Daily Horoscope 18 October 2024: ಈ ರಾಶಿಯವರಿಗೆ ಉದ್ಯೋಗಕ್ಕೆ ಹತ್ತಾರು ಅವಕಾಶಗಳು ತೆರೆದುಕೊಳ್ಳಬಹುದು

ಅಕ್ಟೋಬರ್ 18,​ 2024ರ​​ ನಿಮ್ಮ ಭವಿಷ್ಯ ಹೇಗಿದೆ?: ನಿಮ್ಮ ಉದ್ಯೋಗವು ಗೋಡೆಯ ಮೇಲಿರುವ ದೀಪದಂತೆ ಇರುವುದು. ನಿಮ್ಮ ಸಾಮಾಜಿಕ ಕಾರ್ಯದಲ್ಲಿ ತೊಡಕುಗಳು ಬರಬಹುದು. ಕಡಿಮೆ ಖರ್ಚಿದ್ದರೂ ದೈಹಿಕ ಶ್ರಮವು ಹೆಚ್ಚಾಗುವುದು. ಇಂದಿನ (2024 ಅಕ್ಟೋಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Daily Horoscope 18 October 2024: ಈ ರಾಶಿಯವರಿಗೆ ಉದ್ಯೋಗಕ್ಕೆ ಹತ್ತಾರು ಅವಕಾಶಗಳು ತೆರೆದುಕೊಳ್ಳಬಹುದು
ಈ ರಾಶಿಯವರಿಗೆ ಉದ್ಯೋಗಕ್ಕೆ ಹತ್ತಾರು ಅವಕಾಶಗಳು ತೆರೆದುಕೊಳ್ಳಬಹುದು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 18, 2024 | 12:02 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವಜ್ರ​, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:50 ರಿಂದ ಮಧ್ಯಾಹ್ನ 12:18ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:14 ರಿಂದ ಸಂಜೆ 04:42ರವರೆಗೆ, ಗುಳಿಕ ಕಾಲ ಬೆಳಿಗ್ಗೆ 07:54 ರಿಂದ 09:22 ರವರೆಗೆ.

ಮೇಷ ರಾಶಿ: ಗಟ್ಟಿಯಾದ ನಿಮ್ಮ ಮನಸ್ಸು ಇಂದು ಕರಗುವ ಸಂದರ್ಭವು ಬರುವುದು.‌ ಇಂದು ಮನೆಯ ಹಲವು ಕಾರ್ಯಗಳನ್ನು ಒಬ್ಬರೇ ಮಾಡಬೇಕಾಗುವುದು. ಆಕಸ್ಮಿಕವಾಗಿ ಅಲ್ಪ ಸಂಪತ್ತು ಬಂದರೂ ಅದು ನಷ್ಟವಾಗಿ ಹೋಗುವುದು. ದಾಂಪತ್ಯದಲ್ಲಿ ಒಲವು ಹೆಚ್ಚಾಗುವುದು. ತಾಳ್ಮೆಯನ್ನು ಕಳೆದುಕೊಳ್ಳುವಷ್ಟು ಕೋಪವು ಬೇಡ. ಹಲವು ಆದಾಯ ಮೂಲಗಳಲ್ಲಿ ಇಂದು ಒಂದು ಮಾತ್ರ ಉಳಿದುಕೊಳ್ಳುವುದು. ಸಂಗಾತಿಯ ಜೊತೆ ಸಲ್ಲಾಪವನ್ನು ಹೆಚ್ವು ಮಾಡುವಿರಿ. ಬಂಧುಗಳ ಜೊತೆ ಹಣಕಾಸಿನ ವ್ಯವಹಾರವನ್ನು ಮಾಡಬೇಕಾಗಿ ಬಂದರೆ ಪಾರದರ್ಶಕತೆಯೇ ಮುಖ್ಯವಾಗಿ ಇಟ್ಟುಕೊಳ್ಳಿ. ಏನನ್ನು ಕಳೆದುಕೊಳ್ಳುತ್ತಿದ್ದೇನೆ ಎಂಬ ಯೋಚನೆ ನಿಮಗಿರಲಿ. ನಿಮ್ಮ ಉದ್ಯಮವನ್ನು ನಿಲ್ಲಿಸುವ ಚಿಂತನೆ ಮಾಡುವಿರಿ. ನಿಮ್ಮ ಆರ್ಥಿಕತೆಯನ್ನು ಯಾರ ಜೊತೆಯೂ ಹಂಚಿಕೊಳ್ಳುವುದು ಬೇಡ. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ಶುಭ ಸಮಾರಂಭಗಳಿಗೆ ಆಹ್ವಾನ ಬರಲಿದೆ.

ವೃಷಭ ರಾಶಿ: ಏನಾದರೂ ಹೊಸ ಉತ್ಪನ್ನಗಳನ್ನು ನಿರ್ಮಾಣ‌ಮಾಡುವ ಆಸೆ ಬರುವುದು. ಇಂದು ಆತ್ಮವಿಶ್ವಾಸವು ಎಲ್ಲ ಕೆಲಸವೂ ಬೇಗ ಮುಗಿಯುವಂತೆ ಮಾಡುವುದು. ನಿಮ್ಮ ಮನಸ್ಸು ಕಿರಿಕಿರಿಯಿಂದ ಹೊರಬರಲು ಸಮಯವನ್ನು ತೆಗೆದುಕೊಳ್ಳುವುದು. ವಿದ್ಯಾರ್ಥಿಗಳು ತಮ್ಮ ನಿಶ್ಚಿತ ಗುರಿಯನ್ನು ಮುಟ್ಟಲು ಹೆಚ್ಚು ಶ್ರಮ ಹಾಗೂ ಸಮಯವನ್ನು ಕೊಡಬೇಕಾಗುವುದು. ಪ್ರಯಾಣವು ಸುಖಕರ ಎನಿಸದರೂ ಅನಂತರ ಅದರ ನೋವು ನಿಮಗೆ ಗೊತ್ತಾಗುವುದು. ಉದ್ಯೋಗದ ದಾಹ ನಿಮ್ಮನ್ನು ದಾರಿ ತಪ್ಪಿಸುವ ಸಾಧ್ಯತೆ ಇದೆ. ನೀವು ಇಂದು ಅಪರಿಚಿತ ವ್ಯಕ್ತಿಗಳ ನಡುವೆ ಇರುವಿರಿ. ಸಂಗಾತಿಯ ಮಾತುಗಳು ನಿಮಗೆ ಮನಸ್ಸಿಗೆ ನಾಟುವುದು. ಅಸಂಬದ್ಧ ಮಾತುಗಳನ್ನು ಕಡಿಮೆ ಮಾಡಿ. ಕೇಳಿದಷ್ಟಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಒತ್ತಡವನ್ನು ನೀವಾಗಿಯೇ ತಂದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಬದಲಾವಣೆ ಅನಿರೀಕ್ಷಿತಬಾದರೂ ಯೋಗ್ಯವೇ. ಬೇಕಾದಾಗ ಬಳಸಿಕೊಳ್ಳುವ ಸಂಬಂಧದಿಂದ ದೂರವಿರುವಿರಿ.

ಮಿಥುನ ರಾಶಿ: ಸಹೋದರ ಭಾವವನ್ನು ಇಟ್ಟುಕೊಂಡು ವರ್ತಿಸಿ. ಇಂದು ನಿಮ್ಮ ಮನಸ್ಸಿಗೆ ಬೇಕಾದ ವಿಶ್ರಾಂತಿಗೆ ಸ್ಥಳದ ಅನ್ವೇಷಣೆ ಮಾಡುವಿರಿ. ಹೂಡಿಕೆಯನ್ನು ಮಾಡುವ ವಿಚಾರವು ನಿಮ್ಮಲ್ಲಿ ಬಲವಾಗಿ ಇರುವುದು. ಅದೃಷ್ಟವು ಇಂದು ಕೈಕೊಡಬಹುದು. ಅಧಿಕ ಶ್ರಮವಿದ್ದರೂ ಫಲವು ಮಾತ್ರ ಅಲ್ಪವೇ ಸಿಗುವುದು. ದೂರ ಪ್ರಯಾಣದಿಂದ ಪ್ರಯಾಸವಾಗುವುದು. ಇಂದಿನ ನಿಮ್ಮ ಆಲೋಚನೆಗಳಿಗೆ ಹಲವರಿಂದ ಮಾನ್ಯತೆ ಪಡೆಯುವುದು. ದೃಷ್ಟಿ ದೋಷವು ಕಾಣಿಸಿಕೊಳ್ಳಬಹುದು. ಸ್ಥಾನಮಾನದ ಆಕಾಂಕ್ಷೆ ಅಧಿಕವಾಗುವುದು. ಹೆಚ್ಚಿನ ಉತ್ಸಾಹದಿಂದ ಇರುವ ನಿಮಗೆ ಕೆಲವು ಜವಾಬ್ದಾರಿಗಳು ಬರಬಹುದು. ಸ್ನೇಹಸಂಬಂಧಗಳು ದೂರವಾಗಬಹುದು. ಕೃಷಿಯಲ್ಲಿ ಅಧಿಕ ಆದಾಯವನ್ನು ಪಡೆಯಬೇಕು ಎನ್ನಿಸುವುದು. ನೀರನಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಮಕ್ಕಳು ಕೇಳಿದರೆಂದು ಏನನ್ನಾದರೂ ಮಾಡುವುದು ಸರಿಯಾಗದು. ಎಲ್ಲ ಕಾರ್ಯಗಳನ್ನು ಭಯದಿಂದ ಮಾಡುವಿರಿ.

ಕರ್ಕಾಟಕ ರಾಶಿ: ಆಕಸ್ಮಿಕ ತೊಂದರೆಗಳನ್ನು ಎದುರಿಸುವ ಎದೆಗಾರಿಕೆ ಬೇಕು. ಇಂದು ನಿಮ್ಮ ಅಸತ್ಯದ ಮಾತು ಎಲ್ಲರಿಗೂ ತಿಳಿಯುವುದು. ಹಣದ ವಿಷಯದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ನಿಮಗೆ ಕಷ್ಟವೆನಿಸಬಹುದು. ನಿಮ್ಮವರನ್ನು ಅವಶ್ಯಕತೆಗಷ್ಟೇ ಬಳಸಿಕೊಳ್ಳುವಿರಿ. ರಮಣೀಯತೆಯು ನಿಮಗೆ ಇಷ್ಟವಾಗುವುದು. ನಿಮ್ಮ ಬಗ್ಗೆ ತಪ್ಪು ಕಲ್ಪನೆಗಳು ಮೂಡಲಿದ್ದು ಅದನ್ನು ಸರಿ ಮಾಡಿಕೊಳ್ಳಲು ಬಯಸುವಿರಿ. ಅನಗತ್ಯ ಕಾರ್ಯಗಳನ್ನು ಮಾಡಲು ಸಮಯವನ್ನು ಕೊಡುವ ಬದಲು ಸದುಪಯೋಗವಾಗುವಂತೆ ಇರಲಿ. ತುರ್ತು ಕಾರ್ಯದ ಕಾರಣಕ್ಕೆ ಪ್ರಯಾಣವನ್ನು ಮಾಡುವಿರಿ. ನೀವು ಆಡಿದ ಮಾತು ನಿಜವೇ ಆಗಿದ್ದರೂ ಕೂಡಲೇ ನಂಬುವುದು ಕಷ್ಟವಾದೀತು. ದೈವ ಬಲವನ್ನು ನಂಬಿ ನೀವು ಕಾರ್ಯವನ್ನು ಮಾಡುವಿರಿ. ನಿಮ್ಮ ಸ್ವಂತ ಕೆಲಸಕ್ಕಾಗಿ ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರುವಿರಿ. ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗಬೇಕು ಎನಿಸುವುದು. ವಿದ್ಯಾರ್ಥಿಗಳು ಕೆಲವುದರಲ್ಲಿ ಸೋಲಬಹುದು. ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ.

ಸಿಂಹ ರಾಶಿ: ಇಂದಿನ ದಿನವನ್ನು ಒಳ್ಳೆಯ ದಿನವನ್ನಾಗಿ ಮಾಡಿಕೊಳ್ಳಬಹುದು. ಇಂದು ಮಾಡಬೇಕಾದುದನ್ನು ಮಾಡಿ. ಅನಂತರ ಕೊರಗುತ್ತ ಇರುವುದು ಬೇಡ. ತಂದೆಯ ವಿಚಾರದಲ್ಲಿ ನಿಮಗೆ ಅಸಮಾಧನ ಇರಲಿದ್ದು ಅವರ ಮೇಲೆ ಕೋಪಗೊಳ್ಳುವಿರಿ. ನಿಮ್ಮ ತನವನ್ನು ಬಿಟ್ಟು ನೀವು ಹೊಂದಾಣಿಕೆಯನ್ನು ಮಾಡಿಕೊಳ್ಳಲಾರಿರಿ. ಯಾರ ಸಹಾಯವನ್ನೂ ಪಡೆಯದೆ ನೀವು ನಿಮ್ಮ ಕಾರ್ಯವನ್ನು ನಿಧಾನವಾಗಿಯೇ ಮಾಡುವಿರಿ. ಶುಭ ಸಮಾರಂಭಗಳಿಗೆ ಭೇಟಿ ಮಾಡುವ ಸಂದರ್ಭವು ಬರಬಹುದು. ಸಾಮಾಜಿಕ ಚಟುವಟಿಕೆಗಳನ್ನು ಮಾಡಲು ಆಸಕ್ತಿಯು ಇರದು. ನಿರುದ್ಯೋಗಿಗಳು ಉದ್ಯೋಗದ ಅನ್ವೇಷಣೆಯನ್ನು ಮಾಡುವರು. ನಿಮ್ಮದಾದ ಕೆಲವು ವಿಚಾರಗಳನ್ನು ಅನ್ಯರ ಮೇಲೆ ಹೇರುವಿರಿ. ಅಮೂಲ್ಯ ವಸ್ತುವೊಂದು ಕಣ್ಮರೆಯಾಗಬಹುದು. ಅನೌಪಚಾರಿಕವಾಗಿ ಅಧಿಕಾರಿಗಳ ಜೊತೆ ನಡೆದುಕೊಳ್ಳುವಿರಿ. ನಿಮ್ಮ ಮನಸ್ಸು ಇಂದು ನಿಮ್ಮನ್ನು ಒಂದೆಡೆ ಕುಳಿತುಕೊಳ್ಳಲು ಬಿಡದು.

ಕನ್ಯಾ ರಾಶಿ: ಸಕಾರಾತ್ಮಕ ಯೋಚನೆಯೇ ಬಂಧನವನ್ನು ಗಟ್ಟಿಯಾಗಿಸುವುದು. ಪ್ರಶಂಸೆಯಿಂದ ನೀವು ಸಂತೋಷಗೊಳ್ಳುವಿರಿ. ಮಾನಸಿಕವಾಗಿ ಸಬಲರಾಗುವ ಅವಶ್ಯಕತೆ ಇರಲಿದೆ‌. ಸ್ವಂತ ಉದ್ಯಮವನ್ನು ಮಾಡುತ್ತಿದ್ದರಿಗೆ ನಿರೀಕ್ಷಿತ ಲಾಭದ ಮಟ್ಟವನ್ನು ತಲುಪುವುದು ಕಷ್ಟವಾಗುವುದು. ಸ್ತ್ರೀಯರ ಜೊತೆ ನಿಮ್ಮ ವ್ಯವಹಾರವು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಸಂಸಾರದ ಹೊಣೆಗಾರಿಕೆಯನ್ನು ಕಷ್ಟದಿಂದ ನಿರ್ವಹಿಸುವಿರಿ. ವೃತ್ತಿಯ ಸ್ಥಳದಲ್ಲಿ ನಿಮಗೆ ಬೇಸರ ತರಿಸುವ ಸಂಗತಿಗಳು ನಡೆಯಬಹುದು. ಪಿತ್ರಾರ್ಜಿತ ಆಸ್ತಿಯು ನಿಮ್ಮ ಕೈ ಸೇರುವ ಸಾಧ್ಯತೆ ಇದೆ. ತಾಳ್ಮೆಯನ್ನು ಇಟ್ಟುಕೊಳ್ಳುವುದು ಅಗತ್ಯವಾಗಬಹುದು. ಸಮಯ ಸರಿದಾಗ ಎಲ್ಲವೂ ಅರಿವಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ವಾಹನ ಖರೀದಿಯಿಂದ ನಿಮಗೆ ಚಿಂತೆ ಆರಂಭವಾಗುವುದು.

ತುಲಾ ರಾಶಿ: ನಿಮ್ಮ ಸಹಾಯವು ಕೆಲವರ‌ ಸಂತೋಷಕ್ಕೆ ಕಾರಣವಾಗುವುದು. ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಇಂದು ಕಸಿದುಕೊಳ್ಳಬಹುದು. ನಿಮ್ಮ ಕಡೆಗಣಿಸುತ್ತಿರುವುದು ನಿಮಗೆ ಗೊತ್ತಾಗಿ ಬೇಸರವಾಗುವುದು. ಸ್ನೇಹಿತರಿಂದ ನೀವು ಸಹಾಯವನ್ನು ಬಯಸುವಿರಿ. ಕಛೇರಿಯ ಕೆಲಸಕ್ಕಾಗಿ ಓಡಾಟವು ಇರಲಿದೆ. ದಾಂಪತ್ಯದ ಸಾಮರಸ್ಯವನ್ನು ನೀವು ಉಳಿಸಿಕೊಳ್ಳಿ. ನಿಮ್ಮದಲ್ಲದ ಕೆಲಸವು ನಿಮಗೇ ಬರಬಹುದು. ಮನೋರಂಜನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಹೋದ್ಯೋಗಿಗಳ ಸಹವಾಸದಿಂದ ಕೆಟ್ಟ ಅಭ್ಯಾಸವನ್ನು ಕಲಿಯುವಿರಿ. ಓದಿನಲ್ಲಿ ಏಕಾಗ್ರತೆಯ ಕೊರತೆ ಕಾಣಲಿದೆ.‌ ತಂದೆಯ ಜೊತೆ ಕಲಹವಾಗಿ ಮನೆಯಿಂದ ದೂರವಿರುವಿರಿ. ನಿಮ್ಮ ಮಾತುಗಳು ಕೆಲವರಿಗೆ ಇಷ್ಟವಾಗದೇ ಹೋಗುವುದು. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಪ್ರಿಯವಾದ ವಸ್ತುವನ್ನು ಪಡೆಯಲು ಹಣದ ಅಭಾವವಿರುವುದು.

ವೃಶ್ಚಿಕ ರಾಶಿ: ಒಳ್ಳೆಯ ಕಾರ್ಯಗಳು ನಿಮ್ಮನ್ನು ಕಾಪಾಡಬಹುದು. ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ನಿಮಗೆ ಸಿಗಲಿದೆ. ಅಧಿಕಾರದಿಂದ ನಿಮ್ಮ ವರ್ತನೆಯು ಬದಲಾಗಬಹುದು. ನೌಕರರ ಬಗ್ಗೆ ನಿಮಗೆ ಅಸಮಾಧಾನ ಇರುವುದು. ಸಂತೋಷವನ್ನು ನೀವು ಹಂಚಿಕೊಳ್ಳುವಿರಿ. ನಿಮ್ಮ ಕಾರ್ಯಸಾಧನೆಗೆ ಯಾರನ್ನಾದರೂ ಬಳಸಿಕೊಳ್ಳುವಿರಿ. ನಿಮ್ಮ ಕೆಲಸಗಳಿಗೆ ನಿಗದಿತ ಸಮಯವನ್ನು ಕೊಡುವುದು ಮುಖ್ಯವಾಗಬಹುದು. ಆಯ್ಕೆಗಳು ನಿಮ್ಮನ್ನು ಗೊಂದಲಕ್ಕೆ ದೂಡಬಹುದು. ಸಂಗಾತಿಯ ವರ್ತನೆಯ ಬಗ್ಗೆ ನಿಮಗೆ ಹೆಚ್ಚು ಬೇಸರವಾಗಬಹುದು. ಹಣದ ವಿಚಾರವನ್ನು ಇಂದು ಹೆಚ್ಚು ಮಾಡುವಿರಿ. ಧಾರ್ಮಿಕ ಆಚರಣೆಯಲ್ಲಿ ಸ್ವಲ್ಪ ತೊಡಗುವಿರಿ. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.‌ ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರಬೇಕಾಗುವುದು.

ಧನು ರಾಶಿ: ಹಿರಿತನವನ್ನು ಉಳಿಸಿಕೊಳ್ಳುವಂತೆ ನಡೆದುಕೊಳ್ಳಬೇಕು. ಇಂದು ಸಹಾಯ ಮಾಡುವ ನಿಮ್ಮ ನಿರಂತರ ಅಭ್ಯಾಸಕ್ಕೆ ನಿಮಗೆ ದಣಿವಾಗಬಹುದು. ನಿಮ್ಮ ಉದ್ಯೋಗವು ಗೋಡೆಯ ಮೇಲಿರುವ ದೀಪದಂತೆ ಇರುವುದು. ನಿಮ್ಮ ಸಾಮಾಜಿಕ ಕಾರ್ಯದಲ್ಲಿ ತೊಡಕುಗಳು ಬರಬಹುದು. ಆರೋಗ್ಯದ ಸಮಸ್ಯೆಯು ಗಂಭೀರವಾಗಿ ಇರಲಿದೆ. ನಿಮ್ಮ ಇಷ್ಟದವರ ಭೇಟಯಿಂದ ಖುಷಿಯು ಹೆಚ್ಚಾಗಲಿದೆ. ಕಡಿಮೆ ಖರ್ಚಿದ್ದರೂ ದೈಹಿಕ ಶ್ರಮವು ಹೆಚ್ಚಾಗುವುದು. ಸರ್ಕಾರಿ ಉದ್ಯೋಗವನ್ನು ಮಾಡುತ್ತಿದ್ದರೆ ಒತ್ತಡವು ನಿಮಗೆ ಅಧಿಕವಾಗಲಿದೆ. ಆಸ್ತಿಯನ್ನು ನಿಮ್ಮದಾಗಿಸಿಕೊಳ್ಳಲು ಹೆಚ್ಚು ಹಣವನ್ನು ಖರ್ಚುಮಾಡುವಿರಿ. ದುಸ್ಸಾಧ್ಯವಾದ ಕೆಲಸಗಳಿಗೆ ನೀವು ಪ್ರಯತ್ನಶೀಲರಾಗುವುದು ಬೇಡ. ಅವಶ್ಯಕತೆ ಇದ್ದರಷ್ಟೇ ನಿಮ್ಮನ್ನು ಬಳಸಿಕೊಳ್ಳುವರು. ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಅನಾರೋಗ್ಯವಿದ್ದರೂ ನೀವು ಕಾರ್ಯವನ್ನು ನಿರ್ವಹಿಸುವಿರಿ.

ಮಕರ ರಾಶಿ; ಇಂದಿನ ನಿಮ್ಮ‌ ತೀರ್ಮಾನವು ಯೋಗ್ಯವಾಗಿ ಇರುವುದು. ನೀವು ಇಂದು ಅನಗತ್ಯ ವಾದಗಳಿಗೆ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುವದರ ಜೊತೆ ಹೆಸರೂ ಹಾಳಾಗುವುದು. ನಿಮಗೆ ಅಸಾಧ್ಯ ಎಂದು ಗೊತ್ತಿದ್ದರೂ ಬೇರೆಯವರ ಒತ್ತಾಯಕ್ಕೆ ಕೆಲಸವನ್ನು ಮಾಡುವಿರಿ. ನಿಮ್ಮ ನೈಜ‌ಸ್ವಭಾವವು ನಿಮಗೆ ತಿಳಿಯಲಿದೆ. ನಿಮ್ಮ ಅಭಿಪ್ರಾಯವನ್ನು ತಿಳಿಸಲು ನಿಮಗೆ ಯಾವ‌ ಅಡ್ಡಿಯೂ ಇರುವುದಿಲ್ಲ. ಕುಟುಂಬದ ಜೊತೆ ಸಮಯವನ್ನು ಕಳೆಯಲು ಇಚ್ಛಿಸಿದರೂ ಕೆಲಸಕ್ಕೆ ತೆರಳಬೇಕಾದ ಸ್ಥಿತಿ ಇರುವುದು. ಆದಾಯ ಮೂಲದ ಬಗ್ಗೆ ನಿಮಗೆ ಅಸಮಾಧನವು ಇರಲಿದೆ. ವಿದ್ಯಾಭ್ಯಾಸದಲ್ಲಿ ನೀವು ಅಂದುಕೊಂಡಂತೆ ಆಗದು. ಯಾರದೋ ವಿಚಾರಕ್ಕೆ ನೀವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ನಿದ್ರೆಯಲ್ಲಿ ದುಃಸ್ವಪ್ನಗಳು ನಿಮ್ಮ ಆಲೋಚನೆಯ ದಿಕ್ಕನ್ನು ತಪ್ಪಿಸಬಹುದು. ಸಂಗಾತಿಯ ಜೊತೆ ವಿಹಾರವನ್ನು ಮಾಡುವಿರಿ. ಹೂಡಿಕೆಯ ವಿಚಾರದಲ್ಲಿ ನಿಮಗೆ ಪೂರ್ಣ ಆಸಕ್ತಿ ಇರದು.

ಕುಂಭ ರಾಶಿ: ಇಂದು ನಿಮ್ಮ ಉದಾರತೆಯು ಖರ್ಚಿನಿಂದ ಆರಂಭವಾಗುವುದು. ಇಂದು ಖರೀದಿಸಬೇಕಾದ ವಸ್ತಗಳು ಬಹಳ ಇರಲಿವೆ. ಭವಿಷ್ಯದ ಬಗ್ಗೆ ನಿಮಗೆ ಕೆಲವರು ಮಾರ್ಗದರ್ಶನ ಮಾಡಬಹುದು. ಒತ್ತಡವನ್ನು ನೀವಾಗಿಯೇ ತಂದುಕೊಳ್ಳಲಿದ್ದೀರಿ. ಉದ್ಯೋಗಕ್ಕೆ ಹತ್ತಾರು ಅವಕಾಶಗಳು ತೆರೆದುಕೊಳ್ಳಬಹುದು. ನಿಮ್ಮರಿಗೆ ನೀವು ಬೆಲೆಯನ್ನು ಕೊಡುವಿರಿ. ಕಣ್ತಪ್ಪಿನ ದೋಷದಿಂದ ಎಚ್ಚರಿಕೆಯಿಂದ ಇರಬೇಕು. ಸಾಧ್ಯವಾದಷ್ಟು ಎಲ್ಲರ ಜೊತೆ ಬೆರೆಯುವ ಮನಃಸ್ಥಿತಿಯನ್ನು ಇಟ್ಟುಕೊಳ್ಳಿ. ನಿಮ್ಮ ಮೂಗಿನ ನೇರಕ್ಕೆ ಆಗಬೇಕು ಎಲ್ಲವು ಎಂಬ ಧೋರಣೆ ಸರಿಯಾಗದು. ಸ್ವೇಚ್ಛೆಯಿಂದ ಇಂದಿನ ದಿನವನ್ನು ಕಳೆಯುವಿರಿ. ಅವಶ್ಯಕತೆ ಇರುವ ವಸ್ತುಗಳನ್ನು ಯಾರಿಂದಲೂ ಕೇಳಿ ಪಡೆಯಲಾರಿರಿ. ಮಕ್ಕಳ ಮಾತುಗಳು ನಿಮಗೆ ಹಾಸ್ಯದಂತೆ ಕಾಣಿಸುವುದು. ಯಾರಾದರೂ ನಿಮ್ಮವರ ಬಗ್ಗೆ ಬಂದು ಕಿವಿಚುಚ್ಚಬಹುದು. ಸಾಲ ಬಾಧೆಯ ಕಾರಣ ಕಣ್ತಪ್ಪಿಸಿ ಓಡಾಡುವಿರಿ. ಕರ್ತವ್ಯದ ದೃಷ್ಟಿಯಿಂದ ನೀವು ಕೆಲಸವನ್ನು ಮಾಡುವಿರಿ.

ಮೀನ ರಾಶಿ: ನಿಮ್ಮ ದಕ್ಷತೆಗೆ ಗೌರವ ಸಿಗಲಿದೆ. ಇಂದು ನಿಮ್ಮ ಸಂತೋಷದ ಕ್ಷಣಗಳನ್ನು ನೀವೇ ಸೃಷ್ಟಿಸಿಕೊಳ್ಳುವಿರಿ. ಕಲೆಯಲ್ಲಿ ಅಭಿರುಚಿಯು ಹೆಚ್ಚಾಗುವುದು. ಹಣಕಾಸಿನ ವಿಚಾರದಲ್ಲಿ ಎಲ್ಲವೂ ಸರಿಯಿದ್ದರೂ ನೆಮ್ಮದಿಯು ಸರಿಯಾಗಿರದು. ನಿಮ್ಮ ವರ್ತನೆಯನ್ನು ಕೈ ಮಾಡಿ ತೋರಿಸಬಹುದು. ಅತಿಯಾದ ಮಾತು ಇತರರಿಗೆ ತೊಂದರೆ ಕೊಡಬಹುದು. ಹಿತಶತ್ರುಗಳ ಪೀಡೆಯು ಉತ್ಸಾಹವು ಕುಗ್ಗಿಸಬಹುದು ಅಥವಾ ಅನ್ಯ ಕೆಲಸಗಳನ್ನು ಮಾಡಲು ಅವಕಾಶಗಳನ್ನು ಕೊಡದೇ ಹೋಗಬಹುದು. ನಷ್ಟವನ್ನು ಭರಿಸಿಕೊಳ್ಳಲಾಗದು. ಬರಹಗಾರರಿಗೆ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು. ಯಾವ ವಿಚಾರಗಳಿಗೂ ಅತಿಯಾದ ಚಿಂತೆಯ ಅವಶ್ಯಕತೆ ಇರದು. ನಂಬಿಕೆ ಇಡುವುದಾದರೆ ಪೂರ್ಣವಾಗಿ ಇಡಿ. ಆದಾಯದ ಮೂಲಗಳನ್ನು ನೀವು ಉಳಿಸಿಕೊಳ್ಳುವುದು ಕಷ್ಟವಾದೀತು. ಇಂದು ನಿಮಗೆ ಪರ ಊರಿನಲ್ಲಿ ಇಂದು ವಾಸವಾಗುವುದು.

ಲೋಹಿತ ಹೆಬ್ಬಾರ್ – 8762924271 (what’s app only)

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ