂ ಆಗಬಹುದು. ನಿಮ್ಮ ನಿರಂತರ ಪರಿಶ್ರಮದಿಂದ ನಿಮಗೆ ಕಾರ್ಯವು ಸಫಲವಾಗುವುದು. ಕೆಲಸದ ಹಿಂದೆ ಬಿದ್ದು ಆಗಬೇಕಾದುದನ್ನು ಮಾಡಿಕೊಳ್ಳುವಿರಿ. ನಿಮ್ಮ ಅಳತೆಯನ್ನು ಮೀರದೇ ಚೌಕಟ್ಟಿನಲ್ಲಿರಿ. ವೈದ್ಯರ ಸಲಹೆಯನ್ನು ಪಾಲಿಸುವುದು ಅನಿವಾರ್ಯವಾಗುವುದು.

ಕುಂಭ ರಾಶಿ :ಹಣದ ಹಂಚಿಕೆಯಲ್ಲಿ ನಿಮಗೆ ಕಲಹವಾಗುವುದು. ಕಾರ್ಯದಲ್ಲಿ ಒತ್ತಡವು ಅಧಿಕವಾಗಿ ಇರುವುದು. ಖರ್ಚಿಗೆ ಕಡಿವಾಣ ಹಾಕುವುದು ಕಷ್ಟವಾದೀತು. ಶತ್ರುಗಳ ವಿರುದ್ಧ ವಿಜಯ ಸಾಧಿಸುವ ಸಾಧ್ಯತೆ ಇದೆ. ಅಬಲರ ಮೇಲೆ ನಿಮ್ಮ ಸಿಟ್ಟನ್ನು ತೋರಿಸುವಿರಿ. ನಿರುದ್ಯೋಗವು ನಿಮಗೆ ಸಮಸ್ಯೆಯನ್ನು ಉಂಟುಮಾಡಬಹುದು. ಯಾವುದೇ ಕೆಲಸಕ್ಕೂ ಮುನ್ನುಗ್ಗುವುದು ನಿಮಗೆ ಕಷ್ಟವಾದೀತು. ವ್ಯಾಪಾರದಲ್ಲಿ ನಮಗೆ ಮೋಸವಾಗುವ ಸಾಧ್ಯತೆ ಇದೆ. ಕೊಟ್ಟ ಕೆಲಸವನ್ನು ನಿಷ್ಠೆಯಿಂದ ಮಾಡುವುದು ನಿಮಗೆ ಕೀರ್ತಿಯನ್ನು ತಂದುಕೊಡುವುದು. ಯಾರನ್ನೂ ನಂಬವುದು ನಿಮಗೆ ತೊಂದರೆಯಾಗಬಹುದು. ಇಂದಿನ ಕೆಲವು ಸಮಯವು ನಿಮಗೆ ನೆಮ್ಮದಿಯನ್ನು ಕೊಡುವುದು. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು. ಸಂಭಾವ್ಯತೆಯ ಬಗ್ಗೆ ನಿಮಗೆ ಸ್ಪಷ್ಟತೆ ಇರಲಿ. ಏನನ್ನಾದರೂ ಮಾಡಬೇಕು ಎಂಬ ಮಹತ್ತರವಾದ ಯೋಜನೆಯನ್ನು ಮುಂದೂಡುವಿರಿ.

ಮೀನ ರಾಶಿ :ಇಂದು ಎಷ್ಟೇ ಹೇಳಿದರೂ ನೀವು ನಿಮ್ಮ ತನವನ್ನು ಬಿಟ್ಟು ಹೋಗಲಾರಿರಿ. ಇಂದು ಗಳಿಸಿದ ಹಣವು ಇಂದೇ ಖಾಲಿಯಾಗಬಹುದು. ಏನನ್ನೋ ಯೋಚಿಸುತ್ತಲೇ ಇರುವಿರಿ. ನಿಮ್ಮದಾದ ವಸ್ತುಗಳನ್ನು ಇಟ್ಟುಕೊಳ್ಳಲು ಪ್ರಯತ್ನಿಸುವಿರಿ. ಪೂರ್ಣ ವಿಶ್ವಾಸ ಬರುವವರೆಗೂ ಏನನ್ನೂ ಮಾಡಲಾರಿರಿ. ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವು ಇರಲಿದೆ. ಇನ್ನೊಬ್ಬರನ್ನು ಹಾಸ್ಯವಸ್ತುವನ್ನಾಗಿ ಮಾಡಿಕೊಳ್ಳುವಿರಿ. ಸಂಗಾತಿಯಿಂದ ಬಂದ ಕೆಲವು ಮಾತುಗಳು ನಿಮಗೆ ಬೇಸರವನ್ನು ತರಿಸಬಹುದು. ಶುಭ ಕಾಲದ ನಿರೀಕ್ಷೆಯನ್ನು ನೀವು ಇರುವಿರಿ. ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸುವುದಿಲ್ಲ. ಪುತ್ರ ವ್ಯಾಮೋಹವನ್ನು ಕಡಿಮೆ ಮಾಡಿಕೊಳ್ಳುವುದು ಕಷ್ಟವೆನಿಸುವುದು. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ. ಉನ್ನತವಾದ ಸ್ಥಾನಕ್ಕೆ ಏರಲು ನಿಮ್ಮೆದುರು ಅವಕಾಶವು ತೆರೆದುಕೊಳ್ಳುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ